Breaking News
Home / Uncategorized

Uncategorized

ಮುಧೋಳ ರನ್ನ ಸಕ್ಕರೆ ಕಾರ್ಖಾನೆ ಪುನಃಶ್ಚೇತನಕ್ಕೆ ಟೆಂಡರ್ ಕರೆಯಲು ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ರನ್ನ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಲು ಅಲ್ಪಾವಧಿ ಟೆಂಡರ್ ಕರೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು. ಗೃಹ ಕಚೇರಿ ಕಷ್ಣಾದಲ್ಲಿ ನಡೆದ ಸಭೆಯಲ್ಲಿ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ರನ್ನ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ 2023-24ನೇ ಸಾಲಿಗೆ ಕಬ್ಬು ಅರೆಯುವ ಕಾರ್ಯವನ್ನು ಲೀಸ್ ಮೂಲಕ ಪುನರಾರಂಭಿಸುವ ಕುರಿತು ಚರ್ಚಿಸಿದರು. ಈ ವೇಳೆ ಮಾತನಾಡಿ, ಕಬ್ಬು ಅರೆಯುವ ಕಾರ್ಯ ಪ್ರಾರಂಭವಾಗಬೇಕು. ಪುನಶ್ಚೇತನದಿಂದ ರೈತರಿಗೂ ಅನುಕೂಲ ಆಗಬೇಕು. ಅಲ್ಪಮಟ್ಟದ ಹೂಡಿಕೆಗೆ ಸಿದ್ಧವಿರುವ ಸಂಸ್ಥೆಗಳು …

Read More »

ಜಂಬೂಸವಾರಿಗೆ ಗಜಪಡೆ ಸಿದ್ಧತೆ

ಮೈಸೂರು : ವಿಶ್ವವಿಖ್ಯಾತಿ ನಾಡಹಬ್ಬ ದಸರಾದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಗೆ ಅಭಿಮನ್ಯು ನೇತೃತ್ವದ ಗಜಪಡೆಯ ತಾಲೀಮು ನಡೆಸಲಾಗುತ್ತಿದೆ. ಜೊತೆಗೆ ವಿಶೇಷ ಆಹಾರ ಹಾಗೂ ಭಾರ ಹೊರುವ ತಾಲೀಮನ್ನು ನಡೆಸಲಾಗುತ್ತಿದ್ದು, ಈ ಸಿದ್ಧತೆ ಬಗ್ಗೆ ಡಿಸಿಎಫ್ ಸೌರವ್ ಕುಮಾರ್ ಅವರು ಈಟಿವಿ ಭಾರತಕ್ಕೆ ನೀಡಿದ ಸಂದರ್ಶನದಲ್ಲಿ ವಿವರಿಸಿದ್ದಾರೆ. ದಸರಾ ಜಂಬೂಸವಾರಿಗೆ ಗಜಪಡೆ ತಾಲೀಮು ಸೇರಿದಂತೆ ಎಲ್ಲಾ ರೀತಿಯಲ್ಲೂ ಸಿದ್ಧತೆಗಳು ನಡೆಯುತ್ತಿವೆ. ಈಗಾಗಲೇ 5 ಆನೆಗಳಿಗೆ ಭಾರ ಹಾಕಿ ತಾಲೀಮು ನಡೆಸಿದ್ದು, ಈ ವೇಳೆ ಬರುವ …

Read More »

ನಾಳೆ ಕರ್ನಾಟಕ ಬಂದ್​​ಗೆ ಸಕಲ ಸಿದ್ಧತೆ ನಡೆದಿದೆ. ಕನ್ನಡ ಚಿತ್ರರಂಗದಿಂದ ಹೋರಾಟಕ್ಕೆ ಬೆಂಬಲ

ನಾಳೆ ಕರ್ನಾಟಕ ಬಂದ್​​ಗೆ ಸಕಲ ಸಿದ್ಧತೆ ನಡೆದಿದೆ. ಕನ್ನಡ ಚಿತ್ರರಂಗದಿಂದ ಹೋರಾಟಕ್ಕೆ ಬೆಂಬಲ ಸಿಕ್ಕಿದೆ. ಕಳೆದ ಮಂಗಳವಾರ ಕಾವೇರಿಗಾಗಿ ನಮ್ಮ ರಾಜ್ಯ ರಾಜಧಾನಿ ಬಂದ್ ಆಗಿತ್ತು. ನಾಳೆ ಕರ್ನಾಟಕ ಬಂದ್​​ಗೆ ಸಕಲ ಸಿದ್ಧತೆ ನಡೆದಿದೆ. ಕನ್ನಡ ಒಕ್ಕೂಟಗಳು ಕರೆ ಕೊಟ್ಟಿರುವ ಕರ್ನಾಟಕ ಬಂದ್​​ಗೆ ಚಿತ್ರರಂಗ ಕೈ ಜೋಡಿಸಿದೆ. ಹಿರಿಯ ನಟ ಡಾ. ಶಿವರಾಜ್​ಕುಮಾರ್ ನೇತೃತ್ವದಲ್ಲಿ ಇಡೀ ಚಿತ್ರರಂಗ ನಾಳೆಯ ಹೋರಾಟದಲ್ಲಿ ಭಾಗಿಯಾಗಲಿದೆ. ಶೂಟಿಂಗ್ ಜೊತೆ ಥಿಯೇಟರ್ ಕೂಡ ಕ್ಲೋಸ್ ಆಗಲಿವೆ. …

Read More »

ಬಿಜೆಪಿ-ಜೆಡಿಎಸ್​ ಮೈತ್ರಿ: ಜಾತ್ಯತೀತತೆ ಪ್ರಶ್ನಿಸಿದವರಿಗೆ ಹೆಚ್.​ಡಿ.ದೇವೇಗೌಡರಿಂದ ಖಡಕ್ ಉತ್ತರ!

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಗೆ ಜೆಡಿಎಸ್​, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದೆ. ಇದರ ಬೆನ್ನಲ್ಲೇ ಮಾಜಿ ಪ್ರಧಾನಿ, ಜೆಡಿಎಸ್​ ವರಿಷ್ಠ ಹೆಚ್.​ಡಿ.ದೇವೇಗೌಡರ ಜಾತ್ಯತೀತ ನಿಲುವಿನ (ಸೆಕ್ಯುಲರ್) ಬಗ್ಗೆ ಹಲವರು ಪ್ರಶ್ನೆ ಮಾಡುತ್ತಿದ್ದಾರೆ. ಈ ಕುರಿತಾಗಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗೌಡರು ಖಡಕ್ ಉತ್ತರ ನೀಡಿದರು. ಪಕ್ಷದ ಕಚೇರಿ ಜೆ.ಪಿ.ಭವನದಲ್ಲಿ ಹೆಚ್.ಡಿ.ದೇವೇಗೌಡ ಹಾಗೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಜಂಟಿ ಸುದ್ದಿಗೋಷ್ಠಿ ನಡೆಸಿದರು. ದೇವೇಗೌಡರು ಮಾತನಾಡುತ್ತಾ, “ನಾವು ಕಿಂಚಿತ್ತೂ ಕೂಡಾ ಸೆಕ್ಯುಲರ್ ವಿಚಾರ ತೆಗೆದು ಹಾಕುವ …

Read More »

ಸೆಪ್ಟೆಂಬರ್​ 28ರಂದು 4 ಬಹುನಿರೀಕ್ಷಿತ ಸಿನಿಮಾಗಳು ಬಿಡುಗಡೆ

ಸೆಪ್ಟೆಂಬರ್​ 28ರಂದು 4 ಬಹುನಿರೀಕ್ಷಿತ ಸಿನಿಮಾಗಳು ಬಿಡುಗಡೆ ಆಗುತ್ತಿವೆ. ಸ್ಯಾಂಡಲ್​ವುಡ್​ನಲ್ಲಿ ಕಳೆದ ಕೆಲವು ವರ್ಷಗಳಿಂದ ಅತ್ಯುತ್ತಮ ಸಿನಿಮಾಗಳೇ ತೆರೆ ಕಾಣುತ್ತಿವೆ. ಕಾಂತಾರ, ಕೆಜಿಎಫ್​, ಚಾರ್ಲಿ ಹೀಗೆ ಸಾಕಷ್ಟು ಚಿತ್ರಗಳು ಪ್ರೇಕ್ಷಕರನ್ನು ಮನರಂಜಿಸುವಲ್ಲಿ ಯಶಸ್ವಿಯಾಗಿದೆ. ಕೋಟ್ಯಾಂತರ ರೂಪಾಯಿ ಸಂಪಾದಿಸಿ ಬಾಕ್ಸ್​ ಆಫೀಸ್​ ಕೊಳ್ಳೆ ಹೊಡೆಯುವಲ್ಲಿಯೂ ಸಫಲವಾಗಿದೆ. ವಿಶ್ವದಾದ್ಯಂತ ಅನೇಕ ಕನ್ನಡದ ಸಿನಿಮಾಗಳು ಉತ್ತಮ ಪ್ರದರ್ಶನ ಕಂಡಿವೆ. ಈ ನಡುವೆ ಇದೇ ತಿಂಗಳು ಮತ್ತೆ ನಾಲ್ಕು ಸಿನಿಮಾಗಳು ಒಂದೇ ದಿನ ಸಿಲ್ವರ್​ ಸ್ಕ್ರೀನ್​ಗೆ …

Read More »

ಕಾವೇರಿ ಕಿಚ್ಚು: ರೈತರ ಹೋರಾಟಕ್ಕೆ ಹಿರಿಯ ನಟಿ ಲೀಲಾವತಿ ಸಾಥ್

ಮಂಡ್ಯ: ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಮಂಡಳಿ ಆದೇಶದ ಬೆನ್ನಲ್ಲೇ ಸಕ್ಕರೆ ನಗರಿ ಮಂಡ್ಯದಲ್ಲಿ ಅನ್ನದಾತರನ್ನ ಕೆರಳುವಂತೆ ಮಾಡಿದೆ. ದಿನದಿಂದ ದಿನಕ್ಕೆ ಮಂಡ್ಯದಲ್ಲಿ ಕಾವೇರಿ ಕಿಚ್ಚು ಜೋರಾಗಿದ್ದು, ಸೋಮವಾರ ರೈತರ ಹೋರಾಟಕ್ಕೆ ಕಮಲಪಡೆ ಹಾಗೂ ಚಿತ್ರನಟರು ಸಾಥ್ ನೀಡಿದ್ರು. ದಿನದಿಂದ ದಿನಕ್ಕೆ ಮಂಡ್ಯದಲ್ಲಿ ಕಾವೇರಿ ಕಿಚ್ಚು ಜೋರಾಗಿದ್ದು, ಸೋಮವಾರ ರೈತರ ಹೋರಾಟಕ್ಕೆ ಕಮಲಪಡೆ ಹಾಗೂ ಚಿತ್ರನಟರು ಸಾಥ್ ನೀಡಿದ್ರು. ಹೋರಾಟದ ಕಾವು ಉಗ್ರ ಸ್ವರೂಪ ಪಡೆದಿತ್ತು. ಶಾಸಕ ಬಿ …

Read More »

ಮಳೆ ಇಲ್ಲದೆ ರೈತರು ಕಂಗಾಲು: ಪ್ರಧಾನಿ ಮೋದಿ ಮಧ್ಯಸ್ಥಿಕೆ ವಹಿಸಲಿ: ಪಿಎಂ ಗೆ ಎಚ್.ಡಿ ದೇವೇಗೌಡ ಪತ್ರ

ಕಾವೇರಿ ಜಲ ವಿವಾದಕ್ಕೆ ಸಂಬಂಧಪಟ್ಟಂತೆ ಈಗ ಏನು ವಾಸ್ತವಾಂಶ ಇದೆಯೋ ಅದರ ಆಧಾರದ ಮೇಲೆ ಕೇಂದ್ರ ಜಲ ಶಕ್ತಿ ಇಲಾಖೆಯಿಂದ ಸುಪ್ರೀಂ ಕೋರ್ಟ್ಗೆ ಅರ್ಜಿ ಹಾಕಬೇಕು. ಅರ್ಜಿ ಹಾಕಲು ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯ ಪ್ರವೇಶ ಮಾಡಬೇಕು . ಬೆಂಗಳೂರು: ಕಾವೇರಿ ಜಲ ವಿವಾದಕ್ಕೆ ಸಂಬಂಧಪಟ್ಟಂತೆ ಈಗ ಏನು ವಾಸ್ತವಾಂಶ ಇದೆಯೋ ಅದರ ಆಧಾರದ ಮೇಲೆ ಕೇಂದ್ರ ಜಲ ಶಕ್ತಿ ಇಲಾಖೆಯಿಂದ ಸುಪ್ರೀಂ ಕೋರ್ಟ್ಗೆ ಅರ್ಜಿ ಹಾಕಬೇಕು. ಅರ್ಜಿ …

Read More »

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ನೂತನ ಅಧ್ಯಕ್ಷರಾಗಿ ಎನ್‍ ಎಂ ಸುರೇಶ್‍ ಆಯ್ಕೆ

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ನಿರ್ಮಾಪಕ ಎನ್​ ಎಂ ಸುರೇಶ್ ಜಯ ಗಳಿಸಿದ್ದಾರೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ನಿರ್ಮಾಪಕ ಎನ್ ಎಂ ಸುರೇಶ್ ಗೆಲುವು ಸಾಧಿಸಿದ್ದಾರೆ. ಈ ಬಾರಿ ವಾಣಿಜ್ಯ ಮಂಡಳಿಯಲ್ಲಿ ಅಧ್ಯಕ್ಷ ಸ್ಥಾನವು ವಿತರಕರ ವಲಯಕ್ಕೆ ಮೀಸಲಾಗಿದ್ದು, ಇದೇ ಮೊದಲ ಬಾರಿಗೆ ನಾಲ್ವರು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದರು. ಎನ್‍ ಎಂ ಸುರೇಶ್‍, ಮಾರ್ಸ್ ಸುರೇಶ್‍, ಎ. …

Read More »

ಕಿರಿಯ ಪುತ್ರ ಅಬ್ರಾಮ್​ ಜೊತೆ ನಟ ಶಾರುಖ್​ ಖಾನ್​ ಮುಂಬೈನ ಪ್ರಸಿದ್ಧ ‘ಲಾಲ್​ಬೌಚ ರಾಜಾ’ ಸನ್ನಿಧಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.

ಕಿರಿಯ ಪುತ್ರ ಅಬ್ರಾಮ್​ ಜೊತೆ ನಟ ಶಾರುಖ್​ ಖಾನ್​ ಮುಂಬೈನ ಪ್ರಸಿದ್ಧ ‘ಲಾಲ್​ಬೌಚ ರಾಜಾ’ ಸನ್ನಿಧಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. ಬಾಲಿವುಡ್​ ಸೂಪರ್​ಸ್ಟಾರ್​ ಶಾರುಖ್​ ಖಾನ್​ ಗುರುವಾರ ತಮ್ಮ ಕಿರಿಯ ಪುತ್ರ ಅಬ್ರಾಮ್​ ಜೊತೆ ಮುಂಬೈನ ಪ್ರಸಿದ್ಧ ‘ಲಾಲ್​ಬೌಚ ರಾಜಾ’ ಸನ್ನಿಧಾನದಲ್ಲಿ (Lalbaugcha Raja) ವಿಶೇಷ ಪೂಜೆ ಸಲ್ಲಿಸಿದರು. ‘ಲಾಲ್​ಬೌಚ ರಾಜಾ’ ಲಾಲ್​ಬಾಗ್​ನಲ್ಲಿ ಇರಿಸಲಾಗಿರುವ ದೊಡ್ಡ ಗಣೇಶನ ವಿಗ್ರಹವಾಗಿದೆ. ಪೂಜೆ ಸಂದರ್ಭದಲ್ಲಿ ನಟ​ ಬಿಳಿ​ ಶರ್ಟ್​ ಧರಿಸಿದ್ದರೆ, …

Read More »

ಬೆಳಗಾವಿಯಲ್ಲಿ ಸ್ವತಃ ಲೋಕಮಾನ್ಯ ಬಾಲಗಂಗಾಧರ ತಿಲಕರೇ ಆರಂಭಿಸಿದ್ದ ಸಾರ್ವಜನಿಕ ಗಣೇಶೋತ್ಸವ 119ನೇ ವರ್ಷಕ್ಕೆ ಕಾಲಿಟ್ಟಿದೆ.

ಬೆಳಗಾವಿ: ಸ್ವಾತಂತ್ರ್ಯ ಸಂಗ್ರಾಮಕ್ಕೆ ಜನರನ್ನು ಒಟ್ಟುಗೂಡಿಸಲು ಬೆಳಗಾವಿಯಲ್ಲಿ ಸ್ವತಃ ಲೋಕಮಾನ್ಯ ಬಾಲಗಂಗಾಧರ ತಿಲಕರೇ ಆರಂಭಿಸಿದ್ದ ಸಾರ್ವಜನಿಕ ಗಣೇಶೋತ್ಸವ 119ನೇ ವರ್ಷಕ್ಕೆ ಕಾಲಿಟ್ಟಿದೆ. ಇದು ರಾಜ್ಯದಲ್ಲೇ ಮೊಟ್ಟ ಮೊದಲ ಸಾರ್ವಜನಿಕ ಗಣಪತಿ ಉತ್ಸವ ಮಂಡಳಿ ಎಂಬ ಹೆಗ್ಗಳಿಕೆ ಪಡೆದುಕೊಂಡಿದೆ. ಇತಿಹಾಸ: ಅದು ಬ್ರಿಟಿಷರ ವಿರುದ್ಧ ಚಳುವಳಿ ನಡೆಯುತ್ತಿದ್ದ ಸಂದರ್ಭ. ಹೇಗಾದರೂ ಮಾಡಿ ಜನರನ್ನು ಸಂಘಟಿಸಿ, ಹೋರಾಟ ತೀವ್ರಗೊಳಿಸಬೇಕೆಂಬ ಉದ್ದೇಶದಿಂದ ಮನೆಗಳಿಗೆ ಸೀಮಿತವಾಗಿದ್ದ ಗಣೇಶೋತ್ಸವವನ್ನು ಸಾರ್ವಜನಿಕವಾಗಿ ಆಚರಿಸಲು ಬಾಲಗಂಗಾಧರ ತಿಲಕರು ಕರೆ ನೀಡಿದ್ದರು. 1893ರಲ್ಲಿ ಮಹಾರಾಷ್ಟ್ರದ …

Read More »