Breaking News

new delhi

ದೇಶದಲ್ಲಿ ಇನ್ನೂ 3 ತಿಂಗಳು ಕೊರೊನಾ ಆರ್ಭಟ………

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಹಳ್ಳಿಯಿಂದ ದಿಲ್ಲಿಗೆ ವ್ಯಾಪಿಸಿಕೊಂಡಿದೆ. ಪ್ರತಿನಿತ್ಯ 25 ಸಾವಿರ ಮಂದಿಯಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದ್ದು ಮುಂದಿನ ಮೂರು ತಿಂಗಳು ಕೊರೊನಾ ಆರ್ಭಟಿಸಲಿದಯಂತೆ. ಈ ಆತಂಕ ನಡುವೆ ತಜ್ಞರು ಅಕ್ಟೋಬರ್ ಮಧ್ಯ ಭಾಗದಲ್ಲಿ ಸೋಂಕಿನ ಪ್ರಮಾಣ ಇಳಿಕೆಯಾಗಬಹುದು ಎಂದು ಹೇಳಿದ್ದಾರೆ. ಇಡೀ ವಿಶ್ವವನ್ನೇ ಇನ್ನಿಲ್ಲದಂತೆ ಕಾಡ್ತಿರುವ ಕೊರೊನಾ ದಿನೇ ದಿನೇ ತನ್ನ ಕಬಂಧಬಾಹುವಿನ ಉದ್ದಗಲವನ್ನು ಹೆಚ್ಚಿಸುತ್ತಿದೆ. ಈ ಕೊರೊನಾ ನಿಯಂತ್ರಣ ಮಾಡಲು ಪ್ರತಿದಿನ ಹತ್ತು ಹಲವು ಸಂಶೋಧನೆಗಳು ನಡೆಯುತ್ತಲೇ …

Read More »

ಫೇಸ್ಬುಕ್, ಇನ್‍ಸ್ಟಾಗ್ರಾಮ್ ಸೇರಿ 89 ಆ್ಯಪ್ ಡಿಲೀಟ್ ಮಾಡುವಂತೆ ಸೈನಿಕರಿಗೆ ಸೂಚನೆ

ನವದೆಹಲಿ: ವಿದೇಶಿ ಆ್ಯಪ್ ಬ್ಯಾನ್ ಮಾಡುವ ಕುರಿತು ಕೇಂದ್ರ ಸರ್ಕಾರ ಇನ್ನೂ ಒಂದು ಹೆಜ್ಜೆ ಮುಂದೆ ಇಟ್ಟಿದ್ದು, 59 ಚೀನಿ ಆ್ಯಪ್‍ಗಳನ್ನು ದೇಶಾದ್ಯಂತ ಬ್ಯಾನ್ ಮಾಡಿದ ಬಳಿಕ ಇದೀಗ ಸೇನೆಗೆ ವಿಶೇಷ ಸೂಚನೆಯೊಂದನ್ನು ನೀಡಲಾಗಿದೆ. ಕೇಂದ್ರ ಸರ್ಕಾರ ಆ್ಯಪ್ ನಿಷೇಧ ಪ್ರಕ್ರಿಯೆಯನ್ನು ಮುಂದುವರಿಸಿದ್ದು, ಈಗಾಗಲೇ ಚೀನಾ ಆ್ಯಪ್‍ಗಳನ್ನು ಬ್ಯಾನ್ ಮಾಡಲಾಗಿದೆ. ಇದೀಗ ಸೇನೆಗೆ 89 ಆ್ಯಪ್‍ಗಳನ್ನು ಬಳಸದಂತೆ ಸೂಚನೆ ನೀಡಲಾಗಿದೆ. ಭಾರತೀಯ ಸೇನೆ ಈ ಕುರಿತು ಯೋಧರಿಗೆ ಸೂಚನೆ ನೀಡಿದ್ದು, …

Read More »

ಬಿಜೆಪಿ ಐಟಿ ಸೆಲ್ ಮುಖ್ಯಸ್ಥನಿಗೆ ಪ್ರಿಯಾಂಕ ವಾಸವಿದ್ದ ನಿವಾಸ

ನವದೆಹಲಿ,- ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾಸವಿದ್ದ ಬಂಗಲೆಯನ್ನು ಕೇಂದ್ರ ಸರ್ಕಾರವು ಬಿಜೆಪಿ ಐಟಿ ಸೆಲ್ ಮುಖ್ಯಸ್ಥನಿಗೆ ನೀಡಿದೆ. ಪ್ರಿಯಾಂಕ ಗಾಂಧಿ ವಾಸವಿದ್ದ ಬಂಗಲೆ ತನಗೆ ಬೇಕು ಎಂದು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅನಿಲ್ ಬಾಲುನಿ ಸರ್ಕಾರಕ್ಕೆ ಮನವಿ ಮಾಡಿದ್ದರು. ಅವರ ಬೇಡಿಕೆಯನ್ನು ಪರಿಗಣಿಸಿರುವ ಕೇಂದ್ರ ಸರ್ಕಾರ ಸಮ್ಮತಿ ಸೂಚಿಸಿರುವುದರಿಂದ ಅನಿಲ್ ಇದೀಗ ಈ ಬಂಗಲೆಯನ್ನು ತಮದಾಗಿಸಿಕೊಂಡಿದ್ದಾರೆ. ಲೋಧಿ ಎಸ್ಟೇಟ್ ನಲ್ಲಿರುವ 35ನೇ ನಂಬರಿನ ಬಂಗಲೆಯನ್ನು ಪ್ರಿಯಾಂಕ …

Read More »

ದೆಹಲಿ ಜನತೆ ಹೆದರಬೇಡಿ, ಪ್ಲಾಸ್ಮಾ ಬ್ಯಾಂಕ್ ಆರಂಭ: ಸಿಎಂ ಕೇಜ್ರಿವಾಲ್

ನವದೆಹಲಿ: ಕೊರೊನಾಗೆ ಹೆದರುವ ಅಗತ್ಯವಿಲ್ಲ ಎಂದು ದೆಹಲಿಯ ಜನತೆಗೆ ಸಿಎಂ ಅರವಿಂದ್ ಕೇಜ್ರಿವಾಲ್ ಭರವಸೆ ನೀಡಿದ್ದಾರೆ. ದೇಶದ ರಾಜಧಾನಿಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಕೊರೊನಾ ಸೋಂಕಿತರ ಸಂಖ್ಯೆ 1 ಲಕ್ಷದ ಗಡಿಯನ್ನು ದಾಟಿದೆ. ಆದ್ರೆ ಜನರು ಆತಂಕಕ್ಕೊಳಗಾಗೋದು ಬೇಡ. ಈಗಾಗಲೇ 1 ಲಕ್ಷ ಜನರಲ್ಲಿ ಅಂದಾಜು 72 ಸಾವಿರ ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೆಹಲಿಯಲ್ಲಿ ಪ್ಲಾಸ್ಮಾ ಬ್ಯಾಂಕ್ ಸಹ ಆರಂಭಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು …

Read More »

ಭಾನುವಾರ ಮೊದಲ ದೇಶಿ ಆ್ಯಪ್ ಅಲಾಯಿಮೆಂಟ್ಸ್ ಗೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಚಾಲನೆ

ನವದೆಹಲಿ: ಭಾನುವಾರ ಮೊದಲ ದೇಶಿ ಆ್ಯಪ್ ಅಲಾಯಿಮೆಂಟ್ಸ್ ಗೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಚಾಲನೆ ನೀಡಲಿದ್ದಾರೆ. ಭಾರತದಲ್ಲಿ ಸುಮಾರು 50 ಕೋಟಿಗಿಂತ ಹೆಚ್ಚಿನ ಜನರು ಸೋಶಿಯಲ್ ಮೀಡಿಯಾ ಬಳಕೆ ಮಾಡುತ್ತಾರೆ. ಆದ್ರೆ ಬಳಕೆ ಮಾಡುವ ಬಹುತೇಕ ಆ್ಯಪ್ ಗಳು ವಿದೇಶಿಯ ಮೂಲದ್ದು ಆಗಿರುತ್ತವೆ. ವಿದೇಶಿ ಆ್ಯಪ್ ಬಳಕೆಯಿಂದಾಗಿ ಬಳಕೆದಾರರ ಮಾಹಿತಿಯನ್ನು ಕದಿಯಲಾಗುತ್ತಿದೆ ಎಂಬ ಆರೋಪಗಳು ಕೇಳಿ ಬಂದಿವೆ. ಈ ಹಿನ್ನೆಲೆ ನಾಳೆ ಆತ್ಮನಿರ್ಭರ ಭಾರತ ಅಭಿಯಾನದ ಭಾಗವಾಗಿ ದೇಶಿಯ ಆ್ಯಪ್‍ಗೆ …

Read More »

ಚೀನಾ ಜೊತೆಗಿನ 900 ಕೋಟಿ ಒಪ್ಪಂದ ರದ್ದುಗೊಳಿಸಿದ ‘ಹೀರೋ’ಸೈಕಲ್

ನವದೆಹಲಿ: ಗಾಲ್ವಾನ ಕಣಿವೆ ಪ್ರದೇಶದಲ್ಲಿ ನಡೆದ ಭಾರತ ಮತ್ತು ಚೀನಾದ ನಡುವೆ ಸಂಘರ್ಷದ ಬಳಿಕ ದೇಶದಲ್ಲಿ ಹಲವು ಬದಲಾವಣೆಗಳು ಆಗುತ್ತಿವೆ. ಕೇಂದ್ರ ಸರ್ಕಾರ 59 ಚೀನಾ ಆ್ಯಪ್‍ಗಳನ್ನು ನಿಷೇಧಿಸಿದ ಬೆನ್ನಲ್ಲೆ ಉದ್ಯಮಿದಾರರು ಸಹ ವೈರಿ ರಾಷ್ಟ್ರದ ಜೊತೆಗಿನ ವ್ಯವಹಾರಿಕ ಸಂಬಂಧವನ್ನು ಕಡಿತಗೊಳಿಸಿಕೊಳ್ಳುತ್ತಿದ್ದಾರೆ. ಇದೀಗ ಹೀರೋ ಸೈಕಲ್ ಕಂಪನಿ ಚೀನಾ ಜೊತೆಗಿನ 900 ಕೋಟಿ ವ್ಯವಹಾರವನ್ನ ರದ್ದುಗೊಳಿಸಿದೆ. ಸೈಕಲ್ ತಯಾರಿಕೆಗಾಗಿ ಹೀರೋ ಕಂಪನಿ ಬಿಡಿ ಭಾಗಗಳನ್ನು ಚೀನಾದಿಂದ ಆಮದು ಮಾಡಿಕೊಳ್ಳುತ್ತಿತ್ತು. ಈಗ …

Read More »

ತಿಂಗಳೊಳಗೆ ಸರ್ಕಾರಿ ಬಂಗಲೆ ಖಾಲಿ ಮಾಡಲು ಪ್ರಿಯಾಂಕಾ ಗಾಂಧಿಗೆ ಸೂಚನೆ

ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಭದ್ರತೆಯನ್ನು ಕಡಿಮೆ ಮಾಡಿದ್ದ ಕೇಂದ್ರ ಸರ್ಕಾರ ಮತ್ತೊಂದು ಶಾಕ್ ನೀಡಿದ್ದು, ದೆಹಲಿಯ ಲೋಧಿ ರೋಡ್‍ನಲ್ಲಿ  ಪ್ರಿಯಾಂಕಾ ವಾಸ ಮಾಡುತ್ತಿರುವ ನಂ.35 ಸರ್ಕಾರಿ ಬಂಗಲೆಯನ್ನು ಖಾಲಿ ಮಾಡುವಂತೆ ನೋಟಿಸ್ ನೀಡಲಾಗಿದೆ. ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಪ್ರಿಯಾಂಕಾ ಗಾಂಧಿ ಅವರಿಗೆ ಜುಲೈ 1ರಂದು ಮನೆ ಖಾಲಿ ಮಾಡುವಂತೆ ನೋಟಿಸ್ ನೀಡಿದೆ. ಎಸ್‍ಪಿಜಿ ಭದ್ರತೆ ಇಲ್ಲದ ಕಾರಣ ಮನೆ ಖಾಲಿ ಮಾಡುವಂತೆ …

Read More »

ರಾಜಧಾನಿ ದೆಹಲಿಯಲ್ಲಿ ಪ್ಲಾಸ್ಮಾ ಬ್ಯಾಂಕ್……

ನವದೆಹಲಿ,ಜೂ.29-ಕರೋನವೈರಸ್ ರೋಗಿಗಳ ಚಿಕಿತ್ಸೆಗಾಗಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ಲಾಸ್ಮಾ ಬ್ಯಾಂಕ್ ತೆರೆದಿದ್ದು, ಇನ್ನೆರಡು ದಿನಗಳಲ್ಲಿ ಕಾರ್ಯಾಚರಣೆ ನಡೆಸಲಿದೆ ಎಂದು ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಇಂದು ತಿಳಿಸಿದರು. ಕೋವಿಡ್ ಚಿಕಿತ್ಸೆಗಾಗಿ ಪ್ಲಾಸ್ಮಾ ಕೊರತೆಯಿದ್ದು, ಇದನ್ನು ಮನಗಂಡು ಸರ್ಕಾರ ಪ್ಲಾಸ್ಮ ಬ್ಯಾಂಕ್ ತೆರೆಯುತ್ತಿದೆ.ದೆಹಲಿಯ ಇನ್‍ಸ್ಟಿಟ್ಯೂಟ್ ಆಫ್ ಲಿವರ್ ಅಂಡ್ ಬಿಲಿಯರಿ ಸೈನ್ಸಸ್ (ಐಎಲ್‍ಬಿಎಸ್) ನಲ್ಲಿ ಪ್ಲಾಸ್ಮಾ ಬ್ಯಾಂಕ್ ಸ್ಥಾಪಿಸುತ್ತಿದ್ದು, ಕೊರೊನಾ ವಿರುದ್ದ ಹೋರಾಡಿ ರೋಗಮುಕ್ತರಾದ ವ್ಯಕ್ತಿಗಳು ಮುಂದೆ ಬಂದು ಇತರ ಕೊರೊನಾ ಸೋಂಕಿತರಿಗೆ …

Read More »

ಪೆಟ್ರೋಲ್‌ಗಿಂತಲೂ ದುಬಾರಿಯಾದ ಡಿಸೇಲ್ ಬೆಲೆ:

ಹೊಸದಿಲ್ಲಿ: ಕಳೆದ 17 ದಿನಗಳಿಂದ ಪೆಟ್ರೋಲ್ ಮತ್ತು ಡೀಸೆಲ್‌ ದರಗಳು ಗಗನಮುಖಿಯಾಗಿ ಏರುತ್ತಲೇ ಇವೆ. ಆದರೆ ಬುಧವಾರದ ಬೆಲೆಯೇರಿಕೆಯಲ್ಲಿ ಡೀಸೆಲ್‌ ದರ ಹೊಸ ಮೈಲಿಗಲ್ಲನ್ನೇ ಸ್ಥಾಪಿಸಿದೆ. ದಿಲ್ಲಿಯಲ್ಲಿ ಬುಧವಾರದ ಡೀಸೆಲ್‌ ದರವು ಪೆಟ್ರೋಲ್‌ ದರಕ್ಕಿಂತ ಹೆಚ್ಚಾಗಿದೆ. ಇದೇ ಮೊದಲ ಬಾರಿಗೆ ಪೆಟ್ರೋಲ್‌ ದರಕ್ಕಿಂತಲೂ ಡೀಸೆಲ್ ದರ ಹೆಚ್ಚಳವಾಗಿರುವುದಕ್ಕೆ ದಿಲ್ಲಿ ಜನತೆ ಸಾಕ್ಷಿಯಾಗಿದ್ದಾರೆ. ಸತತ 17 ದಿನಗಳ ಏರಿಕೆ ಬಳಿಕ ಇಂದು ಪೆಟ್ರೋಲ್ ಬೆಲೆ ಯಥಾಸ್ಥಿತಿಯಿದ್ದು ಡಿಸೆಲ್ ಬೆಲೆಯಲ್ಲಿ 48 ಪೈಸೆ …

Read More »

ವಿದ್ಯಾರ್ಥಿಗಳು ಕಂಟೈನ್ಮೆಂಟ್ ಝೋನ್‍ಗೆ ಹೋಗಬಹುದು, ಪರೀಕ್ಷೆ ನಡೆಸಬೇಡಿ: ಎನ್‍ಎಸ್‍ಯುಐ ಆಗ್ರಹ

ನವದೆಹಲಿ: ಸಿಬಿಎಸ್‍ಇ ಮತ್ತು ಯುಜಿಸಿ ನಡೆಸುತ್ತಿರುವ ಎಲ್ಲ ಪರೀಕ್ಷೆಗಳನ್ನು ಮುಂದೂಡವಂತೆ ಆಗ್ರಹಿಸಿ ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ ಪೋಖ್ರಿಯಾಲ್ ನಿವಾಸದೆದರು ಎನ್‍ಎಸ್‍ಯುಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಎನ್‍ಎಸ್‍ಯುಐನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ನಾಗೇಶ ಕರಿಯಪ್ಪ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪರೀಕ್ಷೆಗಳನ್ನು ಮುಂದೂಡುವಂತೆ ಆಗ್ರಹಿಸಲಾಯಿತು. ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಈ ಸಂದರ್ಭದಲ್ಲಿ ಸಿಬಿಎಸ್‍ಇ ಬೋರ್ಡ್ 12ನೇ ತರಗತಿ ಪರೀಕ್ಷೆಗಳನ್ನು ನಡೆಸಲು ತಯಾರಿ ಮಾಡಿಕೊಳ್ಳುತ್ತಿದೆ ಜೊತೆಗೆ ಜೆಇಇ ಮುಖ್ಯ ಪರೀಕ್ಷೆ, …

Read More »