Breaking News

new delhi

ಕರ್ನಾಟಕದ 9 ರಸ್ತೆಗಳು NHAI ಉಸ್ತುವಾರಿಗೆ

ನವದೆಹಲಿ: ರಾಜ್ಯದ ಒಂಬತ್ತು ಪ್ರಮುಖ ರಸ್ತೆಗಳನ್ನು ರಾಜ್ಯ ಲೋಕೋಪಯೋಗಿ ಇಲಾಖೆಯಿಂದ  ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಹಸ್ತಾಂತರ ಪಡೆಯಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಅನುಮತಿಸಿದೆ. ತಮಿಳುನಾಡು, ಕೇರಳ ಮತ್ತು ಕರ್ನಾಟಕದ ಕೆಲವು ರಾಷ್ಟ್ರೀಯ ಹೆದ್ದಾರಿಗಳನ್ನು ಎನ್‌ಹೆಚ್‌ಎಐ ಹಸ್ತಾಂತರ ಪಡೆಯುತ್ತಿದ್ದು, ಈ ನಿರ್ಧಾರದಿಂದ ಉತ್ತರ ಕರ್ನಾಟಕದಿಂದ ದಕ್ಷಿಣ ಕರ್ನಾಟಕದವರೆಗಿನ ಪ್ರದೇಶಗಳಿಗೆ ಲಾಭವಾಗಲಿದೆ. ರಸ್ತೆಗಳ ನಿರ್ವಹಣೆಯನ್ನು ಏಕರೂಪಗೊಳಿಸಿ, ಅಭಿವೃದ್ಧಿ ಯೋಜನೆಗಳನ್ನು ವೇಗಗೊಳಿಸುವ ಉದ್ದೇಶದಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ. ಬಳ್ಳಾರಿ-ಜೇವರ್ಗಿ: 265 …

Read More »

ಭಾರತದಲ್ಲಿ ಹಸಿರು ಹೈಡ್ರೋಜನ್ ಬೆಲೆ ಐತಿಹಾಸಿಕ ಮಟ್ಟಕ್ಕೆ ಇಳಿಕೆ – ಪ್ರಹ್ಲಾದ್ ಜೋಶಿ

ನವದೆಹಲಿ: ದೇಶದಲ್ಲಿ ಹಸಿರು ಹೈಡ್ರೋಜನ್ ಬೆಲೆ ಐತಿಹಾಸಿಕ ಮಟ್ಟಕ್ಕೆ ಇಳಿಕೆ ಕಂಡಿದೆ. 279ರೂ.ಯೊಂದಿಗೆ ಭಾರತ ಹಸಿರು ಹೈಡ್ರೋಜನ್ ಕ್ಷೇತ್ರದಲ್ಲಿ ಹೊಸ ಜಾಗತಿಕ ಮಾನದಂಡ ಸ್ಥಾಪಿಸಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಹ್ಲಾದ್ ಜೋಶಿ ಘೋಷಿಸಿದರು. ಮುಂಬೈಯಲ್ಲಿ ಆಯೋಜಿಸಿದ್ದ “ಹವಾಮಾನ ಸಪ್ತಾಹ 2026” ಉದ್ದೇಶಿಸಿ ಮಾತನಾಡಿ, ರಾಷ್ಟ್ರೀಯ ಹಸಿರು ಹೈಡ್ರೋಜನ್ ಮಿಷನ್ ಅಡಿಯಲ್ಲಿ ಹಸಿರು ಹೈಡ್ರೋಜನ್ ಬೆಲೆ ಪ್ರತಿ ಕೆಜಿಗೆ 279ರೂ. ಕನಿಷ್ಠ ಮಟ್ಟಕ್ಕೆ ಇಳಿದಿದೆ. ಸೂರ್ಯಘರ್ ಯೋಜನೆಯಡಿ …

Read More »

158 ಸಿವಿಲ್ ನ್ಯಾಯಾಧೀಶರ ನೇಮಕಾತಿ ಆಯ್ಕೆ ಪ್ರಕ್ರಿಯೆ ಮುಂದುವರಿಸಲು ಹೈಕೋರ್ಟ್‌ಗೆ ‘ಸುಪ್ರೀಂ’ ಸೂಚನೆ

ನವದೆಹಲಿ: ಕರ್ನಾಟಕ ರಾಜ್ಯದಲ್ಲಿ ಸಿವಿಲ್ ನ್ಯಾಯಾಧೀಶರ ನೇಮಕಾತಿಗಳ  ಅಧಿಸೂಚನೆ ಹೊರಡಿಸಲು ಸುಪ್ರೀಂ ಕೋರ್ಟ್ ಇಂದು ಕರ್ನಾಟಕ ಹೈಕೋರ್ಟ್‌ಗೆ ಅನುಮತಿ ನೀಡಿದೆ. ಸಿಜೆಐ ಸೂರ್ಯಕಾಂತ್ ನೇತೃತ್ವದ ತ್ರಿಸದಸ್ಯ ಪೀಠ ಈ ಆದೇಶ ನೀಡಿದೆ. ಮಲಿಕ್ ಮಝಾರ್ ಸುಲ್ತಾನ್ ವಿರುದ್ಧ ಯುಪಿ ಪಬ್ಲಿಕ್ ಸರ್ವಿಸ್ ಕಮಿಷನ್ ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ದೇಶಾದ್ಯಂತ ಟ್ರಯಲ್ ಕೋರ್ಟ್‌ಗಳಲ್ಲಿ ನ್ಯಾಯಧೀಶರ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆಗಾಗ್ಗೆ ಇಂತಹ ಆದೇಶಗಳನ್ನು ಹೊರಡಿಸುತ್ತಿದೆ. ಕರ್ನಾಟಕದಲ್ಲಿ ಸಿವಿಲ್ ಜಡ್ಜ್‌ಗಳ …

Read More »

AI Impact Summit 2026 – ಜಾಗತಿಕ ಶೃಂಗಕ್ಕೆ ಮೋದಿ ಚಾಲನೆ

ನವದೆಹಲಿ: ಕೃತಕ ಬುದ್ಧಿಮತ್ತೆ ಕ್ಷೇತ್ರದಲ್ಲಿ ಭಾರತ ಸೂಪರ್‌ ಪವರ್‌ ಆಗಬೇಕೆಂಬ ನಿಟ್ಟಿನಲ್ಲಿ ಆಯೋಜನೆಗೊಂಡಿರುವ ಜಾಗತಿಕ ಎಐ ಶೃಂಗಕ್ಕೆ ದೆಹಲಿಯಲ್ಲಿ ಅಧಿಕೃತ ಚಾಲನೆ ಸಿಕ್ಕಿದೆ. ಭಾರತ ಮಂಟಪದಲ್ಲಿ ಪ್ರಧಾನಿ ನರೇಂದ್ರ ಮೋದಿ ಎಐ ಇಂಪ್ಯಾಕ್ಟ್‌ ಶೃಂಗ ಮತ್ತು ಎಐ ಇಂಪ್ಯಾಕ್ಟ್‌ ಎಕ್ಸ್‌ಪೋವನ್ನು  ಉದ್ಘಾಟಿಸಿದರು. ಇಂದಿನಿಂದ ನಾಲ್ಕು ದಿನಗಳ ಕಾಲ ನಡೆಯಲಿರುವ ಈ ಕಾರ್ಯಕ್ರಮದಲ್ಲಿ 500 ಅಧಿವೇಶನ ನಡೆಯಲಿದ್ದು 3 ಸಾವಿರ ಭಾಷಣಕಾರರು ಭಾಗಿಯಾಗಲಿದ್ದಾರೆ. ಜಾಗತಿಕ ತಂತ್ರಜ್ಞಾನ ಕಂಪನಿಗಳು, ಸ್ಟಾರ್ಟ್‌ಅಪ್‌ಗಳು, ಶೈಕ್ಷಣಿಕ ಮತ್ತು …

Read More »

ನಾನು ರಾಹುಲ್‌ವಾದಿಯಲ್ಲ, ಕೇರಳ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲ್ಲಲ್ಲ: ಮಣಿಶಂಕರ್‌ ಅಯ್ಯರ್‌

ತಿರುವಂತಪುರಂ: ಮುಂಬರುವ ಕೇರಳ ಚುನಾವಣೆಯಲ್ಲಿ  ಕಾಂಗ್ರೆಸ್ ಗೆಲ್ಲುವುದಿಲ್ಲ. ಕಮ್ಯುನಿಸ್ಟ್ ವಿರೋಧಕ್ಕಿಂತ ಪಕ್ಷದೊಳಗಿನ ನಾಯಕರ ನಡುವೆಯೇ ಪರಸ್ಪರ ವಿರೋಧ, ಭಿನ್ನಾಭಿಪ್ರಾಯ ಇದೆ ಎಂದು ಕಾಂಗ್ರೆಸ್ಸಿಗ ಮಣಿಶಂಕರ್ ಅಯ್ಯರ್ ಬಾಂಬ್‌ ಸಿಡಿಸಿದ್ದಾರೆ. ಮಾಧ್ಯಮಕ್ಕೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅವರು, ನಾನು ಕಾಂಗ್ರೆಸ್ (Congress) ಗೆಲ್ಲಬೇಕೆಂದು ಬಯಸುತ್ತೇನೆ. ಆದರೆ ಕಾಂಗ್ರೆಸ್ ನಾಯಕರು ಪಕ್ಷದ ಒಳಗಡೆಯೇ ಕಚ್ಚಾಟ ನಡೆಸುತ್ತಿರುವುದರಿಂದ ಇದು ಸಾಧ್ಯವಾಗುತ್ತದೆ ಎಂದು ಹೇಳಲು ಬರುವುದಿಲ್ಲ. ಕಮ್ಯುನಿಸ್ಟರನ್ನು ದ್ವೇಷಿಸುವುದಕ್ಕಿಂತ ಹೆಚ್ಚಾಗಿ ಪರಸ್ಪರ ದ್ವೇಷಿಸುತ್ತಾರೆ ಎಂದು …

Read More »

ಕೋಲಾರದಲ್ಲಿ ದೇಶದ ಮೊದಲ ಮಿನಿ ಹೆಲಿಕಾಪ್ಟರ್ ತಯಾರಿಕಾ ಘಟಕಕ್ಕೆ ಮೋದಿಯಿಂದ ಚಾಲನೆ

ಕೋಲಾರ: ಚಿನ್ನದ ನಾಡು ಕೋಲಾರ  ಜಿಲ್ಲೆ  ರಾಷ್ಟ್ರ ಮಟ್ಟದಲ್ಲಿ ಮತ್ತೊಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗುತ್ತಿದೆ. ಕೋಲಾರ ತಾಲ್ಲೂಕಿನ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ನಿರ್ಮಾಣವಾಗಿರುವ ಟಾಟಾ ಏರ್‌ಬಸ್ ಮಿನಿ ಹೆಲಿಕಾಪ್ಟರ್ ಅಂತಿಮ ಜೋಡಣಾ ಘಟಕಕ್ಕೆ ನಾಳೆ (ಫೆ.17) ಸಂಜೆ 4.20ಕ್ಕೆ ಅಧಿಕೃತ ಚಾಲನೆ ದೊರೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಫ್ರಾನ್ಸ್ ಅಧ್ಯಕ್ಷ ಇಮಾನ್ಯುವಲ್ ಮ್ಯಾಕ್ರಾನ್ ವರ್ಚುವಲ್ ಆಗಿ ಘಟಕ ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು …

Read More »

ರಾಜಸ್ಥಾನದ ಕೆಮಿಕಲ್ ಫ್ಯಾಕ್ಟರಿಯಲ್ಲಿ ಸ್ಫೋಟ – 7 ಮಂದಿ ಸಾವು, ಹಲವರು ಸಿಲುಕಿರುವ ಶಂಕೆ

ಜೈಪುರ: ಇಲ್ಲಿನ ಭಿವಾಡಿಯಲ್ಲಿರುವ  ಕೆಮಿಕಲ್ ಫ್ಯಾಕ್ಟರಿಯಲ್ಲಿ  ಸಂಭವಿಸಿದ ಭಾರೀ ಬೆಂಕಿ ಅವಘಡದಿಂದಾಗಿ 7 ಕಾರ್ಮಿಕರು ಸಜೀವ ದಹನಗೊಂಡಿದ್ದು, ಇನ್ನೂ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಇಂದು ಬೆಳಿಗ್ಗೆ 9:30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಈ ವೇಳೆ ಕಾರ್ಖಾನೆಯಲ್ಲಿ 20ರಿಂದ 25 ಜನ ಕಾರ್ಮಿಕರಿದ್ದರು. ಏಕಾಏಕಿ ಹೊತ್ತಿಕೊಂಡ ಬೆಂಕಿ ಕೆಲವೇ ನಿಮಿಷಗಳಲ್ಲಿ ಕಾರ್ಖಾನೆಯ ತುಂಬೆಲ್ಲಾ ಆವರಿಸಿಕೊಂಡಿದ್ದು, ಕೆಲವು ಕಾರ್ಮಿಕರು ಹೊರಗೆ ಓಡಿಬಂದು ಪ್ರಾಣವನ್ನು ಉಳಿಸಿಕೊಂಡಿದ್ದಾರೆ ಎಂದು ಸುದ್ದಿ ಮಾಧ್ಯಮವೊಂದು ವರದಿ ಮಾಡಿದೆ. …

Read More »

ಮಂಗಳವಾರ ವರ್ಷದ ಮೊದಲ ʻಕಂಕಣ ಸೂರ್ಯಗ್ರಹಣʼ – ಎಲ್ಲೆಲ್ಲಿ ಗೋಚರ?

ನವದೆಹಲಿ: 2026 ರ ವರ್ಷದ ಮೊದಲ ಸೂರ್ಯಗ್ರಹಣ  ಮಂಗಳವಾರ (ಫೆ.17) ಗೋಚರವಾಗಲಿದೆ. ಇದನ್ನ ʻರಿಂಗ್ ಆಫ್ ಫೈರ್ʼ ಎಂದು ಕರೆಯಲಾಗುತ್ತದೆ. ಭಾರತದಲ್ಲಿ ಕಂಕಣ ಸೂರ್ಯಗ್ರಹಣ ಎಂಬ ಹೆಸರಿನಿಂದ ಕರೆಯಲಾಗುತ್ತದೆ. ಮಂಗಳವಾರ ಮಧ್ಯಾಹ್ನ 3:26 ರ ವೇಳೆಗೆ ಗ್ರಹಣ ಪ್ರಾರಂಭವಾಗಿ ಸಂಜೆ 7:57 ಕ್ಕೆ ಕೊನೆಗೊಳ್ಳಲಿದೆ. ಕಂಕಣ ಸೂರ್ಯಗ್ರಹಣ ಸಂಭವಿಸಲಿದ್ದು, 2 ನಿಮಿಷ 20 ಸೆಕೆಂಡುಗಳ ವರೆಗೆ ಇರಲಿದೆ. ಸಂಪೂರ್ಣ ಸೂರ್ಯಗ್ರಹಣದ ವೇಳೆ ಸೂರ್ಯನ ಕೇಂದ್ರದ 96% ರಷ್ಟನ್ನು ಚಂದ್ರ ಆವರಿಸಲಿದೆ. …

Read More »

ಜೈಲಿನಲ್ಲಿರೋ ವಿಚಾರಣಾಧೀನ ಕೈದಿಗಳಿಗೆ ಮತದಾನದ ಹಕ್ಕು ನೀಡಿ: ಸಂಸದ ಈರಣ್ಣ ಕಡಾಡಿ ಮನವಿ

ನವದೆಹಲಿ: ಜೈಲಿನ ಒಳಗಿನಿಂದ ಚುನಾವಣೆಗೆ ಸ್ಪರ್ಧಿಸಲು ಕಾನೂನಿನಲ್ಲಿ ಅವಕಾಶವಿರುವಾಗ, ಅದೇ ಜೈಲಿನಲ್ಲಿರುವ ವಿಚಾರಣಾಧೀನ ಕೈದಿಗಳಿಗೆ ಮತದಾನದ ಹಕ್ಕು ನೀಡುವ ನಿಟ್ಟಿನಲ್ಲಿ ಪ್ರಸ್ತುತ ಜಾರಿಯಲ್ಲಿರುವ 1951 ರ ಪ್ರಜಾಪ್ರತಿನಿಧಿ ಕಾಯ್ದೆಯ ಸೆಕ್ಷನ್ 62(5) ಕ್ಕೆ ತಿದ್ದುಪಡಿ ತರುಬೇಕು ಎಂದು ಸಂಸದ ಈರಣ್ಣ ಕಡಾಡಿ ಮನವಿ ಮಾಡಿದ್ದಾರೆ. ರಾಜ್ಯಸಭೆಯ ಶೂನ್ಯ ಅವಧಿಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ಸರ್ಕಾರವು ‘ಸಬ್ ಕಾ ಸಾಥ್‌, ಸಬ್ ಕಾ …

Read More »

ಭಾರತದ ಜವಳಿ ಉತ್ಪನ್ನಗಳಿಗೂ ಅಮೆರಿಕದಲ್ಲಿ 0% ಸುಂಕ: ಪಿಯೂಷ್ ಗೋಯಲ್

ನವದೆಹಲಿ: ಅಮೆರಿಕ ಜೊತೆಗಿನ ವ್ಯಾಪಾರ ಒಪ್ಪಂದದ  ಅಡಿಯಲ್ಲಿ ಬಾಂಗ್ಲಾದೇಶಕ್ಕೆ ವಿಸ್ತರಿಸಿದಂತೆಯೇ ಭಾರತವು ಜವಳಿ ಉತ್ಪನ್ನಗಳಿಗೆ ಶೂನ್ಯ ಸುಂಕ ಪ್ರಯೋಜನ ಪಡೆಯುವ ಸಾಧ್ಯತೆಯಿದೆ ಎಂದು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ. ಆದ್ರೆ ಭಾರತ – ಅಮೆರಿಕ ಒಪ್ಪಂದದ ಜಂಟಿ ಹೇಳಿಕೆಯಾಗಲಿ ಅಥವಾ ಶ್ವೇತಭವನ ಫ್ಯಾಕ್ಟ್‌ಶೀಟ್ ಆಗಲಿ ಈ ಷರತ್ತನ್ನ ಸ್ಪಷ್ಟವಾಗಿ ಉಲ್ಲೇಖಿಸಿಲ್ಲ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವ್ಯಾಪಾರ ಒಪ್ಪಂದದಲ್ಲಿ ಬಾಂಗ್ಲಾದೇಶವು ಭಾರತಕ್ಕಿಂತ ಹೆಚ್ಚಿನ ಪ್ರಯೋಜನ ಪಡೆದುಕೊಂಡಿದೆ ಎಂಬ ರಾಹುಲ್‌ …

Read More »