ಬೆಂಗಳೂರು: ಇರಾನ್-ಇಸ್ರೇಲ್ ನಡುವಿನ ಸಂಘರ್ಷ ಈಗ ದೇಶದಲ್ಲಿ ಗ್ಯಾಸ್ ಎಮರ್ಜೆನ್ಸಿ ಸೃಷ್ಟಿ ಮಾಡಿದೆ. ಈಗಾಗಲೇ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಾಗಿದ್ದು, ಇದೀಗ ಅಡುಗೆ ಎಣ್ಣೆ ಬೆಲೆಯೂ ಏರಿಕೆ ಆಗಿದೆ. ಗೃಹ ಬಳಕೆಯ 14.2 ಕೆಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 60 ರೂಪಾಯಿ ಏರಿಕೆ ಮಾಡುವ ಮೂಲಕ ಸಾಮಾನ್ಯ ವರ್ಗದ ಬೆನ್ನಮೇಲೆ ಮತ್ತೊಂದು ಭಾರ ಹೇರಲಾಗಿತ್ತು. ಈಗ ಅಡುಗೆ ಎಣ್ಣೆ ಬೆಲೆ ಕೂಡ ಏರಿಸಿ ಮತ್ತಷ್ಟು ಭಾರ ಸಾಮಾನ್ಯ …
Read More »ಮಹಿಳೆ ಸೃಷ್ಠಿಯ ಮೂಲ: ಡಾ. ಲತಾ
ಬಾಗಲಕೋಟೆ : ದೃಡ ಮನಸ್ಸು ಮತ್ತು ಪರಿಶ್ರಮವಿದ್ದರೆ ಏನನ್ನೂ ಬೇಕಾದರೂ ಸಾದಿಸಬಹುದು. ಛಲ ಇಟ್ಟಕೊಂಡರೆ ಎಲ್ಲವೂ ಸಾಧ್ಯ ಸಾಧಕ ಮಹಿಳೆಯರೆಲ್ಲರೂ ಒಬ್ಬಂಟಿ ಹೋರಾಟದ ಮೂಲಕವೇ ಸೋತು ಗೆದ್ದಿದ್ದು ಎಲ್ಲ ಕ್ಷೇತ್ರಗಳಲ್ಲಿಯೂ ತಮ್ಮ ಛಾಪು ಮೂಡಿಸಿದ್ದಾರೆ ಅವರನ್ನು ಪ್ರೇರಣೆಯನ್ನಾಗಿಸಿಕೊಂಡು ಗುರಿಯತ್ತ ಹೆಜ್ಜೆ ಹಾಕಿ ಎಂದು ಬಾಗಲಕೋಟೆ ವಿವಿಯ ರೆಜಿಸ್ಟರ್ ಡಾ.ಕೆ.ಪಿ ಲತಾ ಹೇಳಿದರು. ನಗರದ ಬಸವೇಶ್ವರ ಕಲಾ ಮಹಾವಿದ್ಯಾಲಯದಲ್ಲಿ ಮಹಿಳಾ ಸಬಲಿಕರಣ ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು …
Read More »ಅಂತಾರಾಷ್ಟ್ರೀಯ ವೈದ್ಯಕೀಯ ಸಮ್ಮೇಳನ
ಬೆಳಗಾವಿ: ಕೌನ್ಸೆಲಿಂಗ್ ಸೆಲ್ ಮತ್ತು ಡಿಪಾರ್ಟ್ಮೆಂಟ್ ಆಫ್ ಸೈಕಾಲಜಿ ಹಾಗೂ ಕೆಎಲ್ಇ ಅಕಾಡೆಮಿ ಆಫ್ ಹೈಯರ್ ಆ್ಯಂಡ್ ರಿಸರ್ಚ್ (ಕಾಹೇರ್) ವತಿಯಿಂದ ಅಡ್ವಾನ್ಸಡ್ ಟೆಕ್ನಾಲಜಿ ಮತ್ತು ಥೆರಪಿಸ್-ಎ ಮಲ್ಟಿಡಿಸಿಪ್ಲಿನರಿ ಅಪ್ರೋಚ್ ಫಾರ್ ಮೆಂಟಲ್ ಹೆಲ್ತ್ ಮ್ಯಾನೇಜ್ಮೆಂಟ್ ಕುರಿತು 3ನೇ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಲಾಗಿತ್ತು. ಇಸ್ರೋದ ಎಸ್ಪಿಸಿಜಿ ಸಮೂಹ ನಿರ್ದೇಶಕ ಡಾ.ಶ್ರೀನಿವಾಸ ರಾವ್ ಸಮ್ಮೇಳನ ಉದ್ಘಾಟಿಸಿ ಮಾತನಾಡಿ, ಆಧುನಿಕ ತಂತ್ರಜ್ಞಾನಗಳ ಯುಗದಲ್ಲಿ ಮಾನಸಿಕ ಆರೋಗ್ಯದ ಕುರಿತು ಹಾಗೂ ಸಮುದಾಯದ ವಿವಿಧ ಗುಂಪುಗಳಿಗೆ ಮಾನಸಿಕ …
Read More »ಶಹಾಪುರ-ವಡಗಾವಿ ಮುಖ್ಯ ರಸ್ತೆಗೆ ದೇವರ ದಾಸಿಮಯ್ಯನವರ ಹೆಸರಿಡುವಂತೆ ಆಗ್ರಹಿಸಿ ಮನವಿ
ಬೆಳಗಾವಿ : ನಗರದ ಶಹಾಪುರ-ವಡಗಾವಿ ಮುಖ್ಯ ರಸ್ತೆಗೆ ದೇವರ ದಾಸಿಮಯ್ಯನವರ ಹೆಸರಿಡುವಂತೆ ಆಗ್ರಹಿಸಿ ಜಿಲ್ಲಾ ನೇಕಾರರ ಬಳಗದ ಸದಸ್ಯರು ಗುರುವಾರ ಗುರುವಾರ ಜಿಲ್ಲಾಧಿಕಾರಿ, ಪಾಲಿಕೆ ಆಯುಕ್ತ ಹಾಗೂ ಮೇಯರ್ಗೆ ಮನವಿ ಸಲ್ಲಿಸಿದ್ದಾರೆ. ವಡಗಾವಿ, ಭಾರತ ನಗರ, ಖಾಸಬಾಗ ಹಾಗೂ ಹಳೇಬೆಳಗಾವಿ ಭಾಗದಲ್ಲಿ ಸುಮಾರು 40 ಸಾವಿರಕ್ಕೂ ಹೆಚ್ಚು ಜನ ನೇಕಾರರು ವಾಸವಾಗಿದ್ದೇವೆ. ನಾವು ನೇಕಾರರ ಸಂತ ಆದ್ಯ ವಚನಕರ ದೇವರ ದಾಸಿಮಯ್ಯನವರನ್ನು ಪೂಜಿಸುವ ಸಮುದಾಯದವರಾಗಿದ್ದೇವೆ. ಈ ಭಾಗದ ರಸ್ತೆಗೆ ನಮ್ಮ ಸಮುದಾಯದ …
Read More »ಅಕ್ಕೋಳ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಶತಮಾನೋತ್ಸ
ಬೋರಗಾಂವ: ದೇಶಕ್ಕೆ ಅನ್ನ ನೀಡುವ ರೈತ ಹಾಗೂ ಗಡಿ ಕಾಯುವ ಸೈನಿಕರನ್ನು ಎಲ್ಲರೂ ಗೌರವಿಸಬೇಕು ಎಂದು ಮಾಜಿ ಸಂಸದ ರಮೇಶ ಕತ್ತಿ ಹೇಳಿದರು. ಸಮೀಪದ ಅಕ್ಕೋಳ ಗ್ರಾಮದಲ್ಲಿ ೧೦೨ ವರ್ಷ ಪೂರೈಸಿದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಶತಮಾನೋತ್ಸವ ಹಾಗೂ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಜಿಲ್ಲಾ ಕೇಂದ್ರ ಬ್ಯಾಂಕ್ನಿಂದ ನಿಪ್ಪಾಣಿ ತಾಲೂಕಿನ ಕೆಲ ಪಿಕೆಪಿಎಸ್ ಸಂಘಗಳಿಗೆ ಕ್ರಮದ ಪತ್ತು ನೀಡಲು ಹಿಂದೇಟು ಹಾಕುತ್ತಿರುವುದು ಬೇಸರವಾಗಿದೆ. ಯುವ ನಾಯಕ …
Read More »ಬೆಳಗಾವಿಗೆ ಆಗಮಿಸಲಿದ್ದಾರೆ ನಿಸರ್ಗಮನೆ ಖ್ಯಾತಿಯ ಡಾ.ವೆಂಕಟರಮಣ ಹೆಗಡೆ
ಬೆಳಗಾವಿ: ಶಿರಸಿ ವೇದ ವೆಲ್ನೆಸ್ ಸೆಂಟರ್ ಹಾಗೂ ನಿಸರ್ಗಮನೆ ಖ್ಯಾತ ವೈದ್ಯರಾದ ಡಾ. ವೆಂಕಟರಮಣ ಹೆಗಡೆ ಅವರು ಬೆಳಗಾವಿಗೆ ಭೇಟಿ ನೀಡಲಿದ್ದಾರೆ. ಮಾರ್ಚ್ 14 ಮತ್ತು 15ರಂದು ಬೆಳಗಾವಿಯ ಹೊಟೇಲ್ ಹೆರಿಟೇಜ್ (ಸೇಂಟ್ ಝೇವಿಯರ್ಸ್ ಶಾಲೆಯ ಎದುರು) ನಲ್ಲಿ ವಾಸ್ತವ್ಯ ಹೂಡಿ, ಸಾರ್ವಜನಿಕರಿಗೆ ವಿವಿಧ ಆರೋಗ್ಯ ಸಮಸ್ಯೆಗಳ ಕುರಿತು ಸಲಹೆ ಹಾಗೂ ಮಾರ್ಗದರ್ಶನ ನೀಡಲಿದ್ದಾರೆ. ಈ ವೇಳೆ “ಮನೆಯಲ್ಲೇ ಪರಿಹಾರ”, “ಆಹಾರ ಆರೋಗ್ಯ”, “ಪವರ್ ಡಿಟಾಕ್ಸ್” ಹಾಗೂ “ಅಡುಗೆ ಮನೆಯಲ್ಲಿ …
Read More »ಪ್ರೀತಿಸುವಂತೆ ಸಹಪಾಠಿ ಒತ್ತಾಯಿಸಿದ್ದಕ್ಕೆ ಮಹಡಿ ಮೇಲಿಂದ ಹಾರಿ ವಿದ್ಯಾರ್ಥಿನಿ ಸೂಸೈಡ್
ಬೀದರ್: ಪ್ರೀತಿಸುವಂತೆ ಸಹಪಾಠಿ ಒತ್ತಾಯಿಸಿದ್ದಕ್ಕೆ ಬೇಸತ್ತು ಶಾಲೆಯ ಮಹಡಿ ಮೇಲಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಭೆಮಳಖೇಡ ಗ್ರಾಮದಲ್ಲಿ ನಡೆದಿದೆ. ಮದಿಯಾ ನಶೀರ್ ಪಾಷಾ (16) ಆತ್ಮಹತ್ಯೆಗೆ ಶರಣಾದ ಬಾಲಕಿ. ಭೆಮಳಖೇಡ ಗ್ರಾಮದ ಶಾಲೆಯೊಂದರಲ್ಲಿ ಹತ್ತನೇ ತರಗತಿ ಓದುತ್ತಿದ್ದರುವುದಾಗಿ ತಿಳಿದುಬಂದಿದೆ. ಸಹಪಾಠಿಯಿಂದ ಲವ್ ಮಾಡುವಂತೆ ಚುಡಾಯಿಸಿದಕ್ಕೆ ಹಾಗೂ ಪ್ರೀತಿಸುವಂತೆ ಒತ್ತಡ ಹಾಕಿದ್ದಕ್ಕೆ ಶಾಲಾ ಕಟ್ಟಡದ ಮೇಲಿಂದ ಜಿಗಿದು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ …
Read More »ಬೆಳಗಾವಿ: ರಾಷ್ಟ್ರೀಯ ಹೆದ್ದಾರಿ-48 ರ ಆರು ಪಥಗಳ ಕಾಮಗಾರಿ ಅಂತಿಮ ಹಂತದಲ್ಲಿ; ಪ್ರಯಾಣಿಕರಿಗೆ ಶೀಘ್ರವೇ ಸುಗಮ ಸಂಚಾರಕ್ಕೆ ಮುಕ್ತ: ಸಂಸದ ಈರಣ್ಣ ಕಡಾಡಿ
ಬೆಳಗಾವಿ: ಬೆಳಗಾವಿ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ-48 ರ ಪುಣೆ-ಬೆಂಗಳೂರು ವಿಭಾಗದ ಆರು ಪಥಗಳ ಕಾಮಗಾರಿಯು ಬೆಳಗಾವಿಯಿಂದ ಸಂಕೇಶ್ವರ ಬೈಪಾಸ್ವರೆಗಿನ 40 ಕಿ.ಮೀ ರಸ್ತೆಯು ಶೇ. 98.10 ರಷ್ಟು ಪೂರ್ಣಗೊಂಡಿದ್ದು, ಮಾರ್ಚ್ 31, 2026 ರೊಳಗೆ ಪೂರ್ಣಗೊಳ್ಳಲಿದೆ. ಹಾಗೂ ಸಂಕೇಶ್ವರ ಬೈಪಾಸ್ನಿಂದ ಮಹಾರಾಷ್ಟ್ರ ಗಡಿಯವರೆಗಿನ 37.83 ಕಿ.ಮೀ ಉದ್ದದ ಕಾಮಗಾರಿಯು ಶೇ 78.10% ಪ್ರಗತಿಯಲ್ಲಿದ್ದು ಅಕ್ಟೋಬರ್ 31, 2026 ಕ್ಕೆ ಪೂರ್ಣಗೊಳ್ಳುವ ನಿರೀಕ್ಷೆಯಿದ್ದು ಶೀಘ್ರದಲ್ಲೇ ಪ್ರಯಾಣಿಕರಿಗೆ ಸುಗಮ ಸಂಚಾರಕ್ಕೆ …
Read More »ಕೇವಲ ಮಧುರೈ ಏಕೆ? ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣವನ್ನೂ ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿ: ಎಂ.ಬಿ ಪಾಟೀಲ್
ಬೆಂಗಳೂರು: ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ರಾಜ್ಯದ ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳ ಬಗ್ಗೆ ಇಂತಹ ನಿರ್ಧಾರ ಘೋಷಿಸದೆ ಇರುವುದು ತಾರತಮ್ಯ ಧೋರಣೆಯ ಪ್ರದರ್ಶನವಾಗಿದೆ. ಇದು ಸರ್ವಥಾ ಸರಿಯಲ್ಲ. ಅವರಿಗೆ ಬೆಣ್ಣೆ, ನಮಗೆ ಸುಣ್ಣ ಎಂದರೆ ಹೇಗೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ ಪಾಟೀಲ್ ಅವರು ಪ್ರಶ್ನಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಕೇಂದ್ರ ಸರ್ಕಾರವು …
Read More »ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ, ಹುಬ್ಬಳ್ಳಿಯಲ್ಲಿ ಡಿ.ಕೆ.ಶಿವಕುಮಾರ್ ಬೆಂಬಲಿಗರ ಸಂಭ್ರಮ
ಕೆಪಿಸಿಸಿ ಅಧ್ಯಕ್ಷರಾಗಿ ಆರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್ ಅವರ ಬೆಂಬಲಿಗರು ಹುಬ್ಬಳ್ಳಿಯಲ್ಲಿ ಸಂಭ್ರಮಾಚರಣೆ ನಡೆಸಿದರು. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಸರ್ವೋದಯ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹಾಗೂ ಪರಸ್ಪರ ಸಿಹಿ ತಿನ್ನಿಸುವ ಮೂಲಕ ವಿಜಯೋತ್ಸವ ಆಚರಿಸಿದರು. ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಅವರ ಅಳಿಯ ರಜತ್ ಉಳ್ಳಾಗಡ್ಡಿಮಠ ಅವರ ಸಮ್ಮುಖದಲ್ಲಿ ಕಾರ್ಯಕ್ರಮ ನಡೆಯಿತು. ಈ ವೇಳೆ ಕಾರ್ಯಕರ್ತರು “ಮುಂದಿನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್” ಎಂದು …
Read More »
Laxmi News 24×7