Breaking News

new delhi

ಮಕ್ಕಳ ಜೊತೆ ಶಿಲ್ಪಾ ಶೆಟ್ಟಿ ಸುತ್ತಾಟ- ರಾಜ್ ಕುಂದ್ರಾ ಮಿಸ್ಸಿಂಗ್

ಮುಂಬೈ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ, ಪತಿ ರಾಜ್ ಕುಂದ್ರಾ ಬಿಡುಗಡೆಯಾಗುತ್ತಿದ್ದಂತೆ ಸೋಶಿಯಲ್ ಮೀಡಿಯಾ ಸೇರಿದಂತೆ ತಮ್ಮ ದಿನ ನಿತ್ಯದ ಚಟುವಟಿಕೆಯಲ್ಲಿ ಸಖತ್ ಆ್ಯಕ್ಟಿವ್ ಆಗಿದ್ದಾರೆ. ಇದೀಗ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಆದರೆ ರಾಜ್‍ ಕುಂದ್ರಾ ಕಾಣಿಸದೇ ಇರುವುದರ ಕುರಿತಾಗಿ ಅಭಿಮಾನಿಗಳು ಪ್ರಶ್ನೆ ಮಾಡುತ್ತಿದ್ದಾರೆ. ಈ ವೀಕೆಂಡ್‌ನಲ್ಲಿ ಶಿಲ್ಪಾ ಶೆಟ್ಟಿ ತಮ್ಮ ಮಕ್ಕಳಾದ ವಿಯಾನ್, ಸಮಿಷಾ ಹಾಗೂ ತಾಯಿ ಸುನಂದಾ ಶೆಟ್ಟಿ ಜೊತೆಯಲ್ಲಿ ಆಲಿಬಾಗ್‍ಗೆ ಹೋಗಿದ್ದಾರೆ. ಶಿಲ್ಪಾ ಶೆಟ್ಟಿ ತೆರಳುವಾಗ ನಗುಮೊಗದಿಂದಲೇ …

Read More »

ಮುಂಗಾರು ಅಧಿವೇಶನ ವೇಳೆ ಪ್ರತಿಭಟನೆ ನಡೆಸಲು ಸಂಸದ ಬದಲು ಬೇರೆ ಸ್ಥಳ ಆಯ್ಕೆ ಮಾಡಿ : ರೈತರರಿಗೆ ಪೊಲೀಸ್ ರಿಂದ ಸಲಹೆ

40 ಕ್ಕೂ ಹೆಚ್ಚು ರೈತ ಸಂಘಗಳ ಒಕ್ಕೂಟವಾದ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಪ್ರತಿದಿನ ಸಂಸತ್ತಿನ ಹೊರಗೆ 200 ರೈತರನ್ನು ಒಳಗೊಂಡ ಪ್ರತಿಭಟನೆಯನ್ನು ಯೋಜಿಸಿದೆ. ಬಲ್ಬೀರ್ ಸಿಂಗ್ ರಾಜೇವಾಲ್, ದರ್ಶನ್ ಪಾಲ್, ಹನ್ನನ್ ಮೊಲ್ಲಾ, ಜೋಗಿಂದರ್ ಸಿಂಗ್ ಉಗ್ರಾಹನ್, ಮತ್ತು ಯೋಗೇಂದ್ರ ಯಾದವ್ ಸೇರಿದಂತೆ ಮೋರ್ಚಾದ ಹಲವಾರು ಸದಸ್ಯರು ಶನಿವಾರ ಲೋಕಸಭೆ ಮತ್ತು ರಾಜ್ಯಸಭಾ ಸದಸ್ಯರಿಗೆ , ರೈತರ ಬೇಡಿಕೆಗೆ ದನಿಯಾಗಬೇಕು ಮತ್ತು ಅಧಿವೇಶನದಿಂದ ಹೊರನಡೆಯಬೇಕು ಎಂದು ರೈತ ಮುಖಂಡರು …

Read More »

BIG ENCOUNTER ಕಣಿವೆ ನಾಡಿನಲ್ಲಿ 5 ಭಯೋತ್ಪಾದಕರು ಉಡೀಸ್

ನವದೆಹಲಿ: ಲಷ್ಕರ್-ಎ-ತೊಯ್ಬಾ -ರೆಸಿಸ್ಟೆನ್ಸ್ ಫ್ರಂಟ್ ನೊಂದಿಗೆ ಸಂಪರ್ಕ ಹೊಂದಿದ ಒಟ್ಟು ಐದು ಭಯೋತ್ಪಾದಕರು ನಿನ್ನೆ ಜಮ್ಮು & ಕಾಶ್ಮೀರದ ಶೋಪಿಯಾನ್‌ನಲ್ಲಿ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಹತ್ಯೆಗೀಡಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ತಲ್ರಾನ್ ಗ್ರಾಮದಲ್ಲಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ ಬೆನ್ನಲ್ಲೆ ಉಗ್ರರ ಎನ್‌ಕೌಂಟರ್ ನಡೆದಿದೆ. ಇನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಪೊಲೀಸರು ಮತ್ತು ಸೇನೆಯ ಜಂಟಿ ಶೋಧ ಕಾರ್ಯಾಚರಣೆಯನ್ನು ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮತ್ತೊಂದು …

Read More »

ಉತ್ತರ ಕನ್ನಡ: ಗ್ಯಾಸ್ ಟ್ಯಾಂಕರ್ ಸ್ಫೋಟ; ಸುತ್ತಮುತ್ತ 300-400 ಮೀಟರ್ ವ್ಯಾಪಿಸಿರುವ ಬೆಂಕಿ

ಉತ್ತರ ಕನ್ನಡ: ಇಂದು (ಅಕ್ಟೋಬರ್ 13) ಬೆಳಿಗ್ಗೆ 5.30ರ ಸುಮಾರಿಗೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಇಡಗುಂದಿ ಬಳಿ ಗ್ಯಾಸ್ ಟ್ಯಾಂಕರ್ ಸ್ಫೋಟಗೊಂಡಿದೆ. ಸ್ಪೋಟದಿಂದಾಗಿ ಸುತ್ತಮುತ್ತ 300 ರಿಂದ 400 ಮೀಟರ್ ಬೆಂಕಿ ವ್ಯಾಪಿಸಿದೆ. ಸಾಕಷ್ಟು ದೂರ ವ್ಯಾಪ್ತಿಯಲ್ಲಿ ಹಬ್ಬಿಕೊಂಡಿದ್ದ ಬೆಂಕಿಯನ್ನು ನಂದಿಸಲು ಅಗ್ನಿಶಾಮಕದಳದ ಸಿಬ್ಬಂದಿಗಳು ಹರಸಾಹಸ ಪಡಬೇಕಾಯಿತು. ಸದ್ಯ 300 ರಿಂದ 400 ಮೀಟರ್ ದೂರಗಳಷ್ಟು ಸ್ಪೋಟದಿಂದ ಏನಾಗಿದೆ ಎನ್ನುವ ಮಾಹಿತಿ ದೊರೆಯದೆ ಅಧಿಕಾರಿಗಳು ಕಂಗಾಲಾಗಿದ್ದಾರೆ.  

Read More »

ಬಾಗಲಕೋಟೆಯಲ್ಲಿ IT ದಾಳಿ ಅಂತ್ಯ; ತುಮಕೂರಲ್ಲಿ ಮುಂದುವರಿದ ಶೋಧಕಾರ್ಯ

ಬಾಗಲಕೋಟೆ/ ತುಮಕೂರು: ಬೆಂಗಳೂರು ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆಸುತ್ತಿರುವ ಐಟಿ ಅಧಿಕಾರಿಗಳು ಇಂದು ಕೂಡ ಹಲವು ಭಾಗಗಳಲ್ಲಿ ದಾಳಿಯನ್ನ ಮುಂದುವರಿಸಿದ್ದಾರೆ. ಅದರಂತೆ ತುಮಕೂರು ಜಿಲ್ಲೆಯಲ್ಲಿ ಇಂದು ಕೂಡ ದಾಳಿ ಕಂಟಿನ್ಯೂ ಆಗಿದೆ. ಕೊರಟಗೆರೆ ತಾಲೂಕಿನ ಸಿಂಗ್ರಿಹಳ್ಳಿ ಬಳಿಯ ಸತ್ಯನಾರಾಯಣ ಕನ್ಸ್​​ಟ್ರಕ್ಷನ್ ಪ್ರೈ.ಲಿ. ಕಚೇರಿ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಸ್​ಎನ್​ಸಿ ಕಂಪನಿಯ ಕಡತಗಳ ಪರಿಶೀಲನೆ ಮಾಡುತ್ತಿದ್ದಾರೆ. ಇನ್ನು ಎಸ್​ಎನ್​ಸಿ ಎತ್ತಿನಹೊಳೆ ಯೋಜನೆಯ ಪೈಪ್ ಲೈನ್ ಕಾಮಗಾರಿಯನ್ನ ನಡೆಸುತ್ತಿದೆ. ಅದರಂತೆ …

Read More »

ಸಿಎಂ ಬೊಮ್ಮಾಯಿ ‘ದೆಹಲಿ ಯಾತ್ರೆ’.. ಸಚಿವಾಕಾಂಕ್ಷಿಗಳಲ್ಲಿ ಚಿಗುರಿದ ಆಸೆ

ಬೆಂಗಳೂರು: ಇವತ್ತು ಸಿಎಂ ಬಸವರಾಜ್‌ ಬೊಮ್ಮಾಯಿ ಹೈಕಮಾಂಡ್ ನಾಯಕರ ಭೇಟಿಗಾಗಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಿ, ಕೇಂದ್ರದ ಸಚಿವರನ್ನು ಭೇಟಿ ಮಾಡಿ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸಲಿದ್ದಾರೆ. ಜೊತೆಗೆ ಹೈಕಮಾಂಡ್‌ ನಾಯಕರ ಬಳಿ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಲಿದ್ದಾರೆ. ಅಲ್ಲದೇ ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಬರಬೇಕಿರುವ ಅನುದಾನದ ಬಗ್ಗೆಯೂ ಪ್ರಸ್ತಾಪ ಮಾಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇವರೆಲ್ಲರ ಭೇಟಿ ಮುಗಿದ ನಂತರ …

Read More »

ಗೋಕಾಕ ನಗರದಲ್ಲಿ ವ್ಯಾಕ್ಸಿನೇಷನ್ ಬೃಹತ್ ಮೇಳ*

*ಗೋಕಾಕ ನಗರದಲ್ಲಿ ವ್ಯಾಕ್ಸಿನೇಷನ್ ಬೃಹತ್ ಮೇಳ*   *ಗೋಕಾಕ ನಗರದಲ್ಲಿರುವ ಸಮಸ್ತ ನಾಗರಿಕರು “ಬೃಹತ್ ವ್ಯಾಕ್ಸಿನೇಷನ್” ಮೇಳದ ಸದುಪಯೋಗ ಪಡಿಸಿಕೊಳ್ಳುವಂತೆ ಶಾಸಕರಾದ ಶ್ರೀ ರಮೇಶ ಜಾರಕಿಹೊಳಿ ಅವರು ಸಮಸ್ತ ಗೋಕಾಕ ನಾಗರಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ*   *ನಿಮ್ಮ ಹತ್ತಿರದ ಲಸಿಕಾ ಕೇಂದ್ರದ ಮಾಹಿತಿ*   *08/10/21** * *COVID* **VACCINE*CENTERS* **GOKAK * *CITY* 1)Mayur school covaxin 100 doses Covishield 150 doses. 2)Valmiki ground Covishield …

Read More »

ರಾಜ್ಯಸಭೆಯ ಕೊನೆಯ 7 ಅಧಿವೇಶನಗಳಲ್ಲಿ ಶೇ100 ಹಾಜರಾತಿ ಪಡೆದ ಏಕೈಕ ಸಂಸದ ಎಸ್‌ ಆರ್ ಬಾಲಸುಬ್ರಮಣ್ಯಂ 

ದೆಹಲಿ: ಶೇಕಡಾ 78 ರಷ್ಟು ರಾಜ್ಯಸಭಾ (Rajya Sabha) ಸದಸ್ಯರು ಸದನದ ಕಲಾಪಗಳಿಗೆ ಪ್ರತಿನಿತ್ಯ ಹಾಜರಾಗುತ್ತಿದ್ದರು ಎಂದು ಸದನದ ಸೆಕ್ರೆಟರಿಯಟ್ ನಡೆಸಿದ ಅಧ್ಯಯನವು ತೋರಿಸಿದೆ. ಸಂಸತ್ತಿನ ಮೇಲ್ಮನೆಯಲ್ಲಿ ಸಂಸದರ ಹಾಜರಾತಿಯ ವಿಶ್ಲೇಷಣೆ ಪ್ರಕಾರ ಎಐಎಡಿಎಂಕೆ (AIADMK) ಸದಸ್ಯ ಎಸ್‌ಆರ್ ಬಾಲಸುಬ್ರಮಣ್ಯಂ(SR Balasubramaniam) ಅಧಿವೇಶನಕ್ಕೆ ತಪ್ಪದೇ ಹಾಜರಾಗುವ ರಾಜ್ಯಸಭಾ ಸದಸ್ಯರು ಎಂದು ಹೇಳಿದೆ. ಅಧ್ಯಯನದ ಪ್ರಕಾರ 75ರ ಹರೆಯದ ಬಾಲಸುಬ್ರಮಣ್ಯಂ ಈ 7 ಅಧಿವೇಶನಗಳ ಎಲ್ಲಾ 138 ಕಲಾಪಗಳಲ್ಲಿ ಭಾಗವಹಿಸಿದರು. ಒಂದು …

Read More »

ವಿಜಯನಗರದಲ್ಲಿ ಕಲುಷಿತ ನೀರು ಸೇವಿಸಿ 6 ಜನ ಸಾವು ಪ್ರಕರಣ; ಗ್ರಾಮ ತೊರೆದ ಜನರು, ಶಾಲೆಗೆ ರಜೆ ಘೋಷಣೆ

ವಿಜಯನಗರ: ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮಕರಬ್ಬಿಯಲ್ಲಿ ಕಲುಷಿತ ನೀರು ಸೇವಿಸಿ 6 ಜನ ಸಾವನ್ನಪ್ಪಿರುವ ಕಾರಣ ಆತಂಕಗೊಂಡ ಕೆಲ ಕುಟುಂಬಗಳು ಗ್ರಾಮವನ್ನು ತೊರೆದು ಹೋಗಿವೆ. ಕೆಲ ಜನರು ಮನೆಗೆ ಬೀಗ ಹಾಕಿ ಸಂಬಂಧಿಕರ ಮನೆಗೆ ತೆರಳಿದ್ದಾರೆ. ಅಸ್ವಸ್ಥಗೊಂಡ ಕೆಲವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಹುಬ್ಬಳ್ಳಿ, ದಾವಣಗೆರೆ, ಹಾವೇರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಕರಬ್ಬಿ ಗ್ರಾಮದಲ್ಲಿ ಶಾಲೆಗೆ ತಾತ್ಕಾಲಿಕವಾಗಿ ರಜೆ ಘೋಷಣೆ ಮಾಡಲಾಗಿದೆ. ವಾಂತಿಭೇದಿಯಿಂದ ಅಸ್ವಸ್ಥರಾಗಬಹುದೆಂಬ ಆತಂಕದಲ್ಲಿ ತಮ್ಮ ತಮ್ಮ ಮಕ್ಕಳನ್ನು …

Read More »

WhatsApp, Facebook, Instagram ಬಂದ್ – 9 ಗಂಟೆಯಲ್ಲಿ ಜುಕರ್‌ಬರ್ಗ್‌ಗೆ 44 ಸಾವಿರ ಕೋಟಿ ನಷ್ಟ

ಬೆಂಗಳೂರು: ಪ್ರಸಿದ್ಧ ಸಾಮಾಜಿಕ ಜಾಲತಾಣಗಳಾದ ವಾಟ್ಸಪ್ (WhatsApp), ಫೇಸ್‍ಬುಕ್ (Facebook) ಮತ್ತು ಇನ್‍ಸ್ಟಾಗ್ರಾಂ (Instagram) ಜಗತ್ತಿನಾದ್ಯಂತ ರಾತ್ರಿ 9 ಗಂಟೆಯಿಂದ ಸ್ಥಗಿತಗೊಂಡಿದ್ದವು. ಮಧ್ಯರಾತ್ರಿ 3.30ರ ವೇಳೆಗೆ ವಾಟ್ಸಪ್, ಫೇಸ್‍ಬುಕ್, ಇನ್‍ಸ್ಟಾಗ್ರಾಂ ಮತ್ತೆ ಸಹಜ ಸ್ಥಿತಿಗೆ ಮರಳಿದೆ. ಜಗತ್ತಿನಲ್ಲಿ 200 ಕೋಟಿ ಫೇಸ್‍ಬುಕ್ ಬಳಕೆದಾರರಿದ್ದಾರೆ. ಭಾರತದಲ್ಲಿ 53 ಕೋಟಿ ವಾಟ್ಸಪ್ ಬಳಕೆದಾರರು, 41 ಕೋಟಿ ಫೇಸ್‍ಬುಕ್ ಬಳಕೆದಾರರು ಮತ್ತು 21 ಕೋಟಿ ಇನ್‍ಸ್ಟಾಗ್ರಾಂ ಬಳಕೆದಾರರು ಇದ್ದಾರೆ. ವಾಟ್ಸಪ್ ಮತ್ತು ಇನ್‍ಸ್ಟಾಗ್ರಾಂ ಕೂಡಾ …

Read More »