Breaking News

new delhi

ಪ್ರಥಮ ಪ್ರಾಶಸ್ತ್ಯದ ಮತ ನೀಡಿ:ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ!!

      ಬೈಲಹೊಂಗಲ: ಬೆಂಗಳೂರಿನಿಂದ ಬಂದು ಇಲ್ಲಿ ಬಂದು ಮಾತನಾಡುವವರ ಮಾತು ಬೆಳಗಾವಿಯಲ್ಲಿ ಏನೂ ನಡೆಯುವುದಿಲ್ಲ ಎಂದು ವಿಧಾನ ಪರಿಷತ್ತಿನ ಬೆಳಗಾವಿ ದ್ವಿಸದಸ್ಯ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಹೇಳಿದರು. ಅವರು ಪಟ್ಟಣದ ಮುರಗೊಡ ರಸ್ತೆಯ ಪೃಥ್ವಿ ಗಾರ್ಡನ್‌ನಲ್ಲಿ ಮಂಗಳವಾರ ನಡೆದ ವಿಧಾನ ಪರಿಷತ್ ಚುನಾವಣೆಯ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ವಿಧಾನ ಪರಿಷತ್ ಚುನಾವಣೆಯಲ್ಲಿ ನನಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡುವ ಮೂಲಕ ಪ್ರಚಂಡ ಬಹುಮತದಿಂದ …

Read More »

ಹಣ ಇಲ್ಲದಿದ್ದರೆ ಹೊಸ ತಾಲೂಕುಗಳನ್ನು ರದ್ದುಪಡಿಸಿ: ಸರ್ಕಾರಕ್ಕೆ ಹೈಕೋರ್ಟ್​ ಚಾಟಿ2017-18ನೇ ಸಾಲಿನ ಬಜೆಟ್‌ನಲ್ಲಿ ರಾಜ್ಯ ಸರ್ಕಾರ ಹೊಸದಾಗಿ ಘೋಷಿಸಿರುವ 50 ತಾಲೂಕುಗಳಿಗೆ ಕಚೇರಿ ಸ್ಥಾಪಿಸಲು ಮತ್ತು ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲು ಅನುದಾನ ಬಿಡುಗಡೆ ಮಾಡುವಲ್ಲಿ ವಿಳಂಬ ಮಾಡುತ್ತಿರುವ ಸರ್ಕಾರದ ಧೋರಣೆಗೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

ಬೆಂಗಳೂರು: ಹೊಸದಾಗಿ ಘೋಷಿಸಿರುವ 50 ತಾಲೂಕುಗಳಿಗೆ ಕಚೇರಿ ಸ್ಥಾಪಿಸಲು ಮತ್ತು ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲು ಅನುದಾನ ಬಿಡುಗಡೆ ಮಾಡುವಲ್ಲಿ ವಿಳಂಬ ಮಾಡುತ್ತಿರುವ ಸರ್ಕಾರದ ಧೋರಣೆಗೆ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ಹಣ ಇಲ್ಲದಿದ್ದರೆ ಹೊಸ ತಾಲೂಕುಗಳನ್ನು ರದ್ದುಪಡಿಸಿ ಎಂದು ಕಟುವಾಗಿ ಟೀಕಿಸಿದೆ. 2017-18ನೇ ಸಾಲಿನ ಬಜೆಟ್‌ನಲ್ಲಿ ರಾಜ್ಯ ಸರ್ಕಾರ ಹೊಸದಾಗಿ ಘೋಷಿಸಿರುವ 50 ತಾಲೂಕುಗಳಿಗೆ ಕಚೇರಿಗಳನ್ನು ಸ್ಥಾಪಿಸಲು ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ಬೀದರ್​​ನ ಸಾಮಾಜಿಕ ಕಾರ್ಯಕರ್ತ ಗುರುನಾಥ ವಡ್ಡೆ ಸಲ್ಲಿಸಿರುವ …

Read More »

ಸ್ನೇಹಿತರ ಜೊತೆಗೂಡಿ ಎಣ್ಣೆ ಪಾರ್ಟಿ.. ಮತ್ತೇರಿದ ಮೇಲೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯ..

ಹೊಸಕೋಟೆ (ಬೆಂ.ಗ್ರಾ) : ಅವಾಚ್ಯ ಪದಗಳಿಂದ ನಿಂದಿಸಿದ ಎಂದು ಕುಡಿದ ಅಮಲಿನಲ್ಲಿ ಸ್ನೇಹಿತನನ್ನೆ ಕೊಲೆ ಮಾಡಿರುವ ದಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಕೆ.ಸತ್ಯವಾರ ಗ್ರಾಮದಲ್ಲಿ ನಡೆದಿದೆ. ಎಣ್ಣೆ ಪಾರ್ಟಿ ವೇಳೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಎಂದು ಸ್ನೇಹಿತರೇ ಸೇರಿ ದೊಣ್ಣೆಯಿಂದ ಹೊಡೆದು ಚಾಕುವಿನಿಂದ ಇರಿದು ಕೊಲೆಗೈದಿದ್ದಾರೆ. ದಾವಣಗೆರೆ ಮೂಲದ ಸುಧಾಕರ್ (43) ಎಂಬುವರು ಕೊಲೆಯಾಗಿರುವ ದುರ್ದೈವಿ. ಕೆ.ಸತ್ಯವಾರ ಗ್ರಾಮದ ನಾಗಭೂಷಣ್ ಅಲಿಯಾಸ್ ನಾಗ, ಚಂದ್ರಶೇಖರ್ ಅಲಿಯಾಸ್ …

Read More »

#omicron ಆತಂಕದ ಮಧ್ಯೆಯೂ ಇಂದಿನಿಂದ ನಂದಿ ಬೆಟ್ಟ ಪ್ರವಾಸಿಗರಿಗೆ ಮುಕ್ತ ಮುಕ್ತ..!

ಬೆಂಗಳೂರು: ಸಿಲಿಕಾನ್ ಸಿಟಿಗೆ ಕೂಗಳತೆ ದೂರದಲ್ಲಿರುವ ಪ್ರವಾಸಿಗರ ಫೆವರೇಟ್ ಹಾಗೂ ಪ್ರೇಮಿಗಳ ಸ್ವರ್ಗದ ತಾಣ ನಂದಿ ಬೆಟ್ಟ ಪ್ರಿಯರಿಗೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಸಿಹಿ‌ ಸುದ್ದಿಯೊಂದನ್ನು ನೀಡಿದೆ. ಇಂದಿನಿಂದ ಪ್ರವಾಸಿಗರಿಗೆ ನಂದಿ ಬೆಟ್ಟಕ್ಕೆ ಪ್ರವೇಶ ಆರಂಭವಾಗುತ್ತಿದ್ದು, ಈ ಬಗ್ಗೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಲತಾ. ಆರ್. ಮಾಹಿತಿ ನೀಡಿದ್ದಾರೆ. ಸೋಮವಾರದಿಂದ ಶುಕ್ರವಾರದವರೆಗೆ ಪ್ರವಾಸಿಗರಿಗೆ ಅವಕಾಶ ನೀಡಲಾಗುತ್ತದೆ. ಶನಿವಾರ ಮತ್ತು ಭಾನುವಾರದಂದು ಕೊಠಡಿಗಳನ್ನು ಕಾಯ್ದಿರಿಸಿದವರಿಗೆ ಮಾತ್ರ ಅವಕಾಶ ಕಲ್ಪಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ. ಜಿಲ್ಲಾಡಳಿತ …

Read More »

‘ಲಕ ಲಕ ಲಂಬರ್ಗಿನಿ’ ಎನ್ನುತ್ತಾ ಚಂದನ್​ ಶೆಟ್ಟಿ ಜೊತೆ ಸೊಂಟ ಬಳುಕಿಸಿದ ಡಿಂಪಲ್​ ಕ್ವೀನ್

ರಾಜಾ-ರಾಣಿ ಶೋನಲ್ಲಿ ಬ್ಯುಸಿಯಾಗಿದ್ದ ಚಂದನ್​ ಯಾವುದೇ ಆಲ್ಬಂ ಸಾಂಗ್​ಗಳನ್ನ ಘೋಷಣೆ ಮಾಡಿರಲಿಲ್ಲ. ಇತ್ತೀಚಿಗೆ ಶೋ ಗ್ರ್ಯಾಂಡ್​ ಆಗಿ ಎಂಡ್​ ಆಗಿದ್ದು, ಚಂದನ್​-ನಿವೇದಿತಾ ಮೂರನೇ ಸ್ಥಾನ ಪಡೆಯುವುದರ ಮೂಲಕ ಜನರ ಮನಸ್ಸನ್ನ ಗೆದ್ದಿದ್ದರು. ಈಗ ಚಂದನ್​ ಅಭಿಮಾನಿಗಳಿಗೆ ಗುಡ್​ನ್ಯೂಸ್​ ಒಂದನ್ನ ನೀಡಿದ್ದಾರೆ. ರಾಪರ್​ ಚಂದನ್​ ಶೆಟ್ಟಿ ಅವರು ಏನೇ ಮಾಡಿದ್ರು ಸಖತ್​ ಡಿಫರೆಂಟ್​ ಆಗಿ ಮಾಡ್ತಾರೆ. ಕ್ಯಾಚಿ ಸಾಹಿತ್ಯ, ಅದ್ಧೂರಿ ಸೆಟ್​, ಕಾಸ್ಟೂಮ್​ಗಳು ಅವರ ಆಲ್ಬಂ ಸಾಂಗ್ಸ್​ಗಳಲ್ಲಿ ನೀವು ನೋಡಿರ್ತಿರಾ. ಇನ್ನು …

Read More »

ಪ್ರೇಮಿಗಳು ಇಬ್ಬರೂ ತಬ್ಬಿಕೊಂಡು ಮುಡಿಕಟ್ಟೆ ಬಳಿ ಕಪಿಲಾ ನದಿಗೆ ಹಾರಿದರು! ಮುಂದೇನಾದರು?

ಮೈಸೂರು: ಇಬ್ಬರು ಯುವ ಪ್ರೇಮಿಗಳು ಜನುಮದ ಜೋಡಿಯಾಗಿ ಪರಸ್ಪರ ತಬ್ಬಿಕೊಂಡು ಮುಡಿಕಟ್ಟೆ ಬಳಿ ಕಪಿಲಾ ನದಿಗೆ ಹಾರಿದ್ದಾರೆ. ಹಾಗೆ ಪ್ರೇಮಿಗಳು ಕಪಿಲಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ಬಳಿ ನಡೆದಿದೆ. ಕೊನೆಗೆ ತೆಪ್ಪ ನಡೆಸುವ ಅಂಬಿಗರಿಂದ ಪ್ರೇಮಿಗಳ ರಕ್ಷಣೆಯಾಗಿದೆ. ಅಭಿ (19) ಮತ್ತು 17 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯಿಂದ ಆತ್ಮಹತ್ಯೆ ಯತ್ನ ನಡೆದಿದೆ. ಬಾಲಕಿಯು ಚಾಮರಾಜನಗರದ ಕಾಲೇಜು ವಿದ್ಯಾರ್ಥಿನಿಯಾಗಿದ್ದರೆ ಅಭಿ ಪೆಟ್ರೋಲ್ ಬಂಕ್ …

Read More »

ಸಂವಿಧಾನ ಸಮರ್ಪಕ ದಿನದಂದು ಗೃಹದಳ ಇಲಾಖೆ ಯಿಂದ ಗೌರವ ಪ್ರತಿಜ್ಞೆ .

ಭೂಸುಧಾರಣಾ ತಿದ್ದುಪಡಿ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ, ಗೋಹತ್ಯೆ ನಿಷೇಧ ಕಾಯ್ದೆ ವಾಪಸ್‌ಗೆ ಆಗ್ರಹ.     ಬೆಳಗಾವಿ ಜಿಲ್ಲಾ ಗೃಹ ರಕ್ಷಣಾ ದಳದಿಂದ ಸಂವಿಧಾನ ಪ್ರತಿಜ್ಞೆ ಶಪತ ಗೌರವ ಅರ್ಪಣೆ, ನವೆಂಬರ್ ೨೬ ರಂದು ಭಾರತ‌ ದೇಶಕ್ಕೆ ಡಾ ಬೀ ಆರ್ ಅಂಬೇಡ್ಕರ್ ಅವರು ಸಂವಿಧಾನ ಅರ್ಪಣೆ ಮಾಡಿ ದೇಶದ ಪ್ರಜಾಪ್ರಭುತ್ವ ಭದ್ರತೆ ಹಾಗೂ ಕಾನೂನಿನ ಚೌಕಟ್ಟಿನ ಮಹತ್ವ ಮತ್ತು ಸಮರ್ಪಕ ಸಮಾನತೆಯ ಬಗ್ಗೆ ಬರೆದಿಟ್ಟ ಸಂವಿಧಾನವನ್ನು ದೇಶಕ್ಕೆ …

Read More »

ವಿವೇಕರಾವ್ ಪಾಟೀಲ್ ಮನೆಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಭೇಟಿ,

*ಚಿಕ್ಕೋಡಿ ಬ್ರೇಕಿಂಗ್*   ವಿವೇಕರಾವ್ ಪಾಟೀಲ್ ಮನೆಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಭೇಟಿ,   ಒಂದು ಗಂಟೆಗೂ ಹೆಚ್ಚಿನ ಕಾಲ ವಿವೇಕ್ ಕತೆ ರಮೇಶ್ ಚರ್ಚೆ,   ಕಾಂಗ್ರೇಸ್ ನಿಂದ ಪರಿಷತ್ ಟಿಕೇಟ್ ವಂಚಿತರಾಗಿರೋ ವಿವೇಕರಾವ್ ಪಾಟೀಲ್, ಬೆಕ್ಕೇರಿ ಗ್ರಾಮದ ವಿವೇಕರಾವ್ ಪಾಟೀಲ್ ಮನೆಗೆ ಭೇಟಿ ನೀಡಿ ಮಾತುಕತೆ,   ಬಿಜೆಪಿಗೆ ಬರುವಂತೆ ವಿವೇಕ್ ಬಳಿ ಮನವಿ ಮಾಡಿರುವ ರಮೇಶ್ ಜಾರಕಿಹೊಳಿ,   ಸ್ವತಂತ್ರ ಸ್ಪರ್ಧೆಯ ಬಗ್ಗೆ ಇನ್ನೂ …

Read More »

ರಾಜ್ಯಾದ್ಯಂತ ಮುಂದಿನ ಐದು ದಿನ ಭಾರೀ ಮಳೆ : ಮುನ್ಸೂಚನೆ ನೀಡಿದ ಹವಮಾನ ಇಲಾಖೆ

ಬೆಂಗಳೂರು: ಮುಂದಿನ ಐದು ದಿನ ರಾಜ್ಯಾದ್ಯಂತ ಮಳೆ ಅಬ್ಬರ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೊದಲ ಮೂರು ದಿನ ರಾಜ್ಯಾದ್ಯಂತ ವ್ಯಾಪಕ ಮಳೆಯಾಗಲಿದ್ದು, ನಂತರದ ಎರಡು ದಿನ ಮೋಡ ಕವಿದ ವಾತಾವರಣ ಇರಲಿದೆ. ಕರಾವಳಿ ಭಾಗದಲ್ಲಿ ಮುಂದಿನ ಮೂರು ದಿನಗಳು ಮಳೆ ಸಾಧ್ಯತೆ ಇದ್ದು, ಕರಾವಳಿಯ ಎಲ್ಲಾ ಜಿಲ್ಲೆಗಳಿಗೂ ಇಂದು ನಾಳೆ ಯಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಒಳನಾಡಿನ ಕೆಲ ಜಿಲ್ಲೆಗಳಿಗೂ ಯಲ್ಲೋ ಅಲರ್ಟ್ ಘೋಷಣೆ …

Read More »

ಸುಣಧೋಳಿಯಲ್ಲಿ ಸ್ವಾಮೀಜಿಗಳಿಂದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಪುಷ್ಪಾರ್ಚಣೆ

  ಮೂಡಲಗಿ : ಮಠ-ಮಾನ್ಯಗಳಿಗೆ ಭಕ್ತ ಸಮುದಾಯವೇ ನಿಜವಾದ ಆಸ್ತಿ. ಶ್ರೀ ಮಠದ ಶ್ರೇಯೋಭಿವೃದ್ಧಿಗೆ ಭಕ್ತರೂ ಸಹ ತಮ್ಮ ತನು-ಮನ-ಧನದಿಂದ ಸಹಕಾರ ನೀಡುವಂತೆ ಕೆಎಂಎಫ್ ಅಧ್ಯಕ್ಷರೂ ಆಗಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಸುಣಧೋಳಿ ಗ್ರಾಮದಲ್ಲಿ ರವಿವಾರ ಸಂಜೆ ಜಡಿಸಿದ್ಧೇಶ್ವರ ಮಠದಲ್ಲಿ ಜರುಗಿದ ಸತ್ಕಾರ ಸಮಾರಂಭದಲ್ಲಿ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಮಠಗಳ ಉನ್ನತಿಗಾಗಿ ಈ ಭಾಗದಲ್ಲಿ ಧಾರ್ಮಿಕ ವಾತಾವರಣ ನಿರ್ಮಿಸುತ್ತಿರುವ ಮಠಗಳಿಗೆ ಭಕ್ತರು ತಮ್ಮ ವೈಯಕ್ತಿಕ ಮನಸ್ತಾಪಗಳನ್ನು …

Read More »