Breaking News

new delhi

ನೇಪಾಳದ ಗಡಿಯನ್ನು ವಶಪಡಿಸಿಕೊಂಡಿದೆ ಚೀನಾ- ಬುದ್ಧಿ ಕಲಿಯದ ನೇಪಾಳ

ನವದೆಹಲಿ: ಚೀನಾ ಕೇವಲ ಭಾರತ ಮಾತ್ರವಲ್ಲ ಇತರೆ ನೆರೆ ದೇಶಗಳ ಗಡಿಗಳನ್ನು ಅತಿಕ್ರಮಿಸಿಕೊಳ್ಳುತ್ತಿದ್ದು, ಇದಕ್ಕೆ ಸಾಕ್ಷಿ ಎಂಬಂತೆ ನೇಪಾಳದ ಗೂರ್ಖಾದ ಪ್ರದೇಶವನ್ನು ಚೀನಾ ಅತಿಕ್ರಮಿಸಿಕೊಂಡಿರುವ ಕುರಿತು ವರದಿಯಾಗಿದೆ. ಆದರೆ ಇದೆಲ್ಲವನ್ನು ಬಿಟ್ಟು ನೇಪಾಳ ಭಾರತದ ಗಡಿ ಕುರಿತು ಇದೀಗ ಹೆಚ್ಚು ಚರ್ಚೆ ನಡೆಸುತ್ತಿದೆ. ಅಲ್ಲದೆ ನೇಪಾಳದ ಜನರಲ್ಲಿ ಭಾರತ ವಿರೋಧಿ ಅಲೆಯನ್ನು ಎಬ್ಬಿಸುತ್ತಿದೆ. ಮ್ಯಾಪ್‍ನಲ್ಲಿ ರುಯಿ ಗೌನ್ ಪ್ರದೇಶ ನೇಪಾಳಕ್ಕೆ ಒಳಪಟ್ಟಿದೆ. ಆದರೆ ಗೂರ್ಖಾದ ರುಯಿ ಭೋಟ್ ಅಧೀನದಲ್ಲಿದ್ದ ರುಯಿ …

Read More »

ಕೊರೊನಾ ರಣಕೇಕೆ ಮಧ್ಯೆಯೂ ಐತಿಹಾಸಿಕ ಪುರಿಯ ಜಗನ್ನಾಥ ರಥಯಾತ್ರೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್

ನವದೆಹಲಿ: ಕೊರೊನಾ ರಣಕೇಕೆ ಮಧ್ಯೆಯೂ ಐತಿಹಾಸಿಕ ಪುರಿಯ ಜಗನ್ನಾಥ ರಥಯಾತ್ರೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ಕೊಟ್ಟಿದೆ. ಜೂನ್ 23ರಂದು ದೇವಾಲಯದ ಆವರಣದ ಒಳಗಡೆ ಮಾತ್ರ ಯಾತ್ರೆ ನಡೆಸಲು ಅವಕಾಶ ನೀಡಿದೆ. ಯಾತ್ರೆಗೆ ಅವಕಾಶ ನೀಡುವಂತೆ ಇಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‍ಗೆ ಮನವಿ ಮಾಡಿತ್ತು. ಕೋಟ್ಯಂತರ ಜನರ ನಂಬಿಕೆ, ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು ಯಾತ್ರೆ ನಡೆಸಲು ಅನುಮತಿ ಕೊಡುವಂತೆ ಅರ್ಜಿಯಲ್ಲಿ ತಿಳಿಸಿತ್ತು. ಪುರಿ ಜಗನ್ನಾಥ ದೇವಾಲಯದ ಆಡಳಿತದ ಅಧ್ಯಕ್ಷರು ಪುರಿಯ ಗಜಪತಿ …

Read More »

ಸತತ 15 ನೇ ದಿನವೂ ಪೆಟ್ರೋಲ್ ಡಿಸೇಲ್ ದರ ಏರಿಕೆ………

ಹೊಸದಿಲ್ಲಿ:  ದೇಶದಲ್ಲಿ ಸತತ 15 ನೇ ದಿನವೂ ಪೆಟ್ರೋಲ್ ಡಿಸೇಲ್ ದರ ಏರಿಕೆಯಾಗಿದೆ.  ಭಾನುವಾರ  ಪೆಟ್ರೋಲ್ ಗೆ 35 ಪೈಸೆ, ಡಿಸೇಲ್ ಗೆ 60 ಪೈಸೆ ಏರಿಕೆ ದಾಖಲಿಸಿವೆ. ಕಳೆದ ಎರಡು ವಾರಗಳ ಅವಧಿಯಲ್ಲಿ  ಈವರೆಗೂ ಪೆಟ್ರೋಲ್ 7. 97 ರೂ. ಏರಿಕೆಯಾದ್ರೆ, ಡಿಸೇಲ್ 8.88 ರೂ ಹೆಚ್ಚಿಗೆಯಾಗಿದೆ. ದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್ ಗೆ 79.23 ರೂ. ಡೀಸೆಲ್ ದರ 77.67 ದಾಖಲಾಗಿದೆ. ಮುಂಬೈನಲ್ಲಿ ಪೆಟ್ರೋಲ್ ದರ 86.06 …

Read More »

ಪ್ರಧಾನಿ ಮೋದಿ ಸಿಎಂಗಳ ಜೊತೆ ಎರಡನೇ ಹಂತದ ಮೀಟಿಂಗ್-……….

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಎಲ್ಲ ರಾಜ್ಯಗಳ ಸಿಎಂಗಳ ಜೊತೆಗೆ ಮಾತುಕತೆ ನಡೆಸುತ್ತಿದ್ದು ಇಂದು ಎರಡನೇ ಹಂತದ ಸಭೆ ನಡೆಯಲಿದೆ. ಮಧ್ಯಾಹ್ನ ಮೂರು ಗಂಟೆಗೆ ಸಭೆ ನಡೆಯಲಿದ್ದು, ಅತಿ ಹೆಚ್ಚು ಸೋಂಕು ಕಾಣಿಸಿಕೊಂಡಿರುವ ಹದಿನೈದು ರಾಜ್ಯಗಳ ಮುಖ್ಯಮಂತ್ರಿಗಳು ಜೊತೆ ಮೋದಿ ಸಭೆ ನಡೆಯಲಿದ್ದಾರೆ. ಮಂಗಳವಾರ ಕೇಂದ್ರಾಡಳಿತ ಪ್ರದೇಶಗಳು ಒಳಗೊಂಡಂತೆ ಒಟ್ಟು 21 ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ಸಭೆ ನಡೆಸಿದ್ದು, ಸೋಂಕು ನಿಯಂತ್ರಣದ …

Read More »

ಭಾರತದ ಹಿರಿಯ ಪ್ರಥಮ ದರ್ಜೆ ಕ್ರಿಕೆಟಿಗ ವಸಂತ್ ರೈಜಿ (100) ನಿಧನರಾಗಿದ್ದಾರೆ.

ಹೊಸದಿಲ್ಲಿ: ಭಾರತದ ಹಿರಿಯ ಪ್ರಥಮ ದರ್ಜೆ ಕ್ರಿಕೆಟಿಗ ವಸಂತ್ ರೈಜಿ (100) ಶನಿವಾರ ಬೆಳಗಿನ ಜಾವ ನಿಧನರಾಗಿದ್ದಾರೆ. ವಯೋಸಹಜ ಕಾರಣದಿಂದ ರೈಜಿ ಅವರು ಇಂದು ಬೆಳಗ್ಗಿನ ಜಾವ 2.20 ರ ಸುಮಾರಿಗೆ ದಕ್ಷಿಣ ಮುಂಬೈನ ವಾಲ್ಕೇಶ್ವರದಲ್ಲಿರುವ ಅವರ ನಿವಾಸದಲ್ಲಿ ಮೃತಪಟ್ಟಿದ್ದಾರೆ. ರೈಜಿ ಅವರು 1940 ರಲ್ಲಿ 9 ಪ್ರಥಮ ದರ್ಜೆ ಕ್ರಿಕೆಟ್ ಪಂದ್ಯಗಳಲ್ಲಿ ಆಡಿದ್ದಾರೆ. ಒಟ್ಟು 277 ರನ್ ಗಳಿಸಿದ್ದಾರೆ. 68 ಗರಿಷ್ಠ ವೈಯಕ್ತಿಕ ರನ್ ಗಳಿಸಿದ್ದಾರೆ. 1939 ರಲ್ಲಿ …

Read More »

ಕೊರೋನಾ ಚಿಕಿತ್ಸೆಗೆ ಪ್ರೈವೇಟ್ ಆಸ್ಪತ್ರೆಗಳಿಂದ ರೇಟ್ ಲಿಸ್ಟ್ ಜಾರಿ: ರೇಟ್ ಕೇಳಿ ನಿಜಕ್ಕೂ ತಲೆ ತಿರುಗುತ್ತೆ

ನವದೆಹಲಿ: ಕರೋನಾ ವೈರಸ್ ಸೋಂಕು ವೇಗವಾಗಿ‌ ಹಬ್ಬುತ್ತಿರುವ ಕಾರಣ ಚಿಕಿತ್ಸೆಗಾಗಿ ಯಾವ ಆಸ್ಪತ್ರೆಗೆ ದಾಖಲಿಸಬೇಕು ಎಂಬ ಸಮಸ್ಯೆ ಎದುರಾಗಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ಹಾಸಿಗೆಗಳ ಕೊರತೆಯಿಂದಾಗಿ, ರೋಗಿಗಳನ್ನು ದಾಖಲಿಸಲಾಗುತ್ತಿಲ್ಲ. ದೆಹಲಿಯ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಹಠಾತ್ ಕ್ರಿಯಾಶೀಲತೆ ಹೆಚ್ಚಾಗಿದೆ ಎಂದೇ ಹೇಳಬಹುದು. ಕರೋನಾಗೆ ಚಿಕಿತ್ಸೆ ನೀಡುವ ನೆಪದಲ್ಲಿ ಲಕ್ಷಾಂತರ ಬಿಲ್‌ಗಳನ್ನ ವಸೂಲಿ ಮಾಡಿದ ಆರೋಪ ಎದುರಿಸುತ್ತಿರುವ ಆಸ್ಪತ್ರೆಗಳು ಸಹ ಈಗ ಜಾಗರೂಕರಾಗಿವೆ. ಅದೇ ಸಮಯದಲ್ಲಿ, ಖಾಸಗಿ ಆಸ್ಪತ್ರೆಗಳು ಕರೋನಾದ ಚಿಕಿತ್ಸೆಗೆ ಸಂಬಂಧಿಸಿದ …

Read More »

ಎಲ್ಲಾ ರಾಜ್ಯಗಳ ಸಿಎಂ ಜೊತೆ ಪ್ರಧಾನಿ ಮೋದಿ ಮಹತ್ವದ ಸಭೆ: ಮತ್ತೆ ಲಾಕ್‌ಡೌನ್ ಆಗುತ್ತಾ?

ನವದೆಹಲಿ :ದೇಶದಲ್ಲಿ ಕೊರೋನಾ ರಣಕೇಕೆ ಮುಂದುವರೆದಿದೆ. ಈ ಹಿನ್ನೆಲೆ ರಾಜ್ಯದ ಸ್ಥಿತಿಗತಿ ಹಾಗೂ ಕೋವಿಡ್ 19 ಸೋಂಕನ್ನು ತಡೆಗಟ್ಟಲು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಎಲ್ಲಾ ರಾಜ್ಯಗಳ ಸಿಎಂ ಜೊತೆ ಪ್ರಧಾನಿ ಮೋದಿ ವಿಡಿಯೋ ಕಾನ್ಪರೆನ್ಸ್ ನಡೆಸಲಿದ್ದಾರೆ. ಜೂನ್ 16 ಹಾಗೂ 17 ರಂದು ಪ್ರಧಾನಿ ನರೇಂದ್ರ ಮೋದಿ ಅವರು 21 ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಪರೆನ್ಸ್ ನಡೆಸಲಿದ್ದಾರೆ. ಅಂದು ಲಾಕ್ ಡೌನ್ ಹಾಗೂ ಕೊರೊನಾ …

Read More »

ತೀವ್ರ ಜ್ವರ, ಗಂಟಲು ನೋವು – ಸಿಎಂ ಕೇಜ್ರಿವಾಲ್‍ಗೆ ಕೊರೊನಾ ಟೆಸ್ಟ್………..

ನವದೆಹಲಿ: ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನಾಳೆ ಬೆಳಗ್ಗೆ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಲಿದ್ದಾರೆ. ಭಾನುವಾರದಿಂದ ಕೇಜ್ರಿವಾಲ್ ಆರೋಗ್ಯದಲ್ಲಿ ಏರುಪೇರಾಗಿದ್ದು, ವೈದ್ಯರ ಸಲಹೆ ಹಿನ್ನೆಲೆ ನಾಳೆ ಕೊರೊನಾ ಪರೀಕ್ಷೆಗೆ ಒಳಗಾಗಲಿದ್ದಾರೆ. ಕೇಜ್ರಿವಾಲ್ ತೀವ್ರ ಜ್ವರ, ಗಂಟಲು ನೋವಿನಿಂದ ಬಳಲುತ್ತಿದ್ದರು. ಚಿಕಿತ್ಸೆ ಬಳಿಕವೂ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಕೊರೊನಾ ಪರೀಕ್ಷೆ ನಡೆಸಲು ತಿರ್ಮಾನಿಸಲಾಗಿದೆ.ಕೊರೊನಾ ಹೋರಾಟದ ಮುನ್ನಲೆಯಲ್ಲಿರುವ ಅರವಿಂದ ಕೇಜ್ರಿವಾಲ್, ಪ್ರತಿ ನಿತ್ಯ ಅಧಿಕಾರಗಳ ಸಭೆ ನಡೆಸುತ್ತಿದ್ದಾರೆ. ಜ್ವರ ಕಾಣಿಸಿಕೊಂಡ …

Read More »

ಎಚ್‍ಡಿಡಿ ಸ್ಪರ್ಧೆ ಬಗ್ಗೆ ನಮ್ಮೊಂದಿಗೆ ಯಾರೂ ಚರ್ಚಿಸಿಲ್ಲ- ಡಿಕೆಶಿ

ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ಸ್ಪರ್ಧೆ ಬಗ್ಗೆ ಇದುವರೆಗೆ ನಮ್ಮ ಜೊತೆ ಯಾರೂ ಚರ್ಚೆ ಮಾಡಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಮ್ಮ ಹೈಕಮಾಂಡ್ ಸೋನಿಯಾ ಗಾಂಧಿ ಅವರು ಎಚ್.ಡಿ.ದೇವೇಗೌಡ ಅವರಿಗೆ ಬೆಂಬಲ ನೀಡುವ ಬಗ್ಗೆ ತೀರ್ಮಾನ ಮಾಡುತ್ತಾರೆ. ಹೈ ಕಮಾಂಡ್, ಪಾರ್ಟಿ ಏನು ತೀರ್ಮಾನ ಮಾಡುತ್ತೋ ಅದಕ್ಕೆ ನಾವು ಬದ್ಧರಾಗಿದ್ದೇವೆ ಎಂದರು. ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರು …

Read More »

ಕೊರೊನಾ ಸೋಂಕು ಸಮುದಾಯಕ್ಕೆ ಹರಡಿದೆ – ಕೇಂದ್ರಕ್ಕೆ ಬರೆದ ಪತ್ರದಲ್ಲಿ ವೈದ್ಯಕೀಯ ಕ್ಷೇತ್ರದ ಕಳವಳ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಎರಡು ಲಕ್ಷದ ಗಡಿಯಲ್ಲಿದ್ದು ಸಮುದಾಯಕ್ಕೆ ಹರಡಿಯಾಗಿದೆ. ಆದರೆ ಕೇಂದ್ರ ಸರ್ಕಾರ ಸೋಂಕು ಸಮುದಾಯಕ್ಕೆ ಹರಡಿಲ್ಲ ಎಂದು ಸುಳ್ಳು ಹೇಳುತ್ತಿದೆ ಎಂದು ವೈದ್ಯಕೀಯ ಕ್ಷೇತ್ರದ ಹಲವು ಸಂಸ್ಥೆಗಳು ಕಳವಳ ವ್ಯಕ್ತಪಡಿಸಿವೆ. ಕೊರೊನಾ ಸೋಂಕು ಸಮುದಾಯಕ್ಕೆ ಹರಡಿರುವ ಬಗ್ಗೆ ಉಲ್ಲೇಖಿಸಿ ಇಂಡಿಯನ್ ಪಬ್ಲಿಕ್ ಹೆಲ್ತ್ ಅಸೋಸಿಯೇಷನ್ (ಐಪಿಹೆಚ್‍ಎ), ಇಂಡಿಯನ್ ಅಸೋಸಿಯೇಷನ್ ಅಂಡ್ ಸೋಷಿಯಲ್ ಮೆಡಿಸಿನ್ (ಐಎಪಿಎಸ್‍ಎಂ) ಮತ್ತು ಇಂಡಿಯನ್ ಅಸೋಸಿಯೇಷನ್ ಆಫ್ ಎಪಿಡೆಮಿಯಾಲಜಿಸ್ಟ್ (ಐಎಇ) ಪ್ರಧಾನಿ ನರೇಂದ್ರ …

Read More »