ಮರೆಯಾದಳ್ಯಾಕೆ ಸೌಂದರ್ಯ? ಕಣ್ಣೋಟದಲ್ಲೇ ಕೊಲ್ಲುವ ಚುಲುವೆ.. ನಿನಗ್ಯಾಕೆ ಇಷ್ಟು ಅವರಸ? ನೀನ್ಯಾಕೆ ಹೋದೆ ಸೌಂದರ್ಯ.. ನೀನ್ಯಾಕೆ ಹೋದೆ? ಸ್ಯಾಂಡಲ್ವುಡ್-ಕಾಲಿವುಡ್-ಟಾಲಿವುಡ್ನಲ್ಲಿ ಬಹು ಬೇಡಿಕೆಯ ನಟಿಯಾಗಿ ಮಿಂಚುತ್ತಿದ್ದ ಸೌಂದರ್ಯ ಸಾವಿನ ಸುದ್ದಿ ಇತ್ತೀಚೆಗಷ್ಟೇ ನಡೆದಂತಿದೆ. ಹೆಸರಿಗೆ ತಕ್ಕ ಸೌಂದರ್ಯ ಹಾಗೂ ನಟನೆಯಿಂದ ಕನ್ನಡಿಗರ ಹೃದಯದಲ್ಲಿ ಸದಾ ನೆನಪಲ್ಲಿ ಉಳಿಯುವ ಆಪ್ತ ನಟಿ. ಅಭಿನಯ, ರೂಪದೊಂದಿಗೆ ಹಿರಿಯ ಕಲಾವಿದರನ್ನೂ ಗೌರವಿಸುತ್ತಿದ್ದ ಗುಣ, ತಮಗೆ ಸೂಕ್ತವಾದ ಪಾತ್ರಗಳನ್ನು ಆಯ್ಕೆ ಮಾಡುತ್ತಿದ್ದ ರೀತಿ ಅಭಿಮಾನಿಗಳನ್ನು ಮಾತ್ರವಲ್ಲದೇ ಚಿತ್ರರಂಗದವರನ್ನೂ …
Read More »ವಿದೇಶಿ ನೆಲದಲ್ಲಿ ಐಪಿಎಲ್ ಆಯೋಜಿಸುವ ಕುರಿತು ಪ್ರತಿಕ್ರಿಯೆ ನೀಡಿರುವ ಆರ್ಸಿಬಿ ಕೋಚ್
ಮುಂಬೈ: ಕೊರೊನಾ ವೈರಸ್ ಲಾಕ್ಡೌನ್ ಹಿನ್ನೆಲೆಯಲ್ಲಿ ಐಪಿಎಲ್ 2020 ಟೂರ್ನಿಯನ್ನು ಬಿಸಿಸಿಐ ಅಧಿಕೃತವಾಗಿ ಮುಂದೂಡಿದೆ. ಶೆಡ್ಯೂಲ್ ಅನ್ವಯ ಮಾರ್ಚ್ 29 ರಿಂದ ಐಪಿಎಲ್ ಆರಂಭವಾಗಬೇಕಿತ್ತು. ಆದರೆ ಕೊರೊನಾ ಕಾರಣದಿಂದ ಏ.15ಕ್ಕೆ ತಾತ್ಕಾಲಿಕವಾಗಿ ಮುಂದೂಡಲಾಗಿತ್ತು. ಆದರೆ ದೇಶಾದ್ಯಂತ ಲಾಕ್ಡೌನ್ ಮೇ 3ರ ವರೆಗೂ ವಿಸ್ತರಣೆಯಾದ ಹಿನ್ನೆಲೆಯಲ್ಲಿ ಮತ್ತೆ ಐಪಿಎಲ್ ಟೂರ್ನಿಯನ್ನು ಮುಂದೂಡಲಾಗಿದೆ. ದೇಶದಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಬಾರದ ಕಾರಣ ಪರಿಸ್ಥಿತಿಯನ್ನು ನಿಯಂತ್ರಿಸಲು ಸರ್ಕಾರ ಕ್ರಮಕೈಗೊಳ್ಳುತ್ತಿದೆ. ಆದರೂ ದೇಶ ಸಹಜ ಸ್ಥಿತಿಗೆ …
Read More »ವಿಶ್ವದ ಆರ್ಥಿಕತೆ 9 ಟ್ರಿಲಿಯನ್ ಡಾಲರನಷ್ಟು ಕುಸಿತ: ಆರ್ ಬಿ ಐ ಗವರ್ನರ್ ಶಕ್ತಿಕಾಂತ್ ದಾಸ್
ನವದೆಹಲಿ: ವಿಶ್ವದ ಆರ್ಥಿಕತೆ 9 ಟ್ರಿಲಿಯನ್ ಡಾಲರನಷ್ಟು ಕುಸಿತ ಕಂಡಿದ್ದು, ಭಾರತದ ಆರ್ಥಿಕತೆ ಸಧ್ಯ ಶೇ.1.9ರಷ್ಟಿದೆ ಕಳೆದ 4 ತಿಂಗಳುಗಳಿಂದ ಉತ್ಪಾದನೆ ತೀವ್ರವಾಗಿ ಕಡಿಮೆಯಾಗಿದೆ ಎಂದು ಆರ್ ಬಿ ಐ ಗವರ್ನರ್ ಶಕ್ತಿಕಾಂತ್ ದಾಸ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಕ್ತಿಕಾಂತ್ ದಾಸ್, ಕೊರೊನಾ ವಿರುದ್ಧ ಹೋರಾಡಲು ಬ್ಯಾಂಕ್ ಗಳಿಗೆ ಶೇ.60ರಷ್ಟು ಹೆಚ್ಚುವರಿ ಹಣ ನೀಡಲಾಗುತ್ತಿದೆ. ರಾಜ್ಯಗಳ ಯಾವುದೇ ಬ್ಯಾಂಕ್ ಗಳಲ್ಲಿ ಹಣದ ಕೊರತೆ ಆಗಿಲ್ಲ. ಬ್ಯಾಂಕ್ ಗಳಿಗೆ ಹೆಚ್ಚುವರಿ ಹಣ …
Read More »ಕೊರೊನಾ ಪೋಸ್ಟ್ಗಳಿಗೆ ಲೈಕ್, ಕಾಮೆಂಟ್ ಮಾಡೋ ಮುನ್ನ ಹುಷಾರ್
ನವದೆಹಲಿ: ಕೊರೊನಾ ಬಗ್ಗೆ ಸತ್ಯವಲ್ಲದ ಸುದ್ದಿಗಳನ್ನು ಲೈಕ್, ಕಮೆಂಟ್ ಮಾಡುವ ಮುನ್ನ ಎಚ್ಚರವಾಗಿರಿ. ಯಾಕೆಂದರೆ ಸತ್ಯವಲ್ಲದ ಮಾಹಿತಿ ಹರಡುವವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಫೇಸ್ಬುಕ್ ಮುಂದಾಗಿದೆ. ಜಾಗತಿಕ ಮಟ್ಟದಲ್ಲಿ ಕೊರೊನಾ ದೊಡ್ಡ ಸುದ್ದಿ ಮಾಡುತ್ತಿದೆ. ಸೋಶಿಯಲ್ ಮಿಡಿಯಾಗಳನ್ನ ಓಪನ್ ಮಾಡಿದರೆ ಸಾಕು ಕೊರೊನಾ ಬಗ್ಗೆ ಅನೇಕ ಪೋಸ್ಟ್ಗಳು ಫೇಸ್ಬುಕ್, ವ್ಯಾಟ್ಸಪ್ ಇನ್ಸ್ಟ್ರಾಗ್ರಾಂನಲ್ಲಿ ಬರುತ್ತಿವೆ. ಹೀಗೆ ಬರುವ ಸುದ್ದಿಗಳಲ್ಲಿ ದೊಡ್ಡ ಪ್ರಮಾಣದಲ್ಲಿ ತಪ್ಪು ಮಾಹಿತಿ ಶೇರ್ ಆಗುತ್ತಿದೆಯಂತೆ. ಹೀಗೆ ಸತ್ಯವಲ್ಲದ ಮಾಹಿತಿ …
Read More »ಇ-ಕಾಮರ್ಸ್ ವೇದಿಕೆಯಲ್ಲಿ ಮೊಬೈಲ್, ಟಿವಿ, ಫ್ರಿಡ್ಜ್, ಲ್ಯಾಪ್ಟಾಪ್ ಹಾಗೂ ಸ್ಟೇಶನರಿ ವಸ್ತುಗಳ ಮಾರಾಟಕ್ಕೆ ಅವಕಾಶ
ನವದೆಹಲಿ: ಇ-ಕಾಮರ್ಸ್ ವೇದಿಕೆಯಲ್ಲಿ ಮೊಬೈಲ್, ಟಿವಿ, ಫ್ರಿಡ್ಜ್, ಲ್ಯಾಪ್ಟಾಪ್ ಹಾಗೂ ಸ್ಟೇಶನರಿ ವಸ್ತುಗಳ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಏಪ್ರಿಲ್ 20ರಿಂದ ಅಮೇಜಾನ್, ಫ್ಲಿಪ್ಕಾರ್ಟ್ ಹಾಗೂ ಸ್ನ್ಯಾಪ್ಡೀಲ್ ಕಂಪನಿಗಳು ಮಾರಾಟ ಪ್ರಕ್ರಿಯೆಯನ್ನು ಆರಂಭಿಸಲಿವೆ ಎಂದು ಕೇಂದ್ರ ಗೃಹ ಸಚಿವಾಲಯದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಎಲೆಕ್ಟ್ರಾನಿಕ್ ವಸ್ತುಗಳಾದ ಮೊಬೈಲ್, ಟಿವಿ, ಲ್ಯಾಪ್ಟಾಪ್ಗಳು ಆನ್ಲೈನ್ ವೇದಿಕೆಯಲ್ಲಿ ದೊರೆಯಲಿವೆ. ಆದರೆ ಕಂಪನಿಗಳ ಡೆಲಿವರಿ ವಾಹನಗಳು ಆಯಾ ರಾಜ್ಯ ಸರ್ಕಾರಗಳಿಂದ ಅನುಮತಿ ಪಡೆಯಬೇಕಾಗುತ್ತದೆ. ಬುಧವಾರ ಕೇಂದ್ರ ಸರ್ಕಾರ …
Read More »ನಮಾಜ್, ಪೂಜೆ ಮನೆಯಲ್ಲೇ ಮಾಡಿ: ಸಲ್ಮಾನ್ ಖಾನ್
ನವದೆಹಲಿ: ಲಾಕ್ಡೌನ್ ಕುರಿತು ಬಾಲಿವುಡ್ ಭಾಯಿಜಾನ್ ಸಲ್ಮಾನ್ ಸಾಮಾಜಿಕ ಜಾಲತಾಣಗಳ ಮೂಲಕ ಆಗಾಗ ಎಚ್ಚರಿಸುತ್ತಿದ್ದು, ಸಾರ್ವಜನಿಕರು ಯಾವ ರೀತಿ ವರ್ತಿಸಬೇಕು ಎಂಬುದನ್ನು ಹೇಳುತ್ತಿದ್ದಾರೆ. ಈ ಕುರಿತು ಅವರದ್ದೇ ಉದಾಹರಣೆಯನ್ನು ನೀಡುತ್ತಿದ್ದು, ತಂದೆಯನ್ನು ನೋಡಲಿಕ್ಕಾಗದೆ ಪರಿತಪಿಸುತ್ತಿರುವ ಪರಿಯನ್ನು ಸಹ ವಿವರಿಸಿದ್ದಾರೆ. ಕೊರೊನಾ ವಾರಿಯರ್ಸ್ ನಮಗಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರಿಗೆ ಗೌರವ ಕೊಡೋಣ, ಹಿಂದೂಸ್ಥಾನವನ್ನು ಕೊರೊನಾದಿಂದ ರಕ್ಷಿಸೋಣ ಎಂದು ಮನವಿ ಮಾಡಿದ್ದಾರೆ. ಹೌದು ಲಾಕ್ಡೌನ್ ಸಂದರ್ಭದಲ್ಲಿಯೂ ಹಗಲು ರಾತ್ರಿ ಎನ್ನದೆ ನಮಗಾಗಿ ದುಡಿಯುತ್ತಿರುವ …
Read More »ಕೊರೊನಾ ವೈರಸ್ ನ ನಿಗೂಢ ರಹಸ್ಯವನ್ನು ಭೇದಿಸಲು ಮುಂದಾದ ಅಮೆರಿಕ
ವಾಷಿಂಗ್ಟನ್: ಕೊರೊನಾ ವೈರಸ್ ಚೀನಾದ ವುಹಾನ್ ನಗರದಲ್ಲಿ ಮೊದಲು ಕಾಣಿಸಿಕೊಂಡಿದೆ ಎನ್ನುವುದು ಎಲ್ಲರಿಗೂ ತಿಳಿದ ವಿಚಾರ. ಆದರೆ ವುಹಾನ್ ನಲ್ಲಿ ಎಲ್ಲಿ ಎನ್ನುವುದು ಇನ್ನೂ ನಿಗೂಢವಾಗಿದೆ. ಈ ನಿಗೂಢ ರಹಸ್ಯವನ್ನು ಭೇದಿಸಲು ಅಮೆರಿಕ ಈಗ ಮುಂದಾಗಿದೆ. ಅಮೆರಿಕ ಸರ್ಕಾರ ಈ ವೈರಸ್ ಮೊದಲು ವುಹಾನ್ ನಲ್ಲಿರುವ ವೆಟ್ ಮಾರುಕಟ್ಟೆಯಿಂದ ಮನುಷ್ಯರಿಗೆ ಬಂದಿದೆಯೋ ಅಥವಾ ವುಹಾನ್ ವೈರಾಲಜಿ ಲ್ಯಾಬ್ ನಿಂದ ಸೋರಿಕೆ ಆಗಿದೆಯೋ ಎನ್ನುವುದರ ಬಗ್ಗೆ ತನಿಖೆ ನಡೆಸುವುದಾಗಿ ಹೇಳಿದೆ. ಈ …
Read More »ಪಿಜ್ಜಾ ಡೆಲಿವರಿ ಮಾಡುವ ಡೆಲಿವರಿ ಬಾಯ್ಗೆ ಕೊರೊನಾ ಸೋಂಕು ದೃಢ……
ನವದೆಹಲಿ: ದಕ್ಷಿಣ ದೆಹಲಿಯಲ್ಲಿ ಹೆಸರಾಂತ ಪಿಜ್ಜಾ ಡೆಲಿವರಿ ಮಾಡುವ ರೆಸ್ಟೋರೆಂಟ್ನಲ್ಲಿ ಕೆಲಸ ಮಾಡುತ್ತಿದ್ದ ಡೆಲಿವರಿ ಬಾಯ್ಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಯುವಕನ ಸಂಪರ್ಕದಲ್ಲಿದ್ದ ಸಹೋದ್ಯೊಗಿಗಳು ಹಾಗೂ ಪಿಜ್ಜಾ ಡೆಲಿವರಿ ಪಡೆದಿದ್ದ 72 ಕುಟುಂಬಗಳನ್ನು ಕ್ವಾರಂಟೈನ್ನಲ್ಲಿ ಇರಿಸಲಾಗಿದೆ. ಬುಧವಾರ ದಕ್ಷಿಣ ದೆಹಲಿಯ ಡಿಸಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಮಾಲ್ವಿಯಾ ನಗರದಲ್ಲಿ ಇರುವ ಪಿಜ್ಜಾ ಡೆಲಿವರಿ ಮಾಡುವ ರೆಸ್ಟೋರೆಂಟ್ನಲ್ಲಿ ಡೆಲಿವರಿ ಬಾಯ್ ಕರ್ತವ್ಯ ನಿರ್ವಹಿಸುತ್ತಿದ್ದನು. ಈತನಿಗೆ ಕೊರೊನಾ ಸೋಂಕು ತಗುಲಿರುವುದು …
Read More »ನವದೆಹಲಿ: ನಿಮಗೆ ನನ್ನ ಮೇಲೆ ತುಂಬಾ ಪ್ರೀತಿ ಮತ್ತು ಗೌರವ ಇದ್ದರೆ, ನೀವು ಈ ಕೋವಿಡ್ ಬಿಕ್ಕಟ್ಟು ಅಂತ್ಯಗೊಳ್ಳುವವರೆಗೂ ಕನಿಷ್ಠ ಒಂದು ಬಡ ಕುಟುಂಬದ ಜವಾಬ್ದಾರಿಯನ್ನು ತೆಗೆದುಕೊಳ್ಳಿ. ಅದುವೇ ನನಗೆ ನೀವು ಸಲ್ಲಿಸುವ ಒಂದು ಗೌರವ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ನವದೆಹಲಿ: ನಿಮಗೆ ನನ್ನ ಮೇಲೆ ತುಂಬಾ ಪ್ರೀತಿ ಮತ್ತು ಗೌರವ ಇದ್ದರೆ, ನೀವು ಈ ಕೋವಿಡ್ ಬಿಕ್ಕಟ್ಟು ಅಂತ್ಯಗೊಳ್ಳುವವರೆಗೂ ಕನಿಷ್ಠ ಒಂದು ಬಡ ಕುಟುಂಬದ ಜವಾಬ್ದಾರಿಯನ್ನು ತೆಗೆದುಕೊಳ್ಳಿ. ಅದುವೇ ನನಗೆ ನೀವು ಸಲ್ಲಿಸುವ ಒಂದು ಗೌರವ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅವರ ಈ ಹೇಳಿಕೆಗೆ ಕಾರಣ, ‘ನಾಗರಿಕರು ತಮ್ಮ ಬಾಲ್ಕನಿಗಳಲ್ಲಿ ಭಾನುವಾರ (ಏ.12) ಸಂಜೆ 5 ಗಂಟೆಗೆ ನಿಂತು ಗೌರವದಿಂದ ನಮ್ಮ ಪ್ರಧಾನಿಗೆ ನಮಸ್ಕರಿಸಬೇಕು. ಈ ಮನುಷ್ಯ …
Read More »ಅಯ್ಯೋ… ದೇವರೇ…ಬಯಲಲ್ಲಿ ಬೀಸಾಡಿದ್ದ ಬಾಳೆಹಣ್ಣು ತಿಂದು ಹೊಟ್ಟೆ ತುಂಬಿಸಿಕೊಂಡ ವಲಸೆ ಕಾರ್ಮಿಕರು!
ಲಾಕ್ಡೌನ್ ವಿಸ್ತರಣೆಯಾಗಿರುವುದು ಕೊರೊನಾ ವೈರಸ್ ನಿಯಂತ್ರಣ ಮಾಡುವ ಹಾದಿಯಲ್ಲಿ ಒಳ್ಳೆಯ ನಿರ್ಧಾರವಾದರೂ, ವಲಸೆ ಕಾರ್ಮಿಕರ ಪಾಲಿಗೆ ಉಸಿರುಗಟ್ಟಿದ ಪರಿಸ್ಥಿತಿಯನ್ನು ಹುಟ್ಟು ಹಾಕಿದೆ. ಬುಧವಾರ ಮಧ್ಯಾಹ್ನ ರಾಜಧಾನಿ ಹೊಸದಿಲ್ಲಿಯಲ್ಲಿ ಕಂಡುಬಂದ ಮನಕುಲಕುವ ದೃಶ್ಯವೇ ಇದಕ್ಕೆ ಸಾಕ್ಷಿ ಎಂದು ಹೇಳಬಹುದು. ರಾಜಧಾನಿಯ ಪ್ರಮುಖ ಶವಾಗಾರಗಳಲ್ಲಿ ಒಂದಾದ ನಿಗಂಬೋಧ್ ಘಾಟ್ ಬಳಿ ಸತ್ತವರ ಆಚರಣೆಗಳಿಗಾಗಿ ಸಂಗ್ರಹಿಸಲಾಗಿದ್ದ ಬಾಳೆ ಹಣ್ಣುಗಳನ್ನು ಯಮುನಾ ನದಿ ದಡದಲ್ಲಿ ಎಸೆಯಲಾಗಿತ್ತು. ಇದನ್ನು ಕಂಡ ವಲಸೆ ಕಾರ್ಮಿಕರು, ಹಸಿವು ತಾಳಲಾರದೆ ಬಾಳೆ …
Read More »
Laxmi News 24×7