Breaking News

new delhi

ಪರಿಹಾರದ ಚೆಕ್ ವಿತರಣೆ

ಬೆಳಗಾವಿ: ಬೆಂಕಿ ಆಕಸ್ಮಿಕದಿಂದ ಮನೆ ಕಳೆದುಕೊಂಡ ತಾಲ್ಲೂಕಿನ ಹಲಗಾ ಗ್ರಾಮದ ಐದು ಕುಟುಂಬಗಳಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅವರು ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಪರಿಹಾರ ಮಂಜೂರು ಮಾಡಿಸಿದ್ದಾರೆ. ಐದು ತಿಂಗಳ ಹಿಂದೆ ಆಕಸ್ಮಿಕ ಬೆಂಕಿ ಅನಾಹುತಕ್ಕೆ ಐದು ಮನೆಗಳು ಆಹುತಿಯಾಗಿದ್ದವು. ಪ್ರತಿ ಕುಟುಂಬಕ್ಕೆ ತಲಾ ₹ 5 ಲಕ್ಷ ಮಂಜೂರಾಗಿದೆ. ಶಾಸಕರ ಅನುಪಸ್ಥಿತಿಯಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಯುವ ಕಾಂಗ್ರೆಸ್ ಮುಖಂಡ ಚನ್ನರಾಜ ಹಟ್ಟಿಹೊಳಿ ಹಾಗೂ ಪಕ್ಷದ ಕಾರ್ಯಕರ್ತರು ಚೆಕ್‌ಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸಿದರು. …

Read More »

ಚುನಾವಣೆಗೆ ಬಿಜೆಪಿ, ಜೆ​ಡಿ​ಎ​ಸ್‌ ಭರದ ಸಿದ್ಧತೆ

ಬೆಂಗಳೂರುಸ : ತುಮಕೂರು ಜಿಲ್ಲೆ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಘೋಷಣೆಯಾಗುವ ಮೊದಲೇ ಆಡಳಿತಾರೂಢ ಬಿಜೆಪಿ ಹಾಗೂ ಜೆಡಿಎಸ್‌ ತೆರೆಮರೆಯಲ್ಲಿ ಭರದ ಸಿದ್ಧತೆ ಆರಂಭಿಸಿವೆ. ಕ್ಷೇತ್ರದ 264 ಬೂತ್‌ಗಳಲ್ಲಿ ಬೂತ್‌ ಕಮಿಟಿ, ಪೇಜ್‌ ಪ್ರಮುಖ್‌, ವಾಟ್ಸ್‌ ಆಯಪ್‌ ಗ್ರೂಪ್‌ಗಳನ್ನು ರಚಿಸಲು ಮುಂದಾಗಿದ್ದು, ಇದೇ ತಿಂಗಳ ಅಂತ್ಯದ ವೇಳೆಗೆ ಎಲ್ಲವನ್ನೂ ಪೂರ್ಣಗೊಳಿಸಲು ಉದ್ದೇಶಿಸಿದೆ. ಈಗಾಗಲೇ ಪಕ್ಷದ ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ್‌ ಅವರು ಕ್ಷೇತ್ರಕ್ಕೆ ಭೇಟಿ ನೀಡಿ ಸ್ಥಳೀಯ ಮಟ್ಟದ ಮುಖಂಡರು ಹಾಗೂ …

Read More »

ಡ್ರಗ್ಸ್ ಮಾಫಿಯಾ ಬೇರು ಸಹಿತ ಕಿತ್ತೊಗೆಯಲು ಬದ್ಧ: ಡಿಸಿಎಂ ಅಶ್ವತ್ಥ್ ನಾರಾಯಣ್

ಮಳವಳ್ಳಿ,  – ರಾಜ್ಯದ ಕಳಂಕಕ್ಕೆ ಕಾರಣವಾದ ಡ್ರಗ್ಸ್ ಮಾಫಿಯಾವನ್ನು ಬೇರು ಸಹಿತ ಕಿತ್ತೊಗೆಯಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ಹೇಳಿದರು. ಕಾವೇರಿ ನದಿಯಿಂದ ರಾಮನಗರ ಜಿಲ್ಲೆಗೆ ಕುಡಿಯುವ ನೀರಿನ ಸುಮಾರು 540 ಕೋಟಿ ವೆಚ್ಚದಲ್ಲಿ ಯೋಜನೆ ತಾಲ್ಲೂಕಿನ ನೆಟ್ಕಲ್ ಗ್ರಾಮದ ಬಳಿ ನಡೆಯುತ್ತಿರುವ ಪೈಪ್‍ಲೈನ್ ಯಾರ್ಡ್ ಕಾಮಗಾರಿ ಪರಿಶೀಲನೆ ನಡೆಸಿ ನಂತರ ಮಾತನಾಡಿದ ಅವರು, ಡ್ರಗ್ಸ್ ದಂಧೆಯನ್ನು ಬೇರು ಸಹಿತ ಕಿತ್ತೊಗೆಯಲು ನಾವು ಬದ್ಧರಾಗಿದ್ದೇವೆ ಎಂದರು. …

Read More »

ಫ್ಯಾನ್‌, ಬೆಡ್‌ ಇಲ್ಲ- ಇಂದ್ರಾಣಿ ಪಕ್ಕದಲ್ಲೇ ರಿಯಾ ಜೈಲುವಾಸ

ಮುಂಬಯಿ: ಬಾಲಿವುಡ್‌ ನಟ ಸುಶಾಂತ್‌ ಸಿಂಗ್‌ ರಜಪೂತ್‌ ಗೆಳತಿ ರಿಯಾ ಚಕ್ರವರ್ತಿ ಜಾಮೀನು ಅರ್ಜಿಯನ್ನು ಮುಂಬೈ ಕೋರ್ಟ್‌ ವಜಾಗೊಳಿಸಿದ್ದು, ಹೀಗಾಗಿ ಆಕೆಗೆ ಜೈಲೇ ಗತಿಯಾಗಿದೆ. ಹೈಫೈ ಜೀವನ ನಡೆಸುತ್ತಿದ್ದ ರಿಯಾ ಸದ್ಯ ಸೆರೆಮನೆ ವಾಸಿಯಾಗಿದ್ದು, ಮೂಲ ಸೌಕರ್ಯಗಳಿಲ್ಲದ ಕತ್ತಲೆ ಕೋಣೆಯಲ್ಲಿ ದಿನ ಕಳೆಯಬೇಕಿದೆ. ಇನ್ಮೇಲೆ ರಿಯಾಗೆ ಚಾಪೆನೇ ಗತಿ? ಹೌದು ಭದ್ರತೆಯ ಕಾರಣಗಳಿಂದ ರಿಯಾ ಚಕ್ರವರ್ತಿಯನ್ನು ಪ್ರತ್ಯೇಕ ಕೋಣೆಯಲ್ಲಿಡಲಾಗಿದೆ ಎಂದು ಮೂಲಗಳು ತಿಳಿಸಿದ್ದು, ರಿಯಾ ಇರುವ ಬೈಕುಲ್ಲಾ ಜೈಲಿನಲ್ಲಿ ಫ್ಯಾನ್‌ ಇಲ್ಲ, …

Read More »

ಅಭ್ಯರ್ಥಿಗಳಿಗೆ ಚುನಾವಣಾ ಆಯೋಗದ ಭರ್ಜರಿ ಶಾಕ್, ಮರ್ಯಾದೆ ಮೂರು ಕಾಸು!

ನವದೆಹಲಿ   ಸದ್ದಿಲ್ಲದೆ ಚುನಾವಣಾ ಆಯೋಗ ಶಾಕ್ ನೀಡಿದೆ. ಕ್ರಿಮಿನಲ್ ಆರೋಪ ಎದುರಿಸುತ್ತಿರುವ ಅಭ್ಯರ್ಥಿಗಳಿಗೆ ಆಘಾತ ನೀಡಿದೆ. ಚುನಾವಣೆಗೂ ಮುನ್ನ ಮೂರು ಬಾರಿ ಅಭ್ಯರ್ಥಿಗಳು ತಮ್ಮ ಕ್ರಿಮಿನಲ್ ಆರೋಪಗಳನ್ನು ಜನರ ಮುಂದೆ ಇಡಬೇಕಾಗುತ್ತದೆ. ನಾಮಪತ್ರ ಹಿಂಪಡೆಯುವ ನಾಲ್ಕು ದಿನಗಳ ಮುಂಚೆ ಇದಾದ ಮೇಲೆ ನಾಮಪತ್ರ ಹಿಂಪಡೆಯುವ ಕೊನೆಯ ದಿನಕ್ಕೆ 5 ರಿಂದ 8 ದಿನಗಳ ನಡುವೆ ಮತ್ತು ಕೊನೆಯದಾಗಿ ಬಹಿರಂಗ ಪ್ರಚಾರ ಅಂತ್ಯ ಮಾಡುವ ಮುನ್ನ 9 ದಿನದಿಂದ ಹಿಡಿದು ಕೊನೆಯವರೆಗೆ …

Read More »

ನಟಿ ರಾಗಿಣಿ, ಸಂಜನಾಗಿಲ್ಲ ಸದ್ಯಕ್ಕಿಲ್ಲ ರಿಲೀಫ್ : ಮತ್ತೆ 3 ದಿನ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

ಬೆಂಗಳೂರು : ಡ್ರಗ್ಸ್​ ದಂಧೆಯ ಆರೋಪದಲ್ಲಿ ಸಿಸಿಬಿ ವಶದಲ್ಲಿರುವ ಸ್ಯಾಂಡಲ್​ವುಡ್ ನಟಿ ರಾಗಿಣಿ, ಸಂಜನಾ ರನ್ನ ಮತ್ತೆ ಮೂರು ದಿನಗಳ ಕಾಲ ಪೊಲೀಸ್​​ ಕಸ್ಟಡಿಗೆ ನೀಡಿ 1 ನೇ ಎಸಿಎಂಎಂ ನ್ಯಾಯಧೀಶರು ಆದೇಶ ಹೊರಡಿಸಿದ್ದಾರೆ. ಸಿಸಿಬಿ ಪೊಲೀಸರು ವಿಡಿಯೋ ಕಾನ್ಫರೆನ್ಸ್ ಮೂಲಕ 1ನೇ ಎಸಿಎಂಎಂ ಕೋರ್ಟ್ ಜಡ್ಜ್ ಮುಂದೆ ಹಾಜರು ಪಡಿಸಿದ್ದರು. ಸ್ಯಾಂಡಲ್​ವುಡ್ ನಟಿ ರಾಗಿಣಿ ದ್ವಿವೇದಿಯ ಜೊತೆಗೆ ನಟಿ ಸಂಜನಾ, ರಾಹುಲ್, ಲೂಮ್, ಪ್ರಶಾಂತ್ ರಂಕಾ , ರವಿ ಶಂಕರ್, ನಿಯಾಜ್ ಆರು …

Read More »

ಕಾಂಗ್ರೆಸ್ ಪಕ್ಷಕ್ಕೆ ಮೇಜರ್ ಸರ್ಜರಿ : ರಾಷ್ಟ್ರೀಯ ಕಾರ್ಯಕಾರಿ ಸಮಿತಿಯಲ್ಲಿ ರಾಜ್ಯದ ಐವರಿಗೆ ಸ್ಥಾನ

ಬೆಂಗಳೂರು : ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು , ಕಾಂಗ್ರೆಸ್ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಿದ್ದು, ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕೈಬಿಡಲಾಗಿದ್ದು, ಸಿಡಬ್ಲ್ಯೂಸಿಯ ಸದಸ್ಯರನ್ನಾಗಿ ಮುಂದುವರಿಸಲಾಗಿದೆ. ವಿಶೇಷವಾಗಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯಲ್ಲಿ ರಾಜ್ಯದ ಐವರಿಗೆ ಸ್ಥಾನ ನೀಡಿದೆ.ರಾಷ್ಟ್ರೀಯ ಕಾರ್ಯಕಾರಿ ಸಮಿತಿಯಲ್ಲಿ ಮಲ್ಲಿಕಾರ್ಜುನ ಖರ್ಗೆ. ಕೆ ಹೆಚ್ ಮುನಿಯಪ್ಪ, ಹೆಚ್ ಕೆ ಪಾಟೀಲ್, ದಿನೇಶ್ ಗುಂಡೂರಾವ್, ಬಿ ವಿ ಶ್ರೀನಿವಾಸ್ ಗೆ ಸ್ಥಾನ ನೀಡಲಾಗಿದೆ. ಮಹತ್ವದ …

Read More »

ಕರ್ನಾಟಕದ 130 ತಾಲೂಕುಗಳು `ಪ್ರವಾಹ ಪೀಡಿತ’ : ರಾಜ್ಯ ಸರ್ಕಾರ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿದ್ದು, ರಾಜ್ಯ ಸರ್ಕಾರವು ಇದೀಗ 130 ತಾಲೂಕುಗಳನ್ನು ಪ್ರವಾಹ ಪೀಡಿತ ಎಂದು ಘೋಷಣೆ ಮಾಡಿದೆ. ರಾಜ್ಯದಲ್ಲಿ ಕಳೆದ ಆಗಸ್ಟ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ಪ್ರವಾಹ ಉಂಟಾಗಿತ್ತು. ಇದೀಗ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯನ್ನು ಆಧರಿಸಿ ರಾಜ್ಯದ 23 ಜಿಲ್ಲೆಗಳ 130 ತಾಲೂಕುಗಳನ್ನು ಪ್ರವಾಹ ಪೀಡಿತ ತಾಲೂಕುಗಳು ಎಂದು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಈ …

Read More »

ಐಪಿಎಲ್ 13ನೇ ಆವೃತ್ತಿ: ಆಟಗಾರರಿಗೆ ಕೋವಿಡ್-19 ಭೀತಿ ಕಾಡುವುದಿಲ್ಲ- ಗಂಭೀರ್ ವಿಶ್ವಾಸ

ನವದೆಹಲಿ: ಯುಎಇನಲ್ಲಿ ನಡೆಯಲಿರುವ ಐಪಿಎಲ್ ಟೂರ್ನಿಯಲ್ಲಿ ಪಾಲ್ಗೊಂಡಿರುವ ಆಟಗಾರರ ಕಾರ್ಯಕ್ಷಮತೆ ಮೇಲೆ ಕೊರೋನಾವೈರಸ್ ಸಾಂಕ್ರಾಮಿಕ ರೋಗವು ಯಾವುದೇ ರೀತಿಯ ಪರಿಣಾಮ ಬೀರಲ್ಲ ಎಂಬ ವಿಶ್ವಾಸ ಹೊಂದಿರುವುದಾಗಿ ಮಾಜಿ ಟೀಂ ಇಂಡಿಯಾ ಆಟಗಾರ ಗೌತಮ್ ಗಂಭೀರ್ ಹೇಳಿದ್ದಾರೆ. ಕೋವಿಡ್-19 ಮಾರ್ಗಸೂಚಿಗಳನ್ನು ಆಟಗಾರರು ಚಾಚು ತಪ್ಪದೇ ಪಾಲಿಸಬೇಕೆಂದು ದೆಹಲಿ ಕ್ಯಾಪಿಟಲ್ಸ್ ತಂಡದ ಮಾಜಿ ಕ್ಯಾಪ್ಟನ್ ಒತ್ತಾಯಿಸಿದ್ದಾರೆ. ಕೋವಿಡ್-19ಗೆ ಆಟಗಾರರು ಹೆದರುತ್ತಾರೆ ಎಂಬುದು ನನ್ನಗೆ ಅನ್ನಿಸುತ್ತಿಲ್ಲ. ಮಾರ್ಗಸೂಚಿಗಳನ್ನು ಪಾಲಿಸುವುದು ಅತ್ಯಂತ ಪ್ರಮುಖವಾಗಿದೆ. ಒಬ್ಬ ವ್ಯಕ್ತಿಯ ಕಾರಣದಿಂದಾಗಿ …

Read More »

‘ನಾವು 14 ತಿಂಗಳು ಕಾದಿದ್ದೇವೆ, ನೀವು ಸಹನೆಯಿಂದ ಇರಬೇ​ಕು’

ಬೆಂಗ​ಳೂ​ರು : ನಾವು ಸಚಿವರಾಗಲು 14 ತಿಂಗಳು ಕಾದಿದ್ದೆವು. ಹೀಗಾಗಿ ಸಚಿವ ಸ್ಥಾನದ ಆಕಾಂಕ್ಷಿಗಳು ಸಹ ಸ್ವಲ್ಪ ದಿನ ಸಹನೆಯಿಂದ ಕಾಯಬೇಕು. ಹೀಗೆಂದು ಜಲಸಂಪನ್ಮೂಲ ಸಚಿವ ರಮೇಶ್‌ ಜಾರಕಿಹೊಳಿ ಸಲಹೆ ನೀಡಿದ್ದು, ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮತ್ತು ಪಕ್ಷದ ವರಿಷ್ಠರು ಶೀಘ್ರವೇ ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 14 ತಿಂಗಳ ಕಾಲ ಕಾನೂನು ಹೋರಾಟ ನಡೆಸಿ ಉಪ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು …

Read More »