ಮೂಡಲಗಿ: ‘ಬಕ್ರೀದ್ ಹಬ್ಬವನ್ನು ಶಾಂತಿ ಮತ್ತು ಸೌಹಾರ್ದದಿಂದ ಆಚರಿಸಬೇಕು. ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಆಸ್ಪದ ನೀಡಬಾರದು’ ಎಂದು ಮೂಡಲಗಿಯ ಸಿಪಿಐ ಅಬ್ದುಲ್ ವಾಜೀದ್ ಪಟೇಲ್ ಹೇಳಿದರು. ಮೂಡಲಗಿಯ ಪೊಲೀಸ್ ಠಾಣೆಯಲ್ಲಿ ಬಕ್ರೀದ್ ನಿಮಿತ್ತ ಏರ್ಪಡಿಸಿದ್ದ ಶಾಂತಿ ಸಭೆ ಉದ್ಧೇಶಿಸಿ ಮಾತನಾಡಿದ ಅವರು, ಮೂಡಲಗಿಯು ಸಾಮರಸ್ಯಕ್ಕೆ ಹೆಸರಾಗಿದೆ. ಅಂಥ ಹೆಸರಿಗೆ ಚ್ಯುತಿಯಾಗದಂತೆ ಇರಬೇಕು. ಕಾನೂನು ಪಾಲನೆ ಮಾಡದಿರುವ ವ್ಯಕ್ತಿಗಳ ಮೇಲೆ ಕಾನೂನು ಕ್ರಮವನ್ನು ತೆಗೆದುಕೊಳ್ಳಲಾಗುಗುವುದು ಎಂದರು. ಪಿಎಸ್ಐ ಚಂದ್ರಶೇಖರ ಹೆರಕಲ್ …
Read More »ಎಷ್ಟು ದೊಡ್ಡ ರಾಜ್ಯ ಕಟ್ಟಿದ್ರಿ ಅನ್ನೋದು ಮುಖ್ಯ ಅಲ್ಲ, ಯಾವ ಥರ ರಾಜನಾಗಿ ಬಾಳಿದ್ರಿ ಅನ್ನೋದು ಮುಖ್ಯ: ಕಿಚ್ಚ
ಸ್ಯಾಂಡಲ್ವುಡ್ನಲ್ಲಿ ಸದ್ಯ ಕಾಂಟ್ರವರ್ಸಿಗಳೇ ಮೇಳೈಸುತ್ತಿವೆ. ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಅವರ ವಿಚ್ಛೇದನ ಸುದ್ದಿಯಿಂದ ಶುರುವಾದ ಈ ವಿವಾದದ ಬಿಸಿಗಾಳಿ, ಅದಾದ ಬಳಿಕ ಯುವ ರಾಜ್ಕುಮಾರ್ ಮತ್ತು ಶ್ರೀದೇವಿ ಅವರ ಡಿವೋರ್ಸ್ ವಿಚಾರವೂ ಮುನ್ನೆಲೆಗೆ ಬಂದಿತು. ದೊಡ್ಮನೆಯ ದಂಪತಿ ನಡುವೆಯೂ ಭಿನ್ನಾಭಿಪ್ರಾಯಗಳಿವೆಯೇ? ಎಂಬ ಅನುಮಾನವೂ ಅಭಿಮಾನಿ ವಲಯದಲ್ಲೂ ಬಿಸಿ ಬಿಸಿ ಚರ್ಚೆಯಾಯ್ತು. ಇವೆರಡರ ನಡುವೆ ನಟ ದರ್ಶನ್ ಮತ್ತವರ ಗ್ಯಾಂಗ್ನಿಂದ ನಡೆ ಕೊಲೆ ಇವೆಲ್ಲವನ್ನೂ ಮೀರಿಸಿತು. ಹೀಗಿರುವಾಗಲೇ ಈ …
Read More »ಸಿನಿಮಾ ಮಾಡ್ತೀನಿ ಅಂತ ಕೋಟಿ ಕೋಟಿ ಸಂಭಾವನೆ ಪಡೆದ ʼಡೆವಿಲ್
ಪವಿತ್ರ ಗೌಡ ಅವರಿಗೆ ಅಶ್ಲೀಲ ಸಂದೇಶ ಕಳುಹಿಸಿದ ಎನ್ನುವ ಕಾರಣಕ್ಕೆ ರೇಣುಕಾಸ್ವಾಮಿ ಎಂಬುವರ ಹತ್ಯೆ ಮಾಡಲಾಗಿದೆ. ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಒಟ್ಟು 14 ಜನರ ಬಂಧನವಾಗಿದೆ. ನಟ ಅರೆಸ್ಟ್ ಆದ ಬೆನ್ನಲ್ಲೆ, ಡೇವಿಲ್ ಸಿನಿಮಾ ನಿರ್ಮಾಪಕರು ಸೇರಿದಂತೆ, ಅವರ ಜೊತೆ ಸಿನಿಮಾ ಮಾಡಬೇಕು ಅಂದುಕೊಂಡು ಕೋಟಿ ಕೋಟಿ ಹಣ ಹಾಕಿರುವ ನಿರ್ಮಾಪಕರು ಕಂಗಾಲಾಗಿದ್ದಾರೆ. ಅದಕ್ಕೆ ಕಾರಣ ಕೊಲೆ ಪ್ರಕರಣದಲ್ಲಿ ಅಂದರ್ ಆಗಿರುವ ದರ್ಶನ್ಗೆ ಬೆಲ್ ಸಿಗೋದು ಡೌಟ್ ಎನ್ನಲಾಗಿದೆ.. …
Read More »ಕೊಣ್ಣೂರ ಪಟ್ಟಣದ ಆದಿಶಕ್ತಿ ಶ್ರೀ ದುರ್ಗಾದೇವಿ ಜಾತ್ರಾ ಮಹೋತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ಯುವ ನಾಯಕರಾದ ಸಂತೋಷ್ ಜಾರಕಿಹೊಳಿ
ಗೋಕಾಕ ತಾಲೂಕಿನ ಕೊಣ್ಣೂರ ಪಟ್ಟಣದ ಆದಿಶಕ್ತಿ ಶ್ರೀ ದುರ್ಗಾದೇವಿ ಜಾತ್ರಾ ಮಹೋತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ಯುವ ನಾಯಕರಾದ ಸಂತೋಷ್ ಜಾರಕಿಹೊಳಿ ಅವರು ಭಾಗವಹಿಸಿ, ವಿಶೇಷ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದರು. ಕೊಣ್ಣೂರ ಪಟ್ಟಣದಲ್ಲಿ 5 ವರ್ಷಕ್ಕೊಮ್ಮೆ ಅದ್ದೂರಿಯಾಗಿ ನಡೆಯುವ ಶ್ರೀ ದುರ್ಗಾದೇವಿ ಜಾತ್ರಾ ಮಹೋತ್ಸವದಲ್ಲಿ ವಾದ್ಯಮೇಳು ಗಳು ಜನತೆಯ ಗಮನ ಸೆಳೆದವು. ಊರಿನ ಹಿರಿಯರು ಯುವಕರು ಸೇರಿ ಯುವ ನಾಯಕರಾದ ಸಂತೋಷ್ ಜಾರಕಿಹೊಳಿ ಅವರನ್ನು ಅದ್ದೂರಿಯಾಗಿ ಬರಮಾಡಿಕೊಂಡರು. …
Read More »ರೇಣುಕಸ್ವಾಮಿ ಕೊಲೆ ಪ್ರಕರಣ: ತನಿಖಾಧಿಕಾರಿ ದಿಢೀರ್ ವರ್ಗಾವಣೆ
ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದ ತನಿಖಾಧಿಕಾರಿಯಾದ ಕಾಮಾಕ್ಷಿಪಾಳ್ಯ ಇನ್ಸ್ಪೆಕ್ಟರ್ ಗಿರೀಶ್ ನಾಯ್ಕ್ ಅವರನ್ನು ದಿಢೀರ್ ವರ್ಗಾವಣೆ ಮಾಡಲಾಗಿದೆ. ಹೀಗಾಗಿ, ಪ್ರಕರಣದ ತನಿಖೆ ಹೊಣೆಯನ್ನು ವಿಜಯನಗರ ಉಪವಿಭಾಗದ ಎಸಿಪಿ ಚಂದನ್ ವಹಿಸಿಕೊಂಡಿದ್ದಾರೆ. ವರ್ಗಾವಣೆ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಅಧಿಕಾರಿಯೊಬ್ಬರು, ‘ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಯ ಇನ್ಸ್ಪೆಕ್ಟರ್ ಆಗಿದ್ದ ಗಿರೀಶ್ ಅವರನ್ನು ಚುನಾವಣೆ ನಿಮಿತ್ತ ಕಾಮಾಕ್ಷಿಪಾಳ್ಯ ಠಾಣೆಗೆ ತಾತ್ಕಾಲಿಕವಾಗಿ ವರ್ಗಾಯಿಸಲಾ ಗಿತ್ತು. ಇದೀಗ, ಅವರನ್ನು ಪುನಃ ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಗೆ ವರ್ಗಾಯಿಸಲಾಗಿದೆ. ಇದು, …
Read More »ಚನ್ನಪಟ್ಟಣದಿಂದ ದರ್ಶನ್ ಕಣಕ್ಕಿಳಿಸಲು ಪ್ಲಾನ್ ಮಾಡಿದ್ದ ‘ಡಿಕೆ ಬ್ರದರ್ಸ್;ಸಿಪಿ ಯೋಗೇಶ್ವರ್
ಬೆಂಗಳೂರು : ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಅಚ್ಚರಿ ಅಭ್ಯರ್ಥಿ ಹಾಕುತ್ತೇವೆ ಎಂದು ಡಿ.ಕೆ.ಸುರೇಶ್ ಹೇಳಿದ್ದರು. ಆದರೆ ಆ ಅಚ್ಚರಿ ಅಭ್ಯರ್ಥಿ ಈಗ ಜೈಲುಪಾಲಾಗಿದ್ದಾರೆ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಈ ಒಂದು ಹೇಳಿಕೆ ನೋಡಿದರೆ ದರ್ಶನ್ ಅವರೇ ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿಯಾಗಿದ್ದಾರೆ ಎಂಬ ಅನುಮಾನಗಳು ಈಗ ದಟ್ಟವಾಗಿವೆ. ಹೌದು ಈ ಹಿಂದೆ ಮಾಜಿ ಸಂಸದ ಡಿಕೆ ಸುರೇಶ ರವರು ಚನ್ನಪಟ್ಟಣ ಕ್ಷೇತ್ರದಿಂದ ಅಚ್ಚರಿಯ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ …
Read More »ಕೇಂದ್ರ ವಿಮಾನಯಾನ ಸಚಿವರಾಗಿ ಇಂದು ಅಧಿಕಾರ ವಹಿಸಿಕೊಂಡ ರಾಮ್ ಮೋಹನ್ ನಾಯ್ಡು.. 21 ಬಾರಿ ರಾಮನಾಮ ಬರದ ನಂತರ ಅಧಿಕಾರ ಸ್ವೀಕರಿಸಿದ್ದಾರೆ.
ನವದೆಹಲಿ : ಓಂ ಶ್ರೀ ರಾಮ್.. ಓಂ ಶ್ರೀ ರಾಮ್.. ಓಂ ಶ್ರೀ ರಾಮ್.. ಹೀಗೆ ರಾಮನಾಮ ಬರೆದಿದ್ದು ಕೇಂದ್ರ ಮಂತ್ರಿ ರಾಮ್ ಮೋಹನ ನಾಯ್ಡು ಕಿಂಜರಪು. ಕೇಂದ್ರ ವಿಮಾನಯಾನ ಸಚಿವರಾಗಿ ಇಂದು ಅಧಿಕಾರ ವಹಿಸಿಕೊಂಡ ರಾಮ್ ಮೋಹನ್ ನಾಯ್ಡು.. 21 ಬಾರಿ ರಾಮನಾಮ ಬರದ ನಂತರ ಅಧಿಕಾರ ಸ್ವೀಕರಿಸಿದ್ದಾರೆ. ತಾಯಿಯ ಆದೇಶ ಪಾಲಿಸಿರುವ ಸಚಿವ ನಾಯ್ಡು ಅಧಿಕಾರ ಸ್ವೀಕರಿಸುವ ಮುನ್ನ ರಾಮನಾಮ ಬರೆದು ಭಕ್ತಿ …
Read More »ಬೆಂಗಳೂರಿನ ಮೊದಲ ಡಬಲ್ ಡೆಕ್ಕರ್ ಫ್ಲೈಓವರ್ ನಿರ್ಮಾಣ ಪೂರ್ಣ
ಬೆಂಗಳೂರು, ಜೂನ್ 13: ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ಹಳದಿ ಲೈನ್ (RV ರಸ್ತೆ – ಬೊಮ್ಮಸಂದ್ರ) ಉದ್ದಕ್ಕೂ ರಾಗಿಗುಡ್ಡದಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್ (CSB) ವರೆಗಿನ 3.3 ಕಿಮೀ ರಸ್ತೆ ಮೇಲ್ಸೇತುವೆ ಪೂರ್ಣಗೊಂಡಿದೆ ಎಂದು ಘೋಷಿಸಿದೆ. ಹಲವಾರು ವಿಳಂಬಗಳ ನಂತರ ನಗರದ ಮೊದಲ ಡಬಲ್ ಡೆಕ್ಕರ್ ಫ್ಲೈಓವರ್ ಅಂತಿಮವಾಗಿ ಸಿದ್ಧವಾಗಿದೆ. ಜೂನ್ 15 ರಿಂದ ರಾಗಿಗುಡ್ಡದಿಂದ ಸಿಎಸ್ಬಿವರೆಗಿನ ಮೇಲ್ಸೇತುವೆಯಲ್ಲಿ ಅಧಿಕಾರಿಗಳ ಅಂತಿಮ ಪರಿಶೀಲನೆಯ ನಂತರ ವಾಹನಗಳನ್ನು …
Read More »ಬಗೆದಷ್ಟು ಬಯಲಾಗುತ್ತಿದೆ ದರ್ಶನ್ ಕರ್ಮಕಾಂಡ
ನಟ ದರ್ಶನ್ ರ ಕರ್ಮಕಾಂಡಗಳು ಬಗೆದಷ್ಟು ಬಯಲಾಗುತ್ತಿದೆ. ಹೊರಗಿನವರಿಗೆ ಮಾತ್ರವಲ್ಲ ಸ್ವತಃದವರಿಗೂ ದರ್ಶನ್ ವಿಲನ್ ಆಗಿಯೇ ಇದ್ದರು ಅನ್ನೋದು ಇದೀಗ ಬಯಲಾಗಿದೆ. ಸ್ವತಃ ತಾನು ಹುಟ್ಟಿದ ತಾಯಿಯ ತವರು ಮನೆಯಲ್ಲೇ ನೆಲಸಮಗೊಳಿಸಿ ತಮ್ಮ ಸೋದರ ಮಾವನವರನ್ನು ಬೀದಿಪಾಲು ಮಾಡಿದ ಪೈಶಾಚಿಕ ಕೃತ್ಯ ಕೊಡಗಿನಲ್ಲಿ ನಡೆದಿದ್ದು, ಈ ಬಗ್ಗೆ ಸ್ವತಃ ಅವರ ಸೋದರ ಮಾವ ಅಳಲು ತೋಡಿಕೊಂಡಿದ್ದಾರೆ. ದರ್ಶನ್ ಹುಟ್ಟೂರು ತನ್ನ ತಾಯಿಯ ತವರು ಮನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ. ನಟ …
Read More »ರಾಜ್ಯದ ಜನತೆಗೆ ಗುಡ್ ನ್ಯೂಸ್: ‘ಜನತಾದರ್ಶನ’ಕ್ಕೆ ಮರು ಚಾಲನೆ
ಬೆಂಗಳೂರು: ಸಾರ್ವಜನಿಕರ ಅಹವಾಲು, ಸಮಸ್ಯೆಗಳನ್ನು ಜಿಲ್ಲಾ ಮಟ್ಟದಲ್ಲೇ ಆಲಿಸಿ ಪರಿಹಾರ ಸೂಚಿಸಲು ಜನತಾ ದರ್ಶನಕ್ಕೆ ಮರು ಚಾಲನೆ ನೀಡಲು ಸರ್ಕಾರ ನಿರ್ಧರಿಸಿದೆ. ಚುನಾವಣೆ ನೀತಿ ಸಂಹಿತೆ ತೆರವಾದ ಹಿನ್ನೆಲೆಯಲ್ಲಿ ಜನತಾ ದರ್ಶನ ಮರು ಆರಂಭಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಜಿಲ್ಲಾಮಟ್ಟದಲ್ಲೇ ಜನರ ಅಹವಾಲು ಆಲಿಸಿ ಪರಿಹಾರ ಸೂಚಿಸಲು ಜನತಾದರ್ಶನಕ್ಕೆ ಮರು ಚಾಲನೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎಂದು ಸಂಪುಟ ಸಭೆಯ …
Read More »
Laxmi News 24×7