ನಟಿ ರಶ್ಮಿಕಾ ಮಂದಣ್ಣ ಈಗ ಖುಷಿಯ ಕಡಲಲ್ಲಿ ತೇಲುತ್ತಿದ್ದಾರೆ. ಎಲ್ಲ ಭಾಷೆಗಳಿಂದಲೂ ಅವರಿಗೆ ಆಫರ್ ಬರುತ್ತಿವೆ. ಅಲ್ಲದೇ, ಈಗಾಗಲೇ ನಟಿಸಿದ ಸಿನಿಮಾಗಳಿಗೆ ಪ್ರಶಸ್ತಿಗಳು ಸಿಕ್ಕಿವೆ. ಇತ್ತೀಚೆಗೆ ನಡೆದ ಸೈಮಾ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ರಶ್ಮಿಕಾ ಮಂದಣ್ಣ ಮಿರಿಮಿರಿ ಮಿಂಚಿದ್ದಾರೆ. ಈ ಕಾರ್ಯಕ್ರಮದಲ್ಲಿ ಅವರಿಗೆ 2 ಪ್ರಶಸ್ತಿಗಳು ಸಿಕ್ಕಿರುವುದು ವಿಶೇಷ. ಆ ಖುಷಿಯ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಮಾತುಗಳನ್ನು ಹಂಚಿಕೊಂಡಿದ್ದಾರೆ. 2019ರಲ್ಲಿ ತೆರೆಕಂಡ ಸಿನಿಮಾಗಳು ಈ ಪ್ರಶಸ್ತಿ ಕಣದಲ್ಲಿ ಸ್ಪರ್ಧಿಸಿದ್ದವು. …
Read More »ಪ್ರೇಕ್ಷಕರಿಂದ ಶಬ್ಬಾಷ್ ಎನಿಸಿಕೊಂಡಿರೋ ‘ಕೃಷ್ಣ ಸುಂದರಿ’ಗೆ ಶತಕದ ಸಂಭ್ರಮ
ಕೃಷ್ಣ ಸುಂದರಿ.. ಹೆಸರೇ ಹೇಳುವಂತೆ ಬೆಣ್ಣೆ ಕಳ್ಳ, ನೀಲಿ ವರ್ಣದ ಮುದ್ದು ಕೃಷ್ಣನ ಭಕ್ತೆ ನಮ್ಮ ಶ್ಯಾಮ. ಬಣ್ಣಕ್ಕಿಂತ ಮನಸ್ಸು ಮುಖ್ಯ ಎನ್ನುವ ಮಾನವೀಯ ಮೌಲ್ಯಗಳನ್ನ ಹೊಂದಿರುವ ಅಖಿಲ್ ಸಮಾಜದ ಮಾತುಗಳಿಗೆ ತಲೆ ಕೆಡಸಿಕೊಳ್ಳದೇ ಅಮ್ಮನ ವಿರೋಧದ ನಡುವೆ ಶ್ಯಾಮಳನ್ನು ಮದುವೆಯಾಗುತ್ತಾನೆ. ಇವರಿಬ್ಬರ ಜರ್ನಿಯೇ ಕೃಷ್ಣ ಸುಂದರಿ. ಜ್ಹೀ ಕನ್ನಡ ಅಂದ್ರೆ ಅಲ್ಲಿ ಹೊಸತನದ ಪ್ರಯೋಗಗಳು ಇರಲೇಬೇಕು ಎಂಬುವಷ್ಟು ವಿಭಿನ್ನ ಕಥೆಗಳನ್ನ ಕೊಡುಗೆ ನೀಡಿರುವ ಹೆಮ್ಮೆ ವಾಹಿನಿಯದ್ದು. ಇನ್ನೂ ಕನ್ನಡಕ್ಕೆ …
Read More »ಎಣ್ಣೆ ಮತ್ತಲ್ಲಿ ಅಡ್ಡಾದಿಡ್ಡಿ ಚಾಲನೆ; ಲಾರಿ ಡ್ರೈವರ್ನ ತಡೆದು ನಿಲ್ಲಿಸಿದ್ದೇ ದೊಡ್ಡ ಚಾಲೆಂಜ್
ಉಡುಪಿ: ಕುಡಿದ ಮತ್ತಲ್ಲಿ ಚಾಲಕನೋರ್ವ ಬೃಹತ್ ಕಂಟೈನರ್ ವಾಹನವನ್ನು ಅಡ್ಡಾದಿಡ್ಡಿ ಚಲಾಯಿಸಿ ಆತಂಕ ಉಂಟು ಮಾಡಿದ ಘಟನೆ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-66 ರಲ್ಲಿ ನಡೆದಿದೆ. ಏಣ್ಣೆ ಏಟಲ್ಲಿ ಗಾಡಿ ಹತ್ತಿದ ಚಾಲಕ ಯದ್ವಾತದ್ವ ಗಾಡಿ ಚಲಾಯಸಿದ್ದಾನೆ. ಅಷ್ಟೇ ಅಲ್ಲದೆ ಹೆದ್ದಾರಿಯಲ್ಲಿ ವೇಗ ತಡೆಗಾಗಿ ಅಳವಡಿಸಿದ ಬ್ಯಾರಿಕೇಡ್ ಎಳೆದೊಯ್ದ ಬಹು ದೂರ ಸಾಗಿದ್ದಾನೆ. ವಾಹನವನ್ನು ತಡೆಯಲು ಮುಳ್ಳಿಕಟ್ಟೆ ರಿಕ್ಷಾ ಚಾಲಕರು ಹರಸಾಹಸ ಪಟ್ಟಿದ್ದು, ಕೊನೆಗೆ ಹೆಮ್ಮಾಡಿ ಬಳಿ ಕಂಟೈನರ್ …
Read More »ವಿಷ್ಣುವರ್ಧನ್ ಜನ್ಮದಿನ: ವಿಷ್ಣು ದಾದಾಗೆ ಸೆಲೆಬ್ರಿಟಿಗಳು ವಿಶ್ ಮಾಡ್ತಿರೋದು ಹೀಗೆ..
ಸ್ಯಾಂಡಲ್ವುಡ್ ಸೆಲೆಬ್ರಿಟಿಗಳು ವಿಷ್ಣುವರ್ಧನ್ ಜೊತೆ ತಾವಿರುವ ಫೋಟೋಗಳನ್ನು ಶೇರ್ ಮಾಡಿಕೊಂಡು ಸಾಹಸ ಸಿಂಹನಿಗೆ ವಿಶ್ ಮಾಡುತ್ತಿದ್ದಾರೆ. ಕಿಚ್ಚ ಸುದೀಪ್, ರಮೇಶ್ ಅರವಿಂದ್ ಸೇರಿದಂತೆ ಅನೇಕ ಸೆಲೆಬ್ರಿಟಿಗಳಿಂದ ಸೋಶಿಯಲ್ ಮೀಡಿಯಾದಲ್ಲಿ ಶುಭಾಶಯಗಳು ಹರಿದುಬರುತ್ತಿವೆ. ಭಾರತೀಯ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿದವರು ನಟ ವಿಷ್ಣುವರ್ಧನ್. ಅಭಿಮಾನಿಗಳ ಪಾಲಿನ ‘ಸಾಹಸ ಸಿಂಹ’ನಾಗಿ ಅವರು ತೆರೆಮೇಲೆ ಮಿಂಚಿದರು. 200 ಸಿನಿಮಾಗಳಲ್ಲಿ ನಟಿಸಿ ಬಣ್ಣದ ಲೋಕದಲ್ಲಿ ಅಮರರಾದರು. ಇಂದು (ಸೆ.18) ವಿಷ್ಣುವರ್ಧನ್ ಜನ್ಮದಿನ. ಅವರು ಭೌತಿಕವಾಗಿ ಬದುಕಿದಿದ್ದರೆ …
Read More »ಮೇಘನಾ ರಾಜ್ ಎರಡನೇ ಮದುವೆ ಬಗ್ಗೆ ಸುಳ್ಳು ಸುದ್ದಿ; ನಟ ಪ್ರಥಮ್ ಆಕ್ರೋಶ
ನಟಿ ಮೇಘನಾ ರಾಜ್ ಸರ್ಜಾ ಅವರ ಬದುಕಿನಲ್ಲಿ ಹಲವು ಏರಿಳಿತಗಳಾದವು. ಪತಿ ಚಿರಂಜೀವಿ ಸರ್ಜಾ ಅಗಲಿಕೆಯಿಂದ ಅವರು ಸಾಕಷ್ಟು ನೋವು ಅನುಭವಿಸಬೇಕಾಯಿತು. ಈಗ ಪುತ್ರ ರಾಯನ್ ರಾಜ್ ಸರ್ಜಾನ ಆರೈಕೆಯಲ್ಲಿ ಅವರು ನಗು ಕಂಡುಕೊಂಡಿದ್ದಾರೆ. ಈ ಸಂದರ್ಭದಲ್ಲಿ ಅವರ ಕುಟುಂಬಕ್ಕೆ ನೋವು ನೀಡುವಂತಹ ಹಲವು ಸುಳ್ಳು ಸುದ್ದಿಗಳು ಹರಿದಾಡುತ್ತಿವೆ. ಇತ್ತೀಚೆಗೆ ರಾಯನ್ ರಾಜ್ ಸರ್ಜಾ ನಾಮಕರಣದ ದಿನವೇ ಮೇಘನಾ ತಾಯಿ ಪ್ರಮೀಳಾ ಜೋಷಾಯ್ ಅವರು ಕೆಲವು ಸುದ್ದಿಗಳ ಬಗ್ಗೆ ಅಸಮಾಧಾನ …
Read More »ಮತ್ತೆ ಗಾಳಿಪಟ-2 ಹಾರಾಟ.. ಸೆ. 18ರಿಂದ ಚಿತ್ರೀಕರಣ
ನಟ ಗೋಲ್ಡನ್ ಸ್ಟಾರ್ ಗಣೇಶ್ ಮತ್ತು ನಿರ್ದೇಶಕ ಯೋಗರಾಜ ಭಟ್ ಕಾಂಬಿನೇಶನ್ ನಲ್ಲಿ ಮೂಡಿ ಬರುತ್ತಿರುವ “ಗಾಳಿಪಟ-2′ ಚಿತ್ರದ ಚಿತ್ರೀಕರಣಕ್ಕೆ ಮತ್ತೆ ಚಾಲನೆ ಸಿಕ್ಕಿದೆ. ಕೋವಿಡ್ ಎರಡನೇ ಅಲೆಯ ಲಾಕ್ಡೌನ್ನಿಂದ “ಗಾಳಿಪಟ-2′ ಚಿತ್ರದ ಚಿತ್ರೀಕರಣ ಚಟುವಟಿಕೆಗಳು ಸ್ಥಗಿತಗೊಂಡಿದ್ದು, ಈಗ ಪರಿಸ್ಥಿತಿ ನಿಧಾನವಾಗಿ ಸುಧಾರಿಸುತ್ತಿರುವುದರಿಂದ ಮತ್ತೆ ಶೂಟಿಂಗ್ ಶುರು ಮಾಡಲು ಚಿತ್ರತಂಡ ಪ್ಲಾನ್ ಮಾಡಿಕೊಂಡಿದೆ. ಈ ಬಗ್ಗೆ ಮಾತನಾಡುವ ನಿರ್ದೇಶಕ ಯೋಗರಾಜ್ ಭಟ್, “ಈಗಾಗಲೇ ಮುಕ್ಕಾಲು ಭಾಗ ಶೂಟಿಂಗ್ ಪೂರ್ಣಗೊಂಡಿದೆ. …
Read More »ಸ್ಯಾಂಡಲ್ವುಡ್ನ ಬೇಡಿಕೆಯ ಡೈಲಾಗ್ ರೈಟರ್ ಗುರು ಕಶ್ಯಪ್ ನಿಧನ
ಸ್ಯಾಂಡಲ್ವುಡ್ನ ಬಹುಬೇಡಿಕೆಯ ಡೈಲಾಗ್ ರೈಟರ್ ಗುರು ಕಶ್ಯಪ್ ಹೃದಯಾಘಾತದಿಂದ ನಿಧನ ಹೊಂದಿದರು. ಹಲವು ಸಿನಿಮಾಗಳಿಗೆ ಸಂಭಾಷಣೆ ಬರೆದಿದ್ದ ಗುರು ಕಶ್ಯಪ್ ಸೋಮವಾರ (ಸೆಪ್ಟಂಬರ್ 13) ರಾತ್ರಿ ನಿಧನರಾದರು. ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗಮಧ್ಯದಲ್ಲೇ ಗುರು ಕಶ್ಯಪ್ ಕೊನೆಯುಸಿರು ಎಳೆದರು ಎನ್ನುವ ಮಾಹಿತಿ ತಿಳಿದುಬಂದಿದೆ. ಅವರಿಗೆ 45 ವರ್ಷ ವಯಸ್ಸಾಗಿತ್ತು. ಗುರು ಕಶ್ಯಪ್ ನಿಧನಕ್ಕೆ ಕನ್ನಡ ಚಿತ್ರರಂಗದ ಹಲವರು ಕಂಬನಿ ಮಿಡಿಯುತ್ತಿದ್ದಾರೆ. ಗಣೇಶ್ ಅಭಿನಯದ ‘ಸುಂದರಾಂಗ ಜಾಣ’, ರಮೇಶ್ ಅರವಿಂದ್ ನಟನೆಯ …
Read More »ಹಂಸಲೇಖ, ನಾನು ಗುಡ್ ಫ್ರೆಂಡ್ಸ್ ಅಲ್ಲವೇ ಅಲ್ಲ’ ಎಂದು ಹೇಳಿ ಅಚ್ಚರಿ ಮೂಡಿಸಿದ ರವಿಚಂದ್ರನ್
ಕ್ರೇಜಿಸ್ಟಾರ್ ರವಿಚಂದ್ರನ್ ತಮ್ಮ ಮತ್ತು ಖ್ಯಾತ ಸಂಗೀತ ಸಂಯೋಜಕ ಹಂಸಲೇಖ ಅವರ ಸಂಬಂಧದ ಕುರಿತು ಟಿವಿ9ನೊಂದಿಗೆ ಮಾತನಾಡಿದ್ದಾರೆ. ಈ ವೇಳೆ ನಾವೀರ್ವರೂ ಉತ್ತಮ ಗೆಳೆಯರೇ ಅಲ್ಲ ಎಂದು ಹೇಳಿ ಅಚ್ಚರಿ ಮೂಡಿಸಿದ್ದಾರೆ. ಹಾಗಾದರೆ ಅವರೀರ್ವರ ಸಂಬಂಧ ಹೇಗಿತ್ತು? ವಿಡಿಯೊ ನೋಡಿ ಕನ್ನಡ ಬೆಳ್ಳಿತೆರೆಯಲ್ಲಿ ತಮ್ಮ ಸೂಪರ್ ಹಿಟ್ ಕಾಂಬಿನೇಷನ್ನಿಂದ ಗಮನ ಸೆಳೆದ ಜೋಡಿಗಳಲ್ಲಿ ರವಿಚಂದ್ರನ್ ಹಾಗೂ ಹಂಸಲೇಖ ಪ್ರಮುಖರು. ದೃಶ್ಯ 2 ಚಿತ್ರದ ಬಿಡುಗಡೆಯ ಸಂದರ್ಭದಲ್ಲಿಮಾತನಾಡಿರುವ ರವಿಚಂದ್ರನ್ ಹಳೆಯ ದಿನಗಳನ್ನು …
Read More »ಡ್ರಗ್ಸ್ ಆರೋಪಕ್ಕೆ ಅನುಶ್ರೀ ಮೊದಲ ಪ್ರತಿಕ್ರಿಯೆ: ಸಂಬರಗಿ ಬಗ್ಗೆ ಏನೆಂದರು?
ಡ್ರಗ್ಸ್ ಕೇಸ್ಗೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಚಾರ್ಜ್ಶೀಟ್ ಸಲ್ಲಿಕೆ ಮಾಡಿದ ಬೆನ್ನಲ್ಲೇ ಅನುಶ್ರೀ ಹೆಸರು ಮುನ್ನೆಲೆಗೆ ಬಂದಿದೆ. ಅಲ್ಲದೆ, ಅವರು ಮುಂಬೈಗೆ ಹಾರಿದ್ದಾರೆ ಎನ್ನುವ ಮಾತು ಕೇಳಿ ಬಂದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಅನುಶ್ರೀ ಸ್ಪಷ್ಟನೆ ನೀಡಿದ್ದಾರೆ. ಅನುಶ್ರೀ ವಿರುದ್ಧ ಬಿಗ್ ಬಾಸ್ ಸ್ಪರ್ಧಿ ಹಾಗೂ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಸಾಕಷ್ಟು ರೀತಿಯಲ್ಲಿ ಹೇಳಿಕೆಗಳನ್ನು ನೀಡಿದ್ದರು. ಈ ವಿಚಾರದಲ್ಲಿ ಅನುಶ್ರೀ ಸ್ಪಷ್ಟನೆ ನೀಡಿದ್ದಾರೆ. ‘ಪ್ರಶಾಂತ್ ಸಂಬರಗಿ …
Read More »ಉಪೇಂದ್ರ ಹೇರ್ ಸ್ಟೈಲ್ನಲ್ಲಿ ಕಾಣಿಸಿಕೊಂಡು ಗಮನ ಸೆಳೆದ ಬಾಲಿವುಡ್ ಸ್ಟಾರ್ ರಣ್ವೀರ್ ಸಿಂಗ್
ದಕ್ಷಿಣ ಭಾರತೀಯ ಸಿನಿಮಾರಂಗದಲ್ಲಿ ಭಾರಿ ನಿರೀಕ್ಷೆ ಮೂಡಿಸಿರುವ ಖ್ಯಾತ ನಿರ್ದೇಶಕ ಶಂಕರ್ ಮತ್ತು ರಾಮ್ ಚರಣ್ ಪ್ಯಾನ್ ಇಂಡಿಯಾ ಸಿನಿಮಾದ ಮುಹೂರ್ತ ಸಮಾರಂಭ ಸೆಪ್ಟಂಬರ್ 08ರಂದು ಅದ್ದೂರಿಯಾಗಿ ನೆರವೇರಿತು. ಹೈದರಾಬಾದ್ ನ ಅನ್ನಪೂರ್ಣ ಸ್ಟುಡಿಯೋದಲ್ಲಿ ನಿನ್ನೆ ಬಳೆಗ್ಗೆ 10.15ಕ್ಕೆ ನಡೆದ ಮುಹೂರ್ತ ಸಮಾರಂಭದಲ್ಲಿ ಬಾಲಿವುಡ್, ಟಾಲಿವುಡ್, ಕಾಲಿವುಡ್ ನ ಖ್ಯಾತ ಸೆಲೆಬ್ರಿಟಿಗಳು ಭಾಗಿಯಾಗಿರುವುದು ಅಚ್ಚರಿ ಮೂಡಿಸಿದೆ. ಅದ್ದೂರಿಯಾಗಿ ನಡೆದ ಪೂಜಾ ಕಾರ್ಯದಲ್ಲಿ ಸಿನಿಮಾತಂಡ ಸೇರಿದಂತೆ ಖ್ಯಾತ ಸೆಲೆಬ್ರಿಟಿಗಳ ಸಮಾಗಮ ಅಭಿಮಾನಿಗಳ …
Read More »
Laxmi News 24×7