Breaking News

new delhi

ಕೊರೊನಾ ಬಂದಿದೆ ಎಂದಿದ್ದಕ್ಕೆ ಗುಂಡು ಹಾರಿಸಿದ ಗೆಳೆಯ

ಲಕ್ನೋ:ಗೆಳೆಯರು ಆಟವಾಡುತ್ತಿದ್ದಾಗ ಕೆಮ್ಮಿದ್ದಕ್ಕೆ ಕೊರೊನಾ ಬಂದಿದೆ ಅಂತ ಕೀಟಲೆ ಮಾಡಿದ್ದ ಸ್ನೇಹಿತನೊಬ್ಬನ ಮೇಲೆ ಗೆಳೆಯನೇ ಗುಂಡು ಹಾರಿಸಿದ್ದಾನೆ. ಆಟವಾಡುವಾಗ ಸುರೇಶ್ ಎಂಬಾತ ಹಲವು ಸಲ ಕೆಮ್ಮಿದ್ದಾನೆ. ಆಗ ಸ್ನೇಹಿತ ಪ್ರತೀಕ್ ಕೆಮ್ಮುತ್ತಿದ್ದ ಗೆಳೆಯನಿಗೆ ಕೊರೊನಾ ಬಂದಿದೆ ಅಂತ ಜೋಕ್ ಮಾಡಿದ್ದಾನೆ. ಇದರಿಂದ ರೋಸಿಹೋದ ಸುರೇಶ್ ತನ್ನಲ್ಲಿದ್ದ ಪಿಸ್ತೂಲ್ ನಿಂದ ಪ್ರತೀಕ್ ಮೇಲೆ ಗುಂಡು ಹಾರಿಸಿದ್ದಾನೆ. ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾ ಪ್ರದೇಶದಲ್ಲಿ ಘಟನೆ ನಡೆದಿದ್ದು, ಪ್ರತೀಕ್ ಚಿಕಿತ್ಸೆಗೆ ದಾಖಲಾಗಿದ್ದರೆ, ಆರೋಪಿ …

Read More »

ಪ್ರಧಾನಿ ಮೋದಿ ಲಾಕ್ ಡೌನ್ ನ್ನು ಮೇ 3ರವರೆಗೆ ವಿಸ್ತರಿಸಿದ್ದಕ್ಕೆ ಪ್ರಧಾನಿ ಮೋದಿಯವರ ನಿರ್ಧಾರ ಕಠಿಣ ಮತ್ತು ಸಮಯೋಚಿತ ಎಂದು ವಿಶ್ವ ಆರೋಗ್ಯ ಸಂಸ್ಥೆ ಶ್ಲಾಘಿಸಿದೆ.

ನವದೆಹಲಿ : ಪ್ರಧಾನಿ ಮೋದಿ ಲಾಕ್ ಡೌನ್ ನ್ನು ಮೇ 3ರವರೆಗೆ ವಿಸ್ತರಿಸಿದ್ದಕ್ಕೆ ಪ್ರಧಾನಿ ಮೋದಿಯವರ ನಿರ್ಧಾರ ಕಠಿಣ ಮತ್ತು ಸಮಯೋಚಿತ ಎಂದು ವಿಶ್ವ ಆರೋಗ್ಯ ಸಂಸ್ಥೆ ಶ್ಲಾಘಿಸಿದೆ. ಕೊರೊನಾ ವೈರಸ್ ವಿರುದ್ಧ ಹೋರಾಟಲು ದೇಶವನ್ನು ಮೇ3ರವರೆಗೆ ಲಾಕ್ ಡೌನ್ ಮಾಡಿರುವುದು ಕಠಿಣ ಮತ್ತು ಸಮಯೋಚಿತ ತೀರ್ಮಾನವಾಗಿದೆ. ಈಗಲೇ ಅಂಕಿಅಂಶಗಳ ಬಗ್ಗೆ ಮಾತನಾಡಬಾರದು. ಆದರೆ 6 ವಾರಗಳು ದೇಶವನ್ನು ಲಾಕ್ ಡೌನ್ ಮಾಡುವುದರಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಮಯವಾಗುತ್ತದೆ. ಹಾಗೇ …

Read More »

ಔಷಧಿ ಆಮದು: ಕೊರೋನಾ ಬಳಿಕ ಭಾರತದಿಂದ ಚೀನಾಗೆ ತೆರಳಿದ ಮೊದಲ ವಿಮಾನ ಸ್ಪೇಸ್ ಜೆಟ್!

ನವದೆಹಲಿ(ಏ.15): ಭಾರತದಲ್ಲಿ ಕೊರೋನಾ ವೈರಸ್​ ಆರ್ಭಟ ಮುಂದುವರಿದಿದೆ. ಈ ಮಾರಕ ಕೋವಿಡ್​​​-19 ತಡೆಗೆ ಭಾರತ ಸರ್ಕಾರವೂ ಭಾರೀ ಕಸರತ್ತು ನಡೆಸುತ್ತಿದೆ. ಹಾಗಾಗಿಯೇ ಇಂದು ಚೀನಾದಿಂದ ಔಷಧಿ ಆಮದು ಮಾಡಿಕೊಳ್ಳಲು ಭಾರತದಿಂದ ಸ್ಪೇಸ್​​ ಜೆಟ್​​ ವಿಮಾನ ಪ್ರಯಾಣ ಬೆಳೆಸಿದೆ. ಕೊರೋನಾ ನಂತರ ಭಾರತದ ಕೋಲ್ಕತ್ತಾದ ಮೂಲಕ ಚೀನಾದ ಶಾಂಘೈಗೆ ತೆರಳಿದ ಮೊದಲ ವಿಮಾನ ಇದಾಗಿದೆ. ಇಂದು ಬೆಳಿಗ್ಗೆ 8 ಗಂಟೆಗೆ ಕೋಲ್ಕತ್ತಾದಿಂದ ತೆರಳಿದ ವಿಮಾನ ಮಧ್ಯಾಹ್ನ 3 ಗಂಟೆ ಚೀನಾದ ಶಾಂಘೈಗೆ …

Read More »

ಕರ್ನಾಟಕದಿಂದ ದೆಹಲಿಯ ತಬ್ಲಿಘಿ ಜಮಾತ್ ಕಾರ್ಯಕ್ರಮಕ್ಕೆ ತೆರಳಿದವರು ಎಷ್ಟು?

ಬೆಂಗಳೂರು: ಕರ್ನಾಟಕದಿಂದ ದೆಹಲಿಯ ತಬ್ಲಿಘಿ ಜಮಾತ್ ಕಾರ್ಯಕ್ರಮಕ್ಕೆ ತೆರಳಿದವರು ಎಷ್ಟು? ಕೊರೊನಾ ಸೋಂಕು ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಈ ಪ್ರಶ್ನೆಗೆ ಸರ್ಕಾರದ ಬಳಿ ಈಗಲೂ ಸ್ಪಷ್ಟವಾದ ಉತ್ತರವಿಲ್ಲ. ಹೌದು, ತಬ್ಲಿಘಿ ಜಮಾತ್ ಧಾರ್ಮಿಕ ಸಭೆಗೆ ಕರ್ನಾಟಕದಿಂದ 1,300 ಮಂದಿ ಭಾಗಿಯಾಗಿದ್ದರು ಎಂದು ಸರ್ಕಾರ ಅಧಿಕೃತ ಮಾಹಿತಿಯನ್ನು ಕಳೆದ ಬುಧವಾರ ಬಿಡುಗಡೆಗೊಳಿತ್ತು. ಕರ್ನಾಟಕದಿಂದ 1,300 ಮಂದಿ ಜಮಾತ್ ಕಾರ್ಯಕ್ರಮಕ್ಕೆ ತೆರಳಿದ್ದು, 50 ಮಂದಿಗೆ ಪಾಸಿಟಿವ್ ಬಂದಿದೆ. ಬೆಂಗಳೂರಿನಲ್ಲಿ 269 ಮಂದಿ, ಇತರ …

Read More »

ಸುಳ್ಳು ಮಾಹಿತಿಗಳನ್ನೇ ನೀಡಿ ಪ್ರಪಂಚದೆಲ್ಲೆಡೆ ಕೊರೊನಾ ವೈರಸ್ ಹರಡಲು ಕಾರಣವಾದ ಚೀನಾ

ನ್ಯೂಯಾರ್ಕ್: ಸುಳ್ಳು ಮಾಹಿತಿಗಳನ್ನೇ ನೀಡಿ ಪ್ರಪಂಚದೆಲ್ಲೆಡೆ ಕೊರೊನಾ ವೈರಸ್ ಹರಡಲು ಕಾರಣವಾದ ಚೀನಾ ಆರಂಭದಲ್ಲೇ ಮಾಡಿದ ಮತ್ತೊಂದು ಎಡವಟ್ಟು ಈಗ ಬೆಳಕಿಗೆ ಬಂದಿದೆ. ಹೌದು. ವ್ಯಕ್ತಿಯಿಂದ ವ್ಯಕ್ತಿಗೆ ಈ ವೈರಸ್ ಹರಡುತ್ತಿದೆ ಎನ್ನುವುದು ತಿಳಿದಿದ್ದರೂ ಚೀನಾ 6 ದಿನಗಳ ಕಾಲ ಈ ವಿಚಾರವನ್ನು ಮುಚ್ಚಿಟ್ಟಿತ್ತು ಎಂಬುದಾಗಿ ಎಎಫ್‍ಪಿ ವರದಿ ಮಾಡಿದೆ. ಈ ಸಂಬಂಧ ಎಎಫ್‍ಪಿಗೆ ದಾಖಲೆಗಳು ಲಭ್ಯವಾಗಿದ್ದು, ವುಹಾನ್ ನಲ್ಲಿ ಸೋಂಕು ಮನುಷ್ಯನಿಂದ ಮನುಷ್ಯನಿಗೆ ಹರಡುತ್ತಿರುವ ವಿಚಾರ ಜ.14ರಂದೇ ಆರೋಗ್ಯ …

Read More »

ಕೊರೊನಾ ಹಾಟ್‌ಸ್ಪಾಟ್‌ಗಳ ಪಟ್ಟಿ ಬಿಡುಗಡೆ, ……

ನವದೆಹಲಿ : ದೇಶವನ್ನೇ ಆಲ್ಲೋಲ ಕಲ್ಲೋಲ ಮಾಡಿರುವ ಮಹಾಮಾರಿ ಕೊರೊನಾ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಹಲವು ಕ್ರಮಗಳನ್ನ ಕೈಗೊಂಡಿದ್ದು, ದೇಶದಲ್ಲಿ 170 ಜಿಲ್ಲೆಗಳು ಕೊರೊನಾ ವೈರಸ್ ಹಾಟ್‌ಸ್ಪಾಟ್‌ಗಳಾಗಿವೆ. ಇದರಲ್ಲಿ 207 ಜಿಲ್ಲೆಗಳು ಅಪಾಯದಲ್ಲಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಅತಿ ಹೆಚ್ಚು ಕರೊನಾ ಬಾಧಿತವಾಗಿರುವ ರಾಷ್ಟ್ರದ 170 ಜಿಲ್ಲೆಗಳ ಪೈಕಿ ಕರ್ನಾಟಕದ 8 ಜಿಲ್ಲೆಗಳು ಕೂಡ ಸೇರಿವೆ. ಯಾವ ಜಿಲ್ಲೆಗಳಲ್ಲಿ ಸೋಂಕಿತರ ಸಂಖ್ಯೆ ಜಾಸ್ತಿ ಇದೆಯೋ ಅಂಥಹ ಜಿಲ್ಲೆಗಳನ್ನು …

Read More »

ಮೋದಿ ನಿರ್ಧಾರಕ್ಕೆ ನಮ್ಮ ಬೆಂಬಲ ಇದ್ದೆ ಇರುತ್ತೆ, ಇದರಲ್ಲಿ ಯಾವುದೇ ಸಂಕೋಚ ಇಲ್ಲ ” : ದೇವೇಗೌಡರು

ಬೆಂಗಳೂರು, -ನಮ್ಮ ರಾಜ್ಯದಲ್ಲಿ ಕೊರೋನಾದಿಂದ ಜನ ಸತ್ತಿದ್ದು, ಪ್ರಧಾನಿ‌ ನರೇಂದ್ರಮೋದಿ ಅವರ ಕಾರ್ಯಕ್ರಮಕ್ಕೆ ನಾವು ಬೆಂಬಲ ಕೊಡುತ್ತೇವೆ. ಇದರಲ್ಲಿ ಯಾವುದೇ ಸಂಕೋಚ ಇಲ್ಲ. ಸರ್ಕಾರದ ತೀರ್ಪಿಗೆ ಬೆಂಬಲ ಕೊಡುತ್ತೇವೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಪ್ರಧಾನಿಗಳು ಮೇ 3 ರವರೆಗೂ ಲಾಕ್ ಡೌನ್ ಘೋಷಣೆ ಮಾಡಿದ್ದಾರೆ. ಕೋರೋನಾ ಹೊಡೆದೋಡಿಸಲು ಮಹಡಿಯ ಮೇಲೆ ನಿಂತು ಶಬ್ಧ ಮಾಡುವುದು. ಕತ್ತಲ್ಲಿನಿಂದ ಬೆಳಕಿನೆಡೆಗೆ ಎಂಬ ಸಂದೇಶದೊಂದಿಗೆ ದೀಪ …

Read More »

ಕಾಂಗ್ರೆಸ್ ಶಾಸಕನಿಗೂ ಕೊರೊನಾ- ಸೋಂಕು ದೃಢ ಪಡುವ ಮುನ್ನ ಸಿಎಂ ಭೇಟಿ

ಅಹ್ಮದಾಬಾದ್: ಗುಜರಾತ್‍ನ ಜಮಾಲ್‍ಪುರ-ಖಾದಿಯಾ ಕ್ಷೇತ್ರದ ಕಾಂಗ್ರೆಸ್ ಶಾಸಕನಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಕ್ಷೇತ್ರದಲ್ಲಿ ಆತಂಕ ಸೃಷ್ಟಿಸಿದೆ ಸೋಂಕಿತ ಶಾಸಕನನ್ನು ಎಸ್‍ವಿಪಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಂಕು ದೃಢ ಪಡುವ ಮುನ್ನ ಮುಖ್ಯಮಂತ್ರಿ ವಿಜಯ್ ರೂಪಾನಿ, ಉಪಮುಖ್ಯಮಂತ್ರಿ ನಿತಿನ್ ಬಾಯ್ ಪಟೇಲ್ ಮತ್ತು ಗೃಹ ಸಚಿವ ಪ್ರದೀಪ್ ಸಿಂಗ್ ಜಡೇಜಾ ಸೇರಿ ಹಲವು ಗಣ್ಯರನ್ನು ಮಂಗಳವಾರ ಬೆಳಗ್ಗೆ ಗಾಂಧಿನಗರದ ಸಚಿವಾಲಯದಲ್ಲಿ ಸೋಂಕಿತ ಶಾಸಕ ಭೇಟಿಯಾಗಿದ್ದರು. ಈ ಹಿನ್ನೆಲೆ ಸಿಎಂ ಪ್ರಮುಖ ಸಚಿವರು ಹೋಮ್ …

Read More »

ಕೇಂದ್ರ ಸರ್ಕಾರ ಹಳೆ ಮಾರ್ಗಸೂಚಿಗಳನ್ನು ಮುಂದುವರಿಸಲು ರಾಜ್ಯ ಸರ್ಕಾರಗಳಿಗೆ ಸೂಚನೆ

ನವದೆಹಲಿ: ಲಾಕ್‍ಡೌನ್ ವಿಸ್ತರಿಸಿ ಅಧಿಕೃತ ಆದೇಶ ಹೊರಡಿಸಿರುವ ಕೇಂದ್ರ ಸರ್ಕಾರ ಹಳೆ ಮಾರ್ಗಸೂಚಿಗಳನ್ನು ಮುಂದುವರಿಸಲು ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ. ಈ ನಡುವೆ ಏಪ್ರಿಲ್ 20ರ ಬಳಿಕ ಹೊಸ ಮಾರ್ಗಸೂಚಿ ಬರುವ ಸಾಧ್ಯತೆ ಇದೆ. ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಮೇ 3ರ ವರೆಗೂ ಲಾಕ್‍ಡೌನ್ ವಿಸ್ತರಿಸಿ ಘೋಷಣೆ ಮಾಡಿದ್ದಾರೆ. ಇದಾದ ಬಳಿಕ ಕೇಂದ್ರ ಗೃಹ ಇಲಾಖೆ ಇದರ ಅಧಿಕೃತ ಆದೇಶ ಪ್ರಕಟಿಸಿದ್ದು, ಮೇ 2ವರೆಗೂ ರಾಷ್ಟ್ರೀಯ ತುರ್ತು ನಿರ್ವಹಣೆ …

Read More »

ಏನಿದು ‘ಹೆಲಿಕಾಪ್ಟರ್ ಮನಿ’? ಭಾರತದಲ್ಲಿ ಸಾಧ್ಯವೇ?

ನವದೆಹಲಿ: ಕೊರೊನಾ ಬಂದ ಮೇಲೆ ಬಿಸಿನೆಸ್‍ಗಳು ನೆಲ ಕಚ್ಚಿದೆ. ದೇಶದ ಆರ್ಥಿಕತೆಯ ಮೇಲೆ ಭಾರೀ ಪೆಟ್ಟಾಗಿದೆ. ಈ ಸಂದರ್ಭದಲ್ಲಿ ‘ಹೆಲಿಕಾಪ್ಟರ್ ಮನಿ’ಯನ್ನು ಜಾರಿಗೊಳಿಸಿದರೆ ದೇಶದ ಆರ್ಥಿಕತೆ ಮೇಲಕ್ಕೆ ಎತ್ತಬಹುದು ಎನ್ನುವ ದೇಶದಲ್ಲಿ ಚರ್ಚೆ ಜೋರಾಗಿ ಆರಂಭಗೊಂಡಿದೆ. ಹೌದು. ಕುಸಿಯುತ್ತಿರುವ ಆರ್ಥಿಕತೆಯನ್ನು ದಿಢೀರ್ ಮೇಲಕ್ಕೆ ಎತ್ತುವುದು ಸದ್ಯದ ಪರಿಸ್ಥಿತಿಯಲ್ಲಿ ಅಸಾಧ್ಯ. ಆದರೆ ‘ಹೆಲಿಕಾಪ್ಟರ್ ಮನಿ’ಯನ್ನು ಜಾರಿಗೆ ತಂದರೆ ಇದಕ್ಕೆ ಪರಿಹಾರ ಸಿಗಬಹುದು ಎಂದು ತೆಲಂಗಾಣ ಮುಖ್ಯಮಂತ್ರಿ ಕೆಸಿ ಚಂದ್ರಶೇಖರ್ ರಾವ್ ಕೇಂದ್ರ …

Read More »