ಬೆಳಗಾವಿ: ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ದೇಶದಲ್ಲಿ ತುರ್ತುಪರಿಸ್ಥಿತಿ ಘೋಷಿಸಿದ ದಿನವನ್ನು ವಿರೋಧಿಸಿ, ಕಾಂಗ್ರೆಸ್ ಕ್ಷಮೆ ಕೋರುವಂತೆ ಆಗ್ರಹಿಸಿ ಕಚೇರಿಗೆ ಭಿತ್ತಿ ಪತ್ರ ಅಂಟಿಸಲು ಹೊರಟ್ಟಿದ್ದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು. ನಗರದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಶಾಸಕ ಅಭಯ ಪಾಟೀಲ ಸೇರಿದಂತೆ ಅನೇಕ ನಾಯಕರನ್ನು ಪೊಲೀಸರು ಹೊತ್ತುಕೊಂಡು ಪೊಲೀಸ್ ವಾಹನದಲ್ಲಿ ಎತ್ತಿ ಹಾಕಿದರು. ಸಂವಿಧಾನವನ್ನು ಬಿಜೆಪಿ ಬದಲಿಸಲಿದೆ ಎಂದು ಕಾಂಗ್ರೆಸ್ ನಾಯಕರು ಸುಳ್ಳು ಹೇಳುತಿದ್ದಾರೆ. …
Read More »ಜುಲೈ 1 ರಿಂದ ಮೋಟಾರ್ ಸೈಕಲ್ ಮತ್ತು ಸ್ಕೂಟರ್ ಗಳ ಬೆಲೆ ಏರಿಕೆ ಘೋಷಿಸಿದ ಹೀರೋ ಮೋಟೊಕಾರ್ಪ್
ನವದೆಹಲಿ:ದೇಶದ ಪ್ರಮುಖ ದ್ವಿಚಕ್ರ ವಾಹನ ತಯಾರಕರಲ್ಲಿ ಒಬ್ಬರಾದ ಹೀರೋ ಮೋಟೊಕಾರ್ಪ್ ಜುಲೈ 1, 2024 ರಿಂದ ತನ್ನ ಮೋಟಾರ್ ಸೈಕಲ್ ಮತ್ತು ಸ್ಕೂಟರ್ ಗಳ ಬೆಲೆಯನ್ನು ಹೆಚ್ಚಿಸುವುದಾಗಿ ಘೋಷಿಸಿದೆ. ಈ ಮಾಹಿತಿಯನ್ನು ಕಂಪನಿಯು ಸೋಮವಾರ ವಿನಿಮಯ ಕೇಂದ್ರಕ್ಕೆ ಸಲ್ಲಿಸಿದ ಫೈಲಿಂಗ್ ನಲ್ಲಿ ತಿಳಿಸಿದೆ . ಹೀರೋ ಮೋಟೊಕಾರ್ಪ್ ಜುಲೈ 1, 2024 ರಿಂದ ಜಾರಿಗೆ ಬರುವಂತೆ ಆಯ್ದ ಮೋಟಾರ್ ಸೈಕಲ್ ಗಳು ಮತ್ತು ಸ್ಕೂಟರ್ ಗಳ ಎಕ್ಸ್ ಶೋರೂಂ ಬೆಲೆಗಳಲ್ಲಿ ಮೇಲ್ಮುಖ …
Read More »ಜೂನ್ 24 ರಂದು 18ನೇ ಲೋಕಸಭೆಯ ಮೊದಲ ಅಧಿವೇಶನ ಆರಂಭ
ನವದೆಹಲಿ: 18ನೇ ಲೋಕಸಭೆಯ ಮೊದಲ ಅಧಿವೇಶನ ಸೋಮವಾರ ಆರಂಭವಾಗಲಿದೆ. ಅಧಿವೇಶನದಲ್ಲಿ ಹೊಸದಾಗಿ ಆಯ್ಕೆಯಾದ ಸದಸ್ಯರ ಪ್ರಮಾಣ ವಚನ ನಡೆಯಲಿದೆ. ಹಂಗಾಮಿ ಸ್ಪೀಕರ್ ಆಗಿ ನೇಮಕಗೊಂಡಿರುವ ಬಿಜೆಪಿಯ ಹಿರಿಯ ಸಂಸದ ಭರ್ತೃಹರಿ ಮಹತಾಬ್ ಅವರು ಹೊಸದಾಗಿ ಆಯ್ಕೆಯಾದ ಲೋಕಸಭೆ ಸಂಸದರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ. ನೂತನ ಲೋಕಸಭಾ ಸ್ಪೀಕರ್ ಆಯ್ಕೆ ಇದೇ ತಿಂಗಳ 26 ರಂದು ನಡೆಯಲಿದೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜೂನ್ 27 ರಂದು ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ …
Read More »ಶಿಷ್ಟಾಚಾರ ಉಲ್ಲಂಘನೆ: ಮುಖ್ಯಶಿಕ್ಷಕ ಅಮಾನತು
ಖಾನಾಪುರ: ಸರ್ಕಾರಿ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘಿಸಿದ ಆರೋಪದಡಿ ತಾಲ್ಲೂಕಿನ ಲಿಂಗನಮಠ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆ ಮುಖ್ಯಶಿಕ್ಷಕ ಎಂ.ಎಂ ಕೋಟೂರ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಬಿಇಒ ರಾಜೇಶ್ವರಿ ಕುಡಚಿ ಶನಿವಾರ ಆದೇಶಿಸಿದ್ದಾರೆ. ಜೂನ್ 19ರಂದು ಲಿಂಗನಮಠ ಸರ್ಕಾರಿ ಶಾಲೆಯಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಕಾಸೀಂ ಹಟ್ಟಿಹೊಳಿ ಮತ್ತು ಎಸ್ಡಿಎಂಸಿ ಅಧ್ಯಕ್ಷ ಆನಂದ ಮಾಟೊಳ್ಳಿ ಅವರ ಉಪಸ್ಥಿತಿಯಲ್ಲಿ ನೂತನ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಶಿಷ್ಟಾಚಾರ ಉಲ್ಲಂಘನೆ ಸಂಬಂಧ …
Read More »ರಾಜ್ಯದಲ್ಲಿ ಕೋವಿಡ್ ವೇಳೆ ಸ್ಥಗಿತಗೊಂಡಿದ್ದ ಬಸ್ ಗಳು ಶೀಘ್ರವೇ ಪುನಾರಂಭ : ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ
ಬೆಂಗಳೂರು : ಕೋವಿಡ್ ವೇಳೆ ರಾಜ್ಯಾದ್ಯಂತ 3,800 ಸರ್ಕಾರಿ ಬಸ್ ರೂಟ್ಗಳನ್ನು ಸ್ಥಗಿತಗೊಳಿಸಲಾಗಿತ್ತು. ಈ ಪೈಕಿ ಬಹುತೇಕ ಕಡೆಗೆ ರೂಟ್ ಬಸ್ಗಳ ಓಡಾಟ ಆರಂಭವಾಗದೆ ಜನರು ಪರದಾಡುವಂತಾಗಿತ್ತು. ಈಗ ಸಾರಿಗೆ ಇಲಾಖೆ ಸ್ಥಗಿತಗೊಳಿಸಿದ್ದ ಬಸ್ ರೂಟ್ಗಳ ಪುನರಾರಂಭಕ್ಕೆ ಚಿಂತನೆ ನಡೆಸಿದೆ. “ಕೋವಿಡ್ ವೇಳೆ ಸ್ಥಗಿತಗೊಳಿಸಲಾಗಿದ್ದ ಬಸ್ ಸೇವೆ ಪುನರಾರಂಭಿಸಲು ಕ್ರಮ ವಹಿಸಲಾಗುತ್ತಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ನೂತನ ಬಸ್ಗಳನ್ನು ಖರೀದಿಸಿಲ್ಲ. ಇದರಿಂದ ಬಸ್ ಕೊರತೆ ಇದ್ದು, ಈಗ ಖರೀದಿಗೆ ಕ್ರಮವಹಿಸಲಾಗುತ್ತಿದೆ. …
Read More »ತಾಯಿ-ಮಗಳ ಡಬಲ್ ಮರ್ಡರ್ ಆಗಿದೆ ಎಂದು 112ಕ್ಕೆ ಕರೆ!
ಅಂಕೋಲಾ : ತನ್ನ ಪತ್ನಿ ಹಾಗೂ ಮಗಳನ್ನು ಯಾರೋ ಕೊಲೆ ಮಾಡಿದ್ದಾರೆ ಎಂದು 112ಕ್ಕೆ ಕರೆ ಮಾಡಿ ಗೋಗೆರೆದಿದ್ದ ವ್ಯಕ್ತಿಯೊಬ್ಬನ ಕರೆ ಆಧರಿಸಿ ಸ್ಥಳಕ್ಕೆ ಹೋದ ಪೊಲೀಸರೇ ಶಾಕ್ ಆದ ಘಟನೆ ಹಿಲ್ಲೂರಿನ ಬಿಲ್ಲನಬೈಲನಲ್ಲಿ ನಡೆದಿದೆ. ಹಿಲ್ಲೂರಿನ ಬಿಲ್ಲನಬೈಲನ ಮಂಜುನಾಥ ಬೊಮ್ಮಯ್ಯ ನಾಯಕ ಎಂಬಾತ 112ಕ್ಕೆ ಕರೆ ಮಾಡಿ, ನನ್ನ ಪತ್ನಿ ಹಾಗೂ ಮಗಳನ್ನು ಯಾರೋ ಭೀಕರವಾಗಿ ಕೊಲೆ ಮಾಡಿ ತೆರಳಿದ್ದಾರೆ. ನನಗೇಕೋ ಹೆದರಿಕೆ ಆಗುತ್ತಿದೆ. ಕೂಡಲೆ ಸ್ಥಳಕ್ಕೆ ಬರುವಂತೆ ವಿನಂತಿಸಿದ್ದ. …
Read More »ವಾಲ್ಮೀಕಿ ನಿಗಮ ಹಗರಣಕ್ಕೆ ಸಿಎಂ ನೇರ ಕಾರಣ : ಪ್ರಹ್ಲಾದ್ ಜೋಶಿ
ಬೆಂಗಳೂರು,ಜೂ.22- ವಾಲೀಕಿ ಅಭಿವೃದ್ಧಿ ನಿಗಮ ಮಂಡಳಿಯಲ್ಲಿ ನಡೆದಿರುವ ನೂರಾರು ಕೋಟಿ ಭ್ರಷ್ಟಾಚಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇರ ಕಾರಣ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಗಂಭೀರ ಆರೋಪ ಮಾಡಿದ್ದಾರೆ. ನಗರದ ಅರಮನೆ ಮೈದಾನದಲ್ಲಿ ಪಕ್ಷದ ವತಿಯಿಂದ ಹಮಿಕೊಂಡಿದ್ದ ನೂತನ ಸಂಸದರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ನಾನು ಒಬ್ಬನೇ ಜಗತ್ತಿನಲ್ಲಿ ಮಹಾ ಸಾಚಾ ಎಂದು ಸಿದ್ದರಾಮಯ್ಯನವರು ಮಾತನಾಡುತ್ತಾರೆ ಎಂದು ವಾಗ್ದಾಳಿ ನಡೆಸಿದರು. ಹಣಕಾಸು ಇಲಾಖೆ ಯಾರ ಕೈಯಲ್ಲಿದೆ. ನಿಮ ಅನುಮತಿ ಇಲ್ಲದೆ …
Read More »ಕಮಲಾ ಹಂಪನಾ ಅವರ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಜೂನ್ 21: ಹಿರಿಯ ಲೇಖಕಿ ಕಮಲಾ ಹಂಪನಾ (89) ಅವರು ಇಂದು ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕನ್ನಡದ ಉತ್ತಮ ಸಾಹಿತಿಯನ್ನು ನಾವು ಕಳೆದುಕೊಂಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಶನಿವಾರ ರವೀಂದ್ರಕಲಾ ಕ್ಷೇತ್ರದಲ್ಲಿ ಹಿರಿಯ ಸಾಹಿತಿ ಡಾII ಕಮಲ ಹಂಪನಾ ಅವರ ಪ್ರಾರ್ಥಿವ ಶರೀರ ದರ್ಶನ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಕಮಲಾ ಹಂಪನಾ ಅವರನ್ನು ನಾಲ್ಕೈದು ತಿಂಗಳ ಹಿಂದೆ ಭೇಟಿಯಾಗಿದ್ದೆ. ಮಹಿಳಾ ಸಾಹಿತಿಗಳ …
Read More »13 ವರ್ಷಗಳ ಬಳಿಕ ಮತ್ತೆ 13 ದಿನ ಜೈಲುಸೇರಿದ್ದಾರೆ.ದರ್ಶನ್
ಬೆಂಗಳೂರು: ಚಿತ್ರದುರ್ಗದ (Chitradurga) ರೇಣುಕಾಸ್ವಾಮಿ ಹತ್ಯೆ (Renukaswamy Murder Case) ಆರೋಪ ಎದುರಿಸುತ್ತಿರೋ ನಟ ದರ್ಶನ್ (Actor Darshan) ಇದೀಗ ಜೈಲು ಸೇರಿದ್ದಾರೆ. ಎ2 ಆರೋಪಿ ದರ್ಶನ್, ವಿನಯ್, ಪ್ರದೋಶ್ ಹಾಗೂ ಧನರಾಜ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ (Judicial Custody) ವಿಧಿಸಿ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ (ACMM Court) ಆದೇಶ ನೀಡಿದೆ. ದರ್ಶನ್ ಆಯಂಡ್ ಗ್ಯಾಂಗ್ಗೆ 13 ದಿನ ಅಂದರೆ ಜುಲೈ 4ರವರೆಗೆ ನ್ಯಾಯಾಂಗ ಬಂಧನ ವಿಧಿಸಿ …
Read More »ಜೂ.24ರಿಂದ ‘ದ್ವಿತೀಯ PUC’ ಪರೀಕ್ಷೆ-3 ಆರಂಭ: ‘75,995 ವಿದ್ಯಾರ್ಥಿ’ಗಳು ನೋಂದಣಿ
ಜೂ.24ರಿಂದ ‘ದ್ವಿತೀಯ PUC’ ಪರೀಕ್ಷೆ-3 ಆರಂಭ: ‘75,995 ವಿದ್ಯಾರ್ಥಿ’ಗಳು ನೋಂದಣಿ ಬೆಂಗಳೂರು: ಜೂನ್.24ರಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-3 ಆರಂಭಗೊಳ್ಳಲಿದೆ. ಈ ಪರೀಕ್ಷೆಗೆ ರಾಜ್ಯಾಧ್ಯಂತ 75,995 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.
Read More »
Laxmi News 24×7