Breaking News

Uncategorized

ಬೆಳಗಾವಿ ಜಿಲ್ಲೆಯ ವಿವಿಧ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಬೆಳಗಾವಿ : ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಖಾನಾಪುರ, ನಿಪ್ಪಾಣಿ, ಮೂಡಲಗಿ, ಯರಗಟ್ಟಿ ಹಾಗೂ ಸವದತ್ತಿ ಬೆಳಗಾವಿ ನಗರ ಹಾಗೂ ಗ್ರಾಮೀಣ ತಾಲ್ಲೂಕಿನಾದ್ಯಂತ ಇರುವ ಪ್ರಾಥಮಿಕ-ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ. ಖಾನಾಪುರ ತಾಲ್ಲೂಕಿನಲ್ಲಿ ಮಾತ್ರ ಪಿಯು ಕಾಲೇಜುಗಳಿಗೆ ಬುಧವಾರ (ಜು‌.26) ಒಂದು ದಿನ ರಜೆಯನ್ನು ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ.     ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ರಜೆಯನ್ನು ಘೋಷಿಸಲಾಗಿರುತ್ತದೆ. ಖಾನಾಪುರ ‌ತಾಲ್ಲೂಕಿನಲ್ಲಿ ಮಾತ್ರ ಶಾಲೆಗಳ ಜತೆಗೆ ಪಿಯು …

Read More »

ಚುನಾವಣಾ ಪ್ರಚಾರದಲ್ಲಿ ತೊಡಗಿದ ಸರ್ಕಾರಿ ಅಧಿಕಾರಿಗಳು

ಬೆಳಗಾವಿ : ಸರ್ಕಾರಿ ಸೇವೆ ಮಾಡುತ್ತ ಜನರ ಸಂಕಷ್ಟಕ್ಕೆ ನಿಲ್ಲಬೇಕಾದ ಅಧಿಕಾರಿಗಳೇ ಚುನಾವಣಾ ಪ್ರಚಾರಕ್ಕೆ ತೊಡಗಿದ್ದು ದುರದೃಷ್ಟಕರ ಸಂಗತಿ. ಜಿಲ್ಲೆಯ ಕೆಲ ಅಧಿಕಾರಿಗಳು ಒಂದು ಪಕ್ಷದ ಮುಖಂಡರಂತೆ ವರ್ತನೆ ಮಾಡುತ್ತಿದ್ದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಈ ರೀತಿಯ ಪ್ರಕರಣಗಳು ಸರ್ವೇ ಸಾಮಾನ್ಯ ಆಗಿವೆ. ಈ ಕುರಿತು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಾದ ಚುನಾವಣಾ ಆಯೋಗದ ಗಮನಕ್ಕೆ ಅಧಿಕಾರಿಗಳ ಕೆಟ್ಟ ವರ್ತನೆ ಗಮನಕ್ಕೆ ಬರದಿರುವುದು ವಿಪರ್ಯಾಸ. ಸರ್ಕಾರಿ …

Read More »

ಬೆಂಗಳೂರಲ್ಲಿ ಇಂದು ಟ್ರಾಫಿಕ್ ಜಾಮ್, ಸುಗಮ ಸಂಚಾರಕ್ಕೆ ಪರ್ಯಾಯ ಮಾರ್ಗ ಸಲಹೆ ನೀಡಿದ ಪೊಲೀಸರು

ಬೆಂಗಳೂರು: ಲೋಕಸಭಾ ಚುನಾವಣೆ 2024 ರ ಮೂರನೇ ಹಂತದ ಕಾರಣ ಮೇ 6 ಮತ್ತು 7 ರಂದು ಮೆಟ್ರೋಪಾಲಿಟನ್ ಪ್ರದೇಶದ ಹಲವಾರು ಸ್ಥಳಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಬಹುದು ಎಂದು ಬೆಂಗಳೂರು ಸಂಚಾರ ಪೊಲೀಸರು ಸಂಚಾರ ಸಲಹೆ ನೀಡಿದ್ದಾರೆ. ಮಂಗಳವಾರ ಹೆಚ್ಚಿನ ಸಂಖ್ಯೆಯ ಜನರು ಮತ ಚಲಾಯಿಸಲು ತಮ್ಮ ಊರುಗಳಿಗೆ ಹೋಗುತ್ತಿರುವುದರಿಂದ ಮೆಜೆಸ್ಟಿಕ್ ಸುತ್ತಲೂ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆಯಿದೆ ಎಂದು ಸಂಚಾರ ಸಲಹೆಗಾರ ಹೇಳಿದ್ದಾರೆ. ಮೇ 7 ರಂದು ಕರ್ನಾಟಕದ …

Read More »

ದೇವರಹಿಪ್ಪರಗಿ: ಸಾರಿಗೆ ನಿಯಂತ್ರಕರಿಲ್ಲದ ಬಸ್ ನಿಲ್ದಾಣ

ದೇವರಹಿಪ್ಪರಗಿ: ನೂತನವಾಗಿ ನಿರ್ಮಾಣಗೊಂಡ ಬಸ್ ನಿಲ್ದಾಣದಲ್ಲಿ ಸಾರಿಗೆ ನಿಯಂತ್ರಕರಿಲ್ಲದೇ ಕೊಠಡಿ ಬಿಕೋ ಎನ್ನುವಂತಿದ್ದು, ವಿವಿಧೆಡೆ ತೆರಳುವ ಬಸ್‌ಗಳ ಮಾಹಿತಿ ತಿಳಿಯಲು ಪ್ರಯಾಣಿಕರು ಪರದಾಡುವಂತಾಗಿದೆ. ಪಟ್ಟಣ ಹಾಗೂ ತಾಲ್ಲೂಕು ಕೇಂದ್ರ ಸ್ಥಳದ ಬಸ್ ನಿಲ್ದಾಣ ನೂತನವಾಗಿ ನಿರ್ಮಾಣಗೊಂಡು ಕಂಗೊಳಿಸುತ್ತಿದೆ.ಆದರೆ ಅಗತ್ಯ ಸಿಬ್ಬಂದಿಯಿಲ್ಲದೆ ಭಣಗುಡುತ್ತಿದೆ. ಮುಖ್ಯವಾಗಿ ಬಸ್ ನಿಲ್ದಾಣದಲ್ಲಿ ಕಳೆದ ಎರಡು ದಿನಗಳಿಂದ ಸಾರಿಗೆ ನಿಯಂತ್ರಕರು ಇಲ್ಲದೆ ಕೊಠಡಿಯನ್ನು ಮುಚ್ಚಲಾಗಿದೆ. ಬಸ್‌ಗಳ ಮಾಹಿತಿ ತಿಳಿಯಲು ಪ್ರಯಾಣಿಕರು ಪರದಾಡಿ ಇತರರನ್ನು ಕೇಳುವಂತಾಗಿದೆ. ಸ್ಥಳೀಯ ಬಸ್ …

Read More »

ಗಮನ ಸೆಳೆಯುವ ಸಾಂಪ್ರದಾಯಿಕ, ಸಖಿ ಮತಗಟ್ಟೆ

ಗಜೇಂದ್ರಗಡ: ಸಮೀಪದ ರಾಜೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತಗಟ್ಟೆ ಸಂಖ್ಯೆ 93ರಲ್ಲಿ ಹಳ್ಳಿಗಾಡಿನ ಲಂಬಾಣಿ ಸಮುದಾಯದ ಜೀವನ ಶೈಲಿಯ ವಿಭಿನ್ನ ಕಲಾಕೃತಿಗಳನ್ನು ಚಿತ್ರಿಸಿ, ಮತಗಟ್ಟೆ ಅಲಂಕರಿಸುವ ಮೂಲಕ ಮತದಾರರನ್ನು ಮತಗಟ್ಟೆಯತ್ತ ಸೆಳೆಯಲು ಜಿಲ್ಲಾ ಹಾಗೂ ತಾಲ್ಲೂಕು ಸ್ವೀಪ್ ಸಮಿತಿ ವಿಶೇಷ ಪ್ರಯತ್ನ ಮಾಡಿವೆ. ರಾಜೂರ ಗ್ರಾಮದಲ್ಲಿ ನಾಲ್ಕು ಮತಗಟ್ಟೆಗಳಿದ್ದು, ಅದರಲ್ಲಿ 93ನೇ ಮತಗಟ್ಟೆ ವಿಶೇಷ ಮತಗಟ್ಟೆಯನ್ನಾಗಿ ಗುರುತಿಸಲಾಗಿದ್ದು, ಈ ಮತಗಟ್ಟೆಯಲ್ಲಿ ಲಂಬಾಣಿ ಸಮುದಾಯದ ಜನರು ಹೆಚ್ಚಿರುವ ಕಾರಣ …

Read More »

ಹುಬ್ಬಳ್ಳಿ| ಸೆಂಟ್ರಲ್ ಕ್ಷೇತ್ರ: 260 ಮತಗಟ್ಟೆ, 1,244 ಸಿಬ್ಬಂದಿ

ಹುಬ್ಬಳ್ಳಿ: ಹು-ಧಾ ಸೆಂಟ್ರಲ್‌ ಮತ್ತು ಪೂರ್ವ ವಿಧಾನ ಸಭಾ ಕ್ಷೇತ್ರದಲ್ಲಿ ಲೋಕಸಭಾ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಸಿಬ್ಬಂದಿ ಸೋಮವಾರ ಇವಿಎಂ, ವಿ.ವಿ.ಪ್ಯಾಟ್‌ಗಳೊಂದಿಗೆ ಮತಗಟ್ಟೆಗಳಿಗೆ ತೆರಳಿದರು. ಹುಬ್ಬಳ್ಳಿಯ ಲ್ಯಾಮಿಂಗ್ಟನ್‌ ಶಾಲೆಯ ಮಸ್ಟರಿಂಗ್ ಸೆಂಟರ್‌ನಲ್ಲಿ ಸಿಬ್ಬಂದಿಗೆ ಮತಯಂತ್ರ ಬಳಕೆ ಬಗ್ಗೆ ಮಾಹಿತಿ ನೀಡಲಾಯಿತು. ಚುನಾವಣಾಧಿಕಾರಿಯೂ ಆದ ಹು-ಧಾ ಮಹಾನಗರ ಪಾಲಿಕೆ ಆಯುಕ್ತ ಈಶ್ವರ ಉಳ್ಳಾಗಡ್ಡಿ ಮಾಹಿತಿ ನೀಡಿ, ‘ಸೆಂಟ್ರಲ್‌ ಕ್ಷೇತ್ರದಲ್ಲಿ 260 ಮತಗಟ್ಟೆಗಳನ್ನು ತೆರೆಯಲಾಗಿದ್ದು, ಅದರಲ್ಲಿ 9 ವಿಶೇಷ, ತಲಾ ಒಂದು ವಿಶೇಷ …

Read More »

ಗೋಕಾಕ ಮತಕ್ಷೇತ್ರದ ಹಲವು ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು

ಬೆಳಗಾವಿ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೇ.07 ರಂದು ನಡೆಯಲಿದ್ದು, ಸುಗಮ‌ ಮತ್ತು ಶಾಂತಿಯುತ ಮತದಾನ ನಡೆಸಲು ಎಲ್ಲ ರೀತಿಯ ಸಿದ್ಧತೆಗಳನ್ನು‌ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ. ಗೋಕಾಕ ಮತಕ್ಷೇತ್ರದ ಹಲವು ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಭಾರತ ಚುನಾವಣಾ ಆಯೋಗದ ಅನುಮೋದಿಸಿರುವಂತೆ ಮತದಾರರು ತಮ್ಮ ಮತ ಚಲಾಯಿಸುವ ಮೊದಲು ಮತದಾನ ಕೇಂದ್ರಗಳಲ್ಲಿ ಅವರ ಗುರುತಿಗಾಗಿ ಮತದಾರರ ಗುರುತಿಸಿ ಚೀಟಿ …

Read More »

ರಾಜ್ಯದಲ್ಲಿ ಮತದಾನ ನಡೆಯಲಿರುವ ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಬೆಂಗಳೂರು, ಮೇ. 06 : ಆರು ತಿಂಗಳ ಕಾಲ ಸುದೀರ್ಘವಾದ ಒಣಹವೆಯನ್ನು ಅನುಭವಿಸಿರುವ ರಾಜ್ಯದಲ್ಲಿ ಕಳೆದ ವಾರದದಿಂದ ಮಳೆ ಬಂದಿದ್ದು, ತಾಪಮಾನ ಸುಧಾರಿಸಿದೆ. ಬೆಂಗಳೂರಿನಲ್ಲಿಯೂ ಇತ್ತೀಚೆಗೆ ಎರಡು ದಿನಗಳ ಕಾಲ ಸುರಿದ ಮಳೆಗೆ ಬಿಸಿಲು ಕೊಂಚ ಕಡಿಮೆಯಾಗಿದೆ. ಸ್ದಯ ಮುಂದಿನ ಐದು ದಿನಗಳು ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಭಾರತದ ಹವಾಮಾನ ಇಲಾಖೆ (ಐಎಂಡಿ) ಪ್ರಕಾರ ದೇಶದಾದ್ಯಂತ ಹಲವಾರು ರಾಜ್ಯಗಳಲ್ಲಿ ಭಾನುವಾರ ಕೂಡ ತೀವ್ರ ತಾಪಮಾನವಿತ್ತು. ಕೆಲವು ಪ್ರದೇಶಗಳಲ್ಲಿ ತಾಪಮಾನವು 45 …

Read More »

ಪಕ್ಕದಲ್ಲೇ ಕೃಷ್ಣೆ ಹರಿದರೂ ನೀರಿಗೆ ಬರ!

ಮುಳಬಾಗಿಲು: ರಾಜ್ಯದ ಕಟ್ಟಕಡೆಯ ಹಾಗೂ ನೆರೆಯ ಆಂಧ್ರಪ್ರದೇಶಕ್ಕೆ ಹೊಂದಿಕೊಂಡಿರುವ ಮುಳಬಾಗಿಲು ತಾಲ್ಲೂಕು ಬಯಲು ಪ್ರದೇಶವಾಗಿದೆ. ಯಾವುದೇ ಶಾಶ್ವತ ನೀರಾವರಿ ಯೋಜನೆಗಳು ಇಲ್ಲದಿರುವುದರಿಂದ ಕೇವಲ ಮಳೆ ಹಾಗೂ ಕೊಳವೆ ಬಾವಿಗಳ ನೀರನ್ನೇ ಅವಲಂಬಿಸಿದೆ. ಹೀಗಾಗಿ ತಾಲ್ಲೂಕಿಗೆ ನದಿ ತಿರುವು ಅಥವಾ ಡ್ಯಾಮುಗಳನ್ನು ನಿರ್ಮಾಣ ಮಾಡುವ ಮೂಲಕ ಶಾಶ್ವತ ನೀರಾವರಿಯ ಅವಶ್ಯಕವಾಗಿದೆ. ಆಂಧ್ರಪ್ರದೇಶದ ಗಡಿಗೆ ಹೊಂದಿಕೊಂಡಂತಿರುವ ಮುಳಬಾಗಿಲು ತಾಲ್ಲೂಕಿನಲ್ಲಿ ಒಟ್ಟು 369 ಗ್ರಾಮಗಳಿದ್ದು ಎಲ್ಲಿಯೂ ನೀರಾವರಿ ಸೌಕರ್ಯಗಳಾಗಲಿ ಅಥವಾ ಯಾವುದೇ ನೀರಾವರಿ ಯೋಜನೆಗಳಾಗಲಿ …

Read More »

ಸ್ವಂತ ಹಣದಲ್ಲಿ ಸಾರ್ವಜನಿಕ ರಸ್ತೆ ರಿಪೇರಿ ಮಾಡಿಸಿದ ವಿನೋದ್ ರಾಜ್

ಬೆಂಗಳೂರು: ವಿನೋದ್ ರಾಜ್ ಅವರು ಸ್ವಂತ ಹಣದಲ್ಲಿ ರಸ್ತೆ ಗುಂಡಿ ಮುಚ್ಚುವ ಕೆಲಸ ಮಾಡುತ್ತಿದ್ದಾರೆ. ಇತ್ತೀಚೆಗೆ ರೈತರ ಹಸುಗಳಿಗೆ ಹುಲ್ಲು ನೀಡಿದ್ದರು. ಇದೀಗ ರಸ್ತೆ ಗುಂಡಿ ಮುಚ್ಚುವ ಕಾರ್ಯಕ್ಕೆ ಎಲ್ಲರೂ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ನೆಲಮಂಗಲದ ಕರೆಕಲ್ ಕ್ರಾಸ್​ನಿಂದ ಸೋಲದೇವನಹಳ್ಳಿವರೆಗೆ ರಸ್ತೆ ಗುಂಡಿಗಳನ್ನು ಮುಚ್ಚುವ ಕೆಲಸ ಮಾಡುತ್ತಿದ್ದಾರೆ.ಮಳೆ ಬರುವ ಸಂದರ್ಭದಲ್ಲಿ ನೀರು ನಿಂತು ವಾಹನಗಳ ಓಡಾಟಕ್ಕೆ ತೊಂದರೆ ಆಗುತ್ತಿತ್ತು. ಇದನ್ನು ತಪ್ಪಿಸಲು ವಿನೋದ್ ರಾಜ್ ಅವರು ಸ್ವಂತ ಹಣ ಖರ್ಚು ಮಾಡಿ …

Read More »