Breaking News

Uncategorized

ಅಕ್ರಮವಾಗಿ ಸಾಗಿಸುತ್ತಿದ್ದ ಅನ್ನಭಾಗ್ಯ ಅಕ್ಕಿ ವಶಪಡಿಸಿಕೊಂಡ ಖಾನಾಪುರ ಪೊಲೀಸರು

ಬೆಳಗಾವಿ: ಅನ್ನಭಾಗ್ಯ ಅಕ್ಕಿ ಅಕ್ರಮವಾಗಿ ಸಂಗ್ರಹಿಸಿ ಕಾರಿನಲ್ಲಿ ಖಾನಾಪುರದಿಂದ ಬೆಳಗಾವಿಯತ್ತ ಸಾಗಿಸುತ್ತಿದ್ದಾಗ ದಾಳಿ ಮಾಡಿರುವ ಖಾನಾಪುರ ಪೊಲೀಸರು ಓರ್ವನನ್ನು ಬಂಧಿಸಿ 8,120 ರೂ. ಮೌಲ್ಯದ 232 ಕೆಜಿ ಅಕ್ಕಿ ವಶಪಡಿಸಿಕೊಂಡಿದ್ದಾರೆ. ಖಾನಾಪುರ ಪಟ್ಟಣದ ಗಾಂಧಿ ನಗರ 1ನೇ ಕ್ರಾಸ್ ನಿವಾಸಿ ಅಜಾಜ್ ಶಿರಸಂಗಿ (25) ಬಂಧಿತ. ಈತ ಅಕ್ಕಿ ಸಂಗ್ರಹಿಸಿ ಬೇರೆಡೆ ಸಾಗಿಸುವ ದಂಧೆ ಮಾಡುತ್ತಿರುವ ಬಗ್ಗೆ ಮಾಹಿತಿ ಮೇರೆಗೆ ದಾಳಿ ಮಾಡಿ ಬಂಧಿಸಿದ್ದಾರೆ. ಈತನ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆಯಡಿ …

Read More »

ಬಂಡೀಪುರ ಸಫಾರಿ ಪುನಾರಂಭಕ್ಕೆ ರೈತ ಸಂಘದ ವಿರೋಧ: ಗುಂಡ್ಲುಪೇಟೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

​ಗುಂಡ್ಲುಪೇಟೆ: ಬಂಡೀಪುರ ಅಭಯಾರಣ್ಯದಲ್ಲಿ ಸಫಾರಿ ಪುನಾರಂಭಿಸಲು ಉದ್ದೇಶಿಸಿರುವ ಸರ್ಕಾರದ ನಿರ್ಧಾರದ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪ್ರತಿಭಟನೆಗೆ ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಸರ್ವಸನ್ನದ್ಧವಾಗಿದ್ದು, ಭದ್ರತೆಯನ್ನು ಹೆಚ್ಚಿಸಿದೆ. ​ಪ್ರಮುಖಾಂಶಗಳು: ​ಪ್ರತಿಭಟನೆಯ ಕಿಚ್ಚು: ಸಫಾರಿ ಪುನಾರಂಭದ ಮುನ್ಸೂಚನೆ ಸಿಗುತ್ತಿದ್ದಂತೆ ರೈತ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದು, ಬೃಹತ್ ಪ್ರತಿಭಟನೆಗೆ ಸಜ್ಜಾಗಿವೆ. ​ಅಧಿಕಾರಿಗಳ ಫೀಲ್ಡ್ ವಿಸಿಟ್: ಇಂದು ಬಂದೋಬಸ್ತ್ …

Read More »

ಶಾಲಾ ತರಗತಿ ಕೊಠಡಿಗಳನ್ನು ಉದ್ಘಾಟಿಸಿದ ರಾಹುಲ್  ಜಾರಕಿಹೊಳಿ

ಇವತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳು ಹಾಗೂ ಅಪೇಕ್ಸ ಮತ್ತು ಡಿಸಿಸಿ ಬ್ಯಾಂಕಿನ ನಿರ್ದೇಶಕರಾದ  ರಾಹುಲ್  ಜಾರಕಿಹೊಳಿ ಅವರು ಯಮಕಮರಡಿ ಕ್ಷೇತ್ರದ ಪರಕನಹಟ್ಟಿ ಗ್ರಾಮದಲ್ಲಿ ಇಂದು ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ  ಸತೀಶ  ಜಾರಕಿಹೊಳಿ ಅವರ ವಿಶೇಷ ಆಸಕ್ತಿಯಿಂದ, ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂದಾಜು ರೂ. 72.00 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಹೆಚ್ಚುವರಿ ಶಾಲಾ …

Read More »

ಕಾರದಗಾ ಗ್ರಾಮದ ಅಭಿವೃದ್ಧಿಯೇ ನನ್ನ ಧ್ಯೇಯ

ಕಾರದಗಾ ಗ್ರಾಮದಲ್ಲಿ 1 ಕೋಟಿ 08 ಲಕ್ಷ ರೂ. ಮೊತ್ತದಲ್ಲಿ ವಿವಿಧ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಲಾಯಿತು.ಇದಕ್ಕೂ ಮೊದಲು ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. 1.ಗ್ರಾಮದ ಸ್ಟ್ರೀಟ್ ಲೈಟ್ ಹಾಗೂ ಹೈಮಾಸ್ಕ ಲೈಟಿಂಗ ಲೋಕಾರ್ಪಣೆ 42 ಕಂಬಗಳು 1ಹೈಮಾಸ್ಕ (ಬಂಗಾಲಿ ಬಾಬಾ ದೇವಸ್ಥಾನದಿಂದ ಅಂಬೇಡ್ಕರ ಚೌಕ ದವರಗೆ) 56.74 ಲಕ್ಷ. 2.ಡೋಣೆವಾಡಿ- ಕಾರದಗಾ ಮುಖ್ಯ ರಸ್ತೆಯಿಂದ ಮಲಿಕ ಸರಗುರು ಹೊಲದವರಗೆ (ಲೋಕ್ಯಾಪ ಪಾನಂದ ರಸ್ತೆ) 1.5 ಕಿ.ಮೀ.ರಸ್ತೆ …

Read More »

ಹುಬ್ಬಳ್ಳಿ–ಧಾರವಾಡ ಪೊಲೀಸ್ ಕಮೀಶನರ್‌ ಎದೆ ನೋವು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ

ಹುಬ್ಬಳ್ಳಿ–ಧಾರವಾಡ ಪೊಲೀಸ್ ಕಮೀಶನರ್‌ ಅವರಿಗೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದ ಘಟನೆ ನಡೆದಿದೆ. Hubballi–Dharwad ಪೊಲೀಸ್ ಕಮೀಶನರ್‌ ಅವರಿಗೆ ಎದೆ ನೋವು ಜಾಸ್ತಿಯಾದ ಕಾರಣ ತಕ್ಷಣವೇ ಚಿಕಿತ್ಸೆ ಪಡೆಯಲಾಯಿತು. ಇತ್ತೀಚೆಗೆ Dharwadನಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆ ವೇಳೆ ಉಂಟಾದ ಗದ್ದಲ ಹಾಗೂ ಉದ್ವಿಗ್ನ ಪರಿಸ್ಥಿತಿಯ ನಡುವೆ ಅವರು ಸ್ಥಳದಲ್ಲೇ ಹಾಜರಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಮುನ್ನಡೆ ವಹಿಸಿದ್ದರು. ಪ್ರತಿಭಟನೆ ವೇಳೆ ನಡೆದ ತಳ್ಳಾಟ–ಗಲಾಟೆ ಹಾಗೂ ಒತ್ತಡದ …

Read More »

ಕಾಗವಾಡ ಶಾಸಕ ರಾಜು ಕಾಗೆ ಇವರಿಂದ 3.55 ಕೋಟಿ ರೂಪಾಯಿಗಳ ರಸ್ತೆ ಕಾಮಗಾರಿಗೆ ಪೂಜೆ

ರಾಜ್ಯದ ಮುಖ್ಯಮಂತ್ರಿಗಳು ಪ್ರತಿಯೊಂದು ಗ್ರಾಮದಲ್ಲಿ ಉತ್ತಮ ರಸ್ತೆ, ಶಾಲೆಗಳ ಕೊಠಡಿಗಳು ಹಾಗೂ ಶುದ್ಧ ಕುಡಿಯುವ ನೀರಿಗಾಗಿ ಹೆಚ್ಚಿನ ಒತ್ತು ನೀಡಿದ್ದು ಕ್ಷೇತ್ರದ ಅಭಿವೃದ್ಧಿಗಾಗಿ ಅನುದಾನ ನೀಡುತ್ತಿದ್ದಾರೆ. 50 ಕೋಟಿ ರೂಪಾಯಿ ಯೋಜನೆ ಕಾಮಗಾರಿಗಳಿಗೆ ಪೂಜೆ ನೆರವೇರಿಸಿದ್ದೇನೆ ಎಂದು ಶಾಸಕ ರಾಜು ಕಾಗೆ ಹೇಳಿದರು. ಬುಧವಾರ ರಂದು ಮಂಗಸೂಳಿ-ಫರಿದಖಾನವಾಡಿ ಗ್ರಾಮ ಮಧ್ಯದ ರಸ್ತೆ ಅಭಿವೃದ್ಧಿಗೊಳಿಸಲು 3 ಕೋಟಿ ರೂಪಾಯಿ ಯೋಜನೆಗೆ ಹಾಗೂ ಶೇಡಬಾಳ ನಗರ ಪಂಚಾಯಿತಿ ವ್ಯಾಪ್ತಿಯ ವಾರ್ಡ್ ನಂಬರ್ 11, …

Read More »

ಅಪ್ರಾಪ್ತೆ ಮೇಲೆ ಅತ್ಯಾಚಾರ ಅಪರಾಧಿಗೆ 30 ವರ್ಷ ಜೈಲು ಶಿಕ್ಷೆ

ಬೈಲಹೊಂಗಲ: ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದ ಗೋಕಾಕ ತಾಲೂಕಿನ ಹೀರೆಹಟ್ಟಿ ಗ್ರಾಮದ ಅಪರಾಧಿ ಲಕ್ಷ್ಮಣ ಹನುಮಂತ ಮುರಗೋಡ (28) ಗೆ 30 ವರ್ಷ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂ.ದಂಡ ವಿಧಿಸಿ ಜಿಲ್ಲಾ ಪೋಕ್ಸೋ ನ್ಯಾಯಾಲಯ ಮಂಗಳವಾರ ತೀರ್ಪು ಪ್ರಕಟಿಸಿದೆ. ಈ ಕುರಿತು ನೇಸರಗಿ ಪೊಲೀಸ್ ಠಾಣೆಯಲ್ಲಿ 2022ರಲ್ಲಿ ದೂರು ದಾಖಲಾಗಿತ್ತು. ತನಿಖಾಧಿಕಾರಿ ಯು.ಎಚ್.ಸಾತೇಹಳ್ಳಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಪ್ರಕರಣ ಕುರಿತು …

Read More »

ಸವದತ್ತಿ: ಮನೆಯಿಂದ ನಾಪತ್ತೆಯಾಗಿದ್ದ ಮಹಿಳೆ ನದಿಗೆ ಹಾರಿ ಸಾವು

ಸವದತ್ತಿ: ಮನೆಯಿಂದ ನಾಪತ್ತೆಯಾಗಿದ್ದ ಸ್ಥಳೀಯ ನಿವಾಸಿ ವಜ್ರವ್ವ ಮಲ್ಲಿಕಾರ್ಜುನ ಉಪ್ಪಾರಟ್ಟಿ (58) ಮೃತದೇಹ ಮಂಗಳವಾರ ಜೋಗುಳಬಾವಿ ಸಮೀಪದ ಮಲಪ್ರಭಾ ಬಲದಂಡೆ ಕಾಲುವೆಯಲ್ಲಿ ಪತ್ತೆಯಾಗಿದೆ. ಸೋಮವಾರದಿಂದ ಕಾಣೆಯಾಗಿದ್ದ ವಜ್ರವ್ವಳ ಹುಡುಕಾಟ ಆರಂಭಿಸಿದಾಗ ಜೋಗುಳಬಾವಿ ಹತ್ತಿರ ಕಾಲುವೆ ದಂಡೆಯ ಮೇಲೆ ಚಪ್ಪಲಿ ಪತ್ತೆಯಾಗಿದ್ದವು. ಬಳಿಕ ಅಗ್ನಿಶಾಮಕ ದಳದೊಂದಿಗೆ ಮಲಪ್ರಭಾ ನದಿ ಕಾಲುವೆಯಲ್ಲಿ ಶೋಧ ಕಾರ್ಯ ಆರಂಭಿಸಿದಾಗ ಹಂಚಿನಾಳ ಸಮೀಪದ ಕಾಲುವೆಯಲ್ಲಿ ಶವ ಪತ್ತೆಯಾಗಿದೆ ಎಂದು ಪ್ರಕರಣ ದಾಖಲಿಸಿಕೊಂಡಿರುವ ಸವದತ್ತಿ ಠಾಣೆ ಪೊಲೀಸರು ತಿಳಿಸಿದ್ದಾರೆ.

Read More »

UP Election 2027 | 50% ಸ್ಥಾನಗಳಲ್ಲಿ ಬ್ರಾಹ್ಮಣ ಅಭ್ಯರ್ಥಿಗಳನ್ನ ಕಣಕ್ಕಿಳಿಸಲು ಬಿಎಸ್‌ಪಿ ಪ್ಲ್ಯಾನ್‌

ಲಕ್ನೋ: ಮುಂಬರುವ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಸುಮಾರು 50% ಸ್ಥಾನಗಳಲ್ಲಿ ಬ್ರಾಹ್ಮಣ ಅಭ್ಯರ್ಥಿಗಳನ್ನ ಕಣಕ್ಕಿಳಿಸುವ ದೊಡ್ಡ ಲೆಕ್ಕಾಚಾರವನ್ನ ಬಿಎಸ್‌ಪಿ ಹಾಕಿಕೊಂಡಿದೆ. ಪಕ್ಷದ ಅಧ್ಯಕ್ಷೆ ಮಾಯಾವತಿ ನೇತೃತ್ವದಲ್ಲಿ ಈ ರಣನೀತಿ ರೂಪಿಸಲಾಗಿದ್ದು, ಇದು ರಾಜ್ಯ ರಾಜಕೀಯದಲ್ಲಿ ಬ್ರಾಹ್ಮಣ ಸಮುದಾಯವನ್ನ ಗಮನಾರ್ಹವಾಗಿ ಆಕರ್ಷಿಸುವ ಪ್ರಯತ್ನವಾಗಿದೆ. ಪಕ್ಷವು ಪ್ರಸ್ತುತ 403 ವಿಧಾನಸಭಾ ಕ್ಷೇತ್ರಗಳ  ಪೈಕಿ 40 ರಿಂದ 50 ಸ್ಥಾನಗಳಲ್ಲಿ ಬ್ರಾಹ್ಮಣ ಅಭ್ಯರ್ಥಿಗಳನ್ನನಿಲ್ಲಿಸುವ ಗುರಿ ಹೊಂದಿದೆ. ಈ ದಿಶೆಯಲ್ಲಿ ಮೊದಲ ಹೆಜ್ಜೆಯಾಗಿ …

Read More »

ಉದ್ಯೋಗ ಭರ್ತಿಯಾಗದ್ದಕ್ಕೆ ಬಿಜೆಪಿ ಕಾರಣ – ನಾವು 40 ಸಾವಿರ ನೇಮಕಾತಿ ಮಾಡಿದ್ದೇವೆ: ಸಿಎಂ

ಬೆಂಗಳೂರು: ಬಿಜೆಪಿ ಸರ್ಕಾರದ  ಅವಧಿಯಲ್ಲಿ ನೇಮಕ ನಡೆಯದ ಕಾರಣ ನಾವು ಅಧಿಕಾರಕ್ಕೆ ಬರುವಾಗಲೇ 2.64 ಲಕ್ಷ ಉದ್ಯೋಗ ಖಾಲಿಯಿದ್ದವು. ಕಳೆದ ಎರಡೂವರೆ ವರ್ಷಗಳಲ್ಲಿ ವಿವಿಧ ಇಲಾಖೆಗಳಲ್ಲಿ 40,000ಕ್ಕೂ ಹೆಚ್ಚು ನೇಮಕಾತಿಗಳನ್ನು  ನಡೆಸಲಾಗಿದೆ ಎಂದು ಎಂದು ಸಿಎಂ ಸಿದ್ದರಾಮಯ್ಯ  ಹೇಳಿದ್ದಾರೆ. ಧಾರವಾಡದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ನಡೆಸಿದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ದೀರ್ಘ ಪೋಸ್ಟ್‌ ಮಾಡಿ ತಮ್ಮ ಸರ್ಕಾರವನ್ನು ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ನಾನು ಗಂಭೀರವಾಗಿ ಪರಿಗಣಿಸಿದ್ದೇನೆ. …

Read More »