ಹಾವೇರಿ: ರಾಜ್ಯದಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದೆ. ಹಾವೇರಿಯಲ್ಲಿ ಯುವತಿಯೊಬ್ಬಳು ತನ್ನ ನಿಶ್ಚಿತಾರ್ಥದ ಹಿಂದಿನ ದಿನವೇ ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ನಡೆದಿದೆ. ಮುಸ್ಲಿಂ ಯುವಕನೊಬ್ಬ ಆಕೆಯನ್ನು ಪುಸಲಾಯಿಸಿ ಕರೆದೊಯ್ದಿದ್ದಾನೆ ಎಂದು ಪೋಷಕರು ಆರೋಪಿಸಿದ್ದು, ಹಿಂದೂಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಪ್ರಕರಣದ ವಿವರ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಶಂಕ್ರಿಕೊಪ್ಪ ಗ್ರಾಮದ ಶಂಕರಮ್ಮ ಕೆರಿಮೆತ್ತಿಹಳ್ಳಿ (24) ಎಂಬ ಯುವತಿ ಕಳೆದ ರಾತ್ರಿ ಮನೆಯಿಂದ ಕಾಣೆಯಾಗಿದ್ದಾಳೆ. ಆಡೂರು ಪೊಲೀಸ್ …
Read More »ಮಗನ ಏಳಿಗೆ ಕಂಡು ಭಾವುಕರಾದ ಆಮಿರ್ ಖಾನ್: ‘ಏಕ್ ದಿನ್’ ಸಂಗೀತ ಸಂಜೆಯಲ್ಲಿ ಕಣ್ಣೀರು
ಬಾಲಿವುಡ್ನ ‘ಮಿಸ್ಟರ್ ಪರ್ಫೆಕ್ಷನಿಸ್ಟ್’ ಆಮಿರ್ ಖಾನ್ ಅವರು ತಮ್ಮ ಮಗ ಜುನೈದ್ ಖಾನ್ ಅವರ ಸಿನಿ ಪಯಣ ಮತ್ತು ಸಾಧನೆಯನ್ನು ಕಂಡು ಬಹಿರಂಗವಾಗಿ ಕಣ್ಣೀರು ಹಾಕಿದ್ದಾರೆ. ಜುನೈದ್ ಅಭಿನಯದ ಮೂರನೇ ಚಿತ್ರ ‘ಏಕ್ ದಿನ್’ ಮೇ 1 ರಂದು ಬಿಡುಗಡೆಗೆ ಸಿದ್ಧವಾಗಿದ್ದು, ಈ ಚಿತ್ರದ ಮೂಲಕ ದಕ್ಷಿಣದ ಖ್ಯಾತ ನಟಿ ಸಾಯಿ ಪಲ್ಲವಿ ಬಾಲಿವುಡ್ಗೆ ಪದಾರ್ಪಣೆ ಮಾಡುತ್ತಿದ್ದಾರೆ. ಮುಂಬೈನಲ್ಲಿ ನಡೆದ ‘ಏಕ್ ದಿನ್ ಕಿ ಮೆಹಫಿಲ್’ ಎಂಬ ಸಂಗೀತ ಸಂಜೆ …
Read More »ನಿಪ್ಪಾಣಿ ನಗರದಲ್ಲಿ ಬಿಜೆಪಿ ಪಕ್ಷದ ವತಿಯಿಂದ ಪ್ರತಿಭಟನೆ
ನಿಪ್ಪಾಣಿ ನಗರದಲ್ಲಿ ಬಿಜೆಪಿ ಪಕ್ಷದ ವತಿಯಿಂದ ಮಹಿಳಾ ಮೀಸಲಾತಿ ಮಸೂದೆ ನಾರಿ ಶಕ್ತಿ ವಂದನಾ ಅಧಿನಿಯಮ ಜಾರಿಯಾಗದಂತೆ ತಡೆದ ಮಹಿಳಾ ವಿರೋಧಿ ಕಾಂಗ್ರೆಸ್ ಮತ್ತು ಇಂಡಿ ಮೈತ್ರಿಕೂಟದ ವಿರುದ್ಧ ಇಂದು ಕ್ಷೇತ್ರದ ನೂರಾರು ಮಹಿಳೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡು, ದೇಶದ ಮಹಿಳೆಯರಿಗೆ ರಾಜಕೀಯ ಪ್ರಾತಿನಿಧ್ಯತೆ ಕಲ್ಪಿಸುವ ನಾರಿ ಶಕ್ತಿ ವಂದನಾ ಅಧಿನಿಯಮವನ್ನು ಜಾರಿಯಾಗದಂತೆ ತಡೆದ ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳ ಮಹಿಳಾ ವಿರೋಧಿ ನೀತಿಯನ್ನು ಖಂಡಿಸಿ ಪ್ರತಿಭಟನೆ ನಡೆಸಿದರು. ದೇಶದ ಮಹಿಳೆಯರಿಗೆ …
Read More »ಇನ್ನೆರಡು ವರ್ಷದಲ್ಲಿ ರಾಜ್ಯದಲ್ಲಿ ರೈತಪರ ಬಿಜೆಪಿ ಸರ್ಕಾರ ಅಧಿಕಾರಕ್ಕೆ: ಸಂಸದ ಬೊಮ್ಮಾಯಿ
ಸವಣೂರು: ಇನ್ನೆರಡು ವರ್ಷದಲ್ಲಿ ರಾಜ್ಯದಲ್ಲಿ ರೈತಪರ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಈ ವ್ಯವಸ್ಥೆ ಬದಲಾವಣೆಯಾಗಿ ರೈತ ಪರ ಸರ್ಕಾರ ಬಂದಾಗ ರೈತರ ಮಕ್ಕಳಿಗೆ ವಿದ್ಯಾನಿಧಿ, ರೈತರಿಗೆ ಡೀಸೆಲ್ ಸಬ್ಸಿಡಿ, ಬೀಜ ಗೊಬ್ಬರಕ್ಕೆ ಸಹಾಯಧನ ನೀಡುವ ಯೋಜನೆಗಳು ಮತ್ತೆ ಜಾರಿಗೆ ಬರುತ್ತವೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಈ ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಾಣ ಆಗಿದೆ. ಎಲ್ಲಿ ಭಕ್ತಿ ಇದೆ. ಅಲ್ಲಿ ತಾಯಂದಿರು ಇರುತ್ತಾರೆ. ಭಕ್ತಿ …
Read More »ಕೋಳಿ ಸಾರು ಮಾಡ್ಲಿಲ್ಲ ಎಂದು ಹೆಂಡ್ತಿ ಮೇಲೆ ರೇಗಾಡಿದ ಗಂಡ, ಕೊಡಲಿಯಿಂದ ಕೊಚ್ಚಿ ಕೊಂದ ಪತ್ನಿ!
ಹೈದರಾಬಾದ್: ಊಟದ ವಿಚಾರಕ್ಕೆ ಸಂಬಂಧಿಸಿದಂತೆ ದಂಪತಿಗಳ ನಡುವೆ ನಡೆದ ಕ್ಷುಲ್ಲಕ ಜಗಳವೊಂದು ಭೀಕರ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ತೆಲಂಗಾಣದ ಕಾಮರೆಡ್ಡಿ ಪಟ್ಟಣದಲ್ಲಿ ಶನಿವಾರ ರಾತ್ರಿ ನಡೆದಿದೆ. ಕೋಳಿ ಸಾರು ಮಾಡಿಲ್ಲ ಎಂಬ ಕಾರಣಕ್ಕೆ ಪತ್ನಿಯ ಮೇಲೆ ಕಿರುಚಾಡಿದ 28 ವರ್ಷದ ಪತಿಯನ್ನು ಆಕೆಯು ಕೊಡಲಿಯಿಂದ ಕೊಚ್ಚಿ ಕೊಂದಿದ್ದಾಳೆ. ಕೊಲೆಯಾದ ವ್ಯಕ್ತಿಯನ್ನು ಗೋಸಾಂಗಿ ಕಾಲೋನಿಯ ಸ್ಕ್ರ್ಯಾಪ್ ವ್ಯಾಪಾರಿ ಕೊಡಂಡಂ ಶಿವಾಜಿ ಎಂದು ಗುರುತಿಸಲಾಗಿದೆ. ಶನಿವಾರ ರಾತ್ರಿ ಸುಮಾರು 9 ಗಂಟೆಯ ಸುಮಾರಿಗೆ, …
Read More »ಮುದ್ದೇನಹಳ್ಳಿಯ ಉಚಿತ ವೈದ್ಯಕೀಯ ಕಾಲೇಜಿಗೆ ರಾಷ್ಟ್ರೀಯ ಗುಣಮಟ್ಟದ ಗರಿ; ಶ್ರೀ ಮಧುಸೂದನ ಸಾಯಿ ಸಂಸ್ಥೆಗೆ NABH ಮಾನ್ಯತೆ
ಚಿಕ್ಕಬಳ್ಳಾಪುರ: ಮುದ್ದೇನಹಳ್ಳಿಯಲ್ಲಿರುವ Sri Madhusudan Sai Institute of Medical Sciences and Research (SMSIMSR) ಗೆ ರಾಷ್ಟ್ರೀಯ ಆಸ್ಪತ್ರೆಗಳು ಮತ್ತು ಆರೋಗ್ಯ ಸೇವಾ ಮಾನ್ಯತಾ ಮಂಡಳಿ National Accreditation Board for Hospitals & Healthcare Providers (NABH) ಆರಂಭಿಕ ಹಂತದ ಮಾನ್ಯತೆ ದೊರೆತಿದೆ. ಇದರೊಂದಿಗೆ ಗ್ರಾಮೀಣ ಪ್ರದೇಶದ ಉಚಿತ ಆರೋಗ್ಯ ಸೇವೆಗೆ ಮತ್ತೊಂದು ದೊಡ್ಡ ಮಾನ್ಯತೆ ಸಿಕ್ಕಂತಾಗಿದೆ. ಈ ಮಾನ್ಯತೆಯ ಮೂಲಕ ಸಂಸ್ಥೆಯು ರೋಗಿಯ ಸುರಕ್ಷತೆ, ಗುಣಮಟ್ಟದ …
Read More »ಕರ್ನಾಟಕದಲ್ಲಿ 56,834 ಹುದ್ದೆಗಳ ನೇಮಕಾತಿಗೆ ಶೀಘ್ರವೇ ಗ್ರೀನ್ ಸಿಗ್ನಲ್: ಗೃಹ ಸಚಿವ ಪರಮೇಶ್ವರ
ಕಲಬುರಗಿ: ರಾಜ್ಯದಲ್ಲಿನ ವಿವಿಧ ಇಲಾಖೆಗಳಲ್ಲಿರುವ ಖಾಲಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಶೀಘ್ರದಲ್ಲೇ ಮಹತ್ವದ ಅಧಿಸೂಚನೆ ಹೊರಡಿಸಲಾಗುವುದು ಎಂದು ಗೃಹಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ನಗರದಲ್ಲಿನ ಪೊಲೀಸ್ ಆಯುಕ್ತಾಲಯ ಕಚೇರಿಯಲ್ಲಿ ಕೆಕೆಆರ್ಡಿಬಿ ಅನುದಾನದಡಿ ಖರೀದಿಸಲಾದ ನೂತನ ವಾಹನಗಳ ಹಸ್ತಾಂತರ ಕಾರ್ಯಕ್ರಮ ಹಾಗೂ ಇಂಟಲಿಜೆಂಟ್ ಟ್ರಾಫಿಕ್ ಮ್ಯಾನೇಜ್ಮೆಂಟ್ ಸಿಸ್ಟಮ್ ಉದ್ಘಾಟನೆಯ ಬಳಿಕ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ರಾಜ್ಯದಲ್ಲಿ ಒಟ್ಟು 56,834 ಖಾಲಿ ಹುದ್ದೆ ರಾಜ್ಯದಲ್ಲಿ ಒಟ್ಟು 56,834 ಖಾಲಿ ಹುದ್ದೆಗಳಿದ್ದು, ಅವುಗಳ …
Read More »ಟಿಎಂಸಿ ಅಭ್ಯರ್ಥಿಯ ಭದ್ರಕೋಟೆಯಲ್ಲಿ ಇವಿಎಂ ಮೇಲಿನ ಬಿಜೆಪಿ ಬಟನ್ಗೆ ಟೇಪ್! ಮರು ಮತದಾನಕ್ಕೆ ಆಗ್ರಹ
ಕೊಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಬಿಜೆಪಿ ಮತ್ತು ಟಿಎಂಸಿ ನಡುವೆ ನೇರ ಪೈಪೋಟಿ ನಡೆಯುತ್ತಿದೆ. ಯಾವ ಪಕ್ಷ ಅಧಿಕಾರಕ್ಕೆ ಬರಲಿದೆ ಎಂಬ ಕುತೂಹಲಕ್ಕೆ ಮೇ 4ರಂದು ತೆರೆ ಬೀಳಲಿದೆ. ಟಿಎಂಸಿ ನಾಯಕರಾದ ಅಭಿಷೇಕ್ ಬ್ಯಾನರ್ಜಿ ಪ್ರತಿನಿಧಿಸುವ ಡೈಮಂಡ್ ಹಾರ್ಬರ್ ಲೋಕಸಭಾ ಕ್ಷೇತ್ರದ ವಿಧಾನಸಭಾ ಸ್ಥಾನವಾದ ಫಾಲ್ಟಾ ಭಾರೀ ಸುದ್ದಿಯಲ್ಲಿದೆ. ಫಾಲ್ಟಾ ಕ್ಷೇತ್ರದ ಕೆಲವು ಭಾಗಗಳಲ್ಲಿ ತಕ್ಷಣ ಮರು ಮತದಾನಕ್ಕೆ ಭಾರತೀಯ ಜನತಾ ಪಕ್ಷ ಒತ್ತಾಯಿಸಿದ ನಂತರ …
Read More »ಬೆಂಗಳೂರಲ್ಲಿ ಆಲಿಕಲ್ಲು ಮಳೆ, ಗಾಳಿ ಅಬ್ಬರ – ವಿಧಾನಸೌಧಕ್ಕೂ ನುಗ್ಗಿದ ನೀರು
ಬೆಂಗಳೂರು: ಬಿಸಿಲಿನಿಂದ ಕಾದು ಕೆಂಡವಾಗಿದ್ದ ಬೆಂಗಳೂರಿನ ಹಲವೆಡೆ ಬುಧವಾರ (ಇಂದು) ಸಂಜೆ ಆಲಿಕಲ್ಲು, ಭಾರೀ ಗಾಳಿ ಸಹಿತ ಮಳೆಯಾಗಿದೆ. ಇದರಿಂದ ಬಿಸಿಲ ಬೇಗೆಗೆ ಬಸವಳಿದಿದ್ದ ಬೆಂಗಳೂರಿನ ಜನತೆ ನಿಟ್ಟುಸಿರು ಬಿಡುವಂತಾಗಿದೆ. ಹವಾಮಾನ ಇಲಾಖೆಯು ಏಪ್ರಿಲ್ 29 ಮತ್ತು 30 ರಂದು ಬೆಂಗಳೂರು ಸೇರಿದಂತೆ ಕರ್ನಾಟಕ ರಾಜ್ಯದ ವಿವಿಧೆಡೆ ಮಳೆಯಾಗುವುದಾಗಿ ಸೂಚನೆ ನೀಡಿತ್ತು. ಜೊತೆ ಆರೆಂಟ್ ಅಲರ್ಟ್ ಸಹ ಮಾಡಿತ್ತು. ಅಂತೆಯೇ ಇದೀಗ ಬೆಂಗಳೂರು ಸುತ್ತಮುತ್ತ ಮಳೆಯಾಗಿರುವುದರಿಂದ ವಾತಾವರಣ ತಂಪಾಗಿದೆ. ಮಂಗಳವಾರ …
Read More »ಶಾಸಕರ ಸದಸ್ಯತ್ವ ರದ್ದು ಮಾಡೋ ಅಧಿಕಾರ ಸ್ಪೀಕರ್ಗೆ ಇಲ್ಲ: ಯು.ಟಿ.ಖಾದರ್
ಬೆಂಗಳೂರು: ವಿಧಾನಸಭೆ ಸದಸ್ಯರ ಸದಸ್ಯತ್ವವನ್ನು ರದ್ದು ಮಾಡುವ ಅಧಿಕಾರ ಸ್ಪೀಕರ್ಗೆ ಇಲ್ಲ ಅಂತ ಸ್ಪೀಕರ್ ಯು.ಟಿ.ಖಾದರ್ ತಿಳಿಸಿದ್ದಾರೆ. ಯೋಗೇಶ್ ಗೌಡ ಹತ್ಯೆ ಕೇಸ್ನಲ್ಲಿ ಕೋರ್ಟ್ ಶಾಸಕ ವಿನಯ್ ಕುಲಕರ್ಣಿ ಅಪರಾಧಿ ಅಂತ ಆದೇಶಿಸಿದೆ. ಶಾಸಕ ಸ್ಥಾನ ರದ್ದು ಮಾಡದ ಬಗ್ಗೆ ಬಸವರಾಜ ಕೊರವರ ಮನವಿ ಸಲ್ಲಿಸಿದ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಯಾವೊಬ್ಬ ಸದಸ್ಯನ ಸದಸ್ಯತ್ವ ರದ್ದು ಮಾಡುವ ಅಧಿಕಾರ ಸ್ಪೀಕರ್ಗೆ ಇಲ್ಲ. ಇದು ಎಲ್ಲಿಯಾದ್ರೂ ಉಂಟಾ? ವಿಧಾನಸಭೆ …
Read More »
Laxmi News 24×7