Breaking News

ಹುಬ್ಬಳ್ಳಿ

ವಕೀಲರ ಆರೋಗ್ಯ ವಿಮೆ ಕೊಡದ ಆದಿತ್ಯ ಬಿರ್ಲಾ ವಿಮಾ ಕಂಪೆನಿಗೆ ದಂಡ ವಿಧಿಸಿರುವ ಜಿಲ್ಲಾ ಗ್ರಾಹಕರ ಆಯೋಗ,

ಧಾರವಾಡ: ವಕೀಲರ ಆರೋಗ್ಯ ವಿಮೆ ಕೊಡದ ಆದಿತ್ಯ ಬಿರ್ಲಾ ವಿಮಾ ಕಂಪೆನಿಗೆ ಜಿಲ್ಲಾ ಗ್ರಾಹಕರ ಆಯೋಗ ದಂಡ ವಿಧಿಸಿ, ಪರಿಹಾರ ನೀಡಲು ಆದೇಶಿಸಿದೆ. ಧಾರವಾಡದ ನಿವಾಸಿ, ವಕೀಲ ಚೇತನ್​ಕುಮಾರ ಈಟಿ ಎಂಬವರು 23,999 ರೂ ಮೌಲ್ಯದ ಹೊಸ ಮೊಬೈಲ್​​ ಅನ್ನು ಬಜಾಜ್ ಫೈನಾನ್ಸ್ ಕಂಪೆನಿಯಿಂದ ಸಾಲ ಪಡೆದು ಖರೀದಿಸಿದ್ದರು. ಆ ಮೊಬೈಲ್‌ಗೆ ಆದಿತ್ಯ ಬಿರ್ಲಾ ವಿಮಾ ಕಂಪೆನಿಯಲ್ಲಿ 1 ಲಕ್ಷ ರೂ. ಮೊತ್ತದ ಗ್ರೂಪ್ ಹೆಲ್ತ್ ವಿಮೆ ಮಾಡಿಸಿದ್ದರು. 23/02/2023ರಂದು ದೂರುದಾರರು …

Read More »

ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚನೆಗೆ ಆರಂಭದಲ್ಲೇ ವಿಘ್ನ

ಧಾರವಾಡ: ಸುದೀರ್ಘ ಹೋರಾಟದ ಫಲವಾಗಿ ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆಗೆ ರಾಜ್ಯ ಸರ್ಕಾರ ಅಸ್ತು ಅಂದಿದೆ. ಇನ್ನೇನು ಕಾರ್ಯಾರಂಭಿಸಲು ಸಿದ್ಧತೆ ಮಾಡಿಕೊಳ್ಳಬೇಕು ಎನ್ನುವಷ್ಟರಲ್ಲಿ ಹೊಸ ಪಾಲಿಕೆ ಸೇರಲು ಕೆಲ ಗ್ರಾಮಸ್ಥರಿಂದ ವಿರೋಧ ವ್ಯಕ್ತವಾಗಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 82 ವಾರ್ಡ್​ಗಳನ್ನು ವಿಂಗಡಿಸಿ, 26 ವಾರ್ಡ್​​ ಧಾರವಾಡಕ್ಕೆ ನೀಡಿ ಪ್ರತ್ಯೇಕ ಪಾಲಿಕೆ ಘೋಷಿಸಲಾಗಿದೆ. ಈ ಕುರಿತು ಸರ್ಕಾರ ಇತ್ತೀಚೆಗೆ ಗೆಜೆಟ್ ನೋಟಿಪಿಕೇಷನ್​ ಸಹ ಮಾಡಿದೆ. ಇದರ ನಡುವೆ ಧಾರವಾಡ ಸುತ್ತಮುತ್ತಲಿನ ಗ್ರಾಮಗಳನ್ನೂ …

Read More »

ಮಹಾದೇವಿ ಅವರ ಮೃತದೇಹ ಆಂಬ್ಯುಲೆನ್ಸ್​ ಮೂಲಕ ನೂಲ್ವಿ ಗ್ರಾಮಕ್ಕೆ ಆಗಮಸಿದ್ದು, ತಂದೆ, ಸಹೋದರರು ಸೇರಿದಂತೆ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು.

ಹುಬ್ಬಳ್ಳಿ: ಪ್ರಯಾಗ್‌ರಾಜ್​ನಲ್ಲಿ ಕಾಲ್ತುಳಿತಕ್ಕೊಳಗಾಗಿ ಸಾವನ್ನಪ್ಪಿದ ಹುಬ್ಬಳ್ಳಿ ತಾಲೂಕಿನ ನೂಲ್ವಿ ಮಹಾದೇವಿ ಹನುಮಂತಪ್ಪ ಬಾವನೂರ್ (ಸಂಕನಗೌಡರ್) ಮೃತದೇಹಕ್ಕೆ ಗುರುವಾರ ತಡರಾತ್ರಿ ವೀರಶೈವ ಲಿಂಗಾಯತ ಸಮುದಾಯದ ವಿಧಿವಿಧಾನದಂತೆ ಅಂತಿಮ ಸಂಸ್ಕಾರ ನೆರವೇರಿಸಲಾಯಿತು. ಗುರುವಾರ ರಾತ್ರಿ 10.45ರ ಸುಮಾರಿಗೆ ಬೆಳಗಾವಿಯಿಂದ ನೂಲ್ವಿ ಗ್ರಾಮಕ್ಕೆ ಮೃತದೇಹವನ್ನು ಆಂಬ್ಯುಲೆನ್ಸ್ ಮೂಲಕ ತರಲಾಯಿತು. ಮೃತದೇಹ ತರುತ್ತಿರುವ ಸುದ್ದಿ ತಿಳಿದ ಗ್ರಾಮಸ್ಥರು ಮಹಾದೇವಿ ಅವರ ಮನೆ ಮುಂದೆ ಜಮಾಯಿಸಿದ್ದರು. ಮಹಾದೇವಿ ತಂದೆ ಹನುಮಂತ ಗೌಡ, ಸಹೋದರರಾದ ಬಸವನ ಗೌಡ, ಮಹಾದೇವ ಗೌಡ …

Read More »

ಕೇಂದ್ರ ಬಜೆಟ್​ ಮೇಲೆ ಹುಬ್ಬಳ್ಳಿ-ಧಾರವಾಡದ ನಿರೀಕ್ಷೆಗಳೇನು?

ಹುಬ್ಬಳ್ಳಿ: ಕೇಂದ್ರ ಬಜೆಟ್​​ ಸಮೀಪಿಸುತ್ತಿದೆ. ಉತ್ತರ ಕರ್ನಾಟಕದ ಹೆಬ್ಬಾಗಿಲು ಹುಬ್ಬಳ್ಳಿ-ಧಾರವಾಡ ಮಂದಿ ಬಜೆಟ್ ಮೇಲೆ ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಕಳೆದ ಬಜೆಟ್​ನಲ್ಲಿ ಸಾಕಷ್ಟು ನಿರೀಕ್ಷೆ ಹೊಂದಿತ್ತು. ಆದರೆ ಈಡೇರಿದ್ದು ಬೆರಳಣಿಕೆಯಷ್ಟು ಮಾತ್ರ. ಹೀಗಿದ್ದರೂ ಭರವಸೆ ಬಿಡದ ಸಂಸ್ಥೆ ಈ ಬಾರಿಯೂ ಹಲವು ನಿರೀಕ್ಷೆಗಳನ್ನು ಹೊಂದಿದೆ.ಈ ಕುರಿತಂತೆ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಕಾರ್ಯದರ್ಶಿ ರವೀಂದ್ರ ಎಸ್​​.ಬಳಿಗೇರ ಅವರು ‘ಈಟಿವಿ ಭಾರತ’ಕ್ಕೆ ಪ್ರತಿಕ್ರಿಯಿಸಿದರು.”ಕಳೆದ ಬಜೆಟ್​ನಲ್ಲಿ ಧಾರವಾಡ-ಬೆಳಗಾವಿ ನೇರ ರೈಲು ಸಂಪರ್ಕಕ್ಕೆ …

Read More »

ಸಾಲ ಮರು ಪಾವತಿ ಮಾಡದ ಹಿನ್ನೆಲೆಯಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಯೊಂದು ಮನೆ ಜಪ್ತಿ ಮಾಡಿ, ಏಳು ತಿಂಗಳ ಗರ್ಭಿಣಿ ಸೇರಿದಂತೆ ಕುಟುಂಬಸ್ಥರನ್ನು ಮನೆಯಿಂದ ಹೊರಹಾಕಿರುವ ಆರೋಪ ಕೇಳಿಬಂದಿದೆ.

ಧಾರವಾಡ: ಮೈಕ್ರೋ ಫೈನಾನ್ಸ್​ಗಳ ವಿರುದ್ಧ ಕಿರುಕುಳ ಆರೋಪ ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಶನಿವಾರ ಸಿಎಂ ಸಿದ್ದರಾಮಯ್ಯ ಅವರು ಮಹತ್ವದ ಸಭೆ ನಡೆಸಿದ್ದಾರೆ. ಅಲ್ಲದೆ, ಕಾನೂನು ಮೀರಿ ಸಾಲ ವಸೂಲಾತಿಗೆ ಇಳಿದ ಸಂಸ್ಥೆಗಳಿಗೆ ಎಚ್ಚರಿಕೆಯನ್ನೂ ನೀಡಿದ್ದಾರೆ. ಈ ನಡುವೆ ಧಾರವಾಡ ಜಿಲ್ಲೆಯ ಅಳ್ನಾವರ ತಾಲೂಕಿನ ಅರವಟಿಗಿ ಗ್ರಾಮದಲ್ಲಿ 7 ತಿಂಗಳ ಗರ್ಭಿಣಿ ಡೀನಾ ಫೀಲಿಪ್ ಅವ ರನ್ನು ಮನೆಯಿಂದ ಹೊರಹಾಕಿರುವ ಆರೋಪ ಆರೋಪ ಕೇಳಿಬಂದಿದೆ. ”ಫೈನಾನ್ಸ್​ ಕಂಪನಿಯೊಂದರಲ್ಲಿ ಸಾಲ ಪಡೆದುಕೊಂಡಿದ್ದೆವು. ಪ್ರತಿ ತಿಂಗಳಿಗೊಮ್ಮೆ ಹಣ …

Read More »

ಮಾನವ ಕಲ್ಯಾಣಕ್ಕೆ ಮಹಾವೀರ, ಪಾರ್ಶ್ವನಾಥರ ವಿಚಾರಗಳು ಮಾರ್ಗದರ್ಶಿ: ಸ್ಪೀಕರ್ ಓಂ ಬಿರ್ಲಾ

ಹುಬ್ಬಳ್ಳಿ: “ಮಾನವ ಕಲ್ಯಾಣಕ್ಕೆ ಮಹಾವೀರ, ಪಾರ್ಶ್ವನಾಥರ ವಿಚಾರಗಳು ಮಾರ್ಗದರ್ಶಿಯಾಗಿವೆ. ಅಹಿಂಸಾ ತತ್ವ, ಸೇವಾ ತ್ಯಾಗ ವಿಶ್ವಕ್ಕೆ ಮಾದರಿಯಾಗಿದ್ದು, ಮನುಷ್ಯ ಜೀವನಕ್ಕೆ ಮಹಾವೀರರು ಆದರ್ಶಪ್ರಾಯವಾಗಿದ್ದಾರೆ” ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಹೇಳಿದರು. ಹುಬ್ಬಳ್ಳಿಯ ವರೂರಿನ ನವಗ್ರಹ ತೀರ್ಥಂಕರ ಮಹಾಮಸ್ತಕಾಭಿಷೇಕಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, “ಜೈನ ಸಂತ, ಆಚಾರ್ಯ ಮುನಿಗಳು ಮಹಾವೀರರ ವಿಚಾರಗಳನ್ನು ಜನತೆಗೆ ಮುಟ್ಟಿಸುತ್ತಿದ್ದಾರೆ. ಜೀವನದಲ್ಲಿ ಪ್ರತಿಕೂಲ ಪರಿಸ್ಥಿತಿ ಬಂದಾಗ ಸಂತರ ಬಳಿ ಹೋಗಲು ಪಾರ್ಶ್ವನಾಥರು ಹೇಳಿದ್ದರು. ಅಹಿಂಸಾ …

Read More »

ನನ್ನ ಕರ್ತವ್ಯ ಮಾಡುತ್ತೇನೆ, ಮಿಕ್ಕಿದ್ದು ಪಕ್ಷ ತೀರ್ಮಾನ ಮಾಡುತ್ತದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಹುಬ್ಬಳ್ಳಿ : “ನಾನು ನನ್ನ ಕರ್ತವ್ಯ ಮಾಡುತ್ತೇನೆ. ಮಿಕ್ಕಿದ್ದು ಪಕ್ಷ ತೀರ್ಮಾನ ಮಾಡುತ್ತದೆ” ಎಂದು ತಿಳಿಸಿದರು. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು. ನೀವು ಸಿಎಂ ಆಗಲಿ ಎಂದು ಸ್ವಾಮೀಜಿಗಳು ಆಶೀರ್ವಾದ ಮಾಡಿದ್ದಾರೆ ಎಂದು ಕೇಳಿದ ಪ್ರಶ್ನೆಗೆ “ಧರ್ಮಗುರುಗಳು ಆಶೀರ್ವಾದ ಮಾಡುವಾಗ ನಾವು ಏನು ಹೇಳಲು ಸಾಧ್ಯ? ಅದು ಅವರ ಇಚ್ಛೆ. ಏನೇ ಇದ್ದರೂ ನಮ್ಮ ಪಕ್ಷವಷ್ಟೇ. ಪಕ್ಷ ಮುಖ್ಯ. ಪಕ್ಷ ಏನು …

Read More »

ನನ್ನ ಕರ್ತವ್ಯ ಮಾಡುತ್ತೇನೆ, ಮಿಕ್ಕಿದ್ದು ಪಕ್ಷ ತೀರ್ಮಾನ ಮಾಡುತ್ತದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಹುಬ್ಬಳ್ಳಿ : “ನಾನು ನನ್ನ ಕರ್ತವ್ಯ ಮಾಡುತ್ತೇನೆ. ಮಿಕ್ಕಿದ್ದು ಪಕ್ಷ ತೀರ್ಮಾನ ಮಾಡುತ್ತದೆ” ಎಂದು ತಿಳಿಸಿದರು. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು. ನೀವು ಸಿಎಂ ಆಗಲಿ ಎಂದು ಸ್ವಾಮೀಜಿಗಳು ಆಶೀರ್ವಾದ ಮಾಡಿದ್ದಾರೆ ಎಂದು ಕೇಳಿದ ಪ್ರಶ್ನೆಗೆ “ಧರ್ಮಗುರುಗಳು ಆಶೀರ್ವಾದ ಮಾಡುವಾಗ ನಾವು ಏನು ಹೇಳಲು ಸಾಧ್ಯ? ಅದು ಅವರ ಇಚ್ಛೆ. ಏನೇ ಇದ್ದರೂ ನಮ್ಮ ಪಕ್ಷವಷ್ಟೇ. ಪಕ್ಷ ಮುಖ್ಯ. ಪಕ್ಷ ಏನು …

Read More »

ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆ ಪ್ರತ್ಯೇಕಗೊಳಿಸಿ ಆದೇಶ: ಆಕ್ಷೇಪಣೆಗೆ ಕಾಲಾವಕಾಶ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಪ್ರತ್ಯೇಕಗೊಳಿಸಿದ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಧಾರವಾಡ ಮಹಾನಗರ ಪಾಲಿಕೆ ರಚಿಸಿ ಸರ್ಕಾರಿ ರಾಜ್ಯ ಪತ್ರದಲ್ಲಿ ಮಂಗಳವಾರ ಅಧಿಕೃತ ಅಧಿಸೂಚನೆ ಪ್ರಕಟಿಸಿದ್ದು, ಆಕ್ಷೇಪಣೆ/ಸಲಹೆಗೆ 30 ದಿನಗಳ ಕಾಲಾವಕಾಶ ಕೂಡ ನೀಡಿದೆ. ಹುಬ್ಬಳ್ಳಿ – ಧಾರವಾಡ ಅವಳಿನಗರದ ಜನಸಂಖ್ಯೆ, ಜನಸಾಂದ್ರತೆ, ತೆರಿಗೆ, ತೆರಿಗೇತರ ಸಂಪನ್ಮೂಲ, ವಾರ್ಷಿಕ ತಲಾ ಆದಾಯ, ಕೃಷಿಯೇತರ ಚಟುವಟಿಕೆಗಳಲ್ಲಿನ ಶೇಕಡಾವಾರು, ಉದ್ಯೋಗ ಪ್ರಮಾಣವನ್ನು ಪರಿಗಣಿಸಿ ಧಾರವಾಡ ಮಹಾನಗರ ಪಾಲಿಕೆ ಪ್ರತ್ಯೇಕಗೊಳಿಸಿ ಪದನಾಮೀಕರಣಗೊಳಿಸಲಾಗಿದೆ. ಹುಬ್ಬಳ್ಳಿ – …

Read More »

ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆಯಾಗಿದೆ. ದಶಕಗಳ ಬೇಡಿಕೆಯ ನಂತರ ಕರ್ನಾಟಕ ಸರ್ಕಾರ ಇಂದು ಅಧಿಕೃತ ಗೆಜೆಟ್ ನೋಟಿಫಿಕೇಶನ್ ಹೊರಡಿಸಿದೆ.

ಧಾರವಾಡ, ಜನವರಿ 21: ಹುಬ್ಬಳ್ಳಿ- ಧಾರವಾಡವನ್ನು ವಿಭಜಿಸಿ, ಪ್ರತ್ಯೇಕವಾಗಿ ಧಾರವಾಡ ಮಹಾನಗರ ಪಾಲಿಕೆ ರಚನೆಗೆ ಇತ್ತೀಚೆಗೆ ಸಚಿವ ಸಂಪುಟ ಸಭೆ ನಿರ್ಧಾರ ಮಾಡಿತ್ತು. ಇದೀಗ ಇಂದಿನಿಂದ ಅಧಿಕೃತವಾಗಿ  ಧಾರವಾಡ ಮಹಾನಗರ ಪಾಲಿಕೆ ಎಂದು ಕರ್ನಾಟಕ ಸರ್ಕಾರದಿಂದ ಅಧಿಕೃತ ಗೆಜೆಟ್ ನೋಟಿಫಿಕೇಶನ್​ ಹೊರಡಿಸಲಾಗಿದೆ. ಆ ಮೂಲಕ ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ಆಗಬೇಕು ಅನ್ನೋದು ದಶಕಗಳ ಬೇಡಿಕೆ ಕೊನೆಗೂ ಈಡೇರಿದೆ.ಹುಬ್ಬಳ್ಳಿ-ಧಾರವಾಡ ಮಹಾನಗರ ಬೇರ್ಪಡಿಸುವ ನಿರ್ಧಾರ ಯಾರೂ ತೆಗೆದುಕೊಂಡಿರಲೇ‌ ಇಲ್ಲ. ಕೊನೆಗೂ ಸಚಿವ ಸಂಪುಟ ಸಭೆಯಲ್ಲಿ …

Read More »