Breaking News

new delhi

ಕಬ್ಬಿನ್ ಬಾಕಿ ಬಿಲ್ ಗಾಗಿ ತನ್ನ ಸಮಾಧಿಯನ್ನು ತಾನೇ ತೋಡಿಕೊಂಡ ರೈತ

ಬೆಳಗಾವಿ: ಮಲಪ್ರಭಾ ಸಕ್ಕರೆ ಕಾರ್ಖಾನೆಯಿಂದ ಕಬ್ಬಿನ್ ಬಾಕಿ ಬಿಲ್ ನೀಡದ ಇರುವ ಹಿನ್ನೆಲೆಯಲ್ಲಿ ರೈತನೊಬ್ಬ ತನ್ನ ಸಮಾಧಿಯನ್ನು ತಾನೇ ತೋಡಿಕೊಂಡು ಪ್ರತಿಭಟನೆ ನಡೆಸಿರುವ ಘಟನೆ  ನಡೆದಿದೆ.   https://www.facebook.com/105350550949710/posts/202232631261501/?sfnsn=wiwspmo       ಕಿತ್ತೂರು ತಾಲ್ಲೂಕಿನ ಎಂ.ಕೆ.ಹುಬ್ಬಳ್ಳಿ ಗ್ರಾಮದ ಶಿವಾನಂದ ಗೋಹಾರ್ ತನ್ನ ಸಮಾಧಿಯನ್ನು ತೋಡಿಕೊಂಡ ರೈತ ಎನ್ನಲಾಗುತ್ತಿದೆ. ಮಲಪ್ರಭಾ ಸಕ್ಕರೆ ಕಾರ್ಖಾನೆಗೆ  114 ಟನ್ ಕಬ್ಬಿನ, 85 ಸಾವಿರ ರೂಪಾಯಿ ಬಾಕಿ ಬಿಲ್ ಬರಬೇಕು . ಕಾರ್ಖಾನೆಗೆ ಈಗಾಗಲೇ 20 …

Read More »

ಲಾಕ್‌ಡೌನ್ ಎಫೆಕ್ಟ್: ಪೊಲೀಸ್ ಠಾಣೆಯಲ್ಲಿ ಕೇಳೋರೇ ಇಲ್ಲ ಮಾಲೀಕರಿಲ್ಲದ ವಾಹನಗಳನ್ನು!

ಕೊರೋನಾ ವೈರಸ್ ಇನ್ನೂ ತನ್ನ ಕಬಂದಬಾಹುವನ್ನ ಚಾಚುತ್ತಲೇ ಇದೆ. ಮಾರ್ಚ್ ತಿಂಗಳ ಕೊನೆಯಲ್ಲಿ ಪ್ರಾರಂಭವಾದ ವೈರಸ್ ಅಕ್ಟೋಬರ್ ಬಂದರೂ ಕಡಿಮೆಯಾಗದೆ, ಇನ್ನೂ ಹೆಚ್ಚುತ್ತಲೆ ಇದೆ. ಮಾರ್ಚ್ ತಿಂಗಳಲ್ಲಿ ಕೊರೋನಾ ಹರಡುವಿಕೆಯ ಸರಪಳಿ ತುಂಡರಿಸಲು ಕೇಂದ್ರ ಸರ್ಕಾರ ಲಾಕ್‌ಡೌನ್ ನಿಯಮಾವಳಿಯನ್ನ ಜಾರಿಗೆ ತಂದಿತ್ತು. ಜನರು ಯಾರೂ ಅನಗತ್ಯವಾಗಿ ಓಡಾಡಬಾರದು, ಊರಿನಿಂದ ಊರಿಗೆ ಅಷ್ಟೆ ಅಲ್ಲ ಒಂದು ಏರಿಯಾದಿಂದ ಮತ್ತೊಂದು ಏರಿಯಾಗೆ ಹೋಗುವುದನ್ನು ಸಹ ನಿಷೇಧಿಸಿತ್ತು. ಅನಗತ್ಯ ಓಡಾಡಿದವರ ವಾಹನಗಳನ್ನ ಸಹ ಪೊಲೀಸ್ …

Read More »

ಶಾರ್ಜಾಗೆ ವಾಪಸ್ಸಾಗಿರುವುದು ರಾಜಸ್ತಾನ ರಾಯಲ್ಸ್​ಗೆ ನೆರವಾಗಲಿದೆಯೇ?

ಗೆಲ್ಲುವುದನ್ನು ಮರೆತಂತಿರುವ ರಾಜಸ್ತಾನ ರಾಯಲ್ಸ್ ಮತ್ತು ಗೆಲ್ಲುವುದನ್ನು ಅಭ್ಯಾಸ ಮಾಡಿಕೊಂಡಿರುವ ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಇಂಡಿಯನ್ ಪ್ರಿ ಮೀಯರ್ ಲೀಗ್ 13 ನೇ ಅವೃತಿಯ 23 ನೇ ಪಂದ್ಯ ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿಂ ದು ನಡೆಯಲಿದೆ . ರಾಯಲ್ಸ್​ಗೆ ಇವತ್ತು ಅನುಕೂಲವಾಗಬಹುದಾದಸಂಗತಿಯೆಂದರೆ ಅದು ಶಾರ್ಜಾಗೆ ವಾಪಸ್ಸಾಗಿರುವುದು. ನಿಮಗೆ ಗೊತ್ತಿರುವ ಹಾಗೆ, ಈ ಮೈದಾನದಲ್ಲಿ ತಾನಾಡಿದ ಮೊದಲೆರಡು ಪಂದ್ಯಗಳನ್ನು ಸ್ಟಿವೆನ್ ಸ್ಮಿತ್​ನ ಅವರ ತಂಡ ಸುಲಭವಾಗಿ ಗೆದ್ದಿತ್ತು. ಆದರೆ. ನಂತರ, ದುಬೈ …

Read More »

ಚುನಾವಣೆಯಲ್ಲಿ ಸೋಶಿಯಲ್ ಮೀಡಿಯಾ ಪಾತ್ರ ಬಹಳ ಮುಖ್ಯ: ಡಿ.ಕೆ ಶಿವಕುಮಾರ್

ಬೆಂಗಳೂರು: ಆರ್.ಆರ್.ನಗರ, ಶಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಸೋಶಿಯಲ್ ಮೀಡಿಯಾ ಘಟಕದ ಜತೆ ಸಭೆ ನಡೆಸಿದರು. ‘ಬೈಎಲೆಕ್ಷನ್‌ನಲ್ಲಿ ಸೋಶಿಯಲ್ ಮೀಡಿಯಾ ಸ್ಟ್ರಾಂಗ್ ಮಾಡಿ’ ಚುನಾವಣೆಯಲ್ಲಿ ಸೋಶಿಯಲ್ ಮೀಡಿಯಾದ ಪಾತ್ರ ಮುಖ್ಯ. ಸೋಶಿಯಲ್ ಮೀಡಿಯಾ ಇನ್ನಷ್ಟು ಌಕ್ಟಿವ್ ಆಗಬೇಕು. ಸೋಶಿಯಲ್ ಮೀಡಿಯಾದಲ್ಲಿ ಮಾರ್ಕೆಟಿಂಗ್ ಮಾಡ್ತಾರೆ. ಏನೂ ಮಾಡದಿದ್ರೂ ಬಿಜೆಪಿಯವ್ರು ಮಾರ್ಕೆಟಿಂಗ್ ಮಾಡ್ತಾರೆ. ನಾವು ಹಲವು ಬಾರಿ ಈ ವಿಚಾರದಲ್ಲಿ ಎಡವಿದ್ದೇವೆ. ಈಗ ಎಚ್ಚೆತ್ತುಕೊಳ್ಳದಿದ್ದರೆ ಕಷ್ಟವಾಗುತ್ತದೆ …

Read More »

ರಾಗಿಣಿ, ಸಂಜನಾ ನ್ಯಾಯಾಂಗ ಬಂಧನ ವಿಸ್ತರಣೆ, ಇನ್ನೂ ಪರಪ್ಪನ ಜೈಲಿನಲ್ಲೇ ಇರಬೇಕು..

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಮಾಫಿಯಾ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿಯ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. NDPS ವಿಶೇಷ ಕೋರ್ಟ್‌ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶ ಹೊರಡಿಸಿದೆ. ಕೋರ್ಟ್ ನಟಿಮಣಿಯರ ನ್ಯಾಯಾಂಗ ಬಂಧನವನ್ನು ಅಕ್ಟೋಬರ್​ 23ರವರೆಗೆ ವಿಸ್ತರಿಸಿದೆ. ಸಂಜನಾ ಗಲ್ರಾನಿಯ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆಯಾಗಿರುವ ಹಿನ್ನೆಲೆಯಲ್ಲಿ ನಟಿ ಪರ ವಕೀಲ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಸದ್ಯ ಪರಪ್ಪನ ಅಗ್ರಹಾರ …

Read More »

ಜಮೀನಲ್ಲಿ‌ ಕೆಲಸ ಮಾಡ್ತಿದ್ದಾಗ PUC ವಿದ್ಯಾರ್ಥಿನಿಗೆ ಅನಾರೋಗ್ಯ: ಆಸ್ಪತ್ರೆಯಲ್ಲಿ‌ ಸಾವು

ದಾವಣಗೆರೆ: ಜಮೀನಿನಲ್ಲಿ‌ ಕೆಲಸ ಮಾಡುತ್ತಿದ್ದ ವೇಳೆ ಯುವತಿಗೆ ಅನಾರೋಗ್ಯವಾಗಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಸಾವಿಗೀಡಾಗಿದ್ದಾರೆ. 18 ವರ್ಷದ ಪಿಯುಸಿ ವಿದ್ಯಾರ್ಥಿನಿ ಟಿ.ಶ್ವೇತಾ ಮೃತ ದುರ್ದೈವಿ. ಜಿಲ್ಲೆಯ ಜಗಳೂರು ತಾಲೂಕಿನ ಗೌರಿಪುರದಲ್ಲಿ ಈ ದುರ್ಘಟನೆ ಸಂಭವಿಸಿದೆ. ತನ್ನ ಮಗಳ ಸಾವು ಅನುಮಾನಾಸ್ಪದವಾಗಿದೆ ಎಂದು ಶ್ವೇತಾ ಪೋಷಕರು ತನಿಖೆಗೆ ಮನವಿ ಮಾಡಿದ್ದಾರೆ. ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಶವಪರೀಕ್ಷೆ ವರದಿಗಾಗಿ ಕಾಯುತ್ತಿದ್ದಾರೆ.

Read More »

ನಿಧನರಾದ ಕೇಂದ್ರ ಸಚಿವ ರಾಮ್‌ ವಿಲಾಸ್‌ ಪಾಸ್ವಾನ್ ಅವರಿಗೆ ಪ್ರಧಾನಿ ಮೋದಿ ಅಂತಿಮ ನಮನ ಸಲ್ಲಿಸಿದರು.

ನವದೆಹಲಿ: ಗುರುವಾರ ನಿಧನರಾದ ಕೇಂದ್ರ ಸಚಿವ ರಾಮ್‌ ವಿಲಾಸ್‌ ಪಾಸ್ವಾನ್ ಅವರಿಗೆ ಪ್ರಧಾನಿ ಮೋದಿ ಅಂತಿಮ ನಮನ ಸಲ್ಲಿಸಿದರು. ದೆಹಲಿಯಲ್ಲಿರುವ ರಾಮ್‌ ವಿಲಾಸ್‌ ಪಾಸ್ವಾನ್‌ ನಿವಾಸಕ್ಕೆ ತೆರಳಿದ ಮೋದಿ ಪಾಸ್ವಾನ್‌ ಅವರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಈ ವೇಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಉಪಸ್ಥಿತರಿದ್ದರು. ರಾಷ್ಟ್ರಪತಿ ರಾಮ್‌ ನಾಥ್‌ ಕೋವಿಂದ್‌, ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸೇರಿದಂತೆ ಹಲವು ಗಣ್ಯರು …

Read More »

ಶಿವಸೇನೆ ಬಿಜೆಪಿಗೆ ಕೈಕೊಟ್ಟು ಎನ್‌ಸಿಪಿ ಹಾಗೂ ಕಾಂಗ್ರೆಸ್‌ ಜೊತೆ ಕೈಜೋಡಿಸಿತ್ತು.

ಮುಂಬೈ : ಶಿವಸೇನೆ ನೇತೃತ್ವದ ಕಾಂಗ್ರೆಸ್‌, ಎನ್‌ಸಿಪಿ ಸರ್ಕಾರ ಅಧಿಕಾರದಲ್ಲಿರುವ ಮಹಾರಾಷ್ಟ್ರದಲ್ಲಿ ಶೀಘ್ರದಲ್ಲೇ ಬಿಜೆಪಿ ಸ್ವಂತ ಬಲದೊಂದಿಗೆ ಅಧಿಕಾರಕ್ಕೆ ಬರಲಿದೆ. ಈಗ ಆಡಳಿತದಲ್ಲಿರುವ ಮೂರೂ ಪಕ್ಷಗಳು ವಿಪಕ್ಷ ಸ್ಥಾನದಲ್ಲಿ ಕೂರಲಿವೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಗುರುವಾರ ಹೇಳಿರುವುದು ಸಂಚಲನಕ್ಕೆ ಕಾರಣವಾಗಿದೆ. ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, 2019ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪರ ಜನಾದೇಶ ಬಂದಿತ್ತು. ಆದರೆ ನಮಗೆ ಮೋಸ ಮಾಡಲಾಯಿತು. ಈ ಸರ್ಕಾರವನ್ನು ಕೆಳಗಿಳಿಸುತ್ತೇವೆ. ಮಾಜಿ …

Read More »

ರಾಜ್ಯ ಸರ್ಕಾರವು ತಂಬಾಕು ನಿಷೇಧದ ಕುರಿತಂತೆ ಮಹತ್ವದ ತೀರ್ಮಾನ ಕೈಗೊಂಡಿದ್ದು, ವಾರದೊಳಗೆ ತಂಬಾಕು ಉತ್ಪನ್ನಗಳ ನಿಷೇಧದ ಬಗ್ಗೆ ಸುಗ್ರೀವಾಜ್ಞೆ ಹೊರಡಿಸುವುದಾಗಿ ರಾಜ್ಯಪಾಲ ವಜುಬಾಯಿ ವಾಲಾ ಅವರಿಗೆ ರಾಜ್ಯ ಸರ್ಕಾರ ವರದಿ ಸಲ್ಲಿಸಿದೆ.

ಬೆಂಗಳೂರು : ರಾಜ್ಯ ಸರ್ಕಾರವು ತಂಬಾಕು ನಿಷೇಧದ ಕುರಿತಂತೆ ಮಹತ್ವದ ತೀರ್ಮಾನ ಕೈಗೊಂಡಿದ್ದು, ವಾರದೊಳಗೆ ತಂಬಾಕು ಉತ್ಪನ್ನಗಳ ನಿಷೇಧದ ಬಗ್ಗೆ ಸುಗ್ರೀವಾಜ್ಞೆ ಹೊರಡಿಸುವುದಾಗಿ ರಾಜ್ಯಪಾಲ ವಜುಬಾಯಿ ವಾಲಾ ಅವರಿಗೆ ರಾಜ್ಯ ಸರ್ಕಾರ ವರದಿ ಸಲ್ಲಿಸಿದೆ. ರಾಜ್ಯದಲ್ಲಿ ತಂಬಾಕು, ಗುಟ್ಕಾ ಹಾಗೂ ಇನ್ನಿತರ ಉತ್ಪನ್ನಗಳ ನಿಷೇಧದ ಬಗ್ಗೆ ಸಿಎಂ ಬಿ.ಎಸ್. ಯಡಿಯೂರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಕರೆಸಿ ರಾಜ್ಯಪಾಲರು ಚರ್ಚಿಸಿದ್ದರು. ಈ ಹಿನ್ನೆಲೆಯಲ್ಲಿ ಬುಧವಾರ ರಾಜ್ಯಪಾಲರನ್ನು ಭೇಟಿ ಮಾಡಿದ …

Read More »

ಕೊರೊನಾ ಸೋಂಕಿನಿಂದ.. ಬರುತ್ತಿದೆ ದೃಷ್ಟಿ ದೋಷ!

ಬೆಂಗಳೂರು: ಕೊರೊನಾ ಸೋಂಕು ತಗುಲಿದ ಬಳಿಕ ದೃಷ್ಟಿ ದೋಷ ಉಂಟಾಗುತ್ತದೆ ಎಂಬ ಮತ್ತೊಂಧು ಆಘಾತಕಾರಿ ಮಾಃಇತಿ ಕೇಳಿಬಂದಿದೆ. ಕೊರೊನಾ ವೈರಸ್​​ನಿಂದ ಕಣ್ಣಿನ ರಕ್ತನಾಳಗಳು ಬ್ಲಾಕ್ ಆಗುತ್ತವೆ. ಕೊರೊನಾ ಸೋಂಕಿನಿಂದ ಕಣ್ಣಿನ ರಕ್ತನಾಳದಲ್ಲಿ ಸೋರಿಕೆಯಾಗುತ್ತದೆ. ಆರ್ಟರಿಸ್ ಭಾಗದಲ್ಲಿ ರಕ್ತ ಬ್ಲಾಕ್ ಆದ್ರೆ ದೃಷ್ಟಿ ಕಳೆದುಕೊಳ್ಳುವ ಆತಂಕವಿದೆ ಎಂದು ತಿಳಿದುಬಂದಿದೆ. ಇಷ್ಟು ದಿನ ಕೊರೊನಾ ವೈರಸ್ ಬಂದವರಿಗೆ ದೇಹ, ಹೃದಯ, ಉಸಿರಾಟಕ್ಕೆ ತೊಂದರೆ ಆಗುತ್ತೆ ಅಂತಾ ಮಾಹಿತಿ ಇತ್ತು. ಇದೀಗ ಕೊರೊನಾ ವೈರಸ್ ಜನ್ರ …

Read More »