Breaking News

ವಿಜಯಪುರ

ಸಾಧಕರ ಸೀಟ್​ನಲ್ಲಿ ಸಿಹಿಕಹಿ ಚಂದ್ರು, ಶಿಕ್ಷಣ ತಜ್ಞ ಗುರುರಾಜ ಕರಜಗಿ

ವೀಕೆಂಡ್​​ ವಿತ್​ ರಮೇಶ್’ ಪ್ರೋಮೋ ರಿಲೀಸ್​ ಆಗಿದೆ. ಈ ವಾರ ಸಿನಿಮಾ ಮತ್ತು ಶಿಕ್ಷಣ ಕ್ಷೇತ್ರದ ಸಾಧಕರು ಪ್ರೇಕ್ಷಕರ ಮುಂದೆ ಬರಲಿದ್ದಾರೆ. ಕನ್ನಡ ಕಿರುತೆರೆ ಜನಪ್ರಿಯ ಶೋ ‘ವೀಕೆಂಡ್​​ ವಿತ್​ ರಮೇಶ್’ ಅಪಾರ ಸಂಖ್ಯೆಯ ಪ್ರೇಕ್ಷಕರನ್ನು ಸಂಪಾದಿಸಿದೆ. ಸೀಸನ್​ 5ರಲ್ಲಿ ಈಗಾಗಲೇ 7 ಸಾಧಕರು ಬಂದು ಹೋಗಿದ್ದು, ಈ ವಾರ ಕೂಡ ಇಬ್ಬರು ಸಾಧಕರು ಬರಲಿದ್ದಾರೆ.

Read More »

ಸರಳ ರೀತಿಯಲ್ಲಿ ರಾಹುಕಾಲದಲ್ಲಿ ಮೌಢ್ಯಕ್ಕೆ ಮತ್ತೊಮ್ಮೆ ಸೆಡ್ಡು ಹೊಡೆದು ನಾಮ ಪತ್ರ ಸಲ್ಲಿಸಿದ ಸಾಹುಕಾರ ಸತೀಶ್ ಜಾರಕಿಹೊಳಿ

ಹುಕ್ಕೇರಿ:ಸತೀಶ್ ಜಾರಕಿಹೊಳಿ ಮೌಢ್ಯಕ್ಕೆ ಸೆಡ್ಡು ಹೊಡೆದು ಮತ್ತೆ ರಾಹುಕಾಲದಲ್ಲಿ ನಾಮ ಪತ್ರ ಸಲ್ಲಿಕೆ ಮಾಡಿದ್ದಾರೆ.   ಪ್ರತಿ ಬಾರಿ ಯಂತೆ ಈ ಬಾರಿಯೂ ಕೂಡ ಅತ್ಯಂತ ಸರಳ ರೀತಿಯಲ್ಲಿ ಕೆಲವ ಐದೇ ಜನ ಚುನಾವಣಾ ಕಚೇರಿಗೆ ತೆರಳಿ ನಾಮ ಪತ್ರ ಸಲ್ಲಿಸಿದ್ದಾರೆ   https://fb.watch/j-WnDh1nbM/?mibextid=2Rb1fB ಯಾರ ಬಗ್ಗೆಯೂ ಟೀಕೆ ಮಾಡದೆ ಜನರನ್ನ ಸೇರಿಸದೆ ಸರಳ ರೀತಿಯಲ್ಲಿ ನಾಮ ನಿರ್ದೇಶನ ಮಾಡುವುದು ಬಹುತೇಕ ರಾಜಕಾರಣಿಗಳಲ್ಲಿ ಸತೀಶ್ ಜಾರಕಿಹೊಳಿ ಮುಂಚಿನವರು ಎನ್ನ ಬಹುದು …

Read More »

ಬಿಜೆಪಿಯ ಕೆಲ ನಾಯಕರಿಂದ ನಾನು ನೋವನುಭವಿಸಿದ್ದೇನೆ ನನಗೆ ಟಿಕೆಟ್ ಕೈತಪ್ಪಲು ಕೆಲ ನಾಯಕರು ಕಾರಣ::ಶೆಟ್ಟರ್

ಹುಬ್ಬಳ್ಳಿ: ಬಿಜೆಪಿಯಲ್ಲಿ ನನಗೆ ಅವಕಾಶ ಸಿಕ್ಕಾಗ ಒಳ್ಲೆಯ ಕೆಲಸ ಮಾಡಿದ್ದೇನೆ. ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ಆದರೆ ಬಿಜೆಪಿಯ ಕೆಲ ನಾಯಕರಿಂದ ನಾನು ನೋವನುಭವಿಸಿದ್ದೇನೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಗದೀಶ್ ಶೆಟ್ಟರ್, ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಅಭ್ಯರ್ಥಿ ಘೋಷಣೆಯಾಗುವವರೆಗೆ ಸುಮ್ಮನಿದ್ದೆ. ನನಗೆ ಟಿಕೆಟ್ ಕೈತಪ್ಪಲು ಕೆಲ ನಾಯಕರು ಕಾರಣ. ನನ್ನ ವಿರುದ್ಧ ಷಡ್ಯಂತ್ರ ನಡೆಸಿ ಪಕ್ಷದಿಂದ ಹೊರ ಬರುವಂತೆ ಮಾಡಿದರು. ಅವರು ಯಾರು …

Read More »

BJP ಕೆಲಹಾಲಿ ಶಾಸಕರಿಗೆ ಟಿಕೆಟ್ ಕೈತಪ್ಪುವ ಭೀತಿ, ಹೊಸ ಮುಖಗಳಿಗೆ ಮಣೆ ಹಾಕುವ ಸಾಧ್ಯತೆ? : ಸಿಎಂ

ನವದೆಹಲಿ: ವಿಧಾನಸಭಾ ಚುನಾವಣೆಗೆ ಕೇವಲ ಒಂದು ತಿಂಗಳು ಬಾಕಿಯಿದ್ದು, ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಕಸರತ್ತು ನಡೆಸಿದೆ. ನವದೆಹಲಿಯಲ್ಲಿ ಬಿಜೆಪಿ ವರಿಷ್ಠರು ಸರಣಿ ಸಭೆಗಳನ್ನು ನಡೆಸಿದರೂ ಕೆಲ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಕಂಗಟ್ಟಾಗಿದ್ದು, ಇಂದು ಸಂಜೆ ಮತ್ತೊಂದು ಸುತ್ತಿನ ಸಭೆ ನದೆಸಲು ತೀರ್ಮಾನಿಸಲಾಗಿದೆ. ನವದೆಹಲಿಯಲ್ಲಿ ಸುದ್ದಿಗರರೊಂದಿಗೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಇಂದು ಸಂಜೆ 4 ಗಂಟೆಗೆ ಬಿಜೆಪಿ ರಾಷ್ತ್ರಾಧ್ಯಕ್ಷ ಜೆ.ಪಿ.ನಡ್ಡಾ ನಿವಸದಲ್ಲಿ ಮತ್ತೊಂದು ಸುತ್ತಿನ ಸಭೆ ನಡೆಯಲಿದೆ ಎಂದರು. ಇಂದು …

Read More »

ಖಾಸಗಿ ಬಸ್’ನಲ್ಲಿ ಸಾಗಿಸುತ್ತಿದ್ದ 2 ಕೋ.ರೂ. ನಗದು ವಶ.!

ಬೆಳಗಾವಿ : ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿ ಟೋಲ್ ಗೇಟ್ ನಲ್ಲಿ ಸೂಕ್ತ ದಾಖಲೆಗಳಿಲ್ಲದೇ ಖಾಸಗಿ ಬಸ್ ನಲ್ಲಿ ಸಾಗಿಸಲಾಗುತ್ತಿದ್ದ ಎರಡು ಕೋಟಿ ರೂಪಾಯಿ ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಈ ಖಾಸಗಿ ಬಸ್ (KA 70 1459) ಮುಂಬೈಯಿಂದ ಬೆಂಗಳೂರಿಗೆ ಹೊರಟಿತ್ತು ಎಂದು ತಿಳಿದುಬಂದಿದೆ. ಇಂದು ನಸುಕಿನಜಾವ 3.30 ರ ವೇಳೆಗೆ ಚುನಾವಣಾ ಕಾರ್ಯನಿರತ ಎಫ್‌ಎಸ್ ಟಿ ಹಾಗೂ ಪೊಲೀಸ್ ಅಧಿಕಾರಿಗಳ ತಂಡ ಜಂಟಿಯಾಗಿ ಪರಿಶೀಲನೆ ನಡೆಸಿದಾಗ ಅಕ್ರಮ ಹಣ ಪತ್ತೆಯಾಗಿದೆ.ಈ ಕುರಿತು …

Read More »

ಬಿಜೆಪಿ ಟಿಕೆಟ್‌ಗಾಗಿ CPI ಹುದ್ದೆಗೆ ರಾಜೀನಾಮೆ; ನಾಗಠಾಣ ಮೀಸಲು ಕ್ಷೇತ್ರದಿಂದ ಸ್ಪರ್ಧೆಗೆ ಸಿದ್ಧ

ವಿಜಯಪುರ: ಪೊಲೀಸ್ ಇಲಾಖೆಯಲ್ಲಿ 12 ವರ್ಷಗಳ ಕಾಲ ಸೇವೆ ಸಲ್ಲಿಸಿರುವ ಪೊಲೀಸ್ ಅಧಿಕಾರಿಯೋರ್ವ ಇದೀಗ ಬಿಜೆಪಿ ಟಿಕೆಟ್‌ಗಾಗಿ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿ ಹೊರಬಂದಿದ್ದಾರೆ. ನಾಗಠಾಣ ಎಸ್‌ಸಿ ಮೀಸಲು ಕ್ಷೇತ್ರದ ಬಿಜೆಪಿ ಟಿಕೆಟ್‌ನ ಪ್ರಬಲ ಆಕಾಂಕ್ಷಿಯಾಗಿರುವ ಮಹೀಂದ್ರಕುಮಾರ ನಾಯಿಕ ಟಿಕೆಟ್ ಸಿಗುವ ವಿಶ್ವಾಸದೊಂದಿಗೆ ಕರ್ತವ್ಯಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಬೆಂಗಳೂರಿನ ಡಿಜಿಪಿ ಕೇಂದ್ರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಪಿಐ ನಾಯಕ ರಾಜಕೀಯ ಸೇರಬೇಕೆಂಬ ಉದ್ದೇಶದೊಂದಿಗೆ ಅದರಲ್ಲೂ ಬಿಜೆಪಿಯ ತತ್ವ ಸಿದ್ದಾಂತವನ್ನು ಮೆಚ್ಚಿ ಕರ್ತವ್ಯಕ್ಕೆ …

Read More »

ಯೂರಿಯಾ ಚೀಲದಲ್ಲಿ ಅಕ್ರಮವಾಗಿ ಸಾರಾಯಿ ಮಾರಾಟ ಮಾಡುತ್ತಿದ ಆರೋಪಿಯೋರ್ವನನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿ: ಯೂರಿಯಾ ಚೀಲದಲ್ಲಿ ಅಕ್ರಮವಾಗಿ ಸಾರಾಯಿ ಮಾರಾಟ ಮಾಡುತ್ತಿದ ಆರೋಪಿಯೋರ್ವನನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ. ಯೂರಿಯಾ ಚೀಲದಲ್ಲಿ ವಿವಿಧ ರೀತಿಯ ಸಾರಾಯಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಘಟಪ್ರಭಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ಒಟ್ಟು 43.5 ಲೀಟರ ಅಂದಾಜಿನ ಸುಮಾರು 16848 ರೂಪಾಯಿ ಮೌಲ್ಯದ ಮದ್ಯ ವಶಕ್ಕೆ ಪಡೆಯಲಾಗಿದೆ. ಪಿಐ ಘಟಪ್ರಭಾ ರವರು ಹಾಗೂ ಅವರ ಸಿಬ್ಬಂದಿ ಜನರು ಮೇಲಾಧಿಕಾರಿಗಳ ಮಾರ್ಗದರ್ಶನದಲ್ಲಿ ರೇಡ್ ಮಾಡಿ ಜಪ್ತಿ ಮಾಡಿಕೊಂಡಿದ್ದು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ …

Read More »

ಸಿಡಿಲಿಗೆ ರೈತ, ಹೋರಿ ಬಲಿ: ಓರ್ವನಿಗೆ ಗಾಯ, ದ್ರಾಕ್ಷಿ ಬೆಳೆ ಹಾನಿ

ವಿಜಯಪುರ: ಬೇಸಿಗೆ ಮಳೆಯ ಬಿರುಗಾಳಿ, ಸಿಡಿಲಿಗೆ ಜಿಲ್ಲೆಯಲ್ಲಿ ಓರ್ವ ರೈತ ಹಾಗೂ ಒಂದು ಜಾನುವಾರು ಬಲಿಯಾಗಿದ್ದು, ಮತ್ತೋರ್ವ ರೈತ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಜಿಲ್ಲೆಯಲ್ಲಿ ಬುಧವಾರ ಮಧ್ಯರಾತ್ರಿಯಿಂದ ಬಿರುಗಾಳಿ, ಗುಡು, ಸಿಡಿಲಿನ ಅಬ್ಬರ ಜೋರಾಗಿದೆ. ಪರಿಣಾಮ ಗೋದಿ ರಾಶಿಯನ್ನು ಮಳೆಯಿಂದ ರಕ್ಷಿಸಲು ತಾಡಪತ್ರಿ ಹೊದಿಸುವಾಗ ಬಬಲೇಶ್ವರ ತಾಲೂಕಿನ ಸಂಗಾಪೂರ ಎಸ್.ಎಚ್. ಗ್ರಾಮದ ಯುವ ರೈತ ಬಸವರಾಜ ಹಣಮಂತ ಹಮಾರಿ ಹಾಗೂ ಸಂಗಪ್ಪ ಹಣಮಂತ ಹಮಾರಿ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ …

Read More »

ನೀರು ಕೊಟ್ಟ ಶಾಸಕನಿಗೆ ಹಾಲು ಕುಡಿಸಿದ ರೈತ!

ವಿಜಯಪುರ: ನೀರಾವರಿ ಸೇರಿದಂತೆ ಇತರೆ ಯೋಜನೆ, ಸೌಲಭ್ಯ ನೀಡಿದ ಜನಪ್ರತಿನಿಧಿಗಳಿಗೆ ವೈವಿಧ್ಯಮಯ ವಸ್ತುಗಳ ಹಾರ, ತುರಾಯಿ ಹಾಕುವುದು ಸಾಮಾನ್ಯವಾಗಿದೆ. ಆದರೆ ಬಸವನಾಡು ವಿಜಯಪುರ ಜಿಲ್ಲೆಯಲ್ಲಿ ಯುವರೈತರೊಬ್ಬರು ತಮ್ಮ ಜಮೀನಿಗೆ ನೀರು ಹರಿಸಿದ ಶಾಸಕನಿಗೆ ತಾನೇ ಸಾಕಿದ ಆಕಳ ಹಾಲು ಕುಡಿಸುವ ಮೂಲಕ ವಿಶಿಷ್ಟ ರೀತಿಯಲ್ಲಿ ಕೃತಜ್ಞತೆ ಸಲ್ಲಿಸಿ ಗಮನ ಸೆಳೆದಿದ್ದಾರೆ.   ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಸಿದ್ದಾಪುರ ಕೆ. ಗ್ರಾಮದ ಯುವ ರೈತ ವೃಷಭನಾಥ ಯಶವಂತ ಘೋಸರವಾಡ ಬುಧವಾರ …

Read More »

ವಿಜಯಪುರದ ಉಪ್ಪಲಿ ಬುರಜ್ ಮೇಲಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ

ವಿಜಯಪುರ:ನಗರದ ಐತಿಹಾಸಿಕ ಸ್ಮಾರಕ ಉಪ್ಪಲಿ ಬುರಜ್ ಮೇಲಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ನಡೆದಿದೆ. ವಿಜಯಪುರದ ಚಂದಾಬಾವಡಿ ನಿವಾಸಿ ಖಾಜಾ ನದಾಫ್ ಮೃತಪಟ್ಟಿರುವ ವ್ಯಕ್ತಿ.   ಖಾಜಾ ನದಾಫ್ ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಕಾರಣ ತಿಳಿದು ಬಂದಿಲ್ಲ. ಈ ಘಟನೆಯ ಬಳಿಕ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ನಗರದ ಗಾಂಧಿಚೌಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More »