ಬೆಳಗಾವಿ: ವೈದ್ಯರ ನಿರ್ಲಕ್ಷ್ಯದಿಂದ ಹೆರಿಗೆ ವೇಳೆ ಮಗು ಮೃತಪಟ್ಟಿರುವುದಾಗಿ ಆರೋಪಿಸಿ ಕುಟುಂಬದವರು ಬಿಮ್ಸ್ ಆಸ್ಪತ್ರೆಯಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು. ಹೊನ್ನಿಹಾಳ ಗ್ರಾಮದ ಸುನೀತಾ ಎಂಬ ಗರ್ಭಿಣಿಯನ್ನು ವಾರದ ಹಿಂದೆ ಹೊಟ್ಟೆನೋವಿನ ಹಿನ್ನೆಲೆಯಲ್ಲಿ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಲ್ಲಿನ ವೈದ್ಯರು ಅವಳತ್ತ ಲಕ್ಷ್ಯವನ್ನೇ ನೀಡಿಲ್ಲ. ಸಿಜೇರಿಯನ್ ಮಾಡಿ ಎಂದು ಅಂಗಲಾಚಿದರೂ ವೈದ್ಯರು ಕೇಳಿಲ್ಲ ಎಂಬುದು ಕುಟುಂಬದವರ ಆರೋಪ. “ಸ್ಕ್ಯಾನಿಂಗ್ ಕೂಡ ಹೊರಗಿನಿಂದ ಮಾಡಿಸಿಕೊಂಡು ಬರಲು …
Read More »ನೇಸರಗಿ: ಅಕ್ರಮ ಸಾಗಾಟವಾಗುತ್ತಿದ್ದ ಪಡಿತರ ಅಕ್ಕಿ ವಶ
ಬೈಲಹೊಂಗಲ: ನೇಸರಗಿಯಲ್ಲಿ ಅಕ್ರಮವಾಗಿ ಗೂಡ್ಸ್ ವಾಹನದಲ್ಲಿ ಸಾಗಿಸಲಾಗುತ್ತಿದ್ದ ಪಡಿತರ ಅಕ್ಕಿಯನ್ನು ಅಧಿಕಾರಿಗಳ ತಂಡ ವಶಪಡಿಸಿಕೊಂಡಿದೆ. ಅಂದಾಜು 76076 ರೂ. ಮೌಲ್ಯದ ಪಡಿತರ ಅಕ್ಕಿಯ 71 ಬ್ಯಾಗ್ ಗಳನ್ನು ಬೊಲೆರೊ ಗೂಡ್ಸ್ ವಾಹನದಲ್ಲಿ ಸಾಗಿಸುತ್ತಿದ್ದ ವೇಳೆ ಖಚಿತ ಮಾಹಿತಿ ಆಧರಿಸಿ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ಬೊಲೆರೊ ಪಿಕ್ ಅಪ್ ವಾಹನವನ್ನು ಜಪ್ತಿ ಮಾಡಿ ಕಾನೂನು ಕ್ರಮ ಮುಂದುವರಿಸಲಾಗಿದೆ
Read More »ಜೂನ್ 1ರಿಂದ ಜುಲೈ 18ರವರೆಗೆ ಸುರಿದ ಮಳೆಯಲ್ಲಿ 775 ಮನೆಗಳಿಗೆ ಹಾನಿ
ಬೆಳಗಾವಿ: ಬೆಳಗಾವಿಯಲ್ಲಿ ಭಾರೀ ಮಳೆಯಾಗಿದ್ದು, ಕಳೆದ ಎರಡು ವಾರಗಳಿಂದ ಸುರಿದ ನಿರಂತರ ಮಳೆಗೆ ಜಿಲ್ಲೆಯ ಜನ ತತ್ತರಿಸಿದ್ದಾರೆ. ಜೂನ್ 1ರಿಂದ ಜುಲೈ 18ರವರೆಗೆ ಸುರಿದ ಮಳೆಯಲ್ಲಿ 775 ಮನೆಗಳಿಗೆ ಹಾನಿಯಾಗಿದ್ದು, ಜಿಲ್ಲೆಯಲ್ಲಿ ಮೂರು ಮನೆಗಳು ಸಂಪೂರ್ಣ ನೆಲಸಮವಾಗಿದೆ. ಸವದತ್ತಿಯಲ್ಲಿ 191, ಬೈಲಹೊಂಗಲದಲ್ಲಿ 112, ಕಿತ್ತೂರಿನಲ್ಲಿ 99, ರಾಮದುರ್ಗದಲ್ಲಿ 92, ಚಿಕ್ಕೋಡಿಯಲ್ಲಿ 89, ಬೆಳಗಾವಿಯಲ್ಲಿ 42 ಮನೆಗಳಿಗೆ ಮಳೆಯಿಂದ ಹಾನಿಯಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಮಾಹಿತಿ ನೀಡಿದ್ದು, ಮಳೆ …
Read More »LOC ಮೆಹಂದಾರ್ನಲ್ಲಿ ಕರ್ತವ್ಯದಲ್ಲಿದ್ದ ವೇಳೆ ಅಚಾನಕ್ಕಾಗಿ ಗ್ರೆನೇಡ್ ಕೆಳಕ್ಕೆ ಬಿದ್ದು ಸ್ಫೋಟಗೊಂಡಿದೆ.
ಜಮ್ಮು ಮತ್ತು ಕಾಶ್ಮೀರ(ಜು.18): ಆಕಸ್ಮಿಕವಾಗಿ ಗ್ರೆನೇಡ್ಸ ಸ್ಫೋಟಗೊಂಡ ಕಾರಣ ಗಡಿ ರಕ್ಷಣಾ ಕರ್ತವ್ಯದಲ್ಲಿ ನಿರತರಾಗಿದ್ದ ಭಾರತೀಯ ಸೇನಯ ಕ್ಯಾಪ್ಟನ್ ಹಾಗೂ ಕಿರಿಯ ಕಮಿಷನ್ಡ್ ಆಫೀಸರ್ ನಿಧನರಾಗಿದ್ದಾರೆ. ಜಮ್ಮ ಮತ್ತು ಕಾಶ್ಮೀರದ ಪೂಂಚ್ ವಲಯದಲ್ಲಿ ಈ ಘಟನೆ ನಡೆದಿದೆ. LOC ಮೆಹಂದಾರ್ನಲ್ಲಿ ಕರ್ತವ್ಯದಲ್ಲಿದ್ದ ವೇಳೆ ಅಚಾನಕ್ಕಾಗಿ ಗ್ರೆನೇಡ್ ಕೆಳಕ್ಕೆ ಬಿದ್ದು ಸ್ಫೋಟಗೊಂಡಿದೆ. ಪರಿಣಾಮ ಕ್ಯಾಪ್ಟನ್ ಆನಂದ್ ಹಾಗೂ ನೈಬ್ ಸುಬೇದಾರ್ ಭಗವಾನ್ ಸಿಂಗ್ ಮೃತಪಟ್ಟಿದ್ದಾರೆ. ಮೆಹಂದಾರ್ ಸೆಕ್ಟರ್ನಲ್ಲಿ ಸೇನಾ ಟ್ರೋಪ್ನೊಂದಿಗೆ ಕಾರ್ಯನಿರ್ವಹಿಸುತ್ತಿದ್ದ …
Read More »ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ
ಬಿಬಿಎಂಪಿ ಚುನಾವಣೆ ಹತ್ತಿರವಾಗುತ್ತಿದ್ದಂತೆ ಸಿಎಂ ಬಲು ಚುರುಕಾಗಿದ್ದಾರೆ. ಸಿಲಿಕಾನ್ ಸಿಟಿಯ ಗದ್ದುಗೆ ಏರಲು ಬಿಜೆಪಿ ತಾಲೀಮು ನಡೆಸುತ್ತಿದೆ. ರಾಜಧಾನಿಯಲ್ಲಿ ಸಿಎಂ ಮಿಂಚಿನ ಸಂಚಾರ ನಡೆಸಿದರು. ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ಹಾಗೂ ಶಂಕು ಸ್ಥಾಪನೆ ನೆರವೇರಿಸಿದರು. ರಾಜ್ಕುಮಾರ್ ರಸ್ತೆಯ ಮೈಸೂರು ಸ್ಯಾಂಡಲ್ ಸೋಪ್ ಫ್ಯಾಕ್ಟರಿ ವೃತ್ತದಲ್ಲಿ ಬಸವಧಾಮ ಉದ್ಯಾನವನದಲ್ಲಿ ಸ್ಥಾಪಿಸಲಾಗಿರುವ ಬಸವಣ್ಣ ಪುತ್ಥಳಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೋಕಾರ್ಪಣೆ ಮಾಡಿದರು. ಸಿದ್ಧಗಂಗಾ ಮಠದ …
Read More »ಈಗ ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ರಾಜ್ಯದ ಎಲ್ಲ ಕಾರಾಗೃಹಗಳಲ್ಲಿ ‘ಭದ್ರತಾ ಉಸ್ತುವಾರಿ ಸಮಿತಿ’ಗಳನ್ನು ರಚಿಸಿದೆ
ಬೆಂಗಳೂರು : ನಾಡಿನ ಸೆರೆ ಹಕ್ಕಿಗಳಿಗೆ ಲಭ್ಯವಾಗುವ ರಾಜಾತಿಥ್ಯ ಸೇರಿದಂತೆ ಕಾರಾಗೃಹಗಳಲ್ಲಿ ಕಾನೂನು ಬಾಹಿರ ಕೃತ್ಯಗಳಿಗೆ ಕಡಿವಾಣ ಹಾಕಲು ಮುಂದಾಗಿರುವ ರಾಜ್ಯ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆ, ಈಗ ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ರಾಜ್ಯದ ಎಲ್ಲ ಕಾರಾಗೃಹಗಳಲ್ಲಿ ‘ಭದ್ರತಾ ಉಸ್ತುವಾರಿ ಸಮಿತಿ’ಗಳನ್ನು ರಚಿಸಿದೆ. ಈ ಸಮಿತಿ ನಿಯಮಿತವಾಗಿ ಕಾರಾಗೃಹಗಳಿಗೆ ಭೇಟಿ ನೀಡಿ ಪರಿಶೀಲಿಸಲಿದ್ದು, ಆ ವೇಳೆ ಜೈಲುಗಳಲ್ಲಿ ಅಕ್ರಮ ಚಟುವಟಿಕೆಗಳು ಪತ್ತೆಯಾದರೆ ಕೂಡಲೇ ತಪ್ಪಿತಸ್ಥ ಅಧಿಕಾರಿ ಮತ್ತು …
Read More »ವಡೇರಹಟ್ಟಿ ಗ್ರಾಮದಲ್ಲಿ ಶ್ರೀ ಚಂದ್ರಮ್ಮ ದೇವಿ ಸಮುದಾಯ ಭವನವನ್ನು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ
ಮೂಡಲಗಿ: ವಡೇರಹಟ್ಟಿ ಗ್ರಾಮದಲ್ಲಿ ಶ್ರೀ ಚಂದ್ರಮ್ಮ ದೇವಿ ಸಮುದಾಯ ಭವನವನ್ನು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಶಾಸಕರ ವಿಶೇಷ ಅನುದಾನ ಅಡಿಯಲ್ಲಿ ನಿರ್ಮಿಸಲಾದ ನೂತನ ಸಮುದಾಯ ಭವನವನ್ನು ಎಲ್ಲರೂ ಸದುಪಯೋಗ ಪಡೆದುಕೊಳ್ಳಿ ಎಂದರು.ನಾವು ಸದಾ ನಿಮ್ಮ ಸೇವೆಗೆ ಸಿದ್ಧ, ನಾವು ನಿಮ್ಮ ಕುಟುಂಬದವರೇ ಕ್ಷೇತ್ರದಲ್ಲಿ ಯಾವುದೇ ಕಾರ್ಯ ಇದ್ದರೂ ನಿಮ್ಮೊಂದಿಗೆ ಇರುತ್ತೇವೆ ಎಂದರು.ನಂತರ ಗ್ರಾಮದ ಹಿರಿಯರು ಯುವ ನಾಯಕ …
Read More »ರಾಜ್ಯ ರೈತರಿಗೆ ಮತ್ತೊಂದು ಗುಡ್ ನ್ಯೂಸ್.
ಬೆಂಗಳೂರು: ಪ್ರಾಣಿಗಳ ರಕ್ಷಣೆಗಾಗಿ ಜುಲೈ 19ರಂದು ಬೆಳಗಾವಿ ಜಿಲ್ಲೆಗೆ 82 ‘ಪಶು ಸಂಜೀವಿನಿ’ ಆಂಬ್ಯುಲೆನ್ಸ್ ಗಳನ್ನು ಲೋಕಾರ್ಪಣೆ ಮಾಡಲಾಗವುದು ಎಂದು ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಭಾನುವಾರ ಹೇಳಿದ್ದಾರೆ. ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಪಶುಸಂಗೋಪನಾ ಇಲಾಖೆಯು ಕಲ್ಯಾಣ ಕರ್ನಾಟಕದಲ್ಲಿ ರಾಜ್ಯ ಸರ್ಕಾರದ ಅನುದಾನದಲ್ಲಿ 15 ಪಶು ಸಂಜೀವಿನಿ ಆಂಬ್ಯುಲೆನ್ಸ್ಗಳನ್ನು ಪ್ರಾರಂಭಿಸಿತು. ಇತರ ಪ್ರಾಣಿಗಳು ಸೇರಿದಂತೆ ಹಸುಗಳು, ಎತ್ತು, ಎಮ್ಮೆಗಳಂತಹ ಪ್ರಾಣಿಗಳಿಗೆ ಸೂಕ್ತ ಆರೋಗ್ಯ ಸೇವೆಗಳನ್ನು ಒದಗಿಸಲು ಈ …
Read More »ಬೈಲಹೊಂಗಲ ಪಟ್ಟಣದ ಧಾರವಾಡ- ಸವದತ್ತಿ ಮಾರ್ಗದ ಬೈಪಾಸ್ ರಸ್ತೆಯ ಮೇಲೆ ಧರಣಿ ಕುಳಿತ ಪ್ರತಿಭಟನಾಕಾರರು,
ಬೈಲಹೊಂಗಲ (ಬೆಳಗಾವಿ ಜಿಲ್ಲೆ): ಪಟ್ಟಣದ ಎಲ್ಲ 27 ವಾರ್ಡ್ಗಳಲ್ಲಿಯೂ ರಸ್ತೆಗಳು ಸಂಪೂರ್ಣ ಹಾಳಾಗಿವೆ. ತಕ್ಷಣ ದುರಸ್ತಿ ಮಾಡಬೇಕು ಎಂದು ಒತ್ತಾಯಿಸಿ ಸಾರ್ವಜನಿಕರು ಸೋಮವಾರ ರಸ್ತೆ ತಡೆ ನಡೆಸಿದರು. ಬೈಲಹೊಂಗಲ ಪಟ್ಟಣದ ಧಾರವಾಡ- ಸವದತ್ತಿ ಮಾರ್ಗದ ಬೈಪಾಸ್ ರಸ್ತೆಯ ಮೇಲೆ ಧರಣಿ ಕುಳಿತ ಪ್ರತಿಭಟನಾಕಾರರು, ಸ್ಥಳೀಯ ಶಾಸಕ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಸ್ಥಳೀಯ ಪುರಸಭೆ ಅಧಿಕಾರಿಗಳು ಹಾಗೂ ಸದಸ್ಯರ ವಿರುದ್ಧವೂ ಕಿಡಿ ಕಾರಿದರು. ಜೆಡಿಎಸ್ ಜಿಲ್ಲಾ …
Read More »ಸರ್ವಪಕ್ಷ ಸಭೆಗೆ ಪ್ರಧಾನಿ ಗೈರು : ಜೈರಾಮ್ ರಮೇಶ್ ಗೆ ಸಚಿವ ಜೋಶಿ ತಿರುಗೇಟು
ನವದೆಹಲಿ: ಸರ್ವಪಕ್ಷ ಸಭೆ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ವಾಕ್ಸಮರ ನಡೆದಿದ್ದು, ಪ್ರಧಾನಿ ಯಾಕೆ ಸಭೆಗೆ ಹಾಜರಾಗಿಲ್ಲ ಎಂದು ಕಾಂಗ್ರೆಸ್ನ ಹಿರಿಯ ನಾಯಕ ಜೈರಾಮ್ ರಮೇಶ್ ಪ್ರಶ್ನಿಸಿದ್ದಾರೆ. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ತಿರುಗೇಟು ನೀಡಿದ್ದು,ಇಂದು ಸಭೆಗೆ ಪ್ರಧಾನಿ ಹಾಜರಾಗಿಲ್ಲ ಎಂದು ಕಾಂಗ್ರೆಸ್ನ ಜೈರಾಮ್ ರಮೇಶ್ ವಿಷಯ ಪ್ರಸ್ತಾಪಿಸಿದ್ದಾರೆ. 2014ಕ್ಕಿಂತ ಮೊದಲು ಪ್ರಧಾನಿ ಸರ್ವಪಕ್ಷ ಸಭೆಗೆ ಹಾಜರಾಗುತ್ತಿರಲಿಲ್ಲ ಎಂದು ನಾನು ಅವರಿಗೆ ಹೇಳಲು ಬಯಸುತ್ತೇನೆ. ಮನಮೋಹನ್ …
Read More »
Laxmi News 24×7