Breaking News

ಸಿನೆಮಾ

ತಿಪಟೂರು ಥಿಯೇಟರ್: ನಟ ದರ್ಶನ್‌ ಭಾವಚಿತ್ರಕ್ಕೆ ಮದ್ಯದ ಅಭಿಷೇಕ

ತಿಪಟೂರು: ತರುಣ್‌ ಸುಧೀರ್‌ ನಿರ್ದೇಶನದ ನಟ ದರ್ಶನ್‌ ಅಭಿನಯದ ‘ರಾಬರ್ಟ್‌’ ಸಿನಿಮಾ ರಾಜ್ಯದಾದ್ಯಂತ ಗುರುವಾರ ತೆರೆಕಂಡಿದ್ದು, ನಗರದ ತ್ರಿಮೂರ್ತಿ ಚಿತ್ರಮಂದಿರದ ಬಳಿ ಸಿನಿಮಾ ಪ್ರದರ್ಶನಕ್ಕೂ ಮೊದಲು ದರ್ಶನ್‌ ಭಾವಚಿತ್ರಕ್ಕೆ ಅಭಿಮಾನಿಗಳು ಮದ್ಯದ (ಬಿಯರ್) ಅಭಿಷೇಕ ಮಾಡುವ ಮೂಲಕ ಮುಜುಗರಕ್ಕೆ ಸಿಲುಕಿದ ಘಟನೆ ನಡೆದಿದೆ. ತಮ್ಮ ನೆಚ್ಚಿನ ನಟನ ಸಿನಿಮಾ ಬಿಡುಗಡೆ ದಿನದಂದು ಭಾವಚಿತ್ರ, ಕಟೌಟ್‌ಗಳಿಗೆ ಅಭಿಮಾನಿಗಳು ಹಾಲು ಹಾಗೂ ಹೂವಿನ ಅಭಿಷೇಕ ಮಾಡುವುದು ಸರ್ವೇ ಸಾಮಾನ್ಯ. ಆದರೆ, ಕೆಲವು ಅಭಿಮಾನಿಗಳು …

Read More »

ಅಕ್ರಮ ಆಸ್ತಿ ಪ್ರಕರಣ ತನಿಖೆಗೆ ಅಸಹಕಾರ: ಇನ್‌ಸ್ಪೆಕ್ಟರ್‌ ವಿಕ್ಟರ್‌ ಸೈಮನ್‌ ಬಂಧನ

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ತನಿಖೆಗೆ ಅಸಹಕಾರ ತೋರಿದ ಬೆಂಗಳೂರು ಮಹಾನಗರ ಕಾರ್ಯಪಡೆ (ಬಿಎಂಟಿಎಫ್‌) ಪೊಲೀಸ್ ಇನ್‌ಸ್ಪೆಕ್ಟರ್‌ ವಿಕ್ಟರ್‌ ಸೈಮನ್‌ ಅವರನ್ನು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬುಧವಾರ ಬಂಧಿಸಿದೆ. ವಿಕ್ಟರ್‌ ಸೈಮನ್‌ ಸೇರಿದಂತೆ ಒಂಬತ್ತು ಅಧಿಕಾರಿಗಳ ವಿರುದ್ಧ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ. ಮಂಗಳವಾರ ರಾಜ್ಯದ 28 ಸ್ಥಳಗಳ ಮೇಲೆ ದಾಳಿಮಾಡಿದ್ದ ಎಸಿಬಿ ಅಧಿಕಾರಿಗಳು, ಶೋಧ ನಡೆಸಿದ್ದರು. ಸೈಮನ್‌ …

Read More »

ಶಿವರಾತ್ರಿಯಂದು ಅಬ್ಬರಿಸಲು ಸಜ್ಜಾಗಿದೆ ‘ರಾಬರ್ಟ್’

ಸ್ಯಾಂಡಲ್ ವುಡ್ ನ ಬಾಕ್ಸಾಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ರಾಬರ್ಟ್’ ಚಿತ್ರ ನಾಳೆ ತೆರೆ ಮೇಲೆ ಬರುತ್ತಿದ್ದು ಈಗಾಗಲೇ ಡಿ ಬಾಸ್ ಅಭಿಮಾನಿಗಳು ಕಟೌಟ್ ಗೆ ಹಾರ ಹಾಕಿ ಹಾಲಿನ ಅಭಿಷೇಕ ಮಾಡಿ ಸಂಭ್ರಮಿಸುತ್ತಿದ್ದಾರೆ ಕನ್ನಡ ಹಾಗೂ ತೆಲುಗಿನಲ್ಲಿ ಈ ಚಿತ್ರ ಬಿಡುಗಡೆಯಾಗುತ್ತಿದ್ದು ಟ್ರೈಲರ್ ಹಾಗೂ ಹಾಡುಗಳ ಮೂಲಕ ಈ ಸಿನಿಮಾ ಸಾಕಷ್ಟು ಕುತೂಹಲ ಮೂಡಿಸಿದೆ. ದರ್ಶನ್ ಅವರ ಹೊಸ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. …

Read More »

ಬುಲ್ಡೋಜರ್ ತಗೊಂಡೋಗಿ ಎಲ್ಲಾ ಪುಡಿಪುಡಿ ಮಾಡ್ತೀನಿ: ರಾಕಿಂಗ್ ಸ್ಟಾರ್ ಯಶ್​

ನಟ ಯಶ್​ ಹಾಸನದ ತಿಮ್ಮಾಪುರ ಗ್ರಾಮದಲ್ಲಿ ಹೊಂದಿರುವ ಜಮೀನಿಗೆ ಸಂಬಂಧಿಸಿದಂತೆ ಗ್ರಾಮಸ್ಥರು ಮತ್ತು ಯಶ್ ತಂದೆ-ತಾಯಿ ನಡುವೆ ನಡೆದ ಗಲಾಟೆ ಬಗ್ಗೆ ರಾಕಿಂಗ್ ಸ್ಟಾರ್ ಯಶ್​ ಇವತ್ತು ಸ್ಪಷ್ಟನೆ ಕೊಡೋ ಪ್ರಯತ್ನ ಮಾಡಿದ್ದಾರೆ. ‘ಜಮೀನಿನ ಬಗ್ಗೆ ಯಾರೂ ಭಯಪಡಬೇಕಿಲ್ಲ. ನನಗೂ ಮಾಹಿತಿಯ ಕೊರತೆ ಇದೆ. ಯಶ್​ನಿಂದ ಯಾರಿಗೂ ಮೋಸ ಆಗಲ್ಲ. ಈ ಬಗ್ಗೆ ನಾನು ಗ್ರಾಮಸ್ಥರಿಗೆ ಮಾತು ಕೊಡ್ತೀನಿ. ಹಣ ಮಾಡೋಕೆ ಅಥವಾ ಮಜಾ ಮಾಡ್ಬೇಕು ಅಂತ ಜಮೀನು ಮಾಡಿದ್ದಲ್ಲ. …

Read More »

ದ್ವಾರಕೀಶ್ ಮನೆ 10 ಕೋಟಿಗೆ ಮಾರಾಟ: ಖರೀದಿಸಿದ ನಟ ಯಾರು ಗೊತ್ತಾ?

ಮತ್ತೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ನಟ, ನಿರ್ಮಾಪಕ ದ್ವಾರಕೀಶ್ ಬೆಂಗಳೂರಿನಲ್ಲಿನ ತಮ್ಮ ಮನೆಯನ್ನು ಮಾರಾಟ ಮಾಡಿದ್ದು, ನಟ, ನಿರ್ದೇಶಕ ರಿಷಭ್ ಶೆಟ್ಟಿ ಈ ಮನೆಯನ್ನು 10 ಕೋಟಿ ರೂ.ಗೆ ಖರೀದಿಸಿದ್ದಾರೆ. ಎಚ್ ಎಸ್ ಆರ್ ಲೇಔಟ್ ನ ತಮ್ಮ ಮನೆಯನ್ನು ದ್ವಾರಕೀಶ್ 10.5 ಕೋಟಿ ರೂ.ಗೆ ಮಾರಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ದ್ವಾರಕೀಶ್‌ ನಿರ್ಮಾಣದಲ್ಲಿ ಬಿಡುಗಡೆ ಆದ ಆಯುಷ್ಮಾನ್‌ಭವ ಚಿತ್ರ ದೊಡ್ಡ ಯಶಸ್ಸು ಕಾಣದ ಹಿನ್ನೆಲೆಯಲ್ಲಿ ದ್ವಾರಕೀಶ್‌ ಪುತ್ರ ಯೋಗಿ ಸಾಲದ …

Read More »

ಧ್ರುವ ಸರ್ಜಾ ಹೊಸ ಲುಕ್ ಗೆ ಅಭಿಮಾನಿಗಳು ಫಿದಾ

ಸ್ಯಾಂಡಲ್ ವುಡ್ ನ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಸದ್ಯ ಪೊಗರು ಸಿನಿಮಾದ ಸಕ್ಸಸ್ ನ ಸಂಭ್ರಮದಲ್ಲಿದ್ದಾರೆ. ಇತ್ತೀಚಿಗಷ್ಟೆ ಪೊಗರು ಸಿನಿಮಾ ರಿಲೀಸ್ ಆಗಿದ್ದು ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸುಮಾರು ಮೂರ್ನಾಲ್ಕು ವರ್ಷಗಳಿಂದ ಪೊಗರು ಸಿನಿಮಾದಲ್ಲಿ ಬ್ಯುಸಿಯಾಗಿದ್ದ ಧ್ರುವ ಉದ್ದ ಕೂದಲು ಮತ್ತು ಗಡ್ಡ ಬಿಟ್ಟ ಗೆಟಪ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದರು. ಚಿತ್ರೀಕರಣ ಮುಗಿಯುತ್ತಿದ್ದಂತೆ ಧ್ರುವ ಕೂದಲಿಗೆ ಕತ್ತರಿ ಹಾಕುವ ಮೂಲಕ ಹೊಸ ಲುಕ್ ನಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಧ್ರುವ …

Read More »

ಬಿಗ್‌ಬಾಸ್‌ ಮನೆಯಿಂದ ಧನುಶ್ರೀ ಔಟ್‌?

ಬಿಗ್‌ಬಾಸ್‌ ಸೀಸನ್‌-8ರ ಮೊದಲ ವಾರ ಮನೆಯಿಂದ ಹೊರಹೋಗೋ ಸ್ಪರ್ಧಿ ಯಾರು? ಭಾನುವಾರ ಎಲ್ಲರ ತಲೆಗೆ ಹುಳ ಬಿಟ್ಟಿರೋ ಪ್ರಶ್ನೆ ಇದು. ಶನಿವಾರ ಎಪಿಸೋಡ್‌ಗಳಲ್ಲಿ ಎಲಿಮನೇಷನ್‌ ನಡೀತಾ ಇತ್ತು. ಆದ್ರೆ, ಈ ವಾರ ಎಲಿಮನೇಷನ್‌ ರೌಂಡ್‌ನ ಭಾನುವಾರಕ್ಕೆ ಮುಂದೂಡಲಾಗಿದ.   ನಿನ್ನೆಯ ಎಪಿಸೋಡ್‌ನಲ್ಲಿ ಶುಭಾ ಪೂಂಜಾ ಹಾಗೂ ಗಾಯಕ ವಿಶ್ವನಾಥ್‌ ಸೇವ್ ಆಗಿದ್ದಾರೆ. ಇನ್ನೂ ನೇರವಾಗಿ ನಾಮಿನೇಟ್ ಆಗಿರೋ ನಿರ್ಮಲಾ, ರಘು ಗೌಡ ಹಾಗೂ ಟಿಕ್‌ಟಾಕ್‌ ಸ್ಟಾರ್ ಧನುಶ್ರೀ ಡೇಂಜರ್‌ ಝೋನ್‌ನಲ್ಲಿದ್ದಾರೆ. …

Read More »

ರಾಬರ್ಟ್ ಗೆ 2 ಮುಖ್ಯ ಚಿತ್ರಮಂದಿರಗಳು..!

ಈ ಹಿಂದೆ ಸಿನಿಮಾಗಳು 1ಮುಖ್ಯ ಚಿತ್ರಮಂದಿರದಲ್ಲಿ ಬಿಡುಗಡೆ ಆಗುತ್ತಿದ್ದವು. ಹೌದು ಬೆಂಗಳೂರಿನ ಕೆ ಜಿ ರಸ್ತೆಯಲ್ಲಿರುವ ಯಾವುದಾದರೂ ಒಂದು ಚಿತ್ರಮಂದಿರವನ್ನು ಮುಖ್ಯ ಚಿತ್ರಮಂದಿರ ಎಂದು ಘೋಷಿಸಿ ಚಿತ್ರಗಳನ್ನ ಬಿಡುಗಡೆ ಮಾಡಲಾಗುತ್ತಿತ್ತು ಆದರೆ ಇದೀಗ ಕಾಲ ಬದಲಾಗಿದೆ ಕೆಜಿ ರಸ್ತೆಯ ಚಿತ್ರಮಂದಿರ ಮಾತ್ರವಲ್ಲದೆ ಬೇರೆ ಚಿತ್ರಮಂದಿರಗಳನ್ನು ಸಹ ಮುಖ್ಯ ಚಿತ್ರಮಂದಿರ ಎಂದು ಘೋಷಿಸಲಾಗುತ್ತಿದೆ. ಇದೀಗ ದರ್ಶನ್ ಅಭಿನಯದ ರಾಬರ್ಟ್ ಚಿತ್ರವನ್ನು ಸಹ 2ಮುಖ್ಯ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಮಾರ್ಚ್ 11 ರಂದು …

Read More »

ದಿವ್ಯಳನ್ನು ಬಿಗ್‍ ಮನೆಯಿಂದ ಕಳಿಸಿಕೊಡ್ಬೇಕು ಅಂತ ಮಂಜು ಹೇಳಿದ್ಯಾಕೆ..?

ಬೆಂಗಳೂರು: ಬಿಗ್‍ಬಾಸ್ ಸೀಸನ್ 8ರ ಮೊದಲ ವೀಕೆಂಡ್ ಎಪಿಸೋಡ್ ಪ್ರಸಾರವಾಗಿದೆ. ‘ವಾರದ ಕಥೆ ಕಿಚ್ಚನ ಜೊತೆ’ಯಲ್ಲಿ ಸುದೀಪ್ ಎಂದಿನಂತೆ ತಮ್ಮ ಮಾತುಗಾರಿಕೆ, ಹಾಸ್ಯದಿಂದ ಮನೆಯ ಸದಸ್ಯರು ತಮ್ಮ ಮಾತಿಗೆ ತಲೆದೂಗುವಂತೆ ಮಾಡಿದರು. ಅಂತೆಯೇ ಸುದೀಪ್ ಅವರು ಎಲ್ಲರ ಬಳಿ ತಮ್ಮ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುವಂತೆ ಹೇಳಿದರು. ಹೌದು. ಬಿಗ್ ಮನೆಯಲ್ಲಿ ಅತ್ಯಂತ ಉತ್ಸಾಹದಿಂದ ಮನೆಮಂದಿಯನ್ನು ನಗಿಸುವ ಲ್ಯಾಗ್ ಮಂಜು ಬಳಿ ಮನೆಯ ಸದಸ್ಯರ ಯಾವ ಒಂದು ವಿಚಾರ ಒಳ್ಳೆಯದಿದೆ ಹಾಗೂ …

Read More »

ಸದ್ದಿಲ್ಲದೆ ಸೆಟ್ಟೇರಿದ ಶಿವಣ್ಣನ ‘ಭಜರಂಗಿ-2’..!

ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ ಭಜರಂಗಿ-2 ಚಿತ್ರ ಇದೀಗ ಸೆಟ್ಟೇರಿದೆ. ಇಂದು ಚಿತ್ರದ ಮುಹೂರ್ತ ನೆರವೇರಿದ್ದು ಶೂಟಿಂಗ್ ಭರದಿಂದ ಸಾಗಲಿದೆ. ಯಡಿಯೂರು ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಇವತ್ತು ಶಿವಣ್ಣ ಮುಂದಿನ ಚಿತ್ರ ಭಜರಂಗಿ-2 ಮುಹೂರ್ತ ನೆರವೇರಿತು. ಭಜರಂಗಿ, ವಜ್ರಕಾಯ ನಂತರ ಮತ್ತೆ ಹರ್ಷ- ಶಿವಣ್ಣ ಜೋಡಿ ಒಂದಾಗಿದೆ. ಹರ್ಷ ನಿರ್ದೇಶನದ ಈ ಎರಡೂ ಚಿತ್ರಗಳು ಸೂಪರ್ ಹಿಟ್ ಆಗಿತ್ತು, ಇನ್ನು ಇದೀಗ ಸೆಟ್ಟೇರಿರೋ ಭಜರಂಗಿ-2 ಕೂಡ ಇವುಗಳಂತೆಯೇ …

Read More »