ಒಬ್ಬರನ್ನು ಉಳಿಸುವುದಕ್ಕೆ ಹೊರಟ ಪ್ರಯಾಣವೊಂದು 7 ಜನರ ಸಾವಿನೊಂದಿಗೆ ಅಂತ್ಯವಾಗಿದೆ. ಹೌದು ನಿನ್ನೆ ಸಂಜೆ ನಡೆದ ಜಾರ್ಖಂಡ್ ಏರ್ ಆಂಬುಲೆನ್ಸ್ ದುರಂತಕ್ಕೂ ಮೊದಲು ಕುಟುಂಬವೊಂದು ತಮ್ಮ ಕುಟುಂಬದ ಬಹಳ ಅಮೂಲ್ಯವಾದ ವ್ಯಕ್ತಿಯ ಜೀವ ಉಳಿಸುವುದಕ್ಕೆ ವಿದೇಶದಲ್ಲೂ ಚಿಕಿತ್ಸೆ ನೀಡುವುದಕ್ಕೆ ಬಯಸಿ ಏಳು ಲಕ್ಷ ಸಾಲ ಮಾಡಿ ಏರ್ ಆಂಬುಲೆನ್ಸ್ ಬುಕ್ ಮಾಡಿತ್ತು. ಆದರೆ ವಿಧಿ ವಿಪರ್ಯಾಸವೋ ಏನೋ ಒಬ್ಬರ ಉಳಿಸಲು ಜಾರ್ಖಂಡ್ನಿಂದ ಆರಂಭಿಸಿದ ಈ ಪ್ರಯಾಣವೂ 7 ಜನರ ಸಾವಿನಲ್ಲಿ …
Read More »9 ತಿಂಗಳಿನಿಂದ ಬಳಲುತ್ತಿದ್ದ ಸೊಸೆಗೆ ಕಿಡ್ನಿ ದಾನ ಮಾಡಿದ ಅತ್ತೆ
ವಿಜಯಪುರ: ಸಾಮಾನ್ಯವಾಗಿ ಅತ್ತೆ, ಸೊಸೆ ಅಂದ್ರೆ ಹಾವು, ಮುಂಗುಸಿ ಥರ ಅಂತಾರೆ. ಆದರೆ 9 ತಿಂಗಳಿನಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಸೊಸೆಗೆ ಅತ್ತೆ ಕಿಡ್ನಿ ದಾನ ಮಾಡಿ ಮಾದರಿಯಾಗಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ಮೂಲತಃ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಮಾಳೂರು ಗ್ರಾಮದವರಾದ ಶಾಂತಾಬಾಯಿ, ಮಗ ಪ್ರಕಾಶನ ಹೆಂಡತಿ ಬಸಮ್ಮಗೆ ತಮ್ಮ ಒಂದು ಕಿಡ್ನಿ ನೀಡಿದ್ದಾರೆ. ಸೊಸೆ ಬಸಮ್ಮ ಎರಡೂ ಕಿಡ್ನಿ ಫೇಲ್ ಆಗಿ ಕಳೆದ 9 ತಿಂಗಳಿಂದ ಬಳಲುತ್ತಿದ್ದರು. …
Read More »ವನ್ಯಜೀವಿ ಸಂಚಾರದ ಬಗ್ಗೆ ಸ್ಥಳೀಯರಿಗೆ ತಕ್ಷಣ ಮಾಹಿತಿ ನೀಡಿ: ಈಶ್ವರ್ ಖಂಡ್ರೆ ಸೂಚನೆ
ಬೆಂಗಳೂರು: ಅರಣ್ಯದಂಚಿನ ಜಮೀನುಗಳಲ್ಲಿ ವನ್ಯಜೀವಿಗಳ ಸಂಚಾರದ ಬಗ್ಗೆ ಕಮಾಂಡ್ ಕೇಂದ್ರಕ್ಕೆ ಮಾಹಿತಿ ಬಂದ ಕೂಡಲೇ ತೋಟದ ಬೆಳೆಗಾರರ ಸಂಘಟನೆ ಮತ್ತು ಕಾರ್ಮಿಕ ಸಂಘಟನೆಗಳಿಗೆ, ಸ್ಥಳೀಯ ಮುಖಂಡರಿಗೆ ಮಾಹಿತಿ ರವಾನಿಸಲು ಕ್ರಮ ವಹಿಸುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ಚಿಕ್ಕಮಗಳೂರು ತಾಲೂಕು ಹುಣಸೆಹಳ್ಳಿ ಬಳಿಯ ತೋಟದಲ್ಲಿ ಕಳೆದ 7 ದಿನಗಳ ಅಂತರದಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಹಿನ್ನೆಲೆಯಲ್ಲಿ ಉನ್ನತಾಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ …
Read More »ರಾಜ್ಯದ ಗ್ರಾಮ ಪಂಚಾಯ್ತಿ ವಾಟರ್ ಮೆನ್, ಪಂಪ್ ಆಪರೇಟರ್, ಮೆಕ್ಯಾನಿಕ್ ಕರ್ತವ್ಯಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ
ಬೆಂಗಳೂರು : ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ವಾಟರ್ ಮೆನ್ ಗಳು ನಿರ್ವಹಿಸಬೇಕಾದ ಕರ್ತವ್ಯಗಳ ಕುರಿತು ಇಲ್ಲಿದೆ ಸಂಪೂರ್ಣ ವಾಟರ್ ಮೆನ್ ಗಳ ಕರ್ತ್ಯಗಳು ಹೀಗಿವೆ 1) ಗ್ರಾಮಗಳಿಗೆ ಕುಡಿಯುವ ನೀರು ಸರಬರಾಜು ಕೆಲಸ ನಿರ್ವಹಿಸಲು ಹಾಗೂ ನೀರಿನ ಟ್ಯಾಂಕ್ ಭರ್ತಿಯಾದ ನಂತರ ನೀರು ಸರಬರಾಜನ್ನು ನಿಲ್ಲಿಸತಕ್ಕದ್ದು. 2) ನೀರಿನ ಮೇಲೆ ತೆರಿಗೆ ವಸೂಲಿ ಮಾಡತಕ್ಕದ್ದು ಹಾಗೂ ಬಿಲ್ ಕಲೆಕ್ಟರ್ಗೆ ತೆರಿಗೆ ವಸೂಲಾತಿ ವಿಷಯದಲ್ಲಿ ಸಹಕಾರ ನೀಡುವುದು. 3) ಕುಡಿಯುವ ನೀರು …
Read More »ಬೆಂಗಳೂರಲ್ಲಿ ಮೋಸ್ಟ್ ವಾಂಟೆಡ್ ಶಂಕಿತ ಉಗ್ರ ಅರೆಸ್ಟ್
ಬೆಂಗಳೂರು: 2023ರ ಗ್ರೆನೇಡ್ ಪತ್ತೆ ಕೇಸ್ನಲ್ಲಿ ಮೋಸ್ಟ್ ವಾಂಟೆಡ್ ಶಂಕಿತ ಉಗ್ರನನ್ನು ಎನ್ಐಎ ಪೊಲೀಸರು ಬಂಧಿಸಿದ್ದಾರೆ. ಶಂಕಿತ ಉಗ್ರ ಅರ್ಷದ್ ಖಾನ್ ಬಂಧಿತ. ಮೋಸ್ಟ್ ವಾಂಟೆಡ್ ಶಂಕಿತ ಉಗ್ರನ ಖಾಸ ದೋಸ್ತ್ ಈತ. ಬೇಲ್ ಪಡೆದು ತಲೆಮರೆಸಿಕೊಂಡಿದ್ದ. ಈಗ ಮತ್ತೆ ಆರ್.ಟಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಂಧನಕ್ಕೆ ಒಳಗಾಗಿದ್ದಾನೆ. ಸಿಸಿಬಿ ಅಧಿಕಾರಿಗಳು ನಡೆಸಿದ್ದ ಕಾರ್ಯಾಚರಣೆಯಲ್ಲಿ ಈ ಹಿಂದೆ ಅರ್ಷದ್ ಖಾನ್ ಅರೆಸ್ಟ್ ಆಗಿದ್ದ. ಶಂಕೆ ಮೇರೆಗೆ ಸಿಸಿಬಿ ಬಂಧಿಸಿತ್ತು. …
Read More »ಬೇರೆ ರಾಜ್ಯದ ವಿದ್ಯಾರ್ಥಿಗಳಿಂದ ನಕಲಿ ದಾಖಲೆ ಬಳಕೆ ಸೂಕ್ತ ತನಿಖೆಗೆ ಆಗ್ರಹ
ಬೆಳಗಾವಿ:ಬೇರೆ ರಾಜ್ಯದ ಕೆಲ ವಿದ್ಯಾರ್ಥಿಗಳು ನಕಲಿ ರಹವಾಸಿ, ಜಾತಿ ಹಾಗೂ ಇತರೆ ನಕಲಿ ದಾಖಲೆಗಳನ್ನು ಸಲ್ಲಿಸಿ ನಗರದಲ್ಲಿ ಶೈಕ್ಷಣಿಕ ಪ್ರವೇಶ, ವಸತಿ ಸೌಲಭ್ಯ, ಸರ್ಕಾರಿ ಹಾಗೂ ಅರೆ ಸರ್ಕಾರಿ ಉದ್ಯೋಗ ಸಹಿತ ಹಲವು ಸೌಲಭ್ಯ ಪಡೆಯುತ್ತಿದ್ದು, ಇದರ ಬಗ್ಗೆ ಸೂಕ್ತ ತನಿಖೆ ಕೈಗೊಳ್ಳುವಂತೆ ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣಗೌಡ ಬಣ ಆಗ್ರಹಿಸಿದೆ. ಈ ಸಂಬಂಧ ವೇದಿಕೆಯ ಜಿಲ್ಲಾ ಅಧ್ಯಕ್ಷ ದೀಪಕ ಗುಡಗನಟ್ಟಿ ಡಿಸಿಪಿ ನಾರಾಯಣ ಬರಮನಿಗೆ ಸುದೀರ್ಘವಾದ ಮಾಹಿತಿವುಳ್ಳ ಮನವಿಯೊಂದನ್ನು …
Read More »ಮೇಕೆದಾಟು ಯೋಜನೆ – ವನ್ಯಜೀವಿ ಅನುಮೋದನೆಗಾಗಿ ರಾಜ್ಯ ಸರ್ಕಾರದಿಂದ ಪ್ರತ್ಯೇಕ ಪ್ರಸ್ತಾವ
ನವದೆಹಲಿ: ಮೇಕೆದಾಟು ಸಮತೋಲನ ಜಲಾಶಯ ನಿರ್ಮಾಣಕ್ಕೆ ಅಗತ್ಯವಿರುವ ವನ್ಯಜೀವಿ ಅನುಮೋದನೆ ಪಡೆಯಲು ಕರ್ನಾಟಕ ಸರ್ಕಾರವು ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವಾಲಯಕ್ಕೆ ಪ್ರತ್ಯೇಕ ಪ್ರಸ್ತಾವ ಸಲ್ಲಿಸಿದೆ. ಯೋಜನೆಗೆ 5,200 ಹೆಕ್ಟೇರ್ ಅರಣ್ಯ ಪ್ರದೇಶ ಬಳಕೆಗೆ ಅನುಮೋದನೆ ಕೋರಿ ಕಾವೇರಿ ನೀರಾವರಿ ನಿಗಮವು ಜನವರಿ 4 ರಂದು ಪ್ರಸ್ತಾವ ಸಲ್ಲಿಸಿತ್ತು. ‘ಕೇಂದ್ರ ಜಲಶಕ್ತಿ ಸಚಿವಾಲಯ ಹಾಗೂ ಕಾವೇರಿ ನೀರು very water) ನಿರ್ವಹಣಾ ಪ್ರಾಧಿಕಾರದಿಂದ ಅನುಮೋದನೆ ಪಡೆದಿರುವ ವಿಸ್ತೃತ ಯೋಜನಾ ವರದಿಯನ್ನು …
Read More »ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಬಿವಿಪಿಯಿಂದ ಜಿಲ್ಲಾಧಿಕಾರಿಗೆ ಮನವಿ
ಬೆಳಗಾವಿ : ರಾಜ್ಯದ ವಿವಿಧ ಸರ್ಕಾರಿ, ಅನುದಾನಿತ ಕಾಲೇಜ್ಗಳಲ್ಲಿ ನಕಲಿ ಪಿಎಚ್ಡಿ ಪದವಿ ಹೊಂದಿರುವವರು ಅತಿಥಿ ಹಾಗೂ ಪೂರ್ಣ ಪ್ರಮಾಣದ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದು ಅಂತವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ನಗರದಲ್ಲಿ ಗುರುವಾರ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ವತಿಯಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಕಾಲೇಜ್ ರಸ್ತೆಯಿಂದ ಪ್ರತಿಭಟನಾ ರ್ಯಾಲಿಯಲ್ಲಿ ಆಗಮಿಸಿದ ವಿದ್ಯಾರ್ಥಿಗಳು, ಕೆಲಹೊತ್ತು ಚನ್ನಮ್ಮ ವೃತ್ತದಲ್ಲಿ ಸಾಂಕೇತಿಕವಾಗಿ ಪ್ರತಿಭಟಿಸಿ ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಡಿಸಿ ಮೊಹಮ್ಮದ್ …
Read More »AI Impact ಶೃಂಗಸಭೆಯಲ್ಲಿ ರಾಜ್ಯದ ಸಾಧನೆ ಪ್ರದರ್ಶನ – ಎಐ ಕ್ಷೇತ್ರ, ನವೋದ್ಯಮಗಳ ಮುಖ್ಯಸ್ಥರ ಜೊತೆ ಪ್ರಿಯಾಂಕ್ ಖರ್ಗೆ ಸಮಾಲೋಚನೆ
ನವದೆಹಲಿ: ಕೃತಕ ಜಾಣ್ಮೆ ಮತ್ತು ಡೀಪ್ ಟೆಕ್ನಾಲಜಿ ಕ್ಷೇತ್ರಗಳಲ್ಲಿ ಕರ್ನಾಟಕವು ಪ್ರಭಾವಶಾಲಿಯಾಗಿ ಬೆಳೆಯುತ್ತಿರುವುದನ್ನು ಇಂಡಿಯಾ AI Impact ಶೃಂಗಸಭೆಯಲ್ಲಿ ಎಲೆಕ್ಟ್ರಾನಿಕ್ಸ್, ಐಟಿ, ಜೈವಿಕ ತಂತ್ರಜ್ಞಾನ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು ಜಾಗತಿಕ ದಿಗ್ಗಜರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಜಾಗತಿಕ ಉದ್ಯಮ ದಿಗ್ಗಜರು, ಸಂಶೋಧಕರು ಮತ್ತು ನವೋದ್ಯಮ ಸ್ಥಾಪಕರ ಜೊತೆಗೆ ಸಚಿವರು ವ್ಯಾಪಕ ಸಮಾಲೋಚನೆ ನಡೆಸಿದರು. ಶೃಂಗಸಭೆಯ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ಕೃತಕ ಜಾಣ್ಮೆ …
Read More »ಯಾರಿಗೂ ಅನ್ಯಾಯವಾಗದು ಅಪಪ್ರಚಾರಕ್ಕೆ ಕಿವಿಗೊಡಬೇಡಿ
ಬೆಳಗಾವಿ: ‘ಬಿಡಿಸಿಸಿ ಬ್ಯಾಂಕ್ ಗ್ರಾಹಕರು ಅಪಪ್ರಚಾರಕ್ಕೆ ಕಿವಿಕೊಡಬೇಡಿ. ಬ್ಯಾಂಕನ್ನು ಚೆನ್ನಾಗಿ ನಡೆಸುತ್ತೇವೆ. ಯಾವ ರೈತರಿಗೂ, ಗ್ರಾಹಕರಿಗೂ ಅನ್ಯಾಯ ಆಗಲು ಬಿಡುವುದಿಲ್ಲ’ ಎಂದು ಬೆಮುಲ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಸಿಪಿಇಡಿ ಮೈದಾನದಲ್ಲಿ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ನಿಂದ ಕೊಡಲು ಉದ್ದೇಶಿಸಿರುವ ಹೊಸ ಯೋಜನೆಗಳ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಬ್ಯಾಂಕಿನ ಮೇಲೆ ಗ್ರಾಹಕರು ವಿಶ್ವಾಸ ಇಟ್ಟುಕೊಂಡು ಹೋಗಬೇಕು. ಸಚಿವ ಸತೀಶ್ ಜಾರಕಿಹೊಳಿ ಹಾಗೂ …
Read More »
Laxmi News 24×7