Breaking News

Uncategorized

ತಂದೆಯ ಪುಣ್ಯ ತಿಥಿಗಾಗಿ ಕೂಡಿಟ್ಟ ಹಣದಲ್ಲಿ ಬಡವರು, ನಿರ್ಗತಿಕರಿಗೆ ದಿನಸಿ ಆಹಾರ ಪದಾರ್ಥಗಳ ಕಿಟ್ ವಿತರಣೆ

ಕೋಲಾರ: ತಂದೆಯ ಪುಣ್ಯ ತಿಥಿಗಾಗಿ ಕೂಡಿಟ್ಟ ಹಣದಲ್ಲಿ ಪೋಸ್ಟ್ ಮಾಸ್ಟರ್ ಕೊರೊನಾ ಲಾಕ್‍ಡೌನ್‍ನಿಂದ ಕಂಗಾಲಾಗಿರುವ ಬಡವರು, ನಿರ್ಗತಿಕರಿಗೆ ದಿನಸಿ ಆಹಾರ ಪದಾರ್ಥಗಳ ಕಿಟ್ ವಿತರಣೆ ಮಾಡಿ ಮಾದರಿಯಾಗಿದ್ದಾರೆ. ಕೋಲಾರ ನಗರದ ಗಲ್‍ಪೇಟೆ ನಿವಾಸಿ ಪೋಸ್ಟ್ ಮಾಸ್ಟರ್ ನಾರಾಯಣಸ್ವಾಮಿ ತನ್ನ ತಂದೆ ಬಂಗವಾದಿ ಮುನಿಸ್ವಾಮಿ ಅವರ 13ನೇ ವರ್ಷದ ಪುಣ್ಯ ತಿಥಿ ದಿನ ಆಹಾರ ಪದಾರ್ಥಗಳನ್ನ ವಿತರಣೆ ಮಾಡಿದರು. ಮೂಲತಃ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಬಂಗವಾದಿ ಗ್ರಾಮದವರಾದ ಮುನಿಸ್ವಾಮಿ ಅವರು ಕಾಲಾಧೀನರಾಗಿ …

Read More »

ಮಂಗಳೂರು:ರಾತ್ರಿ ವೇಳೆ ಹೊರ ರಾಜ್ಯಗಳಿಂದ ಮೀನಿನ ಲಾರಿಗಳು ಬರುತ್ತಿದ್ದು, ಭಾರೀ ಸಂಖ್ಯೆಯಲ್ಲಿ ಜನಜಂಗುಳಿ ಏರ್ಪಡುತ್ತಿದೆ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಇದೀಗ ಕೊರೊನಾ ಹಾಟ್‍ಸ್ಪಾಟ್ ಆಗಿದೆ. ಕೊರೊನಾ ಪಾಸಿಟಿವ್ ಕೇಸ್ ಕಡಿಮೆ ಆಯಿತು ಎಂದು ನಿಟ್ಟುಸಿರು ಬಿಡುವಾಗಲೇ ಮತ್ತೆ ಮತ್ತೆ ಕೊರೊನಾ ಪಾಸಿಟಿವ್ ಹೆಚ್ಚಾಗಿ ಇಬ್ಬರು ಮೃತಪಟ್ಟಿದ್ದಾರೆ. ಇದೀಗ ಜಿಲ್ಲಾಡಳಿತವೇ ಇಡೀ ಜಿಲ್ಲೆಯ ಜನರಿಗೆ ಕೊರೊನಾ ಸೋಂಕನ್ನು ಹರಡುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಕೊರೊನಾ ಹರಡಲು ದಕ್ಷಿಣ ಕನ್ನಡ ಜಿಲ್ಲಾಡಳಿತ ದಾರಿ ಮಾಡಿಕೊಟ್ಟಿರುವ ಬೆಳವಣಿಗೆ ನಡೆದಿದೆ. ಮಂಗಳೂರಿನ ಮೀನುಗಾರಿಕಾ ಬಂದರಿನಲ್ಲಿ ರಾತ್ರಿ ವೇಳೆ ಹೊರ …

Read More »

ಲಾಕ್‌ಡೌನ್‌ನಿಂದ ಬೆಂಗಳೂರಲ್ಲಿ ಹೆಚ್ಚಾಯ್ತು ಅಂತರ್ಜಲದ ಪ್ರಮಾಣ..!

ಬೆಂಗಳೂರು, ಏ.26- ಕೊರೋನ ವೈರಾಣು ಹರಡುವುದನ್ನು ತಡೆಯಲು ರಾಜ್ಯದಲ್ಲಿ ಲಾಕ್ ಡೌನ್ ಮಾಡಿದ ಪರಿಣಾಮ ಬೆಂಗಳೂರಿನಲ್ಲಿ ಅಂತರ್ಜಲದ ಪ್ರಮಾಣ ಗಣನೀಯವಾಗಿ ಏರಿಕೆಯಾಗಿದೆ. ಗೃಹ ಬಳಕೆ ನೀರಿನ ಪ್ರಮಾಣ ಹೆಚ್ಚಾಗಿದ್ದರೆ, ವಾಣಿಜ್ಯ ಬಳಕೆ ನೀರಿನ ಪ್ರಮಾಣ ಕಡಿಮೆಯಾಗಿರುವುದು ಕಂಡುಬಂದಿದೆ. ಬೆಂಗಳೂರಿನಲ್ಲಿ 2.1 ಮೀಟರ್ ನಿಂದ 90 ಮೀಟರ್ ವರೆಗೂ ಅಂತರ್ಜಲ ಹೆಚ್ಚಳವಾಗಿರುವುದು ಕಂಡುಬಂದಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿವೃತ್ತ ನಿರ್ದೇಶಕ ವಿ.ಎಸ್. ಪ್ರಕಾಶ್ ಈ ಸಂಜೆಗೆ ತಿಳಿಸಿದರು. …

Read More »

ಲಾಕ್ ಡೌನ್ ಮಧ್ಯೆಯೂ ಮಾನವೀಯತೆ ಮೆರೆದ ಚಿಕ್ಕೋಡಿ ತಾಲೂಕ ರೈತ ಸಂಘದ ತಾಲೂಕು ಅಧ್ಯಕ್ಷರು. ಶ್ರೀ ಮಂಜುನಾಥ್ ಪರಗೌಡ್ರು

ಚಿಕ್ಕೋಡಿ: ಅಂಕಲಿ ಯಿಂದ ಚಿಕ್ಕೋಡಿಯ ಸಾರ್ವಜನಿಕ ತಾಲೂಕ ಆಸ್ಪತ್ರೆಗೆ ರೋಗಿಯನ್ನು     ಸಾಗಿಸುತ್ತಿದ ಆಂಬ್ಯುಲೆನ್ಸ್ ವಾಹನ ಕೇರೂರ ಕ್ರಾಸ್ ಬಳಿ ಪಂಚರ ಆಗಿ ನಿಂತಿದ್ದು ಅದನ್ನು ಗಮನಿಸಿದ ಕರ್ನಾಟಕ ರಾಜ್ಯ ರೈತ ಸಂಘದ ಚಿಕ್ಕೋಡಿ ತಾಲೂಕ ಅಧ್ಯಕ್ಷರಾದ ಶ್ರೀ ಮಂಜುನಾಥ್ ಪರಗೌಡ್ರು ತಕ್ಷಣ ಅಲ್ಲಿಗೆ     ಹೋಗಿ ಅಂಬುಲೆನ್ಸ್ ಚಾಲಕರ ಪರಿಸ್ಥಿತಿಯನ್ನು ಗಮನಿಸಿ ಯಾಕೆಂದರೆ ಅಲ್ಲಿ ಪಕ್ಕದಲ್ಲೆಲ್ಲೋ ಪಂಚರ ತೆಗೆಯುವ ಅಂಗಡಿ ಇಲ್ಲದ ಕಾರಣ ಬೇರೆ ಅಂಬುಲೆನ್ಸ್ …

Read More »

ಜನ ಅನವಶ್ಯಕವಾಗಿ ಸುತ್ತಾಡುವದನ್ನು ನಿಯಂತ್ರಿಸಲು ಶಾಸಕ ಅಭಯ ಪಾಟೀಲ ಹೊಸ ಐಡಿಯಾ

ಬೆಳಗಾವಿ – ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ವೈರಸ್ ಹರಡುವಿಕೆಯನ್ನು ಸಮರ್ಪಕವಾಗಿ ತಡೆಗಟ್ಟಲು,ಬೆಳಗಾವಿ ನಗರದ ಜನ ಅನವಶ್ಯಕವಾಗಿ ಸುತ್ತಾಡುವದನ್ನು ನಿಯಂತ್ರಿಸಲು ಶಾಸಕ ಅಭಯ ಪಾಟೀಲ ಹೊಸ ಐಡಿಯಾ ಹುಡಕಿದ್ದಾರೆ . ಅತ್ಯಂತ ವಿಶಾಲವಾಗಿರುವ ಬೆಳಗಾವಿ ನಗರದಲ್ಲಿ ಹೊರಗಡೆ ಸುತ್ತಾಡುವ ಜನರನ್ನು ತಡೆಯಲು ಪೋಲೀಸರು ಹಗಲು ರಾತ್ರಿ ಶ್ರಮಿಸುತ್ತಿದ್ದಾರೆ.ಅನವಶ್ಯಕವಾಗಿ ಸುತ್ತಾಡುವ ಜನರನ್ನು ಸರಳವಾಗಿ ಗುರುತಿಸಿ ಅವರನ್ನು ದಂಡಿಸಲು ಶಾಸಕ ಅಭಯ ಪಾಟೀಲ ಬೆಳಗಾವಿ ನಗರದಲ್ಲಿ ಹದಿನಾಲ್ಕು ದ್ರೋಣ ಕ್ಯಾಮರಾಗಳನ್ನು ಬೆಳಗಾವಿಯ ಬಾನಂಗಳದಲ್ಲಿ ಹಾರಿ …

Read More »

ನನ್ನ ಮೇಲಿರೋ ಸಿಟ್ಟಿಗೆ ರಾಮನಗರ ಜನರ ಜೀವದ ಜೊತೆ ಚೆಲ್ಲಾಟ: ಎಡಿಜಿಪಿ ವಿರುದ್ಧ ಎಚ್‍ಡಿಕೆ ಆರೋಪ

ಬೆಂಗಳೂರು: ಪಾದರಾಯನಪುರ ಆರೋಪಿಗಳನ್ನು ರಾಮನಗರಕ್ಕೆ ಶಿಫ್ಟ್ ಮಾಡುವ ಮೂಲಕ ನನ್ನ ಮೇಲಿರುವ ಸಿಟ್ಟಿಗೆ ರಾಮನಗರ ಜನತೆ ಜೀವದ ಜೊತೆ ಚೆಲ್ಲಾಟವಾಡ್ತಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರು ಎಡಿಜಿಪಿ ಅಲೋಕ್ ಮೋಹನ್ ವಿರುದ್ಧ ಆರೋಪ ಮಾಡಿದ್ದಾರೆ. ಪಬ್ಲಿಕ್ ಟವಿ ಜೊತೆ ಮಾತನಾಡಿದ ಅವರು, ಈ ವಿಚಾರಕ್ಕೆ ಸಂಬಂಧಿಸಿದಂತೆ ನಾನು ಸಿಎಂ ಬಿ.ಎಸ್ ಯಡಿಯೂರಪ್ಪ ಜೊತೆಗೆ ಹಾಗೂ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರ ಜೊತೆಗೆ ಎರಡೆರಡು ಬಾರಿ ಮಾತನಾಡಿದ್ದೇನೆ. ಯಾವುದೇ …

Read More »

ಬೆಳಗಾವಿ -ಇಬ್ಬರು ನಕಲಿ ಪತ್ರಕರ್ತರ ಬಂಧನ…..

ಧಾರವಾಡ ( ಕರ್ನಾಟಕ ವಾರ್ತೆ) ಏ.23: ಇಲ್ಲಿನ ಬೇಲೂರು ಕೈಗಾರಿಕಾಭಿವೃದ್ಧಿ ಪ್ರದೇಶದಲ್ಲಿರುವ ಬಿಎಂಎನ್ ಅಗ್ರೋ ಫುಡ್ಸ್ ಸಂಸ್ಥೆಗೆ ಭೇಟಿ ನೀಡಿ, ಪತ್ರಕರ್ತರು ಎಂದು ಹೇಳಿ ಕೊಂಡು ಬೆದರಿಕೆ ಒಡ್ಡಿ, 25 ಸಾವಿರ ರೂ.ಹಣದ ಬೇಡಿಕೆ ಇಟ್ಟಿದ್ದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಜೆಕೆ 24×7 ನ್ಯೂಸ್ ಚಾನೆಲ್ ವರದಿಗಾರ ಎಂದು ಹೇಳಿಕೊಂಡ ಅನ್ವರ್ ಕೆ.ಜಮಾದಾರ ಹಾಗೂ ಜೆಎಂ ಆರ್ ಚಾನೆಲ್ ವರದಿಗಾರ ಎಂದು ಹೇಳಿಕೊಂಡ ನಿಝಾಮ್ ಅಬ್ದುಲ್ …

Read More »

ಬೆಂಗಳೂರಿನಿಂದ ಉತ್ತರ ಪ್ರದೇಶಕ್ಕೆ ಸೈಕಲ್ ಮೇಲೆ ಹೊರಟ ಕಾರ್ಮಿಕರು

ವಿಜಯಪುರ: ಲಾಕ್‍ಡೌನ್ ನಿಂದಾಗಿ ಉತ್ತರ ಪ್ರದೇಶ ಮೂಲದ ಕಾರ್ಮಿಕರು ಸೈಕಲ್ ಗಳ ಮೇಲೆಯೇ ತಮ್ಮೂರಿಗೆ ಪ್ರಯಾಣ ಬೆಳೆಸಿದ್ದಾರೆ. ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದ 41 ಕಾರ್ಮಿಕರು ನಾಲ್ಕು ದಿನಗಳ ಹಿಂದೆಯೇ ಪ್ರಯಾಣ ಬೆಳೆಸಿದ್ದಾರೆ. ಬುಧವಾರ ರಾತ್ರಿ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ತಲುಪಿದ್ದಾರೆ. ನಾಲ್ಕು ದಿನಗಳಿಂದ ಸೈಕಲ್ ಮೇಲೆ ಬಂದಿದ್ದರಿಂದ ಹೆದ್ದಾರಿಯ ಪಕ್ಕದಲ್ಲಿಯೇ ವಿಶ್ರಾಂತಿ ಪಡೆದುಕೊಂಡಿದ್ದರು. ಕಾರ್ಮಿಕರನ್ನು ಗಮನಿಸಿದ ಸ್ಥಳೀಯರು ಊಟದ ವ್ಯವಸ್ಥೆ ಕಲ್ಪಿಸಿದ್ದಾರೆ. ಲಾಕ್‍ಡೌನ್ ಆದಾಗಿನಿಂದ ಮಾಡಲು ಕೆಲಸವಿಲ್ಲ. …

Read More »

ಧಾರವಾಡ ಜಿಲ್ಲೆಯಲ್ಲಿ ನರೇಗಾ ಚಟುವಟಿಕೆಗಳು ಪ್ರಾರಂಭ…..

ಧಾರವಾಡ: ಎಲ್ಲೆಡೆ ಹರಡುತ್ತಿರುವ ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಲಾಕ್‍ಡೌನ್ ಜಾರಿಯಲ್ಲಿರುವ ಅವಧಿಯಲ್ಲಿ ಗ್ರಾಮೀಣ ಜನರಿಗೆ ಉದ್ಯೋಗ ಸಮಸ್ಯೆಗಳು ಉಂಟಾಗಬಾರದು ಎಂಬ ಮಹತ್ವಾಕಾಂಕ್ಷೆಯೊಂದಿಗೆ, ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಕಾಮಗಾರಿಗಳನ್ನು(ನರೇಗಾ) ಮುಂದುವರೆಸಲು ಕ್ರಮ ಕೈಗೊಳ್ಳಲಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನಿರ್ದೇಶನದ ಮೇರೆಗೆ ಧಾರವಾಡ ಜಿಲ್ಲೆಯಾದ್ಯಂತ ಎಲ್ಲಾ ಗ್ರಾಮಪಂಚಾಯತ್‍ಗಳಲ್ಲಿ ನರೇಗಾ ಚಟುವಟಿಕೆಗಳು ಪ್ರಾರಂಭವಾಗವೆ. ಜಿಲ್ಲೆಯ ಕಲಘಟಗಿ ತಾಲೂಕಿನಲ್ಲಿ ಚಟುವಟಿಕೆಗಳು ಈಗಾಗಲೇ ಪ್ರಾರಂಭವಾಗಿದ್ದು, ದೇವಲಿಂಗಿಕೊಪ್ಪದ ಕೆರೆಗೆ ನೀರಿನ ಕಾಲುವೆ …

Read More »

ಫೇಸ್‍ಬುಕ್ ಮೂಲಕ ಮದ್ಯ ಮಾರಾಟ: ಜಾಹೀರಾತಿಗೆ ಮರುಳಾದ್ರೆ ಪಂಗನಾಮ ಫಿಕ್ಸ್

ರಾಯಚೂರು: ಲಾಕ್‍ಡೌನ್ ಹಿನ್ನೆಲೆ ಮದ್ಯ ಮಾರಾಟಕ್ಕೆ ಸಂಪೂರ್ಣ ಬ್ರೇಕ್ ಬಿದ್ದಿರುವುದು ಎಣ್ಣೆ ಪ್ರಿಯರನ್ನ ಚಡಪಡಿಸುವಂತೆ ಮಾಡಿದೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಕೆಲವರು ಆನ್‍ಲೈನ್ ವಂಚನೆಗೆ ಮುಂದಾಗಿದ್ದಾರೆ. ಎಲ್ಲಿ ಹೇಳಿದ್ರೂ ಮದ್ಯವನ್ನು ಹೋಂ ಡೆಲಿವರಿ ಮಾಡುತ್ತೇವೆ ಅಂತ ಜಾಹೀರಾತು ಹಾಕಿಕೊಂಡಿದ್ದಾರೆ. ಇದನ್ನು ನಂಬಿ ಅವರ ಖಾತೆಗೆ ಹಣ ಹಾಕಿದ್ರೆ ಪಂಗನಾಮ ಗ್ಯಾರಂಟಿ. ರಾಯಚೂರಿನ ಅಮೃತ ವೈನ್‍ಶಾಪ್‍ನಿಂದ ಎಲ್ಲಾ ಬ್ರಾಂಡ್‍ನ ಮದ್ಯ ಹೋಂ ಡೆಲಿವರಿ ಇದೆ. ನಗರದ ಕೆ.ಇ.ಬಿ ಕಾಲೋನಿ, ನಿಜಲಿಂಗಪ್ಪ ಕಾಲೋನಿ …

Read More »