Breaking News

Uncategorized

ರಾಜ್ಯದ ಎಲ್ಲಾ ಶಾಲೆಗಳು ಮೇ. 29 ರಿಂದ ಪುನರಾರಂಭ : `ದಸರಾ’ ಸೇರಿ ಒಟ್ಟು 121 ದಿನ ರಜೆ!

ಬೆಂಗಳೂರು : ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಪ್ರೌಢ ಶಾಲೆಗಳಿಗೆ 2024-25ನೇ ಸಾಲಿನ ವಾರ್ಷಿಕ ಶೈಕ್ಷಣಿಕ ವೇಳಾಪಟ್ಟಿ ಪ್ರಕಟವಾಗಿದ್ದು, ಮೇ. 29 ರಿಂದ ಶಾಲೆಗಳು ಪುನರಾರಂಭವಾಗಲಿವೆ. ಈ ಶೈಕ್ಷಣಿಕ ವರ್ಷದಲ್ಲಿ 18 ದಿನ ದಸರಾ ರಜೆ, 48 ದಿನ ಬೇಸಿಗೆ ರಜೆ, 244 ದಿನ ಶಾಲಾ ಕರ್ತವ್ಯದ ದಿನಗಳು ಎಂದು ನಿಗದಿ ಪಡಿಸಲಾಗಿದೆ. ಮಕ್ಕಳು ಮತ್ತು ಶಿಕ್ಷಕರಿಗೆ 121 ದಿನಗಳ ಒಟ್ಟಾರೆ ರಜೆ ಸಿಗಲಿದೆ. …

Read More »

ಲಂಚ ಪಡೆಯುವಾಗ ಬಲೆಗೆ ಬಿದ್ದ ಶಿಕ್ಷಣಾಧಿಕಾರಿಗೆ ಒಂದು ವರ್ಷ ಜೈಲು ಶಿಕ್ಷೆ, 10 ಸಾವಿರ ರೂ. ದಂಡ

ಯಾದಗಿರಿ: ಲಂಚ ಪಡೆಯುವಾಗ ಲೋಕಾಯುಕ್ತ ಬಲಗೆ ಬಿದ್ದಿದ್ದ ಶಿಕ್ಷಣ ಇಲಾಖೆ ಅಧಿಕಾರಿಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಯಾದಗಿರಿ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಯ್ಯ ಬಸವರಾಜ ಇನಾಮಾದಾರ ಅವರು ಶಿಕ್ಷೆಗೆ ಒಳಗಾದವರು. ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದರು. ವಿಚಾರಣೆ ನಡೆಸಿದ ವಿಶೇಷ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಎ.ಸ್ ರೇಖಾ ಅವರು ಶಿಕ್ಷಣಾಧಿಕಾರಿ ವೆಂಕಯ್ಯರಿಗೆ ಒಂದು ವರ್ಷ ಶಿಕ್ಷೆ ಮತ್ತು 10 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದ್ದಾರೆ.

Read More »

ಪೋಕ್ಸೊ ಪ್ರಕರಣ: ತಲೆಮರೆಸಿಕೊಂಡಿದ್ದ ಶಿಕ್ಷಕ ಸೆರೆ

ಮೂಡುಬಿದಿರೆ: ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಿ ಪೋಕ್ಸೊ ಪ್ರಕರಣ ಎದುರಿಸುತ್ತಾ ತಲೆಮರೆಸಿಕೊಂಡಿದ್ದ ಆರೋಪಿ ಕಲ್ಲಮುಂಡ್ಕೂರು ಪ್ರೌಢಶಾಲೆಯ ಶಿಕ್ಷಕ ಗುರು ಎಂ.ಪಿ.ಯನ್ನು ಗುರುವಾರ ರಾತ್ರಿ ಪೊಲೀಸರು ಬಂಧಿಸಿದ್ದಾರೆ. ಪೋಕ್ಸೊ ಪ್ರಕರಣದಿಂದಾಗಿ ಶಾಲೆಯಿಂದ ಅಮಾನತುಗೊಂಡಿದ್ದ ಆರೋಪಿ ಗುರು ಇತ್ತೀಚೆಗೆ ಜಿಲ್ಲಾ ಸೆಶನ್ಸ್‌ ಕೋರ್ಟ್‌ನಲ್ಲಿ ಸಲ್ಲಿಸಿದ್ದ ನಿರೀಕ್ಷಣ ಜಾಮೀನು ಅರ್ಜಿ ತಿರಸ್ಕೃತಗೊಂಡಿತ್ತು. ಶಾಲೆಯ ಕೆಲವು ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಶಿಕ್ಷಕ ಗುರು ವಿರುದ್ಧ ಸಂತ್ರಸ್ತ ಮಕ್ಕಳು, ಅವರ ಹೆತ್ತವರು ಮತ್ತು …

Read More »

₹9.50 ಲಕ್ಷ ಮೌಲ್ಯದ ಚಿನ್ನಾಭರಣ ವಶ, ಆರೋಪಿ ಬಂಧನ

ಹುಬ್ಬಳ್ಳಿ: ಗೋಕುಲ ಬಸ್‌ ನಿಲ್ದಾಣದಲ್ಲಿ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್‌ನಲ್ಲಿದ್ದ ಚಿನ್ನಾಭರಣ ಕಳವು ಮಾಡಿದ್ದ ಆರೋಪಿ ಮಹಿಳೆಯನ್ನು ಗೋಕುಲ ಠಾಣೆ ಪೊಲೀಸರು ಬಂಧಿಸಿ, ₹9.50 ಲಕ್ಷ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ತಮಿಳುನಾಡಿನ ಕುಪ್ಪಂ ನಿವಾಸಿ ಸಂಧ್ಯಾ ಬಂಧಿತ ಆರೋಪಿ.ಬಸ್‌ ನಿಲ್ದಾಣದ ಪ್ಲಾಟ್‌ಫಾರ್ಮ್‌ 4ರ ಬಳಿ ಜನವರಿ 5ರಂದು ಮಹಿಳೆ ಬಸ್‌ ಹತ್ತುವಾಗ, ಆರೋಪಿ ಅವರ ವ್ಯಾನಿಟಿ ಬ್ಯಾಗ್‌ನಲ್ಲಿದ್ದ 139 ಗ್ರಾಂ ಚಿನ್ನಾಭರಣ ಕಳವು ಮಾಡಿದ್ದಳು. ಗೋಕುಲ ರೋಡ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. …

Read More »

ಬಡವರ ಪರವಾಗಿರುವುದು ಕಾಂಗ್ರೆಸ್‌ ಮಾತ್ರ: ಪ್ರಿಯಂಕಾ ಜಾರಕಿಹೊಳಿ

ಬಡವರ ಪರವಾಗಿರುವುದು ಕಾಂಗ್ರೆಸ್‌ ಮಾತ್ರ: ಪ್ರಿಯಂಕಾ ಜಾರಕಿಹೊಳಿ ಹುಕ್ಕೇರಿ: ‘ಬಡವರು ಹಾಗೂ ಜನಸಾಮಾನ್ಯರ ಪರ ಕೆಲಸ ಮಾಡಿ ಅವರ ಕುಂದು ಕೊರತೆಗಳಿಗೆ ಸ್ಪಂದಿಸುವುದು ಕಾಂಗ್ರೆಸ್ ಪಕ್ಷ. ಹೀಗಾಗಿ ಮೇ 7ರಂದು ನಡೆಯಲಿರುವ ಚಿಕ್ಕೋಡಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ನನ್ನನ್ನು ಆಶೀರ್ವದಿಸಬೇಕು’ ಎಂದು ಚಿಕ್ಕೋಡಿ ಲೋಕಸಭಾ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಮತದಾರರಲ್ಲಿ ಮನವಿ ಮಾಡಿದರು. ಹುಕ್ಕೇರಿ ವಿಧಾನಸಭಾ ಕ್ಷೇತ್ರದ ಬೆನಕನಹೊಳಿ, ಕೇರಿಮಾಸ್ತಿಹೊಳಿ, ನರಸಿಂಗಪೂರ, ಮಜತಿ, ಮಾನಗಾಂವ ಗ್ರಾಮಗಳಲ್ಲಿ …

Read More »

ನಿಪ್ಪಾಣಿ: 25 ಎನ್‍ಸಿಪಿ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

ನಿಪ್ಪಾಣಿ: ತಾಲ್ಲೂಕಿನ ಶೇಂಡೂರ ಗ್ರಾಮದ ಸುಮಾರು 25 ಎನ್‍ಸಿಪಿ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಗೊಂಡರು. ತಾಲ್ಲೂಕಿನ ಭಿವಶಿ ಗ್ರಾಮದಲ್ಲಿ ಶಾಸಕಿ ಶಶಿಕಲಾ ಜೊಲ್ಲೆ ಎಲ್ಲ ಕಾರ್ಯಕರ್ತರನ್ನು ಪಕ್ಷದ ಶಾಲು ಹೊದಿಸಿ ಬರಮಾಡಿಕೊಂಡರು. ಗ್ರಾಮದ ರಾಜೇಂದ್ರ ಲಾಡ, ಪ್ರವೀಣ ಲಾಡ ನೇತೃತ್ವದಲ್ಲಿ ವಿನಾಯಕ ಗಿರಿ, ತುಕಾರಾಮ ವಡೆಖರ, ಪಾಂಡುರಂಗ ಲಾಡ, ಗಜಾನನ ಕಾಂಬಳೆ, ರಾಜೇಂದ್ರ ದಳವಿ, ಅಣ್ಣಪ್ಪಾ ತೋಡಕರ, ಸಂದೀಪ ದೇಸಾಯಿ, ಮೊದಲಾದವರು ಸೇರಿದಂತೆ ಸುಮಾರು 25 ಕಾರ್ಯಕರ್ತರು ಎನ್‍ಸಿಪಿ ಪಕ್ಷ ತೊರೆದು ಬಿಜೆಪಿಗೆ …

Read More »

ಹೋಟೆಲ್​ನಲ್ಲಿ ಎಕ್ಸ್ಟ್ರಾ ಚಟ್ನಿ ಹಾಕುವ ವಯೋವೃದ್ಧ: ವಯಸ್ಸು ಜಸ್ಟ್‌ ನಂಬರ್ ಎಂದ ಶಾಸಕ ಸುರೇಶ್ ಕುಮಾರ್

ಬೆಂಗಳೂರು: ಈ ಮಾಜಿ ಬ್ಯಾಂಕ್​ ಉದ್ಯೋಗಿಗೆ ಈಗ ಭರ್ತಿ 83 ವರ್ಷ ವಯಸ್ಸು. ದುಶ್ಚಟ, ದುರ ಭ್ಯಾಸಗಳಿಂದ ದೂರವೇ ಉಳಿದಿರು ವುದಲ್ಲದೆ, ನಿತ್ಯವೂ ಶ್ರಮವಹಿಸಿ ಕೆಲಸ ಮಾಡುವುದೇ ಇವರ ಉತ್ತಮ ಆರೋಗ್ಯದ ಗುಟ್ಟು. ದೈಹಿಕ ಚಟುವಟಿಕೆಯೇ ಇಲ್ಲದೆ ದಿನಾ ಸೋಮಾರಿಗಳಾಗಿರುವ ಯುವ ಸಮೂಹವನ್ನು ನಾಚಿಸುವಂತಾ ಸಾವಿರಾರು ವೃದ್ಧರೊಬ್ಬರು ಬೆಂಗಳೂರಿನಲ್ಲಿ ನೆಲೆಸಿದ್ದಾರೆ.   ಎಲೆ ಮರೆಯ ಕಾಯಿಯಂತೆ ದುಡಿಯುವ ಈ ಸಾಧಕರನ್ನು ಪರಿಚಯಿಸುವ ಗೋಜಿಗೆ ಯಾರು ಹೋಗುವುದಿಲ್ಲ. ರಾಜಕೀಯ ಕ್ಷೇತ್ರದ ಜೊತೆಗೆ ಸಾಮಾಜಿಕ …

Read More »

ಮಾರ್ಚ್‌ನಲ್ಲಿ ಭಾರತದ ಚಿಲ್ಲರೆ ಹಣದುಬ್ಬರ ಶೇ.4.85ಕ್ಕೆ ಇಳಿಕೆ

ನವದೆಹಲಿ: ಭಾರತದಲ್ಲಿ ಚಿಲ್ಲರೆ ಹಣದುಬ್ಬರವು ಫೆಬ್ರವರಿಯಲ್ಲಿ ಶೇಕಡಾ 5.09 ರಿಂದ ಮಾರ್ಚ್ನಲ್ಲಿ 10 ತಿಂಗಳ ಕನಿಷ್ಠ ಶೇಕಡಾ 4.85 ಕ್ಕೆ ಇಳಿದಿದೆ. ಇತ್ತೀಚಿನ ಎಂಪಿಸಿ ಪ್ರಕಟಣೆಗಳ ಪ್ರಕಾರ, ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರು 2025 ರ ಹಣಕಾಸು ವರ್ಷದಲ್ಲಿ ಸಿಪಿಐ ಹಣದುಬ್ಬರವನ್ನು ಶೇಕಡಾ 4.5 ಕ್ಕೆ ಅಂದಾಜಿಸಲಾಗಿದೆ ಎಂದು ಹೇಳಿದರು. ಇತ್ತೀಚಿನ ಅಂಕಿಅಂಶಗಳು ಕೇಂದ್ರ ಬ್ಯಾಂಕಿನ ಶೇಕಡಾ 2-6 ರ ಸಹಿಷ್ಣುತೆಯ ಬ್ಯಾಂಡ್ನಲ್ಲಿವೆ, ಗುರಿಯನ್ನು ಶೇಕಡಾ 4 ಕ್ಕೆ …

Read More »

ಈಶ್ವರಪ್ಪ ನಾಮಪತ್ರ ಹಿಂದಕ್ಕೆ ಪಡೆಯಲು ಇನ್ನೂ ಅವಕಾಶವಿದೆ, ಕಾದು ನೋಡಿ: ಬಿ.ವೈ.ವಿಜಯೇಂದ್ರ

ಈಶ್ವರಪ್ಪ ನಾಮಪತ್ರ ಹಿಂದಕ್ಕೆ ಪಡೆಯಲು ಇನ್ನೂ ಅವಕಾಶವಿದೆ, ಕಾದು ನೋಡಿ: ಬಿ.ವೈ.ವಿಜಯೇಂದ್ರ   ಬಳ್ಳಾರಿ: ಈಗಲೇ ಅಂತಿಮ ತೀರ್ಮಾನ ಮಾಡಬೇಡಿ, ಇನ್ನೂ ಸಮಯವಿದೆ. ಈಶ್ವರಪ್ಪ ನಾಮಪತ್ರ ಹಿಂದಕ್ಕೆ ಪಡೆಯಲು ಇನ್ನೂ ಅವಕಾಶ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಶುಕ್ರವಾರ ಹೇಳಿದ್ದಾರೆ. ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಶ್ರೀರಾಮುಲು ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ನಗರಕ್ಕೆ ಆಗಮಿಸಿರುವ ಬಿ.ವೈ.ವಿಜಯೇಂದ್ರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.   ಯಡಿಯೂರಪ್ಪ ಆದೇಶದಂತೆ ಬಳ್ಳಾರಿಗೆ ಬಂದಿದ್ದೇನೆ. ಕಾಂಗ್ರೆಸ್ …

Read More »

ಸಿಡಿಲು ಬಡಿದು ಕುರಿಗಾಯಿ ಬಾಲಕ ಮೃತ್ಯು. ಕುಟುಂಬಕ್ಕೆ ಆಸರೆಯಾಗಿದ್ದ

ಇಂಡಿ (ವಿಜಯಪುರ): ಗುರುವಾರ ಸಂಜೆ ಬಿರುಗಾಳಿ ಸಹಿತ ಸಿಡಿಲು ಅಪ್ಪಳಿಸಿ ಕುರಿಗಾಯಿ ಬಾಲಕ ಬಲಿಯಾಗಿರುವ ದುರ್ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನಲ್ಲಿ ನಡೆದಿದೆ. ಕುರಿ ಮೇಯಿಸುವಾಗ ಸಿಡಿಲಿಗೆ ಬಲಿಯಾದ ಬಾಲಕನನ್ನು ಬೀರಪ್ಪ ನಿಂಗಪ್ಪ ಅವರಾದಿ (15) ಎಂದು ಗುರುತಿಸಲಾಗಿದೆ. ಇಂಡಿ ಪಟ್ಟಣದ ಹೊರವಲಯದಲ್ಲಿ ಬೀರಪುಪ ಕುರಿ ಮೇಯಿಸುವಾಗ ಜೋರಾಗಿ ಬಿರುಗಾಳಿ ತುಂತುರು ಮಳೆ ಸುರಿಯಲು ಆರಂಭಿಸಿದೆ. ಈ ವೇಳೆ ಮಳೆಯಿಂದ ರಕ್ಷಣೆ ಪಡೆಯಲು ಬೀರಪ್ಪ ಪಕ್ಕದಲ್ಲಿದ್ದ ಮರದ ಕೆಳಗೆ ಹೋಗಿದ್ದಾಗ ಸಿಡಿಲು …

Read More »