ಡಿ. ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ 2024-25 ನೇ ಸಾಲಿನ ಯೋಜನೆಯಡಿಯಲ್ಲಿ ಆಯ್ಕೆಯಾದ ಬೆಳಗಾವಿ ಗ್ರಾಮೀಣ ಕ್ಷೇತ್ರದ ಅರ್ಹ ಫಲಾನುಭವಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆಲಕ್ಷ್ಮೀ ಹೆಬ್ಬಾಳಕರ್ ಶುಕ್ರವಾರ ಹೊಲಿಗೆ ಯಂತ್ರಗಳನ್ನು ವಿತರಿಸಿದರು. ಸಚಿವರ ಗೃಹ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಒಟ್ಟೂ 18 ಲಾನುಭವಿಗಳಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು. ಮಹಿಳೆಯರ ಆರ್ಥಿಕ ಸ್ವಾವಲಂಬನೆಯ ಉದ್ದೇಶದಿಂದ ವಿವಿಧ ಸಾಮಗ್ರಿಗಳನ್ನು ವಿತರಿಸಲಾಗುತ್ತಿದ್ದು, ಅವರ ಜೀವನದಲ್ಲಿ ಸಕಾರಾತ್ಮಕ ಬದಲಾವಣೆ …
Read More »CET-2026ರ ಪ್ರವೇಶ ಪತ್ರ ಬಿಡುಗಡೆ: ಕೆಇಎ
ಬೆಂಗಳೂರು: ಎಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಏ.23 ಮತ್ತು 24ರಂದು ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆ ಹಾಗೂ ಏ.22ರಂದು ನಡೆಯುವ ಕನ್ನಡ ಭಾಷಾ ಪರೀಕ್ಷೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪ್ರವೇಶ ಪತ್ರ ಬಿಡುಗಡೆ ಮಾಡಿದೆ. ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಅವರು ಮಾಹಿತಿ ನೀಡಿದ್ದು, ಅರ್ಜಿ ಸಲ್ಲಿಸಿ, ಶುಲ್ಕ ಪಾವತಿಸಿರುವ ಅರ್ಹ ಅಭ್ಯರ್ಥಿಗಳು ಕೆಇಎ ವೆಬ್ಸೈಟ್ಗೆ ಭೇಟಿ ನೀಡಿ, ನಿಗದಿತ ಲಿಂಕ್ ಮೂಲಕ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಬಹುದು …
Read More »ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಮೂವರು ಸಾವು – ಕ್ಯಾಮೆರಾ ಮುಂದೆಯೇ ಪ್ರಾಣಬಿಟ್ಟ ಯುವತಿಯರು
ಹೈದರಾಬಾದ್: ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿದ್ದ ಮೂವರು ಯುವತಿಯರು ಕ್ಯಾಮೆರಾ ಮುಂದೆಯೇ ಮುಳುಗಿ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಮೃತರನ್ನು 17 ವರ್ಷದ ತ್ರಿಶಾ, 16 ವರ್ಷದ ರತ್ನ ಕುಮಾರಿ ಮತ್ತು 16 ವರ್ಷದ ಪವಿತ್ರಾ 16 ಎಂದು ಗುರುತಿಸಲಾಗಿದೆ. ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯ ಮುಲ್ಲುಂಗುಮ್ಮಿ ಜಲಪಾತದಲ್ಲಿ ವಿಡಿಯೋ ಮಾಡಲು ಹೋದ ಮೂವರು ಯುವತಿಯರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಇತರ ಇಬ್ಬರು ಹುಡುಗಿಯರು ಸುರಕ್ಷಿತವಾಗಿ ಪಾರಾಗಿದ್ದಾರೆ. ಆರಂಭದಲ್ಲಿ …
Read More »ಹಣ ವಸೂಲಿಗಾಗಿ ಸಿದ್ದರಾಮಯ್ಯ ತಮ್ಮ ಮಗನನ್ನು ನೇಮಕ ಮಾಡಿಕೊಂಡಿದ್ದಾರೆ: ಹೆಚ್ಡಿಕೆ ವಾಗ್ದಾಳಿ
ಮೈಸೂರು: ಹಣ ವಸೂಲಿಗಾಗಿ ಸಿದ್ದರಾಮಯ್ಯ ತಮ್ಮ ಮಗನನ್ನು ನೇಮಕ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ಕುಟುಂಬ ಸಮೇತರಾಗಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಹೆಚ್.ಡಿ.ಕುಮಾರಸ್ವಾಮಿ ಅವರು ಚಾಮುಂಡಿ ತಾಯಿ ದರ್ಶನ ಪಡೆದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಸಿಎಂ ಮಗನ ವಸೂಲಿ ಹೇಗಿದೆ ಎಂಬುದು ಎಲ್ಲಾ ಅಧಿಕಾರಿಗಳಿಗೆ ಗೊತ್ತಿದೆ. ಸಿದ್ದರಾಮಯ್ಯಗೆ ಕುಟುಂಬ ರಾಜಕಾರಣದ ಬಗ್ಗೆ ಮಾತಾಡುವ ನೈತಿಕತೆಯ ಇಲ್ಲ. ನಾನು ನನ್ನ ಮಗನನ್ನು ವಸೂಲಿಗಾಗಿ ರಾಜಕೀಯಕ್ಕೆ ತಂದಿಲ್ಲ. …
Read More »ಏ.15ಕ್ಕೆ ಬಾಲಗಂಗಾಧರನಾಥ ಶ್ರೀಗಳ ಗದ್ದುಗೆ ಉದ್ಘಾಟಿಸಲಿದ್ದಾರೆ ಮೋದಿ
ಮಂಡ್ಯ: ಪ್ರಧಾನಿ ನರೇಂದ್ರ ಮೋದಿಯವರು ಏ.15ಕ್ಕೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿರುವ ಆದಿಚುಂಚನಗಿರಿಗೆ ಭೇಟಿ ನೀಡಲಿದ್ದಾರೆ. ಆದಿಚುಂಚನಗಿರಿ ಮಠದಲ್ಲಿ ಬಾಲಗಂಗಾಧರನಾಥ ಶ್ರೀಗಳ ಗದ್ದುಗೆ ಉದ್ಘಾಟನೆ ಮಾಡಲಿದ್ದಾರೆ. ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಶ್ರೀ ಮಠದ ಕುರಿತು ಮಾತನಾಡಲಿದ್ದಾರೆ. ಫೆಬ್ರವರಿ ತಿಂಗಳಲ್ಲೇ ಅವರು ಬರಬೇಕಿತ್ತು. ಕಾರಣಾಂತರಗಳಿಂದ ಸಾಧ್ಯವಾಗಿರಲಿಲ್ಲ. ಏ.15 ರಂದು ಮೋದಿಯವರು ಬರುವ ಸಾಧ್ಯತೆ ಇದೆ. ಪ್ರಧಾನಿಗಳ ಆಗಮನದ ಅಧಿಕೃತ ಟಿಪಿ ಬರುವುದು ಮಾತ್ರ ಬಾಕಿ ಇದ್ದು, ಕಾರ್ಯಕ್ರಮಕ್ಕೆ ಚುಂಚನಗಿರಿ ಮಠ …
Read More »KPCCಗೆ ಸಚಿವ ತಿಮ್ಮಾಪುರ ‘ದೋಖಾ’: ಬಾಗಲಕೋಟೆಯಲ್ಲಿ ‘ಬಾರ್ ಮಾಲೀಕ’ ಕಂ ಪತ್ರಕರ್ತನ ಹಗಲು ದರೋಡೆ!
ಬಾಗಲಕೋಟೆ ಉಪಚುನಾವಣೆ ಗೆಲ್ಲಲು ಕೆಪಿಸಿಸಿ ಕಳುಹಿಸಿದ 41 ಲಕ್ಷ ರೂಪಾಯಿ ಮಾಧ್ಯಮ ನಿರ್ವಹಣೆಯ ಹಣ ಈಗ ಅಬಕಾರಿ ಸಚಿವರ ಆಪ್ತ ‘ಡೀಲ್ ಮಾಸ್ಟರ್’ ಪತ್ರಕರ್ತನ ಪಾಲಾಗಿದೆಯೇ? ರಾತ್ರೋರಾತ್ರಿ ಬ್ಯಾಂಕ್ನಿಂದ ಹಣ ಡ್ರಾ ಮಾಡಿ, ಕಾಂಗ್ರೆಸ್ ಸಿದ್ಧಾಂತಕ್ಕೆ ವಿರುದ್ಧವಾದ ಬಲಪಂಥೀಯ ಪತ್ರಕರ್ತರಿಗೆ ಮಾತ್ರ ಲಕ್ಷಾಂತರ ರೂಪಾಯಿ ಹಂಚಿದ ಈ ‘ಬಾರ್ ಮಾಲೀಕ’ ಪತ್ರಕರ್ತನ ಅಸಲಿ ಮುಖವಾಡ ಈಗ ಕಳಚಿದೆ! ಸಂಜೆಯಾಗುತ್ತಿದ್ದಂತೆ ಮಿನಿಸ್ಟರ್ ಜೊತೆ ಪೆಗ್ ಏರಿಸುವ ಈ ಆಪ್ತ ಪತ್ರಕರ್ತ, ಅಲ್ಪಸಂಖ್ಯಾತ, …
Read More »RSS, BJP ಕಾರ್ಯಕರ್ತರನ್ನು ಕೊಲ್ಲಲು ಮುಸ್ಲಿಮರಿಗೆ ಮಲ್ಲಿಕಾರ್ಜುನ ಖರ್ಗೆ ಕರೆ ಆರೋಪ – ಬೆಂಗ್ಳೂರಲ್ಲಿ ದೂರು ದಾಖಲು
ದಿಸ್ಪುರ್: ಅಸ್ಸಾಂನಲ್ಲಿ ಆರ್ಎಸ್ಎಸ್ ಮತ್ತು ಬಿಜೆಪಿ ಕಾರ್ಯಕರ್ತರನ್ನು ಕೊಲ್ಲುವಂತೆ ಮುಸ್ಲಿಮರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದ್ದಾರೆ ಎಂಬ ಆರೋಪದ ಮೇಲೆ ಬೆಂಗಳೂರಿನಲ್ಲಿ ದೂರು ದಾಖಲಾಗಿದೆ. ರಾಜ್ಯ ಬಿಜೆಪಿ ಶಾಸಕರಾದ ಮುನಿರಾಜು, ಸಿಕೆ ರಾಮಮೂರ್ತಿ ನಿಯೋಗ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ ಎಂ.ಸಲೀಂ ಅವರಿಗೆ ದೂರು ಕೊಟ್ಟಿದ್ದಾರೆ. ಹತ್ಯೆಗೆ ಪ್ರಚೋದನಾಕಾರಿ ಭಾಷಣ ಮಾಡಿರುವ ಖರ್ಗೆ ಅವರನ್ನು ಕೂಡಲೇ ಬಂಧಿಸುವಂತೆ ಬಿಜೆಪಿಗರು ಒತ್ತಾಯಿಸಿದ್ದಾರೆ. ಇನ್ನು, ಅಸ್ಸಾಂ ಸಿಎಂ ಹಿಮಂತ್ …
Read More »ಪುಟ್ಟ ಹೆಜ್ಜೆಗಳಿಗೆ ಭದ್ರ ಬುನಾದಿ: ಕಂಟೋನ್ಮೆಂಟ್ ಬೋರ್ಡ್ ಶಾಲಾ ಮಕ್ಕಳಿಗೆ ಶೈಕ್ಷಣಿಕ ಪರಿಕರ ವಿತರಣೆ
1. ಫೇಸ್ಬುಕ್ ಫ್ರೆಂಡ್ಸ್ ತಂಡದಿಂದ ಸಮಾಜಮುಖಿ ಕಾರ್ಯ 2. 1ನೇ ತರಗತಿ ಮಕ್ಕಳಿಗೆ ಲೇಖನ ಸಾಮಗ್ರಿ ವಿತರಣೆ 3. ಶಿಕ್ಷಣಕ್ಕೆ ಆಸರೆಯಾದ ಜಿತೇಂದ್ರ ಲೋಹರ್, ವಿಕ್ಟರ್ ಫ್ರಾನ್ಸಿಸ್ 4. ವಿದ್ಯಾರ್ಥಿಗಳ ಶೈಕ್ಷಣಿಕ ಉನ್ನತಿಗೆ ಗಣ್ಯರ ಸಾಥ್ ಶಿಕ್ಷಣವೇ ಶಕ್ತಿ ಎಂಬ ತತ್ವದಡಿ ಬೆಳಗಾವಿಯ ಫೇಸ್ಬುಕ್ ಫ್ರೆಂಡ್ಸ್ ತಂಡ ಇಂದು ಅರ್ಥಪೂರ್ಣ ಕಾರ್ಯವೊಂದನ್ನು ಕೈಗೊಂಡಿದೆ. ಕಂಟೋನ್ಮೆಂಟ್ ಬೋರ್ಡ್ ಶಾಲೆಗಳಿಗೆ ಹೊಸದಾಗಿ ದಾಖಲಾದ ಪುಟ್ಟ ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದ ಮೊದಲ ಹೆಜ್ಜೆಗೆ ಬೆಂಬಲ …
Read More »ಅರಣ್ಯ ಪ್ರದೇಶದಲ್ಲಿ ಬಚ್ಚಿಟ್ಟಿದ್ದ 64 ಸಾವಿರ ಮೌಲ್ಯದ ಅಕ್ರಮ ಗೋವಾ ಮದ್ಯ ಜಪ್ತಿ
ಕಾರವಾರ: ಕಾರವಾರ-ಗೋವಾ ಗಡಿ ಭಾಗದಲ್ಲಿ ಅಬಕಾರಿ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಕ್ರಮವಾಗಿ ಗೋವಾದಿಂದ ಕಾರವಾರಕ್ಕೆ ಸಾಗಿಸಲು ಅರಣ್ಯ ಪ್ರದೇಶದಲ್ಲಿ ಬಚ್ಚಿಟ್ಟಿದ್ದ ಮದ್ಯವನ್ನು ಪತ್ತೆಹಚ್ಚಿ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಮಂಗಳೂರು ವಿಭಾಗದ ಅಬಕಾರಿ ಜಂಟಿ ಆಯುಕ್ತರು (ಜಾರಿ ಮತ್ತು ತನಿಖೆ) ಹಾಗೂ ಉತ್ತರ ಕನ್ನಡ ಜಿಲ್ಲಾ ಅಬಕಾರಿ ಉಪ ಆಯುಕ್ತರ ಖಚಿತ ನಿರ್ದೇಶನದ ಮೇರೆಗೆ ಈ ಕಾರ್ಯಾಚರಣೆ ನಡೆದಿದೆ. ಗುರುವಾರ ಮುಂಜಾನೆ ಸುಮಾರು 6:30ರ ಹೊತ್ತಿಗೆ ಕಾರವಾರ ಉಪ ವಿಭಾಗದ ಅಧಿಕಾರಿಗಳು …
Read More »ಇಸ್ರೇಲ್, ಅಮೇರಿಕಾ ಹಾಗೂ ಇರಾನ್ ಯುದ್ಧ ಹಿನ್ನಲೆ, ಧಾರವಾಡದಲ್ಲಿ ಕಟ್ಟಿಗೆ ಸೌದೆ ಗೆ ಹೆಚ್ಚುದ ಡಿಮ್ಯಾಂಡ್ …
ಅಮೇರಿಕ ಇಸ್ರೇಲ್ ಇರಾನ್ ಯುದ್ಧ 38ನೇಯ ದಿನಕ್ಕೆ ಕಾಲಿಟ್ಟಿದ್ದು, ಇದರ ಪರಿಣಾಮ ಭಾರತದಲ್ಲಿ ಎಲ್ ಪಿ ಜಿ ಬಳಕೆದಾರರ ಮೇಲೆ ಬೀಳುತ್ತಿದೆ. ಯುದ್ಧದಿಂದ ಎಲ್ ಪಿ ಜಿ ಅಭಾವತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಧಾರವಾಡದಲ್ಲಿ ಸೌದೆ ಹಾಗೂ ಕಟ್ಟಿಗೆಗೆ ಫುಲ್ ಡಿಮ್ಯಾಂಡ್ ಉಂಟಾಗಿದೆ. ಹೌದು,… ಎಲ್ ಪಿ ಜಿ ಅಭಾತೆಯಿಂದಾಗಿ ಈಗ ಧಾರವಾಡದಲ್ಲಿ ಹೋಟೆಲ್ ರೆಸ್ಟೋರೆಂಟ್ ಮಾಲೀಕರು ಸೇರಿದಂತೆ ಮನೆಗಳಿಗೂ ಜನ ಈಗ ಸೌದೆ ಕಟ್ಟಿಗೆ ಒಲೆಯ ಕಡೆಗೆ ಮುಖ …
Read More »
Laxmi News 24×7