ಬೆಂಗಳೂರು: ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಎರಡು ದಿನಗಳಿಂದ ಮಳೆ ಅಬ್ಬರ ಮುಂದುವರೆದಿದ್ದು ಸೆಪ್ಟೆಂಬರ್ 3 ರಿಂದ 5 ರವರೆಗೆ ಒಳನಾಡಿನ ಜಿಲ್ಲೆಗಳು ಮತ್ತು ಕರಾವಳಿ ಪ್ರದೇಶದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಮುಂದಿನ ಎರಡು ದಿನಗಳ ಕಾಲ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅದೇ ರೀತಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿತ್ರದುರ್ಗ, ಕೋಲಾರ, ಮಂಡ್ಯ, …
Read More »ಸಾಲದ ಸುಳಿಯಲ್ಲಿ ಕರ್ನಾಟಕ
ಬೆಂಗಳೂರು: ಆರ್ಥಿಕ ಸಂಕಷ್ಟಕ್ಕೆ ‘ದೇವರ ಆಟ’ದ ಕಾರಣ ಮುಂದು ಮಾಡಿ ಕೊಡಲೇಬೇಕಾಗಿದ್ದ ಜಿಎಸ್ಟಿ ಪರಿಹಾರ ಮೊತ್ತವನ್ನು ಕೇಂದ್ರ ಸರ್ಕಾರ ಕೊಡದೇ ಕೈ ಎತ್ತಿದ್ದರಿಂದ ಕರ್ನಾಟಕದ ಒಟ್ಟಾರೆ ಸಾಲ ₹4 ಲಕ್ಷ ಕೋಟಿ ದಾಟುವ ಸಾಧ್ಯತೆ ಇದೆ. ಈ ಹಿಂದಿನ ನಾಲ್ಕು ತಿಂಗಳ ಲೆಕ್ಕದಲ್ಲಿ ಕರ್ನಾಟಕಕ್ಕೆ ₹13,764 ಕೋಟಿ ನಷ್ಟ ಪರಿಹಾರ ಹಾಗೂ ಸೆಸ್ ರೂಪದಲ್ಲಿ ಸುಮಾರು ₹6,965 ಕೋಟಿ ಬರಬೇಕಿದೆ. ಜಿಎಸ್ಟಿ ಕಾಯ್ದೆ ಅನುಸಾರ ಈ ಪರಿಹಾರವನ್ನು ಕೊಡುವುದು ಕೇಂದ್ರದ ಸಂವಿಧಾನಾತ್ಮಕ …
Read More »ಪ್ರಧಾನಿ ನರೇಂದ್ರ ಮೋದಿ ಟ್ವಿಟರ್, ವೆಬ್ಸೈಟ್ ಹ್ಯಾಕ್….!
ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರ ವೈಯಯಕ್ತಿಕ ವೆಬ್ ಸೈಟ್ ಹಾಗೂ ಟ್ವೀಟರ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ ಎಂದು ವರದಿಯಾಗಿದೆ. 2.5 ಮಿಲಿಯನ್ ಅನುಯಾಯಿಗಳನ್ನು ಹೊಂದಿರುವ ಪ್ರಧಾನಿ ನರೇಂದ್ರ ಮೋದಿಯವರ ಟ್ವೀಟರ್ ಖಾತೆಯನ್ನು ಇಂದು ಮುಂಜಾನೆ 3.15 ರ ಸುಮಾರಿಗೆ ಹ್ಯಾಕ್ ಮಾಡಲಾಗಿದೆ ಎಂದು ವರದಿಯಾಗಿದೆ. ಈ ಕುರಿತು ಮಾಹಿತಿ ನೀಡಿರುವ ಟ್ವೀಟರ್, ಗುರುವಾರ ಪ್ರಧಾನಿ ನರೇಂದ್ರ ಮೋದಿಯವರ ಟ್ವೀಟರ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ ಎಂದು ತಿಳಿಸಿದೆ. *ಹೆಚ್ಚಿನ ಸುದ್ದಿಗಾಗಿ …
Read More »ನಿಸ್ವಾರ್ಥ ಭಕ್ತಿಯಿಂದ ಫಲ
ಡಾ.ಅಲ್ಲಮಪ್ರಭು ಸ್ವಾಮೀಜಿ, ನಾಗನೂರ ರುದ್ರಾಕ್ಷಿಮಠ, ಬೆಳಗಾವಿ —– ಹರಿದ ಗೋಣಿಯಲೊಬ್ಬ ಕಳವೆಯ ತುಂಬಿದ ಇರುಳೆಲ್ಲ ನಡೆದನಾ ಸುಂಕಕಂಜಿ ಕಳವೆಯೆಲ್ಲ ಹೋಗಿ ಬರಿ ಗೋಣಿ ಉಳಿಯಿತ್ತು ಅಳಿಮನದವನ ಭಕ್ತಿ ಇಂತಾಯಿತ್ತು ರಾಮನಾಥ ಮಾನವನ ಜೀವನ ತುಂಬಾ ಸೂಕ್ಷ್ಮವಾದುದು. ಆತನ ಬದುಕಿನಲ್ಲಿ ನಿಷ್ಠೆಯ ಸೇವೆ, ಪ್ರಾಮಾಣಿಕತೆ, ತ್ಯಾಗಕ್ಕೆ ಬೆಲೆ ಇದ್ದೇ ಇರುತ್ತದೆ. ಒಬ್ಬ ವ್ಯಕ್ತಿಯು ಹರಿದ ಗೋಣಿ ಚಿಲದಲ್ಲಿ ಭತ್ತವನ್ನು ತುಂಬಿಟ್ಟಿದ್ದ. ಭತ್ತವನ್ನು ಹೊಲದಿಂದ ಹಗಲಿನಲ್ಲಿ ಮನೆಗೆ ಸಾಗಿಸಿದರೆ ತೆರಿಗೆಯವರು ಸುಂಕ ವಿಧಿಸಬಹುದು …
Read More »ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಲಘು ವಾಹನ ಸಂಚಾರಕ್ಕೆ ಅವಕಾಶ
ಚಿಕ್ಕಮಗಳೂರು. ರಾಷ್ಟ್ರೀಯ ಹೆದ್ದಾರಿ-73 (ಹಳೆಯ ಸಂಖ್ಯೆ-234)ರ ಮಂಗಳೂರು-ವಿಲ್ಲಂಪುರ ರಸ್ತೆಯ 86.200 ರಿಂದ 90.200ಕಿಮೀ ಕೊಟ್ಟಿಗೆಹಾರದವರೆಗಿನ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ದಿನದ 24 ಗಂಟೆ ಲಘುವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಹೆದ್ದಾರಿ ವಿಭಾಗದ ಕಾರ್ಯಪಾಲಕ ಅಭಿಯಂತರರ ವರದಿಯನ್ವಯ ಪ್ರಸ್ತುತ ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ಮಳೆಯ ಪ್ರಮಾಣ ಕ್ಷೀಣಿಸಿರುವುದರಿಂದ ವಾಹನಗಳ ಸುಗಮ ಸಂಚಾರ ಹಾಗೂ ಪ್ರಯಾಣಿಕರ ಹಿತದೃಷ್ಟಿಯಿಂದ ಕೇಂದ್ರ ಮೋಟಾರು ವಾಹನ ಕಾಯ್ದೆ ಅನ್ವಯ ರಾಷ್ಟ್ರೀಯ ಹೆದ್ದಾರಿ-73ರ ಮಂಗಳೂರು-ತುಮಕೂರು ರಸ್ತೆಯ 86.200ಕಿಮೀ …
Read More »ರಸ್ತೆ ಬದಿ ನಿಂತ ಲಾರಿಗಳು, NH 4 ಸರ್ವಿಸ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್
ನೆಲಮಂಗಲ: ವಾರಾಂತ್ಯದಲ್ಲಿ ನಗರದಿಂದ ತಮ್ಮ ಊರುಗಳತ್ತ ತೆರಳುವವರ ಸಂಖ್ಯೆ ಹೆಚ್ಚಾಗಿದ್ದರಿಂದ ಟ್ರಾಫಿಕ್ ಸಮಸ್ಯೆ ಎದುರಿಸುವ ಪ್ರಯಾಣಿಕರು, ಈಗ ಮತ್ತೊಂದು ಕಾರಣಕ್ಕೆ ಟ್ರಾಫಿಕ್ನಲ್ಲಿ ಗಂಟೆಗಳ ಕಾಲ ನಿಲ್ಲುವ ಪರಿಸ್ಥಿತಿ ಇಂದು ಎದುರಾಗಿದೆ. ಬೆಂಗಳೂರು ಉತ್ತರ ತಾಲೂಕಿನ ಅಡಕಮಾರನಹಳ್ಳಿಯ ರಾಷ್ಟ್ರೀಯ ಹೆದ್ದಾರಿ 4ರ ಸರ್ವಿಸ್ ರಸ್ತೆಯ ಬದಿಯಲ್ಲಿ ಲಾರಿಗಳನ್ನು ಸಾಲಾಗಿ ನಿಲ್ಲಿಸಿದ್ದಾರೆ. ಈ ಹಿನ್ನೆಲೆಯಿಂದಾಗಿ ಮೊದಲೆ ಚಿಕ್ಕದಾಗಿರುವ ರಸ್ತೆಯಲ್ಲಿ ಲಾರಿಗಳನ್ನು ಸಾಲಾಗಿ ನಿಲ್ಲಿಸಿರುವುದರಿಂದ ವಾಹನ ಚಲಿಸಲಾಗದೆ ಒಂದು ಕಿಲೋಮೀಟರ್ ವರೆಗೆ ಟ್ರಾಫಿಕ್ ಜಾಮ್ …
Read More »ನಾಡಹಬ್ಬ ದಸರಾ ಆಚರಣೆಗೆ ಹೆಚ್ಚಿದ ಒತ್ತಡ: ಸಿಎಂ ಅಧ್ಯಕ್ಷತೆಯಲ್ಲಿ ನಡೆಯಲಿದೆ ಸಭೆ
ಬೆಂಗಳೂರು: ಕರೊನಾ ಸಾಂಕ್ರಾಮಿಕ ರೋಗದ ಕಾರಣ ಮುಂದಿಟ್ಟು ನಾಡಹಬ್ಬ ಮೈಸೂರು ದಸರಾ ಆಚರಣೆ ಕೈಬಿಡಬಾರದು ಎಂಬ ಒತ್ತಡ ಹೆಚ್ಚುತ್ತಿದೆ. ಮೈಸೂರು ದಸರಾ ನಡೆಯುವುದೇ ಇಲ್ಲವೇ ಎಂಬ ಸಂದೇಹ ಹೆಚ್ಚಾದ ಕಾರಣ ಈ ಒತ್ತಡ ಹೆಚ್ಚಾಗಿದೆ. ಈ ನಡುವೆ, ಕಳೆದ ತಿಂಗಳು ಕಾವೇರಿ ನದಿಗೆ ಬಾಗಿನ ಸಮರ್ಪಿಸಲು ತೆರಳುವ ಸಂದರ್ಭದಲ್ಲೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ದಸರಾ ಆಚರಣೆ ಬಗ್ಗೆ ತೀರ್ಮಾನಿಸಲು ಚಿಂತನೆ ನಡೆದಿದೆ. ಶೀಘ್ರವೇ ಸಭೆ ನಡೆಸುವುದಾಗಿ ತಿಳಿಸಿದ್ದರು. ಈ …
Read More »ಸರ್ಕಾರಿ ಗ್ಯಾರಂಟಿ ಇರುವ ಈ ಖಾತೆ ಯಲ್ಲಿ ಕೇವಲ ರೂ.500 ಉಳಿತಾಯ ಮಾಡಿ ಲಕ್ಷಾಂತರ ಗಳಿಕೆ ಮಾಡಿ
ನವದೆಹಲಿ: ನೀವು ಹಣ ಹೂಡಿಕೆಗಾಗಿ ಯಾವುದಾದರೊಂದು ಯೋಜನೆಯ ಹುಡುಕಾಟದಲ್ಲಿದ್ದಾರೆ ಸಾರ್ವಜನಿಕ ಭವಿಷ್ಯ ನಿಧಿ (PPF) ಒಂದು ಉತ್ತಮ ಆಯ್ಕೆಯಾಗಿದೆ. ಪಿಪಿಎಫ್ ಖಾತೆಯನ್ನು ಕೇವಲ 500 ರೂಪಾಯಿಗಳೊಂದಿಗೆ ತೆರೆಯಬಹುದು. ಆರ್ಥಿಕ ವರ್ಷವೊಂದರಲ್ಲಿ ಈ ಖಾತೆಯಲ್ಲಿ ಕನಿಷ್ಠ 500 ರೂಪಾಯಿ ಠೇವಣಿ ಇಡಬೇಕಾಗುತ್ತದೆ. ಒಂದು ವರ್ಷದಲ್ಲಿ ಗರಿಷ್ಠ 1.5 ಲಕ್ಷ ರೂಪಾಯಿಗಳನ್ನು ಜಮಾ ಮಾಡಬಹುದು. ಪ್ರಸ್ತುತ, ಇದು ಶೇಕಡಾ 7.1 ರಷ್ಟು ಬಡ್ಡಿಯನ್ನು ನೀಡುತ್ತಿದ್ದು, ಇದು ಬ್ಯಾಂಕ್ ಸ್ಥಿರ ಠೇವಣಿಗಿಂತ ಹೆಚ್ಚಾಗಿದೆ. ಪೋಸ್ಟ್ ಆಫೀಸ್ …
Read More »ಕಿಚ್ಚನಿಗೆ ಬರ್ತ್ ಡೇ ಸಂಭ್ರಮ. 47ನೇ ವಸಂತಕ್ಕೆ ಕಾಲಿಡುತ್ತಿರುವ ನಟ ಸುದೀಪ್
ನಟ ಕಿಚ್ಚ ಸುದೀಪ್ ಅವರಿಗೆ ಇಂದು ಜನ್ಮದಿನದ ಸಂಭ್ರಮ. 47ನೇ ವಸಂತಕ್ಕೆ ಕಾಲಿಡುತ್ತಿರುವ ಕಿಚ್ಚ ಸುದೀಪ್ ಅವರಿಗೆ ಚಿತ್ರೋದ್ಯಮದಿಂದ, ಅಭಿಮಾನಿ ಗಳಿಂದ, ವಿವಿಧ ಕ್ಷೇತ್ರಗಳ ಗಣ್ಯರಿಂದ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಇನ್ನು ಪ್ರತಿವರ್ಷ ತಮ್ಮ ನೆಚ್ಚಿನ ನಟನ ಜನ್ಮದಿನವನ್ನು ಸಾರ್ವಜನಿಕವಾಗಿ, ಅದ್ಧೂರಿಯಾಗಿ ಆಚರಿಸಿ ಕೊಂಡು ಬರುತ್ತಿದ್ದ ಕಿಚ್ಚನ ಅಭಿಮಾನಿಗಳ ಬರ್ತ್ಡೇ ಸಂಭ್ರಮಾ ಚರಣೆಗೆ ಈ ಬಾರಿ ಕೋವಿಡ್ ಬ್ರೇಕ್ ಹಾಕಿದೆ. ಹೌದು, ಕೋವಿಡ್ ಲಾಕ್ಡೌನ್ನ ಕೆಲ ನಿಯಮಗಳು ಇನ್ನೂ …
Read More »ಇಂಡಿಯನ್ ಎಕ್ಸ್ ಪ್ರೆಸ್: ಎನ್ ಜಿ ಓಗೆ ಆಯಂಬುಲೆನ್ಸ್ ದಾನ ನೀಡಿದ ಶಾಸಕ ಅನಿಲ್ ಬೆನಕೆ
ಬೆಳಗಾವಿ: ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಮಾಡಿದ ವರದಿ ಹಿನ್ನೆಲೆಯಲ್ಲಿ ಬೆಳಗಾವಿ ಉತ್ತರ ಶಾಸಕ ಅನಿಲ್ ಬೆನಕೆ ಹೆಲ್ಪ್ ಫಾರ್ ನೀಡಿ ಎಂಬ ಎನ್ ಜಿ ಓಗೆ ಆಯಂಬುಲೆನ್ಸ್ ಕೊಡುಗೆ ನೀಡಿದ್ದಾರೆ. ಆಗಸ್ಟ್ 31 ರಂದು ಕೋವಿಡ್ ಸ್ಪೆಷಲ್ ವರ್ಕರ್, ಎಂಬ ಶೀರ್ಷಿಕೆಯಡಿ ವರದಿ ಪ್ರಕಟವಾಗಿತ್ತು. ಈ ವೇಳೆ ಎನ್ ಜಿ ಕಾರ್ಯಕರ್ತ ಸುರೇಂದತ್ರ ಅಂಗೋಲ್ಕರ್ ಆಯಂಬುಲೆನ್ಸ್ ಬೇಕೆಂದು ಮನವಿ ಮಾಡಿದ್ದರು. ಶಾಸಕ ಅನಿಲ್ ಬೆನಕೆ ಶಾಸಕರ ನಿಧಿಯನ್ನು …
Read More »