Breaking News

ರಾಷ್ಟ್ರೀಯ

ಗೋಕಾಕ ಬಳಿ ಭಾರಿ ಪ್ರಮಾಣದಲ್ಲಿ ಜಿಲಿಟಿನ್ ಕಡ್ಡಿ ವಶ

ಗೋಕಾಕ ತಾಲೂಕನಲ್ಲಿ ಅಕ್ರಮವಾಗಿ ಸಂಗ್ರಹಿಸಲ್ಪಟ್ಟಿದ್ದ 49 ಜಿಲಿಟಿನ್ ಸ್ಫೋಟಕ ಪದಾರ್ಥಗಳನ್ನು ಆಂತರಿಕ ಭದ್ರತಾ ವಿಭಾಗದ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ. ಗೋಕಾಕ ತಾಲೂಕಿನ ಮಣ್ಣಿಕೇರಿ ರಾಮೇಶ್ವರ ಕೆನಾಲ್ ಹತ್ತಿರ ಈ ಸ್ಫೋಟಕ ಪದಾರ್ಥಗಳನ್ನು ವಶಪಡಿಸಿಕೊಳ್ಳಲಾಗಿದೆ. ರಾಯಬಾಗ ತಾಲೂಕಿನ ನಿಪನಾಳದ ವಿಠ್ಠಲ ಯಮನಪ್ಪ ಹಳಬರ ಟ್ರ್ಯಾಕ್ಟರ್ ನಲ್ಲಿ ಸಂಗ್ರಹಿಸಿಟ್ಟುಕೊಂಡಿದ್ದ. 23 ಇಡಿ ಕೇಬಲ್ ಹಾಗೂ ಬ್ಲಾಸ್ಟಿಂಗ್ ಚಾರ್ಜರ್ ಬ್ಯಾಟರಿ ಕೂಡ ಆತನ ಬಳಿ ಇತ್ತು. ಇದರ ಮೌಲ್ಯ 2,03,500 ರೂ. ಕುಲಗೋಡ ಪೊಲೀಸ್ ಠಾಣೆಯಲ್ಲಿ …

Read More »

ಗೋಕಾಕ: ನಗರದ ತಾಲೂಕಾ ವಾಲ್ಮೀಕಿ ಕ್ರೀಡಾಂಗಣದಲ್ಲಿ ತಾಲೂಕಾಡಳಿತದ ಆಶ್ರಯದಲ್ಲಿ ಜರುಗಿದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಅವರು ಮಾತನಾಡುತ್ತಿರುವುದು.

ಗೋಕಾಕ: ಗಣರಾಜ್ಯವು ದೇಶದ ನಾಗರೀಕರಿಗೆ ತನ್ನ ರಾಷ್ಟ್ರದ ಜವಾಬ್ದಾರಿಯನ್ನು ನೀಡಿದ ದಿನವಾಗಿದ್ದು, ಗಣತಂತ್ರ ವ್ಯವಸ್ಥೆಯು ಭಾರತೀಯರಿಗೆ ಸಾರ್ವಭೌಮಾಧಿಕಾರವನ್ನು ಕಲ್ಪಿಸಿಕೊಟ್ಟ ಮಹತ್ವದ ದಿನವಾಗಿದೆ ಎಂದು ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಹೇಳಿದರು. ಮಂಗಳವಾರದಂದು ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ತಾಲೂಕಾಡಳಿತ ಹಾಗೂ ನಗರಸಭೆ ಇವುಗಳ ಆಶ್ರಯದಲ್ಲಿ ಜರುಗಿದ 72ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು ಗಣತಂತ್ರವು ವ್ಯಕ್ತಿ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯಗಳನ್ನು ನೀಡುವುದರ ಮೂಲಕ ಮೂಲಭೂತ ಹಕ್ಕುಗಳನ್ನು ನೀಡಿದೆ ಎಂದು ತಿಳಿಸಿದರು. …

Read More »

ಗೋಕಾಕ ಹಿಲ್ ಗಾರ್ಡನ್ ಕಚೇರಿಯಲ್ಲಿ 72ನೇ ಗಣರಾಜೋತ್ಸವ ಆಚರಣೆ

ಗೋಕಾಕ್ : ಪಟ್ಟಣದ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರ ಹಿಲ್ ಗಾರ್ಡನ್ ಕಚೇರಿಯಲ್ಲಿ 72ನೇ ಗಣರಾಜೋತ್ಸವವನ್ನು ಅದ್ಧೂರಿಯಾಗಿ ಇಂದು ಆಚರಿಸಲಾಯಿತು. ಈ ಸಂದರ್ಭದಲ್ಲಿ ವಿಠ್ಠಲ ಪರಸಣ್ಣವರ, ವಿವೇಕ ಜತ್ತಿ, ಪಾಡು ರಂಗಸೂಭೆ,ಪ್ರಕಾಶ ಬಸಾಪುರ , ಸುರೇಶ್ ಸೇರಿದಂತೆ ಇತರರು ಇದ್ದರು.

Read More »

ಬೆಳಗಾಂ ಶುಗರ್ಸ ಪ್ರೈ ಲಿ , ಆವರಣದಲ್ಲಿ 72ನೇ ಗಣರಾಜ್ಯೋತ್ಸವ ದಿನಾಚರಣೆ

ಬೆಳಗಾವಿ : ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಒಡೆತನದ ಬೆಳಗಾಂ ಶುಗರ್ಸ ಪ್ರೈ ಲಿ , ಆವರಣದಲ್ಲಿ 72ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಇಂದು ಅದ್ದೂರಿಯಾಗಿ ಆಚರಿಸಿದರು. ಪ್ರಸಕ್ತ 2020-21 ಕಬ್ಬು ನುರಿಸುವ ಹಂಗಾಮಿನಲ್ಲಿ ಕಾರ್ಖಾನೆಗೆ ಹೆಚ್ಚು ಕಬ್ಬನ್ನು ಸಾರಿಗೆ ಮಾಡಿದ ಮುಕ್ತೆದಾರರಾದ ಕಾಶಿನಾಥ ನಿಂಗಪ್ಪಾ ಕರಗುಪ್ಪಿ ಹಾಗೂ ಫಕೀರಪ್ಪಾ ರುದ್ರಪ್ಪಾ ಕುರಬರ ಅವರು ಧ್ವಜಾರೋಹಣ ನೆರವೇರಿಸಿದರು. ಸಂಸ್ಥೆಯ ವ್ಯವಸ್ಥಾಪಕ ನಿರ್ದೆಶಕ ಸಿದ್ದಾರ್ಥ ವಾಡೆನ್ನವರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಮಾತನಾಡಿ, …

Read More »

ಪ್ರತಿಭಟನಾ ನಿರತ ರೈತರ ಮೇಲಿನ ಹಲ್ಲೆ ಖಂಡನೀಯ : ಅಶೋಕ ಪೂಜಾರಿ

ಗೋಕಾಕ : ಕೇಂದ್ರ ಸರ್ಕಾರದ ಕೃಷಿ ಮಸೂದೆ ಜಾರಿಯನ್ನು ಸುಪ್ರೀಂ ಕೋರ್ಟ್ ತಡೆದಿದೆ . ಜತೆಗೆ ಪ್ರತಿಭಟನೆ ಜನಸಾಮಾನ್ಯರ ಹಕ್ಕು ಅದನ್ನು ಮೊಟಕುಗೊಳಿಸಬಾರದು ಎಂದು ಮಹತ್ವದ ನಿರ್ದೇಶನವನ್ನು ನೀಡಿದೆ. ಇದರ ಹೊರತಾಗಿಯೂ ಸಹ ಕೇಂದ್ರ ಸರ್ಕಾರ ಮಸೂದೆಯನ್ನು ತರಲು ಹೊರಟಿದೆ ಎಂದು ಜೆಡಿಎಸ್ ಮುಖಂಡ ಅಶೋಕ ಪೂಜಾರಿ ಕಿಡಿ ಕಾರಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೃಷಿ ಮಸೂದೆಯನ್ನು ವಿರೋಧಿ ದೇಶದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಕೇಂದ್ರ ಸರ್ಕಾರ …

Read More »

ಘಟಪ್ರಭಾದಲ್ಲಿ ಮುಂದಿನ ಬಾರಿ ರಾಷ್ಟ್ರೀಯ ನಾಯಕರಿಂದ ಧ್ವಜಾರೋಹಣ: ಸತೀಶ ಜಾರಕಿಹೊಳಿ

ಘಟಪ್ರಭಾ: ಪಟ್ಟಣದ ಡಾ.ಎನ್.ಎಸ್. ಹರ್ಡೀಕರ್ ಸೇವಾದಳ ತರಬೇತಿ ಕೇಂದ್ರದಲ್ಲಿ ಮುಂದಿನ ಬಾರಿ ಗಣರಾಜ್ಯೋತ್ಸವಕ್ಕೆ ರಾಷ್ಟ್ರೀಯ ನಾಯಕರನ್ನು ಕರೆಸಿ ಧ್ವಜಾರೋಹಣ ನೆರವೇರಿಸಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿಳಿಸಿದರು. ಮಂಗಳವಾರ ಧ್ವಜಾರೋಹಣದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೇವಾದಳ ತರಬೇತಿ ಕೇಂದ್ರದಲ್ಲಿ ರಾಷ್ಟ್ರೀಯ ದಿನಗಳು ಸೇರಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇನ್ನೂ ವಿಭಿನ್ನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು. “ಸ್ವಾತಂತ್ರ್ಯ ಹೋರಾಟದಲ್ಲಿ ಹರ್ಡೀಕರ್ ಅವರ ನೇತೃತ್ವದಲ್ಲಿ ಸೇವಾದಳದ …

Read More »

ರೆಸಾರ್ಟ್ ವಾಸ್ತವ್ಯ ಬಗ್ಗೆ ಸಚಿವ ರಮೇಶ್ ಜಾರಕಿಹೊಳಿ‌ಹೇಳಿದ್ದೇನು

ಬೆಳಗಾವಿ-ರೆಸಾರ್ಟ್ ವಾಸ್ತವ್ಯ ಬಗ್ಗೆ ಸಚಿವ ರಮೇಶ್ ಜಾರಕಿಹೊಳಿ‌ ಸ್ಪಷ್ಟನೆ ನೀಡಿದ್ದು,ಚಿಕ್ಕಮಗಳೂರು ಪ್ರವಾಸ ಒಂದು ವಾರದ ಮೊದಲೇ ನಿಗದಿಯಾಗಿತ್ತು,ನನ್ನ ಪ್ರವಾಸದ ಮಾಹಿತಿ ಚಿಕ್ಕಮಗಳೂರು ಜಿಲ್ಲಾಡಳಿತಕ್ಕೆ ಮೊದಲೇ ಕಳುಹಿಸಲಾಗಿತ್ತು,ಸಂಪುಟ ವಿಸ್ತರಣೆ, ಖಾತೆ ಬದಲಾವಣೆ ಮಾಹಿತಿಯೇ ನನಗಿರಲಿಲ್ಲ ಎಂದು ಸಚಿವ ರಮೇಶ್ ಜಾರಕಿಹೊಳಿಹೇಳಿದ್ದಾರೆ. ಗಣರಾಜ್ಯೋತ್ಸವ ಧ್ವಜಾರೋಹಣ ಬಳಿಕ ಸಚಿವ ರಮೇಶ್ ಜಾರಕಿಹೊಳಿ‌ ಸುದ್ದಿಗೋಷ್ಠಿ ನಡೆಸಿದ ಅವರು,ಆದರೆ ನಮಗೆ ಡ್ಯಾಮೇಜ್ ಆಗುವ ರೀತಿಯಲ್ಲಿ ಮಾಧ್ಯಮಗಳಲ್ಲಿ ವರದಿ ಬಂದವು,ಸಂಪುಟ ವಿಸ್ತರಣೆ ವಿಚಾರದಲ್ಲಿ ಸಿಎಂ ನಿರ್ಧಾರಕ್ಕೆ ಬದ್ಧನಾಗಿದ್ದೇನೆ.ಮಾರ್ಚ್ ನಂತರ …

Read More »

ಕೈಮುಗಿದು ಪ್ರಾರ್ಥಿಸುತ್ತೇವೆ ಕೃಷಿ ಕಾಯ್ದೆಗೆ ಅವಕಾಶ ಕೊಡಿ: ಗೋವಿಂದ ಕಾರಜೋಳ

ಬಾಗಲಕೋಟೆ: ಕೇಂದ್ರದ ಕೃಷಿ ಕಾಯ್ದೆಗೆ ರಾಜಕೀಯ ಪ್ರೇರಿತ ಹೋರಾಟ ಸಲ್ಲ. ಕೈ ಮುಗಿದು ಪ್ರಾರ್ಥನೆ ಮಾಡುತ್ತೇವೆ ಕಾಯ್ದೆ ಅನುಷ್ಠಾನಕ್ಕೆ ಅವಕಾಶ ಮಾಡಿಕೊಡಿ ಎಂದು ರೈತ ಸಮುದಾಯಕ್ಕೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಮನವಿ ಮಾಡಿದರು. ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೃಷಿ ಕಾಯ್ದೆಯಿಂದ ರೈತರಿಗೆ ತೊಂದರೆ ಆದಲ್ಲಿ ಮುಂದೆ ತಿದ್ದುಪಡಿ ಮಾಡಬಹುದು. ಸಾರ್ವಜನಿಕ ಹಿತಕ್ಕಾಗಿ ಹಲವು ಬಾರಿ ದೇಶದ ಸಂವಿಧಾನವನ್ನೇ ತಿದ್ದುಪಡಿ ಮಾಡಿದ್ದೇವೆ ಇನ್ನು ಕಾಯ್ದೆ ತಿದ್ದುಪಡಿ ಸಾಧ್ಯವಿಲ್ಲವೇ ಎಂದು …

Read More »

ತೀವ್ರಗೊಂಡ ರೈತರ ಪ್ರತಿಭಟನೆ : ಪೊಲೀಸರಿಂದ ರೈತರ ಮೇಲೆ ಲಾಠಿಚಾರ್ಜ್, ಅಶ್ರುವಾಯು ಪ್ರಯೋಗ

ನವದೆಹಲಿ: ತೀವ್ರಗೊಂಡ ರೈತರ ಪ್ರತಿಭಟನೆಯನ್ನು ತಡೆಯಲು ರೈತರ ಮೇಲೆ ಅಶ್ರುವಾಯು, ಲಾಠಿಚಾರ್ಜ್, ಜಲಫಿರಂಗಿ ಪ್ರಯೋಗ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಕೃಷಿ ಕಾನೂನು ಸುಧಾರಣೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರು ಬ್ಯಾರಿಕೇಡ್‍ಗಳನ್ನು ಉಲ್ಲಂಘಿಸಿ ಪೊಲೀಸರೊಂದಿಗೆ ಘರ್ಷಣೆ ನಡೆಸಿದ್ದಾರೆ. ಈ ವೇಳೆ ಅವರನ್ನು ತಡೆಯಲು ಅಶ್ರುವಾಯು ಹಾರಿಸಲಾಗಿದೆ. ಉತ್ತರ ದೆಹಲಿಯಲ್ಲಿ ಅನ್ನದಾತರ ಕಿಚ್ಚು ತೀವ್ರಗೊಂಡಿಗೆ. ಕಲ್ಲು ತೂರಾಟವಾಗುತ್ತಿದೆ. ಪರಿಸ್ಥಿತಿಯನ್ನು ಹತೋಟಿಗೆ ತರಲು ಪ್ರಯತ್ನಿಸುತ್ತಿರುವ ಪೊಲೀಸರ ವಿರುದ್ಧವಾಗಿ ರೈತರು ತಿರುಗಿ ಬಿದ್ದಿದ್ದಾರೆ. ರೈತರ …

Read More »

ಕೊರೊನಾ ಅವಧಿಯಲ್ಲಿ ಭಾರತದ 100 ಬಿಲಿಯನೇರ್‌ಗಳ ಆದಾಯ ಏರಿಕೆ

ನವದೆಹಲಿ : ವಿಶ್ವಾದ್ಯಂತ ಕೊರೊನಾ ಸಾಂಕ್ರಾಮಿಕ ರೋಗ ವ್ಯಾಪಿಸಿ ಜಾಗತಿಕ ಆರ್ಥಿಕತೆ ಮೇಲೆ ಭಾರೀ ಹೊಡೆತ ಉಂಟು ಮಾಡಿದೆ. ಈ ಮಹಾಮಾರಿ ಪ್ರಭಾವ ನಮ್ಮ ದೇಶದ ಆರ್ಥಿಕತೆ ಮೇಲೂ ಆಗಿದೆ. ಆದರೆ, ನಮ್ಮ ಶತಕೋಟಿ ಶ್ರೀಮಂತರ ಆರ್ಥಿಕ ಸ್ಥಿತಿ ಮೇಲೆ ಮಾತ್ರ ಕಿಂಚಿತ್ತು ಪರಿಣಾಮ ಆಗಿಲ್ಲ ಎಂಬುದು ಆಶ್ಚಯಕರ ಸಂಗತಿ! ಕೋವಿಡ್-19 ಸಾಂಕ್ರಾಮಿಕ ರೋಗ ವಿಶ್ವಕ್ಕೆ ಅಪ್ಪಳಿಸಿದ ಪರಿಣಾಮ ಪ್ರಪಂಚಾವೇ ಲಾಕ್‍ಡೌನ್ ಆಗಿತ್ತು. ಜÁಗತಿಕ ಆರ್ಥಿಕ ಸ್ಥಿತಿ ಸ್ತಬ್ಧವಾಗಿತ್ತು. ಬೃಹತ್ …

Read More »