Breaking News

Uncategorized

ಆಡಳಿತಕ್ಕೆ ವೇಗ: ‘ಕರ್ನಾಟಕ ಪ್ರಗತಿ ಪೋರ್ಟಲ್’ ಲೋಕಾರ್ಪಣೆ ಮಾಡಿದ ಸಿಎಂ ಸಿದ್ದರಾಮಯ್ಯ

ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ ಇನ್ಮುಂದೆ ಸಿಗಲಿದೆ ಡಿಜಿಟಲ್ ವೇಗ. ವಿಧಾನಸೌಧದಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ‘ಕರ್ನಾಟಕ ಪ್ರಗತಿ ಪೋರ್ಟಲ್’ ಬಿಡುಗಡೆ ಮಾಡುವ ಮೂಲಕ ಆಡಳಿತದಲ್ಲಿ ಹೊಸ ಕ್ರಾಂತಿಗೆ ನಾಂದಿ ಹಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರಾಜ್ಯದ ಎಲ್ಲಾ ಇಲಾಖೆಗಳ ಮಾಹಿತಿ ತಂತ್ರಜ್ಞಾನ ಯೋಜನೆಗಳ ಪರಿಶೀಲನೆ ಹಾಗೂ ಸಮನ್ವಯಕ್ಕಾಗಿ ನೂತನ ‘ಕರ್ನಾಟಕ ಪ್ರಗತಿ ಪೋರ್ಟಲ್’ ಮತ್ತು ಮಾರ್ಗದರ್ಶಿ ‘ಕೈಪಿಡಿ’ಯನ್ನು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಸರ್ಕಾರದ …

Read More »

ರೌಡಿ ಶೀಟರ್ ‘ಜ್ಯಾಕ್’ ಆರು ತಿಂಗಳು ಗಡಿಪಾರು; ಅಜ್ಜಂಪುರಕ್ಕೆ ಶಿಫ್ಟ್ ಮಾಡಿದ ಪೊಲೀಸ್

ಕಾರವಾರ:ಜಿಲ್ಲೆಯಲ್ಲಿ ಸತತವಾಗಿ ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸಾರ್ವಜನಿಕ ಶಾಂತಿಗೆ ಭಂಗ ತರುತ್ತಿದ್ದ ರೌಡಿ ಅಸಾಮಿಯೊಬ್ಬನನ್ನು ಉತ್ತರ ಕನ್ನಡ ಜಿಲ್ಲೆಯಿಂದ ಆರು ತಿಂಗಳ ಅವಧಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ. ಕಾರವಾರ ನಗರದ ಕಳಸವಾಡ (ಬಾಡ) ನಿವಾಸಿ ಸೂರ್ಯಕಾಂತ ಕಳಸ ಅಲಿಯಾಸ್ ಜ್ಯಾಕ್ (27) ಎಂಬಾತನೇ ಗಡಿಪಾರಾದ ವ್ಯಕ್ತಿ. ಈತನ ಮೇಲೆ ಕಾರವಾರ ನಗರ ಮತ್ತು ಗ್ರಾಮೀಣ ಪೊಲೀಸ್ ಠಾಣೆಗಳಲ್ಲಿ ಕೊ. ಲೆ ಯತ್ನ, ಹ., ಲ್ಲೆ, ಬೆದರಿಕೆ, ಜೂಜಾಟ ಹಾಗೂ …

Read More »

ಗದಗ ಪೊಲೀಸರ ಭರ್ಜರಿ ಕಾರ್ಯಾಚರಣೆ: 11 ಅಂತರರಾಜ್ಯ ಕಳ್ಳರ ಬಂಧನ, 1.26 ಕೋಟಿ ಮೌಲ್ಯದ ಚಿನ್ನಾಭರಣ ವಶ!

ಗದಗ ಜಿಲ್ಲೆಯಲ್ಲಿ ಸರಣಿ ಕಳ್ಳತನದ ಮೂಲಕ ಜನರಲ್ಲಿ ನಡುಕ ಹುಟ್ಟಿಸಿದ್ದ ಅಂತರರಾಜ್ಯ ಕಳ್ಳರ ಗ್ಯಾಂಗ್‌ ಅನ್ನು ಬೆಟಗೇರಿ ವೃತ್ತದ ಪೊಲೀಸರು ಸಿನಿಮೀಯ ರೀತಿಯಲ್ಲಿ ಬಂಧಿಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ನೇತೃತ್ವದ ತಂಡ ನಡೆಸಿದ ಈ ಬೃಹತ್ ಕಾರ್ಯಾಚರಣೆಯಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಗದಗ ಜಿಲ್ಲೆಯಲ್ಲಿ ಸರಣಿ ಕಳ್ಳತನ ನಡೆಸುತ್ತಿದ್ದ ಅಂತರರಾಜ್ಯ ತಂಡವನ್ನು ಬೆಟಗೇರಿ ವೃತ್ತದ ಪೊಲೀಸರು ಭರ್ಜರಿ ಕಾರ್ಯಾಚರಣೆಯ ಮೂಲಕ ಮಟ್ಟಹಾಕಿದ್ದಾರೆ. ಜಿಲ್ಲಾ ಪೊಲೀಸ್ …

Read More »

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

ಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- ರುಕ್ಮಿಣಿ ಮಂದಿರ ಸಾಕ್ಷಿಯಾಗಿದೆ. ಇದರಿಂದ ನಾವು ಎಲ್ಲರೂ ಧರ್ಮದ ರಕ್ಷಣೆ ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡಲಿದೆ, ಧರ್ಮೋ ಧರ್ಮ ರಕ್ಷಿತಾ ಎಂದು ಪರಮಾನಂದವಾಡಿ ಅಭಿನವ ಮಠದ ಡಾಕ್ಟರ್ ಅಭಿನವ ಸ್ವಾಮೀಜಿ ಕಾಗವಾಡದಲ್ಲಿ ಹೇಳಿದರು. ಶನಿವಾರ ರಂದು ಕಾಗವಾಡದ ಸಾವಿರಾರು ಭಕ್ತರ ಶ್ರದ್ಧಾ ಸ್ಥಾನವಾಗಿರುವ ಶ್ರೀ ಅಂಬಾಬಾಯಿ ಮಂದಿರದಲ್ಲಿ ವಿಠಲ …

Read More »

ಧಾರವಾಡದಲ್ಲಿ ನಿವೃತ್ತಿಯದ ಸೈನಿಕನಿಗೆ ಅದ್ದೂರಿ ಸ್ವಾಗತ… ಸ್ವಗ್ರಾಮದಲ್ಲಿ ಯೋಧನಿಗೆ ಗ್ರಾಮಸ್ಥರಿಂದ ಅದ್ಧೂರಿ ಸ್ವಾಗತ

ಭಾರತೀಯ ಸೇನೆಯಲ್ಲಿ ಸುದೀರ್ಘ 24 ವರ್ಷಗಳ ಕಾಲ ಸೇವೆ ಸಲ್ಲಿಸಿ ಮರಳಿ ಸ್ವಗ್ರಾಮಕ್ಕೆ ಬಂದ ಯೋಧನಿಗೆ ಧಾರವಾಡದ ಕಲ್ಲೂರು ಗ್ರಾಮಸ್ಥರು ಅದ್ಧೂರಿ ಸ್ವಾಗತ ಕೋರಿದರು. ಧಾರವಾಡ ತಾಲೂಕಿನ ಕಲ್ಲೂರು ಗ್ರಾಮದ ಮಹ್ಮದ್‌ಸಾದಿಕ್ ಹಂಚಿಮನಿ ಊರ್ಫ್ ಸೈಯದ್‌ನವರ ಯೋಧ ಭಾರತೀಯ ಸೇನೆಯಲ್ಲಿ ಸುದೀರ್ಘ 24 ವರ್ಷ ಸೇವೆ ಸಲ್ಲಿಸಿ ಮರಳಿ ಸ್ವಗ್ರಾಮಕ್ಕೆ ಬಂದಿದ್ದಾರೆ. ಮರಾಠಾ ಲೈಫ್ ಇನ್‌ಫೆಂಟರಿ ರೆಜೆಂಟ್ ಮೂಲಕ ಭಾರತೀಯ ಸೇನೆ ಸೇರಿದ ಮಹ್ಮದ್‌ಸಾದಿಕ್ ಅವರು ಮಣಿಪುರ, ಸೌತ್‌ಸುಡಾನ್, ಅಸ್ಸಾಂ, …

Read More »

ನಮ್ಮ ‘ಮಸಾಲ ದೋಸೆ’ ಈಗ ವಿಶ್ವ ವಿಜೇತ! ಕನ್ನಡಿಗರ ನೆಚ್ಚಿನ ತಿಂಡಿಗೆ ಜಾಗತಿಕ ಮನ್ನಣೆ! 

ದೋಸೆ ಪ್ರಿಯರೇ, ಸಂಭ್ರಮಿಸಲು ಇಲ್ಲಿದೆ ಒಂದು ಅದ್ಭುತ ಸುದ್ದಿ! ವಿಶ್ವದ ‘ಟಾಪ್ 50 ಅತ್ಯುತ್ತಮ ಪ್ಯಾನ್‌ಕೇಕ್‌ಗಳ’ ಪಟ್ಟಿಯಲ್ಲಿ ನಮ್ಮ ಹೆಮ್ಮೆಯ ಮಸಾಲ ದೋಸೆ ಮತ್ತು ಪೇಪರ್ ದೋಸೆ ಭರ್ಜರಿಯಾಗಿ ಸ್ಥಾನ ಪಡೆದಿವೆ! ಏನಿದು ವಿಶೇಷ? ಖ್ಯಾತ ಆಹಾರ ವಿಶ್ಲೇಷಣಾ ಸಂಸ್ಥೆ ‘ಟೇಸ್ಟ್ ಅಟ್ಲಾಸ್’ (TasteAtlas) ಬಿಡುಗಡೆ ಮಾಡಿರುವ ವಿಶ್ವದ ಅತ್ಯುತ್ತಮ ಪ್ಯಾನ್‌ಕೇಕ್‌ಗಳ ಪಟ್ಟಿಯಲ್ಲಿ ಭಾರತದ ದೋಸೆಗಳು ಜಗತ್ತಿನ ದಿಗ್ಗಜ ಆಹಾರ ಪದಾರ್ಥಗಳಿಗೆ ಫೈಟ್ ನೀಡಿ ಟಾಪ್ ಲಿಸ್ಟ್ ಸೇರಿವೆ. ಪಟ್ಟಿಯಲ್ಲಿ …

Read More »

ಮದುವೆ ಎಂಬ ನಂಬಿಕೆಯ ಹೆಸರಲ್ಲಿ ವಂಚನೆ: ಟೆಕ್ಕಿಯೊಬ್ಬನ ಬಲಿ ಪಡೆದ ವಿಧಿ!

ಹೈದರಾಬಾದ್‌ನಲ್ಲಿ ನಡೆದ ಈ ಘಟನೆ ನಿಜಕ್ಕೂ ಬೆಚ್ಚಿಬೀಳಿಸುವಂತಿದೆ. ತನ್ನ ಜೀವನ ಸಂಗಾತಿಯೇ ತನ್ನನ್ನು ನಡುನೀರಲ್ಲಿ ಕೈಬಿಟ್ಟಾಗ, ಮನನೊಂದ ಸಾಫ್ಟ್‌ವೇರ್ ಇಂಜಿನಿಯರ್ ಒಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಏನಿದು ಘಟನೆ? ಹೈದರಾಬಾದ್‌ನ ಟೆಕ್ಕಿಯೊಬ್ಬರು ತನ್ನ ಪತ್ನಿಯ ನಡವಳಿಕೆಯಿಂದ ಬೇಸತ್ತು ಸಾವಿನ ಹಾದಿ ಹಿಡಿದಿದ್ದಾರೆ. ಸಾಯುವ ಮುನ್ನ ಬರೆದ ಡೆತ್‌ನೋಟ್‌ನಲ್ಲಿ ಅವರು ಹೇಳಿರುವ ಮಾತುಗಳು ಕರುಳು ಹಿಂಡುವಂತಿವೆ. ನಂಬಿಕೆಯ ದ್ರೋಹ: ತನ್ನ ಪತ್ನಿ ಅನೇಕ ಪುರುಷರೊಂದಿಗೆ ಸಂಬಂಧ ಹೊಂದಿದ್ದಾಳೆ ಎಂದು ಆರೋಪಿಸಿರುವ ಅವರು, ಇದರಿಂದ …

Read More »

ಕಿತ್ತೂರು ಸೈನಿಕ ಶಾಲೆಯಲ್ಲಿ ‘ಕ್ಯಾಟರ್ ಪಿಲ್ಲರ್ ಟು ಬಟರ್ ಫ್ಲೈ’ ಪುಸ್ತಕ ಬಿಡುಗಡೆ ಹದಿಹರೆಯದ ವಿದ್ಯಾರ್ಥಿನಿಯರಿಗೆ ಮಾರ್ಗದರ್ಶಿ

ಕರ್ನಾಟಕದ ಕಿತ್ತೂರಿನ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಸೈನಿಕ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಡಾ. ವೀರೇಂದ್ರ ತೆಗ್ಗಿಮನಿ ಅವರು ಏಪ್ರಿಲ್ 30 ರಂದು ಕರ್ನಲ್ ಡಾ. ರಾಹುಲ್ ಶರ್ಮಾ ಮತ್ತು ಅನಿತಾ ಶರ್ಮಾ ಅವರು ರಚಿಸಿದ “ಕ್ಯಾಟರ್ ಪಿಲ್ಲರ್ ಟು ಬಟರ್ ಫ್ಲೈ – ಎ ಜರ್ನಿ ಆಫ್ ರೆಸಿಲಿಲಿಯನ್ಸ್, ಕಾಮರಾಡೆರಿ ಅಂಡ್ ಅವೇಕನಿಂಗ್” ಎಂಬ ಪುಸ್ತಕವನ್ನು ಅಧಿಕೃತವಾಗಿ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಡಾ. ವೀರೇಂದ್ರ …

Read More »

ಕುರುಬ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ ಪ್ರಕರಣ: 9 ಜನರ ವಿರುದ್ಧ ಎಫ್ಐಆರ್

ಬೆಳಗಾವಿಯ ಕೊಂಡಸಕೊಪ್ಪ ಗ್ರಾಮದಲ್ಲಿ ಕುರುಬ ಸಮಾಜದಿಂದ ಕುರುಬ ಕುಟುಂಬಕ್ಕೆ ಸಾಮಾಜೀಕ ಬಹಿಷರ ಹಾಕಿದ ಪ್ರಕರಣದಲ್ಲಿ 9 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ದೇವಸ್ಥಾನದ ಪೂಜೆ ಮತ್ತು ವೈಯಕ್ತಿಕ ಕಾರಣಗಳಿಗಾಗಿ ನರಸೋಬಾ ಕರೆಪ್ಪ ಸಾಂಬ್ರೇಕರ ಅವರ ಕುಟುಂಬವನ್ನು ಗ್ರಾಮದಿಂದ ದೂರ ಇಟ್ಟಿರುವ ಸಂಬಂಧ ಇದೀಗ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಒಟ್ಟು 9 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಗ್ರಾಮದ ಪಂಚರು ನರಸೋಬಾ ಕುಟುಂಬದೊಂದಿಗೆ ಯಾರೂ ಮಾತನಾಡಬಾರದು ಎಂದು ಫರ್ಮಾನು ಹೊರಡಿಸಿದ್ದು ನಿಯಮ …

Read More »

ಅಳಿಯನ ಮನೆಯಲ್ಲೇ 16.57 ಲಕ್ಷ ಮೌಲ್ಯದ ಚಿನ್ನಾಭರಣ ಕದ್ದ ಅತ್ತೆ!

ಬೆಳಗಾವಿಯಲ್ಲಿ ಅತ್ತೆಯೇ ಅಳಿಯನ ಮನೆಗೆ ಕನ್ನ ಹಾಕಿರುವ ಘಟನೆ ನಡೆದಿದೆ. ಪುತ್ರಿಯರ ಮದುವೆ ಸಾಲ ತೀರಿಸಲು ಅಡ್ಡದಾರಿ ಹಿಡಿದ ಮಹಿಳೆ, ಅಳಿಯನ ಮನೆಯಲ್ಲೇ ಚಿನ್ನಾಭರಣ ಕದ್ದು ಸಿಕ್ಕಿಬಿದ್ದಿದ್ದಾಳೆ. ಟಿಳಕವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಬೆಳಗಾವಿಯ ಪಿರಣವಾಡಿ ನಿವಾಸಿ ಉಜ್ವಲಾ ಕಮ್ಮಾರ, ಶಿವಾ ಅಪ್ಪಯನವರ ಬಂಧಿತ ಆರೋಪಿಗಳು. ಚಿಕ್ಕ ಮಗಳ ಮದುವೆ ಸಾಲ ತೀರಿಸಲು ಹಿರಿಯ ಅಳಿಯನ ಮನೆಯಲ್ಲಿ ಮಹಿಳೆ ಉಜ್ವಲಾ, 16.57 ಲಕ್ಷ ಮೌಲ್ಯದ 110 …

Read More »