Breaking News

Uncategorized

ಉಳಾಯಿಬೆಟ್ಟು: PWD ಗುತ್ತಿಗೆದಾರ ಸೇರಿ ಮನೆಯ ಸದಸ್ಯರನ್ನು ಕಟ್ಟಿ ಹಾಕಿ, ನಗ ನಗದು ದರೋಡೆ

ಮಂಗಳೂರು: ನಗರದ ಹೊರವಲಯದಲ್ಲಿರುವ ಉಳಾಯಿಬೆಟ್ಟು ಎಂಬಲ್ಲಿ ಪಿಡಬ್ಲ್ಯುಡಿ ಗುತ್ತಿಗೆದಾರರೊಬ್ಬರ ಮನೆಗೆ ನುಗ್ಗಿದ ದರೋಡೆಕೋರರ ತಂಡವೊಂದು ಮನೆಗೆ ನುಗ್ಗಿ ಚಾಕು ತೋರಿಸಿ ಮನೆಮಂದಿಯನ್ನು ಕಟ್ಟಿ ಹಾಕಿ ಮನೆಯಲ್ಲಿದ್ದ ನಗ ನಗದನ್ನು ದೋಚಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಉಳಾಯಿಬೆಟ್ಟಿ ನಲ್ಲಿರುವ ಪಿಡಬ್ಲ್ಯುಡಿ ಕಂಟ್ರಾಕ್ಟರ್ ಪದ್ಮನಾಭ ಕೋಟ್ಯಾನ್ ಎಂಬವರ ಫಾರ್ಮ್ ಹೌಸ್ ಮನೆಗೆ ಸುಮಾರು ಏಳು ಎಂಟು ಮಂದಿ ದರೋಡೆಕೋರರ ತಂಡ ಶುಕ್ರವಾರ ರಾತ್ರಿ ಸುಮಾರು ಎಂಟು ಗಂಟೆಯ ಸುಮಾರಿಗೆ ಮನೆಯೊಳಗೆ ಪ್ರವೇಶಿಸಿ ಮನೆ …

Read More »

ಕಾಗವಾಡ: ಮದ್ಯಪಾನ ಮಾಡುತ್ತ ವಾಹನ ಚಲಾಯಿಸಿದ ಆರ್‌ಟಿಓ ಚಾಲಕ

ಕಾಗವಾಡ: ತಾಲ್ಲೂಕಿನ ಶೇಡಬಾಳ ಪಟ್ಟಣದಲ್ಲಿ ಇತ್ತೀಚಿಗೆ ಅಥಣಿ ಆರ್‌ಟಿಒ ಇಲಾಖೆಯ ಅಧಿಕಾರಿಗಳ ವಾಹನದ ಚಾಲಕ ಸಾರಿಗೆ ಇಲಾಖೆ ಇನ್‌ಸ್ಪೆಕ್ಟರ್ ಅವರ ಉಪಸ್ಥಿತಿಯಲ್ಲಿ ಮದ್ಯಸೇವನೆ ಮಾಡುತ್ತ ವಾಹನ ಚಾಲನೆ ಮಾಡುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಆರ್‌ಟಿಓ ಇನ್‌ಸ್ಪೆಕ್ಟರ್‌ ಅವರ ಮುಂದೆಯೇ ಇಂತಹ ಘಟನೆ ನಡೆದಿರುವುದಕ್ಕೆ ಸಾರ್ವಜನಿಕರಿದ ಆಕ್ರೋಶ ವ್ಯಕ್ತವಾಗಿದೆ. ಸಾರಿಗೆ ನಿಯಮ ಪಾಲನೆ ಮಾಡುವ ಇಲಾಖೆಯ ಅಧಿಕಾರಿಗಳೇ ಈ ರೀತಿ ನಿಯಮ ಉಲ್ಲಂಘನೆ ಮಾಡಿರುವುದು ಎಷ್ಟು ಸರಿ? ಎಂದು ಜನರು …

Read More »

ಬಳ್ಳಾರಿ ಜಿಲ್ಲಾ ಉಸ್ತುವಾರಿ ಹೊಣೆ ಜಮೀರ್‌ಗೆ

ಬಳ್ಳಾರಿ: ಬಳ್ಳಾರಿ ಜಿಲ್ಲಾ ಉಸ್ತುವಾರಿ ಹೊಣೆಗಾರಿಕೆ ವಹಿಸಿಕೊಳ್ಳುವಂತೆ ಜಮೀರ್ ಅಹಮದ್ ಖಾನ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ವಿಜಯನಗರ ಜಿಲ್ಲಾ ಕೆಡಿಪಿ ಸಭೆಯಲ್ಲಿ ಪಾಲ್ಗೊಂಡ ನಂತರ ಸುದ್ಧಿಗಾರರ ಜತೆ ಮಾತನಾಡಿದ ಅವರು, ‘ವಿಜಯನಗರದ ಜತೆ ಬಳ್ಳಾರಿ ಜಿಲ್ಲಾ ಉಸ್ತುವಾರಿ ಹೊಣೆಗಾರಿಕೆ ಜಮೀರ್ ಅಹಮದ್ ಖಾನ್ ಅವರಿಗೆ ನೀಡಲಾಗುವುದು’ ಎಂದು ಹೇಳಿದರು.   ‘ಈ ಕುರಿತು ಅಧಿಕೃತ ಹೊರಡಿಸಲಾಗುವುದು’ ಎಂದ ಅವರು, ತಕ್ಷಣದಿಂದಲೇ ಹೊಣೆಗಾರಿಕೆ ತೆಗೆದುಕೊಳ್ಳುವಂತೆ ಜಮೀರ್ ಅಹಮದ್ ಖಾನ್ ಅವರಿಗೂ …

Read More »

ಜಿಎಸ್‌ಟಿ ಮಂಡಳಿ ಸದಸ್ಯರಾಗಿ ಕೃಷ್ಣ ಬೈರೇಗೌಡ ನೇಮಕ

ನವದೆಹಲಿ: ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯವಸ್ಥೆಯಡಿ ತೆರಿಗೆ ಪ್ರಮಾಣ ಸರಳಗೊಳಿಸಲು ರಚಿಸಿರುವ ಏಳು ಸಚಿವರನ್ನು ಒಳಗೊಂಡ ಸಮಿತಿಯನ್ನು ಪುನರ್‌ ರಚಿಸಲಾಗಿದೆ. ಬಿಹಾರದ ಉಪ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಈ ಸಮಿತಿಯ ಸಂಚಾಲಕರಾಗಿ ನೇಮಕವಾಗಿದ್ದಾರೆ. ಕರ್ನಾಟಕದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರನ್ನು ಸಮಿತಿಯ ಸದಸ್ಯರನ್ನಾಗಿ ನೇಮಿಸಲಾಗಿದೆ. ಮಂಡಳಿಯ ವೆಬ್‌ಸೈಟ್‌ನಲ್ಲಿ ಈ ಕುರಿತು ಅಧಿಕೃತವಾಗಿ ಪ್ರಕಟಿಸಲಾಗಿದೆ. ಉತ್ತರಪ್ರದೇಶದ ಹಣಕಾಸು ಸಚಿವ ಸುರೇಶ್‌ ಕುಮಾರ್‌ ಖನ್ನಾ, ಗೋವಾದ ಸಾರಿಗೆ ಸಚಿವ ಮೌವಿನ್ …

Read More »

ಮೇವು ಹಗರಣ ನಡೆದಿದ್ದರೆ ಸಮಗ್ರ ತನಿಖೆ: ಸಚಿವ ಸತೀಶ ಜಾರಕಿಹೊಳಿ

ಬೆಳಗಾವಿ: ಮೇವು ಖರೀದಿಯಲ್ಲಿ ಹಗರಣ ನಡೆದಿರುವ ಬಗ್ಗೆ ಇದುವರೆಗೆ ಯಾರು ದೂರು ನೀಡಿಲ್ಲ. ಈ ಬಗ್ಗೆ ಅಕ್ರಮ ನಡೆದಿದ್ದರೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ಪಶು ಸಂಗೋಪನೆ ಇಲಾಖೆಯಲ್ಲಿ ಜಿಲ್ಲೆಯಲ್ಲಿ ಮೇವು ಖರೀದಿಗೆ ಮಂಜೂರಾದ 6 ಕೋಟಿ ರೂ. ಅನುದಾನಲ್ಲಿ ಅವ್ಯವಹಾರ ಆಗಿದೆ ಎಂಬ ಆರೋಪದ ಬಗ್ಗೆ ನಮ್ಮ ಗಮನಕ್ಕೆ ಬಂದಿಲ್ಲ. ಇಲಾಖೆಯಲ್ಲಿ ಏನಾಗಿದೆ, …

Read More »

ಡಿಸೇಲ್ ಬೆಲೆ ಏರಿಕೆ ಖಂಡಿಸಿ ಕಿತ್ತೂರು ಬಿಜೆಪಿಯಿಂದ ಬೃಹತ್ ಪ್ರತಿಭಟನೆ

ಕಿತ್ತೂರು: ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಐತಿಹಾಸಿಕ ಚನ್ನಮ್ಮನ ಕಿತ್ತೂರು ಪಟ್ಟಣದ ರಾಣಿ ಚನ್ನಮ್ಮ ಸರ್ಕಲ್ ನಲ್ಲಿ ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡ ಹಾಗೂ ಲಕ್ಷ್ಮೀ ಇನಾಮದಾರ ಅವರ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ರಸ್ತೆ ತಡೆದು ಬೃಹತ್ ಪ್ರತಿಭಟನೆ ನಡೆಸಿದರು.   ಇದೇ ವೇಳೆ ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ದ್ವಿಚಕ್ರ ವಾಹನಕ್ಕೆ …

Read More »

ಮುಂದಿನ 7 ದಿನ ಭಾರಿ ಮಳೆ ಎಚ್ಚರಿಕೆ!

ಮಳೆ ಅಬ್ಬರಿಸುತ್ತಿದ್ದು, ಎಲ್ಲೆಲ್ಲೂ ಮಳೆರಾಯ ತನ್ನ ರೌದ್ರಾವತಾರ ತೋರಿಸುತ್ತಿದ್ದಾನೆ. ಈ ನಡುವೆ ಕರ್ನಾಟಕದ ಒಳನಾಡು ಪ್ರದೇಶದಲ್ಲಿ ಮಳೆ ಅಬ್ಬರ ಸ್ವಲ್ಪ ಕಡಿಮೆ ಆಗಿದೆ ಅಂತಾ ಕೊರಗುವ ಸಮಯದಲ್ಲೇ ಮತ್ತೊಮ್ಮೆ ಭರ್ಜರಿ ಮಳೆಯ ಬಗ್ಗೆ ಮುನ್ನೆಚ್ಚರಿಕೆ ನೀಡಲಾಗಿದೆ. ಹಾಗಾದ್ರೆ ಯಾವೆಲ್ಲಾ ಜಿಲ್ಲೆಗಳಿಗೆ ಭರ್ಜರಿ ಮಳೆ ಬೀಳಲಿದೆ? ಮುಂದಿನ 7 ದಿನಗಳ ಕಾಲ ಮಳೆ ಅಬ್ಬರಿಸುವ ಕರ್ನಾಟಕದ ಜಿಲ್ಲೆಗಳು ಯಾವುವು? ಬನ್ನಿ ಸಂಪೂರ್ಣ ಮಾಹಿತಿ ತಿಳಿಯೋಣ. ಕರ್ನಾಟಕ ರಾಜ್ಯದಲ್ಲಿ ತುಂತುರು ಮಳೆ, ಗುಡುಗು, …

Read More »

ಸಹಾಯಕ ಲೋಕೋ ಪೈಲಟ್ ನೇಮಕಾತಿ: ನೈಋತ್ಯ ರೈಲ್ವೆ ವಲಯಕ್ಕೆ ಎಷ್ಟು ಹುದ್ದೆಗಳು?

ಹುಬ್ಬಳ್ಳಿ, ಜೂನ್ 20: ಭಾರತೀಯ ರೈಲ್ವೆ ಇಲಾಖೆ ಸಹಾಯಕ ಲೋಕೋ ಪೈಲಟ್ ನೇಮಕಾತಿಗೆ ಹೆಚ್ಚಿನ ಆದ್ಯತೆ ನೀಡಿದೆ. ರೈಲು ಪ್ರಯಾಣಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಸಹಾಯಕ ಲೋಕೋ ಪೈಲಟ್ ನೇಮಕಾತಿಯ ಸಂಖ್ಯೆಯನ್ನು ಏರಿಕೆ ಮಾಡಿ ಆದೇಶಿಸಿದೆ. ಶೀಘ್ರದಲ್ಲೇ ನೇಮಕಾತಿ ಆರಂಭವಾಗಲಿದೆ. ಮುಂದಿನ 6-8 ತಿಂಗಳಿನಲ್ಲಿ ಭಾರತೀಯ ರೈಲ್ವೆ 18,799 ಸಹಾಯಕ ಲೋಕೋ ಪೈಲಟ್‌ಗಳ ನೇಮಕಾತಿ ಮಾಡಿಕೊಳ್ಳಲಿದೆ. ಯಾವ ರೈಲು ವಿಭಾಗಕ್ಕೆ ಎಷ್ಟು ಹುದ್ದೆಗಳು? ಎಂದು ಈಗಾಗಲೇ ಸೂಚನೆ ನೀಡಲಾಗಿದ್ದು, ನೇಮಕಾತಿ ಪ್ರಕ್ರಿಯೆ …

Read More »

…ಔಜೀಕರ ಆಶ್ರಮಕ್ಕೆ ಸಚಿವ ಸತೀಶ್ ಜಾರಕಿಹೊಳಿ ಭೇಟಿ

ಹುಕ್ಕೇರಿ: ಪಟ್ಟಣದ ಹೊರವಲಯ ಕ್ಯಾರಗುಡ್ ಬಳಿಯ ಔಜೀಕರ ಮಠಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಭೇಟಿ ಬುಧವಾರ ನೀಡಿದರು. ಮಠದ ಪೀಠಾಧಿಪತಿ ಮಲ್ಲಪ್ಪ ಮಹಾರಾಜರು, ಮಠದ ಅಭಿನವ ಮಂಜುನಾಥ ಸ್ವಾಮೀಜಿ ಅವರು ಸಚಿವ ಜಾರಕಿಹೊಳಿ ಅವರನ್ನು ಸನ್ಮಾನಿಸಿದರು. ಬಳಿಕ ಮಾತನಾಡಿದ ಸಚಿವರು, ‘ಧಾರ್ಮಿಕ ಪರಂಪರೆ ಉಳಿಸಿ ಬೆಳೆಸುವಲ್ಲಿ ಈ ಆಶ್ರಮ ಅಮೂಲ್ಯ ಕೊಡುಗೆ ನೀಡುತ್ತಿದೆ. ಸಮಾಜದ ಬೆಳವಣಿಗೆಗೆ ಮತ್ತು ಧರ್ಮ ಪ್ರಸಾರದಲ್ಲಿ ಶ್ರೀಮಠವು ತೊಡಗಿಸಿಕೊಂಡಿರುವುದು ಅತ್ಯಂತ ಸಮಂಜಸ. ಮಠದ …

Read More »

ಹದಗೆಟ್ಟ ರಸ್ತೆಗಳು: ಸಂಚಾರಕ್ಕೆ ಸಂಚಕಾರ

ಶಿರಹಟ್ಟಿ: ರಾಜ್ಯದಲ್ಲಿಯೇ ಹಿಂದುಳಿದ ತಾಲ್ಲೂಕು ಎಂಬ ಹಣೆಪಟ್ಟಿ ಕಟ್ಟಿಕೊಂಡಿರುವ ತಾಲ್ಲೂಕು ಕೇಂದ್ರವು ಇಲ್ಲಗಳ ಮಧ್ಯಯೇ ಸಾಗುತ್ತಿದೆ. ಮೂಲ ಸೌಕರ್ಯಗಳಿಂದ ವಂಚಿತವಾದ ತಾಲ್ಲೂಕಿನ ಜನರು ಸುಗಮ ಸಂಚಾರವಿಲ್ಲದೆ ಜೀವ ಕೈಯಲ್ಲಿ ಹಿಡಿದುಕೊಂಡು ಪ್ರಯಾಣಿಸುತ್ತಿದ್ದಾರೆ. ತಾಲ್ಲೂಕಿನ ಬಹುತೇಕ ಗ್ರಾಮೀಣ ಪ್ರದೇಶದ ರಸ್ತೆಗಳು ಹದಗೆಟ್ಟಿದ್ದು, ವಾಹನ ಸವಾರರ ಸಂಚಾರಕ್ಕೆ ಸಂಚಕಾರ ತಂದೊಡ್ಡಿವೆ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಈ ಕುರಿತು ನಿರ್ಲಕ್ಷ್ಯ ವಹಿಸುತ್ತಿದ್ದು, ಸಾರ್ವಜನಿಕರ ಶಾಪಕ್ಕೆ ಗುರಿಯಾಗಿದ್ದಾರೆ. ಹದಗೆಟ್ಟ ಗ್ರಾಮೀಣ ರಸ್ತೆಗಳು: ತಾಲ್ಲೂಕಿನ ತಂಗೋಡ, ಕೊಗನೂರು, …

Read More »