Breaking News
Home / ವಿಜಯಪುರ (page 4)

ವಿಜಯಪುರ

ಸಿಡಿಲಿಗೆ ರೈತ, ಹೋರಿ ಬಲಿ: ಓರ್ವನಿಗೆ ಗಾಯ, ದ್ರಾಕ್ಷಿ ಬೆಳೆ ಹಾನಿ

ವಿಜಯಪುರ: ಬೇಸಿಗೆ ಮಳೆಯ ಬಿರುಗಾಳಿ, ಸಿಡಿಲಿಗೆ ಜಿಲ್ಲೆಯಲ್ಲಿ ಓರ್ವ ರೈತ ಹಾಗೂ ಒಂದು ಜಾನುವಾರು ಬಲಿಯಾಗಿದ್ದು, ಮತ್ತೋರ್ವ ರೈತ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಜಿಲ್ಲೆಯಲ್ಲಿ ಬುಧವಾರ ಮಧ್ಯರಾತ್ರಿಯಿಂದ ಬಿರುಗಾಳಿ, ಗುಡು, ಸಿಡಿಲಿನ ಅಬ್ಬರ ಜೋರಾಗಿದೆ. ಪರಿಣಾಮ ಗೋದಿ ರಾಶಿಯನ್ನು ಮಳೆಯಿಂದ ರಕ್ಷಿಸಲು ತಾಡಪತ್ರಿ ಹೊದಿಸುವಾಗ ಬಬಲೇಶ್ವರ ತಾಲೂಕಿನ ಸಂಗಾಪೂರ ಎಸ್.ಎಚ್. ಗ್ರಾಮದ ಯುವ ರೈತ ಬಸವರಾಜ ಹಣಮಂತ ಹಮಾರಿ ಹಾಗೂ ಸಂಗಪ್ಪ ಹಣಮಂತ ಹಮಾರಿ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ …

Read More »

ನೀರು ಕೊಟ್ಟ ಶಾಸಕನಿಗೆ ಹಾಲು ಕುಡಿಸಿದ ರೈತ!

ವಿಜಯಪುರ: ನೀರಾವರಿ ಸೇರಿದಂತೆ ಇತರೆ ಯೋಜನೆ, ಸೌಲಭ್ಯ ನೀಡಿದ ಜನಪ್ರತಿನಿಧಿಗಳಿಗೆ ವೈವಿಧ್ಯಮಯ ವಸ್ತುಗಳ ಹಾರ, ತುರಾಯಿ ಹಾಕುವುದು ಸಾಮಾನ್ಯವಾಗಿದೆ. ಆದರೆ ಬಸವನಾಡು ವಿಜಯಪುರ ಜಿಲ್ಲೆಯಲ್ಲಿ ಯುವರೈತರೊಬ್ಬರು ತಮ್ಮ ಜಮೀನಿಗೆ ನೀರು ಹರಿಸಿದ ಶಾಸಕನಿಗೆ ತಾನೇ ಸಾಕಿದ ಆಕಳ ಹಾಲು ಕುಡಿಸುವ ಮೂಲಕ ವಿಶಿಷ್ಟ ರೀತಿಯಲ್ಲಿ ಕೃತಜ್ಞತೆ ಸಲ್ಲಿಸಿ ಗಮನ ಸೆಳೆದಿದ್ದಾರೆ.   ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಸಿದ್ದಾಪುರ ಕೆ. ಗ್ರಾಮದ ಯುವ ರೈತ ವೃಷಭನಾಥ ಯಶವಂತ ಘೋಸರವಾಡ ಬುಧವಾರ …

Read More »

ವಿಜಯಪುರದ ಉಪ್ಪಲಿ ಬುರಜ್ ಮೇಲಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ

ವಿಜಯಪುರ:ನಗರದ ಐತಿಹಾಸಿಕ ಸ್ಮಾರಕ ಉಪ್ಪಲಿ ಬುರಜ್ ಮೇಲಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ನಡೆದಿದೆ. ವಿಜಯಪುರದ ಚಂದಾಬಾವಡಿ ನಿವಾಸಿ ಖಾಜಾ ನದಾಫ್ ಮೃತಪಟ್ಟಿರುವ ವ್ಯಕ್ತಿ.   ಖಾಜಾ ನದಾಫ್ ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಕಾರಣ ತಿಳಿದು ಬಂದಿಲ್ಲ. ಈ ಘಟನೆಯ ಬಳಿಕ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ನಗರದ ಗಾಂಧಿಚೌಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More »

ಲೋಕಾರ್ಪಣೆಗೆ ಸಿದ್ಧಗೊಂಡ ಎಂ.ಬಿ.ಪಾಟೀಲ್ ಕಂಚಿನ ಪ್ರತಿಮೆ

ವಿಜಯಪುರ : ಜಿಲ್ಲೆಯ ಬಬಲೇಶ್ವರ ಕ್ಷೇತ್ರದ ಶಾಸಕರೂ ಆಗಿರುವ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ಅವರ ಕಂಚಿನ ಪುತ್ಥಳಿ ಲೋರ್ಕಾಪಣೆಗೆ ಸಿದ್ಧಗೊಂಡಿದೆ. ಜಲಸಂಪನ್ಮೂಲ ಸಚಿವರಾಗಿ ತಾವು ಪ್ರತಿನಿಧಿಸುವ ಬಬಲೇಶ್ವರ ಕ್ಷೇತ್ರದಲ್ಲಿ ಸಮಗ್ರ ನೀರಾವರಿ ಸೌಲಭ್ಯ ಕಲ್ಪಿಸಿರುವ ಕೃತಜ್ಞತೆಗಾಗಿ ಬಬಲೇಶ್ವರ ತಾಲೂಕಿನ ಸಂಗಾಗಪುರ ಎಸ್.ಎಚ್.ಗ್ರಾಮದ ಜನರು ಎಂ.ಬಿ.ಪಾಟೀಲ ಅವರ ಪುತ್ಥಳಿ ನಿರ್ಮಿಸಲು ಮುಂದಾಗಿದ್ದಾರೆ.   ಈಗಾಗಲೇ ಎಂ.ಬಿ.ಪಾಟೀಲ ಅವರ ಕಂಚಿನ ಪ್ರತಿಮೆ ಪೂರ್ಣಗೊಂಡಿದ್ದು, ಮಾ.17 ರಂದು ಲೋಕಾರ್ಪಣೆಗೆ ಸಿದ್ಧಗೊಂಡಿದೆ. ಪುತ್ಥಳಿ ಅನಾವರಣ …

Read More »

ಇನ್ನೊಂದು ತಿಂಗಳಲ್ಲಿ ಬಿಜೆಪಿ ಅಂಗಡಿ ಬಂದ್ ಆಗಲಿದೆ :ಎಂ. ಬಿ. ಪಾಟೀಲ

ವಿಜಯಪುರ: ಇನ್ನೊಂದು ತಿಂಗಳಲ್ಲಿ ಚುನಾವಣೆ ನೀತಿ ಸಂಹಿತೆ ಜಾರಿಗೆ ಬರಲಿದ್ದು, ಬಿಜೆಪಿ ಅಂಗಡಿ ಬಂದ್ ಆಗಲಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ನಡೆದ ಪ್ರಜಾಧ್ವನಿ ಯಾತ್ರೆಯಲ್ಲಿ ಮಾತನಾಡಿದ ಅವರು, ಇಲ್ಲಿನ ಶಾಸಕರು ಮೊದಲು ದೇವರ ಹಿಪ್ಪರಗಿಯಲ್ಲಿ ಇದ್ದರು. ಇಲ್ಲಿಗೆ ಗುಳೆ ಬಂದಿದ್ದಾ. ಮುಂದೆ ಎಲ್ಲಿ ಹೋಗುತ್ತಾರೋ ಗೊತ್ತಿಲ್ಲ. ರಾಜಕಾರಣದಲ್ಲಿ ರಾಜಕೀಯವಾಗಿ ರಾಜಕಾರಣ ಮಾಡೋಣ. ಅವರದ್ದು ಒಂದು ಪಕ್ಷ, ನಮ್ಮದು ಒಂದು …

Read More »

ಮೂರು ಮಕ್ಕಳನ್ನು ನೀರಿನ ಸಂಪ್ ಗೆ ಎಸೆದು ತಾಯಿ ಆತ್ಮಹತ್ಯೆ

ವಿಜಯಪುರ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮೂರು ಮಕ್ಕಳನ್ನು ನೀರಿನ ಸಂಪ್ ಗೆ ಎಸೆದು ತಾಯಿ ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ಜಿಲ್ಲೆಯ ತಿಕೋಟಾ ತಾಲೂಕಿನಲ್ಲಿ ಜರುಗಿದೆ. ಜಿಲ್ಲೆಯ ತಿಕೋಟಾ ತಾಲೂಕಿನ ಜಾಲಗೇರಿ ಗ್ರಾಮದ ಬಳಿಯ ವಿಠಲವಾಡಿ ತಾಂಡಾ ಗೀತಾ ರಾಮು ಚೌವ್ಹಾಣ (32) ಮಕ್ಕಳನ್ನು ಹತ್ಯೆ ಮಾಡಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ತಾಯಿ ಗೀತಾಳಿಂದ ಹತ್ಯೆಯಾದ ಮಕ್ಕಳನ್ನು ಸೃಷ್ಠಿ (6), ಸಮರ್ಥ (4), ಕಿಶನ್ (3) ಎಂದು ಗುರುತಿಸಲಾಗಿದೆ.   …

Read More »

ವಿಜಯಪುರ: ತಡರಾತ್ರಿ ಅನಿರೀಕ್ಷಿತವಾಗಿ ಪೊಲೀಸ್ ಠಾಣೆಗೆ ಭೇಟಿ ನೀಡಿದ ಜಡ್ಜ್

ವಿಜಯಪುರ: ವಿಜಯಪುರ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳೂ ಆಗಿರುವ ಸಿವಿಲ್ ನ್ಯಾಯಾಧೀಶ ವೆಂಕಣ್ಣ ಹೊಸಮನಿ ಶುಕ್ರವಾರ ತಡರಾತ್ರಿ ನಗರದ ಪೊಲೀಸ್ ಠಾಣೆಯೊಂದಕ್ಕೆ ಅನಿರೀಕ್ಷಿತ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ವಿಜಯಪುರ ನಗರದ ಆದರ್ಶನಗರ ಪೊಲೀಸ್ ಠಾಣೆಗೆ ಶುಕ್ರವಾರ ತಡರಾತ್ರಿ 11ರ ಸುಮಾರಿಗೆ ಕಾನೂನು ಸೇವಾ ಪ್ರಾಧಿಕಾರದ ಸಹಾಯಕರಾದ ಅನಿಲ ದಶವಂತ ಅವರೊಂದಿಗೆ ಅನಿರೀಕ್ಷಿತ ಭೇಟಿ ಠಾಣೆಯ ವ್ಯವಸ್ಥೆ ಪರಿಶೀಲಿಸಿದರು. ಅಲ್ಲದೇ ಠಾಣೆಯ ರಾತ್ರಿ ಕರ್ತವ್ಯದಲ್ಲಿದ್ದ ಬಿ.ಎ.ನಿಡೋಣಿ ಅವರಿಂದ …

Read More »

ಪ್ರೀತಿಸಿದ ಹುಡುಗನನ್ನು ತೋಟಕ್ಕೆ ಕರೆದೊಯ್ದು ಕೈ ಕಾಲು ಕಟ್ಟಿ ಕಬ್ಬಿಣದ ರಾಡ್‌ನಿಂದ ಹಲ್ಲೆ

ವಿಜಯಪುರ: ಪ್ರೀತಿಸಿದ, ಸಲುಗೆಯಿಂದಿದ್ದ ಹುಡುಗಿಯಿಂದ ದೂರವಿದ್ದರೂ ಹುಡುಗನನ್ನು ತೋಟಕ್ಕೆ ಕರೆದೊಯ್ದು ಕೈ ಕಾಲು ಕಟ್ಟಿ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿದ ಪ್ರಕರಣ ಬೆಳಕಿಗೆ ಬಂದಿದೆ. ತಿಕೋಟಾ ತಾಲೂಕಿನ ಬಿಜ್ಜರಗಿ ಗ್ರಾಮದಲ್ಲಿ ಜ. 9ರಂದೇ ಈ ಘಟನೆ ನಡೆದಿದ್ದು ಜಿಲ್ಲಾಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿರುವ ಯುವಕನ ಅಣ್ಣ ಜ. 12ರಂದು ತಿಕೋಟಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನೀಲ ಬಾಬು ಜೊಲ್ಲಿ (23) ಎಂಬಾತ ಹಲ್ಲೆಗೆ ಒಳಗಾದ ಯುವಕ. ಅದೇ ಗ್ರಾಮದ ಬಾಳಪ್ಪ ಮುಕುಂದ ಕ್ಯಾತನ್‌, ರಾಘವೇಂದ್ರ …

Read More »

ಶ್ರೀಗಳ ಆರೋಗ್ಯ ಕ್ಷೇಮ ವಿಚಾರ ತಿಳಿಯಲು ಸಿಎಂ ಸಿದ್ದರಾಮಯ್ಯ ಭೇಟಿ

ವಿಜಯಪುರ: ನಡೆದಾಡುವ ದೇವರು ಸಿದ್ದೇಶ್ವರ ಶ್ರೀಗಳ ಭೇಟಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಿದರು. ಶ್ರೀಗಳಿರುವ ಕೊಠಡಿಗೆ ತೆರಳಿದ ಮಾಜಿ ಸಿಎಂ ಸಿದ್ದರಾಮಯ್ಯ ಇವರು ಶ್ರೀಗಳ ಆರೋಗ್ಯ ಕ್ಷೇಮ ವಿಚಾರ ತಿಳಿಯಲು ವೈದ್ಯರ ಭೇಟಿ ಮಾಡಿದರು. ಬಳಿಕ ಮಾತನಾಡಿ ಶ್ರೀಗಳ ಆರೋಗ್ಯ ಸ್ಥಿರವಾಗಿದೆ,   ನಾನು ವೈದ್ಯರ ಜೊತೆಗೆ ಮಾತನಾಡಿದ್ದೇನೆ, ಆರೋಗ್ಯ ಸ್ಥಿರವಾಗಿದೆ ಎಂದಿದ್ದಾರೆ, ಅವರು ಮಹಾಸಂತರು ಧಾರ್ಮಿಕವಾಗಿ ಜಾಗೃತಿಗೊಳಿಸುವ ಕೆಲಸ ಮಾಡಿದ್ದಾರೆ ಎಂದರು. ಪ್ರವಚನದ ಮೂಲಕ ಧಾರ್ಮಿಕ ಭಾವನೆ ಮೂಡಿಸಿದ್ದಾರೆ, …

Read More »

ಯತ್ನಾಳ ಮಾತ್ರವಲ್ಲ ಯಾರಾದರೂ ದಾಖಲೆ ಬಿಡುಗಡೆ ಮಾಡಲಿ: ವಚನಾನಂದಶ್ರೀ

ವಿಜಯಪುರ: ಪಂಚಮಸಾಲಿ ಸಮಾಜದ 2ಎ ಮೀಸಲಾತಿ ಪಾದಯಾತ್ರೆ ಹೋರಾಟಕ್ಕೆ ಮುನ್ನವೇ ಸರ್ಕಾರ ಹರಿಹರ ಪಂಚಮಸಾಲಿ ಪೀಠದ ಅಭಿವೃದ್ಧಿ, ವಿದ್ಯಾರ್ಥಿ ವಸತಿ ನಿಲಗಳಿಗೆ 10 ಕೋಟಿ ರೂ. ನೀಡಿದೆ. ನೀಡಿದ ಅನುದಾನ ಪಾರದರ್ಶಕವಾಗಿ ಬಳಕೆಯಾಗಿದೆ. ಹೀಗಾಗಿ ಯತ್ನಾಳ ಮಾತ್ರವಲ್ಲ ಯಾರು ಬೇಕಾದರೂ ದಾಖಲೆ ಬಿಡುಗಡೆ ಮಾಡಲಿ ಎಂದು ಹರಿಹರ ವೀರಶೈವ ಪಂಚಮಸಾಲಿ ಜಗದ್ಗುರು ಪೀಠದ ವಚನಾನಂದ ಶ್ರೀಗಳು ಹೇಳಿದರು.   ಭಾನುವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹರಿಹರದ ನಮ್ಮ ಪೀಠಕ್ಕೂ, …

Read More »