ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ಸ್ಪರ್ಧೆ ಬಗ್ಗೆ ಇದುವರೆಗೆ ನಮ್ಮ ಜೊತೆ ಯಾರೂ ಚರ್ಚೆ ಮಾಡಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಮ್ಮ ಹೈಕಮಾಂಡ್ ಸೋನಿಯಾ ಗಾಂಧಿ ಅವರು ಎಚ್.ಡಿ.ದೇವೇಗೌಡ ಅವರಿಗೆ ಬೆಂಬಲ ನೀಡುವ ಬಗ್ಗೆ ತೀರ್ಮಾನ ಮಾಡುತ್ತಾರೆ. ಹೈ ಕಮಾಂಡ್, ಪಾರ್ಟಿ ಏನು ತೀರ್ಮಾನ ಮಾಡುತ್ತೋ ಅದಕ್ಕೆ ನಾವು ಬದ್ಧರಾಗಿದ್ದೇವೆ ಎಂದರು. ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರು …
Read More »ಕೊರೊನಾ ಸೋಂಕು ಸಮುದಾಯಕ್ಕೆ ಹರಡಿದೆ – ಕೇಂದ್ರಕ್ಕೆ ಬರೆದ ಪತ್ರದಲ್ಲಿ ವೈದ್ಯಕೀಯ ಕ್ಷೇತ್ರದ ಕಳವಳ
ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಎರಡು ಲಕ್ಷದ ಗಡಿಯಲ್ಲಿದ್ದು ಸಮುದಾಯಕ್ಕೆ ಹರಡಿಯಾಗಿದೆ. ಆದರೆ ಕೇಂದ್ರ ಸರ್ಕಾರ ಸೋಂಕು ಸಮುದಾಯಕ್ಕೆ ಹರಡಿಲ್ಲ ಎಂದು ಸುಳ್ಳು ಹೇಳುತ್ತಿದೆ ಎಂದು ವೈದ್ಯಕೀಯ ಕ್ಷೇತ್ರದ ಹಲವು ಸಂಸ್ಥೆಗಳು ಕಳವಳ ವ್ಯಕ್ತಪಡಿಸಿವೆ. ಕೊರೊನಾ ಸೋಂಕು ಸಮುದಾಯಕ್ಕೆ ಹರಡಿರುವ ಬಗ್ಗೆ ಉಲ್ಲೇಖಿಸಿ ಇಂಡಿಯನ್ ಪಬ್ಲಿಕ್ ಹೆಲ್ತ್ ಅಸೋಸಿಯೇಷನ್ (ಐಪಿಹೆಚ್ಎ), ಇಂಡಿಯನ್ ಅಸೋಸಿಯೇಷನ್ ಅಂಡ್ ಸೋಷಿಯಲ್ ಮೆಡಿಸಿನ್ (ಐಎಪಿಎಸ್ಎಂ) ಮತ್ತು ಇಂಡಿಯನ್ ಅಸೋಸಿಯೇಷನ್ ಆಫ್ ಎಪಿಡೆಮಿಯಾಲಜಿಸ್ಟ್ (ಐಎಇ) ಪ್ರಧಾನಿ ನರೇಂದ್ರ …
Read More »ಜನತೆಗೆ ಆಡಿಯೋ ಸಂದೇಶ ರವಾನಿಸಿರುವ ಪ್ರಧಾನಿ ಕೊರೊನಾ ವಿರುದ್ಧ ಹೋರಾಡುವ ನಿಟ್ಟಿನಲ್ಲಿ ದೇಶದ ಜನತೆಗೆ ಧೈರ್ಯ ತುಂಬಿದರು
ನವದೆಹಲಿ: ಕೊರೊನಾ ಸೋಂಕನ್ನು ನಾವು ಸಮರ್ಥವಾಗಿ ಎದುರಿಸಿದ್ದೇವೆ. ಆದರೆ ದೇಶದಲ್ಲಿ ವಲಸೆ ಕಾರ್ಮಿಕರಿಂದ ಕೊಂಚ ತೊಂದರೆಯಾಗಿದೆ. ದುರಂತವಾಗಿ ಪರಿವರ್ತನೆಯಾಗದಂತೆ ನೋಡಿಕೊಳ್ಳಬೇಕು ಹೀಗಾಗಿ ನಿಯಮ, ಮಾರ್ಗಸೂಚಿಗಳನ್ನು ಭಾರತೀಯರು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಪ್ರಧಾನಿ ಮೋದಿ ಸಲಹೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಸತತ ಎರಡನೇ ಬಾರಿ ಅಧಿಕಾರಕ್ಕೆ ಬಂದು ಇಂದಿಗೆ 1 ವರ್ಷ ಪೂರ್ಣಗೊಂಡಿದೆ. ಈ ಹಿನ್ನಲೆಯಲ್ಲಿ ದೇಶದ ಜನತೆಗೆ ಆಡಿಯೋ ಸಂದೇಶ ರವಾನಿಸಿರುವ ಪ್ರಧಾನಿ ಕೊರೊನಾ …
Read More »ಕೊರೊನಾ ಬಗ್ಗೆ ಗಮನ ಕೊಡಿ, ಬಾಕಿ ವಿಚಾರ ನಮಗೆ ಬಿಡಿ- ಬಿಎಸ್ವೈಗೆ ಅಮಿತ್ ಶಾ ಭರವಸೆ
ಬೆಂಗಳೂರು: ಕೊರೊನಾ ಬಗ್ಗೆ ಗಮನ ಕೊಡಿ, ಬಾಕಿ ವಿಚಾರ ನಮಗೆ ಬಿಡಿ ಎಂದು ಸಿಎಂ ಯಡಿಯೂರಪ್ಪನವರಿಗೆ ಕೇಂದ್ರ ಗೃಹಮಂತ್ರಿ ಅಮಿತ್ ಶಾ ಹೇಳಿದ್ದಾರೆ. ಸದ್ಯ ರಾಜ್ಯ ಬಿಜೆಪಿಯಲ್ಲಿ ಬಂಡಾಯದ ಮಾತು ಜೋರಾಗಿ ಕೇಳಿ ಬರುತ್ತಿದೆ. ಆದರೆ ನೇರವಾಗಿ ಇದನ್ನು ಯಾರೂ ಒಪ್ಪಿಕೊಳ್ಳದಿದ್ದರೂ ಪರೋಕ್ಷವಾಗಿ ಬಂಡಾಯದ ಮಾತುಗಳನ್ನು ಆಡುತ್ತಿದ್ದಾರೆ. ಈ ವಿಚಾರವಾಗಿ ಅಮಿತ್ ಶಾ ಅವರು ಯಡಿಯೂರಪ್ಪನವಿಗೆ ಕರೆ ಮಾಡಿ ಮಾತನಾಡಿದ್ದು, ಈ ವಿಚಾರವನ್ನು ನಾವು ನೋಡಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ ಎನ್ನಲಾಗಿದೆ. …
Read More »ಸಂತಸದ ಸುದ್ದಿ: ಕೊರೊನಾ ಕಾರಣ ನೌಕರಿ ಹೋದರು ಕೂಡ ಚಿಂತಿಸುವ ಅಗತ್ಯವಿಲ್ಲ
ನವದೆಹಲಿ: ನೌಕರಿಗಳಿಗೆ ಸಂಬಂಧಿಸಿದಂತೆ ಸರ್ಕಾರದ ಚಟುವಟಿಕೆಗಳು ತೀವ್ರಗೊಂಡಿವೆ. ಲಾಕ್ ಡೌನ್ ಹಿನ್ನೆಲೆ ಹಲವು ಜನರು ತಮ್ಮ ಉದ್ಯೋಗಗಳನ್ನು ಕಳೆದುಕೊಂಡಿದ್ದಾರೆ. ಹೀಗಾಗಿ ಉದ್ಯೋಗಾಕಾಂಕ್ಷಿಗಳ ಸಂಖ್ಯೆಯಲ್ಲಿಯೂ ಕೂಡ ಏರಿಕೆಯಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಕೇಂದ್ರ ಕಾರ್ಮಿಕ ಸಚಿವಾಲಯ ಲಾಕ್ ಡೌನ್ ಮಧ್ಯೆಯೇ ರಾಷ್ಟ್ರೀಯ ವೃತ್ತಿ ಸೇವಾ ಯೋಜನೆ (NCS) ಅಡಿಯಲ್ಲಿ 76 ಆನ್ಲೈನ್ ಉದ್ಯೋಗ ಮೇಳಗಳನ್ನು ನಡೆಸಿ ಇದುವರೆಗೆ ಒಟ್ಟು 73 ಲಕ್ಷ ಜನರಿಗೆ ಉದ್ಯೋಗ ಕಲ್ಪಿಸಲಾಗಿದೆ ಎಂದು ಹೇಳಿದೆ, ಅಷ್ಟೇ ಅಲ್ಲ ಇಂತಹ …
Read More »ಜನರು ಮಾನಸಿಕವಾಗಿ ಅಸ್ಥಿರವಾಗಿದ್ದಾರೆ- ಧೋನಿ ನಿವೃತ್ತಿ ಎಂದವ್ರಿಗೆ ಸಾಕ್ಷಿ ತಿರುಗೇಟು
ನವದೆಹಲಿ: ಜನರು ಮಾನಸಿಕವಾಗಿ ಅಸ್ಥಿರವಾಗಿದ್ದಾರೆ ಎಂದು ಟ್ವೀಟ್ ಮಾಡುವ ಮೂಲಕ ಎಂ.ಎಸ್ ಧೋನಿ ಅವರ ನಿವೃತ್ತಿಯ ಬಗ್ಗೆ ಮಾತನಾಡಿರುವರ ವಿರುದ್ಧ ಪತ್ನಿ ಸಾಕ್ಷಿ ಧೋನಿ ಕಿಡಿಕಾರಿದ್ದಾರೆ. ಇತ್ತೀಚೆಗೆ ಭಾರತದ ಕ್ರಿಕೆಟ್ ಅಂಗಳದಲ್ಲಿ ಮಾಜಿ ನಾಯಕ ಎಂ.ಎಸ್ ಧೋನಿ ಅವರ ನಿವೃತ್ತಿ ಬಗ್ಗೆ ಸಖತ್ ಚರ್ಚೆಯಾಗುತ್ತಿದೆ. ಧೋನಿ ಅವರು ಮತ್ತೆ ಟೀಂ ಇಂಡಿಯಾಗೆ ವಾಪಸ್ ಆಗುವುದಿಲ್ಲ ಎಂದು ಹೇಳಲಾಗುತ್ತಿದೆ. 2019ರ ವಿಶ್ವಕಪ್ ಸೆಮಿಫೈನಲ್ ಪಂದ್ಯವನ್ನು ಬಿಟ್ಟರೇ ಧೋನಿ ಮತ್ತೆ ಯಾವ ಪಂದ್ಯವನ್ನು ಆಡಿಲ್ಲ. …
Read More »ಲಾಕ್ ಡೌನ್ ಅವಧಿ ಮತ್ತೆ ವಿಸ್ತರಿಸುವ ಬಗ್ಗೆ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.
ನವದೆಹಲಿ: ಲಾಕ್ ಡೌನ್ 4.0 ಜಾರಿಯಲ್ಲಿದ್ದರೂ ಕೂಡ ದೇಶದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿಲ್ಲ. ಬದಲಾಗಿ ಸೋಂಕಿನ ವೇಗ ವೆಚ್ಚುತ್ತಿದೆ. ಈ ಹಿನ್ನಲೆಯಲ್ಲಿ ಲಾಕ್ ಡೌನ್ ಅವಧಿ ಮತ್ತೆ ವಿಸ್ತರಿಸುವ ಬಗ್ಗೆ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಮೇ 31ಕ್ಕೆ ನಾಲ್ಕನೇ ಹಂತದ ಲಾಕ್ ಡೌನ್ ಅವಧಿ ಅಂತ್ಯವಾಗುತ್ತಿದೆ. ಆದರೆ, ಕೊರೋನಾ ವೈರಸ್ ಹೆಚ್ಚುತ್ತಲೇ ಇರುವುದರಿಂದ ಲಾಕ್ ಡೌನ್ ಮುಗಿಯುವ ಲಕ್ಷಣ ಕಾಣುತ್ತಿಲ್ಲ. ಕೆಂದ್ರ ಸರ್ಕಾರ ಇನ್ನೂ 2 ವಾರ …
Read More »ಕೊರೊನಾಗೆ ದೆಹಲಿ ಏಮ್ಸ್ನ ಹಿರಿಯ ವೈದ್ಯ ಬಲಿ – ಪತ್ನಿಗೂ ಸೋಂಕು……..
ನವದೆಹಲಿ: ಕೊರೊನಾ ದೇಶದಲ್ಲಿ ರುದ್ರನರ್ತನ ಮಾಡುತ್ತಿದ್ದು, ದೆಹಲಿ ಏಮ್ಸ್ ಆಸ್ಪತ್ರೆಯ ಹಿರಿಯ ವೈದ್ಯರೊಬ್ಬರು ಸೋಂಕು ತಗಲಿ ಸಾವನ್ನಪ್ಪಿದ್ದಾರೆ. ದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ಏಮ್ಸ್)ನ ಹಿರಿಯ ವೈದ್ಯರರಾದ ಡಾ.ಜಿತೇಂದ್ರ ನಾಥ್ ಪಾಂಡೆ (78) ಶನಿವಾರ ಸಾವನ್ನಪ್ಪಿದ್ದಾರೆ. ಇವರು ಏಮ್ಸ್ನ ಶ್ವಾಸಕೋಶಶಾಸ್ತ್ರ ವಿಭಾಗದ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಈ ವಿಭಾಗ ಒಂದು ವಾರದಿಂದ ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿತ್ತು. ಜಿತೇಂದ್ರ ನಾಥ್ ಪಾಂಡೆ ಮತ್ತು ಅವರ ಪತ್ನಿಗೂ ಕಳೆದ …
Read More »ಜೀ ವಾಹಿನಿಯ ಸಿಬ್ಬಂದಿಗಳಿಗೆ ಕೊರೊನಾ ಸೊಂಕು…!?
ಜೀ ಸುದ್ದಿ ವಾಹಿನಿ ದೇಶದ ಸುದ್ದಿ ವಾಹಿನಿಗಳ ಸಾಲಿನಲ್ಲಿ ಅಗ್ರ ಸ್ಥಾನ ಪಡೆಯುತ್ತದೆ, ಇಂತಹ ದೈತ್ಯ ಸಂಸ್ಥೆಯ ಸಿಬ್ಬಂದಿಗಳಿಗೆ ಕೊವಿಡ್ ೧೯ ದೃಡವಾಗಿದೆ. 28 ಸಿಬ್ಬಂದಿಗಳಿಗೆ ಕೊರೊನಾ ದೃಡವಾಗಿದ್ದು, ೩೫೦೦ ಸಿಬ್ಬಂದಿಗಳ ಗಂಟಲಿನ ದೃವದ ಪರಿಕ್ಷೆಗೆ ಕಳುಹಿಸಲಾಗಿದೆ. ಜೀ ವಾಹಿನಿಯ ಪ್ರಧಾನ ಸಂಪಾದಕರಾದ ಸುಧೀರ್ ಚೌದರಿಯವರು ಈ ಬಗ್ಗೆ ಟ್ವೀಟ್ ಮಾಡಿದ್ದು, ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ”ಇದು ಅತ್ಯಂತ ಕಷ್ಟದ ಸಮಯ ನಮ್ಮ 28 ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ. …
Read More »ಮೇ 31ರವರೆಗೆ ಲಾಕ್ಡೌನ್ ವಿಸ್ತರಣೆ,, ಕೆಲವೇ ಕ್ಷಣಗಳಲ್ಲಿ ಕೇಂದ್ರ ಸರ್ಕಾರ ಮಾರ್ಗಸೂಚಿ ಬಿಡುಗಡೆ
ನವದೆಹಲಿ: ಮೇ 31ರವರೆಗೆ ಲಾಕ್ಡೌನ್ ವಿಸ್ತರಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದ್ದು, ಇಂದು ಮಧ್ಯರಾತ್ರಿಯಿಂದಲೇ ಹೊಸ ಲಾಕ್ಡೌನ್ ಆರಂಭವಾಗಲಿದೆ. ಮೂರನೇ ಹಂತದ ಲಾಕ್ಡೌನ್ ಇಂದು ಅಂತ್ಯವಾಗಲಿದೆ. ಇಡೀ ದೇಶದಾದ್ಯಂತ ಎರಡು ವಾರಗಳ ಕಾಲ ಲಾಕ್ಡೌನ್ ವಿಸ್ತರಣೆಯಾಗಲಿದ್ದು, ಕೆಲವೇ ಕ್ಷಣಗಳಲ್ಲಿ ಕೇಂದ್ರ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಲಿದೆ. ಹೊಸ ಲಾಕ್ಡೌನ್ ಹೊಸ ರೀತಿಯಲ್ಲಿ ಇರಲಿದೆ ಅಂತ ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಸುಳಿವು ನೀಡಿದ್ದು, ಕೇಂದ್ರ ಸರ್ಕಾರದ ಲೆಕ್ಕಾಚಾರ ಹೇಗಿರಲಿದೆ ಅನ್ನೋದು …
Read More »
Laxmi News 24×7