ಧಾರವಾಡ: ಕಾರ್ಮಿಕನ ಮೃತದೇಹವನ್ನು ಎಳೆದೊಯ್ದಿರುವ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಕೊಡ್ಲಾ ಗ್ರಾಮದ ಬಳಿಯ ಸಿಮೆಂಟ್ ಕಂಪನಿಯೊಂದರಲ್ಲಿ ನಡೆದಿದೆ. ಬಿಹಾರದ ಚಂದನಸಿಂಗ್ (35) ಮೃತ ಕಾರ್ಮಿಕ. ಕಾರ್ಮಿಕನನ್ನು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಘಟನೆ ಸಂಬಂಧ ಆರು ಮಂದಿ ವಿರುದ್ಧ ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಕಲಬುರಗಿ ಎಸ್ಪಿ ಆಡೂರು ಶ್ರೀನಿವಾಸಲು ತಿಳಿಸಿದ್ದಾರೆ. “ಕಾರ್ಮಿಕ ಮೃತಪಟ್ಟಿದ್ದು ಕಾರ್ಖಾನೆಯ ಒಳಗಡೆ ಅಲ್ಲವೇ ಅಲ್ಲ. ಕಾರ್ಮಿಕ ಬಹಿರ್ದೆಸೆಗೆಂದು …
Read More »ಗರ್ಭಿಣಿಯರಿಗೆ ಸೇರಬೇಕಾದ ರೇಷನ್ ಕಿಟ್ ಗಳನ್ನು ಮಾರಾಟ ಮಾಡುತ್ತಿದ್ದ ಜಾಲ 26 ಜನರ ಬಂಧನ.
ಹುಬ್ಬಳ್ಳಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಮಕ್ಕಳಿಗೆ ಹಾಗೂ ಗರ್ಭಿಣಿಯರಿಗೆ ಸೇರಬೇಕಾದ ರೇಷನ್ ಕಿಟ್ ಗಳನ್ನು ಕಾಳ ಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಜಾಲವನ್ನು ಬೇಧಿಸಿ ಅಂಗನವಾಡಿ ಕಾರ್ಯಕರ್ತೆಯರು ಸೇರಿ ಒಟ್ಟು 26 ಜನರನ್ನು ಬಂಧನ ಮಾಡಿ ಜೈಲಿಗೆ ಅಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳೆದ ಎರಡು ದಿನಗಳಿಂದ ಹುಬ್ಬಳ್ಳಿ ಹೊರವಲಯದ ಗೋಡೌನ್ ನಲ್ಲಿ ಮಹಿಳಾ ಮತ್ತು ಮಕ್ಕಳ ಇಲಾಖೆಗೆ ಸೇರಿದ ಅಕ್ಕಿ,ಬೆಳೆ,ಬೆಲ್ಲ,ರವೆ,ಹೆಸರುಕಾಳು ಸೇರಿದಂತೆ ಲಕ್ಷಾಂತರ ಮೌಲ್ಯದ ರೇಷನ್ ಕಿಟ್ ಗಳು …
Read More »‘ರಾಜ್ಯ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ’ ಎಲ್ಲ ದರ ಏರಿಸಿದೆ ; ಬಸವರಾಜ ಬೊಮ್ಮಾಯಿ ಕಿಡಿ
ಹುಬ್ಬಳ್ಳಿ: ಇಂದು ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಮೆಟ್ರೋ ದರ ಏರಿಕೆ ಮಾಡಿದ್ದು ಕೇಂದ್ರ ಸರಕಾರ ಅಲ್ಲ, ರಾಜ್ಯ ರ್ಕಾರವೇ ದರ ಏರಿಕೆಗೆ ಪ್ರಸ್ತಾಪ ಮಾಡಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿಡಿ ಕಾರಿದ್ದಾರೆ. ಮೆಟ್ರೋ ದರ ನಿಗದಿ ಮಾಡುವ ಒಂದು ಸಮಿತಿ ಇದೆ. ಈ ಮೆಟ್ರೋ ದರ ವಿಚಾರದಲ್ಲಿ ಎಲ್ಲವೂ ಅಧಿಕಾರ ರಾಜ್ಯ ಸರ್ಕಾರಕ್ಕೆ ಇರುತ್ತದೆ. ಅದರಲ್ಲಿ ರಾಜ್ಯದ ಅಧಿಕಾರಿಗಳು ಇರುತ್ತಾರೆ. ಅದಕ್ಕೆ ರಾಜ್ಯ ಸರ್ಕಾರವೇ ಶಿಫಾರಸ್ಸು ಮಾಡಿದೆ. ಮುಖ್ಯಮಂತ್ರಿ …
Read More »ಮಹಾ ಕುಂಭಮೇಳ : ಮೈಸೂರು-ತುಂಡ್ಲಾ ನಡುವೆ ಮತ್ತೊಂದು ವಿಶೇಷ ಎಕ್ಸ್ಪ್ರೆಸ್ ರೈಲು ಸೌಲಭ್ಯ
ಹುಬ್ಬಳ್ಳಿ: ಪ್ರಯಾಗರಾಜ್ ಮಹಾ ಕುಂಭಮೇಳದ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು ಮೈಸೂರು ಮತ್ತು ತುಂಡ್ಲಾ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ಪ್ರೆಸ್ ರೈಲು ಓಡಿಸಲು ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ರೈಲು ಸಂಖ್ಯೆ 06219 ಮೈಸೂರು-ತುಂಡ್ಲಾ ವಿಶೇಷ ಎಕ್ಸ್ಪ್ರೆಸ್ ರೈಲು ಫೆ.20ರಂದು (ಗುರುವಾರ) ಮೈಸೂರಿನಿಂದ ರಾತ್ರಿ 9:40 ಗಂಟೆಗೆ ಹೊರಟು, ಫೆಬ್ರವರಿ 23ರಂದು (ಭಾನುವಾರ) ಬೆಳಗ್ಗೆ 9:30 ಗಂಟೆಗೆ ತುಂಡ್ಲಾ ನಿಲ್ದಾಣ ತಲುಪಲಿದೆ. ಪುನಃ ಇದೇ ರೈಲು (06220) ಫೆ.24ರಂದು …
Read More »ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಹೆಚ್ಚು ರ್ಯಾಂಕ್ ಗಳಿಸುವ ಉದ್ದೇಶವನ್ನು ಮಿಶನ್ ವಿದ್ಯಾಕಾಶಿ ಹೊಂದಿದೆ – ಡಿಸಿ ದಿವ್ಯ ಫ್ರಭು.
– ಧಾರವಾಡ ಜಿಲ್ಲೆಯಲ್ಲಿ ಶೈಕ್ಷಣಿಕ ಸುಧಾರಣೆಗಾಗಿ ಮಿಶನ್ ವಿದ್ಯಾಕಾಶಿ ಯೋಜನೆಯಡಿ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ವಿಶೇಷ ತರಬೇತಿ ನೀಡಲಾಗುತ್ತಿದೆ. ಕಲಿಕೆಯಲ್ಲಿ ಹಿಂದುಳಿದ ಮಕ್ಕಳ ಓದುಬರಹ ಸುಧಾರಣೆ, ಎಸ್ಎಸ್ಎಲ್ಸಿ ಅನುತ್ತಿರ್ಣ ಪ್ರಮಾಣ ಕಡಿಮೆ ಮಾಡುವುದು ಮತ್ತು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಹೆಚ್ಚು ರ್ಯಾಂಕ್ ಗಳಿಸುವ ಉದ್ದೇಶವನ್ನು ಮಿಶನ್ ವಿದ್ಯಾಕಾಶಿ ಹೊಂದಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು. ನಗರದಲ್ಲಿಂದು ಕೆ.ಇ.ಬೋರ್ಡ್ ಸಂಸ್ಥೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಮತ್ತು ಶಾಲಾ …
Read More »ಹುಬ್ಬಳ್ಳಿ ಮತ್ತು ವಾರಾಣಸಿ ನಿಲ್ದಾಣಗಳ ನಡುವೆ ಮೂರು ಟ್ರಿಪ್ ವಿಶೇಷ ರೈಲು ಸಂಚಾರ ಮಾಡಲಿದ್ದು, ಅದರ ಮಾಹಿತಿ ಇಲ್ಲಿದೆ.
ಹುಬ್ಬಳ್ಳಿ: ಕುಂಭಮೇಳದ ವೇಳೆ ಪ್ರಯಾಣಿಕರ ದಟ್ಟಣೆ ನಿರ್ವಹಿಸಲು ಇಲ್ಲಿನ ಶ್ರೀ ಸಿದ್ಧಾರೂಢ ಸ್ವಾಮೀಜಿ ರೈಲು ನಿಲ್ದಾಣ (ಎಸ್ಎಸ್ಎಸ್) ಮತ್ತು ಉತ್ತರ ಪ್ರದೇಶದ ವಾರಾಣಸಿ ನಿಲ್ದಾಣಗಳ ನಡುವೆ 3 ಟ್ರಿಪ್ ವಿಶೇಷ ಎಕ್ಸ್ಪ್ರೆಸ್ ರೈಲುಗಳನ್ನು ಓಡಿಸಲು ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ವಿವರಗಳು ಈ ಕೆಳಗಿನಂತಿವೆ: ಹುಬ್ಬಳ್ಳಿ – ವಾರಾಣಸಿ ನಿಲ್ದಾಣಗಳ ನಡುವೆ 3 ಟ್ರಿಪ್ ವಿಶೇಷ ರೈಲು (07383/84) ಸಂಚಾರ ರೈಲು ಸಂಖ್ಯೆ 07383 ಎಸ್ಎಸ್ಎಸ್ ಹುಬ್ಬಳ್ಳಿ – ವಾರಾಣಸಿ ವಿಶೇಷ …
Read More »ವಕೀಲರ ಆರೋಗ್ಯ ವಿಮೆ ಕೊಡದ ಆದಿತ್ಯ ಬಿರ್ಲಾ ವಿಮಾ ಕಂಪೆನಿಗೆ ದಂಡ ವಿಧಿಸಿರುವ ಜಿಲ್ಲಾ ಗ್ರಾಹಕರ ಆಯೋಗ,
ಧಾರವಾಡ: ವಕೀಲರ ಆರೋಗ್ಯ ವಿಮೆ ಕೊಡದ ಆದಿತ್ಯ ಬಿರ್ಲಾ ವಿಮಾ ಕಂಪೆನಿಗೆ ಜಿಲ್ಲಾ ಗ್ರಾಹಕರ ಆಯೋಗ ದಂಡ ವಿಧಿಸಿ, ಪರಿಹಾರ ನೀಡಲು ಆದೇಶಿಸಿದೆ. ಧಾರವಾಡದ ನಿವಾಸಿ, ವಕೀಲ ಚೇತನ್ಕುಮಾರ ಈಟಿ ಎಂಬವರು 23,999 ರೂ ಮೌಲ್ಯದ ಹೊಸ ಮೊಬೈಲ್ ಅನ್ನು ಬಜಾಜ್ ಫೈನಾನ್ಸ್ ಕಂಪೆನಿಯಿಂದ ಸಾಲ ಪಡೆದು ಖರೀದಿಸಿದ್ದರು. ಆ ಮೊಬೈಲ್ಗೆ ಆದಿತ್ಯ ಬಿರ್ಲಾ ವಿಮಾ ಕಂಪೆನಿಯಲ್ಲಿ 1 ಲಕ್ಷ ರೂ. ಮೊತ್ತದ ಗ್ರೂಪ್ ಹೆಲ್ತ್ ವಿಮೆ ಮಾಡಿಸಿದ್ದರು. 23/02/2023ರಂದು ದೂರುದಾರರು …
Read More »ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚನೆಗೆ ಆರಂಭದಲ್ಲೇ ವಿಘ್ನ
ಧಾರವಾಡ: ಸುದೀರ್ಘ ಹೋರಾಟದ ಫಲವಾಗಿ ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆಗೆ ರಾಜ್ಯ ಸರ್ಕಾರ ಅಸ್ತು ಅಂದಿದೆ. ಇನ್ನೇನು ಕಾರ್ಯಾರಂಭಿಸಲು ಸಿದ್ಧತೆ ಮಾಡಿಕೊಳ್ಳಬೇಕು ಎನ್ನುವಷ್ಟರಲ್ಲಿ ಹೊಸ ಪಾಲಿಕೆ ಸೇರಲು ಕೆಲ ಗ್ರಾಮಸ್ಥರಿಂದ ವಿರೋಧ ವ್ಯಕ್ತವಾಗಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 82 ವಾರ್ಡ್ಗಳನ್ನು ವಿಂಗಡಿಸಿ, 26 ವಾರ್ಡ್ ಧಾರವಾಡಕ್ಕೆ ನೀಡಿ ಪ್ರತ್ಯೇಕ ಪಾಲಿಕೆ ಘೋಷಿಸಲಾಗಿದೆ. ಈ ಕುರಿತು ಸರ್ಕಾರ ಇತ್ತೀಚೆಗೆ ಗೆಜೆಟ್ ನೋಟಿಪಿಕೇಷನ್ ಸಹ ಮಾಡಿದೆ. ಇದರ ನಡುವೆ ಧಾರವಾಡ ಸುತ್ತಮುತ್ತಲಿನ ಗ್ರಾಮಗಳನ್ನೂ …
Read More »ಮಹಾದೇವಿ ಅವರ ಮೃತದೇಹ ಆಂಬ್ಯುಲೆನ್ಸ್ ಮೂಲಕ ನೂಲ್ವಿ ಗ್ರಾಮಕ್ಕೆ ಆಗಮಸಿದ್ದು, ತಂದೆ, ಸಹೋದರರು ಸೇರಿದಂತೆ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು.
ಹುಬ್ಬಳ್ಳಿ: ಪ್ರಯಾಗ್ರಾಜ್ನಲ್ಲಿ ಕಾಲ್ತುಳಿತಕ್ಕೊಳಗಾಗಿ ಸಾವನ್ನಪ್ಪಿದ ಹುಬ್ಬಳ್ಳಿ ತಾಲೂಕಿನ ನೂಲ್ವಿ ಮಹಾದೇವಿ ಹನುಮಂತಪ್ಪ ಬಾವನೂರ್ (ಸಂಕನಗೌಡರ್) ಮೃತದೇಹಕ್ಕೆ ಗುರುವಾರ ತಡರಾತ್ರಿ ವೀರಶೈವ ಲಿಂಗಾಯತ ಸಮುದಾಯದ ವಿಧಿವಿಧಾನದಂತೆ ಅಂತಿಮ ಸಂಸ್ಕಾರ ನೆರವೇರಿಸಲಾಯಿತು. ಗುರುವಾರ ರಾತ್ರಿ 10.45ರ ಸುಮಾರಿಗೆ ಬೆಳಗಾವಿಯಿಂದ ನೂಲ್ವಿ ಗ್ರಾಮಕ್ಕೆ ಮೃತದೇಹವನ್ನು ಆಂಬ್ಯುಲೆನ್ಸ್ ಮೂಲಕ ತರಲಾಯಿತು. ಮೃತದೇಹ ತರುತ್ತಿರುವ ಸುದ್ದಿ ತಿಳಿದ ಗ್ರಾಮಸ್ಥರು ಮಹಾದೇವಿ ಅವರ ಮನೆ ಮುಂದೆ ಜಮಾಯಿಸಿದ್ದರು. ಮಹಾದೇವಿ ತಂದೆ ಹನುಮಂತ ಗೌಡ, ಸಹೋದರರಾದ ಬಸವನ ಗೌಡ, ಮಹಾದೇವ ಗೌಡ …
Read More »ಕೇಂದ್ರ ಬಜೆಟ್ ಮೇಲೆ ಹುಬ್ಬಳ್ಳಿ-ಧಾರವಾಡದ ನಿರೀಕ್ಷೆಗಳೇನು?
ಹುಬ್ಬಳ್ಳಿ: ಕೇಂದ್ರ ಬಜೆಟ್ ಸಮೀಪಿಸುತ್ತಿದೆ. ಉತ್ತರ ಕರ್ನಾಟಕದ ಹೆಬ್ಬಾಗಿಲು ಹುಬ್ಬಳ್ಳಿ-ಧಾರವಾಡ ಮಂದಿ ಬಜೆಟ್ ಮೇಲೆ ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಕಳೆದ ಬಜೆಟ್ನಲ್ಲಿ ಸಾಕಷ್ಟು ನಿರೀಕ್ಷೆ ಹೊಂದಿತ್ತು. ಆದರೆ ಈಡೇರಿದ್ದು ಬೆರಳಣಿಕೆಯಷ್ಟು ಮಾತ್ರ. ಹೀಗಿದ್ದರೂ ಭರವಸೆ ಬಿಡದ ಸಂಸ್ಥೆ ಈ ಬಾರಿಯೂ ಹಲವು ನಿರೀಕ್ಷೆಗಳನ್ನು ಹೊಂದಿದೆ.ಈ ಕುರಿತಂತೆ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಕಾರ್ಯದರ್ಶಿ ರವೀಂದ್ರ ಎಸ್.ಬಳಿಗೇರ ಅವರು ‘ಈಟಿವಿ ಭಾರತ’ಕ್ಕೆ ಪ್ರತಿಕ್ರಿಯಿಸಿದರು.”ಕಳೆದ ಬಜೆಟ್ನಲ್ಲಿ ಧಾರವಾಡ-ಬೆಳಗಾವಿ ನೇರ ರೈಲು ಸಂಪರ್ಕಕ್ಕೆ …
Read More »