ಚಿಕ್ಕಮಗಳೂರು: ರಸ್ತೆಯಲ್ಲಿ ತೀವ್ರ ಮಂಜು ಕವಿದಿದ್ದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಶಿಫ್ಟ್ ಕಾರು ಪಲ್ಟಿಯಾಗಿರೋ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ನಲ್ಲಿ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಾರ್ಮಾಡಿ ಘಾಟಿಯ ರಸ್ತೆಯಲ್ಲಿ ಭಾರೀ ಪ್ರಮಾಣದ ಮಂಜು ಕವಿದಿದ್ದ ಕಾರಣ ಚಾರ್ಮಾಡಿ ಘಾಟಿಯ ಸೋಮನಕಾಡು ಎಂಬಲ್ಲಿ ಈ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು ಜಲಪಾತದತ್ತ ಮುನ್ನಗ್ಗಿ ಮುಗುಚಿಕೊಂಡು ಬಿದ್ದಿದೆ. ಕೂದಲೆಳೆ …
Read More »ನಿಮಗಾಗಿ ಸೇಫ್ಟಿ ಪ್ಯಾಡ್ ಖರೀದಿಸಬಹುದಾದ ಹುಡುಗನನ್ನು ಪಡೆಯಿರಿ, ಕಾಂಡೋಮ್ ಕೊಳ್ಳುವವನಲ್:ನಟಿ ಕಾವ್ಯ ಗೌಡಲ
ಬೆಂಗಳೂರು: ನಿಮಗಾಗಿ ಸೇಫ್ಟಿ ಪ್ಯಾಡ್ ಖರೀದಿಸಬಹುದಾದ ಹುಡುಗನನ್ನು ಪಡೆಯಿರಿ, ಆದರೆ ಕಾಂಡೋಮ್ ಕೊಳ್ಳುವವನಲ್ಲ ಎಂದು ‘ರಾಧಾರಮಣ’ ಸೀರಿಯಲ್ ಖ್ಯಾತಿಯ ನಟಿ ಕಾವ್ಯ ಗೌಡ ಹೇಳಿದ್ದಾರೆ. ನಟಿ ಕಾವ್ಯ ಗೌಡ ಇತ್ತೀಚೆಗೆ ಮಹಿಳೆಯರ ಮೇಲಿನ ದೌರ್ಜನ್ಯ ಕುರಿತು ತಮ್ಮ ಇನ್ಸ್ಟಾಗ್ರಾಂನಲ್ಲಿ ಸುದೀರ್ಘವಾಗಿ ಬರೆದುಕೊಂಡಿದ್ದಾರೆ. “ಆತ್ಮೀಯ ಹುಡುಗಿಯರೇ, ನಿಮ್ಮ ಪ್ರೀತಿಯನ್ನು ಸಾಬೀತುಪಡಿಸಲು ನಿಮ್ಮ ಬಟ್ಟೆಗಳನ್ನು ಎಂದಿಗೂ ಬಿಚ್ಚಬೇಕಾಗಿಲ್ಲ. ಅದೇ ರೀತಿ ಮದುವೆಗೂ ಮುನ್ನ ಡೇಟಿಂಗ್ ಹೋಗುವುದು ಸರಿ. ಆದರೆ ಮಂಚಕ್ಕೆ ಹೋಗುವುದು ಸರಿಯಿಲ್ಲ. …
Read More »ಫ್ಯಾನ್, ಬೆಡ್ ಇಲ್ಲ- ಇಂದ್ರಾಣಿ ಪಕ್ಕದಲ್ಲೇ ರಿಯಾ ಜೈಲುವಾಸ
ಮುಂಬಯಿ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಗೆಳತಿ ರಿಯಾ ಚಕ್ರವರ್ತಿ ಜಾಮೀನು ಅರ್ಜಿಯನ್ನು ಮುಂಬೈ ಕೋರ್ಟ್ ವಜಾಗೊಳಿಸಿದ್ದು, ಹೀಗಾಗಿ ಆಕೆಗೆ ಜೈಲೇ ಗತಿಯಾಗಿದೆ. ಹೈಫೈ ಜೀವನ ನಡೆಸುತ್ತಿದ್ದ ರಿಯಾ ಸದ್ಯ ಸೆರೆಮನೆ ವಾಸಿಯಾಗಿದ್ದು, ಮೂಲ ಸೌಕರ್ಯಗಳಿಲ್ಲದ ಕತ್ತಲೆ ಕೋಣೆಯಲ್ಲಿ ದಿನ ಕಳೆಯಬೇಕಿದೆ. ಇನ್ಮೇಲೆ ರಿಯಾಗೆ ಚಾಪೆನೇ ಗತಿ? ಹೌದು ಭದ್ರತೆಯ ಕಾರಣಗಳಿಂದ ರಿಯಾ ಚಕ್ರವರ್ತಿಯನ್ನು ಪ್ರತ್ಯೇಕ ಕೋಣೆಯಲ್ಲಿಡಲಾಗಿದೆ ಎಂದು ಮೂಲಗಳು ತಿಳಿಸಿದ್ದು, ರಿಯಾ ಇರುವ ಬೈಕುಲ್ಲಾ ಜೈಲಿನಲ್ಲಿ ಫ್ಯಾನ್ ಇಲ್ಲ, …
Read More »ಮೂವರು ಸ್ಟಾರ್ ನಟರಿಗೆ ಢವ ಢವ!ಮೂವರು ನಟರು ಪದೇ ಪದೇ ಶ್ರೀಲಂಕಾದ ಕ್ಯಾಸಿನೋಗೆ ಭೇಟಿ ನೀಡಿದ್ದಾರೆ.
ಬೆಂಗಳೂರು: ಸ್ಯಾಂಡಲ್ವುಡ್ ನಶೆ ನಂಟಿನ ಘಾಟು ದಿನೇದಿನೇ ಹೆಚ್ಚಾಗ್ತಾ ಇದೆ. ಸಿಸಿಬಿ ವಿಚಾರಣೆ ವೇಳೆ ನಟಿಯರಾದ ಸಂಜನಾ ಮತ್ತು ನಟಿ ರಾಗಿಣಿ ದೊಡ್ಡದೊಡ್ಡವರ ಹೆಸರು, ರಾಜಕಾರಣಿಗಳ ಮಕ್ಕಳ ಹೆಸರು, ವಿವಿಐಪಿಗಳ ಹೆಸರುಗಳನ್ನ ಹೇಳಿದ್ದಾರೆ ಎನ್ನಲಾಗಿದೆ. ಇದೀಗ ಚಂದನವನದ ಮೂರು ಸ್ಟಾರ್ ನಟರು ಡ್ರಗ್ಸ್ ಸುಳಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.ಡ್ರಗ್ಸ್ ಪ್ರಕರಣದಲ್ಲಿ ಬಂಧನವಾಗಿರುವ ಮಾದಕ ನಟಿಯರಾದ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾಣಿ ಒಂದ್ಕಡೆ ವಿಚಾರಣೆ ಎದುರಿಸುತ್ತಿದ್ದಾರೆ. ಇªಬ್ಬರ ಹೇಳಿಕೆಯಿಂದ ಸ್ಯಾಂಡಲ್ವುಡ್ನ …
Read More »ನಟಿ ಸಂಜನಾ ಆಪ್ತ ಶೇಖ್ ಫೈಜಲ್ ಮನೆ ಮೇಲೆ ಸಿಸಿಬಿ ದಾಳಿ
ಬೆಂಗಳೂರು: ಡ್ರಗ್ಸ್ ಮಾರಾಟ ಜಾಲದಲ್ಲಿ ಭಾಗಿಯಾದ ಆರೋಪದಡಿ ಬಂಧಿಸಲಾಗಿರುವ ನಟಿ ಸಂಜನಾ ಗಲ್ರಾನಿ ಆಪ್ತ ಎನ್ನಲಾದ ಶೇಖ್ ಫೈಜಲ್ ಎಂಬಾತನ ಮನೆ ಮೇಲೆ ಸಿಸಿಬಿ ಪೊಲೀಸರು ಬುಧವಾರ ದಾಳಿ ಮಾಡಿದರು. ಜಯನಗರದಲ್ಲಿರುವ ಮನೆಗೆ ಹೋಗಿದ್ದ ಪೊಲೀಸರು, ಗಂಟೆಗಟ್ಟಲೇ ಪರಿಶೀಲನೆ ನಡೆಸಿದರು. ಫೈಜಲ್ ಮನೆಯಲ್ಲಿ ಇರಲಿಲ್ಲ. ಸಹೋದರ ಹಾಗೂ ಪತ್ನಿ-ಮಕ್ಕಳು ಮಾತ್ರ ಇದ್ದರು. ಶೋಧ ಮುಗಿಸಿದ ಪೊಲೀಸರು, ಫೈಜಲ್ ಸಹೋದರನನ್ನು ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಗೆ ಕರೆತಂದಿದ್ದರು. ಫೈಜಲ್ ಬಗ್ಗೆ ಮಾಹಿತಿ ಸಂಗ್ರಹಿಸಿ …
Read More »ಕರ್ನಾಟಕ ಚಲನಚಿತ್ರ ವಾಣಿಕ್ಯ ಮಂಡಳಿ ಮತ್ತು ಕಲಾವಿದರು ಸೇರಿ ಇಂದು ಸಿಎಂ ಭೇಟಿ
ಬೆಂಗಳೂರು: ಡ್ರಗ್ಸ್ ಪ್ರಕರಣದ ಬಗ್ಗೆ ಈಗ ನಾವು ಮಾತನಾಡುವುದು ಸರಿಯಲ್ಲ ಎಂದು ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಅವರು ಹೇಳಿದ್ದಾರೆ.ಕರ್ನಾಟಕ ಚಲನಚಿತ್ರ ವಾಣಿಕ್ಯ ಮಂಡಳಿ ಮತ್ತು ಕಲಾವಿದರು ಸೇರಿ ಇಂದು ಸಿಎಂ ಅವರನ್ನು ಭೇಟಿ ಮಾಡಿ ಚಿತ್ರರಂಗದ ಸಮಸ್ಯೆ ಬಗ್ಗೆ ಮಾತನಾಡಿದರು. ಈ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಶಿವಣ್ಣ, ಡ್ರಗ್ ವಿಚಾರದಲ್ಲಿ ಈಗಲೇ ಮಾತನಾಡುವುದು ಬಹುಬೇಗ ಎನಿಸುತ್ತದೆ ಎಂದು ಹೇಳಿದರು ಈಗ ಆ ವಿಚಾರ ನಮ್ಮ ಬಳಿ ಇಲ್ಲ. ಸಂಬಂಧಪಟ್ಟ …
Read More »ಅ.1ರಿಂದ ಚಿತ್ರಮಂದಿರ ತೆರೆಯುವ ಸಾಧ್ಯತೆ
ಬೆಂಗಳೂರು,- ಅಕ್ಟೋಬರ್ 1ರಿಂದ ಚಲನಚಿತ್ರ ಮಂದಿರಗಳನ್ನು ತೆರೆಯಲು ಕೇಂದ್ರ ಸರ್ಕಾರ ಸಮ್ಮತಿ ಸೂಚಿಸುವ ಸಾಧ್ಯತೆ ಇದೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜಯರಾಜ್ ತಿಳಿಸಿದ್ದಾರೆ. ದಕ್ಷಿಣ ಮತ್ತು ಉತ್ತರ ಭಾರತದ ವಾಣಿಜ್ಯ ಮಂಡಳಿಗಳು ಕೇಂದ್ರ ಸರ್ಕಾರಕ್ಕೆ ಚಿತ್ರಮಂದಿರಗಳನ್ನು ತೆರೆಯುವ ಸಂಬಂಧ ಮನವಿ ಸಲ್ಲಿಸಿದ್ದು, ಇದಕ್ಕೆ ಕೇಂದ್ರ ಸಚಿವರು ಭರವಸೆ ನೀಡಿದ್ದಾರೆ ಎಂದರು. ಕೊರೊನಾ ಹಿನ್ನೆಲೆಯಲ್ಲಿ ಕಳೆದ ಆರು ತಿಂಗಳಿನಿಂದ ಚಿತ್ರೋದ್ಯಮದ ಯಾವುದೇ ಚಟುವಟಿಕೆಗಳು ನಡೆಯದೇ ಸಂಪೂರ್ಣ ಸ್ಥಗಿತವಾಗಿದೆ. …
Read More »ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ಬಾಸ್ ಈ ವರ್ಷ ಪ್ರಸಾರವಾಗುವುದಿಲ್ಲ
ಬೆಂಗಳೂರು: ಮಹಾಮಾರಿ ಕೊರೊನಾದಿಂದ ಈಗಾಗಲೇ ಅನೇಕ ಧಾರಾವಾಹಿ, ಸಿನಿಮಾಗಳಿಗೆ ಬ್ರೇಕ್ ಇದ್ದಿದೆ. ಇತ್ತೀಚೆಗೆ ಒಂದೊಂದೆ ಸಿನಿಮಾದ ಚಿತ್ರೀಕರಣ ಆರಂಭವಾಗುತ್ತಿದೆ. ಈ ಕನ್ನಡ ಕಿರುತೆರೆ ಲೋಕದ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ಬಾಸ್ ಈ ವರ್ಷ ಪ್ರಸಾರವಾಗುವುದಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಈಗಾಗಲೇ ತೆಲುಗಿನಲ್ಲಿ ಬಿಗ್ಬಾಸ್ ಸೀಸನ್ 4 ಆರಂಭವಾಗಿದೆ. ಹಿಂದಿಯಲ್ಲಿ ಹೊಸ ಆವೃತ್ತಿಗೆ ಎಲ್ಲ ತಯಾರಿ ನಡೆಯುತ್ತಿದ್ದು, ಅಕ್ಟೋಬರ್ನಲ್ಲಿ ಕಾರ್ಯಕ್ರಮ ಪ್ರಾರಂಭವಾಗಲಿದೆ. ಆದರೆ ಕನ್ನಡದಲ್ಲಿ ಈ ವರ್ಷ ಅಂದರೆ 2020ರಲ್ಲಿ …
Read More »ಕರ್ಮ ನಿಮ್ಮನ್ನ ಬಿಡಲ್ಲ- ರಿಯಾ ಬಂಧನಕ್ಕೆ ಅಂಕಿತಾ ಪ್ರತಿಕ್ರಿಯೆ
ಮುಂಬೈ: ಡ್ರಗ್ಸ್ ಪ್ರಕರಣದಲ್ಲಿ ಬಾಲಿವುಡ್ ನಟಿ ರಿಯಾ ಚಕ್ರವರ್ತಿಯ ಬಂಧನವಾಗಿದ್ದು, ಸುಶಾಂತ್ ಸಿಂಗ್ ರಜಪೂತ್ ಮಾಜಿ ಗೆಳತಿ, ನಟಿ ಅಂಕಿತಾ ಲೋಖಂಡೆ ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಕರ್ಮ ನಿಮ್ಮ ವಿಧಿಯನ್ನ ನಿರ್ಧರಿಸುತ್ತದೆ ಎಂದು ಬರೆದುಕೊಂಡಿದ್ದಾರೆ. ಅದೃಷ್ಟದಿಂದ ಏನು ಸಾಧಿಸಲು ಸಾಧ್ಯವಿಲ್ಲ. ಅದು ಕೇವಲ ಕ್ಷಣಿಕ. ನೀವು ಮಾಡುವ ಕೆಲಸಗಳು ನಿಮ್ಮ ಅದೃಷ್ಟವನ್ನ ಬದಲಾಯಿಸುತ್ತದೆ. ಅದುವೇ ಕರ್ಮ ಎಂದು ಬರೆದಿರುವ ಸಾಲುಗಳ ಫೋಟೋವನ್ನ ಅಂಕಿತಾ ಲೋಖಂಡೆ ಹಂಚಿಕೊಂಡಿದ್ದಾರೆ. ಮೂರು ದಿನದ …
Read More »ನಟಿ ರಾಗಿಣಿಗೆ ರಾಜಕೀಯ ಬೆಂಬಲ ಇದ್ದಿದ್ದರೆ ಅವರು ಅರೆಸ್ಟ್ ಆಗ್ತಿರಲಿಲ್
ಮಂಡ್ಯ: ನಟಿ ರಾಗಿಣಿಗೆ ರಾಜಕೀಯ ಬೆಂಬಲ ಇದ್ದಿದ್ದರೆ ಅವರು ಅರೆಸ್ಟ್ ಆಗ್ತಿರಲಿಲ್ಲ. ನಮ್ಮ ಯಾವುದೇ ಒಬ್ಬ ಮುಖಂಡ ಡ್ರಗ್ಸ್ ಮಾಫಿಯಾದಲ್ಲಿದ್ದರೆ ಅವರಿಗೆ ನಮ್ಮ ಸಹಕಾರ ಇಲ್ಲ. ಈ ವಿಚಾರದಲ್ಲಿ ಸರ್ಕಾರ ಹಿಟ್ ರನ್ ಮಾಡಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷದ ಯಾವುದೇ ಮುಖಂಡ ಡ್ರಗ್ ಮಾಫಿಯಾದಲ್ಲಿದ್ದರೆ ಅವರಿಗೆ ನಮ್ಮ ಸಹಕಾರ ಇಲ್ಲ. ಡ್ರಗ್ಸ್ ದಂಧೆಯನ್ನ ಬುಡಸಮೇತ ಕೀಳುವವರೆಗೆ …
Read More »
Laxmi News 24×7