Breaking News

new delhi

ಅಪ್ರಾಪ್ತ ಬಾಲಕಿ ವಿವಾಹಕ್ಕೆ ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿದ ಭೂಪ; ವರ ಮಹಾಶಯ ಅರೆಸ್ಟ್

ಬೆಂಗಳೂರು: ಅಪ್ರಾಪ್ತ ಬಾಲಕಿಯನ್ನು ವಿವಾಹವಾಗಲು ವರ ಮಹಾಶಯನೊಬ್ಬ ಆಧಾರ್ ಕಾರ್ಡ್ ನ್ನೇ ನಕಲು ಮಾಡಿ ಸಿಕ್ಕಿ ಬಿದ್ದ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಆರೋಪಿ ಮದುಮಗ ಮನು ಎಂದು ಗುರುತಿಸಲಾಗಿದೆ. ಕಾನೂನು ಪ್ರಕಾರ ಯುವತಿಗೆ ವಿವಾಹವಾಗಲು 18 ವರ್ಷ ಆಗಿರಬೇಕು. ಆದರೆ ಮನು ಎಂಬ ಯುವಕ ಅಪ್ರಾಪ್ತ ಯುವತಿ ವಿವಾಹವಾಗಲೆಂದು ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ವಿವಾಹಕ್ಕೆ ಸಿದ್ಧತೆ ನಡೆಸಿದ್ದಾನೆ. ಯುವತಿಯ ಆಧಾರ್ ಕಾರ್ಡ್ ನಲ್ಲಿ ಆಕೆ ಹುಟ್ಟಿದ ದಿನಾಂಕ, ವರ್ಷವನ್ನೇ …

Read More »

ಯಮಕನಮರಡಿಯಲ್ಲಿ ಕಿರಾಣಿ ಅಂಗಡಿ ಮಾಲೀಕನ ಕೊಲೆ

ಯಮಕನಮರಡಿ: ಇಲ್ಲಿನ ಯಮಕನಮರಡಿಯಲ್ಲಿ ಕಿರಾಣಿ ಅಂಗಡಿ ಮಾಲೀಕರೊಬ್ಬರನ್ನು ಶನಿವಾರ ಬರ್ಬರವಾಗಿ ಕೊಲೆಗೈಯ್ಯಲಾಗಿದೆ.   ಹೊಸಪೇಟೆ ನಿವಾಸಿ ಪರಶುರಾಮ ಸಿದ್ದಲಿಂಗಯ್ಯ ಹಲಕರ್ಣಿ(32) ಕೊಲೆಯಾದವರು. ಬಸವರಾಜ ಭರಮಪ್ಪ ಗಲಾಟಿ (30) ಮಂಜುನಾಥ ಲಕ್ಷ್ಮಣ ಪುಟ್ಜಾನೆ (24), ಕೆಂಪಣ್ಣ ಅರ್ಜುನ್ ನೇಸರ್ಗಿ ಕೊಲೆಗೈದ ಆರೋಪಿಗಳು.   ಕೊಲೆ ನಡೆದ ಕೆಲವೇ ಹೊತ್ತಿನಲ್ಲಿ ಆರೋಪಿಗಳಾದ ಮಂಜುನಾಥ ಹಾಗೂ ಕೆಂಪಣ್ಣ ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದಾರೆ. ಇನ್ನೊಬ್ಬ ಾರೋಪಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ.

Read More »

ಸವದತ್ತಿ: ವಿದ್ಯುತ್ ಶಾಕ್ ತಗುಲಿ ಇಬ್ಬರು ರೈತರ ಸಾವು

ಸವದತ್ತಿ: ತಾಲೂಕಿನ ಹಿರೂರು ಗ್ರಾಮದಲ್ಲಿ ವಿದ್ಯುತ್ ಶಾಕ್ ತಗುಲಿ ಇಬ್ಬರು ರೈತರು ಶನಿವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.   ಫಕೀರಪ್ಪಾ ಸಿದ್ದಪ್ಪಾ ಚಂದರಗಿ (54) ಹಾಗೂ ಮಹಾದೇವ ದುರ್ಗಪ್ಪಾ ಮೇತ್ರಿ (40) ಮೃತಪಟ್ಟವರು.   ಇವರಿಬ್ಬರೂ ಕಬ್ಬಿನ ಹೊಲದಲ್ಲಿ ಕೆಲಸ ಮಾಡುವಾಗ ಹರಿದು ಬಿದ್ದ ವಿದ್ಯುತ್ ತಂತಿ ಸ್ಪರ್ಷಿಸಿ ಈ ಅವಘಡ ಸಂಭವಿಸಿದೆ.   ಸ್ಥಳಕ್ಕೆ ಸವದತ್ತಿ ಠಾಣೆ ಪೊಲೀಸರು ತೆರಳಿ ಕ್ರಮ ಕೈಗೊಂಡಿದ್ದಾರೆ.

Read More »

ಕುತೂಹಲ ಮೂಡಿಸಿದ ಕಿಚ್ಚ ಸುದೀಪ್-ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ

ನವದೆಹಲಿ: ಅಭಿನಯ ಚಕ್ರವರ್ತಿ, ನಟ ಕಿಚ್ಚ ಸುದೀಪ್ ದೆಹಲಿಯಲ್ಲಿ ಇಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಭೇಟಿಯಾಗಿದ್ದು, ಕುತೂಹಲಕ್ಕೆ ಕಾರಣವಾಗಿದೆ.   ವಿಕ್ರಾಂತ್ ರೋಣ ಚಿತ್ರದ ಪ್ರಚಾರದಲ್ಲಿ ಬಿಸಿಯಾಗಿರುವ ನಟ ಕಿಚ್ಚ ಸುದೀಪ್ ದೆಹಲಿಯಲ್ಲಿ ಬೀಡುಬಿಟ್ಟಿದ್ದು, ಈ ನಡುವೆ ಇಂದು ಬೆಳಿಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಿವಾಸಕ್ಕೆ ತೆರಳಿ ಅವರನ್ನು ಭೇಟಿಯಾಗಿ ಕೆಲ ಕಾಲ ಸಮಾಲೋಚನೆ ನಡೆಸಿದ್ದಾರೆ.   ಈ ವೇಳೆ ಕೇಂದ್ರ ಸಚಿವರ ಜತೆ ಉಪಹಾರವನ್ನು …

Read More »

ಪ್ರವಾಹ ಆತಂಕ; ಸರ್ಕಾರ, ಸಚಿವರು, ಜಿಲ್ಲಾಡಳಿತ ಜನತೆಗೆ ಶೀಘ್ರ ಸ್ಪಂದಿಸಲಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ 

    ಬೆಳಗಾವಿ: ಕಳೆದ ಮೂರು ವರ್ಷಗಳಿಂದ ನಿರಂತರ ಪ್ರವಾಹ ಉಂಟಾಗುತ್ತಿದ್ದು, ಮತ್ತೆ ಈ ವರ್ಷವೂ ಭಾರೀ ಮಳೆ ಆಗುತ್ತಿದೆ. ಆದ್ದರಿಂದ ಪ್ರವಾಹ ಉಂಟಾಗುವ ಸಾಧ್ಯತೆಗಳಿದ್ದು, ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ಜನರಿಗೆ ತೊಂದರೆ ಆಗದಂತೆ ಶೀಘ್ರ ಅಧಿಕಾರಿಗಳ ಸಭೆ ನಡೆಸಿ ಕ್ರಮಕೈಗೊಳ್ಳಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಆಗ್ರಹಿಸಿದರು.   ನಗರದ ಕಾಂಗ್ರೆಸ್‌ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ, ಸಚಿವರು, ಜಿಲ್ಲಾಡಳಿತ ಎಲ್ಲಾ …

Read More »

ರೈತರಿಗೆ ಮೇವು ಕತ್ತರಿಸುವ ಯಂತ್ರ ಹಾಗೂ ಮ್ಯಾಟ್‍ಗಳನ್ನು ವಿತರಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

  ಗೋಕಾಕ: ಕೆಎಂಎಫ್‍ನಿಂದ ರೈತ ಸಮುದಾಯಕ್ಕೆ ಸಾಕಷ್ಟು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ರೈತ ವೃಂದಕ್ಕೆ ಕರೆ ನೀಡಿದರು. ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಜಿಲ್ಲಾ ಹಾಲು ಒಕ್ಕೂಟದಿಂದ ನಡೆದ ರಾಸು ವಿಮೆಗಳ ಚೆಕ್ ವಿತರಿಸಿ ಮಾತನಾಡಿದ ಅವರು, ರೈತರ ಆರ್ಥಿಕ ಅಭಿವೃದ್ಧಿಗಾಗಿಯೇ ಕೆಎಂಎಫ್ ಬದ್ಧವಿದ್ದು ರೈತರಿಗೆ ಬೇಕಾಗಿರುವ ಎಲ್ಲ ಸೌಲತ್ತುಗಳನ್ನು ನೀಡುತ್ತಿದೆ ಎಂದು ಹೇಳಿದರು. ರೈತರಿಗೆ …

Read More »

200 ರೂದಲ್ಲಿ ಹಿಡಕಲ್ ಡ್ಯಾಂ,ಗೋಕಾಕ ಪಾಲ್ ಗೊಡಚಿನಮಲ್ಕಿ ದರ್ಶನ

ಬೆಳಗಾವಿ: ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಈ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಗೋಕಾಕ್ ಫಾಲ್ಸ್ ಹಿಡಕಲ್ ಡ್ಯಾಂ,ಮತ್ತು ನ ಗೊಡಚಿನಮಲ್ಕಿ ಜಲಪಾತಗಳ ದರ್ಶನ ಮಾಡಲು ಬೆಳಗಾವಿ ಸಾರಿಗೆ ಸಂಸ್ಥೆ ಅತ್ಯಂತ ಕಡಿಮೆ ದರದಲ್ಲಿ ಟೂರ್ ಪ್ಯಾಕೇಜ್ ಘೋಷಣೆ ಮಾಡಿದ್ದು, ವಿಶೇಷವಾದ ಬಸ್ ಸೌಲಭ್ಯ ಕಲ್ಪಿಸಿದೆ.   ಕೇವಲ 200 ರೂ ದರದಲ್ಲಿ ಹಿಡಕಲ್ ಡ್ಯಾಂ, ಗೋಕಾಕ್ ಫಾಲ್ಸ್ ದರ್ಶನ ಮಾಡಿಸಲು, ಬೆಳಗಾವಿ ಬಸ್ ನಿಲ್ದಾಣದಿಂದ ಬೆಳಗ್ಗೆ 9:00 ಗಂಟೆಗೆ ಬಸ್ …

Read More »

ADGP ಅಮೃತ್ ಪೌಲ್ ಮಂಪರು ಪರೀಕ್ಷೆಗೆ ಆಗ್ರಹ; ಡೈರಿಯ ಬಗ್ಗೆಯೂ ತನಿಖೆಯಾಗಲಿ ಎಂದ ಸಿದ್ದರಾಮಯ್ಯ

ಬೆಂಗಳೂರು: 545 ಪಿಎಸ್ ಐ ಹುದ್ದೆ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಸಿಐಡಿಯಿಂದ ಬಂಧನಕ್ಕೀಡಾಗಿರುವ ಹಿರಿಯ ಪೊಲೀಸ್ ಅಧಿಕಾರಿಗಳ ಮಂಪರು ಪರೀಕ್ಷೆ ಮಾಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.   ಪಿಎಸ್‌ಐ ಅಕ್ರಮದಲ್ಲಿ ನೇಮಕಾತಿ ವಿಭಾಗದ ಎ.ಡಿ.ಜಿ.ಪಿ ಯಾಗಿದ್ದ ಅಮೃತ್ ಪೌಲ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳ ಬಂಧನವಾಗಿದ್ದು, ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಿದರೆ ಹಗರಣದಲ್ಲಿ ಭಾಗಿಯಾಗಿರುವ ರಾಜಕಾರಣಿಗಳ ಬಗ್ಗೆ ಬಯಲಾಗಲಿದೆ. ಪ್ರಕರಣದಲ್ಲಿ ಯಾರೆಲ್ಲ ಶಾಮೀಲಾಗಿದ್ದಾರೆ ಎಂಬುದು ಗೊತ್ತಾಗುತ್ತದೆ. “ಉಪ್ಪು …

Read More »

ಸುಟ್ಟ ಸ್ಥಿತಿಯಲ್ಲಿ ಕಾರಿನಲ್ಲಿ ಮೃತದೇಹ ಪತ್ತೆ; ಸತ್ತ ಮಹಿಳೆ ಬದುಕಿರುವುದಾದರೂ ಹೇಗೆ?

ಉಡುಪಿ: ಬೈಂದೂರು ಬಳಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರು ಹಾಗೂ ಮೃತದೇಹ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮೃತಪಟ್ಟಿದ್ದಾರೆ ಎನ್ನಲಾಗಿದ್ದ ಮಹಿಳೆ ಬದುಕುಳಿದಿರುವುದು ಗೊತ್ತಾಗಿದ್ದು, ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಮೃತದೇಹ ಯಾರದು ಎಂಬುದು ಯಕ್ಷಪ್ರಶ್ನೆಯಾಗಿದೆ.   ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೈಂದೂರು ಬಳಿ ಒತ್ತಿಣೆಯ ಹೆನ್ ಬೇರು ಎಂಬಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರು ಹಾಗೂ ಕಾರಿನೊಳಗೆ ಮೃತದೇಹ ಪತ್ತೆಯಾಗಿತ್ತು.   ಕಾರಿನ ಹಿಂಬದಿ ಸೀಟಿನಲ್ಲಿ …

Read More »

2000 ರೂ ಲಂಚ: ಎಸಿಬಿ ಬಲೆಗೆ ಬಿದ್ದ ಎಫ್ ಡಿಸಿ

ಬೆಳಗಾವಿ – ಹೆಚ್ಚುವರಿ ವೇತನ ಬಡ್ತಿ ಆದೇಶಕ್ಕಾಗಿ 2 ಸಾವಿರ ರೂ ಲಂಚ ಪಡೆಯುತ್ತಿದ್ದಾಗ ಆರೋಗ್ಯ ಇಲಾಖೆ ಪ್ರಥಮ ದರ್ಜೆ ಸಹಾಯಕನೋರ್ವ ಎಸಿಬಿ ಬಲೆಗೆ ಬಿದ್ದಿದ್ದಾನೆ. ದಿನಾಂಕ: 14.07.2022 ರಂದು ಫಿಲ್ಯಾದಿ ಸಂತೊಷ ಚೌದರಿ (ಸಾಃ ಮನೆ ನಂ.830, ಗುನ್ಯಾಳಕರ ಕಲ್ಯಾಣ ಮಂಟಪ ರೊಡ್, ರಹೀಮ್ ನಗರ, ವಿಜಯಪೂರ) ಇವರು ಎಸಿಬಿ ಪೊಲೀಸ್ ಠಾಣೆ ಬೆಳಗಾವಿಗೆ ಹಾಜರಾಗಿ ತಮ್ಮ ಪಿರ್ಯ್ಯಾದಿ ನೀಡಿದ್ದರಲ್ಲಿ, ಫಿರಾದಿಯ ತಾಯಿ ಕೆ.ಎಸ್.ಕುಳಲಿ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ, …

Read More »