ದಾವಣಗೆರೆ: ದಕ್ಷಿಣ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ರಾಜ್ಯ ಎಸ್ಟಿ ಮೋರ್ಚಾದ ಉಪಾಧ್ಯಕ್ಷ ಶ್ರೀನಿವಾಸ್ ದಾಸಕರಿಯಪ್ಪ ಅಭ್ಯರ್ಥಿ ಎಂದು ಘೋಷಣೆ ಮಾಡಿದೆ. ಶುಕ್ರವಾರ ಅವರು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಏಪ್ರಿಲ್ 9ರಂದು ಉಪ ಚುನಾವಣೆ ನಡೆಯಲಿದ್ದು, ಮೇ 4ರಂದು ಫಲಿತಾಂಶ ಪ್ರಕಟವಾಗಲಿದೆ. ಮಾರ್ಚ್ 23ರ ಸೋಮವಾರ ಪುನಃ ಬಿಜೆಪಿ ನಾಯಕರ ಜೊತೆ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ದಾವಣಗೆರೆ ಬಿಜೆಪಿಯಲ್ಲಿ ಬಣ ರಾಜಕೀಯವಿದೆ ಎಂಬ ಆರೋಪಗಳ ನಡುವೆಯೇ ಮಾಜಿ ಸಚಿವ …
Read More »ಸಾವಿರಕ್ಕಿಂತ ಹೆಚ್ಚು ಸಿಲಿಂಡರ್ ನೀಡಲಾಗದು’: ಸಚಿವ ಕೆ.ಎಚ್.ಮುನಿಯಪ್ಪ
ಬೆಂಗಳೂರು: ಈಗಿರುವ ಸಂದಿಗ್ಧ ಪರಿಸ್ಥಿತಿಯಲ್ಲಿ ಹೋಟೆಲ್, ರೆಸ್ಟೋರೆಂಟ್ಗಳಿಗೆ ನಿತ್ಯ ಒಂದು ಸಾವಿರಕ್ಕಿಂತ ಹೆಚ್ಚು ಸಿಲಿಂಡರ್ಗಳನ್ನು ಪೂರೈಸಲು ಸಾಧ್ಯವಿಲ್ಲ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು. ವಿಧಾನ ಪರಿಷತ್ನಲ್ಲಿ ಕಾಂಗ್ರೆಸ್ನ ಐವನ್ ಡಿಸೋಜ ಅವರು ಬುಧವಾರ ಈ ಬಗ್ಗೆ ಮಾಡಿದ ಪ್ರಸ್ತಾಪಕ್ಕೆ ಉತ್ತರಿಸಿದ ಮುನಿಯಪ್ಪ, ‘ಪ್ರತಿದಿನ ವಾಣಿಜ್ಯ ಬಳಕೆಯ 44 ಸಾವಿರ ಸಿಲಿಂಡರ್ಗಳಿಗೆ ಬೇಡಿಕೆ ಇದೆ. ಆದರೆ, 9 ಸಾವಿರ ಸಿಲಿಂಡರ್ಗಳನ್ನು ಪೂರೈಕೆ ಮಾಡಲು ಸಾಧ್ಯವಾಗುತ್ತಿದೆ. ಶಿಕ್ಷಣ ಸಂಸ್ಥೆಗಳು, ಹಾಸ್ಟೆಲ್, ಆಸ್ಪತ್ರೆ …
Read More »35 ಸಾವಿರ ಲಂಚದ ಹಣ ಬಿಸಾಕಿ ಎಸ್ಕೇಪ್,ಕೊನೆಗೂ ಲೋಕಾಯುಕ್ತ ಬಲೆಗೆ ಬಿದ್ದ ಕೋಲಾರ ಸಹಾಯಕ ಡ್ರಗ್ ಕಂಟ್ರೋಲರ್..!!!
ಲೋಕಾಯುಕ್ತ ಅಧಿಕಾರಿಗಳನ್ನು ಕಂಡು ಲಂಚದ ಹಣ ಬಿಸಾಡಿ ಪರಾರಿಯಾಗಿದ್ದ ಎಫ್ಡಿಸಿ ಶ್ಯಾಮಲಾ ಹಾಗೂ ಇಬ್ಬರು ಸಹಾಯಕರು ಕೊನೆಗೂ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮೆಡಿಕಲ್ ಸ್ಟೋರ್ ಲೈಸೆನ್ಸ್ ನವೀಕರಣಕ್ಕೆ 35,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. 35,000 ಸಾವಿರ ಲಂಚ ಸ್ವೀಕಾರ ಮಾಡಿ ಲೋಕಾ ಅಧಿಕಾರಿಗಳ ಕಂಡ ಕೂಡಲೇ ಪರಾರಿಯಾಗಿದ್ದರು. ಮಾರ್ಗಮಧ್ಯದಲ್ಲೇ ಲಂಚದ ಹಣವನ್ನು ಬಿಸಾಡಿ ಬಂದಿದ್ದರು. ತಡರಾತ್ರಿವರಗೂ ಹಣಕ್ಕಾಗಿ ಲೋಕಾಯುಕ್ತ ಅಧಿಕಾರಿಗಳು ಮತ್ತು ಸಿಬ್ಬಂದಿ ಹುಡುಕಾಡಿದ್ರೂ ಹಣ ಸಿಗಲಿಲ್ಲ. ಹೀಗಾಗಿ ಹಣ …
Read More »ಇಟ್ಟಿಗೆ ತುಂಬಿದ ಟ್ರ್ಯಾಕ್ಟರ್ - ಟ್ರೇಲರ್ ಮಧ್ಯೆ ಸಿಲುಕಿ ಚಾಲಕ ದುರ್ಮರಣ
ಹಾವೇರಿ: ಇಟ್ಟಿಗೆ ತುಂಬಿದ ಟ್ರ್ಯಾಕ್ಟರ್ ಮತ್ತು ಟ್ರೇಲರ್ ನಡುವೆ ಸಿಲುಕಿ ಚಾಲಕ ಸಾವನ್ನಪ್ಪಿರುವ ಘಟನೆ ಹಾವೇರಿ ತಾಲೂಕಿನ ಮರೋಳ ಗ್ರಾಮದಲ್ಲಿ ನಡೆದಿದೆ. ಹಾವೇರಿ ತಾಲೂಕಿನ ಗುತ್ತಲ ತಾಂಡಾದ ನಿವಾಸಿ ದೇವರಾಜ್ ಲಮಾಣಿ (26) ಮೃತ ಚಾಲಕ. ದೇವರಾಜ್ ಬೆಳಗ್ಗೆ ಎರಡೂವರೆ ಸಾವಿರ ಇಟ್ಟಿಗೆ ತುಂಬಿಕೊಂಡು ಮರೋಳ ಗ್ರಾಮಕ್ಕೆ ಬಂದಿದ್ದ. ಈ ವೇಳೆ ಏಕಾಏಕಿ ಟ್ರ್ಯಾಕ್ಟರ್ನ ಎಂಜಿನ್ ಮೇಲೆ ಎದ್ದು ನಡುವಲ್ಲಿ ಸಿಲುಕಿ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಗುತ್ತಲ ಪೊಲೀಸರು ಭೇಟಿ …
Read More »SSLC ಪರೀಕ್ಷೆಗೆ ಹಾಜರಾಗುತ್ತಿರುವ ಮಕ್ಕಳಿಗೆ ಶುಭಕೋರಿದ ಸಿಎಂ
ಬೆಂಗಳೂರು: 2026ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸದನದಲ್ಲಿ ಶುಭಾಶಯ ಕೋರಿದರು. ಪ್ರಸ್ತುತ ಸಾಲಿನಲ್ಲಿ 8,65,968 ಮಕ್ಕಳು ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾಗುತ್ತಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಸುಧಾರಣೆಗಳನ್ನು ತರಲಾಗಿದ್ದು, ಮೂರು ಹಂತದಲ್ಲಿ ಪರೀಕ್ಷೆಗಳು ನಡೆಯುತ್ತವೆ. ಒಂದು ವೇಳೆ ಮೊದಲ ಹಂತದ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದಾಗ್ಯೂ ಎರಡನೇ ಹಂತ, ಮೂರನೇ ಹಂತದಲ್ಲಿ ಪರೀಕ್ಷೆಗೆ ಅವಕಾಶ ಇರುವುದರಿಂದ ಯಾವುದೇ ವಿದ್ಯಾರ್ಥಿಗಳು ಆತಂಕಗೊಳ್ಳದೇ ಪರೀಕ್ಷೆಯನ್ನು ಎದುರಿಸುವಂತೆ …
Read More »ಗಂಡನನ್ನು ಬಂಧಿಸಿ ಪತ್ನಿಗೆ ಲೈಂಗಿಕ ಕಿರುಕುಳ; ರಾತ್ರಿ ಕಾಂಪೌಂಡ್ ಹಾರಿ ಬರ್ತಾರಂತೆ.. ಮೂಡುಬಿದಿರೆ ಇನ್ಸ್ಪೆಕ್ಟರ್ ಕಾಟಕ್ಕೆ ಮಹಿಳೆಯರು ಕಂಗಾಲು..
ಮೂವರು ಸಂತ್ರಸ್ತೆಯರು ಧೈರ್ಯ ಮಾಡಿ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ. ಅವರ ಅಸಲಿಯತ್ತನ್ನು ಬಯಲು ಮಾಡಿದ್ದು, ಉನ್ನತ ಮಟ್ಟದ ತನಿಖೆ ನಡೆಸಿ ನ್ಯಾಯ ಒದಗಿಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಗಂಭೀರ ಸ್ವರೂಪದ ಈ ಆರೋಪಗಳ ಬಗ್ಗೆ ಪೊಲೀಸ್ ಇಲಾಖೆ ಯಾವ ರೀತಿಯ ಕ್ರಮ ಕೈಗೊಳ್ಳಲಿದೆ ಕಾದು ನೋಡಬೇಕಿದೆ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮತ್ತೊಂದು ಮುಜುಗರದ ಪ್ರಸಂಗ ಬೆಳಕಿಗೆ ಬಂದಿದೆ. ರಕ್ಷಣೆ ನೀಡಬೇಕಾದ ಖಾಕಿಯೇ ಭಕ್ಷಕನಾದ ಆರೋಪವೊಂದು ಕೇಳಿಬಂದಿದ್ದು, ಮೂಡುಬಿದಿರೆ ಠಾಣೆಯ ಇನ್ಸ್ಪೆಕ್ಟರ್ ಸಂದೇಶ್ …
Read More »ಶ್ರೀಶೈಲದಿಂದ ವಾಪಸ್ ಬರುವಾಗ ಕ್ರೂಸರ್ ಅಪಘಾತ ; ಬೆಳಗಾವಿ ಮೂಲದ ಮೂವರು ಸಾವು
ಬೆಳಗಾವಿ : ಶ್ರೀಶೈಲ ಮಲ್ಲಿಕಾರ್ಜುನ ಸ್ವಾಮಿ ದರ್ಶನ ಪಡೆದುಕೊಂಡು ಮರಳಿ ಬರುವ ವೇಳೆ ಕ್ರೂಸರ್ ವಾಹನ ಹಾಗೂ ಲಾರಿ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಚಿಕ್ಕೋಡಿ ಮೂಲದ ಮೂವರು ಮೃತಪಟ್ಟ ಘಟನೆ ಆಂದ್ರಪ್ರದೇಶದ ಮಾರ್ಕಪುರಂ ಜಿಲ್ಲೆಯ ತಿಪ್ಪಾಯಪಾಲೆಂ ಬಳಿ ಸೋಮವಾರ ಸಂಭವಿಸಿದೆ. ಚಿಕ್ಕೋಡಿ ತಾಲೂಕಿನ ಎಕ್ಸಂಬಾ ಪಟ್ಟಣದ ಅಜಿತ್ ಸಾತವಾರ ( 28), ಗೌರವ್ (40) ಹಾಗೂ ಅಲಕಾ ಶಿಂಧೆ (60) ಮೃತಪಟ್ಟ ದುರ್ದೈವಿಗಳು. ಶ್ರೀಶೈಲ ಮಲ್ಲಿಕಾರ್ಜುನ ದರ್ಶನಕ್ಕೆ …
Read More »ಅಡುಗೆ ಎಣ್ಣೆ ಬೆಲೆ ಲೀಟರ್ಗೆ 8-10 ರೂ. ಏರಿಕೆ
ಬೆಂಗಳೂರು: ಇರಾನ್-ಇಸ್ರೇಲ್ ನಡುವಿನ ಸಂಘರ್ಷ ಈಗ ದೇಶದಲ್ಲಿ ಗ್ಯಾಸ್ ಎಮರ್ಜೆನ್ಸಿ ಸೃಷ್ಟಿ ಮಾಡಿದೆ. ಈಗಾಗಲೇ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಾಗಿದ್ದು, ಇದೀಗ ಅಡುಗೆ ಎಣ್ಣೆ ಬೆಲೆಯೂ ಏರಿಕೆ ಆಗಿದೆ. ಗೃಹ ಬಳಕೆಯ 14.2 ಕೆಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 60 ರೂಪಾಯಿ ಏರಿಕೆ ಮಾಡುವ ಮೂಲಕ ಸಾಮಾನ್ಯ ವರ್ಗದ ಬೆನ್ನಮೇಲೆ ಮತ್ತೊಂದು ಭಾರ ಹೇರಲಾಗಿತ್ತು. ಈಗ ಅಡುಗೆ ಎಣ್ಣೆ ಬೆಲೆ ಕೂಡ ಏರಿಸಿ ಮತ್ತಷ್ಟು ಭಾರ ಸಾಮಾನ್ಯ …
Read More »ಮಹಿಳೆ ಸೃಷ್ಠಿಯ ಮೂಲ: ಡಾ. ಲತಾ
ಬಾಗಲಕೋಟೆ : ದೃಡ ಮನಸ್ಸು ಮತ್ತು ಪರಿಶ್ರಮವಿದ್ದರೆ ಏನನ್ನೂ ಬೇಕಾದರೂ ಸಾದಿಸಬಹುದು. ಛಲ ಇಟ್ಟಕೊಂಡರೆ ಎಲ್ಲವೂ ಸಾಧ್ಯ ಸಾಧಕ ಮಹಿಳೆಯರೆಲ್ಲರೂ ಒಬ್ಬಂಟಿ ಹೋರಾಟದ ಮೂಲಕವೇ ಸೋತು ಗೆದ್ದಿದ್ದು ಎಲ್ಲ ಕ್ಷೇತ್ರಗಳಲ್ಲಿಯೂ ತಮ್ಮ ಛಾಪು ಮೂಡಿಸಿದ್ದಾರೆ ಅವರನ್ನು ಪ್ರೇರಣೆಯನ್ನಾಗಿಸಿಕೊಂಡು ಗುರಿಯತ್ತ ಹೆಜ್ಜೆ ಹಾಕಿ ಎಂದು ಬಾಗಲಕೋಟೆ ವಿವಿಯ ರೆಜಿಸ್ಟರ್ ಡಾ.ಕೆ.ಪಿ ಲತಾ ಹೇಳಿದರು. ನಗರದ ಬಸವೇಶ್ವರ ಕಲಾ ಮಹಾವಿದ್ಯಾಲಯದಲ್ಲಿ ಮಹಿಳಾ ಸಬಲಿಕರಣ ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು …
Read More »ಅಂತಾರಾಷ್ಟ್ರೀಯ ವೈದ್ಯಕೀಯ ಸಮ್ಮೇಳನ
ಬೆಳಗಾವಿ: ಕೌನ್ಸೆಲಿಂಗ್ ಸೆಲ್ ಮತ್ತು ಡಿಪಾರ್ಟ್ಮೆಂಟ್ ಆಫ್ ಸೈಕಾಲಜಿ ಹಾಗೂ ಕೆಎಲ್ಇ ಅಕಾಡೆಮಿ ಆಫ್ ಹೈಯರ್ ಆ್ಯಂಡ್ ರಿಸರ್ಚ್ (ಕಾಹೇರ್) ವತಿಯಿಂದ ಅಡ್ವಾನ್ಸಡ್ ಟೆಕ್ನಾಲಜಿ ಮತ್ತು ಥೆರಪಿಸ್-ಎ ಮಲ್ಟಿಡಿಸಿಪ್ಲಿನರಿ ಅಪ್ರೋಚ್ ಫಾರ್ ಮೆಂಟಲ್ ಹೆಲ್ತ್ ಮ್ಯಾನೇಜ್ಮೆಂಟ್ ಕುರಿತು 3ನೇ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಲಾಗಿತ್ತು. ಇಸ್ರೋದ ಎಸ್ಪಿಸಿಜಿ ಸಮೂಹ ನಿರ್ದೇಶಕ ಡಾ.ಶ್ರೀನಿವಾಸ ರಾವ್ ಸಮ್ಮೇಳನ ಉದ್ಘಾಟಿಸಿ ಮಾತನಾಡಿ, ಆಧುನಿಕ ತಂತ್ರಜ್ಞಾನಗಳ ಯುಗದಲ್ಲಿ ಮಾನಸಿಕ ಆರೋಗ್ಯದ ಕುರಿತು ಹಾಗೂ ಸಮುದಾಯದ ವಿವಿಧ ಗುಂಪುಗಳಿಗೆ ಮಾನಸಿಕ …
Read More »
Laxmi News 24×7