Breaking News

Uncategorized

ದೇಶದ ಮೊದಲ ‘ಅಂಡರ್ ವಾಟರ್ ಮೆಟ್ರೋ’ ಗೆ ಉತ್ತಮ ರೆಸ್ಪಾನ್ಸ್

ಕೋಲ್ಕತಾ : ಭಾರತದ ಮೊದಲ ಅಂಡರ್ ವಾಟರ್ ಮೆಟ್ರೋಗೆ ಮೊದಲ ದಿನವೇ ಪ್ರಯಾಣಿಕರಿಂದ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ಹೌದು, ಮೊದಲ ದಿನವೇ 70,000 ಕ್ಕೂ ಹೆಚ್ಚು ಪ್ರಯಾಣಿಕರು ರೈಲಿನಲ್ಲಿ ಸಂಚಾರ ಮಾಡಿದ್ದಾರೆ. ದೇಶದ ಮೊದಲ ನೀರೊಳಗಿನ ಸಾರಿಗೆ ಸುರಂಗದ ಮೂಲಕ ಹೂಗ್ಲಿ ನದಿಯ ಕೆಳಗೆ ಹಾದುಹೋಗುವ ಹೌರಾ ಮೈದಾನ್-ಎಸ್ಪ್ಲನೇಡ್ ಮೆಟ್ರೋದಲ್ಲಿ ಮೊದಲ ದಿನದಂದು 70,000 ಕ್ಕೂ ಹೆಚ್ಚು ಪ್ರಯಾಣಿಕರನ್ನು ಸಾಗಿಸಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.   ಮಾರ್ಚ್ 6 …

Read More »

ಮಲಬಾರ್ ಗೋಲ್ಡ್ & ಡೈಮೊಂಡ್ಸ್ : 89 ವಿದ್ಯಾರ್ಥಿನಿಯರಿಗೆ ರೂ.8.9 ಲಕ್ಷ ವಿದ್ಯಾರ್ಥಿ ವೇತನಗಳನ್ನು ವಿತರಿಸಲಾಯಿತು…!

 : ಬೆಳಗಾವಿ,: 16ನೇ ಮಾರ್ಚ್-2024 : ಮಲಬಾರ್ ಗೋಲ್ಡ್ & ಡೈಮೊಂಡ್ಸ್ ಸಿಎಸ್‌ಆ‌ರ್ ಉಪಕ್ರಮ ಕಾರ್ಯಕ್ರಮದ ಅಂಗವಾಗಿ ಇಂದು ಬೈಲಹೊಂಗಲ್, ಕೆ ಕೆ ಕೊಪ್ಪ, ಬೀಡಿ, ಖಾನಾಪುರ, ಸರ್ದಾರ್ ಪ್ರಥಮ ಧರ್ಜೆ ಮಹಿಳಾ ಕಾಲೇಜುಚಿಂತಾಮನರಾವ್‌ ಪದವಿ ಪೂರ್ವ ಕಾಲೇಜುನಲ್ಲಿರುವ 06 ಕಾಲೇಜುಗಳ 89 ವಿದ್ಯಾರ್ಥಿನಿಯರಿಗೆ ರೂ. 8.9 ಲಕ್ಷ (ಎಂಟು ಲಕ್ಷದ ತೊಂಬತ್ತು ಸಾವಿರ ರೂಪಾಯಿಗಳು) ವಿದ್ಯಾರ್ಥಿವೇತನವನ್ನು ವಿತರಿಸಲಾಯಿತು. ಈ ಕಾರ್ಯಕ್ರಮವು ಟೌನ್ ಹಾಲ್ ಭಾಗ್ಯನಗರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ …

Read More »

ಚುನಾವಣೆ ಸಂದರ್ಭದಲ್ಲಿ ಬ್ಯಾಂಕುಗಳು ದೈನಂದಿನ ‘ಅನುಮಾನಾಸ್ಪದ ವಹಿವಾಟು ವರದಿ’ ಸಲ್ಲಿಸಬೇಕು : ಚುನಾವಣಾ ಆಯೋಗ

ನವದೆಹಲಿ: ಭಾರತದ ಚುನಾವಣಾ ಆಯೋಗವು ಶನಿವಾರ ಮೊದಲ ರೀತಿಯ ನಿರ್ಧಾರವನ್ನು ಪ್ರಕಟಿಸಿದ್ದು, ಇದರಲ್ಲಿ ಬ್ಯಾಂಕುಗಳು ದೈನಂದಿನ ಎಸ್ಟಿಆರ್ಗಳನ್ನು (ಅನುಮಾನಾಸ್ಪದ ವಹಿವಾಟು ವರದಿಗಳು) ಸಲ್ಲಿಸುವಂತೆ ಕೇಳಿದೆ. ಅನುಮಾನಾಸ್ಪದ ವಹಿವಾಟಿನ ಬಗ್ಗೆ ಎಲ್ಲಾ ಬ್ಯಾಂಕುಗಳು ದೈನಂದಿನ ವರದಿಗಳನ್ನು ಕಳುಹಿಸಬೇಕಾಗುತ್ತದೆ ಎಂದು ಸಿಇಸಿ ರಾಜೀವ್ ಕುಮಾರ್ ಘೋಷಿಸಿದರು.   ಹಣದ ಶಕ್ತಿಯ ಪ್ರಭಾವವನ್ನ ನಿಗ್ರಹಿಸಲು, ನ್ಯಾಯಸಮ್ಮತ ಚುನಾವಣೆಗಳನ್ನ ಖಚಿತಪಡಿಸಿಕೊಳ್ಳಲು ಚುನಾವಣಾ ಆಯೋಗವು ಕ್ರಮಗಳನ್ನ ತೆಗೆದುಕೊಳ್ಳುತ್ತದೆ ಎಂದು ಕುಮಾರ್ ಹೇಳಿದರು. “ವಿವಿಧ ರಾಜ್ಯಗಳಲ್ಲಿ ವಿಭಿನ್ನ ದುರ್ಬಲತೆಗಳಿವೆ …

Read More »

ಜೆಡಿಎಸ್‌ ಕಾರ್ಯಕರ್ತರು ಕಾಂಗ್ರೆಸ್‌ನತ್ತ ಬರುತ್ತಿದ್ದಾರೆ: ಡಿ.ಕೆ. ಶಿ

ಬೆಂಗಳೂರು: ‘ಇಷ್ಟು ವರ್ಷಗಳ ಕಾಲ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌- ಜೆಡಿಎಸ್‌ ಮಧ್ಯೆ ಸ್ಪರ್ಧೆ ಇತ್ತು. ಈಗ ಎಚ್‌.ಡಿ. ದೇವೇಗೌಡರ ಕುಟುಂಬವೇ ಬಿಜೆಪಿ ಸೇರಿರುವುದರಿಂದ ಜೆಡಿಎಸ್‌ ಕಾರ್ಯಕರ್ತರು ಕಾಂಗ್ರೆಸ್‌ನತ್ತ ಬರುತ್ತಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದರು.   ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣಾ ಸಿದ್ಧತೆ ಕುರಿತು ಕ್ಷೇತ್ರದ ವ್ಯಾಪ್ತಿಯ ಶಾಸಕರು, ವಿಧಾನಸಭಾ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳು ಮತ್ತು ಪ್ರಮುಖ ಮುಖಂಡರ ಜತೆ ಶುಕ್ರವಾರ ಸಭೆ ನಡೆಸಿದ ಬಳಿಕ …

Read More »

ಗರ್ಭಿಣಿ ಹೆಂಡ್ತಿಯನ್ನೇ ಹತ್ಯೆ ಮಾಡಿದನೇ ಗಂಡ

ಬೆಳಗಾವಿ, ಮಾ.15: ಅಪ್ರಾಪ್ತೆಯನ್ನ ಮದುವೆಯಾಗಿ ಗರ್ಭಿಣಿ ಮಾಡಿ ಗಂಡನೇ ಕೊಲೆ ಮಾಡಿರುವ ಆರೋಪ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮದಲ್ಲಿಕೇಳಿಬಂದಿದೆ. ಹತ್ತು ತಿಂಗಳ ಹಿಂದೆ 17 ವರ್ಷದ ಅಪ್ರಾಪ್ತೆಯನ್ನ ಸಾಹಿಲ್ ಬಾಗೇವಾಡಿ ಮದುವೆ ಆಗಿದ್ದ. ಸದ್ಯ ನಾಲ್ಕು ತಿಂಗಳ ಗರ್ಭಿಣಿ ಕೂಡ ಆಗಿದ್ದಳು. ಮದುವೆ ಆದ ಬಳಿಕ ಗಂಡ ಸಾಹಿಲ್ ನಿರಂತರವಾಗಿ ಕಿರುಕುಳ ನೀಡುತ್ತಿದ್ದ. ಈ ಹಿನ್ನಲೆ ಆಕೆಯ ಗಂಡ ಮತ್ತು ಅತ್ತೆ-ಮಾವ ಸೇರಿ ರಾತ್ರಿ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ …

Read More »

ಪ್ರಧಾನಿ ಮೋದಿ ಸಮಾವೇಶಕ್ಕೆ 1 ಲಕ್ಷ ಜನರ ನಿರೀಕ್ಷೆ: ದತ್ತಾತ್ರೇಯ ಪಾಟೀಲ

ಕಲಬುರಗಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇದೇ 16ರಂದು ಮಧ್ಯಾಹ್ನ 12ಕ್ಕೆ ತೆಲಂಗಾಣದಿಂದ ಕಲಬುರಗಿಗೆ ಬರಲಿದ್ದು, ರಾಜ್ಯದಲ್ಲಿ ಮೊದಲ ಚುನಾವಣಾ ಸಮಾವೇಶವನ್ನು ನಡೆಸಲಿದ್ದಾರೆ. ಎನ್‌.ವಿ. ಮೈದಾನದಲ್ಲಿ ನಡೆಯಲಿರುವ ಈ ಸಮಾವೇಶದಲ್ಲಿ ಒಂದು ಲಕ್ಷಕ್ಕೂ ಅಧಿಕ ಕಾರ್ಯಕರ್ತರು, ಸಾರ್ವಜನಿಕರು ಭಾಗವಹಿಸಲಿದ್ದಾರೆ ಎಂದು ಕೆಕೆಆರ್‌ಡಿಬಿ ಮಾಜಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ ತಿಳಿಸಿದರು.   ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈ ಸಮಾವೇಶಕ್ಕೆ ಪಕ್ಷದ ವತಿಯಿಂದ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ನಗರದ …

Read More »

‘KSRTC’ ಮುಡಿಗೆ ಪ್ರತಿಷ್ಠಿತ 5 ರಾಷ್ಟ್ರೀಯ, 1 ಅಂತಾರಾಷ್ಟ್ರೀಯ ಪ್ರಶಸ್ತಿ

ಬೆಂಗಳೂರು : ಕೆಎಸ್‌ಆರ್ಟಿಸಿಗೆ (KSRTC) ಐದು ರಾಷ್ಟ್ರೀಯ ಮತ್ತು ಒಂದು ಅಂತಾರಾಷ್ಟ್ರೀಯ ಪ್ರಶಸ್ತಿಗಳು ಬಂದಿವೆ. ಬಸ್ ಬ್ರ್ಯಾಂಡ್ ನಿರ್ವಹಣೆಗಾಗಿ ದಕ್ಷಿಣ ಆಫ್ರಿಕಾ ನಾಯಕತ್ವ ಪ್ರಶಸ್ತಿ, ಮಾನವ ಸಂಪನ್ಮೂಲ ಉಪಕ್ರಮಕ್ಕಾಗಿ ಪಂಜಾಬ್ ನಾಯಕತ್ವ ಪ್ರಶಸ್ತಿ, ಅತ್ಯುತ್ತಮ ಗ್ರಾಹಕ ಸೇವಾ ಉಪಕ್ರಮಕ್ಕಾಗಿ ಸ್ಟಾರ್ ಆಫ್ ಎಕ್ಸಲೆನ್ಸ್ ಪ್ರಶಸ್ತಿ, ಮಾನವ ಸಂಪನ್ಮೂಲ ಅಭಿವೃದ್ಧಿಯಲ್ಲಿ ಸತತ ವಿನೂತನ ಉಪಕ್ರಮಗಳಿಗಾಗಿ ರಾಷ್ಟ್ರೀಯ ಅತ್ಯುತ್ತಮ ಉದ್ಯೋಗ ಬ್ರ್ಯಾಂಡ್ ಪ್ರಶಸ್ತಿ, ಮಾನವ ಸಂಪನ್ಮೂಲ ಉಪಕ್ರಮ ಸಾಧನೆಗಾಗಿ ʼಗೌವರ್ನೆನ್ಸ್ ನೌʼ 10ನೇ …

Read More »

NDA ಜೊತೆ ನಿತೀಶ್ ಮೈತ್ರಿ: ನ್ಯಾ.ರೋಹಿಣಿ ಸಮಿತಿ ವರದಿ ನಿರ್ಲಕ್ಷ್ಯ ಸಾಧ್ಯತೆ?

ನವದೆಹಲಿ: ಲೋಕಸಭಾ ಚುನಾವಣೆ ಎದುರಾಗುತ್ತಿದ್ದಂತೆಯೇ ದೇಶಾದ್ಯಂತ ರಾಜಕೀಯ ಸಮೀಕರಣಗಳು ಬದಲಾಗತೊಡಗಿವೆ. ಸಹಜವಾಗಿಯೇ ಇದು ಹಲವು ರೀತಿಗಳಲ್ಲಿ ತನ್ನದೇ ಆದ ಪರಿಣಾಮಗಳನ್ನು ಹೊಂದಿರಲಿದೆ. ಈ ಪೈಕಿ ಬಿಹಾರಕ್ಕೆ ಸಂಬಂಧಿಸಿದ ನ್ಯಾ. ರೋಹಿಣಿ ಸಮಿತಿ ವರದಿಯೂ ಸೇರಿದೆ. ಬಿಹಾರದಲ್ಲಿ ನಿತೀಶ್ ಕುಮಾರ್ ಸರ್ಕಾರ, ಎನ್ ಡಿಎ ಮೈತ್ರಿಕೂಟ ಸೇರಿದ್ದು, ನರೇಂದ್ರ ಮೋದಿ ಸರ್ಕಾರ ನ್ಯಾ.ರೋಹಿಣಿ ಸಮಿತಿ ವರದಿಯನ್ನು ನಿರ್ಲಕ್ಷ್ಯ ವಹಿಸಿರುವಂತೆ ತೋರುತ್ತಿದೆ. ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳೊಂದಿಗೆ ಸೇರಿ ಸರ್ಕಾರ ರಚಿಸಿದ್ದ ನಿತೀಶ್ ಕುಮಾರ್ …

Read More »

C Voter ಸಮೀಕ್ಷೆ: ಕರ್ನಾಟಕದಲ್ಲಿ ಯಾರಿಗೆ ಎಷ್ಟು ಸೀಟು?

ಹೊಸದಿಲ್ಲಿ: ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಎಬಿಪಿ ನ್ಯೂಸ್‌-ಸಿ ವೋಟರ್‌ ನಡೆಸಿದ ಸಮೀಕ್ಷೆಯಲ್ಲಿ ಕರ್ನಾಟಕವು ಬಿಜೆಪಿ ನೇತೃತ್ವದ ಎನ್‌ಡಿಎ ಪಾಲಾಗಲಿದೆ. ಕರ್ನಾಟಕದಲ್ಲಿ ಒಟ್ಟು 28 ಲೋಕಸಭಾ ಕ್ಷೇತ್ರಗಳಿದ್ದು, ಈ ಪೈಕಿ ಎನ್‌ಡಿಎ 23 ಮತ್ತು ಕಾಂಗ್ರೆಸ್‌ 5 ಸೀಟುಗಳನ್ನು ಗೆಲ್ಲಬಹುದು ಎಂದು ಸಮೀಕ್ಷೆ ಹೇಳಿದೆ.ಕಾಂಗ್ರೆಸ್‌ ಶೇ.42 ಮತ ಪಡೆದರೆ, ಎನ್‌ಡಿಎ ಶೇ.53 ಮತಗಳನ್ನು ಪಡೆಯುವ ಅಂದಾಜಿಸಿದೆ.   2019ರ ಚುನಾವಣೆಯಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಜಂಟಿಯಾಗಿ ಕೇವಲ 2 ಸ್ಥಾನಗಳನ್ನು ಗೆದ್ದಿದ್ದವು ಮತ್ತು …

Read More »

ಮೂರು ಕ್ಷೇತ್ರಗಳಲ್ಲಿ ಜೆಡಿಎಸ್‌ ಸ್ಪರ್ಧೆ: ಕುಮಾರಸ್ವಾಮಿ

ಹಾಸನ: ‘ರಾಜ್ಯದ ಹಾಸನ, ಮಂಡ್ಯ, ಕೋಲಾರ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿದ್ದೇವೆ. ಇನ್ನೂ 2-3 ಕ್ಷೇತ್ರ ಕೇಳಿದ್ದರೆ ಕೊಡುತ್ತಿದ್ದರು’ ಎಂದು ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದರು. ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಮಾ.21 ರಂದು ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿದ್ದೇನೆ. ನಾನು ಈ ಬಾರಿ ಚುನಾವಣೆಗೆ ನಿಲ್ಲುವುದಿಲ್ಲ. ಒಂದೇ ಕುಟುಂಬದ ಅನೇಕರು ರಾಜಕೀಯದಲ್ಲಿದ್ದಾರೆ. ಆದರೆ ದೇವೇಗೌಡರ ಕುಟುಂಬದ ಬಗ್ಗೆ ಮಾತ್ರ ಚರ್ಚೆಯಾಗುತ್ತಿದೆ’ ಎಂದರು.   ‘ಡಾ.ಸಿ.ಎನ್‌. ಮಂಜುನಾಥ್ ಅವರನ್ನು ಅಭ್ಯರ್ಥಿ …

Read More »