Breaking News

Uncategorized

ಮಾನಸಿಕ ಅಸ್ವಸ್ಥ ಎಂಬ ಕಾರಣಕ್ಕೆ ಕಾಲಿಗೆ ಬೇಡಿ ಹಾಕಿ ಕಟ್ಟಿ ಹಾಕಿರುವ ಅಮಾನವೀಯ ಘಟನೆ 

ಬೆಳಗಾವಿ: ಮಾನಸಿಕ ಅಸ್ವಸ್ಥ ಎಂಬ ಕಾರಣಕ್ಕೆ ಸ್ವಂತ ಪೋಷಕರೇ ಕಳೆದ 10 ವರ್ಷಗಳಿಂದ ಕಾಲಿಗೆ ಬೇಡಿ ಹಾಕಿ ಕಟ್ಟಿ ಹಾಕಿರುವ ಅಮಾನವೀಯ ಘಟನೆ  ಬೈಲಹೊಂಗಲ ತಾಲ್ಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ವಿಠ್ಠಲ್ ಬಳಗಣ್ಣವರ್​ ಎಂಬ ವ್ಯಕ್ತಿಗೆ ಪೋಷಕರೇ ಬೇಡಿ ತೊಡಿಸಿ, ಪಾಳುಬಿದ್ದ ಮನೆಯಲ್ಲಿ ಕೂಡಿ ಹಾಕಿದ್ದಾರೆ. ವಿಠ್ಠಲ್ 10 ವರ್ಷಗಳ ಹಿಂದೆ ಬೆಳಗಾವಿಯ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದನು.  ಬಳಿಕ ಊರಿಗೆ ಬಂದ ಮೇಲೆ ಮಾನಸಿಕ ಅಸ್ವಸ್ಥನಾಗಿದ್ದನು. ಆಸ್ಪತ್ರೆಗೆ ತೋರಿಸಿದರೂ ಗುಣಮುಖನಾಗಿರಲಿಲ್ಲ. …

Read More »

ಮಲೆನಾಡು ಭಾಗದಲ್ಲಿಇಂತಹ ಮಳೆ ಸುರಿದಿದ್ದು ಇದೇ ಮೊದಲು,ಜನ ಭಯಗೊಂಡಿದ್ದಾರೆ.

ಚಿಕ್ಕಮಗಳೂರು: ದಿನದಿಂದ ದಿನಕ್ಕೆ ಹೆಚ್ಚುತ್ತಿರೋ ಕೊರೊನಾ ಪ್ರಕರಣಗಳು ಜನರನ್ನು ಕಂಗೆಡಿಸಿದೆ. ಆದರೆ ಈ ಮಧ್ಯೆ ಬೆಂಗಳೂರು, ಚಿಕ್ಕೋಡಿ, ಯಾದಗಿರಿ, ಮಲೆನಾಡು ಭಾಗ ಸೇರಿದಂತೆ ರಾಜ್ಯದ ಅನೇಕ ಕಡೆಗಳಲ್ಲಿ ಮಂಗಳವಾರ ಭಾರೀ ಮಳೆಯಾಗಿದೆ. ಯಾದಗಿರಿ ಜಿಲ್ಲೆಯಾದ್ಯಂತ ತಡರಾತ್ರಿ ಅಧಿಕವಾಗಿ ಉತ್ತಮ ಮಳೆಯಾಗಿದ್ದು, ಜಿಲ್ಲೆಯ ರೈತರ ಮುಖದಲ್ಲಿ ಸಂತಸ ಮೂಡಿಸಿದೆ. ಮುಂಗಾರು ಆರಂಭದಿಂದಲೂ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ರೈತಾಪಿ ವರ್ಗದಲ್ಲಿ ಬಿತ್ತನೆಯ ಕಾರ್ಯ ಜೋರಾಗಿ ನಡೆಯುತ್ತಿದೆ. ಜಿಲ್ಲೆಯ ಶಹಪುರ, ಸುರಪುರ, ಗುರುಮಿಠಕಲ್ ತಾಲೂಕಿನಲ್ಲಿ …

Read More »

ನೇಪಾಳದ ಕೃಷಿ ಸಚಿವಾಲಯದ ಸರ್ವೇ ಇಲಾಖೆ ಒಟ್ಟು 11 ಸ್ಥಳಗಳನ್ನು ಪಟ್ಟಿ ಮಾಡಿದ್ದು, ಇದರಲ್ಲಿ 10 ಪ್ರದೇಶಗಳನ್ನು ಚೀನಾ ವಶಪಡಿಸಿಕೊಂಡಿದೆ.

ಕಠ್ಮಂಡು: ಚೀನಾ ತನ್ನ ನೆರೆಯ ಎಲ್ಲ ದೇಶಗಳ ಗಡಿಯನ್ನು ಅತಿಕ್ರಮಣ ಮಾಡಿಕೊಳ್ಳುತ್ತಿರುವುದು ತಿಳಿದ ವಿಚಾರ. ಇತ್ತೀಚೆಗೆ ಭಾರತದೊಂದಿಗೆ ತಂಟೆ ತೆಗೆದಿದೆ. ಇದೀಗ ಇನ್ನೊಂದು ಭಯಾನಕ ಅಂಶವನ್ನು ನೇಪಾಳ ಸರ್ಕಾರ ಬಹಿರಂಗಪಡಿಸಿದೆ. ನೇಪಾಳದ ಬರೋಬ್ಬರಿ 10 ಪ್ರದೇಶಗಳನ್ನು ಚೀನಾ ಈಗಾಗಲೇ ಆಕ್ರಮಿಸಿಕೊಂಡಿದೆ ಎಂದು ನೇಪಾಳ ಸರ್ಕಾರ ತನ್ನ ವರದಿಯಲ್ಲಿ ತಿಳಿಸಿದೆ. ಲಡಾಖ್‍ನ ಗಲ್ವಾನ್ ವ್ಯಾಲಿಯಲ್ಲಿ ಭಾರತದ-ಚೀನಾದ ಗಡಿ ತಂಟೆ ನಡೆದ ಕೆಲವೇ ದಿನಗಳ ನಂತರ ನೇಪಾಳ ಈ ಕುರಿತು ಸರ್ವೇ ವರದಿಯನ್ನು …

Read More »

ನವಜಾತ ಶಿಶುವಿಗೆ ರಕ್ತ ಸಿಗದಿದ್ದಕ್ಕೆ ನಗರದ ಯುವಕರ ಸಂಘವೊಂದು ಮಸೀದಿಯಲ್ಲೇ ರಕ್ತದಾನ ಶಿಬಿರ

ಧಾರವಾಡ: ನವಜಾತ ಶಿಶುವಿಗೆ ರಕ್ತ ಸಿಗದಿದ್ದಕ್ಕೆ ನಗರದ ಯುವಕರ ಸಂಘವೊಂದು ಮಸೀದಿಯಲ್ಲೇ ರಕ್ತದಾನ ಶಿಬಿರ ಆರಂಭಿಸಿ ಮಾನವೀಯತೆ ಮೆರೆದಿದೆ. ಧಾರವಾಡ ಜಿಲ್ಲಾಸ್ಪತ್ರೆಯಲ್ಲಿ ಕೊರೊನಾ ವೈರಸ್ ಭಯದಿಂದ ರಕ್ತದಾನ ಮಾಡುವುದಕ್ಕೆ ಜನರೇ ಬರುತ್ತಿಲ್ಲ. ಇತ್ತ ರಕ್ತದಾನ ಶಿಬಿರಗಳೇ ನಡೆಯದ ಕಾರಣ ರಕ್ತ ಭಂಡಾರಕ್ಕೆ ತುರ್ತು ರಕ್ತದ ಅವಶ್ಯಕತೆ ಎದುರಾಗಿತ್ತು. ಇದನ್ನು ಮನಗಂಡ ನಗರದ ಜಕಣೀಬಾವಿ ಬಳಿಯ ಮಹಮ್ಮದ್ ಮಸೀದಿಯ ಜಮಾತ್ ಅಹಲೆ ಹದೀಸ್ ಟ್ರಸ್ಟ್ ಕೈ ಜೋಡಿಸಿ ರಕ್ತದಾನ ಶಿಬಿರ ನಡೆಸಿದೆ. …

Read More »

ಕೊರೊನಾವನ್ನೇ ಅಸ್ತ್ರ ಮಾಡಿಕೊಂಡು ದುಡ್ಡು ಮಾಡ್ತಿದ್ದಾರೆ. ಅಧಿಕಾರಿಗಳು

ತುಮಕೂರು: ಕೊರೊನಾ ಅದೆಷ್ಟು ಜನರ ಉದ್ಯೋಗ ಕಿತ್ತುಕೊಂಡಿದೆ. ಆದರೆ ಕೆಲ ಅಧಿಕಾರಿಗಳು ಮಾತ್ರ ಕೊರೊನಾವನ್ನೇ ಅಸ್ತ್ರ ಮಾಡಿಕೊಂಡು ದುಡ್ಡು ಮಾಡ್ತಿದ್ದಾರೆ. ಲಾಕ್‍ಡೌನ್‍ನಿಂದಾಗಿ ಸ್ಯಾಲರಿ ಆಗಿಲ್ಲ ಅಂತ ಫಲಾನುಭವಿಗಳ ಬಳಿ ಅಧಿಕಾರಿಗಳು ವಸೂಲಿಗೆ ಇಳಿದಿದ್ದಾರೆ. ಹೌದು. ಕೊರಟಗೆರೆ ತಾಲೂಕಿನ ಶಿವಪುರದ ನಿವಾಸಿ ರಮೇಶ್, ಸ್ವಯಂ ಉದ್ಯೋಗಕ್ಕಾಗಿ 1 ಲಕ್ಷ ರೂ. ಮಂಜೂರಾತಿಗೆ ಅರ್ಜಿ ಹಾಕಿದ್ದರು. ಜಿಲ್ಲಾಧಿಕಾರಿಗಳ ಸಭೆಯಲ್ಲಿ ಅರ್ಜಿ ಪುರಸ್ಕೃತಗೊಂಡಿತ್ತು. ಆದರೆ ದೇವರು ವರ ಕೊಟ್ಟರೂ ಪೂಜಾರಿ ಕೊಡಲ್ಲ ಅಂತಾರಲ್ಲ ಅದೇ …

Read More »

ನಂಜನಗೂಡು ಠಾಣೆ, ಡಿವೈಎಸ್‍ಪಿ ಕಚೇರಿ ಸೀಲ್‍ಡೌನ್!

ಮೈಸೂರು: ಕೊರೊನಾ ಮುಕ್ತ ಆಯ್ತು ಅಂತ ನಿಟ್ಟುಸಿರು ಬಿಡುವ ಸಮಯದಲ್ಲಿ ಮತ್ತೆ ಮೈಸೂರಿನಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದೆ. ಸದ್ಯ ಡೆಡ್ಲಿ ವೈರಸ್ ಮೈಸೂರು ಪೊಲೀಸರ ಬೆನ್ನತ್ತಿದೆ. ಬೆಂಗಳೂರು ಪೊಲೀಸರಷ್ಟೇ ಅಲ್ಲ. ಮೈಸೂರು ಪೊಲೀಸರಿಗೂ ಕೊರೊನಾ ಸೋಂಕು ಬಂದಿದೆ. ಇಲ್ಲಿವರೆಗೂ ಮೈಸೂರು ಜಿಲ್ಲೆಯೊಂದರಲ್ಲೇ 23 ಮಂದಿ ಪೊಲೀಸರು ಸೋಂಕು ಬಾಧಿತರಾಗಿದ್ದಾರೆ. ಜ್ಯುಬಿಲಿಯಂಟ್ ಕೊರೊನಾ ಮುಕ್ತವಾದ ಬಳಿಕ ಇಡೀ ಮೈಸೂರು ನೆಮ್ಮದಿ ನಿಟ್ಟುಸಿರು ಬಿಟ್ಟಿತ್ತು. ಅಷ್ಟರಲ್ಲೆ ಕಿಲ್ಲರ್ ಕೊರೊನಾ ಪೊಲೀಸರ ಹೆಗಲೇರಿ ಕುಳಿತುಬಿಟ್ಟಿದೆ. ನಂಜನಗೂಡು …

Read More »

ಕೆಎಸ್‌ಆರ್‌ಪಿ ಕಾನ್ಸ್‌ಸ್ಟೇಬಲ್ ಬಸ್ಸಿನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ

ಬೆಂಗಳೂರು: ಮಹಾಮಾರಿ ಕೊರೊನಾ ಸೋಂಕು ದಿನೇ ದಿನೇ ಹೆಚ್ಚಾಗುತ್ತಿದೆ. ಅದರಲ್ಲೂ ಇತ್ತೀಚೆಗೆ ಪೊಲೀಸರಿಗೆ ಕೊರೊನಾ ವಕ್ಕರಿಸುತ್ತಿದೆ. ಇದೀಗ ಕೊರೊನಾಗೆ ಹೆದರಿ ಪೊಲೀಸ್ ಕಾನ್ಸ್‌ಸ್ಟೇಬಲ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ಕೆಎಸ್‌ಆರ್‌ಪಿ ಕಾನ್ಸ್‌ಸ್ಟೇಬಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 50 ವರ್ಷದ ಕೆಎಸ್‌ಆರ್‌ಪಿ ಹೆಡ್ ಕಾನ್ಸ್‌ಸ್ಟೇಬಲ್ ಎಂದು ತಿಳಿದುಬಂದಿದೆ. ಸೋಮವಾರ ಸಂಜೆಯಷ್ಟೇ ಕೊರೊನಾ ಪಾಸಿಟಿವ್ ಬಂದಿತ್ತು. ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಬಸ್ಸಿನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗುತ್ತಿತ್ತು. ಆದರೆ ಕೆಎಸ್‌ಆರ್‌ಪಿ ಕಾನ್ಸ್‌ಸ್ಟೇಬಲ್ ಬಸ್ಸಿನಲ್ಲಿಯೇ …

Read More »

ಡಿ.ಕೆ.ಶಿವಕುಮಾರ್ ಆದೇಶಕ್ಕೆ ಕನಕಪುರ ಕ್ಷೇತ್ರ ಸಂಪೂರ್ಣ ಸ್ತಬ್ಧ; ಜುಲೈ 1ರವರೆಗೆ ಲಾಕ್​ಡೌನ್ ಮುಂದುವರಿಕೆ

ರಾಮನಗರ (ಕನಕಪುರ): ಕನಕಪುರ ಕ್ಷೇತ್ರದಲ್ಲಿ ವೈದ್ಯ ದಂಪತಿಗಳಲ್ಲಿ ಕಾಣಿಸಿದ್ದ ಕೊರೋನಾ ಪಾಸಿಟಿವ್ ಕೇಸ್ ಪ್ರಕರಣ ಇಡೀ ಕನಕಪುರವನ್ನೇ ಬೆಚ್ಚಿಬೀಳಿಸಿತ್ತು. ಕಳೆದ ಒಂದು ವಾರದಲ್ಲಿ ಕ್ಷೇತ್ರದಲ್ಲಿ 36 ಪ್ರಕರಣಗಳು ಪತ್ತೆಯಾಗಿದ್ದು, ಇನ್ನು ಹತ್ತುಹಲವು ಕೇಸ್‌ಗಳ ವರದಿ ಬರಬೇಕಿದೆ. ಈ ಕಾರಣಕ್ಕಾಗಿ ಕ್ಷೇತ್ರದ ಶಾಸಕ ಡಿ.ಕೆ.ಶಿವಕುಮಾರ್ ಮಾಸ್ಟರ್ ಪ್ಲ್ಯಾನ್ ಮಾಡಿ ಜುಲೈ 1ರವರೆಗೆ ಕನಕಪುರವನ್ನು ಲಾಕ್‌ಡೌನ್ ಮಾಡಲು ಸೂಚನೆ ನೀಡಿದ್ದಾರೆ. ಹೌದು, ರಾಮನಗರ ಜಿಲ್ಲೆ ಕನಕಪುರ ಕ್ಷೇತ್ರವನ್ನು ಇಂದಿನಿಂದ ಮುಂದಿನ ಜುಲೈ 1 …

Read More »

ನಯನತಾರಾ, ಗೆಳೆಯ ವಿಘ್ನೇಶ್‍ಗೆ ಕೊರೊನಾ ವದಂತಿ- ಸ್ಪಷ್ಟನೆ ಕೊಟ್ಟ ನಟಿ…………

ಹೈದರಾಬಾದ್: ನಟಿ ನಯನತಾರಾ ಮತ್ತು ನಿರ್ದೇಶಕ ವಿಘ್ನೇಶ್ ಶಿವನ್ ಲಿವಿಂಗ್ ರಿಲೇಷನ್‍ಶಿಪ್‍ನಲ್ಲಿರುವುದು ಗೊತ್ತಿರುವ ವಿಚಾರ. ಆದರೆ ಈ ಜೋಡಿ ಶೀಘ್ರವೇ ಮದುವೆಯಾಗಲಿದ್ದಾರೆ ಎಂಬ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಈ ಮಧ್ಯೆ ಇವರಿಬ್ಬರಿಗೂ ಕೊರೊನಾ ಸೋಂಕು ಇದೆ ಎಂಬ ಸುದ್ದಿ ವೈರಲ್ ಆಗಿದೆ. ಈ ಸುದ್ದಿಗೆ ಇದೀಗ ನಟಿ ನಯನತಾರಾ ಸ್ಪಷ್ಟನೆ ಕೊಟ್ಟಿದ್ದಾರೆ. ಚೆನ್ನೈನಲ್ಲಿ ದಿನೇ ದಿನೇ ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ನಟಿ ನಯನತಾರಾ ಮತ್ತು …

Read More »

V ವೊಡಾಫೋನ್​ ಐಡಿಯಾ ನೀಡುತ್ತಿದೆ ಹೆಚ್ಚುವರಿ 5GB ಡೇಟಾ; ಆದರೆ ಈ ಐದು ಪ್ರಿಪೇಯ್ಡ್​ ಪ್ಲಾನ್​ಗಳ ಮೇಲೆ ಮಾತ್ರ

Vodafone Offers: ವೊಡಾಫೋನ್​ ಐಡಿಯಾ ನೀಡುತ್ತಿದೆ ಹೆಚ್ಚುವರಿ 5GB ಡೇಟಾ; ಆದರೆ ಈ ಐದು ಪ್ರಿಪೇಯ್ಡ್​ ಪ್ಲಾನ್​ಗಳ ಮೇಲೆ ಮಾತ್ರ ವೊಡಾಫೋನ್ ಐಡಿಯಾ ತನ್ನ ಪ್ರಿಪೇಯ್ಡ್ ಬಳಕೆದಾರರಿಗೆ ನೂತನ ಪ್ಲಾನ್​​, ಅಧಿಕ ಡೇಟಾ, ಅನಿಯಮಿತ ಕರೆ ಹೀಗೆ ಹತ್ತು ಹಲವು ಯೋಜನಗಳನ್ನು ಹೊಂದಿರುವ ಪ್ಲಾನ್​ಗಳನ್ನು ಪರಿಚಯಿಸುತ್ತಾ ಬಂದಿದೆ. ಇದೀಗ 5GB ಎಕ್ಸ್ಟ್ರಾ ಡೇಟಾವನ್ನು ಕೆಲವು ಆಯ್ಕೆಯ ಪ್ರಿಪೇಯ್ಡ್​ ಪ್ಲಾನ್​ಗಳಲ್ಲಿ ನೀಡುತ್ತಿದೆ. ವೊಡಾಫೋನ್ ‘ಆ್ಯಪ್/ಬೆಬ್ ಎಕ್ಸ್​ಕ್ಲೂಸಿವ್ ಆಫರ್‘ ಬಿಡುಗಡೆ ಮಾಡಿದೆ. ಇದರಲ್ಲಿ …

Read More »