ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕಾರಿನಲ್ಲೇ ಮಹಿಳೆ ಸಜೀವ ದಹನ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಪತಿಯನ್ನು ಬಿಟ್ಟು ಬರಲು ಒಪ್ಪದಿದ್ದಕ್ಕೆ ಪ್ರಿಯತಮೆಯನ್ನು ಕಾರಿನಲ್ಲಿ ಕೊಲೆ ಮಾಡಿ ಅದಕ್ಕೆ ಬೆಂಕಿ ಹಚ್ಚಿ, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವುದು ತನಿಖೆ ವೇಳೆ ಬಯಲಾಗಿದೆ. ಪ್ರಿಯಕರ ರಾಮಾಂಜಿನಪ್ಪ ಪ್ರಿಯತಮೆ ಸುಜಾತಳನ್ನು (35) ಕಾರಿನಲ್ಲಿ ಕೊಲೆ ಮಾಡಿ, ನಂತರ ಪೆಟ್ರೋಲ್ ಸುರಿದು ಬೆಂಕಿಯಿಟ್ಟಿದ್ದಾನೆ. ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತ ಸುಜಾತಾ ದೇವನಹಳ್ಳಿ ಮೂಲದವರು ಎನ್ನಲಾಗಿದೆ. ಮೃತ ಸುಜಾತಾ …
Read More »ವೃದ್ಧನ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿ ಡ್ಯಾನ್ಸ್ – ಪುಡಿ ರೌಡಿಯ ವಿಕೃತಿ ಕ್ಯಾಮೆರಾದಲ್ಲಿ ಸೆರೆ
ಹಾಸನ: ಪುಡಿ ರೌಡಿಯೊಬ್ಬ ಕುಡಿದು ಬಂದು ವೃದ್ಧನ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಹಾಸನದ ಚಿಕ್ಕಬಸವನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹಲ್ಲೆಗೊಳಗಾದವರನ್ನು ತಮ್ಮೇಗೌಡ (68) ಎಂದು ಗುರುತಿಸಲಾಗಿದೆ. ಬೋರೇಗೌಡ ಅಲಿಯಾಸ್ ಲೋಕೇಶ್ (49) ಮಚ್ಚಿನಿಂದ ಮನಬಂದಂತೆ ಹಲ್ಲೆ ನಡೆಸಿದ ಪುಡಿ ರೌಡಿ ಎಂದು ಗೊತ್ತಾಗಿದೆ. ತಮ್ಮೇಗೌಡ ವ್ಯಾಪಾರ ಮಾಡಲು ತಮ್ಮ ತೋಟದಲ್ಲಿ ಎಳನೀರು ಕಡೆವಿಕೊಂಡು ಪತ್ನಿಯೊಂದಿಗೆ ಬರುತ್ತಿದ್ದರು. ಈ ವೇಳೆ ಎದುರಾದ ಬೋರೇಗೌಡ ಏಕಾಏಕಿ ಮಚ್ಚನ್ನು ಉಲ್ಟಾ ಮಾಡಿಕೊಂಡು …
Read More »ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನ ಮಕ್ಕಳಿಂದ ಆಟೋ ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ!
ಮಡಿಕೇರಿ: ಆಸ್ತಿ ವೈಷಮ್ಯದ ಹಿನ್ನೆಲೆಯಲ್ಲಿ ಆಟೋ ಚಾಲಕನೋರ್ವನ ಮೇಲೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನ ಪುತ್ರರು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಕೊಡಗು ಜಿಲ್ಲೆಯ ನಾಪೋಕ್ಲುವಿನಲ್ಲಿ ನಡೆದಿದೆ. ಹಲ್ಲೆಗೊಳಗಾದ ಆಟೋ ಚಾಲಕ, ಝಕರಿ ಎಂಬಾತನ ಸ್ಥಿತಿ ಗಂಭೀರವಾಗಿದೆ. ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್ ಎಂಬುವವರ ಪುತ್ರರು ಆಟೋ ಚಾಲಕನನ್ನು ಗುರಿಯಾಗಿಸಿಕೊಂಡು ಈ ಕೃತ್ಯ ಎಸಗಿದ್ದಾರೆ. ತೀವ್ರ ರಕ್ತಸ್ರಾವದಿಂದ ಚರಂಡಿಯಲ್ಲಿ ಬಿದ್ದಿದ್ದ ಚಾಲಕನ್ನು ಗಮನಿಸಿದ ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. …
Read More »ಹಳೇ ವೈಷಮ್ಯ – ಮೂವರ ಮೇಲೆ ತಲ್ವಾರ್ ದಾಳಿ
ಬೆಳಗಾವಿ: ಇಲ್ಲಿನ ಅಮನ್ ನಗರದಲ್ಲಿ ಮೂವರು ಯುವಕರ ಮೇಲೆ ದುಷ್ಕರ್ಮಿಗಳು ತಲ್ವಾರ್ ದಾಳಿ ನಡೆಸಿದ್ದಾರೆ. ಹಳೇ ವೈಷಮ್ಯ ಹಿನ್ನೆಲೆ ಈ ದಾಳಿ ನಡೆದಿದೆ ಎನ್ನಲಾಗಿದೆ. ದಾಳಿಗೊಳಗಾದವರನ್ನು ನಗರದ ವಲಿ ಶೇಖ್, ಇಮಾಮ್ ಶೇಖ್ ಮತ್ತು ಮಜೀದ್ ಶೇಖ್ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಬೆಳಗಾವಿಯ ಬೀಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಮಾಳಮಾರುತಿ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳ ಕುಟುಂಬಸ್ಥರು ಆರೋಪಿಗಳ ಬಂಧನಕ್ಕೆ ಆಗ್ರಹಿಸಿದ್ದಾರೆ. ಮಾಳಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ …
Read More »ತಮಿಳುನಾಡು ಗೆದ್ದ ಟಿವಿಕೆಗೆ ವಿಶ್ ಮಾಡಿದ ಮೋದಿ, ರಾಹುಲ್ ಗಾಂಧಿಗೆ ಧನ್ಯವಾದ ತಿಳಿಸಿದ ವಿಜಯ್
ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲಿಸಿದ ಟಿವಿಕೆಗೆ ಶುಭಾಶಯ ತಿಳಿಸಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ಟಿವಿಕೆ ಮುಖ್ಯಸ್ಥ ವಿಜಯ್ ಧನ್ಯವಾದ ಅರ್ಪಿಸಿದ್ದಾರೆ. ದಶಕಗಳಿಂದ ಎಐಎಡಿಎಂಕೆ ಮತ್ತು ಡಿಎಂಕೆ ಆಡಳಿತಕ್ಕೆ ಒಳಪಟ್ಟಿದ್ದ ತಮಿಳುನಾಡು ರಾಜಕೀಯದಲ್ಲಿ ವಿಜಯ್ ಕ್ರಾಂತಿಕಾರಿ ಬದಲಾವಣೆ ತಂದಿದ್ದಾರೆ. ತಮಿಳುನಾಡು ವಿಧಾನಸಭಾ ಚುನಾವಣೆಯ ಜನಾದೇಶ ನಿನ್ನೆ ಹೊರಬಿದ್ದಿದ್ದು, ಟಿವಿಕೆ ಭರ್ಜರಿ ಗೆಲುವು ದಾಖಲಿಸಿದೆ. ‘ಮಾನ್ಯ ಪ್ರಧಾನಿ ನರೇಂದ್ರ ಮೋದಿ …
Read More »ಮಮತಾ ಬ್ಯಾನರ್ಜಿ ರಾಜೀನಾಮೆ ಕೊಡದಿದ್ರೆ ವಜಾಗೊಳಿಸಿ: ಹಿಮಂತ ಶರ್ಮಾ ಕಿಡಿ
ದಿಸ್ಪುರ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ರಾಜೀನಾಮೆ ಕೊಡದಿದ್ದರೆ ಅವರನ್ನು ವಜಾಗೊಳಿಸಿ ಎಂದು ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಬಂಗಾಳವು ಅವರ ಹಲವು ಲೋಪಗಳ ಹೊರತಾಗಿಯೂ ಅವರನ್ನು ಬಹಳ ಸಮಯದಿಂದ ಸಹಿಸಿಕೊಂಡಿದೆ. ಅವರು ರಾಜೀನಾಮೆ ನೀಡದಿದ್ದರೆ, ವಜಾಗೊಳಿಸಿ. ದೇಶವು ಅವರ ಇಚ್ಛೆಯಂತೆ ನಡೆಯುವುದಿಲ್ಲ. ರಾಜ್ಯಪಾಲರು ಒಂದು ನಿರ್ದಿಷ್ಟ ಅವಧಿಯವರೆಗೆ ಕಾಯುತ್ತಾರೆ. ನಂತರ ಅವರನ್ನು ವಜಾಗೊಳಿಸಲಾಗುತ್ತದೆ. ಅದು ತುಂಬಾ ಸರಳ ಎಂದು ಶರ್ಮಾ ಮಾತನಾಡಿದ್ದಾರೆ. ಚುನಾವಣಾ …
Read More »ತಮಿಳುನಾಡಲ್ಲಿ ಸರ್ಕಾರ ರಚಿಸಲು ವಿಜಯ್ ಕಾಂಗ್ರೆಸ್ ಬೆಂಬಲ ಕೋರಿದ್ದಾರೆ: ಕೆ.ಸಿ.ವೇಣುಗೋಪಾಲ್
ಚೆನ್ನೈ: ತಮಿಳುನಾಡಿನಲ್ಲಿ ಹೊಸ ಸರ್ಕಾರ ರಚಿಸಲು ಟಿವಿಕೆ ಮುಖ್ಯಸ್ಥ ಮತ್ತು ನಟ ವಿಜಯ್ ಕಾಂಗ್ರೆಸ್ ಬೆಂಬಲ ಕೋರಿದ್ದಾರೆ ಎಂದು ಕಾಂಗ್ರೆಸ್ ನಾಯಕ ಕೆ.ಸಿ.ವೇಣುಗೋಪಾಲ್ ತಿಳಿಸಿದ್ದಾರೆ. ಕಾಂಗ್ರೆಸ್ನ ತಮಿಳುನಾಡು ಘಟಕವು ನಾಳೆ ಬೆಳಗ್ಗೆ ಚೆನ್ನೈನಲ್ಲಿ ಸಭೆ ಸೇರಿ ಈ ವಿಷಯದ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದೆ. ಜಾತ್ಯತೀತ ಸರ್ಕಾರಕ್ಕೆ ಜನಾದೇಶ ಸ್ಪಷ್ಟವಾಗಿರುವುದರಿಂದ ಪಕ್ಷವು ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ಬಯಸುವುದಿಲ್ಲ ಎಂದು ಹೇಳಿದ್ದಾರೆ. ತಮಿಳಗ ವೆಟ್ರಿ ಕಳಗಂ (ಟಿವಿಕೆ)ಗೆ ಕಾಂಗ್ರೆಸ್ ಬೆಂಬಲ ನೀಡುವ ಸಾಧ್ಯತೆಯಿದೆ. …
Read More »ಶಾಸಕ ಬಿ.ಪಿ.ಹರೀಶ್ ಬಂಧನಕ್ಕೆ ವಾರೆಂಟ್
ದಾವಣಗೆರೆ: ಶಾಸಕ ಬಿ.ಪಿ.ಹರೀಶ್ ಬಂಧನಕ್ಕೆ ಜನಪ್ರತಿನಿಧಿ ವಿಶೇಷ ನ್ಯಾಯಾಲಯ ವಾರೆಂಟ್ ಹೊರಡಿಯಸಿದೆ. ಜಾತಿನಿಂದನೆ ಪ್ರಕರಣವೊಂದರ ವಿಚಾರಣೆಗೆ ಹಾಜರಾಗದ ಹಿನ್ನೆಲೆ ಕೋರ್ಟ್ನ ನ್ಯಾಯಮೂರ್ತಿ ಸಂತೋಶ್ ಗಜಾನನ ಭಟ್ ಅವರು ಬಂಧನದ ವಾರೆಂಟ್ ಜಾರಿ ಮಾಡಿದ್ದಾರೆ. ಇದೇ 7ರಂದು ಕೋರ್ಟ್ಗೆ ಶಾಸಕರನ್ನು ಹಾಜರುಪಡಿಸುವಂತೆ ಹರಿಹರ ನಗರ ಪೊಲೀಸ್ ಠಾಣೆಯ ಠಾಣಾಧಿಕಾರಿಗೆ ಕೋರ್ಟ್ ಆದೇಶಿಸಿದೆ. 2023 ವಿಧಾನಸಭೆಯ ಚುನಾವಣಾ ಫಲಿತಾಂಶದ ಮರುದಿನ ದಲಿತ ಸಮಾಜದ ಬಗ್ಗೆ ಶಾಸಕ ಬಿ.ಪಿ.ಹರೀಶ್ ಅವಹೇಳನಕಾರಿಯಾಗಿ ಮಾತನಾಡಿದ್ದರು. ಹರಿಹರ ಬಿಎಸ್ಪಿ …
Read More »ಸೈಕಲ್ಗೆ ಟೆಂಪೋ ಡಿಕ್ಕಿ- 11 ವರ್ಷದ ಬಾಲಕ ಸ್ಥಳದಲ್ಲೇ ಸಾವು
ಚಾಮರಾಜನಗರ: ಸೈಕಲ್ ಸವಾರಿ ಮಾಡುತ್ತಿದ್ದ ಬಾಲಕನಿಗೆ ಟೆಂಪೋ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ಹರಳೆ ಗ್ರಾಮದ ಬಳಿ ನಡೆದಿದೆ. ಮೃತ ಬಾಲಕನನ್ನು ಯಶವಂತ್ (11) ಎಂದು ಗುರುತಿಸಲಾಗಿದೆ. ಬಾಲಕ ಸೈಕಲ್ ಹೊಡೆಯುತ್ತಿದ್ದಾಗ ಯಮಸ್ವರೂಪಿಯಾಗಿ ಬಂದ ಟೆಂಪೋ ಡಿಕ್ಕಿ ಹೊಡೆದಿದೆ. ಬಾಲಕ ಬೇಸಿಗೆ ರಜೆ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಅಜ್ಜಿ ಮನೆಗೆ ಬಂದಿದ್ದ. ಕುಟುಂಬಸ್ಥರು ಮೊನ್ನೆಯಷ್ಟೇ ಸೈಕಲ್ ಕೊಡಿಸಿದ್ದರು. ಘಟನೆ ನಡೆದ ಸ್ಥಳಕ್ಕೆ ಕೊಳ್ಳೇಗಾಲ ಪೊಲೀಸರು ಭೇಟಿ …
Read More »ರಾಜ್ಯದಲ್ಲಿ ಜನಪರವಾದ ಮೈತ್ರಿ ಸರ್ಕಾರ ಅಧಿಕಾರಕ್ಕೆ ತನ್ನಿ: ಹೆಚ್ಡಿಕೆ
ತುಮಕೂರು: ರಾಜ್ಯದ ಈಗಿನ ಸರ್ಕಾರದ ಆಡಳಿತಕ್ಕೆ ಜನ ಬೇಸತ್ತಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯ ಜನಪರವಾದ, ಜನರಿಗೆ ಗೌರವ ತರುವಂತಹ ಸರ್ಕಾರ ತರಲು ರಾಜ್ಯದ ಜನರು ಆಶೀರ್ವಾದ ಮಾಡಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮನವಿ ಮಾಡಿದರು. ತುಮಕೂರು ತಾಲೂಕು ಮುಳಕುಂಟೆ ಗ್ರಾಮದಲ್ಲಿ ಮಂಗಳವಾರ ನಡೆದ ವಿಜಯ ಚೌಡೇಶ್ವರಿ ದೇವಿ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿದ ಕೇಂದ್ರ ಸಚಿವ ಕುಮಾರಸ್ವಾಮಿ, ದೇವಸ್ಥಾನದಲ್ಲಿ ದೇವಿಯ ದರ್ಶನ ಮಾಡಿ …
Read More »
Laxmi News 24×7