Breaking News

Uncategorized

ಇಬ್ಬರು ಯುವಕರ ಮೇಲೆ ಸುಳ್ಳು ಡ್ರಗ್ಸ್ ಕೇಸ್: ಬೆಂಗಳೂರಿನ 4 ಪೊಲೀಸ್ ಅಧಿಕಾರಿಗಳ ಅಮಾನತು!

ಇಬ್ಬರ ಯುವಕರ ವಿರುದ್ಧ ಸುಳ್ಳು ಡ್ರಗ್ಸ್ ಪ್ರಕರಣ ದಾಖಲಿಸಿದ್ದ ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣೆಯ ನಾಲ್ವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಬನಶಂಕರಿ ಪೊಲೀಸ್ ಠಾಣೆಯ ಸಬ್ ಇನ್ ಸ್ಪೆಕ್ಟರ್ ಶ್ರೀಧರ್ ಗೌರಿ, ಸಹಾಯಕ ಸಬ್ ಇನ್ ಸ್ಪೆಕ್ಟರ್ ಎಸ್.ಕೆ.ರಾಜು ಮತ್ತು ಕಾನ್ ಸ್ಟೇಬಲ್ ಗಳಾದ ಸತೀಶ್ ಬಗಾಲಿ ಹಾಗೂ ತಿಮ್ಮಣ್ಣ ಪೂಜಾರಿ ಅವರನ್ನು ಅಮಾನತು ಮಾಡಲಾಗಿದೆ. ಆಗಸ್ಟ್ 9ರಂದು ಕದಿರೇನಹಳ್ಳಿಯ ಸೀಮೆಂಟ್ ರಸ್ತೆಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಇವರ …

Read More »

ಆರ್‌ಟಿಪಿಎಸ್, ವೈಟಿಪಿಎಸ್, ಘಟಕಗಳು ತಾತ್ಕಾಲಿಕ ಬಂದ್

ಶಕ್ತಿನಗರ (ರಾಯಚೂರು ಜಿಲ್ಲೆ): ರಾಜ್ಯದಲ್ಲಿ ಉತ್ತಮವಾಗಿ ಮಳೆಯಾಗಿದ್ದರಿಂದ ಜಲವಿದ್ಯುತ್‌ ಉತ್ಪಾದನೆ ಪ್ರಮಾಣ ಹೆಚ್ಚಿಸಿದ ಪರಿಣಾಮ ರಾಯಚೂರು ಶಾಖೋತ್ಪನ್ನ ವಿದ್ಯುತ್ ಸ್ಥಾವರದ (ಆರ್‌ಟಿಪಿಎಸ್) ಆರು ಘಟಕಗಳಲ್ಲಿ ಹಾಗೂ ಯರಮರಸ್ ಶಾಖೋತ್ಪನ್ನ ವಿದ್ಯುತ್ ಸ್ಥಾವರದ (ವೈಟಿಪಿಎಸ್) ಎರಡು ಘಟಕಗಳಲ್ಲಿ ತಾತ್ಕಲಿಕವಾಗಿ ವಿದ್ಯುತ್‌ ಉತ್ಪಾದನೆ ನಿಲ್ಲಿಸಲಾಗಿದೆ.   ಬಹುತೇಕ ಜಲಾಶಯಗಳು ಭರ್ತಿ ಹಂತಕ್ಕೆ ತಲುಪಿದ್ದರಿಂದ ಜಲವಿದ್ಯುತ್ ಕೇಂದ್ರಗಳು ಕಾರ್ಯಾರಂಭಿಸಿವೆ. ಶಾಖೋತ್ಪನ್ನ ಘಟಕಗಳ ಉತ್ಪಾದನೆ ತಾತ್ಕಲಿಕವಾಗಿ ಬಂದ್ ಮಾಡಲು ಕರ್ನಾಟಕ ವಿದ್ಯುತ್ ನಿಗಮ (ಕೆಪಿಸಿ) ಮುಂದಾಗಿದೆ. …

Read More »

ಶಾಲೆ ಅಭಿವೃದ್ಧಿಗೆ ಶ್ರಮ ಅಗತ್ಯ: ಶರೀಫ್‌ ಮೊಕಾಶಿ

ಬೈಲಹೊಂಗಲ: ‘ಮೌಲಾನಾ ಅಬುಲ್‍ ಕಲಾಂ ಆಝಾದ್‌ ಹೈಸ್ಕೂಲ್ ಉಳಿಸಿ, ಬೆಳೆಸುವಲ್ಲಿ ಹಳೆಯ ವಿದ್ಯಾರ್ಥಿಗಳ ಸಂಘ ಅತ್ಯುತ್ತಮ ಕಾರ್ಯ ಮಾಡುತ್ತಿರುವುದು ಸಂತಸ ತಂದಿದೆ’ ಎಂದು ಕರ್ನಾಟಕ ಉರ್ದು ಅಕಾಡೆಮಿ ನಿರ್ದೇಶಕ ಶರೀಫ್‌ ಮೊಕಾಶಿ ಹೇಳಿದರು. ಪಟ್ಟಣದ ಈದ್ಗಾ ಮೈದಾನದಲ್ಲಿರುವ ಮೌಲಾನಾ ಅಬುಲ್‍ ಕಲಾಂ ಆಝಾದ್ ಪ್ರೌಢಶಾಲೆ ಹಳೇ ವಿದ್ಯಾರ್ಥಿಗಳ ಸಂಘದ ವತಿಯಿಂದ ನಡೆದ ವಾರ್ಷಿಕ ಸಭೆ ಹಾಗೂ ಮುಸ್ಲಿಂ ಸಮಾಜದ ಅಭಿಪ್ರಾಯ ಸಂಗ್ರಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.   ಸಮಿತಿಯವರ ವೈಯಕ್ತಿಕ …

Read More »

ನನ್ನ ದಾಖಲೆ ಸೇಫ್​. ಅದನ್ನು ಮುರಿಯಲು ಯಾರಿಂದಲೂ ಸಾಧ್ಯವಿಲ್ಲ ಎಂದ ಮುತ್ತಯ್ಯ ಮುರಳೀಧರನ್!

ನನ್ನ ದಾಖಲೆ ಸೇಫ್​. ಅದನ್ನು ಮುರಿಯಲು ಯಾರಿಂದಲೂ ಸಾಧ್ಯವಿಲ್ಲ ಎಂದ ಮುತ್ತಯ್ಯ ಮುರಳೀಧರನ್! ನವದೆಹಲಿ: ಶ್ರೀಲಂಕಾದ ಲೆಜೆಂಡರಿ ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್, ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿ ಮುಂದುವರಿದಿದ್ದಾರೆ. ಈ ಆಫ್ ಸ್ಪಿನ್ನರ್​ ಟೆಸ್ಟ್​ ಸ್ವರೂಪದಲ್ಲಿ 800 ವಿಕೆಟ್ ಪಡೆದಿರುವುದು ವಿಶ್ವದಾಖಲೆಯಾಗಿದೆ. ಈ ದಾಖಲೆಯನ್ನು ಯಾವುದೇ ಬೌಲರ್​ನಿಂದ ಮುರಿಯಲು ಸಾಧ್ಯವಿಲ್ಲ ಎಂದಿರುವ ಮುರಳೀಧರನ್​, ಟೆಸ್ಟ್ ಕ್ರಿಕೆಟ್ ಭವಿಷ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದರು.   ಇತ್ತೀಚೆಗೆ ಮಾಧ್ಯಮ …

Read More »

ಗಂಗಾ ಕಲ್ಯಾಣ’ ಯೋಜನೆಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಸಿಹಿಸುದ್ದಿ ನೀಡಿದ್ದು, ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಗಂಗಾಕಲ್ಯಾಣ ನೀರಾವರಿ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಸೆ.15 ರವರೆಗೆ ಅವಧಿ ವಿಸ್ತರಣೆ ಮಾಡಲಾಗಿದೆ.   ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮಗಳ ವ್ಯಾಪ್ತಿಗೆ …

Read More »

ಗಣೇಶನ ವಿಗ್ರಹಕ್ಕೆ ಪಂಜುರ್ಲಿ ದೈವದ ಲುಕ್.! ಕರಾವಳಿಯಲ್ಲಿ ಆಕ್ರೋಶ

ಮುಂಬಯಿ: ರಿಷಬ್‌ ಶೆಟ್ಟಿ (Rishab Shetty) ಅವರ ʼಕಾಂತಾರʼ (Kantara) ಸಿನಿಮಾ ಬಂದ ಬಳಿಕ ತುಳುನಾಡಿನ ದೈವಗಳ ಮೇಲಿನ ನಂಬಿಕೆ ಎಲ್ಲೆಡೆ ಹಬ್ಬಿದೆ. ಆದರೆ ʼಕಾಂತಾರʼ ರಿಲೀಸ್ ಬಳಿಕ ದೈವಗಳ ವೇಷ -ಭೂಷಣ ತೊಟ್ಟು ದೈವಗಳ ಆರಾಧಕರ ಮನಸ್ಸಿಗೆ ಧಕ್ಕೆ ಆಗುವ ವಿಚಾರಗಳು ಕೂಡ ನಡೆದಿದೆ. ಕರಾವಳಿಯಲ್ಲಿ ದೈವಗಳ ಆರಾಧನೆ ಇತ್ತೀಚೆಗಿನ ವರ್ಷಗಳಲ್ಲಿ ಆಚರಿಸಿಕೊಂಡು ಬಂದಿರುವಂಥದ್ದಲ್ಲ, ಸಾವಿರಾರು ವರ್ಷಗಳಿಂದಲೂ ದೈವ -ದೇವರುಗಳ ಚಾಕರಿಯನ್ನು ಮಾಡುತ್ತಾ ಬಂದಿರುವ ಅನೇಕ ಕುಟುಂಬಗಳು ನಮ್ಮಲಿದೆ. ದೈವಗಳ …

Read More »

ದರ್ಶನ್‌ ತಪ್ಪು ಮಾಡಿ ಜೈಲಿಗೆ ಹೋಗಿದ್ದಾರೆ : ಜಮೀರ್

ಹಾವೇರಿ,ಸೆ.3- ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ತಪ್ಪು ಮಾಡಿದ ಕಾರಣಕ್ಕಾಗಿ ಜೈಲಿಗೆ ಹೋಗಿದ್ದಾರೆ. ಇದರಲ್ಲಿ ನನ್ನ ಹೆಸರನ್ನು ಏಕೆ ಥಳಕು ಹಾಕಲಾಗುತ್ತಿದೆ ಎಂದು ವಸತಿ ಸಚಿವ ಜಮೀರ್‌ ಅಹಮದ್‌ಖಾನ್‌ ಆಕ್ಷೇಪ ವ್ಯಕ್ತಪಡಿಸಿದರು.   ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದರ್ಶನ್‌ ನನ್ನ ಆತೀಯ ಸ್ನೇಹಿತರು. ಅದರಲ್ಲಿ ಎರಡು ಮಾತಿಲ್ಲ. ಆದರೆ ಕಾನೂನು ಪ್ರಕಾರ, ಏನು ನಡೆಯಬೇಕೋ ಅದೇ ನಡೆಯುತ್ತದೆ. ಮಾಧ್ಯಮಗಳು ಉದ್ದೇಶಪೂರಕವಾಗಿ ನನ್ನ ಹೆಸರನ್ನು ಪ್ರಸ್ತಾಪ ಮಾಡುತ್ತಿದೆ. ಇದಕ್ಕೂ, ನನಗೂ …

Read More »

ಗುದದ್ವಾರದಲ್ಲಿ 1.19 ಕೋಟಿ ರೂ. ಮೌಲ್ಯದ ಚಿನ್ನ ಗುಪ್ತವಾಗಿ ಸಾಗಿಸುತ್ತಿದ್ದ ಶ್ರೀಲಂಕಾ ಪ್ರಜೆ ಅರೆಸ್ಟ್

ಬೆಂಗಳೂರು: 1.19 ಕೋಟಿ ರೂಪಾಯಿ ಮೌಲ್ಯದ ಚಿನ್ನವನ್ನು ಗುದದ್ವಾರದಲ್ಲಿಟ್ಟುಕೊಂಡು ಕಳ್ಳ ಸಾಗಣೆ ಮಾಡುತ್ತಿದ್ದ ಶ್ರೀಲಂಕಾ ಪ್ರಜೆಯನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಪೇಸ್ಟ್ ಮಾದರಿಯ ಚಿನ್ನವನ್ನು ಮಾತ್ರೆಗಳು ಹಾಗೂ ಚಿನ್ನದ ಬಿಸ್ಕತ್ ಗಳನ್ನು ಬಚ್ಚಿಟ್ಟುಕೊಂಡು ಕಳ್ಳ ಸಾಗಣೆ ಮಾಡಲಾಗುತ್ತಿತ್ತು. ಬಂಧಿತ ಶ್ರೀಲಂಕಾ ಪ್ರಜೆಯಿಂದ 1.19 ಕೋಟಿ ರೂಪಾಯಿ ಮೌಲ್ಯದ 1 ಕೆಜಿ 670 ಗ್ರಾಂ ತೂಕದ ಚಿನ್ನ ಜಪ್ತಿ ಮಾಡಲಾಗಿದೆ. ಆಗಸ್ಟ್ 31 ರಂದು ರಾತ್ರಿ ಶ್ರೀಲಂಕಾದ …

Read More »

ಡಿಕೆಶಿ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್: ನಾಳೆ ಹೈಕೋರ್ಟ್ ನಿಂದ CBI ತನಿಖೆ ಕುರಿತ ತೀರ್ಪು ಪ್ರಕಟ

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ ಅನ್ನು ಸಿಬಿಐಗೆ ಕೊಟ್ಟಿದ್ದನ್ನು ಹಿಂಪಡೆದ ಸರ್ಕಾರದ ನಿರ್ಧಾರ ಬಗ್ಗೆ ಹೈಕೋರ್ಟ್ ನಾಳೆ ತೀರ್ಪು ಪ್ರಕಟಿಸಲಿದೆ. ಈ ಮೂಲಕ ನಾಳೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ಸಿಬಿಐ ತನಿಖೆಯ ಭವಿಷ್ಯ ನಿರ್ಧಾರವಾಗಲಿದೆ.   ರಾಜ್ಯ ಸರ್ಕಾರ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ …

Read More »

‘DYSP’ ಎಂ.ಕೆ ಗಣಪತಿ ಆತ್ಮಹತ್ಯೆ ಕೇಸ್ : ಇಂಧನ ಸಚಿವ ಕೆಜೆ ಜಾರ್ಜ್ ಗೆ ಬಿಗ್ ರಿಲೀಫ್ ನೀಡಿದ ಸುಪ್ರೀಂ ಕೋರ್ಟ್

ಬೆಂಗಳೂರು : ಡಿವೈಎಸ್ಪಿ ಎಂ.ಕೆ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂಧನ ಸಚಿವ ಕೆಜೆ ಜಾರ್ಜ್ ಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೈ ಕೋರ್ಟ್ ಆದೇಶವನ್ನು ಎತ್ತಿ ಹಿಡಿದಿದೆ. ಹೌದು ಡಿವೈಎಸ್ಪಿ ಎಂ ಕೆ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಪ್ರಕರಣದಲ್ಲಿ ಕೆಜೆ ಜಾರ್ಜ್ ಅವರ ಪಾತ್ರ ಇಲ್ಲ ಎಂದು ಆದೇಶ ನೀಡಿದ್ದು, ಹೈಕೋರ್ಟ್ ಆದೇಶದ ವಿರುದ್ಧ ಎಂ ಕೆ ಗಣಪತಿ ಅವರ …

Read More »