Breaking News
Home / new delhi (page 3)

new delhi

ಬೀದಿಬದಿ ವ್ಯಾಪಾರಿಗಳಿಗೆ ಸರ್ಕಾರ ಎಲ್ಲ ಸೌಲಭ್ಯ ಒದಗಿಸಲಿ: ಯುವ ನಾಯಕ ರಾಹುಲ್ ಜಾರಕಿಹೊಳಿ

ಬೆಳಗಾವಿ : ಬೀದಿಬದಿ ವ್ಯಾಪಾರಿಗಳು ಮಳೆ, ಗಾಳಿ, ಬಿಸಿಲು ಲೆಕ್ಕಿಸದೇ ರಸ್ತೆ ಬದಿಯಲ್ಲಿ ಕುಳಿತು ವ್ಯಾಪಾರ ಮಾಡುತ್ತಾರೆ, ಅವರ ಆರೋಗ್ಯ, ಬದುಕು, ಭವಿಷ್ಯದ ಬಗ್ಗೆ ಸರ್ಕಾರ ವಿಚಾರ ಮಾಡಿ ಸೌಲಭ್ಯ ಒದಗಿಸಬೇಕು, ಮೊದಲಿನಿಂದಲೂ ನಮ್ಮ ತಂದೆಯವರು, ಬಡವರ ಶೋಷಿತರ ಪರವಾಗಿ ನಿಂತವರು, ನಮ್ಮ ಕುಟುಂಬ ಹಾಗೂ ನಮ್ಮ ತಂದೆ ಸತೀಶ ಜಾರಕಿಹೊಳಿ ಅವರು ಶ್ರಮಿಕ ಬೀದಿಬದಿ ವ್ಯಾಪಾರಿಗಳ ಬೆನ್ನೆಲುಬಾಗಿ ನಿಂತಿದ್ದಾರೆ ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಹೇಳಿದರು. ನಗರದಲ್ಲಿ …

Read More »

ಗೋಕಾಕ : ನಗರದ ಜೆಎಸ್‍ಎಸ್ ಕಾಲೇಜಿನಲ್ಲಿ 13ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಮತದಾರರ ಗುರುತಿನ ಚೀಟಿ ವಿತರಿಸುತ್ತಿರುವ ಗಣ್ಯರು.

ಗೋಕಾಕ: ನಮ್ಮ ದೇಶದ ಮತದಾರರನ್ನು ಸಬಲೀಕರಣ, ಜಾಗೃಕ, ಸುರಕ್ಷಿತ ಮತ್ತು ಮಾಹಿತಿದಾರರನ್ನಾಗಿ ಮಾಡುವುದು. ಚುನಾವಣೆಯ ಸಮಯದಲ್ಲಿ ದೇಶದ ಮತದಾರರ ಸಕ್ರಿಯ ಭಾಗವಹಿಸುವಿಕೆಯನ್ನು ಉತ್ತೇಜಿಸುವುದು ಹಾಗೂ ಜವಾಬ್ದಾರಿಯುರ ನಾಗರಿಕರಾಗಲು ಅವರಿಗೆ ಸಹಕರಿಸುವುದು ರಾಷ್ಟ್ರೀಯ ಮತದಾರರ ದಿನದ ಧ್ಯೇಯವಾಗಿದೆ ಎಂದು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಮುರಳೀಧರ ದೇಶಪಾಂಡೆ ಹೇಳಿದರು. ಬುಧವಾರದಂದು ನಗರದ ಜೆಎಸ್‍ಎಸ್ ಕಾಲೇಜಿನಲ್ಲಿ ತಾಲೂಕಾಡಳಿತ, ತಾಪಂ, ನಗರಸಭೆ, ಶಿಕ್ಷಣ ಇಲಾಖೆ ಸೇರಿದಂತೆ ಇತರ ಇಲಾಖೆಗಳು ಆಶ್ರಯದಲ್ಲಿ ಹಮ್ಮಿಕೊಂಡ 13ನೇ ರಾಷ್ಟ್ರೀಯ ಮತದಾರರ …

Read More »

ಮೂಡಲಗಿ ತಾಲ್ಲೂಕು ರಡ್ಡಿ ಸಮಾಜಕ್ಕೆ ೨೨ ಗುಂಟೆ ನಿವೇಶನ – ಶಾಸಕ ಬಾಲಚಂದ್ರ ಜಾರಕಿಹೊಳಿ*

  *ಮೂಡಲಗಿ*: ಮೂಡಲಗಿ ತಾಲೂಕಿನ ರಡ್ಡಿ ಸಮಾಜ ಭಾಂದವರಿಗೆ ಸಮುದಾಯ ಭವನ ನಿರ್ಮಿಸಲು ಪುರಸಭೆಯಿಂದ 22 ಗುಂಟೆ ನಿವೇಶನ ನೀಡಲಾಗುವುದು ಎಂದು ಶಾಸಕ ಹಾಗೂ ಕೆ.ಎಮ್.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಭರವಸೆ ನೀಡಿದರು. ಬುಧವಾರದಂದು ಮೂಡಲಗಿ ಪಟ್ಟಣದ ಬಸವ ರಂಗ ಮಂಟಪದಲ್ಲಿ ತಾಲೂಕಾ ಮಟ್ಟದ ರಡ್ಡಿ ಬಳಗ ಹಮ್ಮಿಕೊಂಡಿದ್ದ ದಾರ್ಶನಿಕ ಕವಿ, ಮಹಾಯೋಗಿ ವೇಮನರ 611ನೇ ಜಯಂತ್ಯುತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಮಾಜ ಬಾಂಧವರು ಈ ಸಮುದಾಯ …

Read More »

ಗೋಕಾಕ : ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ.!

ಗೋಕಾಕ :  ಗೋಕಾಕ ತಾಲೂಕಿನ ವಾಲ್ಮೀಕಿ ನಗರದಲ್ಲಿ ಕುಡಿದ ಅಮಲಿನಲ್ಲಿ ಅಣ್ಣ ತಮ್ಮಂದಿರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಕುಡಿದ ಅಮಲಿನಲ್ಲಿ ತಿಲಕ ಎಂಬಾತ ಚೇತನ ಎಂಬ ಯುವಕನನ್ನು ಕೊಲೆ ಮಾಡಿದ್ದಾನೆ.   ಗೋಕಾಕ ಫಾಲ್ಸ್ ನ ಸಮೀಪವಿರುವ ವಾಲ್ಮೀಕಿ ನಗರದಲ್ಲಿ ಇಬ್ಬರು ಒಂದೇ ಮನೆಯಲ್ಲಿ ವಾಸವಾಗಿದ್ದರು. ಇಬ್ಬರು ಕುಡಿದ ಅಮಲಿನಲ್ಲಿ ಜಗಳ ಮಾಡಿಕೊಂಡಿದ್ದಾರೆ. ಈ ವೇಳೆ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ.   ಗೋಕಾಕ ಗ್ರಾಮೀಣ ಪೊಲೀಸ್ …

Read More »

ಕ್ರಿಕೆಟ್ ಆಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ*

*ಕ್ರಿಕೆಟ್ ಆಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ*   *ನಾಗನೂರ*- ನಾಗನೂರ ಪ್ರಿಮಿಯರ್ ಲೀಗ್ ಏರ್ಪಡಿಸಿದ್ದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕ್ರಿಕೆಟ್ ಆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮೊದಲಿಂದಲೂ ಕ್ರಿಕೆಟ್ ಬಗ್ಗೆ ಅಪಾರ ಅಭಿಮಾನವನ್ನು ಜೊತೆಗೆ ಕ್ರಿಕೆಟ್ ಆಟಗಾರರಾಗಿರುವ ಬಾಲಚಂದ್ರ ಜಾರಕಿಹೊಳಿ ಅವರು ಅಭಿಮಾನಿಗಳ ಒತ್ತಾಯದ ಮೇರೆಗೆ ಬ್ಯಾಟಿಂಗ್ ಮಾಡುವ ಮೂಲಕ ನೆರೆದ ಸಭಿಕರನ್ನು ರಂಜಿಸಿದರು. ಹಿರಿಯ ಸಹಕಾರಿ ಬಿ.ಆರ್. ಪಾಟೀಲ ಹಾಗೂ ಮಾಜಿ ಸಚಿವ ಆರ್. …

Read More »

1.50 ಕೋಟಿ ರೂಗಳ ಸ್ವಂತ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಸಮುದಾಯ ಭವನ ಯುಗಾದಿಗೆ ಲೋಕಾರ್ಪಣೆ-ಶಾಸಕ ಬಾಲಚಂದ್ರ ಜಾರಕಿಹೊಳಿ ಮಾಹಿತಿ.

ಮೂಡಲಗಿ: ಅರಭಾವಿ ದುರದುಂಡೀಶ್ವರ ಮಠದ ಸಿದ್ದಲಿಂಗ ಮಹಾಸ್ವಾಮಿಗಳ ಸಂಕಲ್ಪದಂತೆ ಅರಭಾವಿ ಮಠದ ಆವರಣದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ 1.50 ಕೋಟಿ ರೂಗಳ ಸ್ವಂತ ವೆಚ್ಚದಲ್ಲಿ ಸಮುದಾಯ ಭವನವನ್ನು ನಿರ್ಮಿಸಲಾಗುತ್ತಿದ್ದು, ಬರುವ ಯುಗಾದಿ ಹಬ್ಬದಂದು ಸಾರ್ವಜನಿಕರಿಗೆ ಲೋಕಾರ್ಪಣೆ ಮಾಡಲಾಗುವುದು ಎಂದು ಶಾಸಕ, ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶುಕ್ರವಾರ ಅರಭಾವಿಮಠದ ದುರದುಂಡೀಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದ ಅವರು, ಅರಭಾವಿ ಮತ್ತು ಸುತ್ತಮುತ್ತಲಿನ ಗ್ರಾಮಗಳ ಭಕ್ತಾದಿಗಳಿಗೆ ಅನುಕೂಲವಾಗಬೇಕೆಂಬ ಸದುದ್ದೇಶದಿಂದ ಮಠದ …

Read More »

ಅಂಧ ಮಹಿಳೆಯರ ಕ್ರಿಕೆಟ್ 9ರಿಂದ

ಬೆಂಗಳೂರು: ಭಾರತ ಅಂಧರ ಕ್ರಿಕೆಟ್ ಸಂಸ್ಥೆ ಮತ್ತು ಸಮರ್ಥನಂ ಟ್ರಸ್ಟ್‌ ಫಾರ್ ದಿ ಡಿಸೇಬಲ್ಸ್‌ ಸಹಯೋಗದೊಂದಿಗೆ ಇದೇ 9ರಿಂದ 13ರವರೆಗೆ ಇಂಡಸ್‌ಇಂಡ್ ಬ್ಯಾಂಕ್ ಮಹಿಳಾ ರಾಷ್ಟ್ರೀಯ ಟಿ20 ಕ್ರಿಕೆಟ್ ಟೂರ್ನಿ ಆಯೋಜಿಸಲಾಗಿದೆ. 16 ರಾಜ್ಯಗಳ ತಂಡಗಳು ಸ್ಪರ್ಧಿಸಲಿವೆ. ಬರ್ಮಿಂಗ್ ಹ್ಯಾಮ್ ನ 2023ರ ವಿಶ್ವ ಅಂಧರ ಕ್ರೀಡಾಕೂಟದಲ್ಲಿ ಭಾಗವಹಿಸುವ ತಂಡವನ್ನೂ ಈ ಸಂದರ್ಭದಲ್ಲಿ ಆಯ್ಕೆ ಮಾಡಲಾಗುವುದು. ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಸಮರ್ಥನಂ ಟ್ರಸ್ಟ್ ಸಂಸ್ಥಾಪಕ …

Read More »

ಪೋಷಕರು ಮಾಡಿದ ಸಾಲಕ್ಕೆ ಬಾಲಕನ ಮೇಲೆ ಮಾರಣಾಂತಿಕ ಹಲ್ಲೆ

ಕೊಪ್ಪಳ: ಪೋಷಕರು ಪಡೆದ ಸಾಲದ ಬಾಕಿ ತೀರಿಸಿಲ್ಲವೆಂದು ಮಗನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ (Assault on boy) ಘಟನೆ ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಕೆ. ಹೂಸೂರಿನಲ್ಲಿ ಡಿಸೆಂಬರ್‌ನಲ್ಲಿ ನಡೆದಿದ್ದು, ತಡವಾಗಿ ಪ್ರಕರಣ ಬೆಳಕಿಗೆ ಬಂದಿದೆ. ಕನಕರಾಯಪ್ಪ, ರಾಜೇಶ್ವರಿ ಸೇರಿ 6 ಜನರು, 14 ವರ್ಷದ ಬಾಲಕನನ್ನು ಗಿಡಕ್ಕೆ ಕಟ್ಟಿ ಥಳಿಸಿದ್ದಾರೆ. ಬಾಲಕನ ಮೈಮೇಲೆ ಹಾಗೂ ಗುಪ್ತಾಂಗಕ್ಕೂ ಗಾಯವಾಗಿದೆ. ಕನಕರಾಯಪ್ಪ ಎಂಬುವರು ಮಂಜುಳಾ ಮಡಿವಾಳ ಎಂಬುವರಿಗೆ …

Read More »

ಬೆಳಗಾವಿ: ವಿದ್ಯಾರ್ಥಿಗಳ ಹೆಣಗಾಟ; ಸಾರಿಗೆ ಅಧಿಕಾರಿಗಳಿಗೆ ಶಾಪ..

: ಸಮರ್ಪಕ ಬಸ್‌ ವ್ಯವಸ್ಥೆ ಮೊದಲೇ ಇಲ್ಲ, ಇದ್ದ ಬಸ್‌ಗಳಂತೂ ಸರಿಯಾದ ಸಮಯಕ್ಕೆ ಬರದೇ ವಿದ್ಯಾರ್ಥಿಗಳು ನಿಗದಿತ ತರಗತಿಗಳಿಂದ ವಂಚಿತವಾದರೇ ಪ್ರಯಾಣಿಕರಿಗೆ ನಿತ್ಯವೂ ಭಾರಿ ತೊಂದರೆಯನ್ನು ಅನುಭವಿಸುವಂತಾಗಿದ್ದು ಸಾರಿಗೆ ಇಲಾಖೆ ಪ್ರಯಾಣಿಕರ ಕೆಂಗಣ್ಣಿಗೆ ಗುರಿಯಾಗಿದೆ. ಗ್ರಾಮೀಣ ಭಾಗದಿಂದ ನಗರ, ಪಟ್ಟಣದ ಶಾಲಾ-ಕಾಲೇಜು ಹೋಗುವ ವಿದ್ಯಾರ್ಥಿಗಳು ಬಸ್‌ಗಾಗಿ ಗಂಟೆಗಟ್ಟಲೇ ಕಾಯುತ್ತಿದ್ದಾರೆ. ಹಾಗೆಯೇ ಮನೆಗೆ ಮರಳಿ ಹೋಗುವಾಗಲೂ ಸರಿಯಾದ ಸಮಯಕ್ಕೆ ಬಸ್‌ ಬಾರದೇ ಬಸ್‌ ನಿಲ್ದಾಣದಲ್ಲಿಯೇ ಕಾಲ ಕಳೆಯಬೇಕಾಗಿದೆ. ಗ್ರಾಮೀಣ ಪ್ರದೇಶಗಳಿಗೆ ಸಂಚರಿಸುವ …

Read More »

ಜನವರಿ 12ರಂದು ಹುಬ್ಬಳ್ಳಿಗೆ ಆಗಮಿಸಲಿರುವ ಮೋದಿ: ನಗರದಲ್ಲಿ ಭರದಿಂದ ಸಾಗಿದ ಸಿದ್ಧತೆ ಕಾರ್ಯ

ಹುಬ್ಬಳ್ಳಿ, : ವಾಣಿಜ್ಯನಗರಿ ಹುಬ್ಬಳ್ಳಿಗೆ ಜನವರಿ 12ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 26ನೇ ರಾಷ್ಟ್ರೀಯ ಯುವಜನೋತ್ಸವ ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ನಗರದಲ್ಲಿ ಸ್ವಚ್ಛತೆ ಹಾಗೂ ಸಿದ್ಧತೆ ಕಾರ್ಯಗಳು ಭರದಿಂದ ಸಾಗಿದೆ. ಹುಬ್ಬಳ್ಳಿಯ ರೈಲ್ವೆ ಮೈದಾನಕ್ಕೆ ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ರಮನ್ ಗುಪ್ತಾ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ನಿಟ್ಟಿನಲ್ಲಿ ರೈಲ್ವೆ ಮೈದಾನದಲ್ಲಿ …

Read More »