ನವದೆಹಲಿ: ಸಣ್ಣ ವಯಸ್ಸಿನಲ್ಲಿ ಉದಯೋನ್ಮುಖ ನಟಿಯೊಬ್ಬರು ಹೃದಯಾಘಾತದಿಂದ ನಿಧನ ಹೊಂದಿದ್ದು, ಬಣ್ಣದ ಲೋಕ ಆಘಾತಕ್ಕೆ ಒಳಗಾಗಿದೆ. ಹರಿಯಾಣ ಚಿತ್ರರಂಗದ ಖ್ಯಾತ ನಟಿ ದಿವ್ಯಾಂಕಾ ಸಿರೋಹಿ ಮಂಗಳವಾರ (ಏ.21) ರಾತ್ರಿ ನಿಧನ ಹೊಂದಿದ್ದಾರೆ. ಅವರಿಗೆ 30 ವರ್ಷ ವಯಸ್ಸಾಗಿತ್ತು. ವರದಿಗಳ ಪ್ರಕಾರ, ಮಂಗಳವಾರ ತಡರಾತ್ರಿ ಗಾಜಿಯಾಬಾದ್ನಲ್ಲಿರುವ ತಮ್ಮ ನಿವಾಸದಲ್ಲಿ ದಿವ್ಯಾಂಕಾ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದೆ. ತಕ್ಷಣವೇ ಕುಟುಂಬ ಸದಸ್ಯರು ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದರೂ ಸಹ, ಅಷ್ಟರಲ್ಲೇ ಅವರು ಮೃತಪಟ್ಟಿದ್ದಾರೆ …
Read More »ಕಟ್ಟಡ ನಿರ್ಮಾಣ ಕಾರ್ಯದಿಂದ ಕುಡಿಯುವ ನೀರಿಗೆ ತೊಂದರೆ
ಬೆಳಗಾವಿ: ಛತ್ರಪತಿ ಶಿವಾಜಿನಗರದಲ್ಲಿ ಕುಡಿಯುವ ನೀರಿನ ಪೈಪ್ಗೆ ಚರಂಡಿ ಲಿಂಕ್; ಬೆಳಗಾವಿಯ ಛತ್ರಪತಿ ಶಿವಾಜಿನಗರದ ನಿವಾಸಿಗಳು ಈಗ ಸಾಂಕ್ರಾಮಿಕ ರೋಗದ ಭೀತಿಯಲ್ಲಿ ನಲುಗುತ್ತಿದ್ದಾರೆ. ಕಟ್ಟಡ ನಿರ್ಮಾಣ ಕಾರ್ಯದಿಂದಾಗಿ ಚರಂಡಿ ಬ್ಲಾಕೇಜ್ ಆಗಿದ್ದು, ಕೊಳಚೆ ನೀರು ಕುಡಿಯುವ ನೀರಿಗೆ ಸೇರುತ್ತಿರುವುದು ಜನರಲ್ಲಿ ಆತಂಕ ಮೂಡಿಸಿದೆ. ಬೆಳಗಾವಿಯ ಛತ್ರಪತಿ ಶಿವಾಜಿನಗರದ 2ನೇ ಮೇನ್ ರಸ್ತೆಯಲ್ಲಿ ಸಾರ್ವಜನಿಕರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಕಟ್ಟಡ ನಿರ್ಮಾಣ ಕಾರ್ಯದಿಂದಾಗಿ ಇಲ್ಲಿನ ಚರಂಡಿ ಬ್ಲಾಕ್ ಆಗಿ ಕೊಳಚೆ ನೀರು …
Read More »ವಿಜಯದುರ್ಗ ಕಡಲತೀರದಲ್ಲಿ ಬೆಳಗಾವಿ ಈಜುಪಟುಗಳ ಅಬ್ಬರ: ಹರ್ಷವರ್ಧನ್ಗೆ ಚಿನ್ನದ ಪದಕ
ಸಿಂಧುದುರ್ಗದ ವಿಜಯದುರ್ಗ ಖಾಡಿಯಲ್ಲಿ ನಡೆದ ರಾಜ್ಯ ಮಟ್ಟದ ಮುಕ್ತ ಜಲತರಂಗ ಸ್ಪರ್ಧೆಯಲ್ಲಿ ಬೆಳಗಾವಿಯ ಆಬಾ ಮತ್ತು ಹಿಂದ್ ಸ್ಪೋರ್ಟ್ಸ್ ಕ್ಲಬ್ನ ಈಜುಪಟುಗಳು ಐತಿಹಾಸಿಕ ಸಾಧನೆ ಮಾಡಿದ್ದಾರೆ. ಈ ಕಠಿಣ ಸ್ಪರ್ಧೆಯಲ್ಲಿ ಬೆಳಗಾವಿಯ ಪ್ರತಿಭೆಗಳು ಚಿನ್ನ ಮತ್ತು ಬೆಳ್ಳಿ ಪದಕಗಳನ್ನು ಮುಡಿಗೇರಿಸಿಕೊಳ್ಳುವ ಮೂಲಕ ನಾಡಿಗೆ ಕೀರ್ತಿ ತಂದಿದ್ದಾರೆ. ಜಿಮ್ ಸ್ವಿಮ್ ಅಕಾಡೆಮಿ ಕೊಲ್ಹಾಪುರ ಮತ್ತು ಸಿಂಧುದುರ್ಗ ಕ್ರೀಡಾ ಮಂಡಳಿ ಆಯೋಜಿಸಿದ್ದ ಈ ಸ್ಪರ್ಧೆಯಲ್ಲಿ, ಬೆಳಗಾವಿಯ ಹರ್ಷವರ್ಧನ್ ಕರ್ಲೇಕರ್ 1 ಕಿಲೋಮೀಟರ್ ವಿಭಾಗದಲ್ಲಿ …
Read More »ಜಲ ಜೀವನ ಮಿಷನ್ 2.0 ಜಾರಿಗೆ ಮುದ್ರೆ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವೆ ತಿಳುವಳಿಕೆ ಪತ್ರಕ್ಕೆ ಸಹಿ
ರಾಜ್ಯದ ಪ್ರತಿಯೊಂದು ಮನೆಗೂ ಕುಡಿಯುವ ನೀರು ಪೂರೈಸುವ ನಿಟ್ಟಿನಲ್ಲಿ ಇಂದು ಮಹತ್ವದ ಹೆಜ್ಜೆ ಇಡಲಾಗಿದೆ. ಕೇಂದ್ರ ಜಲಶಕ್ತಿ ಸಚಿವಾಲಯ ಹಾಗೂ ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನಡುವೆ ‘ಜಲ ಜೀವನ ಮಿಷನ್ 2.0’ ಅನುಷ್ಠಾನಕ್ಕೆ ಸಂಬಂಧಿಸಿದ ತಿಳುವಳಿಕೆ ಪತ್ರಕ್ಕೆ ಇಂದು ಅಧಿಕೃತವಾಗಿ ಸಹಿ ಹಾಕಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಕೃಷ್ಣಾ ಗೃಹ ಕಚೇರಿಯಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಚಾಲನೆ …
Read More »ಇಳಕಲ್ನಲ್ಲಿ ಬೀದಿನಾಯಿಗಳ ಅಟ್ಟಹಾಸ: ಬಾಲಕಿ ಸೇರಿದಂತೆ ಇಬ್ಬರ ಮೇಲೆ ದಾಳಿ, ಬೆಚ್ಚಿಬಿದ್ದ ನಾಗರಿಕರು!
ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ಬೀದಿನಾಯಿಗಳ ಕಾಟ ಮಿತಿಮೀರಿದೆ. ಕಳೆದ ಕೆಲ ದಿನಗಳಿಂದ ನಿರಂತರ ದಾಳಿ ನಡೆಸುತ್ತಿರುವ ಬೀದಿನಾಯಿಗಳು, ಇದೀಗ ಮತ್ತೆ ಬಾಲಕಿ ಮತ್ತು ಯುವಕನನ್ನು ಗುರಿಯಾಗಿಸಿಕೊಂಡಿವೆ. ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ಬೀದಿನಾಯಿಗಳ ಹಾವಳಿ ಮುಂದುವರಿದಿದ್ದು, ಜನಸಾಮಾನ್ಯರು ಭಯದ ನೆರಳಲ್ಲಿ ಬದುಕುವಂತಾಗಿದೆ. ನಗರದ ಕುಲಕರ್ಣಿ ಪೇಟೆಯಲ್ಲಿ ನಿನ್ನೆ ಮತ್ತೆ ಇಬ್ಬರ ಮೇಲೆ ದಾಳಿ ನಡೆಸುವ ಮೂಲಕ ನಾಯಿಗಳು ತಮ್ಮ ಕ್ರೌರ್ಯವನ್ನು ಮೆರೆದಿವೆ. ಮನೆಯ ಹೊರಗೆ ನಿಂತಿದ್ದ 6 ವರ್ಷದ …
Read More »ಧಾರವಾಡದಲ್ಲಿ ವಿದ್ಯಾಗಿರಿ ಠಾಣೆ ಸಿಬ್ಬಂದಿ ಪರೋಕ್ಷ ಕಿರುಕುಳದಿಂದ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ… ಕಿರುಕುಳ ನೀಡಿದ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ
ಧಾರವಾಡ ವಿದ್ಯಾಗಿರಿ ಠಾಣೆಯ ವ್ಯಾಪ್ತಿಯಲ್ಲಿ ಗಾಂಜಾ ಸೇರಿ ಡ್ರಗ್ ಟೆಸ್ಟಿಂಗ್ ಸಂದರ್ಭದಲ್ಲಿ ನೆಗೆಟಿವ್ ಬಂದ ವಿದ್ಯಾರ್ಥಿ ಹೆಸರನ್ನು ಕೈಬಿಡಲು ಮಧ್ಯ ವರ್ತಿಗಳ ಮೂಲಕ ಪೊಲೀಸ ಸಿಬ್ಬಂದಿ 2ಸಾವಿರ ಹಣಕ್ಕೆ ಬೇಡಿಕೆ ಇಟ್ಟಿರುವ ನಡೆ ಖಂಡಿಸಿ ಹಾಗೂ ಪೊಲೀಸ್ ಸಿಬ್ಬಂದಿ ವಿರುದ್ಧ ಕಾನೂನು ಕ್ರಮ ಹಾಗೂ ಕುಟುಂಬಕ್ಕೆ ನ್ಯಾಯ ದೊರಕಿಸುವಂತೆ ಆಗ್ರಹಿಸಿ, ಧಾರವಾಡದಲ್ಲಿ ಬೀದಿಗರ ಇಳಿದು ಪ್ರತಿಭಟನರ ನಡೆಸಲಾಯಿತು. ಸಮಾನ ಮನಸ್ಕರ ವೇದಿಕೆಯ ನೇತೃತ್ವದಲ್ಲಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ …
Read More »ಜನಿವಾರ ಘಟನೆ ಖಂಡಿಸಿ ಬ್ರಾಹ್ಮಣ ಸಮಾಜದಿಂದ ಪ್ರತಿಭಟನೆ
ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಜನಿವಾರವನ್ನು ತೆಗೆಸಿದ ಘಟನೆಯನ್ನು ಖಂಡಿಸಿ ವಿಜಯಪುರ ನಗರದಲ್ಲಿ ಬ್ರಾಹ್ಮಣ ಸಮಾಜವು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿತು. ಈ ವೇಳೆ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಪರೀಕ್ಷೆಯಲ್ಲಿ ಜನಿವಾರಕ್ಕೆ ಅವಮಾನ ಮಾಡಿದ ಅಧಿಕಾರಿಗಳನ್ನು ಕೂಡಲೇ ಕೆಲಸದಿಂದ ವಜಾಗೊಳಿಸಿ ಅವರ ಮೇಲೆ ಶಿಸ್ತು ಕ್ರಮ ತೆಗೆದುಕೊಳ್ಳಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು. ಇನ್ನೂ ಈ ವೇಳೆ ಮಾತನಾಡಿದ ಬ್ರಾಹ್ಮಣ ಸಮಾಜದ ಮುಖಂಡ ಅರವಿಂದ ಕುಲಕರ್ಣಿ ಅವರು ಸಿಇಟಿ ಪರೀಕ್ಷೆಯಲ್ಲಿ ಬ್ರಾಹ್ಮಣ …
Read More »ವಿಜಯಪುರದಲ್ಲಿ ನಡೆಷ ಪುಸ್ತಕ ಮೇಳ ಯಶಸ್ವಿ; ₹5 ಲಕ್ಷಕ್ಕೂ ಹೆಚ್ಚಿನ ವಹಿವಾಟು
ಆ್ಯಂಕರ್: ‘ಮೇ ಸಾಹಿತ್ಯ ಬಳಗದಿಂದ ಸಂಘಟಿಸಲಾಗಿದ್ದ ಪುಸ್ತಕ ಮೇಳ ಯಶಸ್ವಿಯಾಗಿದ್ದು, ₹5 ಲಕ್ಷಕ್ಕೂ ಹೆಚ್ಚಿನ ವಹಿವಾಟು ನಡೆದಿದೆ’ ಎಂದು ಮೇ ಸಾಹಿತ್ಯ ಬಳಗದ ಅನೀಲ ಹೊಸಮನಿ ಹೇಳಿದರು. ವಿಜಯಪುರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬುದ್ಧ, ಬಸವ ಹಾಗೂ ಬಾಬಾಸಾಹೇಬರ ತತ್ವ ಚಿಂತನೆ, ಆಶಯಗಳ ಆಧರಿಸಿ ಸಮಾಜ ಇನ್ನೂ ನಿರ್ಮಾಣವಾಗಿಲ್ಲ. ಈ ಮಹನೀಯರ ಸಮ ಸಮಾಜದ ಕನಸು ನನಸಾಗಿಸಲು ಪ್ರತಿಯೊಬ್ಬರು ಶ್ರಮಿಸಬೇಕಿದೆ. ಈ ಪ್ರಯತ್ನದ ಭಾಗವಾಗಿ ಹಾಗೂ ಸಾಮಾಜಿಕ ಜಾಲತಾಣದಲ್ಲಿ …
Read More »ಕಣಬರ್ಗಿಯಲ್ಲಿ ಬುಡಾ ಯಡವಟ್ಟು: ರೈತರ ಜಮೀನಿಗೆ ಕೊಳಚೆ ನೀರು; ಉಗ್ರ ಹೋರಾಟದ ಎಚ್ಚರಿಕೆ
ಬುಡಾ ಮತ್ತು ಖಾಸಗಿ ಲೇಔಟ್’ನಿಂದಾಗಿ ರೈತರ ಜಮೀನುಗಳಿಗೆ ನಾಲೆಯ ನೀರನ್ನು ತಿರಿಗಿಸಲಾಗಿದ್ದು, ಬೆಳೆಹಾನಿಗೊಳಗಾಗುತ್ತಿರುವ ಕಣಬರ್ಗಿಯ ರೈತರು ಸಮಸ್ಯೆ ನೀಗಿಸದಿದ್ದರೇ ಉಗ್ರ ಹೋರಾಟದ ಎಚ್ಚರಿಕೆಯನ್ನು ನೀಡಿದ್ದಾರೆ. ಬೆಳಗಾವಿಯ ಕಣಬರ್ಗಿಯಲ್ಲಿ ಬುಡಾ ಮತ್ತು ಖಾಸಗಿಯವರು ಲೇಔಟ್ ನಿರ್ಮಿಸಿದ್ದಾರೆ. ಈ ವೇಳೆ ನಾಲೆಯ ನೀರು ಹರಿದು ಹೋಗಲು ಅವೈಜ್ಞಾನಿಕ ಕಾಮಗಾರಿಯನ್ನು ಕೈಗೊಂಡಿದ್ದು, ಕೊಳಚೆ ನೀರು ರೈತರ ಜಮೀನುಗಳಿಗೆ ನುಗ್ಗುತ್ತಿದೆ. ಈ ಹಿನ್ನೆಲೆ ರೈತರು ಬೆಳೆದ ಬೆಳೆ ಹಾಳಾಗುತ್ತಿದ್ದು, ಶ್ರೀ ಸಿದ್ಧೇಶ್ವರ ಶೇತಕರಿ ಸಂಘಟನೆಯೂ ಪ್ರತಿಭಟನೆಯನ್ನು …
Read More »ಮಹಿಳಾ ಹಕ್ಕುಗಳಿಗಾಗಿ ನಮ್ಮ ಹೋರಾಟ — 33% ಮೀಸಲಾತಿ ತಕ್ಷಣ ಜಾರಿಯಾಗಲಿ!
ಚಿಕ್ಕೋಡಿ ನಗರದಲ್ಲಿ ಇಂದು ಚಿಕ್ಕೋಡಿ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಮಹಿಳಾ ಮೀಸಲಾತಿ ವಿಧೇಯಕವನ್ನು ತಕ್ಷಣವೇ ಜಾರಿಗೆ ತರುವಂತೆ ಒತ್ತಾಯಿಸಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಲಾಯಿತು. ಮಹಿಳೆಯರಿಗೆ ರಾಜಕೀಯವಾಗಿ ನ್ಯಾಯ ಸಿಗುವವರೆಗೆ ನಮ್ಮ ಧ್ವನಿ ನಿಲ್ಲದು. ಮಹಿಳೆಯರ ರಾಜಕೀಯ ಸಬಲೀಕರಣಕ್ಕಾಗಿ ಕಾಂಗ್ರೆಸ್ ಪಕ್ಷದ ಬದ್ಧತೆ ಇಂದಿನದ್ದಲ್ಲ. 33% ಮಹಿಳಾ ಮೀಸಲಾತಿಯ ಪರಿಕಲ್ಪನೆಯನ್ನು ಮೊದಲ ಬಾರಿಗೆ ಮುಂದಿಟ್ಟದ್ದು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ. ಸ್ಥಳೀಯ ಸಂಸ್ಥೆಗಳಾದ …
Read More »
Laxmi News 24×7