Breaking News
Home / ಸಿನೆಮಾ

ಸಿನೆಮಾ

ಆಡಿ ಕ್ಯೂ 7 ಕಾರು ಖರೀದಿಸಿದ ಅಶ್ವಿನಿ

ಪವರ್​ ಸ್ಟಾರ್ ಪುನೀತ್​ ರಾಜ್​ಕುಮಾರ್​ (Puneeth Rajkumar) ನಿಧನದ ಬಳಿಕ ಪತ್ನಿ ಅಶ್ವಿನಿ ಪುನೀತ್ ರಾಜ್​ಕುಮಾರ್ (Ashwini Puneeth Rajkumar)​ ಪಿಆರ್​ಕೆ ಪ್ರೊಡೆಕ್ಷನ್ (PRK Production) ಸಂಪೂರ್ಣ ಹೊಣೆ ಹೊತ್ತಿದ್ದಾರೆ. ​ ನಿರ್ಮಾಪಕಿಯಾಗಿ ಒಳ್ಳೆಯ ಸಿನಿಮಾಗಳನ್ನು ನಿರ್ಮಾಣ ಮಾಡ್ತಿದ್ದಾರೆ. ಹೊಸ ಪ್ರತಿಭೆಗಳಿಗೆ ಅವಕಾಶ ಕೊಡಲೆಂದೇ ಪುನೀತ್ ರಾಜ್​ಕುಮಾರ್ ಪಿಆರ್​ಕೆ ಪ್ರೊಡೆಕ್ಷನ್ ಶುರು ಮಾಡಿದ್ರು. ಇದೀಗ ಅಪ್ಪು ಕನಸನ್ನು ಅಶ್ವಿನಿ ನನಸು ಮಾಡ್ತಿದ್ದಾರೆ. ಒಳ್ಳೆ ಕಥೆ ಹಾಗೂ ಪ್ರತಿಭಾವಂತರನ್ನು (Talented) ಹುಡುಕಿ …

Read More »

ಸಿಎಂ ಸಿದ್ದರಾಮಯ್ಯ ಅವರು ಭ್ರೂಣ ಹತ್ಯೆ ಪ್ರಕರಣದ ಬಗ್ಗೆ ಸಿಐಡಿ ತನಿಖೆಗೆ ಆದೇಶಿಸಿದ್ದಾರೆ.

ಬೆಂಗಳೂರು : ಇತ್ತೀಚೆಗೆ ಮಂಡ್ಯದಲ್ಲಿ ಬೆಳಕಿಗೆ ಬಂದ ಭ್ರೂಣ ಹತ್ಯೆ ಪ್ರಕರಣದ ಬಗ್ಗೆ ಸಿಐಡಿ ತನಿಖೆಗೆ ಸಿಎಂ ಆದೇಶ ಮಾಡಿದ್ದು, ಈ ಕುರಿತಂತೆ ಗೃಹ ಸಚಿವರಿಗೆ ನಿರ್ದೇಶನ ನೀಡಿದ್ದಾರೆ.   ಇತ್ತೀಚೆಗೆ ಹೆಣ್ಣು ಭ್ರೂಣ ಪತ್ತೆ ಹಾಗೂ ಗರ್ಭಪಾತ ಪ್ರಕರಣ ಭೇದಿಸಿದ್ದ ಬೆಂಗಳೂರಿನ ಬೈಯಪ್ಪನಹಳ್ಳಿ ಠಾಣೆ ಪೊಲೀಸರು ಮೈಸೂರಿನ ಖಾಸಗಿ ಆಸ್ಪತ್ರೆ ವೈದ್ಯ ದಂಪತಿ ಹಾಗೂ ಇತರ ಮೂವರು ಸೇರಿದಂತೆ ಐವರನ್ನು ಬಂಧಿಸಿದ್ದರು. ಇದಕ್ಕೂ ಮುನ್ನ ಕಳೆದ ಅಕ್ಟೋಬರ್‌ನಲ್ಲಿ ಶಿವನಂಜೇಗೌಡ, ವೀರೇಶ್, …

Read More »

ಥಿಯೇಟರ್‌ಗಳಲ್ಲಿ ಪಟಾಕಿ ಸಿಡಿಸಿ ಅವಾಂತರ; ಅತಿರೇಕದ ಅಭಿಮಾನಿಗಳಿಗೆ ಸಲ್ಮಾನ್ ಖಾನ್​ ಕಿವಿ ಮಾತು

ಮುಂಬೈ (ಮಹಾರಾಷ್ಟ್ರ): ಟೈಗರ್ 3 ಚಿತ್ರದ ವೀಕ್ಷಣೆ ವೇಳೆ ಥಿಯೇಟರ್​ಗಳಲ್ಲಿಯೇ ಪಟಾಕಿ ಸಿಡಿಸಿ ಅತಿರೇಕದ ಅಭಿಮಾನ ತೋರಿರುವ ಬಗ್ಗೆ ನಟ ಸಲ್ಮಾನ್ ಖಾನ್ ವಿಷಾದ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಯಾರೂ ಸಹ ಜೀವಕ್ಕೆ ಅಪಾಯವನ್ನುಂಟು ಮಾಡುವ ಇಂತಹ ಅಭಿಮಾನಕ್ಕೆ ಮುಂದಾಗಬಾರದು ಎಂದು ಅವರು ಅಭಿಮಾನಿಗಳಿಗೆ ಕಿವಿ ಮಾತು ಹೇಳಿದ್ದಾರೆ. ಇನ್‌ಸ್ಟಾಗ್ರಾಮ್ ವಿಷಾದ ವ್ಯಕ್ತಪಡಿಸಿರುವ ಸಲ್ಮಾನ್ ಖಾನ್, “ಥಿಯೇಟರ್‌ಗಳಲ್ಲಿ ಪಟಾಕಿ ಸಿಡಿಸಿದ ಬಗ್ಗೆ ನಾನೂ ಸಹ ಕೇಳಿದೆ. ಈ ಘಟನೆ ತುಂಬಾ ಅಪಾಯಕಾರಿ. ನಮ್ಮನ್ನು …

Read More »

ಪುನೀತ್​ ರಾಜ್​ಕುಮಾರ್ ಅವರು​ ಇಹಲೋಕ ತ್ಯಜಿಸಿ ಇಂದಿಗೆ 2 ವರ್ಷ

ಕನ್ನಡದ ಹೆಸರಾಂತ ನಟ ಪುನೀತ್​ ರಾಜ್​ಕುಮಾರ್ ಅವರು​ ಇಹಲೋಕ ತ್ಯಜಿಸಿ ಇಂದಿಗೆ 2 ವರ್ಷವಾಗುತ್ತಿದೆ. ಪುಣ್ಯಸ್ಮರಣೆಯ ಹಿನ್ನೆಲೆಯಲ್ಲಿ ಅವರು ನಟಿಸಿರುವ ಸಾಮಾಜಿಕ ಸಂದೇಶ ಸಾರುವ ಕೆಲವು ಚಿತ್ರಗಳಿಲ್ಲಿವೆ. ಕನ್ನಡ ಚಿತ್ರರಂಗದ ರಾಜಕುಮಾರ, ನಗುಮೊಗದ ಒಡೆಯ ಪವರ್​ಸ್ಟಾರ್​ ಪುನೀತ್​ ರಾಜ್​ಕುಮಾರ್​ ಮೃತಪಟ್ಟು ಎರಡು ವರ್ಷ ಕಳೆಯುತ್ತಿದೆ. ಬಾಲ್ಯದಲ್ಲೇ ಸಿನಿಮಾ ಲೋಕ ಪ್ರವೇಶಿಸಿದ ಅಪ್ಪು, ಜನರಿಗೆ ಮನರಂಜನೆಯ ಔತಣವನ್ನೇ ಉಣಬಡಿಸಿದ್ದರು. ಎರಡನೇ ವರುಷದ ಪುಣ್ಯಸ್ಮರಣೆಯ ಈ ಸಂದರ್ಭದಲ್ಲಿ ಸಾಮಾಜಿಕ ಸಂದೇಶ ಸಾರುವ ಅವರ …

Read More »

ಸಪ್ತ ಸಾಗರದಾಚೆ ಎಲ್ಲೋ ಸೈಡ್​ ಬಿ’ ಬಿಡುಗಡೆಗೆ ಮುಹೂರ್ತ ಫಿಕ್ಸ್: ಅದ್ಭುತ ಪ್ರೇಮಕಥೆ ವೀಕ್ಷಿಸಲು ಪ್ರೇಕ್ಷಕರ ಕಾತರ

ಸಪ್ತ ಸಾಗರದಾಚೆ ಎಲ್ಲೋ ಸೈಡ್​ ಬಿ’ ಬಿಡುಗಡೆ ದಿನಾಂಕವನ್ನು ನಟ ರಕ್ಷಿತ್​ ಶೆಟ್ಟಿ ಬಹಿರಂಗಪಡಿಸಿದ್ದಾರೆ. ರಕ್ಷಿತ್​​ ಶೆಟ್ಟಿ ಕನ್ನಡ ಚಿತ್ರರಂಗದ ಬಹುಬೇಡಿಕೆ ನಟ. ಏಳು ಬೀಳುಗಳನ್ನು ಎದುರಿಸಿ, ಪ್ರಸ್ತುತ ಸ್ಟಾರ್​ ನಟನಾಗಿ ಹೊರ ಹೊಮ್ಮಿದ್ದಾರೆ. ರಕ್ಷಿತ್​​ ಶೆಟ್ಟಿ ಮುಖ್ಯಭೂಮಿಕೆಯ ಬಹುತೇಕ ಸಿನಿಮಾಗಳು ಹಿಟ್ ಸಾಲಿಗೆ ಸೇರಿವೆ. ಪ್ರತೀ ಸಿನಿಮಾಗಳು ಕೂಡ ಅದ್ಭುತ ಅಂತಾರೆ ಅಭಿಮಾನಿಗಳು. ಪ್ರತೀ ಪಾತ್ರಗಳಿಗೂ ಅಚ್ಚುಕಟ್ಟಾಗಿ ಜೀವ ತುಂಬೋ ಮುಖೇನ ಆ ಪಾತ್ರವನ್ನು, ಸಿನಿಮಾವನ್ನು ವಿಶೇಷವಾಗಿಸುತ್ತಾರೆ. ಕಥೆ …

Read More »

ಆಯಂಗ್ರಿ ಯಂಗ್​​ ಮ್ಯಾನ್​ಗೆ ಇಂದು 81ರ ಸಂಭ್ರಮ… ನಡುರಾತ್ರಿಯಲ್ಲೇ ಅಭಿಮಾನಿಗಳ ಶುಭ ಹಾರೈಕೆ!

ಅಮಿತಾಬ್ ಬಚ್ಚನ್ ತಮ್ಮ 81 ನೇ ಹುಟ್ಟುಹಬ್ಬ ಆಚರಿಸಿಕೊಂಡರು. ಮುಂಬೈನಲ್ಲಿರುವ ಅವರ ನಿವಾಸ ‘ಜಲ್ಸಾ’ದ ಹೊರಗೆ ಜಮಾಯಿಸಿದ ಅಭಿಮಾನಿಗಳು ನೆಚ್ಚಿನ ನಟನಿಗೆ ಶುಭಾಶಯ ಕೋರಿದರು. ಈ ವೇಳೆ ಅಭಿಮಾನಿಗಳತ್ತ ಕೈ ಬೀಸಿದ ಬಿಗ್​ ಬಿ, ಅವರಿಗೆಲ್ಲ ಕೃತಜ್ಞತೆ ಸಲ್ಲಿಸಿದರು.   ಇಂದು ಭಾರತೀಯ ಚಿತ್ರರಂಗದ ಎವರ್​​​ಗ್ರೀನ್​ ಹೀರೋ ಬಿಗ್​ ಬಿ ಅಮಿತಾಬ್​ ಬಚ್ಚನ್​ ಅವರ 81ನೇ ಹುಟ್ಟುಹಬ್ಬ.. ಈ ನಿಮಿತ್ತ ಅವರ ಸೊಸೆ, ಮೊಮ್ಮಗಳು, ಮಗಳು ಜನ್ಮದಿನದ ಶುಭಾಶಯಗಳನ್ನು ತಿಳಿಸಿದ್ದಾರೆ. …

Read More »

ತಮಿಳುನಾಡಿಗೆ ಕಾವೇರಿ ನದಿ ನೀರನ್ನು ಹರಿಸುವ ಅನಿವಾರ್ಯತೆ ಸೃಷ್ಟಿಯಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಆಡಳಿತಾತ್ಮಕವಾಗಿ ನಡೆಸಬಹುದಾದ ಪ್ರಯತ್ನಗಳನ್ನು ಮಾಡುತ್ತಿದೆ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರನ್ನು ಹರಿಸುವ ಅನಿವಾರ್ಯತೆ ಸೃಷ್ಟಿಯಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಆಡಳಿತಾತ್ಮಕವಾಗಿ ನಡೆಸಬಹುದಾದ ಪ್ರಯತ್ನಗಳನ್ನು ಮಾಡುತ್ತಿದೆ. ಈ ನಡುವೆ ಕನ್ನಡ ಚಲನಚಿತ್ರರಂಗದ ಸ್ಟಾರ್​ ನಟರು ಕೂಡ ಈ ವಿಚಾರವಾಗಿ ದನಿ ಎತ್ತಿದ್ದಾರೆ.   ಇಂದು ಸೆಂಚುರಿ ಸ್ಟಾರ್ ಶಿವರಾಜಕುಮಾರ್, ಕಿಚ್ಚ ಸುದೀಪ್, ಚಾಲೆಂಜಿಂಗ್ ಸ್ಟಾರ್ ದರ್ಶನ್, ನಟಿ ಪೂಜಾ ಗಾಂಧಿ ಹಾಗೂ ನಿನ್ನೆ ನಟ ಜಗ್ಗೇಶ್ ಕಾವೇರಿ ಪರವಾಗಿ ಮಾತನಾಡಿದ್ದರು. ಈ ಸಮಸ್ಯೆಯ ಪರಿಹಾರಕ್ಕೆ ಸೂಕ್ತ ಕ್ರಮ …

Read More »

ಸೆಪ್ಟಂಬರ್​ 18ರಂದು ‘ತೋತಾಪುರಿ 2’ ಚಿತ್ರದ ಟ್ರೈಲರ್​ ಅನ್ನು ಹ್ಯಾಟ್ರಿಕ್ ಹೀರೋ ಶಿವ ರಾಜ್​ಕುಮಾರ್ ಬಿಡುಗಡೆ ಮಾಡಲಿದ್ದಾರೆ.

ಒಂದೇ ಸೂರಿನಡಿ ಬದುಕುತ್ತಿರುವ ನಾವೆಲ್ಲ ಒಂದೇ ಎನ್ನುವ ಭಾವೈಕ್ಯತೆಯ ಸಂದೇಶ ಹೊಂದಿದ್ದ ‘ತೋತಾಪುರಿ’ ಚಿತ್ರ ಕನ್ನಡ ಸಿನಿಮಾ ಪ್ರೇಮಿಗಳ ಮನಸ್ಸು ಗೆಲ್ಲುವಲ್ಲಿ ಯಶಸ್ವಿಯಾಗಿತ್ತು. ಇದೀಗ ಮುಂದುವರಿದ ಭಾಗ ‘ತೋತಾಪುರಿ 2’ ಶೀಘ್ರದಲ್ಲೇ ತೆರೆಕಾಣಲು ಸಿದ್ಧವಾಗಿದೆ. ‘ಸಿದ್ಲಿಂಗು’ ಖ್ಯಾತಿಯ ವಿಜಯಪ್ರಸಾದ್ ನಿರ್ದೇಶನದಲ್ಲಿ ಮೂಡಿಬಂದಿರುವ ‘ತೋತಾಪುರಿ 2’ ಚಿತ್ರಕ್ಕೆ ಹ್ಯಾಟ್ರಿಕ್ ಹೀರೋ ಶಿವ ರಾಜ್​ಕುಮಾರ್ ಸಾಥ್ ಸಿಕ್ಕಿದೆ. ಇದೇ ಗಣೇಶ ಹಾಗೂ ಗೌರಿ ಹಬ್ಬಕ್ಕೆ ‘ತೋತಾಪುರಿ 2’ ಚಿತ್ರದ ಟ್ರೈಲರ್​ ಅನ್ನು ಹ್ಯಾಟ್ರಿಕ್ …

Read More »

ಉಪ್ಪಿ ಮನವಿ ಈ ವರ್ಷದ ಗಣೇಶ ಹಬ್ಬದಂದು ರಿಯಲ್​ ಸ್ಟಾರ್​ ಉಪೇಂದ್ರ ಅಭಿಮಾನಿಗಳಿಗೆ ಡಬಲ್​ ಖುಷಿ. ಒಂದೆಡೆ ಇಡೀ ದೇಶವೇ ಗಣೇಶ ಚತುರ್ಥಿಯ ಸಂಭ್ರಮದಲ್ಲಿ ಮುಳುಗಿದ್ರೆ, ಈ ಕಡೆ ಉಪ್ಪಿಗೆ ಹುಟ್ಟುಹಬ್ಬದ ಸಂಭ್ರಮ. ಅದರ ಜೊತೆಗೆ ಎಂಟು ವರ್ಷಗಳ ಬಳಿಕ ಆಯಕ್ಷನ್ ಕಟ್​ ಹೇಳಿರುವ ಯುಐ ಸಿನಿಮಾದ ಟೀಸರ್​ ಲಾಂಚ್​ ಕಾರ್ಯಕ್ರಮವಿದೆ. ಹೀಗಾಗಿ ಉಪ್ಪಿ ಸೆಪ್ಟೆಂಬರ್​ 18ರಂದು ಫುಲ್​ ಬ್ಯುಸಿಯಾಗಿರುತ್ತಾರೆ. ​ಈ ಕಾರಣಕ್ಕಾಗಿ ಅವರು ಅಭಿಮಾನಿಗಳಲ್ಲಿ ವಿಶೇಷ ಮನವಿ ಮಾಡಿಕೊಂಡಿದ್ದಾರೆ. ಬರ್ತ್​ಡೇ ದಿನ ಮನೆಯಲ್ಲಿ ಸಿಗಲ್ಲ ಉಪ್ಪಿ!: “ಎಲ್ಲಾ ಅಭಿಮಾನಿ ದೇವರುಗಳಿಗೆ ನಮಸ್ಕಾರ. ನಿಮಗೆಲ್ಲರಿಗೂ ಗೊತ್ತಿರುವ ಹಾಗೆ ಸೆಪ್ಟೆಂಬರ್​ 18 ಈ ವರ್ಷ ಬಾರಿ ವಿಶೇಷ. ಯಾಕಂದ್ರೆ ಗಣೇಶ ಚತುರ್ಥಿ ಹಬ್ಬ ಆ ದಿನಾನೇ. ಅಭಿಮಾನಿಗಳ ಹಬ್ಬನೂ ಅದೇ ದಿನ. ನಿಮ್ಮೆಲ್ಲರ ಬಹುನಿರೀಕ್ಷಿತ ‘ಯುಐ’ ಸಿನಿಮಾದ ಟೀಸರ್​ ಕೂಡ ಅಂದೇ ಲಾಂಚ್​ ಮಾಡುತ್ತಿದ್ದೇವೆ. ಈ ಪ್ರಯುಕ್ತ ನಾನು ತುಂಬಾ ಬ್ಯುಸಿ ಇರುತ್ತೇನೆ. ಸೆಪ್ಟೆಂಬರ್​ 17ರ ರಾತ್ರಿ ಅಥವಾ 18ರ ಬೆಳಗ್ಗೆ ಕತ್ರಿಗುಪ್ಪೆ ಹಾಗೂ ಸದಾಶಿವನಗರದ ಮನೆಯಲ್ಲಿ ಸಿಗುವುದಿಲ್ಲ. ನನಗೆ ತುಂಬಾ ಕೆಲಸಗಳಿರುವುದರಿಂದ ಸೆಪ್ಟೆಂಬರ್​ 18ರಂದು ಮಧ್ಯಾಹ್ನ 2 ಗಂಟೆಯ ಮೇಲೆ ಊರ್ವಶಿ ಥಿಯೇಟರ್​ನಲ್ಲಿ ನಿಮಗಾಗಿ ಕಾಯುತ್ತಿರುತ್ತೇನೆ. ನೀವೆಲ್ಲರೂ ಅಲ್ಲೇ ಬನ್ನಿ. ಕೇಕ್​ ಕತ್ತರಿಸೋಣ. ಎಲ್ಲ ಸಂಭ್ರಮವನ್ನು ಆಚರಿಸೋಣ. 2 ಗಂಟೆಯಿಂದ 8 ಗಂಟೆಯವರೆಗೂ ಈ ಸಂಭ್ರಮಾಚರಣೆ ಇರುತ್ತದೆ. 6 ಗಂಟೆಯ ನಂತರ ಥಿಯೇಟರ್​ ಒಳಗಡೆ ‘ಯುಐ’ ಟೀಸರ್​ ಲಾಂಚ್ ಮಾಡುತ್ತೇವೆ. ಬನ್ನಿ, ಎಲ್ಲರೂ ಪಾಲ್ಗೊಳ್ಳೋಣ” ಎಂದು ರಿಯಲ್​ ಸ್ಟಾರ್​ ಉಪೇಂದ್ರ ವಿಡಿಯೋ ಮೂಲಕ ಅಭಿಮಾನಿಗಳಲ್ಲಿ ಕೇಳಿಕೊಂಡಿದ್ದಾರೆ. ಪ್ಯಾನ್​​ ಇಂಡಿಯಾ ಮಟ್ಟದಲ್ಲಿ ನಿರ್ಮಾಣ ಆಗುತ್ತಿರುವ ಯುಐ ಚಿತ್ರದಲ್ಲಿ ನಟ ಉಪೇಂದ್ರ ನಟಿಸುವುದರ ಜೊತೆಗೆ ಆಯಕ್ಷನ್​ ಕಟ್​ ಕೂಡ ಹೇಳಿದ್ದಾರೆ. ಉಪ್ಪಿ 2 ಸಿನಿಮಾ ಬಳಿಕ ಉಪೇಂದ್ರ ಡೈರೆಕ್ಟರ್​ ಕ್ಯಾಪ್​ ತೊಟ್ಟ ಚಿತ್ರವಿದು. ಉಪ್ಪಿ 2 ಸಿನಿಮಾ 2015ರಲ್ಲಿ ತೆರೆಕಂಡಿತ್ತು. ಉಪೇಂದ್ರ ಅವರ ನಟನೆಗೆ ಮಾತ್ರವಲ್ಲ, ನಿರ್ದೇಶನ ಶೈಲಿಗೂ ಕೂಡ ಅಪಾರ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಇವರು ನಟಿಸುವುದರ ಜೊತೆಗೆ ನಿರ್ದೇಶನ ಮಾಡಿರುವ ಯುಐ ಚಿತ್ರದ ಟೀಸರ್ ಸೆಪ್ಟಂಬರ್​ 18ರಂದು ಅವರ ಹುಟ್ಟುಹಬ್ಬದ ದಿನವೇ ಅನಾವರಣಗೊಳ್ಳಲು ತಯಾರಾಗಿದೆ. ಸದ್ಯ ಯುಐ ಸಿನಿಮಾದ ಬಹುತೇಕ ಚಿತ್ರೀಕರಣ ಮುಗಿದಿದ್ದು, ಎಡಿಟಿಂಗ್​ ಕೆಲಸ ನಡೆಯುತ್ತಿದೆ. ಉಪೇಂದ್ರ ಈ ಚಿತ್ರದಲ್ಲಿ 3ಡಿ ಬಾಡಿ ಸ್ಕ್ಯಾನ್​ ಬಳಸಿದ್ದಾರೆ. ಸುಮಾರು 200ಕ್ಕೂ ಹೆಚ್ಚು ಕ್ಯಾಮರಾಗಳನ್ನು ಬಳಸಿ ಶೂಟ್​ ಮಾಡಲಾಗಿದ್ದು, ಈ ತಂತ್ರಜ್ಞಾನ ಬಳಸಿದ್ದು ಏಷ್ಯಾದಲ್ಲಿಯೇ ಮೊದಲ ಸಿನಿಮಾ ಎನ್ನಲಾಗಿದೆ. ಹೊಸ ತಂತ್ರಜ್ಞಾನವನ್ನು ಜೇಮ್ಸ್​ ಕ್ಯಾಮರಾನ್​ ‘ಅವತಾರ್​ 2’ ಸಿನಿಮಾಗೆ ಬಳಸಲಾಗಿತ್ತು. ಇಷ್ಟೇ ಅಲ್ಲ, ಸುಮಾರು 14 ಸಾವಿರ ವಿಎಫ್​ಎಕ್ಸ್​ ಶಾಟ್ಸ್​ ಅನ್ನು ಬಳಸಲಾಗಿದೆ. ಹಿಂದೆಂದೂ ಕನ್ನಡದಲ್ಲಿ ಈ ಟೆಕ್ನಾಲಜಿ ಬಳಸಿಲ್ಲ ಅನ್ನೋದು ಗಮನಾರ್ಹ. ಉಪ್ಪಿ ನಿರ್ದೇಶಿಸಿದ ಈವರೆಗಿನ ಸಿನಿಮಾಗಳಲ್ಲಿ ಇದು ದುಬಾರಿ ಎನ್ನಲಾಗಿದೆ. ಸಿನಿಮಾ ಬಜೆಟ್​ ಸುಮಾರು 100 ಕೋಟಿ ರೂಪಾಯಿ ಎಂದು ವರದಿಯಾಗಿದೆ. ಅಲ್ಲದೇ ತಾಂತ್ರಿಕವಾಗಿಯೂ ಈ ಚಿತ್ರ ಅಡ್ವಾನ್ಸ್​ ಆಗಿರುತ್ತೆ ಅನ್ನೋದು ಗೊತ್ತಾಗಿದೆ. ಮತ್ತೊಂದೆಡೆ ಯುಐ ಚಿತ್ರ ರಿಲೀಸ್​ ಯಾವಾಗ? ಅನ್ನೋ ಪ್ರಶ್ನೆ ಅಭಿಮಾನಿಗಳ ವಲಯದಲ್ಲಿದೆ. ನಿರ್ಮಾಪಕರ ಮೂಲಗಳ ಪ್ರಕಾರ, ಈ ಸಿನಿಮಾ ವರ್ಷದ ಕೊನೆಯಲ್ಲಿ ಬಿಡುಗಡೆಯಾಗಬಹುದು ಎನ್ನಲಾಗಿದೆ. ಸದ್ಯ ಕನ್ನಡ ಚಿತ್ರರಂಗದಲ್ಲಿ ನಿರ್ಮಾಣವಾಗುತ್ತಿರುವ ಹೈ ಬಜೆಟ್​ ಚಿತ್ರಗಳಲ್ಲಿ ಯುಐ ಕೂಡ ಒಂದು. ಹಲವಾರು ಸ್ಪೆಷಾಲಿಟಿಗಳಿಗೆ ಸೌತ್​ ಇಂಡಸ್ಟ್ರಿಯಲ್ಲಿ ಟಾಕ್​ ಆಗುತ್ತಿರುವ ಈ ಚಿತ್ರದ ಮೂಲಕ ಉಪ್ಪಿ ಪ್ರೇಕ್ಷಕರಿಗೆ ಏನು ಹೇಳಲು ಹೊರಟಿದ್ದಾರೆ ಅನ್ನೋದನ್ನು ಕಾದು ನೋಡಬೇಕು.

ಉಪ್ಪಿ ಮನವಿಈ ವರ್ಷದ ಗಣೇಶ ಹಬ್ಬದಂದು ರಿಯಲ್​ ಸ್ಟಾರ್​ ಉಪೇಂದ್ರ ಅಭಿಮಾನಿಗಳಿಗೆ ಡಬಲ್​ ಖುಷಿ. ಒಂದೆಡೆ ಇಡೀ ದೇಶವೇ ಗಣೇಶ ಚತುರ್ಥಿಯ ಸಂಭ್ರಮದಲ್ಲಿ ಮುಳುಗಿದ್ರೆ, ಈ ಕಡೆ ಉಪ್ಪಿಗೆ ಹುಟ್ಟುಹಬ್ಬದ ಸಂಭ್ರಮ. ಅದರ ಜೊತೆಗೆ ಎಂಟು ವರ್ಷಗಳ ಬಳಿಕ ಆಯಕ್ಷನ್ ಕಟ್​ ಹೇಳಿರುವ ಯುಐ ಸಿನಿಮಾದ ಟೀಸರ್​ ಲಾಂಚ್​ ಕಾರ್ಯಕ್ರಮವಿದೆ. ಹೀಗಾಗಿ ಉಪ್ಪಿ ಸೆಪ್ಟೆಂಬರ್​ 18ರಂದು ಫುಲ್​ ಬ್ಯುಸಿಯಾಗಿರುತ್ತಾರೆ. ​ಈ ಕಾರಣಕ್ಕಾಗಿ ಅವರು ಅಭಿಮಾನಿಗಳಲ್ಲಿ ವಿಶೇಷ ಮನವಿ ಮಾಡಿಕೊಂಡಿದ್ದಾರೆ. ಬರ್ತ್​ಡೇ …

Read More »

ಜವಾನ್’​ ಸಿನಿಮಾ ಬಿಡುಗಡೆಯಾಗಿ ಕೇವಲ ನಾಲ್ಕೇ ದಿನಗಳಲ್ಲಿ 8 ಹೊಸ ದಾಖಲೆಯನ್ನು ಬರೆದಿದೆ.

ಜವಾನ್’​ ಸಿನಿಮಾ ಬಿಡುಗಡೆಯಾಗಿ ಕೇವಲ ನಾಲ್ಕೇ ದಿನಗಳಲ್ಲಿ 8 ಹೊಸ ದಾಖಲೆಯನ್ನು ಬರೆದಿದೆ. ಅವುಗಳ ಬಗ್ಗೆ ತಿಳಿಯಲು ಮುಂದೆ ಓದಿ.. ತಮಿಳು ಖ್ಯಾತ ನಿರ್ದೇಶಕ ಅಟ್ಲೀ ಮತ್ತು ಬಾಲಿವುಡ್​ ಸೂಪರ್​ಸ್ಟಾರ್​ ಶಾರುಖ್​ ಖಾನ್​ ಕಾಂಬೋದಲ್ಲಿ ಮೂಡಿಬಂದ ‘ಜವಾನ್’​ ಸಿನಿಮಾ ಸೆಪ್ಟೆಂಬರ್​ ​ 7, ಗುರುವಾರದಂದು ಬಿಡುಗಡೆಯಾಗಿ ವಿಶ್ವದಾದ್ಯಂತ ಧೂಳೆಬ್ಬಿಸುತ್ತಿದೆ. ಹಿಂದಿ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ತೆರೆಕಂಡ ಚಿತ್ರ ಕಲೆಕ್ಷನ್​ ವಿಚಾರದಲ್ಲಿ ಅಬ್ಬರದ ಓಟ ಮುಂದುವರೆಸಿದೆ. ಶಾರುಖ್​ ಸೇರಿದಂತೆ ನಯನತಾರಾ, …

Read More »