Breaking News
Home / ಸಿನೆಮಾ (page 30)

ಸಿನೆಮಾ

ರವಿಬೆಳೆಗೆರೆ ಅವರ ಅಭಿನಯದ ಮಿಂಚು ಹೆಜ್ಜೆ ಗುರುತುಗಳು ಬಣ್ಣದ ಲೋಕದಲ್ಲೂ ಮೂಡಿವೆ

ಬೆಂಗಳೂರು, ನ.13- ಕಾದಂಬರಿಕಾರ, ಲೇಖಕ, ನಿರೂಪಕ ಹೀಗೆ ನಾನಾ ಮಜಲುಗಳಲ್ಲಿ ಗುರುತಿಸಿಕೊಂಡಿದ್ದ ರವಿಬೆಳೆಗೆರೆಯವರ ಹೆಜ್ಜೆ ಗುರುತುಗಳು ಬಣ್ಣದ ಲೋಕದಲ್ಲೂ ಮೂಡಿವೆ. ಸಿನಿಮಾಲೋಕ ಹಾಗೂ ಸಿನಿಮಂದಿ ಯೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದ ರವಿಬೆಳೆಗೆರೆ ಅವರು ರವಿಶ್ರೀವಾತ್ಸ ನಿರ್ದೇಶನದ ಗಂಡ ಹೆಂಡತಿ ಚಿತ್ರದಲ್ಲಿ ತನಿಖಾಧಿಕಾರಿಯಾಗಿ ಗಮನ ಸೆಳೆದರು. ನಂತರ ಗುರುದೇಶಪಾಂಡೆ ನಿರ್ದೇಶಿಸಿದ್ದ ವಾರಸ್ದಾರ, ಶಿವರಾಜ್‍ಕುಮಾರ್ ಅಭಿನಯದ ಮಾದೇಶ, ಡೆಡ್ಲಿ ಸೋಮ ಚಿತ್ರಗಳಲ್ಲೂ ತಮ್ಮ ಅಭಿನಯದ ಮಿಂಚು ಹರಿಸಿದ್ದರು. ಡೆಡ್ಲಿ ಸೋಮ ಸಿನಿಮಾಕ್ಕೆ ರವಿಬೆಳೆಗೆರೆ …

Read More »

ರಾಮನಿಗಾಗಿ ಕಾದ ಶಬರಿಯಂತೆ 12 ವರ್ಷದಿಂದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಭೇಟಿಯಾಗಬೇಕು ಎಂದು ಕಾಯುತ್ತಿದ್ದ ವೃದ್ಧೆ

ಕಾರವಾರ: ರಾಮನಿಗಾಗಿ ಕಾದ ಶಬರಿಯಂತೆ 12 ವರ್ಷದಿಂದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಭೇಟಿಯಾಗಬೇಕು ಎಂದು ಕಾಯುತ್ತಿದ್ದ ವೃದ್ಧೆಯನ್ನು ಪವರ್ ಸ್ಟಾರ್ ಭೇಟಿ ಮಾಡಿದ್ದಾರೆ. ಜೋಯಿಡಾದ 75 ವರ್ಷದ ವೃದ್ಧೆ ಕರಿಯವ್ವ ಬಾಳೆಗೌಡ ನಾಯ್ಕ ಹಾಗೂ ಆಕೆಯ ಪತಿ ಬಾಳೆಗೌಡ ನಾಯ್ಕ ಕಟ್ಟಾ ಡಾ. ರಾಜ್ ಕುಮಾರ್ ಅವರ ಅಭಿಮಾನಿಗಳಾಗಿದ್ದಾರೆ. ಪತಿ ಬಾಳೆಗೌಡ ನಾಯ್ಕ ಗೋಕಾಕ್ ಚಳುವಳಿಯಲ್ಲಿ ರಾಜ್ ಕುಮಾರ್ ಅವರ ಜೊತೆಗೆ ಹೋರಾಟ ಮಾಡಿದ್ದರು. ಬಾಳೆಗೌಡರು ಮನೆಯಲ್ಲಿ …

Read More »

ಅನುಪ್ರಭಾಕರ್ ಮುಖರ್ಜಿ ಅವರದ್ದು ಇಂದು 40ನೇ ವರ್ಷದ ಹುಟ್ಟುಹಬ್ಬ

ಬೆಂಗಳೂರು: ಸ್ಯಾಂಡಲ್‍ವುಡ್ ಖ್ಯಾತ ನಟಿಯರಲ್ಲಿ ಒಬ್ಬರಾದ ಅನುಪ್ರಭಾಕರ್ ಮುಖರ್ಜಿ ಅವರದ್ದು ಇಂದು 40ನೇ ವರ್ಷದ ಹುಟ್ಟುಹಬ್ಬ. ಈ ಹಿನ್ನೆಲೆಯಲ್ಲಿ ನಟಿಗೆ ಅಭಿಮಾನಿಗಳು, ಸಂಬಂಧಿಕರು ಹಾಗೂ ನಟ-ನಟಿಯರಿಂದ ಶುಭಾಶಯಗಳ ಸುರಿಮಳೆಗಳೇ ಬರುತ್ತಿವೆ. ಈ ಮಧ್ಯೆ ಅನು ಅವರು ವಿಶೇಷವಾಗಿ ತಮಗೆ ತಾವೇ ವಿಶ್ ಕೂಡ ಮಾಡಿಕೊಂಡಿದ್ದಾರೆ. ಇವತ್ತು ನಾನು 40ನೇ ವರ್ಷಕ್ಕೆ ಕಾಲಿಡುತ್ತಿದ್ದೇನೆ ಎಂಬ ತಲೆಬರಹದೊಂದಿಗೆ ಪತ್ರದ ಮೂಲಕ ಶುಭಾಶಯ ಕೋರಿಕೊಂಡ ಅನು, ಕೃತಜ್ಞತೆ! ಎಂಬ ಒಂದು ಪದವು ಇಂದು ನನ್ನ …

Read More »

ಹಿರಿಯ ಕಲಾವಿದ ಹೆಚ್. ಜಿ. ಸೋಮಶೇಖರ್ ಇನ್ನಿಲ್ಲ..!

ಸಿನಿಮಾ ಹಾಗೂ ರಂಗಭೂಮಿ ಕ್ಷೇತ್ರದಲ್ಲಿ ಬಹಳಷ್ಟು ಸೇವೆ ಸಲ್ಲಿಸಿದಂತಹ ಹಿರಿಯ ರಂಗಭೂಮಿ ನಟ ಹೆಚ್.ಜಿ. ಸೋಮಶೇಖರ ರಾವ್ (ಸೋಮಣ್ಣ)86ನೇ ವಯಸ್ಸಿನಲ್ಲಿ ವಯೋಸಹಜ ಕಾಯಿಲೆಯಿಂದ ಇಂದು ನಮ್ಮನ್ನು ಅಗಲಿದ್ದಾರೆ. ಬ್ಯಾಂಕ್ ಅಧಿಕಾರಿಯಾಗಿದ್ದ ಎಚ್.ಜಿ.ಸೋಮಶೇಖರರಾಯರಿಗೆ ಸಾಹಿತ್ಯ, ರಂಗಭೂಮಿ, ಚಲನಚಿತ್ರ ಮತ್ತು ಕಿರುತೆರೆ ಕ್ಷೇತ್ರಗಳಲ್ಲಿ ಆಸಕ್ತಿ. ಅನೇಕ ಪಾಶ್ಚಿಮಾತ್ಯ ಮತ್ತು ಭಾರತೀಯ ನಾಟಕಕರ್ತೃಗಳ ಕೃತಿಗಳನ್ನು ರಂಗಭೂಮಿಯ ಮೇಲೆ ಜೀವಂತಗೊಳಿಸಿದವರು. ಇವರು ಚಿತ್ರರಂಗವನ್ನು ಪ್ರವೇಶಿಸಿದ್ದು 1981ರಲ್ಲಿ, ಟಿ.ಎಸ್.ರಂಗಾರವರ ನಿರ್ದೇಶನದ ‘ಸಾವಿತ್ರಿ’ಮೂಲಕ. ಖ್ಯಾತ ನಟ ಅನಿಲ್ ಠಕ್ಕರ್ರವರ …

Read More »

ನಿಮ್ಮೊಳಗೂ ಸಾಧಿಸುವ ಛಲ ಹುಟ್ಟಿಸುತ್ತೆ ಮೊದಲ ಜೇಮ್ಸ್ ಬಾಂಡ್ ಕೆನರಿ ಲೈಫ್ ಸ್ಟೋರಿ

ಟಿವಿ, ರೇಡಿಯೋ, ಕಾಮಿಕ್ ಸ್ಟ್ರಿಪ್, ವಿಡಿಯೋ ಗೇಮ್ ನಲ್ಲಿ ಕೇಳುತ್ತಿದ್ದ ಆ ಧ್ವನಿ ಕಿವಿಯಲ್ಲಿ ಈಗಲೂ ಪಿಸುಗುಡುತ್ತಿದೆ. ಸಿನಿಮಾಗಳಲ್ಲಿ ಕಣ್ರೆಪ್ಪೆಗಳನ್ನು ಮಿಟುಕಿಸದಂತೆ ನೋಡಿದ ಆ ದೃಶ್ಯ ಈಗಲೂ ರೋಮಾಂಚನ ಉಂಟುಮಾಡುತ್ತದೆ. ಅದೊಂದು ಸಾಲು ಕೇಳಿದರೆ ಸಾಕು, ನಮ್ಮ ನೆನಪುಗಳು ಬಾಲ್ಯದ ದಿನಗಳಿಗೆ ಜಾರಿ ಬಿಡುತ್ತದೆ. ಏಕೆಂದರೆ ಆ ಧ್ವನಿ ಇಡೀ ಜಗತ್ತಿನ ಎಲ್ಲ ಮನಸ್ಸುಗಳಿಗೆ ಒಂದು ರೀತಿ ಥ್ರಿಲ್ ಕೊಟ್ಟಂತಹ ಎಲ್ಲರಿಗೂ ಈಗಲೂ ಅಚ್ಚುಮೆಚ್ಚಿನ ಆ ಸಾಲುಗಳು ಜಗತ್ತಿಗೆ ವೆರಿ …

Read More »

ಉಪಚುನಾವಣೆಯ ಹಿನ್ನೆಲೆಯಲ್ಲಿ ಮುನಿರತ್ನ ಪರ ನಟ ದರ್ಶನ್ ಪ್ರಚಾರಕ್ಕೆ ಆಗಮಿಸಿದರು. ನಾನು ಯಾವುದೇ ಪಕ್ಷ ನೋಡಿ

ಬೆಂಗಳೂರು: ನವೆಂಬರ್​ 3ರಂದು ರಾಜರಾಜೇಶ್ವರಿ ನಗರ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ ಮುನಿರತ್ನ ಪರ ನಟ ದರ್ಶನ್ ಪ್ರಚಾರಕ್ಕೆ ಆಗಮಿಸಿದರು. ನಾನು ಯಾವುದೇ ಪಕ್ಷ ನೋಡಿ ಪ್ರಚಾರಕ್ಕೆ ಹೋಗಲ್ಲ. ವ್ಯಕ್ತಿ ನೋಡಿ ಮುನಿರತ್ನ ಪರ ಪ್ರಚಾರಕ್ಕೆ ಬಂದಿದ್ದೀನಿ ಎಂದು ದರ್ಶನ್ ಹೇಳಿದರು. ಹಾಗಾಗಿ, ಮುನಿರತ್ನ ಪರ ಸ್ಯಾಂಡಲ್​ವುಡ್ ‘ಚಕ್ರವರ್ತಿ’ ಮತಯಾಚಿಸಿದರು. ಆರ್​.ಆರ್​. ನಗರದ ‘ಕುರುಕ್ಷೇತ್ರ’ದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಪ್ರಚಾರಕ್ಕೆ ಇಳಿದ ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಹಾಗೂ ನಟಿ ಅಮೂಲ್ಯ ಬಗ್ಗೆ ಶಿವಸ್ವಾಮಿ …

Read More »

ಮುನಿರತ್ನ ಕೂಡ ದರ್ಶನ್ ಆಪ್ತರಲ್ಲಿ ಒಬ್ಬರಾಗಿದ್ದು ಚುನಾವಣಾ ಪ್ರಚಾರಕ್ಕೆ ಗಜ ಬರ್ತಾರೆ ಎನ್ನಲಾಗ್ತಿದೆ.

ಬೆಂಗಳೂರು: ಆರ್.ಆರ್ ನಗರ ಕ್ಚೇತ್ರದ ಉಪಚುನಾವಣೆ ಪ್ರಚಾರ ಕಣ ಕ್ಲೈಮಾಕ್ಸ್ ಗೆ ಬರ್ತಿದೆ. ಕ್ಲೈಮಾಕ್ಸ್ ನಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಚಾರ ಕಣಕ್ಕೆ ಧುಮುಕಲಿದ್ದಾರೆ. ಈ ಮೂಲಕ ಆರ್ ಆರ್ ನಗರದಲ್ಲಿ ಸಾರಥಿ ಧೂಳೆಬ್ಬಿಸ್ತಾರೆ ಎನ್ನಲಾಗ್ತಿದೆ. ಸ್ಯಾಂಡಲ್‍ವುಡ್‍ನ ಚಾಲೆಜಿಂಗ್ ಸ್ಟಾರ್ ದರ್ಶನ್, ಕನ್ನಡದ ಸೂಪರ್ ಸ್ಟಾರ್ ಹಾಗೂ ಅಪಾರ ಅಭಿಮಾನಿಗಳನ್ನು ಹೊಂದಿರೋ ಯಜಮಾನ ಎರಡು ವರ್ಷಗಳ ಹಿಂದೆ ಇದೇ ದಾಸ ಮಂಡ್ಯ ಎಲೆಕ್ಷನ್‍ನಲ್ಲಿ ಮಿಂಚಿದ್ದನ್ನು …

Read More »

ಅಣ್ಣಾವ್ರ ಕೈ ಸ್ಪರ್ಶಿಸಿದ್ದೇ ನನ್ನ ಭಾಗ್ಯ: ನಟ ಗಣೇಶ್ ರಾವ್ ಕೇಸರ್ಕರ್

ನಟನೆಯ ವ್ಯಾಮೋಹಕ್ಕೆ ಸಿಲುಕಿ ಕೈಯಲ್ಲಿ ಸ್ವಂತ ಕೆಲಸವಿದ್ರೂ ಕಲಾ ಸರಸ್ವತಿಯ ಆರಾಧನೆಗೆ ಬಣ್ಣದ ಲೋಕಕ್ಕೆ ಕಾಲಿಟ್ಟು ಚಿಕ್ಕ ಚಿಕ್ಕ ಪಾತ್ರಗಳಲ್ಲೇ ಖುಷಿಪಡುತ್ತಾ ಇಂದು ಸಾಕಷ್ಟು ಹೆಸರು ಗಳಿಸಿರುವ ನಟ ಗಣೇಶ್ ರಾವ್ ಕೇಸರ್ಕರ್. ತಮ್ಮ 20 ವರ್ಷಗಳ ಕಿರುತೆರೆ, ಹಿರಿತೆರೆ ಜರ್ನಿಯ ಬಗ್ಗೆ ನಮ್ಮೊಂದಿಗೆ ಮಾತನಾಡಿದ್ದಾರೆ. * ನಿಮ್ಮ ಹಿನ್ನೆಲೆ ಬಗ್ಗೆ ಹೇಳಿ.. ಮೂಲತಃ ಕೊಳ್ಳೆಗಾಲದವನು. ನಮ್ಮ ತಂದೆ ಮಿಲಿಟರಿ ಅಧಿಕಾರಿ. ನಾನು ಡಿಪ್ಲೋಮ ಇನ್ ಆಟೋಮೊಬೈಲ್ ಎಂಜಿನಿಯರಿಂಗ್ ಮುಗಿಸಿದ್ದೇನೆ. …

Read More »

ನಟ ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣಕ್ಕೆ ಇದೀಗ ಹೊಸ ಟ್ವಿಸ್ಟ್

ಮಂಗಳೂರು : ತುಳುಚಿತ್ರ ನಟ ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣಕ್ಕೆ ಇದೀಗ ಹೊಸ ಟ್ವಿಸ್ಟ್ ಸಿಕ್ಕಿದೆ. ಸುರೇಂದ್ರನ ಬಳಿ ಇದ್ದ ಕೋಟಿ ರೂ. ಹಣಕ್ಕಾಗಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಮಂಗಳೂರಿನಲ್ಲಿ ಸುರೇಂದ್ರನ ತಾಯಿ ರಾಧ ಮತ್ತು ಸಹೋದರ ಚಂದ್ರಹಾಸ್ ಆರೋಪ ಮಾಡಿದ್ದು, ಸುರೇಂದ್ರನ ಭಂಡಾರಿಯ ಬೆಟ್ಟು ಫ್ಲಾಟ್ ನಲ್ಲಿ ಒಂದು ಕೋಟಿ ಹಣ ಇತ್ತು. ಅಲ್ಲದೇ ಅವನ ಮೈ ಮೇಲೆ ಬರೋಬ್ಬರಿ ಒಂದು ಕೆ.ಜಿ ಚಿನ್ನಾಭರಣ ಇತ್ತು. ಇದಕ್ಕಾಗಿ …

Read More »

ಮಾದಕವಸ್ತುಗಳ ಖರೀದಿಸುವ ವೇಳೆ ನಟಿಯನ್ನು ರೆಡ್ ಹ್ಯಾಂಡ್ ಎಸಿಬಿ ತಂಡ ಬಂಧಿಸಿದೆ

ಮುಂಬೈ : ಮಾದಕವಸ್ತುಗಳ ಮಾರಾಟ ಮತ್ತು ಖರೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿವಿ ಆಂಕರ್ ಪ್ರೀತಿಕಾ ಚೌವ್ಹಾಣ್ ರನ್ನು ಮುಂಬೈನ ಮಾದಕವಸ್ತು ನಿಯಂತ್ರಣ ತಂಡದ ಅಧಿಕಾರಿಗಳು ಬಂಧಿಸಿದ್ದು, ವಿಚಾರಣೆಗೊಳಪಡಿಸಿದ್ದಾರೆ. ಮಾದಕವಸ್ತುವನ್ನು ಖರೀದಿಸುತ್ತಿದ್ದ ಸಂದರ್ಭದಲ್ಲೇ ಅಧಿಕಾರಿಗಳು ಪ್ರೀತಿಕಾ ಚೌವ್ಹಾಣ್ ರನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ. ಇನ್ನು, ಬಂಧಿತ ಆರೋಪಿಯನ್ನು ಅಧಿಕಾರಿಗಳು ಕಿಲ್ಲೋ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನಟಿಯು ಸಾವಧಾನ್ ಇಂಡಿಯಾ, ದೇವೋ ಕಿ ದೇವ್ ಮಹಾದೇವ್ ಸೇರಿದಂತೆ ಕೆಲವು ಹಿಂದಿ ಧಾರಾವಾಹಿಗಳನ್ನಿ ನಟಿಸುತ್ತಿದ್ದರು …

Read More »