Breaking News

new delhi

ಖ್ಯಾತ ಚಿತ್ರ ನಟ ರಮೇಶ ಬುಧವಾರ ಬೆಳಗಾವಿಯ ಸುವರ್ಣಸೌಧಕ್ಕೆ ಬರ್ತಾರೆ…..!!

ಬೆಳಗಾವಿ- ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಘಟಿಕೋತ್ಸವ ನಾಡಿದ್ದು ಬುಧವಾರ ನಡೆಯಲಿದ್ದು ಡಾಕ್ಟರೇಟ್ ಪದವಿ ಸ್ವೀಕರಿಸಲು ಖ್ಯಾತ ಕನ್ನಡ ಚಿತ್ರನಟ ರಮೇಶ್ ಅರವಿಂದ ಬುಧವಾರ ಬೆಳಗಾವಿಗೆ ಬರ್ತಾರೆ..   ಸೆ.14ರಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯ 10ನೇ ಘಟಿಕೋತ್ಸವ ನಡೆಲಿದೆ.ಬೆಳಗಾವಿಯಲ್ಲಿ ಆರ್.ಸಿ.ಯು ಕುಲಪತಿ ಪ್ರೋ.ಎಂ ರಾಮಚಂದ್ರ ಗೌಡ ಮಾಧ್ಯಮದಗೋಷ್ಠಿ ನಡೆಸಿ ಮಾಹಿತಿ ನೀಡಿದ್ದು.ಬೆಳಗಾವಿ ಸುವರ್ಣ ವಿಧಾನ ಸೌಧದಲ್ಲಿ ಘಟಿಕೋತ್ಸವ ನಡೆಯಲಿದೆ.ಇದೇ ತಿಂಗಳು 14ರಂದು ಮಧ್ಯಾಹ್ನ 12.30ಕ್ಕೆ ಘಟಿಕೋತ್ಸವ ಸಮಾರಂಭ ನಡೆಯಲಿದೆ. ರಾಜಪಾಲ …

Read More »

ಚಿನ್ನ,ಎಮ್ಮೆ, ಕದ್ದವರು,ಪೋಲೀಸರ ಬಲೆಗೆ

ಬೆಳಗಾವಿ-ಮಹಿಳೆಯರ ಚಿನ್ನಾಭರಣ,ಮನೆ ಮುಂದೆ ಕಟ್ಟಿದ ಎಮ್ಮೆಗಳನ್ನು ದೋಚುತ್ತಿದ್ದ ಖತರ್ನಾಕ್ ಕಳ್ಳರ ಗ್ಯಾಂಗ್ ಹಾರುಗೇರಿ ಠಾಣೆಯ ಪೋಲೀಸರ ಬಲೆಗೆ ಬಿದ್ದಿದೆ.   ಹಾರೂಗೇರಿ ಮುಗುಳಖೋಡ,ತೇರದಾಳ ಸೇರಿದಂತೆ ಹಲವಾರು ಪ್ರದೇಶಗಳಲ್ಲಿ ಮಹಿಳೆಯರ ಕೊರಳಲ್ಲಿದ್ದ ಚಿನ್ನಾಭರಣ ಎಮ್ಮೆ ಕಳುವು ಮಾಡಿ ಮಾರಾಟ ಮಾಡುತ್ತಿದ್ದ ಹಲವಾರು ಕಳ್ಳತನದ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಒಟ್ಟು ಐದು ಜನ ಆರೋಪಿಗಳನ್ನು ಹಾರೂಗೇರಿ ಪೋಲೀಸರು ಬಂಧಿಸಿದ್ದಾರೆ.   ಕಳವು ಮಾಡಲಾಗಿದ್ದ,49 ಗ್ರಾಂ ಚಿನ್ನಾಭರಣ,ಎರಡು ಎಮ್ಮೆ,ಒಂದು ಗೂಡ್ಸ್ ವಾಹನ ಸೇರಿದಂತೆ ಆರು ಲಕ್ಷಕ್ಕೂ …

Read More »

ಭೀಕರ ಬಸ್ ಅಪಘಾತ;7 ಜನ ಸ್ಥಳದಲ್ಲೇ ದುರ್ಮರಣ

ಛತ್ತೀಸ್ ಗಢ: ನಿಂತಿದ್ದ ಟ್ರಕ್ ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ 7 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ.   ಛತ್ತೀಸ್ ಗಢದ ಮದಾಯಿ ಘಾಟ್ ನಲ್ಲಿ ಇಂದು ಬೆಳಿಗ್ಗೆ ಈ ಅಪಘಾತ ಸಂಭವಿಸಿದ್ದು, ಬಸ್ ಕೊರ್ಬಾ ದಿಂದ ರಾಯಪುರಕ್ಕೆ ತೆರಳುತ್ತಿತ್ತು. ಈ ವೇಳೆ ನಿಂತಿದ್ದ ಟ್ರಕ್ ಗೆ ಬಸ್ ಡಿಕ್ಕಿ ಹೊಡೆದಿದೆ ಎಂದು ಕೊರ್ಬಾ ಪೊಲೀಸ್ ಅಧೀಕ್ಷಕ ಸಂತೋಷ್ ತಿಳಿಸಿದ್ದಾರೆ.   ಎದುರಿನಿಂದ …

Read More »

ಐಎಎಸ್ ಅಧಿಕಾರಿ ವಿರುದ್ಧ 1 ಕೋಟಿ ಮಾನನಷ್ಟ ಮೊಕದ್ದಮೆ ಹೂಡಿದ ಜೆಡಿಎಸ್ ಶಾಸಕ

ಮೈಸೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಅವರ ಜಟಾಪಟಿ ಮುಂದುವರೆದಿದ್ದು, ಇದೀಗ ಶಾಸಕರು ರೋಹಿಣಿ ಸಿಂಧೂರಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.   ಶಾಸಕ ಸಾ.ರಾ.ಮಹೇಶ್ ಭೂ ಅಕ್ರಮ ಮಾಡಿದ್ದಾರೆ. ಎಂಬ ರೋಹಿಣಿ ಸಿಂಧೂರಿ ಅವರ ಆಡಿಯೋ ವೈರಲ್ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಶಾಸಕರು, ನಾನು ಯಾವುದೇ ಭೂ ಕಬಳಿಕೆ ಮಾಡಿಲ್ಲ. ಆದರೂ ರೋಹಿಣಿ ಸಿಂಧೂರಿ ನನ್ನ ವಿರುದ್ಧ ಆರೋಪ ಮಾಡಿದ್ದಲ್ಲದೇ …

Read More »

ಸಿದ್ದರಾಮಯ್ಯ ವಿರುದ್ಧ ವಿವಾದಾತ್ಮಕವಾಗಿ ವಾಗ್ದಾಳಿ ನಡೆಸಿದ ಸಿ.ಟಿ.ರವಿ

ಬೆಂಗಳೂರು: ಸಿ.ಟಿ.ರವಿ ಲೂಟಿ ರವಿ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಗೆ ತಿರುಗೇಟು ನೀಡುವ ಬರದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದು, ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.   ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ.ರವಿ, ಚಿಕ್ಕಮಗಳೂರಿನಲ್ಲಿ ಸಿ.ಟಿ.ರವಿಯನ್ನು ಲೂಟಿ ರವಿ ಎಂದು ಕರೆಯುತ್ತಾರೆ. ಹಾಗಂತ ನಾನು ಹೇಳುತ್ತಿಲ್ಲ. ಜನ ಹೇಳುತ್ತಾರೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿ.ಟಿ.ರವಿ, ಇವರೇನು ಸತ್ಯ ಹರಿಶ್ಚಂದ್ರನ ಮೊಮ್ಮಕ್ಕಳಾ? …

Read More »

ಪಶ್ಚಿಮಘಟ್ಟ ಪ್ರದೇಶ ಸೇರಿ ಬೆಳಗಾವಿ ಜಿಲ್ಲೆ ಸೇರಿ ಜಿಲ್ಲಾದ್ಯಂತ 17ಸೇತುವೆಗಳು ಮುಳುಗಡೆ 35 ಅಧಿಕ ಮನೆ ಕುಸಿತ

ಬೆಳಗಾವಿ: ಕಳೆದ ಮೂರು ದಿನಗಳಿಂದ ಗಡಿ ಜಿಲ್ಲೆ ಬೆಳಗಾವಿ ಸೇರಿ ಪಶ್ಚಿಮಘಟ್ಟ ಪ್ರದೇಶದಲ್ಲಿ ನಿರಂತರ ಮಳೆಗೆ‌ ಕುಂದಾನಗರಿ ಜನರ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಪ್ರಾಣಹಾನಿ ಮತ್ತು ಆಸ್ತಿಪಾಸ್ತಿಗಳಿಗೆ ಹಾನಿಯುಂಟಾಗಿದ್ದು, 17ಸೇತುವೆಗಳು ಮುಳುಗಡೆಯಾಗಿದ್ದಲ್ಲದೇ 36 ಮನೆಗಳ ನೆಲಸಮವಾಗಿವೆ. ಪಶ್ಚಿಮಘಟ್ಟ ಪ್ರದೇಶ ಸೇರಿ ಬೆಳಗಾವಿ ಜಿಲ್ಲೆ ಸೇರಿ ಜಿಲ್ಲಾದ್ಯಂತ ಶನಿವಾರ ಸಂಜೆಯಿಂದಲೇ ಸುರಿಯುತ್ತಿರುವ ಮಳೆಗೆ ಘಟಪ್ರಭಾ, ಮಲಪ್ರಭಾ ಹಾಗೂ ಹಿರಣ್ಯಕೇಶಿ ನದಿಗಳಲ್ಲಿ ನೀರಿನ ಒಳಹರಿವು ಹೆಚ್ಚಳವಾಗಿದೆ. ಘಟಪ್ರಬಾ ನದಿಯಲ್ಲಿ ಭಾನುವಾರ ಸಂಜೆಯ ವೇಳೆಗೆ …

Read More »

ನಂದಿನಿ” ಹಾಲು ಪ್ರತಿ ಲೀ.ಗೆ 3 ರೂ. ಹೆಚ್ಚಳ…?*

ಬೆಂಗಳೂರು : ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡಲು ರೈತರ ಆರ್ಥಿಕಾಭಿವೃದ್ಧಿಗೆ ಪ್ರತಿ ಲೀಟರ್ ಹಾಲಿಗೆ 3 ರೂ. ಹೆಚ್ಚಳ ಮಾಡಲು ಕೆಎಂಎಫ್ ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಕಳೆದ ಶುಕ್ರವಾರದಂದು ನಗರದ ಖಾಸಗಿ ಹೊಟೇಲ್‍ನಲ್ಲಿ ಜರುಗಿದ ಕೆಎಂಎಫ್‍ನ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಈ ಬಗ್ಗೆ ಸರ್ವಾನುಮತದ ನಿರ್ಣಯ ಕೈಗೊಂಡಿದ್ದು, ಕೆಎಂಎಫ್‍ನ ಎಲ್ಲ 14 ಜಿಲ್ಲಾ ಹಾಲು ಒಕ್ಕೂಟಗಳು ಹಾಲಿನ ದರ ಹೆಚ್ಚಳ ಮಾಡುವುದರ ಬಗ್ಗೆ ಒಲುವು ತೋರಿವೆ ಎಂದು ಹೇಳಲಾಗುತ್ತಿದೆ. …

Read More »

ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾದ ಪ್ರದೀಪ ರಜಪೂತಗೆ ಎಸ್ ಡಿ ಎಮ್ ಸಿ ವತಿಯಿಂದ ಸತ್ಕಾರ 

  ಕೊಟಬಾಗಿ:ಸ್ಥಳೀಯ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆ ದಾಸರಟ್ಟಿ ಈ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಇವರ ಪ್ರತಿಭೆ ಯನ್ನು ಗುರುತಿಸಿ 2022-23 ನೇ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷಕ ಪ್ರದೀಪ ರಜಪೂತ ರವರಿಗೆ ಶಾಲೆಯ ಎಸ್ ಡಿ ಎಮ್ ಸಿ ಸಿಬ್ಬಂದಿ ವರ್ಗದವರು,ಶಿಕ್ಷಕ ಬಳಗ, ಹಾಗೂ ಊರಿನ ಗ್ರಾಮಸ್ಥರು ಸತ್ಕಾರ ಸಮಾರಂಭ ಕಾರ್ಯಕ್ರಮ ಶಾಲೆಯಲ್ಲಿ ಆಯೋಜಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ …

Read More »

ಸರ್ಕಾರದ ಸೌಲಭ್ಯ ಸದುಪಯೋಗ ಪಡಿಸಿಕೊಳ್ಳಿ: ವಿಧಾನ ಪರಿಷತ್ ಸದಸ್ಯ ಲಖನ್ ಜಾಕಿರಹೊಳಿ

ಗೋಕಾಕ: ” ಬಡ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಸರ್ಕಾರ ಅನೇಕ ಸೌಲಭ್ಯಗಳನ್ನು ಕಲ್ಪಿಸಿದ್ದು, ಇದರ ಸದುಪಯೋಗ ಪಡೆದುಕೊಂಡು ಜೀವನ ಯಶಸ್ಸು ಕಾಣಬೇಕು” ಎಂದು ವಿಧಾನ ಪರಿಷತ್ ಸದಸ್ಯ ಲಖನ್ ಜಾಕಿರಹೊಳಿ ಅವರು ಹೇಳಿದರು.   ನಗರದ ಗೃಹ ಕಚೇರಿಯಲ್ಲಿ ವಿಧಾನ ಪರಿಷತ್ ಸದಸ್ಯ ಲಖನ್ ಜಾಕಿರಹೊಳಿ ಅವರು ಕಟ್ಟಡ ಕಾರ್ಮಿಕ ಬಡಮಕ್ಕಳಿಗೆ ಸಹಾಯಧನ ಚೆಕ್‌ ವಿತರಿಸಿ, ಮಾತನಾಡಿದ ಅವರು,   ಕೂಲಿ ಕಾರ್ಮಿಕರ ಮಕ್ಕಳು ಇನ್ನು ಹೆಚ್ಚಿನ ಉನ್ನತ ಮಟ್ಟದಲ್ಲಿ ವಿದ್ಯಾಭ್ಯಾಸ …

Read More »

ಉಮೇಶ ಕತ್ತಿ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ*

*ಗೋಕಾಕ:* ಅರಣ್ಯ ಹಾಗೂ ಆಹಾರ ಸಚಿವರಾಗಿದ್ದ ಉಮೇಶ ಕತ್ತಿ ಅವರ ನಿಧನದ ಹಿನ್ನೆಲೆಯಲ್ಲಿ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕತ್ತಿಯವರ ಬೆಲ್ಲದ ಬಾಗೇವಾಡಿ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಗುರುವಾರದಂದು ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿರುವ ನಿವಾಸದಲ್ಲಿ ದಿ.ಉಮೇಶ ಕತ್ತಿ ಅವರ ಭಾವಚಿತ್ರಕ್ಕೆ ನಮನ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮೃತ ಉಮೇಶ ಕತ್ತಿ ಸಹೋದರ ರಮೇಶ ಕತ್ತಿ, …

Read More »