ಬೆಳಗಾವಿ: ಇಲ್ಲಿನ ಕೆಎಲ್ಇ ಶತಮಾನೋತ್ಸವ ಚಾರಿಟಬಲ್ ಆಸ್ಪತ್ರೆಯ ರೋಟರಿ-ಕೆಎಲ್ಇ ಡಯಾಲಿಸಿಸ್ ಕೇಂದ್ರದಲ್ಲಿ ಲಾಕ್ಡೌನ್ ಸಂದರ್ಭದಲ್ಲೂ 100 ಮೂತ್ರಪಿಂಡ ರೋಗಿಗಳಿಗೆ ಡಯಾಲಿಸಿಸ್ ಪ್ರಕ್ರಿಯೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ. ಈ ನಿಟ್ಟಿನಲ್ಲಿ ಈಚೆಗೆ ವೈದ್ಯರ ತಂಡಕ್ಕೆ ಶುಭ ಹಾರೈಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಮೂತ್ರಪಿಂಡ ತಜ್ಞ ಡಾ.ವಿಜಯಕುಮಾರ ಪಾಟೀಲ, ‘ಮೂತ್ರಪಿಂಡ ಕಾಯಿಲೆ ಇರುವ ರೋಗಿಗಳಿಗೆ ಡಯಾಲಿಸಿಸ್ ಕಡ್ಡಾಯವಾಗಿ ಬೇಕಾಗಿರುವ ಚಿಕಿತ್ಸೆಯಾಗಿದೆ. ಕೊರೊನಾ ಸೋಂಕಿನ ಭೀತಿಯ ಸಂದರ್ಭದಲ್ಲಿ ರೋಗಿಗಳು ಹೆದರುವ ಅಗತ್ಯವಿಲ್ಲ. ಸುರಕ್ಷತಾ ನಿಯಮಗಳನ್ನು ಪಾಲಿಸುತ್ತಾ ಧೈರ್ಯವಾಗಿ ಆಸ್ಪತ್ರೆಗೆ …
Read More »ಕರಾವಳಿಯಲ್ಲಿ ಉತ್ತಮ ಮಳೆ
ಬೆಂಗಳೂರು: ಕರಾವಳಿ ಭಾಗದ ಜಿಲ್ಲೆಗಳು ಹಾಗೂ ಬೆಳಗಾವಿ, ಧಾರವಾಡ ಜಿಲ್ಲೆಗಳ ಕೆಲವೆಡೆ ಶನಿವಾರ ಉತ್ತಮ ಮಳೆಯಾಗಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬೆಳಿಗ್ಗೆ ಉತ್ತಮ, ಮಧ್ಯಾಹ್ನದ ನಂತರ ತುಂತುರು ಮಳೆಯಾಗಿದೆ. ದಕ್ಷಿಣ ಕನ್ನಡದಲ್ಲಿ ಒಟ್ಟಾರೆ 5 ಸೆಂ.ಮೀ. ದಾಖಲಾಗಿದೆ. ಹವಾಮಾನ ಇಲಾಖೆಯು ಸಮುದ್ರದಲ್ಲಿ ಗಾಳಿ ಅಬ್ಬರ ಹೆಚ್ಚಿರಲಿದೆ ಎಂದು ಎಚ್ಚರಿಸಿದೆ. ಚಿಕ್ಕಮಗಳೂರಿನ ಕೆಲ ಭಾಗಗಳಲ್ಲಿ ಸಾಧಾರಣ ಮಳೆಯಾಗಿದೆ. ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಮಳೆಯಾಗಿದೆ. …
Read More »ಸದ್ಯ 3456 ಸೋಂಕಿತರು…..
ಬೆಳಗಾವಿ: ಕೋವಿಡ್ ಮಹಾಮಾರಿ ದಿನದಿಂದ ದಿನಕ್ಕೂ ಹೆಚ್ಚಾಗುತ್ತಿದ್ದು, ಶನಿವಾರ ಒಂದೇ ದಿನ ಮತ್ತೆ ದ್ವಿಶತಕ ದಾಟಿದೆ. 219 ಸೋಂಕು ಪ್ರಕರಣ ದೃಢಪಟ್ಟಿವೆ. ಒಟ್ಟಾರೆ 3456 ಸೋಂಕಿತರು ಇದ್ದು, ಜತೆಗೆ ನಾಲ್ವರು ಕೋವಿಡ್ ಗೆ ಬಲಿಯಾಗಿದ್ದಾರೆ. ಕೋವಿಡ್ ಸೋಂಕಿತರ ಏರಿಕೆ ಪ್ರಮಾಣ ಹೆಚ್ಚುತ್ತಲೇ ಹೊರಟಿದ್ದು, ಕಳೆದ ಒಂದು ವಾರದಿಂದ ದಿನನಿತ್ಯ 200ರ ಗಡಿ ದಾಟುತ್ತಲೇ ಸಾಗಿದೆ. ಸಾವಿನ ಸಂಖ್ಯೆಯೂ ಇಳಿಕೆ ಆಗಿಲ್ಲ. ಹೆಚ್ಚಿನ ಸೋಂಕಿತರು ಹಳ್ಳಿಗಳಲ್ಲಿ ಪತ್ತೆಯಾಗುತ್ತಿದ್ದಾರೆ. ರಾಯಬಾಗದ 60 ವರ್ಷದ ವ್ಯಕ್ತಿ, …
Read More »ಮರಾಠಿಯಲ್ಲಿ ಮಾತನಾಡಿದ ಸಚಿವ ಶ್ರೀಮಂತ ಪಾಟೀಲ!
ಅಥಣಿ: ತಾಲ್ಲೂಕಿನ ಬಳ್ಳಿಗೇರಿ ಗ್ರಾಮದಲ್ಲಿ ಶ್ರೀ ಬಸವೇಶ್ವರ ಸಕ್ಕರೆ ಕಾರ್ಖಾನೆ ಶನಿವಾರ ನಡೆದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಪಾಲ್ಗೊಂಡಿದ್ದ ಜವಳಿ ಸಚಿವ ಶ್ರೀಮಂತ ಪಾಟೀಲ ಮರಾಠಿಯಲ್ಲಿ ಮಾತನಾಡುವ ಮೂಲಕ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಅವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ‘ನಮ್ಮ ಭಾಗದಲ್ಲಿ ಸಕ್ಕರೆ ಕಾರ್ಖಾನೆ ನಿರ್ಮಾಣವಾಗುತ್ತಿರುವುದು ತುಂಬಾ ಖುಷಿಯಾಗಿದೆ. ಕಾರ್ಖಾನೆಯ ಶೇ 75 ರಷ್ಟು ಹುದ್ದೆಗಳನ್ನು ಸ್ಥಳೀಯರಿಗೆ ನೀಡಬೇಕು’ ಎಂದು ಮರಾಠಿಯಲ್ಲಿ ಮನವಿ ಮಾಡಿದ್ದರು. …
Read More »ಬಕ್ರೀದ್; ಸರಳವಾಗಿ ಆಚರಿಸಿದ ಮುಸ್ಲಿಂ ಬಾಂಧವರು
ಬೆಳಗಾವಿ: ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಶನಿವಾರ ಮುಸ್ಲಿಂ ಬಾಂಧವರು ಬಕ್ರೀದ್ ಹಬ್ಬವನ್ನು ಸರಳವಾಗಿ ಆಚರಿಸಿದರು. ಪ್ರತಿವರ್ಷ ಈದ್ಗಾ ಮೈದಾನಗಳಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಗುತ್ತಿತ್ತು. ಆದರೆ, ಈ ಸಲ ಕೋವಿಡ್ ಹಿನ್ನೆಲೆಯಲ್ಲಿ ಸಾಮೂಹಿಕ ಪ್ರಾರ್ಥನೆ ನಿರ್ಬಂಧಿಸಲಾಗಿತ್ತು. ಹಾಗಾಗಿ, ಮಸೀದಿಗಳಲ್ಲಿ ಹಾಗೂ ಮನೆಗಳಲ್ಲಿ ಪರಸ್ಪರ ಅಂತರ ಕಾಪಾಡಿಕೊಂಡು ಪ್ರಾರ್ಥನೆ ಸಲ್ಲಿಸಿದರು. ಅಡುಗೆ ಕೂಡ ಸರಳವಾಗಿತ್ತು. ಪ್ರತಿವರ್ಷ ಹೊಸ ಉಡುಗೆ ತೊಟ್ಟು ಹಬ್ಬ ಆಚರಿಸುತ್ತಿದ್ದ ಆ ಸಂಭ್ರಮ ಕಾಣಲಿಲ್ಲ. ಪ್ರತಿ ವರ್ಷ ತಮ್ಮ ನೆಂಟರು ಹಾಗೂ …
Read More » ತಿಂಗಳ ಪ್ರಯಾಣಿಕರ ಸಂಖ್ಯೆಯಲ್ಲಿ 2ನೇ ಸ್ಥಾನಕ್ಕೇರಿದ ಬೆಳಗಾವಿ ವಿಮಾನ ನಿಲ್ದಾಣ
ಬೆಳಗಾವಿ: ಜೂನ್ ತಿಂಗಳ ವಿಮಾನ ಪ್ರಯಾಣದ ಮಾಹಿತಿಯನ್ನ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ರಾಜ್ಯದಲ್ಲಿನ ಪ್ರಯಾಣಿಕರ ಸಂಖ್ಯೆಯ ವಿಚಾರದಲ್ಲಿ ಬೆಳಗಾವಿ ವಿಮಾನ ನಿಲ್ದಾಣ 2ನೇ ಸ್ಥಾನಕ್ಕೇರಿದೆ ಈ ಮೂಲಕ ಬೆಳಗಾವಿ, ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನೇ ಹಿಂದಿಕ್ಕಿದೆ. ಬೆಂಗಳೂರು ಮೊದಲನೇ ಸ್ಥಾನದಲ್ಲಿದ್ದು ನಂತರದ ಸ್ಥಾನವನ್ನ ಬೆಳಗಾವಿ ಪಡೆದುಕೊಂಡಿದೆ. ಜೂನ್ ತಿಂಗಳಲ್ಲಿ ಬೆಳಗಾವಿಯಿಂದ 391 ವಿಮಾನಗಳ ಹಾರಾಟವಾಗಿದ್ದು, ಒಟ್ಟು 10,224 ಪ್ರಯಾಣಿಕರು ಸಂಚಾರ ಮಾಡಿದ್ದಾರೆ. ಇನ್ನು …
Read More »ಕರೊನಾ ಕೇಸ್: ಸಕ್ರಾ ಸೇರಿ ಐದು ಆಸ್ಪತ್ರೆಗಳ ವಿರದ್ಧ ಎಫ್ಐಆರ್
ಬೆಂಗಳೂರು: ಸರ್ಕಾಋದ ಆದೇಶದಂತೆ ಕೋವಿಡ್ ಸೋಂಕಿತರ ಚಿಕಿತ್ಸೆಗೆ ಶೇಕಡ 50 ಹಾಸಿಗೆ ಒದಗಿಸದ ಐದು ಖಾಸಗಿ ಆಸ್ಪತ್ರೆಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ನೃಪತುಂಗಾ ರಸ್ತೆಯಲ್ಲಿರುವ ಸೇಂಟ್ ಮಾರ್ಥಾಸ್ ಆಸ್ಪತ್ರೆ, ಶಂಕರಪುರದ ರಂಗದೊರೆ ಮೆಮೋರಿಯಲ್ ಆಸ್ಪತ್ರೆ, ಕ್ವೀನ್ಸ್ ರಸ್ತೆಯ ಶಿಫಾ ಆಸ್ಪತ್ರೆ, ಕನ್ನಿಂಗ್ಹ್ಯಾಂ ರಸ್ತೆಯ ಫೋರ್ಟಿಸ್ ಆಸ್ಪತ್ರೆ ಹಾಗೂ ದೇವರಬೀಸನಹಳ್ಳಿಯ ಸಕ್ರಾ ಆಸ್ಪತ್ರೆ ವಿರುದ್ಧ ದೂರು ದಾಖಲಾಗಿರುವಂಥದ್ದು. ಕರೊನಾ ಸೋಂಕಿತ ರೋಗಿಗಳ ಚಿಕಿತ್ಸೆಗೆ ಮೀಸಲಿರಿಸಿದ ಬೆಡ್ಗಳ ಕುರಿತು ಐಎಎಸ್ ಅಧಿಕಾರಿಗಳಿಗೆ …
Read More »ಕೊರೊನಾ ಸೋಂಕಿತನ ಕುಟುಂಬಕ್ಕೆ ಬಹಿಷ್ಕಾರ
ವಿಜಯಪುರ: ಕೊರೊನಾ ಸೋಂಕು ತಗಲಿದ ವ್ಯಕ್ತಿಯ ಕುಟುಂಬಕ್ಕೆ ಸ್ಥಳೀಯರು ಅಘೋಷಿತ ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ. ವಿಜಯಪುರದ ಚಾಲುಕ್ಯ ನಗರದಲ್ಲಿ ಪುಣೆಯಿಂದ ಬಂದಿದ್ದ ವ್ಯಕ್ತಿಯೊಬ್ಬರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಆತನ ಕುಟುಂಬದ ಜೊತೆ ಯಾರು ಸಂಪರ್ಕ ಇಟ್ಟುಕೊಳ್ಳಬಾರದು. ಅವರ ಮನೆಗೆ ಪೇಪರ್, ತರಕಾರಿ, ಅಗತ್ಯ ವಸ್ತು ಪೂರೈಕೆ ಮಾಡಬಾರದೆಂದು ಕೆಲವು ಸ್ಥಳೀಯರು ತಕರಾರು ತೆಗೆದಿದ್ದಾರೆ. ಮನೆ ಕೆಲಸಗಾರರಿಗೆ ಕೆಲಸಕ್ಕೆ ಬರದಂತೆ ಅಡಚಣೆ ಉಂಟು ಮಾಡಿ ಅಘೋಷಿತ ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ ಎನ್ನಲಾಗಿದೆ. …
Read More »ಶಾಸಕ `ಹಾಲಪ್ಪ ಆಚಾರ್’ ಗೆ ಕೊರೊನಾ ಸೋಂಕು ದೃಢ
ಕೊಪ್ಪಳ : ಈಗಾಗಲೇ ಜಿಲ್ಲೆಯ ಶಾಸಕರಾದಂತ ರಾಘವೇಂದ್ರ ಹಿಟ್ನಾಳ್ ಹಾಗೂ ಪರಣ್ಣ ಮುನವಳ್ಳಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಇದೀಗ ಇವರ ಬಳಿಕ ಶಾಸಕ ಹಾಲಪ್ಪ ಆಚಾರ್ ಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಕುರಿತಂತೆ ತಮ್ಮ ಫೇಸ್ ಬುಕ್ ಮುಖಪುಟದಲ್ಲಿ ಮಾಹಿತಿ ಹಂಚಿಕೊಂಡಿರುವ ಕೊಪ್ಪಳ ಜಿಲ್ಲೆಯ ಯಲಬುರ್ಗ ವಿಧಾನಸಭಾ ಕ್ಷೇತ್ರದ ಶಾಸಕ ಹಾಲಪ್ಪ ಆಚಾರ್, ಸ್ವಯಂ ಕೋವಿಡ್ ತಪಾಸಣೆಯನ್ನು ಮಾಡಿಸಿಕೊಳ್ಳಲಾಗಿ, ವೈದ್ಯಕೀಯ ವರದಿಯ ಅನುಸಾರ ಕೊರೋನಾ …
Read More »ಆಗಸ್ಟ್ ಬಂದರೂ ಸುರಿಯುತ್ತಿಲ್ಲ ಮಳೆ; ಇಂದಿನ ಜಲಾಶಯಗಳ ನೀರಿನ ಮಟ್ಟ ಹೀಗಿದೆ
ಬೆಂಗಳೂರು : ಆಗಸ್ಟ್ ತಿಂಗಳು ಆರಂಭಗೊಂಡಿದೆ. ಕಳೆದ ವರ್ಷ ಈ ಹೊತ್ತಿಗೆ ಕರ್ನಾಟಕದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದರೆ , ಈ ಬಾರಿ ಮಳೆ ಇಲ್ಲದೆ ಜನ ಕಂಗಾಲಾಗಿದ್ದಾರೆ. ಪರಿಸ್ಥಿತಿ ಹೀಗೆ ಮುಂದುವರಿದರೆ ಬೇಸಿಗೆ ಸಮಯದಲ್ಲಿ ನೀರಿಗೆ ಹಾಹಾಕಾರ ಏಳುವುದು ಗ್ಯಾರಂಟಿ . ಏಕೆಂದರೆ ಈಗ ಅಂದುಕೊಂಡ ಮಟ್ಟಕ್ಕೆ ಜಲಾಶಯಗಳು ತುಂಬುತ್ತಿಲ್ಲ. ಮಲೆನಾಡು ಹಾಗೂ ಕರಾವಳಿ ತೀರ ಪ್ರದೇಶದಲ್ಲಿ ಜೂನ್ ಹಾಗೂ ಜುಲೈ ಆರಂಭದಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಆಗಿತ್ತು. ಆದರೆ, ನಂತರ ಮಳೆ ಆಗಲೇ ಇಲ್ಲ. …
Read More »