Breaking News

ಹುಬ್ಬಳ್ಳಿ

ಮುಂಬಯಿಯಲ್ಲಿ ಎಷ್ಟು ಮರಾಠಿ ಭಾಷಿಕರಿದ್ದಾರೆಂದು ಠಾಕ್ರೆ ನೋಡಲಿ: ಅಶ್ವಥ ನಾರಾಯಣ ತಿರುಗೇಟು

ಹುಬ್ಬಳ್ಳಿ: ರಾಜ್ಯದ ಕೆಲವು ಪ್ರದೇಶಗಳನ್ನು‌ ಕೇಂದ್ರಾಡಳಿತ ಮಾಡಬೇಕೆಂದು ಹೇಳಿಕೆ‌ ನೀಡಿದ ಶಿವಸೇನಾ ಮುಖಂಡ ಉದ್ಧವ್ ಠಾಕ್ರೆಗೆ ಮುಂಬಯಿಯಲ್ಲಿ ಮರಾಠಿ ಭಾಷಿಕರು ಎಷ್ಟು ಸಂಖ್ಯೆಯಲ್ಲಿದ್ದಾರೆ ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಲಿ. ಇದನ್ನು ನಾವು ಪ್ರಶ್ನಿಸಿದರೆ ಅವರಿಗೇ ಸಮಸ್ಯೆಯಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಕೆ. ಅಶ್ವತ್ಥನಾರಾಯಣ ಹೇಳಿದರು. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಮತ್ತು ಮಹಾರಾಷ್ಟ್ರದ ಗಡಿವಿವಾದ ಮುಗಿದ ಅಧ್ಯಾಯ. ಆಗಾಗ ಈ ವಿಚಾರ ತೆಗೆಯುತ್ತ ಅವರಿಗೂ, ಜನರಿಗೂ ಸಮಸ್ಯೆ ತಂದಿಡುತ್ತಿದ್ದಾರೆ. …

Read More »

ಮುಂದಿನ ಬಾರಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಪ್ಯಾಕೆಜ್ ​

ಹುಬ್ಬಳ್ಳಿ : ನಮ್ಮ‌ ರಾಜ್ಯದ ಬಾರ್ಡರ್ ಈಗಾಗಲೇ‌ ಸೀಲ್ ಆಗಿದೆ. ಮಹಾರಾಷ್ಟ್ರ ಹಳ್ಳಿಗಳು ನಮಗೆ ಬೇಡ, ಮಹಾರಾಷ್ಟ್ರದ ಮಂತ್ರಿಗಳು ನಾಯಕರು‌ ಮುಖಂಡರು ಬೆಳಗಾವಿ‌ ಪ್ರವೇಶ ಮಾಡದೇ ಇದ್ದರೆ ಸಾಕು. ಜನ ನೆಮ್ಮದಿಯಿಂದ ಜೀವನ ಮಾಡ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು. ನಗರದ ವಿಮಾನ‌ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಬಾರಿ ಕಾಂಗ್ರೆಸ್ ಅಧಿಕಾರಿಕ್ಕೆ ಬರುತ್ತದೆ. ಬೆಳಗಾವಿ ಮತ್ತು ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಪ್ಯಾಕೇಜ್ ಘೋಷಣೆ‌ ಮಾಡುತ್ತೇವೆ. ಜನಕ್ಕೆ …

Read More »

ಪಕ್ಷ ಕಟ್ಟುವವರು ಹಾಗೂ ಸ್ಪರ್ಧಿಸುವವರು ಹುಚ್ಚರಿರಬಾರದು’ :ಪ್ರಲ್ಹಾದ ಜೋಶಿ

ಧಾರವಾಡ: ‘ಪಕ್ಷ ಕಟ್ಟುವುದಕ್ಕೆ, ಚುನಾವಣೆಯಲ್ಲಿ ಸ್ಪರ್ಧಿಸುವುದಕ್ಕೆ ಸಂವಿಧಾನ ಅವಕಾಶ ನೀಡಿದೆ. ಆದರೆ ಹಾಗೆ ಪಕ್ಷ ಕಟ್ಟುವವರು ಹಾಗೂ ಸ್ಪರ್ಧಿಸುವವರು ಹುಚ್ಚರಿರಬಾರದು’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಟಾಂಗ್ ಕೊಟ್ಟರು.   ಜನಾರ್ಧನ ರೆಡ್ಡಿ ಹೊಸ ಪಕ್ಷ ಸ್ಥಾಪನೆ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ‘ಅವರ ಹೊಸ ಪಕ್ಷ ಸ್ಥಾಪನೆಯಿಂದ ಬಿಜೆಪಿಗೇನೂ ನಷ್ಟವಿಲ್ಲ. ಬಿಜೆಪಿ ತತ್ವ ಸಿದ್ಧಾಂತಗಳ ಮೇಲೆ ಚುನಾವಣೆ ಎದುರಿಸುತ್ತದೆ’ ಎಂದರು. ನ್ಯಾಯಾಲಯದ ಆದೇಶದಂತೆ ತೆರವು ‘ಹುಬ್ಬಳ್ಳಿಯ …

Read More »

ಹುಬ್ಬಳ್ಳಿ ನಗರಕ್ಕೆ ಬರುವ ಪ್ರಯಾಣಿಕರು NWKRTCಯಿಂದ ಹೈರಾಣ

ಹುಬ್ಬಳ್ಳಿ: ಹಾವೇರಿ, ದಾವಣಗೆರೆ‌, ಉತ್ತರ ಕನ್ನಡ, ಗದಗ, ಕೊಪ್ಪಳ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಬಹುತೇಕ ಜಿಲ್ಲೆಗಳಿಂದ ಉದ್ಯೋಗ, ವ್ಯಾಪಾರ, ಆಸ್ಪತ್ರೆಗಳಿಗಾಗಿ ಹುಬ್ಬಳ್ಳಿ ನಗರಕ್ಕೆ ಬರುವವರ ಸಂಖ್ಯೆ ಹೆಚ್ಚಿದೆ. ನಿತ್ಯ ಸಾವಿರಾರು ಮಂದಿ ವಾಯವ್ಯ ಸಾರಿಗೆ ಸಂಸ್ಥೆಯ (NWKRTC) ಬಸ್‌ಗಳಲ್ಲಿ ನಗರಕ್ಕೆ ಬಂದು, ಎಲ್ಲಿ ಇಳಿಯಬೇಕು ಎಂದು ಗೊತ್ತಾಗದೆ ಪರದಾಡುವುದು ಸಾಮಾನ್ಯವಾಗಿದೆ.   ನಗರದಲ್ಲಿ ನಿಗದಿತ ಸ್ಥಳಗಳಲ್ಲಿ ತಾತ್ಕಾಲಿಕ ಬಸ್ ನಿಲುಗಡೆ ವ್ಯವಸ್ಥೆ ಇಲ್ಲ. ಒಂದೇ ನಿಲ್ದಾಣಕ್ಕೆ ಮೂರು, ನಾಲ್ಕು …

Read More »

ಹುಬ್ಬಳ್ಳಿ: ಹಜರತ್ ಖಾದ್ರಿ ದರ್ಗಾ ತೆರವು ಕಾರ್ಯಾಚರಣೆ, 200ಕ್ಕೂ ಹೆಚ್ಚು ಪೊಲೀಸರ ನಿಯೋಜನೆ

ಹುಬ್ಬಳ್ಳಿ:ಇಲ್ಲಿಯ ಭೈರಿದೇವರಕೊಪ್ಪದ ಸಾರ್ವಜನಿಕ ಸ್ಥಳದಲ್ಲಿರುವ ಹಜರತ್ ಸೈಯದ್ ಮಹಮ್ಮುದ್ ಶಾ ಖಾದ್ರಿ ದರ್ಗಾದ ಒಂದು ಭಾಗ ಹಾಗೂ ವಾಣಿಜ್ಯ ಮಳಿಗೆಗಳ ತೆರವು ಕಾರ್ಯಚರಣೆ ಬುಧವಾರ ಬೆಳಿಗ್ಗೆ ಆರಂಭವಾಗಿದೆ. ದರ್ಗಾದ ಸುತ್ತಮುತ್ತ ಪೊಲೀಸ್‌ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಹುಬ್ಬಳ್ಳಿ-ಧಾರವಾಡ ಸೇರಿದಂತೆ ಉತ್ತರ ಕನ್ನಡ, ಹಾವೇರಿ, ಗದಗ ಹಾಗೂ ಧಾರವಾಡ ಜಿಲ್ಲೆಗಳಿಂದ 200 ಕ್ಕೂ ಹೆಚ್ಚು ಪೊಲೀಸ್‌ ಸಿಬ್ಬಂದಿಯನ್ನು ನೀಯೋಜಿಸಿ ಸೂಕ್ತ ಭದ್ರತೆ ನೀಡಲಾಗಿದೆ. ಮೂರು ಜೆಸಿಬಿ ಕಾರ್ಯಚರಣೆ ನಡೆಸಿದ್ದು, ಈಗಾಗಲೇ ದರ್ಗಾದ ಸುತ್ತಮುತ್ತಲಿನ …

Read More »

ನನ್ನ ವಿಚಾರಕ್ಕೆ ಬಂದರೆ ಸುಮ್ಮನಿರಲ್ಲ ಜಗದೀಶ್ ಶೆಟ್ಟರ್ ವಾರ್ನ್‌

ಹುಬ್ಬಳ್ಳಿ, ಡಿಸೆಂಬರ್‌, 18: ನಾನು ಯಾರ ಉಸಾಬರಿಗೂ ಹೋಗುವುದಿಲ್ಲ. ನನ್ನ ಬಗ್ಗೆ ಯಾರಾದರೂ ಕೆಣಕಿದರೆ ಸುಮ್ಮನೆ ಬಿಡುವದಿಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹುಬ್ಬಳ್ಳಿಯಲ್ಲಿ ವಾರ್ನಿಂಗ್ ಕೊಟ್ಟಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿದೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರ ಹುಟ್ಟು ಹಬ್ಬದ ನಿಮಿತ್ತ ಹುಬ್ಬಳ್ಳಿಯಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಜಗದೀಶ್ ತಮ್ಮ ವಿರೋಧಿಗಳಿಗೆ ವಾರ್ನಿಂಗ್ ಕೊಟ್ಟಿದ್ದಾರೆ. …

Read More »

ಸಭಾಪತಿಗೆ ನನ್ನ ಹೆಸರು ಫೈನಲ್‌: ಬಸವರಾಜ ಹೊರಟ್ಟಿ

ಧಾರವಾಡ: ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಆಡಳಿತರೂಢ ಬಿಜೆಪಿ ಪಕ್ಷದಿಂದ ನನ್ನ ಹೆಸರು ಅಂತಿಮಗೊಂಡಿದೆ ಎಂದು ಬಸವರಾಜ ಹೊರಟ್ಟಿ ತಿಳಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಸಭಾಪತಿ ಸ್ಥಾನದ ಅಭ್ಯರ್ಥಿಯಾದ ಬಗ್ಗೆ ಬಿಜೆಪಿ ಮುಖಂಡರಾದ ರವಿಕುಮಾರ ದೂರವಾಣಿ ಕರೆ ಮಾಡಿ ತಿಳಿಸಿದ್ದಾರೆ. ಶೀಘ್ರ ಅಧಿಕೃತ ಅಭ್ಯರ್ಥಿಯಾಗಿಯೂ ಪ್ರಕಟಣೆ ಹೊರ ಬೀಳಲಿದೆ. ಈ ಸಿಹಿ ಸುದ್ದಿ ನೀಡಿದ ರವಿಕುಮಾರ ಅವರಿಗೆ ಧನ್ಯವಾದ ತಿಳಿಸಿದ್ದೇನೆ. ಉತ್ತರ ಕರ್ನಾಟಕದ ನಮ್ಮ ಸಮಸ್ಯೆಗಳಿಗೆ ಪ್ರತಿಫಲ ಬೇಕಷ್ಟೇ. ಹೀಗಾಗಿ …

Read More »

ಇನ್ನಾದರೂ ಸಮಸ್ಯೆ ಯನ್ನಾ ಬಗೆಹರಿಸಿ ಎಂದು ಹುಟ್ಟು ಹಬ್ಬದ ದಿನವೇ ಶೆಟ್ಟರ್ ಅವರಿಗೆ ಶಾಕ ಕೊಟ್ಟ ಹುಬ್ಬಳಿ ಮಂದಿ

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹುಟ್ಟುಹಬ್ಬದ ಸಂಭ್ರಮಕ್ಕೆ ಹುಬ್ಬಳ್ಳಿಯ ಜನರು ಶಾಕ್ ನೀಡಿದ್ದಾರೆ. 30 ವರ್ಷ ಅಧಿಕಾರ ಅನುಭವಿಸಿ, ಮುಖ್ಯಮಂತ್ರಿ, ಸಚಿವರಾಗಿದ್ದ ಶೆಟ್ಟರ್ ಅವರಿಗೆ ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದಲ್ಲಿ ಇರುವ ಸಾಲು ಸಾಲು ಸಮಸ್ಯೆಗೆ ಪರಿಹಾರ ನೀಡುವಂತೆ ಜನತೆ ಒತ್ತಾಯಿಸಿದ್ದಾರೆ. ಹುಟ್ಟು ಹಬ್ಬದ ಶುಭಾಶಯ ಕೋರಿ ತಮ್ಮ ಬೇಡಿಕೆ ಈಡೇರಿಸಿ ಉಡುಗೊರೆ ನೀಡುವಂತೆ ಮನವಿ ಮಾಡಿದ್ದಾರೆ. ಸ್ವ ಹಿತಾಸಕ್ತಿಗೆ ಬಿ.ಆರ್.ಟಿ.ಎಸ್ ಯೋಜನೆ ತಂದು ನಮ್ಮ ಜೀವ ತೆಗೆಯುತ್ತಿದ್ದಾರೆ. ಕಸದ ನಿರ್ವಹಣೆ …

Read More »

ರಕ್ತದಲ್ಲಿ ನಾನು ಪತ್ರ ಬರೆದಿದ್ದಕ್ಕೇ ಮಹದಾಯಿ ಪ್ರಾರಂಭ: ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ‘ಮಹದಾಯಿ ಬಗ್ಗೆ ಮಾತನಾಡಲು ಕಾಂಗ್ರೆಸ್‌ಗೆ ನೈತಿಕ ಹಕ್ಕಿಲ್ಲ. ಮಹದಾಯಿ ನೀರನ್ನು ಕರ್ನಾಟಕಕ್ಕೆ ತರುವ ಕಾಲುವೆಗೆ ಗೋಡೆ ಕಟ್ಟಿರುವುದೇ ಕಾಂಗ್ರೆಸ್‌ನ ದೊಡ್ಡ ಸಾಧನೆ. ರಕ್ತದಲ್ಲಿ ನಾನು ಪತ್ರ ಬರೆದಿದ್ದಕ್ಕೇ ಮಹದಾಯಿ ಕಾಮಗಾರಿ ಪ್ರಾರಂಭವಾಗಿದ್ದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.   ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿ, ‘ನಾನು ನೀರಾವರಿ ಸಚಿವನಾಗಿದ್ದಾಗ 5.5 ಮೀಟರ್‌ಗಳಷ್ಟು ಕಾಲುವೆ ನಿರ್ಮಾಣವಾಯಿತು. ಆದರೆ, ಕಾಂಗ್ರೆಸ್‌ ಪುಣ್ಯಾತ್ಮರು ಏನು ಮಾಡಿದರು? ಸೋನಿಯಾ ಗಾಂಧಿ ಅವರು ಗೋವಾದಲ್ಲಿ …

Read More »

ಧಾರವಾಡ ರಂಗಾಯಣದಿಂದ ಕಿತ್ತೂರು ಚನ್ನಮ್ಮ ನಾಟಕ: ವೇದಿಕೆ ಮೇಲೆ ಆನೆ, ಒಂಟೆ, ಕುದುರೆ

ಧಾರವಾಡ: ಬ್ರಿಟಿಷರ ವಿರುದ್ಧ ರಣಕಹಳೆ ಮೊಳಗಿಸಿದ ವೀರ ರಾಣಿ ಕಿತ್ತೂರು ಚನ್ನಮ್ಮ ಅವರ ಜೀವನ ಆಧಾರಿತ ನಾಟಕವನ್ನು ಧಾರವಾಡ ರಂಗಾಯಣ ಸಿದ್ಧಪಡಿಸಿದ್ದು, ಡಿ.24ರಿಂದ ಪ್ರದರ್ಶನಗೊಳ್ಳುತ್ತಿದೆ. ಸುಮಾರು ಮೂರೂವರೆ ತಾಸು ಸುದೀರ್ಘ ನಾಟಕದಲ್ಲಿ ಸುಮಾರು 150 ಕಲಾವಿದರು ನಟಿಸುತ್ತಿರುವುದು ಹಾಗೂ ಆನೆ, ಒಂಟೆ, ಕುದುರೆ, ಹಸುಗಳ ಬಳಕೆ ಮೂಲಕ ಬೃಹತ್ ರಂಗ ಸಜ್ಜಿಕೆಯ ನಾಟಕ ಈಗಾಗಲೇ ಸಾಕಷ್ಟು ಚರ್ಚೆಯಲ್ಲಿದೆ. ರಂಗ ತಾಲೀಮು ಭರದಿಂದ ನಡೆಯುತ್ತಿದ್ದು 250ಕ್ಕೂ ಹೆಚ್ಚು ಜನ ಇದರಲ್ಲಿ ಭಾಗಿಯಾಗಿದ್ದಾರೆ. …

Read More »