ಬೆಂಗಳೂರು: ಕುಡಿದ ಮತ್ತಲ್ಲಿ ಸ್ನೇಹಿತರ ನಡುವೆ ಕಿರಿಕ್ ಉಂಟಾಗಿ ಗೆಳೆಯನ ಕೊಲೆಯಲ್ಲಿ ಅಂತ್ಯವಾದ ಘಟನೆ ಬೆಂಗಳೂರು ಹೊರವಲಯ ಸರ್ಜಾಪುರ ಸಮೀಪದ ಮಟ್ಟನಹಳ್ಳಿ ಕೆರೆ ಬಳಿ ನಡೆದಿದೆ. ಮೋಹನ್(25) ಕೊಲೆಯಾದ ಯುವಕ. ತಮಿಳುನಾಡಿನ ಸಿಂಗಸದನಪಲ್ಲಿ ಗ್ರಾಮದವನಾದ ಮೋಹನ್ ಗುರುವಾರ ಸಂಜೆ ಸ್ನೇಹಿತನ ಜೊತೆ ಎಣ್ಣೆ ಪಾರ್ಟಿ ಮಾಡಲು ಬಂದಿದ್ದ. ಸ್ನೇಹಿತ ಮನೋಜ್ ಮತ್ತು ಮೋಹನ್ ಕಂಠಪೂರ್ತಿ ಕುಡಿದಿದ್ದರು. ಕುಡಿದ ನಶೆಯಲ್ಲಿ ಮೋಹನ್ ಮತ್ತು ಮನೋಜ್ ನಡುವೆ ಗಲಾಟೆ ನಡೆದಿದೆ. ಈ ವೇಳೆ …
Read More »ರಾಯಚೂರಿನಲ್ಲಿ ಬಿಸಿಲಿನ ಬೇಗೆ – 44.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲು
ರಾಯಚೂರು: ಬಿಸಿಲನಾಡು ರಾಯಚೂರು ಜಿಲ್ಲೆಯಲ್ಲಿ ಏಪ್ರಿಲ್ ತಿಂಗಳಲ್ಲೆ ಬಿಸಿಲಿನ ಅಬ್ಬರ ಬಲು ಜೋರಾಗಿದೆ. ಗರಿಷ್ಠ ತಾಪಮಾನ ಈಗಲೇ ದಾಖಲಾಗುತ್ತಿದ್ದು ಜನ ತತ್ತರಿಸಿ ಹೋಗಿದ್ದಾರೆ. ರೈತರ ಬಹುತೇಕ ಕೃಷಿ ಉತ್ಪನ್ನಗಳು ಮಾರುಕಟ್ಟೆಗೆ ಬರುತ್ತಿದ್ದು, ಬಿಸಿಲಿನ ಅಬ್ಬರಕ್ಕೆ ಅನ್ನದಾತರು ಹೈರಾಣಾಗಿದ್ದಾರೆ. ರಾಯಚೂರಿನ ಎಪಿಎಂಸಿಯಲ್ಲಿ ಸುಡುಬಿಸಿಲಿನಲ್ಲೇ ತಮ್ಮ ಉತ್ಪನ್ನಗಳ ಮಾರಾಟ ಮಾಡುತ್ತಿದ್ದಾರೆ. ರಾಯಚೂರು ಅಂದ್ರೆ ಬೇರೆ ಹೇಳಬೇಕಿಲ್ಲಾ ಇಲ್ಲಿ ಇರೋದೇ ಎರಡು ಕಾಲ. ಒಂದು ಬೇಸಿಗೆ ಕಾಲ, ಇನ್ನೊಂದು ಬಿರು ಬೇಸಿಗೆಕಾಲ. ಇಂತಹದ್ರಲ್ಲಿ ಈ …
Read More »ಸ್ಥಳೀಯ ಸಂಸ್ಥೆ ಚುನಾವಣೆ ಮಾಡಲು ರಾಜ್ಯ ಸರ್ಕಾರಕ್ಕೆ ಭಯ: ಸಾರಾ ಮಹೇಶ್
ಮೈಸೂರು: ಸ್ಥಳೀಯ ಸಂಸ್ಥೆ ಚುನಾವಣೆ ಮಾಡಲು ರಾಜ್ಯ ಸರ್ಕಾರಕ್ಕೆ ಭಯವಿದೆ ಎಂದು ಮಾಜಿ ಸಚಿವ ಸಾರಾ ಮಹೇಶ್ ಹೇಳಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೈಸೂರಿನಲ್ಲಿ ಮಹಾ ನಗರ ಪಾಲಿಕೆ, ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲುವುದು ಖಚಿತ. ಹೀಗಾಗಿ ಚುನಾವಣೆ ನಡೆಸುತ್ತಿಲ್ಲ. ಸಿಎಂ ಹಾಗೂ ಸಿಎಂ ಪುತ್ರ ಮಾತ್ರ ಅಧಿಕಾರದಲ್ಲಿ ಇದ್ದರೆ ಸಾಲದು. ಸ್ಥಳೀಯ ಮುಖಂಡರಿಗೂ ಅಧಿಕಾರ ಬೇಕು ಎಂದು ಕಿಡಿಕಾರಿದರು. ಜಿಟಿಡಿ ನಮ್ಮ ಪಕ್ಷದಲ್ಲಿ ಇಲ್ಲ. ಅವರ …
Read More »ಸಾಲ ಪಡೆದಿದ್ದ ಹಣ ಮರಳಿ ಕೊಡದಿದ್ದಕ್ಕೆ ಸ್ವಂತ ಅಕ್ಕ, ಭಾವನಿಂದ ತಂಗಿ-ಮೈದುನನ ಕಿಡ್ನ್ಯಾಪ್
ಬೆಂಗಳೂರು: ಸ್ವಂತ ಅಕ್ಕ-ಭಾವನಿಂದಲೇ ತಂಗಿ-ಮೈದುನನ ಕಿಡ್ನ್ಯಾಪ್ ಮಾಡಿ ಹಲ್ಲೆ ಮಾಡಿದ ಆರೋಪ ಬೆಂಗಳೂರಿನ ಚಂದ್ರಾ ಲೇಔಟ್ನಲ್ಲಿ ನಡೆದಿದೆ. ಅಕ್ಕ ಪ್ರಫುಲ್ಲಾ ಎಂಬಾಕೆಯಿಂದ ತಂಗಿ ಪೃಥ್ವಿ ಎಂಬಾಕೆ 9.5 ಲಕ್ಷ ರೂ. ಸಾಲ ಪಡೆದಿದ್ದಳು. 5 ಲಕ್ಷ ಸಾಲ ಹಿಂತಿರುಗಿಸಿದ್ದು, ಇನ್ನು 4.5 ಲಕ್ಷ ರೂ. ಬಾಕಿ ನೀಡಬೇಕಿತ್ತು. ಈ ಸಾಲದ ಹಣಕ್ಕಾಗಿ ಅಕ್ಕನಿಂದ ತನ್ನ ತಂಗಿಯನ್ನ ಕಿಡ್ನ್ಯಾಪ್ ಜೊತೆಗೆ ಹಲ್ಲೆ ಆರೋಪ ಕೇಳಿಬಂದಿದೆ. ಕಳೆದ ಎರಡು ದಿನದ ಹಿಂದೆ ಅಕ್ಕ …
Read More »ನಾನು 10 ವರ್ಷ ಪಟ್ಟ ಕಷ್ಟಕ್ಕೆ ನ್ಯಾಯ ಸಿಕ್ಕಿದೆ, ನ್ಯಾಯಾಲಯದ ತೀರ್ಪನ್ನು ಸ್ವಾಗತ ಮಾಡ್ತೀನಿ: ಯೋಗೀಶ್ ಗೌಡ ಪತ್ನಿ
ಧಾರವಾಡ: ನಾನು ಹತ್ತು ವರ್ಷ ಪಟ್ಟ ಕಷ್ಟಕ್ಕೆ ನ್ಯಾಯ ಸಿಕ್ಕಿದೆ. ನ್ಯಾಯಾಲಯದ ತೀರ್ಪನ್ನು ಸ್ವಾಗತ ಮಾಡುವೆ ಎಂದು ಯೋಗೀಶ್ ಗೌಡ ಪತ್ನಿ ಮಲ್ಲಮ್ಮ ಸಂತಸ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಮುಖಂಡ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಆರೋಪಿಗಳಿಗೆ ಜೀವಾವಧಿ ಶಿಕ್ಷೆಯನ್ನು ನ್ಯಾಯಾಲಯ ವಿಧಿಸಿದೆ. ಈ ಹಿನ್ನೆಲೆ ಇದೇ ಮೊದಲ ಬಾರಿಗೆ ‘ಪಬ್ಲಿಕ್ ಟಿವಿ’ಯೊಂದಿಗೆ ಮಾತನಾಡಿದ ಪತ್ನಿ ಮಲ್ಲಮ್ಮ, ನನಗೆ ಇದು ಸಮಾಧಾನ ತಂದಿಲ್ಲ. ನನ್ನ …
Read More »38 ಕೋಟಿ ಮೌಲ್ಯದ ಡ್ರಗ್ಸ್ ನಾಶಪಡಿಸಿದ ಎನ್ಸಿಬಿ
ಬೆಂಗಳೂರು: ವಿಶೇಷ ಕಾರ್ಯಾಚರಣೆ ವೇಳೆ ಜಪ್ತಿ ಮಾಡಿದ್ದ ಭಾರೀ ಪ್ರಮಾಣದ ಡ್ರಗ್ಸ್ ಅನ್ನು ಮಾದಕ ದ್ರವ್ಯ ನಿಯಂತ್ರಣ ಮಂಡಳಿ (NCB) ನಾಶಪಡಿಸಿದೆ. ಮಾದಕ ವಸ್ತುಗಳ ವಿರುದ್ಧ ಕೈಗೊಂಡಿದ್ದ ಕಾರ್ಯಾಚರಣೆ ವೇಳೆ ಎನ್ಸಿಬಿ 38 ಕೋಟಿ ಮೌಲ್ಯದ ಮಾದಕ ವಸ್ತುವನ್ನ ಜಪ್ತಿ ಮಾಡಿತ್ತು. ಇಂದು ಹೊಸಕೋಟೆ ಬಳಿಯ ಸೆಂಚುರಿ ರಿಫೈನರಿ ಘಟಕದಲ್ಲಿ 128 ಕೆ.ಜಿ. ಡ್ರಗ್ಸ್ ನಾಶ ಮಾಡಿದೆ. ಹೈಡ್ರೋಗಾಂಜಾ, ಕೊಕೇನ್, ಮೆಥಾಂಪೈಟಮನ್ ಸೇರಿದಂತೆ ಒಟ್ಟು ಸುಮಾರು 38 ಕೋಟಿ ಮೌಲ್ಯದ ಹಲವು …
Read More »ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್ – ಯೂನಿಟ್ಗೆ 56 ಪೈಸೆ ಹೆಚ್ಚಳ
ಬೆಂಗಳೂರು: ರಾಜ್ಯ ಸರ್ಕಾರ ವಿದ್ಯುತ್ ದರ ಏರಿಕೆ ಮಾಡಿ ರಾಜ್ಯದ ಜನರಿಗೆ ಶಾಕ್ ಕೊಟ್ಟಿದೆ. ಒಂದು ಯೂನಿಟ್ಗೆ 56 ಪೈಸೆ ಹೆಚ್ಚಳ ಮಾಡಿ ಕೆಇಆರ್ಸಿ ಆದೇಶ ಹೊರಡಿಸಿದೆ. ನೂತನ ದರ ಮೇ ತಿಂಗಳಿನಿಂದ ಅನ್ವಯ ಆಗಲಿದೆ. 2024-25 ಆರ್ಥಿಕ ವರ್ಷದಲ್ಲಿ 34,084 ಕೋಟಿ ಕೆಇಆರ್ಸಿ ಆದಾಯ ನಿರೀಕ್ಷೆ ಮಾಡಿತ್ತು. ಆದ್ರೆ 32,019 ಕೋಟಿಯಷ್ಟೇ ಆದಾಯ ಬಂದಿದೆ. ಹೀಗಾಗಿ 2,068 ಕೋಟಿ ಹಣದ ಕೊರತೆಯನ್ನ ಗ್ರಾಹಕರಿಂದ ಸಂಗ್ರಹಿಸಲು ಕೆಇಆರ್ಸಿ ಆದೇಶ ಮಾಡಿದೆ. …
Read More »ಗಬ್ಬೆದ್ದು ನಾರುತ್ತಿದೆ ಗಂದಿಗವಾಡ ದಲಿತ ಕಾಲೋನಿ ರಸ್ತೆ: ಗ್ರಾ.ಪಂ. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಗಂದಿಗವಾಡ ಗ್ರಾಮದಲ್ಲಿ ‘ಸ್ವಚ್ಛ ಭಾರತ’ದ ಕನಸು ನುಚ್ಚುನೂರಾಗಿದೆ. ದಲಿತ ಕಾಲೋನಿಯ ಮುಖ್ಯ ರಸ್ತೆಯುದ್ದಕ್ಕೂ ಕಸದ ರಾಶಿ ಬಿದ್ದಿದ್ದು, ಸಾಂಕ್ರಾಮಿಕ ರೋಗಗಳ ಭೀತಿಯ ನಡುವೆಯೇ ಗ್ರಾಮಸ್ಥರು ಜೀವನ ಸಾಗಿಸುವಂತಾಗಿದೆ. ಗಂದಿಗವಾಡ ಗ್ರಾಮದ ದಲಿತ ಕಾಲೋನಿಗೆ ಸಂಪರ್ಕಿಸುವ ರಸ್ತೆಯು ಈಗ ಕಸದ ತೊಟ್ಟಿಯಾಗಿ ಮಾರ್ಪಟ್ಟಿದೆ. ಸಾರ್ವಜನಿಕರು ರಸ್ತೆಯಲ್ಲೇ ಕಸ ಎಸೆಯುತ್ತಿರುವುದರಿಂದ ಇಡೀ ಪ್ರದೇಶ ಗಬ್ಬೆದ್ದು ನಾರುತ್ತಿದ್ದು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು (PDO) ಮಾತ್ರ ಇತ್ತ ತಲೆಹಾಕಿಯೂ …
Read More »ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಬಂಧಿಖಾನೆ ಡಿಜಿಪಿ ಅಲೋಕ ಕುಮಾರ ದಿಢೀರ್ ದಾಳಿ
ಬೆಳಗಾವಿ:ಜೈಲಿನಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳನ್ನು ತಡೆಯುವ ಉದ್ದೇಶದಿಂದ ಈ ಸರ್ಚ್ ಕಾರ್ಯಾಚರಣೆ ಕೈಗೊಳ್ಳಲಾಗಿದ್ದು, ಸುಮಾರು ಎರಡು ಗಂಟೆಗಳ ಕಾಲ ತೀವ್ರ ಪರಿಶೀಲನೆ ನಡೆಯಿತು. 52 ಜನ ಪೊಲೀಸ್ ಸಿಬ್ಬಂದಿಯೊಂದಿಗೆ ದಾಳಿ ನಡೆಸಲಾಗಿದ್ದು, ಬೆಳಗಾವಿ ನಗರ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಹ ಭಾಗಿಯಾಗಿದ್ದರು. ಎರಡು ಶ್ವಾನಗಳ ಸಹಾಯದಿಂದ ಕೈದಿಗಳ ಸೆಲ್ಗಳನ್ನು ಸಂಪೂರ್ಣವಾಗಿ ತಪಾಸಣೆ ಮಾಡಲಾಯಿತು. ದಾಳಿಯ ವೇಳೆ ಒಂದು ಸಿಗರೆಟ್ ಪ್ಯಾಕೇಟ್ ಹಾಗೂ ಜಿಮ್ ಡಂಬೆಲ್ಸ್ ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ …
Read More »10ತರಗತಿ ವಿಧ್ಯಾರ್ಥಿನಿಗೆ ಗರ್ಭಪಾತ ಮಾಡಿಸಿರುವ ಕಾಮುಕ ಶಿಕ್ಷಕ
ಚಿತ್ರದುರ್ಗ:ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನಲ್ಲಿ ನಡೆದಿರುವ ಘಟನೆ. ಗರ್ಭಪಾತ ಹಿನ್ನೆಲೆ ಹತ್ತನೇ ತರಗತಿ ಪರೀಕ್ಷೆಗೂ ವಿಧ್ಯಾರ್ಥಿನಿ ಗೈರು. ಶಾಲಾ ಶಿಕ್ಷಕ ಹೆಚ್.ಓ. ರಾಜಣ್ಣ ಎಂಬ ಶಿಕ್ಷಕನಿಂದ ನಡೆದ ಕೃತ್ಯ. ಬಾಲಕಿಯನ್ನ ಅನೈತಿಕವಾಗಿ ಬಳಸಿಕೊಂಡು ಲೈಂಗಿಕ ದೌರ್ಜನ್ಯ ಎಸಗಿದ್ದ ಕಾಮುಕ ಶಿಕ್ಷಕ. ಬಾಲಕಿ ಗರ್ಭಿಣಿ ಎಂದು ತಿಳಿದ ಕೂಡಲೇ ಗರ್ಭಪಾತ ಮಾಡಿರುವ ಶಿಕ್ಷಕ. ಚಳ್ಳಕೆರೆ ಖಾಸಗಿ ನರ್ಸಿಂಗ್ ಹೋಂ ವೈಧ್ಯ ಡಾ.ಶಂಕರ್ ಲಕ್ಷ್ಮಿ ಅವರಿಂದ ಗರ್ಭಪಾತ. ನಗರದ ಸೋಮಗುದ್ದ ರಸ್ತೆಯ ಶ್ರೀಲಕ್ಷ್ಮಿ …
Read More »
Laxmi News 24×7