Breaking News
Home / new delhi (page 31)

new delhi

ಕೊವ್ಯಾಕ್ಸಿನ್​, ಕೊವಿಶೀಲ್ಡ್ ಲಸಿಕೆಗಳ ನಿಯಮಿತ ಮಾರುಕಟ್ಟೆ ಅನುಮೋದನೆಗಾಗಿ ಸಿಡಿಎಸ್​ಸಿಒ ವಿಷಯ ತಜ್ಞರ ಸಮಿತಿಯಿಂದ ಶಿಫಾರಸ್ಸು

ತುರ್ತು ಪರಿಸ್ಥಿತಿಯಲ್ಲಿ  ಷರತ್ತುಬದ್ಧ ಅನುಮತಿ ಪಡೆದಿರುವ ಕೊವಿಶೀಲ್ಡ್ ಮತ್ತು ಕೊವ್ಯಾಕ್ಸಿನ್​ ಲಸಿಕೆಗಳಿಗೆ ಸಂಪೂರ್ಣವಾಗಿ ನಿಯಮಿತ ಮಾರುಕಟ್ಟೆ ಬಳಕೆಗೆ ಅನುಮೋದನೆ ನೀಡುವಂತೆ ಭಾರತದ ಔಷಧ ನಿಯಂತ್ರಕರ ವಿಷಯ ತಜ್ಞರ ಸಮಿತಿ ಶಿಫಾರಸ್ಸು ಮಾಡಿದೆ. ಲಸಿಕೆಗಳಿಗೆ ಮಾರುಕಟ್ಟೆ ದೃಢೀಕರಣ ಸಿಕ್ಕರೆ, ಅವು ಔಷಧ ಮಾರುಕಟ್ಟೆಯಲ್ಲಿ ಸಿಗಲಿವೆ. ಸೀರಂ ಇನ್​ಸ್ಟಿಟ್ಯೂಟ್​​ನ ಕೊವಿಶೀಲ್ಡ್​ ಮತ್ತು ಭಾರತ್​ ಬಯೋಟೆಕ್​​ನ ಕೊವ್ಯಾಕ್ಸಿನ್​  ಲಸಿಕೆಗಳ ಸ್ಥಿತಿಯನ್ನು ಅಪ್​ಗ್ರೇಡ್ ಮಾಡಬೇಕು ಅಂದರೆ, ಸದ್ಯ ಅವುಗಳನ್ನು ತುರ್ತುಸಂದರ್ಭದಲ್ಲಿ ವಯಸ್ಕರಿಗೆ ಷರತ್ತುಬದ್ಧವಾಗಿ, ನಿಯಂತ್ರಿತವಾಗಿ ನೀಡಲಾಗುತ್ತಿದೆ.  …

Read More »

ಕೋಲಾರದ ಅಂತರಗಂಗೆ ಬೆಟ್ಟದಲ್ಲಿ ಬೆಂಕಿ.. ಅಪಾರ ವನಸಂಪತ್ತು ನಾಶ

ಕೋಲಾರದ ಅಂತರಗಂಗೆ ಬೆಟ್ಟದಲ್ಲಿ ಬೆಂಕಿ ಕಾಣಿಸಿಕೊಂಡು ಅಪಾರ ಪ್ರಮಾಣದ ವನಸಂಪತ್ತು ನಾಶವಾಗಿದೆ. ಯಾರೋ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದು ಸುಮಾರು 2 ಕಿ.ಮೀ ವಾಪ್ತಿವರೆಗೂ ಬೆಂಕಿ ಆವರಿಸಿದೆ. ಇನ್ನು, ನವಿಲು, ಚಿರತೆ, ಜಿಂಕೆಗಳು ಸೇರಿದಂತೆ ಅನೇಕ ಪ್ರಾಣಿಗಳು ಅಗ್ನಿಗೆ ಆಹುತಿಯಾಗಿವೆ ಅಂತಾ ಹೇಳಲಾಗ್ತಿದೆ. ಅಗ್ನಿಶಾಮಕ ದಳ ಸಿಬ್ಬಂದಿ ತೆರಳಲು ಸಾಧ್ಯವಾಗದ ಸ್ಥಳದಲ್ಲಿ ಬೆಂಕಿ ಆವರಿಸಿಕೊಂಡಿದ್ದು ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ.  

Read More »

ರಾಜ್ಯದ ಇಂದಿನ ಕೊರೋನಾ ವರದಿ

ಬೆಂಗಳೂರು- ಕರ್ನಾಟಕದಲ್ಲಿ ಇಂದು 40,499 ಹೊಸ ಪ್ರಕರಣಗಳು ಕಂಡು ಬಂದಿವೆ.   ಬೆಂಗಳೂರಿನಲ್ಲಿ ಹೊಸ ಪ್ರಕರಣಗಳು: 24,135 ರಾಜ್ಯದಲ್ಲಿ ಧನಾತ್ಮಕ ದರ: 18.80% ಬಿಡುಗಡೆಗಳು: 23,209 ಸಕ್ರಿಯ ಪ್ರಕರಣಗಳು ರಾಜ್ಯ: 2,67,650 (ಬೆಂಗಳೂರಿನಲ್ಲಿ- 184000) ಸಾವುಗಳು: 21 (ಬೆಂಗಳೂರು- 05) ಪರೀಕ್ಷೆಗಳು: 2,15,312 ಕೋವಿಡ್ ನಿರ್ಬಂಧ ಸಡಿಲಿಕೆ: ತಜ್ಞರ ಸಭೆ ನಂತರ ತೀರ್ಮಾನ.  

Read More »

ವಿದ್ಯಾರ್ಥಿಗಳಿಂದ ‘ಒಂದು ಮುಷ್ಠಿ ಅಕ್ಕಿ’ ಅಭಿಯಾನ.

ಹುಬ್ಬಳ್ಳಿ: ‘ಬಡ, ನಿರ್ಗತಿಕ ಹಾಗೂ ದಾಸೋಹ ಕೈಂಕರ್ಯ ನಡೆಸುತ್ತಿರುವ ಮಠಗಳಿಗೆ ವಿತರಿಸುವುದಕ್ಕಾಗಿ, ನಗರದ ಜಗದ್ಗುರು ಗಂಗಾಧರ ವಾಣಿಜ್ಯ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ(ಎನ್‌ಎಸ್‌ಎಸ್‌) ವಿದ್ಯಾರ್ಥಿಗಳು ‘ಒಂದು ಮುಷ್ಠಿ ಅಕ್ಕಿ’ ಅಭಿಯಾನ ಆರಂಭಿಸಿದ್ದಾರೆ’ ಎಂದು ಕಾಲೇಜಿನ ಪ್ರಾಚಾರ್ಯ ಡಾ.ಡಿ.ವಿ. ಹೊನಗಣ್ಣವರ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಸುಮಾರು 50 ವಿದ್ಯಾರ್ಥಿಗಳು ಜ. 1ರಿಂದ 20ರವರೆಗೆ ಹಮ್ಮಿಕೊಂಡಿರುವ ಅಭಿಯಾನಕ್ಕೆ ಉತ್ತಮ ಸ್ಪಂದನೆ ಸಿಕ್ಕಿದೆ. ಇದುವರೆಗೆ 25 ಕೆ.ಜಿ.ಯ 200ಕ್ಕೂ ಹೆಚ್ಚು ಅಕ್ಕಿ ಚೀಲಗಳು ಸಂಗ್ರಹವಾಗಿವೆ. …

Read More »

ಮಹಾನಗರ ಪಾಲಿಕೆ ಚುನಾವಣೆ ವೈಷಮ್ಯಕ್ಕೆ ಯುವಕನ ಹತ್ಯೆ

ಬೆಳಗಾವಿ: ಮಹಾನಗರ ಪಾಲಿಕೆ ಚುನಾವಣೆ ವೈಷಮ್ಯಕ್ಕೆ ಯುವಕನ ಹತ್ಯೆಗೆ ಯತ್ನಿಸಿರುವ ಘಟನೆ ಬೆಳಗಾವಿ ತಾಲೂಕಿನ ಮುತ್ಯಾನಟ್ಟಿ ಗ್ರಾಮದಲ್ಲಿ ನಡೆದಿದೆ.   ಜಮೀನಿಗೆ ಆಕಳು ಮೇಯಿಸಲು ಬಿಟ್ಟಿದ್ದಿಯಾ ಎಂದು ಜಗಳ ತೆಗೆದು ಶ್ರೀಕಾಂತ ಕಟಾಬಳಿ ಎನ್ನುವ ಯುವಕನ ಮೇಲೆ ಲಕ್ಷ್ಮಣ್ ದಡ್ಡಿ, ಲಕ್ಷ್ಮಣ್ ಪುತ್ರ ಸಚಿನ್ ಹಾಗೂ ರಂಜಿತ್‌ ಮಾರಣಾಂತಿಕ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ. ಘಟನೆಯಲ್ಲಿ ಶ್ರೀಕಾಂತ ಕಟಾಬಳಿ ತಲೆಗೆ ಗಂಭೀರ ಗಾಯಗಳಾಗಿದ್ದು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.   ದಡ್ಡಿ …

Read More »

ಜನಪ್ರತಿನಿಧಿಗಳಿದ್ದರೂ ಅಧಿಕಾರಿಗಳ ದರ್ಬಾರೇ

ಬೆಳಗಾವಿ: ಇಲ್ಲಿನ ಮಹಾನಗರಪಾಲಿಕೆಗೆ ಚುನಾವಣೆ ಮುಗಿದು, ನೂತನ ಸದಸ್ಯರು ಚುನಾಯಿತರಾಗಿ ಬರೋಬ್ಬರಿ ಐದು ತಿಂಗಳುಗಳೇ ಕಳದಿದ್ದರೂ ಅವರಿಗೆ ಅಧಿಕಾರದ ಭಾಗ್ಯ ಸಿಕ್ಕಿಲ್ಲ. ಜನಪ್ರತಿನಿಧಿಗಳಿದ್ದರೂ ಅಧಿಕಾರಿಗಳ ದರ್ಬಾರೇ ಮುಂದುವರಿದಿದೆ.   ಮಹಾನಗರಪಾಲಿಕೆ ಚುನಾವಣೆ ಮತದಾನ ಸೆ.3ರಂದು ನಡೆದಿತ್ತು. .6ರಂದು ಫಲಿತಾಂಶ ಪ್ರಕಟವಾಗಿತ್ತು. ಆಗಿನಿಂದಲೂ ಸದಸ್ಯರು ಪ್ರಮಾಣವಚನ ಸ್ವೀಕರಿಸುವ ಪ್ರಕ್ರಿಯೆಯೇ ನಡೆಯದಿರುವುದು ಅವರು ಅಧಿಕೃತವಾಗಿ ಅಧಿಕಾರ ಚಲಾಯಿಸುವುದಕ್ಕೆ ಅಡ್ಡಿಯಾಗಿ ಪರಿಣಮಿಸಿದೆ. ವಾರ್ಡ್‌ಗಳಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಚುರುಕುಗೊಳಿಸುವುದಕ್ಕೆ ಅವರಿಂದ ಸಾಧ್ಯವಾಗಿಲ್ಲ. ಈಚೆಗೆ ವಾಲ್ವ್‌ಮನ್‌ಗಳ ಮುಷ್ಕರದಿಂದ …

Read More »

ಬೆಳಗಾವಿಯಲ್ಲಿ ಚುಚ್ಚುಮದ್ದು ಪಡೆದ ಮೂರು ಮಕ್ಕಳು ನಿಗೂಢವಾಗಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ತನಿಖಾ ವರದಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಸಲ್ಲಿಸಲಾಗಿದೆ.

ಬೆಳಗಾವಿ: ಚುಚ್ಚುಮದ್ದು ಪಡೆದು ಜಿಲ್ಲೆಯ ರಾಮದುರ್ಗ ತಾಲೂಕಿನ ಮೂವರು ಮಕ್ಕಳು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ತನಿಖಾ ವರದಿಯನ್ನು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಸಲ್ಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಮಾಹಿತಿ ನೀಡಿದರು. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಾಥಮಿಕ ತನಿಖಾ ವರದಿಯನ್ನು ಸಿಎಂಗೆ ಕಳುಹಿಸಿ ಕೊಟ್ಟಿದ್ದೇವೆ. ಜಿಲ್ಲಾ ಲಸಿಕಾಕರಣ ಅನುಷ್ಠಾನ ಅಧಿಕಾರಿ ಡಾ.ಈಶ್ವರ್ ಗಡಾದ್ ಪರಿಶೀಲನೆ ನಡೆಸಿ, ವರದಿ ಕೊಟ್ಟಿದ್ದಾರೆ. ಟೆಕ್ನಿಕಲ್ ವರದಿ ಇರುವ ಕಾರಣ ಅದರಲ್ಲಿರುವ …

Read More »

ಆಸ್ತಿಗೆ ಸಂಬಂಧಿಸಿದ ಕೆಲಸಕ್ಕೆ ₹ 10ಸಾವಿರದಿಂದ ₹ 15ಸಾವಿರ ಲಂಚ ಕೇಳುತ್ತಾರೆ

ತೆಲಸಂಗ: ಅರಟಾಳ ಗ್ರಾಮ ಪಂಚಾಯ್ತಿಯಿಂದ ಮಂಗಳವಾರ ನಡೆದ ಗ್ರಾಮಸಭೆಯಲ್ಲಿ ಜನರು ಗ್ರಾಮ ಲೆಕ್ಕಾಧಿಕಾರಿ ವಿರುದ್ದ ಆರೋಪಗಳ ಸುರಿಮಳೆಗೈದರು.   ಶಿವಾನಂದ ಭಂಡಾರಿ, ಅಶೋಕ ಆನಗೊಂಡಿ, ಭೀಮಪ್ಪ ಭಂಡಾರಿ ಮಾತನಾಡಿ, ‘ಗ್ರಾಮ ಲೆಕ್ಕಾಧಿಕಾರಿ ಇರ್ಫಾನ್‌ ಆಲಗೂರ ಪ್ರತಿಯೊಂದಕ್ಕೂ ಹಣ ಕೇಳುತ್ತಾರೆ. ಆಸ್ತಿಗೆ ಸಂಬಂಧಿಸಿದ ಕೆಲಸಕ್ಕೆ ₹ 10ಸಾವಿರದಿಂದ ₹ 15ಸಾವಿರ ಲಂಚ ಕೇಳುತ್ತಾರೆ. ಅವರನ್ನು ವರ್ಗಾಯಿಸಿ ದಕ್ಷ ಅಧಿಕಾರಿ ಹಾಕಬೇಕು’ ಎಂದು ಒತ್ತಾಯಿಸಿದರು.   ‘ಗ್ರಾಮ ಲೆಕ್ಕಾಧಿಕಾರಿಯಿಂದ ಯಾವುದೇ ದಾಖಲಾತಿ ಪಡೆಯಲು …

Read More »

ಫ್ಯಾನ್ಸ್​ಗೆ ನಟ ದುನಿಯಾ ವಿಜಯ್​ ಭಾವುಕ ಮನವಿ

ಸ್ಯಾಂಡಲ್​ವುಡ್ ನಟ ದುನಿಯಾ ವಿಜಿ ನಾಳೆ ತಮ್ಮ 47ನೇ ವಸಂತಕ್ಕೆ ಕಾಲಿಡುತ್ತಿದ್ದು, ಈ ಬಾರಿ ತಮ್ಮ ಹುಟ್ಟು ಹಬ್ಬವನ್ನು ಆಚರಿಸುವುದಿಲ್ಲ ಅಂತ ತಮ್ಮ ಸೋಶಿಯಲ್ ಮೀಡಿಯಾ ಮೂಲಕ ಹೇಳಿಕೊಂಡಿದ್ದಾರೆ. “ಅಭಿಮಾನಿಗಳಿಗೆ ನಮಸ್ಕಾರ. ಇಡಿ ಜಗತ್ತು ಸಂಕಷ್ಟದಲ್ಲಿರುವ ಸಮಯವಿದು. ಇಂತಹ ಸಮಯದಲ್ಲಿ ನನಗೊಂದು ಅಭೂತಪೂರ್ವ ಗೆಲುವನ್ನು ನೀವೆಲ್ಲರೂ ಕೊಟ್ಟಿದ್ದೀರ. ಇಂತಹ ಹೊತ್ತಿನಲ್ಲಿ ನನ್ನ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಬೇಕು ಎಂಬ ಆಸೆ ನಿಮಗೆ ಇದೆ ಎಂಬುದು ನನಗೆ ಗೊತ್ತು. ನಾನು ಸಹ ನಿಮ್ಮನ್ನೆಲ್ಲ …

Read More »

ಬೊಮ್ಮಾಯಿ ಸರ್ಕಾರದಲ್ಲಿ ಮಂತ್ರಿಗಿರಿಗಾಗಿ ಚೌಕಾಸಿ.. ಸಿಎಂ ಬೊಮ್ಮಾಯಿಗೆ ವಲಸಿಗರದ್ದೇ ತಲೆನೋವು

ಬೆಂಗಳೂರು: ಸಂಕ್ರಾಂತಿ ಬಳಿಕ ಬೊಮ್ಮಾಯಿ ಕ್ಯಾಬಿನೆಟ್​ಗೆ ಸರ್ಜರಿ ನಡೆಯುತ್ತೆ ಅನ್ನೋ ಚರ್ಚೆ ಬಿಜೆಪಿ ಪಾಳಯದಲ್ಲಿ ಜೋರಾಗೇ ನಡೀತಿದೆ. ಇದ್ರ ಬೆನ್ನಲ್ಲೇ ಬೆಳಗಾವಿಯ ವಲಸಿಗ ಶಾಸಕರು ಸಚಿವ ಸ್ಥಾನಕ್ಕಾಗಿ ಈ ಬಾರಿ ಜೋರಾಗೇ ಲಾಬಿ ನಡೆಸ್ತಿದ್ದಾರೆ. ಬಿಜೆಪಿ ವರಿಷ್ಠರು ಮಾತ್ರವಲ್ಲದೆ ಸಂಘದ ನಾಯಕರ ಬಳಿಯೂ ಮಂತ್ರಿಗಿರಿಗಾಗಿ ಚೌಕಾಸಿ ನಡೆಸ್ತಿದ್ದಾರೆ.   ಸಂಕ್ರಾಂತಿ ಮುಗೀತು.. ಇನ್ನೇನಿದ್ರೂ ಬೊಮ್ಮಾಯಿ ಸರ್ಕಾರದಲ್ಲಿ ಬದಲಾವಣೆಯ ಸಂಕ್ರಮಣ ಶುರುವಾಗಬೇಕಷ್ಟೇ. ಸದ್ಯ ಸರ್ಕಾರದಲ್ಲಿ ನಡೀತಿರೋದು ಎಲೆಕ್ಷನ್ ಕ್ಯಾಬಿನೆಟ್ ರಚನೆಯ ತಯಾರಿ. …

Read More »