ಬೆಳಗಾವಿ- ದೆಹಲಿಯಿಂದ ತಬ್ಲಿಘಿಗಳು, ಅಜ್ಮೇರ್ ನಿಂದ ಜನರು ಹಿಂದಿರುಗಿದ ಬಳಿಕವೂ ಜಿಲ್ಲೆಯಲ್ಲಿ ಕೋವಿಡ್-೧೯ ನಿಯಂತ್ರಣಕ್ಕೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗಿತ್ತು. ಇದೀಗ ಮಹಾರಾಷ್ಟಗರದಿಂದ ಅತೀ ಹೆಚ್ಚು ಜನರು ಬರುತ್ತಿರುವುದರಿಂದ ಇನ್ನೂ ಹೆಚ್ಚಿನ ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಅಧಿಕಾರಿಗಳಿ ಸೂಚನೆ ನೀಡಿದ್ರು. ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಶುಕ್ರವಾರ ನಡೆದ ಕೋವಿಡ್-೧೯ ನಿಯಂತ್ರಣ ಹಾಗೂ ನೆರೆಹಾವಳಿ ನಿರ್ವಹಣೆಗೆ ಸಂಬಂಧಿಸಿದಂತೆ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು …
Read More »ಸೊಲ್ಲಾಪುರ ಜೈಲಿನಲ್ಲಿ ಸಿಬ್ಬಂದಿ ಸೇರಿ 60 ಮಂದಿಗೆ ಕೊರೊನಾ……….
ಮುಂಬೈ: ಮಹಾರಾಷ್ಟ್ರದ ಸೊಲ್ಲಾಪುರ ಜೈಲಿನಲ್ಲಿ ಸಿಬ್ಬಂದಿ ಸೇರಿ 60 ಮಂದಿಗೆ ಕೊರೊನಾ ವೈರಸ್ ತಗುಲಿರುವುದು ದೃಢಪಟ್ಟಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಸೊಲ್ಲಾಪುರ ಜಿಲ್ಲಾಧಿಕಾರಿ ಮಿಲಿಂದ್ ಶಂಭಾರ್ಕರ್, ಜೈಲಿನಲ್ಲಿ ಒಟ್ಟು 300 ಮಂದಿ ಕೈದಿಗಳಿದ್ದಾರೆ. ಕೊರೊನಾ ತಗುಲಿದ 60 ಮಂದಿಯ ಪೈಕಿ 8 ಜನ ಜೈಲು ಸಿಬ್ಬಂದಿ ಇದ್ದಾರೆ. ಎಲ್ಲರನ್ನೂ ಸದ್ಯ ಐಸೋಲೇಷನ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಸೊಲ್ಲಾಪುರ ಜೈಲಿನ ಕೈದಿ ಮತ್ತು ಸಿಬ್ಬಂದಿಗೆ ಕೊರೊನಾ ಗುಣಲಕ್ಷಣಗಳು ಕಂಡು ಬಂದಿದ್ದವು. ಈ …
Read More »ಮಹಿಳಾ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ಚಿತ್ರೀಕರಣ- ಸಿಕ್ಕಿಬಿದ್ದ ಆರೋಪಿ
ಮುಂಬೈ: ಮಹಿಳಾ ಶೌಚಾಲಯದಲ್ಲಿ ಮೊಬೈಲ್ ಇಟ್ಟು ಮಹಿಳೆಯೋರ್ವಳ ವಿಡಿಯೋ ಚಿತ್ರೀಕರಣಕ್ಕೆ ಯತ್ನಿಸಿದ್ದ ಆರೋಪಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಪ್ರಶಾಂತ್ ಸಿಂಗ್ (39) ಬಂಧಿತ ಆರೋಪಿ. ಮುಂಬೈನ ಅಗ್ರಿಪಾಡಾ ಪ್ರದೇಶದ ಸಾರ್ವಜನಿಕ ಶೌಚಾಲಯದಲ್ಲಿ ಬುಧವಾರ ಘಟನೆ ನಡೆದಿದ್ದು, ಗುರುವಾರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮಹಿಳೆ ಬುಧವಾರ ಮಧ್ಯಾಹ್ನ ಸಾರ್ವಜನಿಕ ಶೌಚಾಲಯಕ್ಕೆ ಹೋಗಿದ್ದರು. ಈ ವೇಳೆ ಪಕ್ಕದ ಶೌಚಾಲಯದಲ್ಲಿದ್ದ ಪ್ರಶಾಂತ್ ಸಿಂಗ್ ತನ್ನ ಮೊಬೈಲ್ ಅನ್ನು ಶೌಚಾಲಯದ ಕಿಟಕಿಯ ಬಳಿ ಇಟ್ಟಿದ್ದ. ಆದರೆ …
Read More »ಬಾಗಿಲು ಮುಚ್ಚಿದ ಅಟ್ಲಾಸ್ ಸೈಕಲ್ ಕಂಪನಿ – ಸಾವಿರಾರು ನೌಕರರು ಬೀದಿಗೆ
ಲಕ್ನೋ: ಭಾರತದ ಪ್ರಸಿದ್ಧ ಸೈಕಲ್ ತಯಾರಕಾ ಕಂಪನಿಯಾದ ‘ಅಟ್ಲಾಸ್’ ವಿಶ್ವ ಬೈಸಿಕಲ್ ದಿನಾಚರಣೆಯ ದಿನದಂದೇ ದಿಢೀರ್ ಸ್ಥಗಿತಗೊಂಡಿದೆ. ಯಾವುದೇ ಸೂಚನೆ ನೀಡದೇ ಬಾಗಿಲು ಮುಚ್ಚಿದ ಪರಿಣಾಮ ಸಾವಿರಕ್ಕೂ ಹೆಚ್ಚು ಮಂದಿ ಉದ್ಯೋಗ ಕಳೆದುಕೊಂಡು ಬೀದಿಗೆ ಬಂದಿದ್ದಾರೆ. ಭಾರೀ ನಷ್ಟದ ಕಾರಣ ಕಂಪನಿಯನ್ನು ಸ್ಥಗಿತಗೊಳಿಸಲಾಗುತ್ತಿದೆ ಎಂದು ಹೇಳಿ ಉತ್ತರ ಪ್ರದೇಶದ ಘಾಝಿಯಾಬಾದ್ನಲ್ಲಿದ್ದ ಅತೀ ದೊಡ್ಡ ಫ್ಯಾಕ್ಟರಿ ಮುಚ್ಚಲಾಗಿದೆ ಎಂದು ತಿಳಿಸಿದೆ. ಈ ಮೂಲಕ ಭಾರತದ ಸೈಕಲ್ ತಯಾರಿಕಾ ಕಂಪೆನಿಯ ಅಂತಿಮ ಘಟಕವೂ …
Read More »ಬೆಂಗಳೂರು: ಶಲವ್ ಮಾಕ್ಟೇಲ್-2 ಕಥೆ ಕೇಳಿ ನಾನು ಥ್ರಿಲ್ ಆದೇ ಎಂದು ಸಂಗೀತ ನಿರ್ದೇಕ ರಘು ದೀಕ್ಷಿತ್ ಅವರು ಹೇಳಿದ್ದಾರೆ.
ಬೆಂಗಳೂರು: ಶಲವ್ ಮಾಕ್ಟೇಲ್-2 ಕಥೆ ಕೇಳಿ ನಾನು ಥ್ರಿಲ್ ಆದೇ ಎಂದು ಸಂಗೀತ ನಿರ್ದೇಕ ರಘು ದೀಕ್ಷಿತ್ ಅವರು ಹೇಳಿದ್ದಾರೆ. ಲವ್ ಮಾಕ್ಟೇಲ್ 2020ರ ಜನವರಿಯಲ್ಲಿ ತೆರೆಕಂಡು ಸೂಪರ್ ಹಿಟ್ ಆಗಿತ್ತು. ಈ ಚಿತ್ರದ ಯಶಸ್ಸಿನ ಬೆನ್ನಲೇ ಚಿತ್ರದ ನಿರ್ದೇಶಕ ಮತ್ತು ನಾಯಕ ನಟ ಡಾರ್ಲಿಂಗ್ ಕೃಷ್ಣ ಅವರು ಲವ್ ಮಾಕ್ಟೇಲ್ ಸಿನಿಮಾದ ಸಿಕ್ವೇಲ್ ಮಾಡುವುದಾಗಿ ಹೇಳಿಕೊಂಡಿದ್ದರು. ಈಗ ಲಾಕ್ಡೌನ್ ಸಮಯದಲ್ಲಿ ಈ ಚಿತ್ರದ ಕಥೆಯನ್ನು ಕೃಷ್ಣ ರೆಡಿ ಮಾಡಿದ್ದಾರೆ …
Read More »ಕಳೆದ ಎರಡೂವರೆ ತಿಂಗಳುಗಳಿಂದ ಮುಚ್ಚಿದ್ದ ಹೋಟೆಲ್ ತೆರೆಯುವಂತೆ ಸರ್ಕಾರ ಸೂಚನೆ
ಬೆಂಗಳೂರು: ಕೊರೊನಾ ವೈರಸ್ ನಿಂದ ಕಳೆದ ಎರಡೂವರೆ ತಿಂಗಳುಗಳಿಂದ ಮುಚ್ಚಿದ್ದ ಹೋಟೆಲ್ ತೆರೆಯುವಂತೆ ಸರ್ಕಾರ ಸೂಚನೆ ನೀಡಿದೆ. ಕೊರೊನಾ ಭೀತಿಯಿಂದ ಹೋಟೆಲ್ಗಳು ಮುಚ್ಚಿದ್ದವು. ಆದರೆ ಇದರ ನಡುವೆ ಪಾರ್ಸೆಲ್ ನೀಡುವುದಕ್ಕೆ ಅನುಮತಿ ನೀಡಲಾಗಿತ್ತು. ಆದರೆ ಈಗ ಹಂತ ಹಂತವಾಗಿ ಲಾಕ್ಡೌನ್ ಅನ್ನು ಸಡಿಲಿಕೆ ಮಾಡುತ್ತಿದ್ದು, ಹೋಟೆಲ್ ಓಪನ್ ಮಾಡಲು ಅನುಮತಿ ನೀಡಲಾಗಿದೆ. ಜೊತೆಗೆ ಕೆಲ ಮಾರ್ಗ ಸೂಚಿಯನ್ನು ಸೂಚಿಸಲಾಗಿದೆ ಮಾರ್ಗಸೂಚಿ ಏನು? ಹೋಟೆಲ್ಗಳಲ್ಲಿ ಜನದಟ್ಟಣೆ ನಿಯಂತ್ರಣಕ್ಕೆ ಸರಿಯಾದ ವ್ಯವಸ್ಥೆ ಮಾಡಬೇಕು …
Read More »ರಾತ್ರಿ ವೇಳೆ ಸಾಕು ಪ್ರಾಣಿಗಳನ್ನ ಬೇಟೆಯಾಡ್ತಿದ್ದ ಚಿರತೆ ಸೆರೆ
ವಿಜಯಪುರ: ರಾತ್ರಿ ವೇಳೆ ಸಾಕು ಪ್ರಾಣಿಗಳನ್ನ ಬೇಟೆಯಾಡುವ ಮೂಲಕ ಜಿಲ್ಲೆಯ ಜನರ ನಿದ್ದೆ ಕೆಡಿಸಿದ್ದ ಚಿರತೆ ಕೊನೆಗೂ ಬೋನಿ ಬಿದ್ದಿದೆ. ಜಿಲ್ಲೆಯ ಬಬಲೇಶ್ವರ ತಾಲೂಕಿನ ದೇವರಗೆಣ್ಣೂರು ಗ್ರಾಮದ ಹೊರವಲಯದಲ್ಲಿ ಚಿರತೆ ಬಲೆಗೆ ಬಿದ್ದಿದೆ. ಕಳೆದ ಒಂದು ವಾರದಿಂದ ಬಬಲೇಶ್ವರ ತಾಲೂಕಿನ ಬಬಲಾದಿ, ದೇವರಗೆಣ್ಣೂರು, ಗುಣದಾಳ ಸೇರಿದಂತೆ ಸುತ್ತಮುತ್ತಲ ಹಳ್ಳಿಗಳಲ್ಲಿ ಈ ಚಿರತೆಯ ಹಾವಳಿ ಹೆಚ್ಚಾಗಿತ್ತು. ಅಷ್ಟೇ ಅಲ್ಲದೇ ರಾತ್ರಿ ಹೊತ್ತು ಎಮ್ಮೆ, ಮೇಕೆ, ಸಾಕು ಪ್ರಾಣಿಗಳ ಬೇಟೆಯಾಡುವ ಮೂಲಕ ಜನರ …
Read More »ಆನ್ಲೈನ್ ಕ್ಲಾಸಿಗೆ ಹಾಜರಾಗಲು ಮನೆಯ ಹಂಚು ಏರಿದ ಬಿಎ ವಿದ್ಯಾರ್ಥಿನಿ…………
ತಿರುವನಂತಪುರಂ: ಕೊರೊನಾ ಮಹಾಮಾರಿಯ ಅಟ್ಟಹಾಸದಿಂದ ಇದೀಗ ತಗರತಿಗಳೆಲ್ಲವೂ ಆನ್ ಲೈನ್ ನಲ್ಲೇ ನಡೆಯುತ್ತಿದೆ. ಆದರೆ ಇಲ್ಲಿ ಸಮಸ್ಯೆಯೆಂದರೆ ಕೆಲವರಿಗೆ ತರಗತಿಗೆ ಹಾಜರಾಗಲು ನೆಟ್ ವರ್ಕ್ ಇಲ್ಲದೆ ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೇರಳದ ಪದವಿ ವಿದ್ಯಾರ್ಥಿನಿಯೊಬ್ಬಳು ಒಳ್ಳೆಯ ಉಪಾಯವೊಂದನ್ನು ಕಂಡುಕೊಂಡಿದ್ದಾಳೆ. ಹೌದು. ಕುಟ್ಟಿಪುರಂ ಕೆಎಂಸಿಟಿ ಆರ್ಟ್ಸ್ & ಸೈನ್ಸ್ ಕಾಲೇಜಿನ ವಿದ್ಯಾರ್ಥಿನಿ ನಮಿತಾ, ಮೊಬೈಲ್ ನೆಟ್ವರ್ಕ್ ಇಲ್ಲವೆಂದು ತನ್ನದೇ ಆದ ಐಡಿಯಾವೊಂದನ್ನು ಕಂಡುಕೊಂಡು ಇದೀಗ ಭಾರೀ ಸುದ್ದಿಯಾಗಿದ್ದಾಳೆ. ಕೊಟ್ಟಕಲ್ ಸಮೀಪದ ಅರೀಕ್ಕಲ್ …
Read More »ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಅವರ ಮಗ ಕಡ್ಲೆಪುರಿ ತಿನ್ತಾ ಇದ್ದನಾ?- ಎಸ್.ಟಿ.ಸೋಮಶೇಖರ್
ಮೈಸೂರು: ಸಿದ್ದರಾಮಯ್ಯನವರು ಸಿಎಂ ಆಗಿದ್ದಾಗ ಅವರ ಮಗ ಕಡ್ಲೆಪುರಿ ತಿನ್ನುತ್ತಿದ್ದನಾ ಎಂದು ಸಚಿವ ಎಸ್.ಟಿ.ಸೋಮಶೇಖರ್ ಪ್ರಶ್ನೆ ಮಾಡಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಎಸ್.ಟಿ.ಸೋಮಶೇಖರ್, ನಾನು ಸಚಿವನಾಗಿ ಮೂರು ತಿಂಗಳು ಆಗಿದೆ. ಇದುವರೆಗೂ ಸಿಎಂ ಯಡಿಯೂರಪ್ಪನವರ ಪುತ್ರ ವಿಜಯೇಂದ್ರ ಆಡಳಿತ ವಿಚಾರದಲ್ಲಿ ಹಸ್ತಕ್ಷೇಪ ಮಾಡಿಲ್ಲ. ವಿಜಯೇಂದ್ರ ಅವರನ್ನು ಭೇಟಿ ಮಾಡಿ ಅಂತ ಸಿಎಂ ನಮಗೆ ಹೇಳಿಲ್ಲ. ಈ ಹಿಂದೆ ಸಿದ್ದರಾಮಯ್ಯನವರು 5 ವರ್ಷ ಸಿಎಂ ಆಗಿದ್ದಾಗ ಅವರ ಮಗ …
Read More »ಬೆಂಗಳೂರಿನಲ್ಲಿ ಬೆಳಗಾವಿ ಬಿಜೆಪಿ ನಾಯಕರು ಲಾಬಿಗೆ ಮುಂದಾಗಿದ್ದಾರೆ.
ಬೆಂಗಳೂರು: ರಾಜ್ಯಸಭಾ ಚುನಾವಣೆ ಘೋಷಣೆಯಾಗುತ್ತಿದ್ದಂತೆ ರಾಜಧಾನಿ ಬೆಂಗಳೂರಿನಲ್ಲಿ ಬೆಳಗಾವಿ ಬಿಜೆಪಿ ನಾಯಕರು ಲಾಬಿಗೆ ಮುಂದಾಗಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜೊತೆ ತಮ್ಮ ಅಭ್ಯರ್ಥಿಗೆ ಬಿಜೆಪಿ ಟಿಕೆಟ್ ಗಾಗಿ ಸಭೆ ಮೇಲೆ ಸಭೆ ನಡೆಸುತ್ತಿದ್ದಾರೆ. ನಿನ್ನೆಯಷ್ಟೇ ಯಡಿಯೂರಪ್ಪ ಅವರಿಗೆ ಭೇಟಿಯಾಗಿದ್ದ ಉಮೇಶ ಕತ್ತಿ ಅವರು ಇಂದು ಕೂಡ ಬೆಳ್ಳಂ ಬೆಳಿಗ್ಗೆ ಸಿಎಂ ನಿವಾಸಕ್ಕೆ ತೆರಳಿ ಅರ್ಧ ಗಂಟೆಗೂ ಹೆಚ್ಚು ಕಾಲ ಮತ್ತೆ ಚರ್ಚೆ ನಡೆಸಿದ್ದಾರೆ. ಯಡಿಯೂರಪ್ಪನವರ ಸರ್ಕಾರಿ ನಿವಾಸ ಕಾವೇರಿಗೆ ತೆರಳಿರುವ …
Read More »
Laxmi News 24×7