Breaking News

new delhi

ಸಾರ್ವಜನಿಕರೇ ಎಚ್ಚರ : ಸರ್ಕಾರಿ ಆಸ್ಪತ್ರೆಯಲ್ಲಿ ಸೇವೆ ಬಂದ್

ಬೆಂಗಳೂರು  : ಕೊರೋನಾ ಅವಧಿಯಲ್ಲಿ ಮೃತಪಟ್ಟವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗೆ ಪರಿಹಾರ ನೀಡದಿರುವುದು ಹಾಗೂ ವೇತನ ತಾರತಮ್ಯ ಸೇರಿ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಮಂಗಳವಾರದಿಂದ ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿನ ಹೊರ ರೋಗಿ ಸೇವೆಯನ್ನು ಬಹಿಷ್ಕರಿಸಿ ಮುಷ್ಕರ ನಡೆಸುವುದಾಗಿ ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಘೋಷಿಸಿದೆ. ಅಲ್ಲದೆ, ಸರ್ಕಾರ ಕೂಡಲೇ ಸ್ಪಂದಿಸಿ ಬೇಡಿಕೆಗಳನ್ನು ಈಡೇರಿಸದಿದ್ದರೆ ಮಂಗಳವಾರದಿಂದ ಕೊರೋನಾ ರೋಗಿಗಳು ಹಾಗೂ ತುರ್ತು ಚಿಕಿತ್ಸಾ ಸೇವೆ ಹೊರತುಪಡಿಸಿ ಉಳಿದ …

Read More »

ಸೀರೆ ಉಟ್ಟಾಗ ಹಾವು ಹಿಡಿಯೋದು ಕಷ್ಟ -ಉರಗ ತಜ್ಞೆಯ ಸಾಹಸಕ್ಕೆ ಸ್ಥಳೀಯರು ಫುಲ್​ ಫಿದಾ!

ಬೆಳಗಾವಿ: ಮದುವೆಗೆ ತೆರಳುವ ಬದಲು ಮನೆಯೊಂದರಲ್ಲಿ ಸಿಲುಕಿದ್ದ ನಾಗರಹಾವನ್ನು ಉರಗ ತಜ್ಞೆ ನಿರ್ಜರಾ ಚಿಟ್ಟಿ ಬರಿಗೈಯಲ್ಲೇ ರಕ್ಷಣೆ ಮಾಡಿರುವ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್​ ಆಗಿದೆ.   ನಿರ್ಜರಾ ಹಾಗೂ ಆಕೆಯ ಪತಿ ಆನಂದ್​ ಮೂಲತಃ ವನ್ಯಜೀವಿ ತಜ್ಞರು. ಬೆಳಗಾವಿ ನಿವಾಸಿಗಳಾದ ದಂಪತಿ ತಮ್ಮ ಸಂಬಂಧಿಕರ ಮದುವೆಗೆ ತೆರಳಲು ನಿನ್ನೆ ಸಜ್ಜಾಗುತ್ತಿದ್ದರಂತೆ. ಈ ನಡುವೆ ದಂಪತಿಗೆ ನಮ್ಮ ಮನೆಯಲ್ಲಿ ನಾಗರಹಾವು ಒಂದು ಸಿಲುಕಿಕೊಂಡಿದೆ. ದಯವಿಟ್ಟು ಬಂದು ಅದನ್ನು ಅಲ್ಲಿಂದ ಹೊರೆತೆಗೆಯಿರಿ ಅಂತಾ …

Read More »

ಸವದತ್ತಿ: ತಹಶೀಲ್ದಾರ್‌ ಕಚೇರಿ ಮುಂದೆ ಶವವಿಟ್ಟು ಪ್ರತಿಭಟನೆ

ಸವದತ್ತಿ: ರುದ್ರಭೂಮಿಗೆ ಹೋಗಲು ಸಮರ್ಪಕ ರಸ್ತೆ ನಿರ್ಮಿಸಿಕೊಡುವಂತೆ ಆಗ್ರಹಿಸಿ ತಾಲ್ಲೂಕಿನ ಕೆಂಚಲಾರಕೊಪ್ಪ ಗ್ರಾಮಸ್ಥರು ಇಲ್ಲಿನ ತಹಶೀಲ್ದಾರ್‌ ಕಚೇರಿ ಎದುರು ಶವವಿಟ್ಟು ಭಾನುವಾರ ಪ್ರತಿಭಟನೆ ನಡೆಸಿದರು. ‘ಈ ಹಿಂದೆ ಪುರಸಭೆ ಮುಖ್ಯಾಧಿಕಾರಿಗೆ ಹಾಗೂ ತಹಶೀಲ್ದಾರ್‌ ಕಚೇರಿಗೆ ಮನವಿ ಸಲ್ಲಿಸಲಾಗಿದೆ. ಆದರೆ, ಈವರೆಗೆ ಯಾರೂ ಇತ್ತ ಗಮನಹರಿಸುತ್ತಿಲ್ಲ. ಗ್ರಾಮದಲ್ಲಿ ಯಾರಾದರೂ ಮೃತರಾದರೆ ಸಂಸ್ಕಾರ ನಡೆಸಲು ರುದ್ರಭೂಮಿಗೆ ತೆರಳುವುದಕ್ಕೆ ಸರಿಯಾದ ರಸ್ತೆ ಇಲ್ಲ. ಇದರಿಂದ ಬಹಳ ತೊಂದರೆ ಆಗುತ್ತಿದೆ’ ಎಂದು ತಿಳಿಸಿದರು. ಸ್ಥಳಕ್ಕೆ ಬಂದ ತಹಶೀಲ್ದಾರ್‌ …

Read More »

ಯೋಧನ ಬಳಿ ಎಕೆ 47ನ ಜೀವಂತ ಗುಂಡು ಪತ್ತೆ

ಬೆಳಗಾವಿ  : ಜೀವಂತ ಗುಂಡು ಸಮೇತ ಪ್ರಯಾಣಿಸುತ್ತಿದ್ದ ಯೋಧನೊಬ್ಬನನ್ನು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದ ಭದ್ರತಾ ಪಡೆಯ ಅಧಿಕಾರಿಗಳು ಶನಿವಾರ ಸಂಜೆ ವಶಕ್ಕೆ ಪಡೆದಿದ್ದಾರೆ. ಜಿಲ್ಲೆಯ ಸಂಕೇಶ್ವರದ ಹನುಮಾನ ನಗರದ ಸುಬೇದಾರ್‌ ಅರುಣ ಮಾರುತಿ ಭೋಸಲೆ ಕಳೆದೊಂದು ತಿಂಗಳ ಹಿಂದೆ ರಜೆ ಮೇಲೆ ಬಂದು ಮರಳಿ ಕರ್ತವ್ಯಕ್ಕೆಂದು ಕಾಶ್ಮೀರಕ್ಕೆ ಹೋಗಲು ಬೆಳಗಾವಿ ನಿಲ್ದಾಣದಿಂದ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದತ್ತ ಪ್ರಯಾಣ ಬೆಳೆಸುತ್ತಿದ್ದಾಗ ಭದ್ರತಾ ಸಿಬ್ಬಂದಿ ತಪಾಸಣೆ ನಡೆಸಿದ ವೇಳೆ ಎಕೆ …

Read More »

C.M.ದೆಹಲಿ ಪ್ರವಾಸಕ್ಕೆ ಮುಹೂರ್ತ ನಿಗದಿ, ಇತ್ತ ಬಿಜೆಪಿ ಪಾಳಯದಲ್ಲಿ ರಾಜಕೀಯ ಚಟುವಟಿಕೆಗೆಳು ಗರಿಗದರಿವೆ

ಬೆಂಗಳೂರು: ಕೊನೆಗೂ ಸಿಎಂ ಯಡಿಯೂರಪ್ಪನವರ ದೆಹಲಿ ಪ್ರವಾಸಕ್ಕೆ ಮುಹೂರ್ತ ನಿಗದಿಯಾಗಿದ್ದು, ಇತ್ತ ಬಿಜೆಪಿ ಪಾಳಯದಲ್ಲಿ ರಾಜಕೀಯ ಚಟುವಟಿಕೆಗೆಳು ಗರಿಗದರಿವೆ. ಅಲ್ಲದೆ ಸಚಿವಾಕಾಂಕ್ಷಿಗಳ ಎದೆ ಬಡಿತವನ್ನು ಹೆಚ್ಚಿಸಿದೆ. ಸೆಪ್ಟೆಂಬರ್ 17ರ ಗುರುವಾರದಂದು ಸಿಎಂ ಯಡಿಯೂರಪ್ಪ ದೆಹಲಿ ಭೇಟಿಗೆ ಸಮಯ ನಿಗದಿಯಾಗಿದೆ. ಎರಡರಿಂದ ಮೂರು ದಿನಗಳ ಕಾಲ ಸಿಎಂ ದೆಹಲಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ. ವರಿಷ್ಠರನ್ನು ಹಾಗೂ ವಿವಿಧ ಸಚಿವಾಲಯಗಳ ಸಚಿವರನ್ನು ಸಿಎಂ ಭೇಟಿ ಮಾಡಲಿದ್ದಾರೆ. ಈ ವೇಳೆ ಸಿಎಂ ಯಡಿಯೂರಪ್ಪ ವರಿಷ್ಠರ ಜೊತೆ …

Read More »

ಉಸಿರಾಟದ ತೊಂದರೆ – ಮತ್ತೆ ಆಸ್ಪತ್ರೆ ಸೇರಿದ ಅಮಿತ್ ಶಾ………..

ನವದೆಹಲಿ: ಉಸಿರಾಟದ ತೊಂದರೆ ಕಾಣಿಸಿಕೊಂಡ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮತ್ತೆ ದೆಹಲಿ ಏಮ್ಸ್ ಆಸ್ಪತ್ರೆ ದಾಖಲಾಗಿದ್ದಾರೆ. ಅಮಿತ್ ಶಾ ಅವರು ಇತ್ತೀಚೆಗಷ್ಟೇ ಕೊರೊನಾದಿಂದ ಗುಣಮುಖರಾಗಿ ಬಂದಿದ್ದರು. ಆದರೆ ಮತ್ತೆ ಅವರಿಗೆ ಉಸಿರಾಟ ತೊಂದರೆ ಕಾಣಿಸಿಕೊಂಡ ಕಾರಣ ಶನಿವಾರ ರಾತ್ರಿ 11 ಗಂಟೆಗೆ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿಂದೆ ಕೊರೊನಾ ಬಂದ ಕಾರಣ ಅವರು ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಅಮಿತ್ …

Read More »

ರಾಜ್ಯದಲ್ಲಿಂದು ಹೊಸ 9140 ಕೋವಿಡ್ ಪ್ರಕರಣಗಳು ಪತ್ತೆ 94 ಜನ ಬಲಿ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಅಟ್ಟಹಾಸ ಮುಂದುವರೆತ್ತಿದ್ದು, ಇಂದು ಮತ್ತೆ ರಾಜ್ಯದಲ್ಲಿ ದಾಖಲೆ ಪ್ರಮಾಣದಲ್ಲಿ 9140 ಜನರಿಗೆ ಕೊರೊನಾ ಸೋಂಕು ತಗುಲಿದೆ. 94 ಜನ ಬಲಿಯಾಗಿದ್ದಾರೆ. 9557 ಜನರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಶನಿವಾರ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾಹಿತಿ ಪ್ರಕಾರ ಇಂದು ಮತ್ತೆ ಒಂದೇ ದಿನಕ್ಕೆ ಸೋಂಕಿತರಗಿಂತ ಹೆಚ್ಚು ದಾಖಲೆ ಪ್ರಮಾಣದಲ್ಲಿ ಕೋವಿಡ್ ಸೋಂಕಿತರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ. ನಿನ್ನೆಗಿಂತ …

Read More »

ಬೆಳಗಾವಿ ಜಿಟಿಟಿಸಿಗೆ ‘ಉತ್ಕೃಷ್ಟ ಕೇಂದ್ರ’ ಸ್ಥಾನ

ಬೆಳಗಾವಿ: ಇಲ್ಲಿನ ಉದ್ಯಮಬಾಗ್‌ನಲ್ಲಿರುವ ಜಿಟಿಟಿಸಿ (ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ)ಗೆ ಉತ್ಕೃಷ್ಟ ಕೇಂದ್ರದ ಸ್ಥಾನಮಾನ ದೊರೆತಿದೆ. ’25 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಈ ಕೇಂದ್ರದಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳು ದೇಶ ವಿದೇಶಗಳಲ್ಲಿ ಉದ್ಯೋಗ ಕಂಡುಕೊಂಡಿದ್ದಾರೆ. ಶೇ 100ರಷ್ಟು ಉದ್ಯೋಗ ದೊರೆಯುವಂತಹ ಕೌಶಲ ಆಧಾರಿತ ಕೋರ್ಸ್‌ಗಳನ್ನು ಇಲ್ಲಿ ನಡೆಸಲಾಗುತ್ತಿದೆ. ಇದನ್ನು ಆಧರಿಸಿ ಸ್ಥಾನಮಾನ ದೊರೆತಿದೆ’ ಎಂದು ಪ್ರಕಟಣೆ ತಿಳಿಸಿದೆ. ‘ಎಸ್ಸೆಸ್ಸೆಲ್ಸಿ ತೇರ್ಗಡೆಯಾದ ವಿದ್ಯಾರ್ಥಿಗಳನ್ನು ತಾಂತ್ರಿಕವಾಗಿ ಸಜ್ಜುಗೊಳಿಸುವ ಉದ್ದೇಶ ಕೇಂದ್ರದ್ದಾಗಿದೆ. ಉತ್ಕೃಷ್ಟ ಕೇಂದ್ರದ ಸ್ಥಾನಮಾನದಿಂದ …

Read More »

ಬೇಕಾಬಿಟ್ಟಿ ಪಬ್‌, ಬೀಚ್‌ ಸುತ್ತಾಟ: ಮೈಮರೆತ ಯುವಜನರಿಂದ ಕೊರೋನಾ ಎರಡನೇ ಅಲೆ!

ಲಂಡನ್‌/ವಾಷಿಂಗ್ಟನ್  : ಕೊರೋನಾ ಇಳಿಮುಖದ ಸುಳಿವಿನಲ್ಲಿ ನಿಯಂತ್ರಣ ಕ್ರಮಗಳು ಸಡಿಲಗೊಂಡ ಬೆನ್ನಲ್ಲೇ ಹಲವು ದೇಶಗಳಲ್ಲಿ 2ನೇ ಹಂತದ ಕೊರೋನಾ ಸೋಂಕು ಸ್ಫೋಟಗೊಂಡಿದ್ದು ಆತಂಕ ಮೂಡಿಸಿವೆ. ಆಘಾತಕಾರಿ ಸಂಗತಿಯೆಂದರೆ ಹೀಗೆ 2ನೇ ಹಂತದಲ್ಲಿ, ಸೋಂಕಿತರ ಪೈಕಿ ಯುವಸಮೂಹ ಪ್ರಮಾಣ ಕಳವಳಕಾರಿಕಷ್ಟುಹೆಚ್ಚಿದೆ. ‘ಕೊರೋನಾ ವೈರಸ್‌ ವೃದ್ಧರಿಗೆ ಮಾತ್ರ ಮಾರಕ. ಯುವಕರಿಗೆ ಏನೂ ಆಗಲ್ಲ’ ಎಂದು ಭಾವನೆಯಲ್ಲಿ ಮೈಮರೆತ ಯುವ ಸಮೂಹ, ತನಗೆ ಅರಿವಿಲ್ಲದೇ ಸೋಂಕು ವಾಹಕರಾಗುತ್ತಿರುವುದು ಜಾಗತಿಕ ಅಂಕಿ ಅಂಶಗಳಿಂದ ಖಚಿತಪಟ್ಟಿದೆ. ಅಷ್ಟುಮಾತ್ರವಲ್ಲ. …

Read More »

ಟೈಗರ್ ಗ್ಯಾಂಗ್ ಬಗ್ಗೆ ಲಖನ ಜಾರಕಿಹೋಳಿ ಹೇಳಿದ್ದೇನು… ?

ಟೈಗರ್ ಗ್ಯಾಂಗ್ ಬಗ್ಗೆ ಲಖನ ಜಾರಕಿಹೋಳಿ ಹೇಳಿದ್ದೇನು… ? ಗೋಕಾಕ:ಸುಮಾರು ದಿನಗಳಿಂದ ಸುದ್ದಿ ಯಲ್ಲಿರುವ ಟೈಗರ್ ಗ್ಯಾಂಗ್ ಬಗ್ಗೆ ಇವತ್ತು ಲಕ್ಷ್ಮಿ ನ್ಯೂಸ್ ವಾಹಿನಿ ಜೊತೆ ಮಾತನಾಡಿದ ಚಿಕ್ಕ ಸಾಹುಕಾರರು ಇಬ್ಬರು ಸಹೋದರರ ಪರ ಹೇಳಿಕೆ ನೀಡಿದ್ದಾರೆ. ಬೆಳಗಾವಿ ಯಲ್ಲಿ ನನ್ನ ಅಣ್ಣಾ ರಮೇಶ್ ಜಾರಕಿಹೊಳಿ ಹಾಗೂ ಸತೀಶ್ ಜಾರಕಿಹೊಳಿ ಅವರು ಹೇಳಿದ್ದು ಸರಿಯಿದೆ ಈ ಒಂದು ಟೈಗರ್ ಗ್ಯಾಂಗ್ ಮುಂಚೆ ಇದ್ದಿದ್ದೇ ಬೇರೆ, ಇದು ಬೇರೆ ಯಾವುದೋ ಬಿಲ್ಲಿ …

Read More »